ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ ವೆಂಕಟಗಿರಿನಿಲಯನಂಘ್ರಿ ರಾ ಜೀವಯುಗಳಗಾನಮಿಸುವೆನು ಪ ಸೇವಿಪ ಜನರಿಗಮರ ತರುವೆನಿಸಿ ಧ ರಾವಲಯಾಖ್ಯ ದಿವಿಯೊಳೆಸವ ಅ.ಪ. ನಿಖಿಳ ಜಗತ್ತಿಗೆ ಪಾವನತರವೆಂದೆನಿಸುವುದು ಶ್ರೀ ವಿಧಿಭವ ಶಕ್ರಾದ್ಯರು ಆವನ ಸೇವಕ ಸೇವಕರೆನಿಸುವರು ತಾ ಉತ್ತಮ ಪುರುಷನೆನಿಸಿ ಜಗವ ಸ ದಾವಕಾಲ ಸಂತೈಸುವನು ಜೀವಾಂತರ್ಗತನಾಗಿ ವಿವಿಧ ವೇ ದಾವಳಿಯಿಂದ ತುತಿಸಿ ಕೊಂಬಾ 1 ಪಾತನೊಳಹಿಪ ವಿರೋಧಿಸೆ ತವಸ ತ್ವಾತಿಶಯನ ತೋರೆಂದೆನುತಾ ಜಾತರೂಪ ಶೈಲಾತ್ಮಜನಪ್ಪಿರೆ ವೀತಿ ಹೋತ್ರ ಸಖ ಕಿತ್ತೊಗೆಯೆ ವೀತ ಕರ್ನನಳವಳಿದು ವೇಗ ಧಾತ ಮಹಿಳೆ ತೀರ್ಥದಿ ಭೂ ಲಕ್ಷ್ಮೀಸ ಮೇತನಾಗಿ ಮೋದಿಸುತಿಪ್ಪೆ 2 ಭೂಸುರನೊರ್ವನು ತೊಂಡಮಾನ ಧರ ಣೀಶÀನ ನಿಲಯದೊಳುಳುಹಿ ಸತಿಯ ನೃಪತಿ ಮರೆಯೆ ನಿ ಶ್ವಾಸ ವನೈದಿದಳಾ ಸತಿಯು ಆ ಸಮಯದಿ ದ್ವಿಜವರ್ಯನು ಬೆಸಗೊಳೆ ಕ್ಲೇಶದಿ ಭೂಮಿಪ ಸಂಸ್ತುತಿಸೆ ಕೇಶವ ತಾನಸ್ಥಿಗಳ ತರಿಸಿ ಸು ವಾಸಿನಿ ಶಿಶು ಸಹ ಒಲಿದಿತ್ತಾ 3 ವೃದ್ಧ ಬ್ರಾಹ್ಮಣನು ತುತಿಸೆ ಸಲಿಲದೊಳ ಗದ್ದಿ ಕುಮಾರತ್ವವನಿತ್ತ ಅಧ್ವರವೆಸಗಿದ ಋಷಿಗಳ ಮಂತ್ರದ ಪದ್ದತಿ ತಿದ್ದಿಯಜ್ಞವ ಮಾಡ್ದ ಮಧ್ಯರಾತ್ರಿಯೊಳು ಬೆಸಗೊಂಡ ನೃಪನು ಪದ್ರವ ಕಳೆದಾಯುಧವಿತ್ತು ಮೃದ್ಭಾಂಡವ ರಚಿಸುವನಿಗೊಲಿದವನ ಚೋದ್ಯ ತೋಂಡಮಾನಗೆ ತೋರ್ದ 4 ಸಂಚಿತ ಕುಕರ್ಮಗಳ ಮನೆಯ ಮುರಿದು ಆಗಾಮಿ ಫಲಂಗಳ ಅನುಭವಕೀಯದೆ ಪ್ರಾರಬ್ದಾ ಮೂರ್ತಿ ಚಿಂ ತನೆ ಇತ್ತು ಸ್ವರೂಪಸುಖಾ ಅನುದಿನದಲಿ ವ್ಯಕ್ತಮಾಡಿಸಿ ಕೊ ಟ್ಟನಿಮಿತ್ತಾಪ್ತನೆನಿಸುತಿಪ್ಪ 5 ಏಕಮೇವ ರತ್ನಾಕರ ಮಂದಿರ ಆಕೂತಿಜ ಯಜ್ಞಾಕರನೇ ಲೊಕವಿಲಕ್ಷಣ ಸೂಕರಾತ್ಮ ಪಿ ವಿನುತ ಲಕ್ಷ್ಮೀ ಕಾಂತಾ ಗೋಕುಲ ಮಂದಿರ ಏಕಾಂತಿಗಳ ನಿ ರಾಕರಿಸಿದೆ ಲೋಕೈಕ ಸುಖ ಶೋಕ ರಹಿತ ನಿಜಲೋಕವಿತ್ತು ನಿ ರಾಕುಲ ಸುಖಗಳ ತಾ ಕೊಡುವಾ 6 ದಿನಪನೊಳಗೆ ವೃಜಿನಿ ವಸು ತಾ ಎಂ ದೆನಿಸಿ ಜಯಾಪತಿ ಪ್ರದ್ಯುಮ್ನ ಅನಿರುದ್ಧಾದಿ ಚತುರ್ಮೂತ್ರ್ಯಾತ್ಮಕ ತನಗೆ ತಾನೆ ಪೂಜಕ ಪೂಜ್ಯ ಅನುಪಮ ನಾಮದಿ ಕರೆಸುತಲಿಹ ತ ನ್ನನು ಈ ಪರಿಧೇನಿಸುತಿಪ್ಪ ಮನುಜರಿಗೊಲಿದು ಜಗನ್ನಾಥವಿಠ್ಠಲ ಜನನ ಮರಣಗಳ ಪರಿಹರಿಪಾ 7
--------------
ಜಗನ್ನಾಥದಾಸರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ