ಒಟ್ಟು 398 ಕಡೆಗಳಲ್ಲಿ , 73 ದಾಸರು , 322 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನ ಪಡೆದಿದ್ದೆನೋ ಸುಕೃತವ ಮುಂ-ದೇನ ಪಡೆದಿದ್ದೆನೋ ಮಾನ ನಿಧಿಯು ಚಿದಾನಂದ ಗುರುವ ಕಂಡುತಾನೆ ತಾನಾಗಿ ತನ್ನನು ಮರೆದಿರ್ದುದ ಪ ಆನಂದ ಮೂರುತಿಯ ನಾನೀಗ ಅತಿ ವೇಗ ಧ್ಯಾನಿಸಲುಏನೇನು ತೋರದೆ ಯೋಚನೆಗಳು ಕುಂದಿನಾನು ನೀನೆಂಬ ನೀತಿಯ ಮರೆದಿರ್ದುದಾ 1 ಶತಕೋಟಿ ಶಶಿಸೂರ್ಯರ ಪ್ರಭೆಯ ತಾಳ್ದುಶತ ಪತ್ರಗಳ ಗೇಹನ ಅತಿಹರುಷದಿ ಕಂಡು ಆತನೇ ತಾನಾಗಿಮತಿಯನೆ ತೊರೆದೆ ಮರೆತು ನಾ ನಿರ್ದುದ 2 ನಿರುಪಮ ನಿರ್ಗುಣನ ನಿರ್ವಿಕಲ್ಪ ನಿರವಯ ನಿರೀಹನವರಚಿದಾನಂದ ಗುರುವ ವರದಾತನಚರಣ ನೆನೆದು ಮನ ಚಲಿಸದಂತಿರ್ದುದ 3
--------------
ಚಿದಾನಂದ ಅವಧೂತರು
ಕಂದ ಮಾಡುವುದೇನು ಕಂಡಿರೆ ಗೋ- ವಿಂದನ್ನ ದೂರ್ಹೇಳ ಬಂದಿರಾ ಪ ಏನುಮಾಡಿದನೀಗ ನಮರಂಗ ಜೋಡೇನೆ ನಿಮಗೆ ಕೋಮಲಾಂಗ ಭಂಗ 1 ಅತ್ತೆ ಮಾವಂದಿರಂಜಿಕೆಯೇನೆ ಪರ ನೀಯೆಂಬೋದನು ಕಾಣೆ ಕೃಷ್ಣ ಕೊಳಲನೂದೊ ವನಕಿನ್ನು ಕತ್ತಲೊಳಗೆ ಬರುವ ಬುದ್ಧಿ ತರವೇನೆ 2 ಪುರುಷ ಮಕ್ಕಳನ್ನೆಲ್ಲ ತೊರೆದಿರೆ ನಮ್ಮ ಸರಸಿಜಾಕ್ಷನ ಹಿಂದೆ ತಿರುಗುವಿರÉ ಸರಿಬಂದ ಕ್ರೀಡ್ಯವಗರುಹಿರೆ ಅರಗಳಿಗೆ ಎನ್ನರಮನ್ಯಾಗಿರಗೊಡಿರೆ 3 ಕದ್ದುಬೆಣ್ಣೆಯ ಮೆಲ್ಲುವನೇನೆ ಮುದ್ದು ಕೂಸಿಗೀಪರಿ ಅಂಬುವರೇನೆ ಪದ್ಮಪಾದದ ಪರಮಾತ್ಮನೆ ಬಂ- ದಿದ್ದಲ್ಲೆ ನಿಮಗೆ ದಯಮಾಡುವನೆ 4 ಮಾನವಿಲ್ಲದೆ ಮಾರನಯ್ಯನ ಕೂಡಿ ವೃಂದಾ- ವನದೊಳಾಡುವುದೇನೆ ದೂರಿಕೊಂಬುವುದೇನು ಕಾರಣ ಭೀ- ಮೇಶ ಕೃಷ್ಣನು ನಿಮ್ಮನ್ಸಲಹುವನೆ 5
--------------
ಹರಪನಹಳ್ಳಿಭೀಮವ್ವ
ಪಾಹಿ ಕೃಷ್ಣ ಮಹಿಪತಿ ಮಧುರೆಗೆ ಪೋಗೋದೇನೊ ಕಾರಣ ಯದುಕುಲನಾಥ ಪಾಹಿ ಕೃಷ್ಣ ಮಹಿಪತಿ ಪ ಮಧುವೈರಿ ತಾ ಬ್ಯಾಗ ಮಧುರಾಪಟ್ಟಣದಾರಿ ಹಿಡಿದಿರೆ1 ದಧಿ ಮಥನವ ಮಾಡಿ ಕದವ ತೆಗೆದು ಕಂಡರು ಬ್ಯಾಗ 2 ಮಿಂಚಿನಂತ್ಹೊಳೆವೊ ವಿರಿಂಚನಯ್ಯನ ರಥ ಚಂಚಲಾಕ್ಷಿಯರು ನೋಡುತಲಾಗ 3 ಬನ್ನಿರೆ ಬನ್ನಿರೇ ಪನ್ನಂಗಶಯನನ ಬೆನ್ನ್ಹತ್ತಿ ನಾವು ಹೋಗುವೊಣೀಗ 4 ಫುಲ್ಲನಾಭನೆ ಮತ್ತೆಲ್ಲಿಗೆ ಪಯಣವೊ ಎಲ್ಲ ವಾರ್ತೆಗಳ್ಹೇಳೊ ನಮಮುಂದೆ 5 ನಂದಗೋಪನ ಬುದ್ಧಿ ಮಂದವಾಯಿತೇನೊ ವೃಂದಾವನವ ಬಿಟ್ಟು ಕಳಿಸುವ 6 ಕೂಸೆಂದು ನಿನ್ನ ಮುದ್ದಿಸುವೊ ಮೋಹಗಳೆಲ್ಲ ಬ್ಯಾಸರಿಕ್ಯಾಯ್ತೇನೆಶೋದೆಗೆ 7 ಸಾಧುಗೋವ್ಗಳನೆಲ್ಲ ಕಾದುಕೊಂಡಿರುವೋದು ಶ್ರೀಧರ ನೀದಾರಿಗ್ಹೇಳಿದ್ಯೊ 8 ವತ್ಸಕಾಯ್ದುದು ಮನಕಿಚ್ಛಿಲ್ಲದಿರಲು ಶ್ರೀ- ವತ್ಸಧರನೆ ಸುಮ್ಮನಿರೊ ನೀನು 9 ನಮ್ಮನೆಯಲಿ ಪಾಲ್ ಬೆಣ್ಣೆ ಕದ್ದನೆಂದು ನಿಮ್ಮಮ್ಮನಲ್ಲಿ ದೂರಿದೆವೇನೊ 10 ಕ್ಷೀರಗಡಿಗೆ ಒಡೆದೋಡಿ ಪೋದನೆಂದು ದೂರಿಕೊಂಡವರಲ್ಲೋ ನಿನ್ನನು 11 ಊರೊಳಗೊಬ್ಬಳು ದೂರಿಕೊಂಡರೆ ನಾವು ಭಾರಿ ಶಿಕ್ಷೆಯ ಮಾಡಿ ಬಂದೆವೊ 12 ಎಂದಾದರೊಂ(ದು) ದಿನ ಅಂದ ಮಾತುಗಳೆಲ್ಲ ಇಂದೆ ತಪ್ಪಿ ್ಹಡಿಯದೆ ಕ್ಷಮಿಸಯ್ಯ 13 ಕದವ ತೆಗೆಯದ ಮುಂಚೆ ಸದನದ್ವಾರದಿ ಬಂದು ಯದುನಾಥ ಎದುರೆ ನಿಂತಿರುವ್ಯಲ್ಲೊ 14 ಕಂಗಳಿಂದಲಿ ನೋಡ್ಯಾಲಿಂಗನೆ ಮಾಡುತ ಸಂಗಸುಖದಿ ಬೆಳೆದಿದ್ದೇವೊ 15 ನಿನ್ನ ನೋಡದ ಕಂಗಳಿನ್ನ್ಯಾತಕಿರಲು ಕೇ(ಗೇ?) ರೆಣ್ಣೆಯ ತೀಡಿಕೊಂಬುವೋಣೇನೊ 16 ಮಾರನಾಟಕೆ ಮನಸೋತು ನಿನ್ನನೆ ನಾವು ಜಾರಪುರುಷನೆಂದು ತಿಳಿಯದೆ 17 ಇರುಳೇಯೆ ಮನೆಯಲ್ಲಿ ಕೊಳಲೂದೋ ಕಾಲಕ್ಕೆ ನಳಿನಾಕ್ಷ ನಾವ್ಹ್ಯಾಗೆ ಬಂದೆವೊ 18 ಕಾಲಿಗಿಡುವ ವಸ್ತು ಕರದಲಿಟ್ಟುಕೊಂಡು ವಾಲೆ ಮೂಗುತಿ ಹೆರಳಿಗೆ ಚುಚ್ಚಿ 19 ಹರಡಿ ಕಂಕಣ ಪಾದದ್ಹರಡಿನ ಮ್ಯಾಲಿಟ್ಟು ಮುಡಿವ ಮಲ್ಲಿಗೆ ಕಿವಿಯಲಿ ಸುತ್ತಿ 20 ಹಾರ ಪದಕವ ಟೊಂಕಕೆ ಕಟ್ಟಿ ನಾವು ಉಟ್ಟ ಸೀರೆ ಕುಪ್ಪುಸ ಪಾರವಿ(ಪರಿವೆಯಿ?)ಲ್ಲದೆ 21 ಗಂಡಮಕ್ಕಳಿಗುಣಬಡಿಸಿ ಮಂಡಿಯ ಮ್ಯಾಲೆ ಸಂಡಿಗ್ಹುಳಿಯನ್ಹಾಕಿ ಬಂದೆವೊ 22 ಎಲೆಯ ಮ್ಯಾಲ್ಹಾಕೋ ಪದಾರ್ಥವೆಚ್ಚರವಿಲ್ಲ ತಲೆಯ ಮ್ಯಾಲ್ಹಾಕಿ ಬಂದೆವು ನೋಡೊ 23 ಬೆಣ್ಣೆ ಚೆಟ್ಟಿಗೆಯ ಬೆಕ್ಕಿನ ಮುಂದೆ ಸರಿಸೇವೊ ಸಣ್ಣ ಕೂಸಿನ ನೆಲವಿನೊಳಿಟ್ಟು 24 ಅಳುವೊ ಮಕ್ಕಳನೆ ಆಕಳ ಕಣ್ಣಿಗೆ ಕಟ್ಟಿ ಕರು- ಗಳ ತೊಟ್ಟಿಲೊಳಗೆ ಇಟ್ಟು 25 ಬಂಗಾರದ್ಹಾರ ಪದಕನ್ಹಾಕಿ 26 ಅಚ್ಛದಿಂದೆತ್ತಿ ಮುದ್ದಿಡುತಿರೆ ನಮ ಗಲ್ಲ ಕಿ- ತ್ತಿ ಚಿವರಿಕೊಂಡ್ಹೋಯಿತು 27 ಬಂಗಾರ ಕಳಕೊಂಡು ಮಂಗನಂತಾದೆವೊ ಮಂಗಳಾಂಗನೆ ಇಷ್ಟು ಮರುಳಾಗಿ 28 ವ್ಯತ್ಯಾಸದಿಂದ್ವಸ್ತ್ರ ಇಟ್ಟು ಬಂದೆವೊ ನಾವು ಬಿಟ್ಟೊ ್ಹೀದನೆಂಬೊ ಸಿಟ್ಟಿಲ್ಲವೊ 29 ಅಡಅಡವಿಲಿ ನಿನ್ನ ಹುಡುಕುತ ತಿರುಗೇವೊ ಕಡಲಶಯನ ಕರುಣದಿ ಬಂದ್ಯೊ 30 ರಾಸಕ್ರೀಡೆ ಜಲಕ್ರೀಡೆನಾಡಿದ ವಾರ್ತೆ ರಾ(ರಹ?)ಸ್ಯ ಒಬ್ಬರಿಗೆ ನಾವ್ ತಿಳಿಸದೆ31 ಅತ್ತೆಮಾವಂದಿರೀ ವರ್ತಮಾನವ ಕೇಳಿ ನೆತ್ತಿಮ್ಯಾಲ್ಹೊಡದ್ಹೊರಗ್ಹಾಕೋರೊ 32 ಪತಿಗಳು ನಮ್ಮನ್ನು ಬಿಟ್ಟರೂ ಬಿಡಲೊ ಶ್ರೀ- ಪತಿ ನಿನ್ನ ಬಿಟ್ಟು ಪೋಗುವರಲ್ಲ 33 ಮನೆ ಧನ ಧಾನ್ಯ ಮಕ್ಕಳು ಪತಿಗಳು ಬ್ಯಾ- ಡ ನಮಗೊಂದು ಸ್ಥಾನ ತೋರಿಸೊ ನೀನು 34 ಕುಸುಮ ಮಲ್ಲಿಗೆ ಒಣಗಿದ ದಾರ ಮತ್ಯಾವ ಕೆಲಸಕ್ಕೆ ಬರುವುದೊ 35 ಎಲ್ಲಿ ಬಿಲ್ಲ ್ಹಬ್ಬ ಮತ್ತೆಲ್ಲಿ ಸೋದರಮಾವ ಎಲ್ಲಿಂದ ಕರೆಯ ಬಂದನು ಈತ 36 ಕ್ರೂರನೆನ್ನದಲೆ ಅಕ್ರೂರನೆಂಬುವೋ ಹೆ- ಸರ್ಯಾರಿಟ್ಟರ್ಹೇಳೊ ಈ ಪುರುಷಗೆ 37 ನಮ್ಮ ನಿಮ್ಮನು ಅಗಲಿಸುವೋನು ನಮ್ಮಂಥ ಹೆ- ಣ್ಣು ಮಕ್ಕುಳು ಇವಗಿಲ್ಲವೆ 38 ಇಳಿಯಿಳಿ ಇಳೆಯಲ್ಲೀಳಿಗೆಯ ಕೊಟ್ಟೇವೊ ನಮ್ಮ ಕೊ- ರಳ ಕೊಯ್ದು ಮುಂದಕ್ಹೋಗೋ ನೀ 39 ವಾಸುದೇವನೆ ನಿನ್ನ ರಥದ ಗಾಲಿಗೆ ನಾವು ಹಾಸಿಕ್ಯಾಗಿ ಅಡ್ಡಬಿದ್ದೆವೊ 40 ಮಧುರಾಪಟ್ಟಣದಲ್ಲಿ ಇದ್ದ ಸತಿಯರೆಲ್ಲ ಮದನಮೋಹನ ನಿನ್ನ ಬಿಡುವೋರೆ 41
--------------
ಹರಪನಹಳ್ಳಿಭೀಮವ್ವ
ಧ್ರುವ ತಾಳ ದಾಸ ನಿನಗೆ ನಾನು ಲೇಸಿನವನೆಂದು ಆಶೆಯಿಂದಲಿ ಗತಿ ಬೇಡಲಿಲ್ಲ ದಾಸತನ ಎನಗೆಲ್ಲಿಹುದು ಶ್ರೀನಿ- ವಾಸನೆ ಅನಂತ ಕಲ್ಪದಲ್ಲಿ ನಾಶನ ಮಾಡಿಕೊಂಬ ದಾಸ ನಾನು ದಾಸನೆನಿಸಿಕೊಂಡು ತಿರುಗುವ ಜನಕ್ಕೆ ಲೇಸಾಗಿ ದಂಡಿಸಿ ಮೆದಿಯ ಬೇಕು ಕೇಶವ ವಿಜಯವಿಠ್ಠಲನೆ ನಿನ್ನ ಮರೆದು ಗ್ರಾಸಕ್ಕೆ ತಿರುಗುವ ಭಾಸಮಾನ ದಾಸ 1 ಮಟ್ಟತಾಳ ತಿರಕದಾಸ ನಾನು ಹರಕ ದಾಸ ನಾನು ಕರಕರಿಯನು ಮಾಡಿ ಪರರ ಪೀಡಿಸಿ, ಉ- ದರ ಪೊರೆವ ದಾಸನು ನಾನು, ಬರಿಯ ದಾಸ ನಾನು ಅರಿಮರ್ದನ ಹರಿ ವಿಜಯವಿಠ್ಠಲ ನಿನ್ನ ಪರಮ ಭಕ್ತನೆಂದು ತಿರಿದುಣ್ಣ ಮೆಚ್ಚಿದೆನು 2 ತ್ರಿವಿಡಿ ತಾಳ ಕೊಟ್ಟರೆ ಹರಸುವೆನು, ಕೊಡದಿದ್ದರೆ, ಬೆರ ಳಿಟ್ಟು ಬಗಳುವಂಥ ಭ್ರಷ್ಟ ದಾಸನು ನಾನು ಸೃಷ್ಟಿಯೊಳಗೆ ಬಹು ಧನವಂತರ ಮನೆಯ ಮೆಟ್ಟು ಕಂಡರೆ ಬಿಡದಿಪ್ಪ ದಾಸ ನಾನು ನಷ್ಟ ವಾಗಿದ್ದ ಉಚ್ಛಿಷ್ಟ ದಾಸನು ನಾನು ದೃಷ್ಟಿಯಿಂದಲಿ ನೋಡೊ, ವಿಜಯವಿಠ್ಠಲ ಕೇಳೊ ಎಷ್ಟೊ ಕಾಲದ ಪಾಪಿಷ್ಠ ದಾಸನು ನಾನು 3 ಅಟ್ಟತಾಳ ಕುರುಡ ದಾಸನು ನಾನು ಕುಂಟ ದಾಸನು ನಾನು ಹುರಡಿಗೆ ಮಾಡುವ ಹುರಳಿಲ್ಲದ ದಾಸ ಸರಿಯವರನು ಕಂಡು ಮರಗುವ ದಾಸನು ಎರಡು ಕಡೆ ಕೆಟ್ಟ ಭರಡಿ ದಾಸನು ನಾನು ಗರಕೆ ಕರದಾರೆ ಹಿಗ್ಗುವ ದಾಸನು ನಾನು 4 ಆದಿತಾಳ ಹೀನ ದಾಸನು ನಾನು, ನೀಚ ದಾಸನು ನಾನು ಹಾನಿವೃದ್ಧಿಗಳೆಲ್ಲ ತಿಳಿಯದ ದಾಸನು ನಾನಾ ದುಷ್ಕರ್ಮ ಮಾಳ್ಪ ದಾಸನೊ ನಾನು ಮಾನವಿಲ್ಲದೆ ಅಪಮಾನ ದಾಸ ನಾನು ದಾನ ಧರ್ಮವಿಲ್ಲದ ಹೀನ ದಾಸನು ನಾನು ಅನಂತ ಜನನಕ್ಕೆ ಹೊಲೆದಾಸನು ನಾನು ಶ್ರೀನಿವಾಸ ತಿರುಮಲೇಶ ವಿಜಯವಿಠ್ಠಲ ಬ್ಯಾನೆ ಇದ್ದಲ್ಲಿ ಬಿಡುವ ಬಕ್ಕದಾಸನು ನಾನು 5 ಜತೆ ಹೊಟ್ಟೆಕಿಚ್ಚಿನ ದಾಸ-ಹಲುಬಿ ಪೋಗುವ ದಾಸ ದಟ್ಟದಾರಿದ್ರ ದಾಸನು ವಿಜಯವಿಠ್ಠಲರೇಯ 6
--------------
ವಿಜಯದಾಸ
ರಂಗ ನಿನ್ನಯ ಮುಖ ತೋರಯ್ಯ ಪ ಅರ್ಧರಾತ್ರಿಯಲ್ಲವತರಿಸಿದ್ಯೊ ಹೋಗಿ ಮುದ್ದು ಗೋಪಿಯ ಸುತನೆನಿಸಿದ್ಯೊ ಭದ್ರದೇವಿಯರ ನೀ ಕಳಿಸಿದ್ಯೊ ಬಂ ದಿದ್ದ ಪೂತಣಿಯ ಸಂಹರಿಸಿದ್ಯೊ 1 ವತ್ಸಕಾಯುತಲ್ಹೋಗಿ ವನದೊಳು ಬಂದ ಕಿಚ್ಚು ನುಂಗಿದೆ ನಿನ್ವದನದೊಳು ಸ್ವಚ್ಛಮಾಡಿದಿ ಕಾಳಿಜಲಗಳು ತೋರೆ ಕುಕ್ಷಿಯೊಳಗೆ ತ್ರಿಜಗಂಗಳು 2 ದೇವಕ್ಕಿದೇವಿ ಯಶೋದಾನೆ ವಸು ದೇವ ನಂದ ಬಲರಾಮಗೆ ಎದುರು ಬಾರೋ ಭೂದೇವಿರಮಣನೆ ಭೀಮೇಶ ಕೃಷ್ಣನೆÀ ಶ್ಯಾಮವರಣನೆ3
--------------
ಹರಪನಹಳ್ಳಿಭೀಮವ್ವ
ವರಪುಣ್ಯಬೇಡುವೆನಾಂ ಗುರುವರ್ಯನ ಚರಣ ಪಿಡಿದು ಮುಕ್ತಿಯಪಥದೊಳ್ ಪರಿಕಿಸಿ ಶೀಘ್ರದಿಘನತರ ಪರತತ್ವಪಡೆದು ಮರಣ ಜನನವ ತೊರೆವೇಂ ಕಂದ ಸನ್ನುತಗುರುವರತತ್ವ ಬೋಧಿಸಿ- ಮಂಗಳಾಶಾಸನಗೈಯುತಲೀ ಪ ಎನ್ನನೆ ಯಜಿಸುತ ಸುಮ್ಮನೆಯಿದ್ದರೆ- ಬೇಡಿದವರಗಳ ಕೊಡುವೆನುತ ಅ.ಪ ಕೊಟ್ಟರು ದ್ರವ್ಯವ ನಿನ್ನಪರಾಧವ ಕೊಡದಿದ್ದರು ನಾ ಮನ್ನಿಸುವೆ ನಿಷ್ಠೆಯೊಳ್ಪರಮನ ಸನಿಯದೊಳಿದ್ದರೆ ಬಿಟ್ಟೆನೆಯೆಂದಿಗು ನಂಬೆನುತ 1 ಸಾಧಿಸಿ ವಿರತಿಯ ಸಂಶಯಗೈಯದೆ- ಭೇದವ ಛೇದಿಸಿ ನಿರ್ಮಲದಿ ನಾದವ ಕೇಳುತ ಚಿತ್ಕಳೆ ನೋಡುತ ಮೋದದಿ ಶ್ರೀಹರಿ ನೀನೆನುತ 2 ಮೌನವ ಧರಿಸಿರಲು ಕರೆದು ಲೋಕಸಾರಂಗಮುನಿಗಳಂ- ಕಳುಹಿಸಿಕರುಣದಿ ಪೊರೆದಂತ 3 ಬೇಡಿಕೊ ಎನ್ನಲು ನಿನ್ನಂತ ಕುಕ್ಷಿಯೊಳ್ಪುಟ್ಟಿದೆ ಮನ್ನಿಸುತ 4 ಅಂತರಂಗದಿಂ ಧ್ಯಾನಿಸಲು ಇಷ್ಟದಿ ಸೀರೆಯ ಕೊಟ್ಟಂತ 5 ನಿತ್ಯವು ಕೃಪೆಯನು ತೋರುತಲಿ ಅರ್ಥಿಲಿ ರಂಗನ ಪಿಡಿದಂತ 6
--------------
ರಂಗದಾಸರು
(ಇ) ಆತ್ಮನಿವೇದನೆಯ ಕೃತಿಗಳು ಇದನಾದರು ಕೊಡದಿದ್ದರೆ ನಿನ್ನ ಪದಸೇವೆಗೆ ಜನರೊದಗುವರೆ ಪ ದೊರೆತನವಾಗಬೇಕೆನಲಿಲ್ಲ ಬಲು ಸಿರಿತನವನು ವಾಂಛಿಸಲಿಲ್ಲ ಪರಿಭೋಗದ ಸ್ಪøಹೆ ಎನಗಿಲ್ಲ ನಿನ್ನ ಸ್ಮರಣೆಯೊಂದಿತ್ತರೆ ಸಾಕಲ್ಲ 1 ಅನ್ನವಸ್ತ್ರವ ಕೇಳುವದಿಲ್ಲ ಒಳ್ಳೆ ಚಿನ್ನ ಬಣ್ಣವ ಕೊಡು ಎನಲಿಲ್ಲ ಹೆಣ್ಣು ಮಣ್ಣಿನೊಳಗಾಸೆ ಎನಗಿಲ್ಲ ಪರಿ ಪೂರ್ಣ ನೀನೊಲಿದರೆ ಸಾಕಲ್ಲ 2 ಸುರರ ಭೋಗದಿ ಮನವೆನಗಿಲ್ಲ ಪುಲಿ ಗಿರಿದೊರೆ ಬಲ್ಲೆ ನೀನಿದನೆಲ್ಲ 3
--------------
ವೆಂಕಟವರದಾರ್ಯರು
(ಊ) ಆತ್ಮನಿವೇದನೆ ಇಟ್ಟಂತೆ ಇರುವೆನೊ ಹರಿಯೇ ನೀನು ಕೊಟ್ಟದ್ದನ್ನುಣ್ಣುವೆ ಮತ್ತೇನು ಧೊರೆಯೇ ಪ ಪಟ್ಟೆಪೀತಾಂಬರ ಕೊಟ್ಟರೆ ಉಡುವೆನುಬಟ್ಟೆಯಿಲ್ಲದಿರೆ ಚಿಂದಿತೊಟ್ಟು ನಾನಿರುವೆನೊಮೃಷ್ಟಾನ್ನ ಭೋಜನವಿತ್ತರೆ ಉಣ್ಣುವೆ ಉ-ಚ್ಛಿಷ್ಟನ್ನವನಿತ್ತನೆ ತುಷ್ಟಿಲೆ ತಿನ್ನುವೆ 1 ಹಾಸಿಗೆ ಕೊಟ್ಟರೆ ನಾ ಮಲಗುವೆಭೂಶಯನವಿತ್ತರೆ ಅಲ್ಲಿಯೆ ಒರಗುವೆಆ ಶಾಲು ಕೊಟ್ಟರೆ ಹೊದೆಯದೆ ಬಿಡದಾಕಾಶವ ಹೊದಿಯೆಂದರೆ ಹೊದೆಯುವೆ ಬರಿಯೆ 2 ನೀಕೊಟ್ಟರುಂಟು ಕೊಡದಿದ್ದರೇನುಂಟುಬೇಕು ಬೇಡಗಳು ನಿನ್ನಿಚ್ಛೆಯಾಧೀನಲೋಕೇಶ ಗದುಗಿನ ವೀರನಾರಾಯಣಸಾಕು ಬಿಡಿಸಯ್ಯ ನರಜನ್ಮದ ಗಂಟು 3
--------------
ವೀರನಾರಾಯಣ
(ಶೇಣಿಯ ಗೋಪಾಲಕೃಷ್ಣನನ್ನು ನೆನೆದು) ತಾಪವ ಬಿಡಿಸು ದಯಾಪರ ಶ್ರೀ ಗೋಪಾಲ ಕೃಷ್ಣ ನೀ ಕಾಪಾಡು ಸಂಸಾರ ಪ. ಲೋಕನಾಯಕ ನಿನ್ನ ಕರುಣವಂದಿದ್ದರೆ ಸಾಕೆಂಬೆ ಜ್ಞಾನಾನಂದಕರ ಪಾಕಶಾಸನ ಸುತಗೊಲಿದಾತನ ಭಂಡಿ ನೂಕಿ ನಡೆಸಿದ ಕೃಪಾಕರ ಮೂರುತಿ 1 ನಡೆವುದು ನುಡಿವುದು ಕೊಡುವುದು ಕೊಂಬುದು ಮಡದಿ ಮಂದಿರ ಮಮತಾಸ್ಪದದ ಒಡವೆ ವಸ್ತುವು ಮೊದಲಾದುದೆಲ್ಲವನು ಶ್ರೀ- ಮುಡಿಯ ಸಂವರಿಸುವ ಕರದಿ ಸಂಗ್ರಹಿಸುತ2 ನಿನ್ನಡಿಗಳ ನಂಬಿ ನಿಂದಿಹೆನಿಲ್ಲಿ ಪ್ರ- ಸನ್ನ ಮುಖಾಂಬುಜ ಪಾಲಿಸೆಂದು ಅನ್ಯರಿಗೆಂದೆಂದು ದೈನ್ಯ ತೋರಿಸಲಾರೆ ಪನ್ನಗಾಚಲವಾಸ ಪರಮ ದಯಾಳೊ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ವಾದಿರಾಜರು) ದಿಟ್ಟದಿ ನಿನ್ನಯ ಪದಪದ್ಮವನ್ನು ಮನಮುಟ್ಟಿ ಭಜಿಸುವೆ ಕೃಷ್ಣರಾಯ ಪ ಸೃಷ್ಟಿ ನಿನ್ನಂಥ ಇಷ್ಟ ಪುಷ್ಟನ ಕಾಣೆ ಶ್ರೀ ಕೃಷ್ಣರಾಯ ಅ.ಪ ಇಷ್ಟನು ದುಷ್ಟ ಪಾಪಿಷ್ಠನಾಗುವುದುಚಿತವೇ ಕೃಷ್ಣರಾಯಾ ನಿನ್ನ ದೃಷ್ಟೀಲಿ ನೋಡೆನ್ನ ಶ್ರೇಷ್ಠ ಶ್ರೀಷ್ಮಿಪನಿಷ್ಟ ಕೃಷ್ಣರಾಯಾ 1 ಪಾಲನ ಪಾಲಿಪನನಿಲ್ಲಿಸಿದೇ ಕೃಷ್ಣರಾಯಾ 2 ಗರಳ ಸೇವಿಸಲು ಕಂಡುತ್ಯಜಿಸಿದೆ ಕೃಷ್ಣರಾಯಾತರಳೆಗೆ ನೀ ನಿನ್ನ ಸುಧಿಮಳೆಗರೆಯುತ ಅರಳಿಸೊ ಕೃಷ್ಣರಾಯಾ3 ವಡವುಟ್ಟಿದವರಂತೆ ದುಷ್ಟ ಪಾಪಿಷ್ಟ ಬೆನ್ನಟ್ಟುವನೋ ಕೃಷ್ಣರಾಯಾಗುಟ್ಟದಿ ನಿನ್ನಯ ದೃಷ್ಟಿಲಿ ನೋಡಿ ಆ ದುಷ್ಟನ ಸುಟ್ಟು ಹಾಕೊ ಕೃಷ್ಣರಾಯಾ4 ಮಧ್ಯಾನ್ಹ ಸಮಯದಿ ಮಧ್ವದಾಸನ ಭೂಷಿಪ ಶೇಷನ ವೈರಿಯ ಕೃಷ್ಣರಾಯಾದಾನವ ಗೈದು ದೂತಿಯ ಕರದಿಂದ ದೋಷಿಯೆಂದೆನಿಸಾದೆಸಲಹಿದೊ ಕೃಷ್ಣರಾಯಾ 5 ಅರಿಯದೆ ಪೋಗಿ ನಾಥಾ ತ್ರಿನಾಮನ ಕೂಡ ಭುಂಜಿಸಿದೆ ಕೃಷ್ಣರಾಯಾಅರಿಯು ನೀನಲ್ಲದೆ ಅನ್ಯರ ನಾಕಾಣೆ ಮೈಗಣ್ಣ ಕೃಷ್ಣರಾಯಾ 6 ಎನ್ನ ತನುಮನ ಧನಧಾನ್ಯ ಮನೆಯ ಮಕ್ಕಳೆಲ್ಲಾ ನಿನ್ನ ಚರಣಾಲಯವೋ ಕೃಷ್ಣರಾಯಾನಿನ್ನ ಗುಣಗಣಗಳೆಲ್ಲಾ ಅಗಣಿತವೋ ಅನ್ನಪೂರ್ಣೆಗೆಕೃಷ್ಣರಾಯಾ7 ಆದಿ ಅನಾದಿ ಅನೇಕನಾದಿ ಜನುಮದಿ ಎನ್ನಲ್ಲಿದ್ಯೋ ಕೃಷ್ಣರಾಯಾ ದೇವ ದೇವೇಶ ನೀನೆಂದು ದಯದಿಂದ ತೋರೋಕೃಷ್ಣರಾಯಾ 8 ಚರಣದ ಚರ್ಮಲ ಚಂದಸುವಸನ ತೋದ್ರ್ಯೋ ಕೃಷ್ಣರಾಯಾ ಆಲಸ್ಯ ಮಾಡುತ ತಾಳದೆ ನಿನ್ನ ಬಲಿನ ತೋದ್ರ್ಯೋಕೃಷ್ಣರಾಯಾ 9 ನಾರಂಗಿ ಫಲವನ್ನು ತಿಂದು ನೀ ನವರಸ ಭರಿತದಿ ನಿಂತ್ಯೋ ಕೃಷ್ಣರಾಯಾ ನಾರಿಯ ಮನವ ನೀನರಿತು ನಿನ್ನ ಮನವನಿತ್ತೆ ಕೃಷ್ಣರಾಯಾ 10 ಮೂರಾರು ಎರಡೊಂದು ನಿಂದಿಪ ಮತವನ್ನು ಛಂದದಿಖಂಡಿಸಿದೊ ಕೃಷ್ಣರಾಯಾಗಂಗಾದಿ ಕ್ಷೇತ್ರವು ಹಾಗದೇ ಚರಿಸಿ ತುಂಗದಿ ಬಂದು ಮೈಗಂಧ ತೋದ್ರ್ಯೋ ಕೃಷ್ಣರಾಯಾ 11 ಅಂಗದಿದ್ದುಕೊಂಡು ಪಂಚಭೇದವ ನರುಹಿದೆ ಕೃಷ್ಣರಾಯಾ ತಾರತಮ್ಯವನಿತ್ತು ನಿರುತದಿ ಸ್ಮರಿಸೆಂದು ತರುಳರಿಗುಪದೇಶಿಸಿದೆ ಕೃಷ್ಣರಾಯಾ 12 ಅರ್ಥಿಯಿಂದಲಿ ವೇದ ವೇದ್ಯತೀರ್ಥರ ಪ್ರಬಂಧ ತೀರ್ಥವ ತೋರಿ ನೀ ಕೃತಾರ್ಥನ ಮಾಡಿದೋ ಕೃಷ್ಣರಾಯಾಸತಿಸುತ ಜನನಿ ವಡಗೂಡಿ ವಿರೋಧಿಸೆ ಶಾಪವನಿತ್ತೆಕೃಷ್ಣರಾಯಾ 13 ಸತಿಜಾರನರಿತು ಮನದಲ್ಲಿ ಯೋಚಿಸಿ ಚೋರನಂದದಿ ಜರಿದು ಚರಿಸಿದಿ ಕೃಷ್ಣರಾಯಾಚರಿಸುತ ಧರೆಯೊಳು ಚೋರ ಜಾರನ ಪೊರೆದೆ ಕೃಷ್ಣರಾಯಾ14 ಅಂಗದಿ ಅಂಗಿತೊಟ್ಟು ಭಂಗವಿಲ್ಲದೆ ಕೂಡಲಗಿರಿಯಲಿ ಭುಂಜಿಸಿದೆ ಕೃಷ್ಣರಾಯಾತೀರ್ಥಗಿಂಡಿಯ ಮುಟ್ಟೆಂದು ಅಂಧಕರಾಯನು ಪೇಳಲು ಮುಟ್ಟಲಂಜದೆ ಗಾಡಿ ಧರಿಸಿದೆ ಕೃಷ್ಣರಾಯಾ 15 ತಂಡುಲವಿಲ್ಲದೆ ಪವಾಡತನದಿ ಕೂತುದ್ದಂಡ ಭೀಮನ ಸ್ಮರಿಸಿದೊ ಕೃಷ್ಣರಾಯಾ ತೊಂಡನ ಸತಿಯ ಕೈಗೊಂಡು ಪುಂಡ ಕಂಸಾರಿಯ ಸ್ಮರಿಸಿದೊ ಕೃಷ್ಣರಾಯಾ16 ಸ್ವಾದಿ ಕ್ಷೇತ್ರದಿ ಪೋಗಿ ಛತ್ರದಿ ಅರ್ಚಿಸಿಕೊಂಡ್ಯೋ ಕೃಷ್ಣರಾಯಾ ಮನವನ ಚರಿಸುತ ತಪವನೆಗೈಯುತ ಕಪಿಯನ್ನೇ ಪುಡುಕಿದ್ಯೊ ಕೃಷ್ಣರಾಯಾ 17 ಚಿಕ್ಕ ಬದಿರಲಿ ಪೋಗಿ ಬಲು ಅಕ್ಕರದಿ ನಿನ್ನ ಪಡೆದನ ಕಪ್ಪುಗೊರಳನ ರೂಪದಿ ಕಂಡ್ಯೋ ಕೃಷ್ಣರಾಯಾ ಸ್ವಪ್ನದಿ ಸರ್ವರ ಕಾಣುತ ಸ್ವಪದವಿಯನೇರಿದ್ಯೋಕೃಷ್ಣರಾಯಾ 18 ತಾಮಸ ಜೀವನು ಜವನಂತೆ ಜೂಜಿಸೆ ಜೀವನವರಿಸಿದ್ಯೋ ಕೃಷ್ಣರಾಯಾಲೇಖವು ಬರೆಯಲು ಲೋಕಾವಧರಿಸಿದ ವಾರುಣೀಶನಂತೆ ಪೌರುಷ ತೋರಿ ಫಣಿರೋಗ ನಿತ್ಯೋ ಕೃಷ್ಣರಾಯಾ 19 ಎನ್ನ ಜನ್ಮವಾದ ದಿನದಲ್ಲಿ ಜೀವೇಶರಾಯನ ಪೂಜಿಸಿದ್ಯೋ ಕೃಷ್ಣರಾಯಾಪೂಜಾದಿ ಪೂಜಿಸಿ ಪೂರ್ಣ ಆಯುವಿತ್ತು ಜೀವನುದ್ಧರಿಸಿ ಜೋಕೆಯೋ ಕೃಷ್ಣರಾಯಾ 20 ಅಕ್ಕನ ಕೈಯಲ್ಲಿ ದಿಕ್ಕಿಲ್ಲದವರಂತೆ ಸಿಕ್ಕು ಸುಖಬಟ್ಯೋ ಕೃಷ್ಣರಾಯಾ ದಿಟ್ಟದಿ ನಿನ್ನಯ ಗುಟ್ಟು ತಿಳಿಸಿ ಬೆಟ್ಟದೊಡೆಯ ತಂದೆವರದಗೋಪಾಲವಿಠಲನಪದಪದ್ಮಗಳನ್ನೆ ಮುಟ್ಟಿ ಭಜಿಸುವಂತೆ ದಿಟ್ಟನ ಮಾಡುಶ್ರೀ ಗುರು ಕೃಷ್ಣರಾಯಾ 21
--------------
ತಂದೆವರದಗೋಪಾಲವಿಠಲರು
[ಶ್ರೀ ಪ್ರಾಣದೇವರ ಅನುಗ್ರಹವಿಲ್ಲದೆ ಶ್ರೀ ಹರಿಯು ಎಂದಿಗೂ ಒಲಿಯನೆಂಬ ಪ್ರಮೇಯ. ಪೂರ್ವಜನ್ಮದಲ್ಲಿ ವಾಲಿ ಹನುಮಂತನ ಅನುಗ್ರಹವಿಲ್ಲದ ಕಾರಣ ರಾಮನು ನಿಗ್ರಹಿಸಿದ. ಅರ್ಜುನನಾದಾಗ್ಗೆ ಭೀಮನು ಅಗ್ರಜನಾಗಿ ದಯ ಮಾಡಿದುದಕ್ಕೆ ಕೃಷ್ಣನು ಸಖನಾದ. ಮೂರನೆ ಜನ್ಮ ಜಯತೀರ್ಥರಾದಾಗ್ಗೆ ಜ್ಞಾನವಿತ್ತು ಕುಮತಗಳ ನಿರಾಕರಿಸಿದಿ ಪ್ರಾಣನ ಕೃಪೆಯಿಂದ ಎಲ್ಲ ಸೌಖ್ಯ ಗಂಟು. ಈಗಾದರು ಹಿಂದಿನಂತೆ ಪೊರೆಯೊ ಎಂದು ಪ್ರಾರ್ಥನೆ.] ಧ್ರುವತಾಳ ಹಿತಮಾಳ್ಪ ಜನಕನಾಗಿ ರಕ್ಷಸು ಎಂದೆಂಬೆನೆಪಿತೃ ಸಮಾನ ಜೇಷ್ಠನೆಂದೆಂಬ ವಿಧದಿ ಪಿತನೆ ಸರಿ ಎನಗೆ ಉಪಕಾರವ್ಯಾತಕಿನ್ನುಮಾತರಿಶ್ವನೆ ದೂರ ನೋಳ್ಪದೇನೊಭಾತೃನಾಗಿ ಎನ್ನ ಪಾಲಿಸು ಎಂದೆಂಬೆನೆನೋತ ಪುಣ್ಯಗಳಿಂದ ಹರಿಯು ತಾನೆ ಸ್ವತ ಏವ ಮಾಡಿದ ಈಗ ನುಡಿವದೇನೊಮಾತೃ ನೀನೆ ದೇಹ ಪೊರೆಯುವಲ್ಲಿಅತುಳ ಗುರುವಾಗಿ ಬೋಧಿಸು ಎಂದೆಂಬೆನೆಆತ್ಮ ಗುರುವಿಗೆ ನಿಜ ಗುರುವೆನಿಸಿದೆ ನಿತ್ಯನೂತನವಾಗಿ ಯಿದನು ಬೇಡಿಕೊಂಬುವದೇನುವೀತಿ ಹೋತ್ರನೆ ದೈತ್ಯ ಸಂತತಿಗೆಪ್ರತ್ಯಂತರ ಜನುಮದ್ವಯದಿ ನಿಜ ಮುಖದಿಂದಲೆಮತಿಯು ನೀಡಿದ ಮುಖ್ಯ ಗುರು ನೀನೆ ಪ್ರತಿಯಿಲ್ಲದೆ ಇದ್ದ ಇಷ್ಟನೇನೊ ಎನಗೆಗತಿ ಪ್ರದಾತನು ನೀನೆ ಆವಕಾಲಆಪ್ತನಾಗಿ ನೀನು ಸಲಹಬೇಕೆಂಬೆನೆ ಗತ ಜನ್ಮಗಳಲಿ ನೀನು ಮಾಡಿದುಪ-ಕೃತಿಗಳೆಣಿಸೆ ಈಗ ನಿನಗಿಂದಧಿಕವಾದಆಪ್ತನಾವನು ಎನಗೆ ಅರಸಿ ನೋಡಾಮತಿಯು ರಹಿತವಾದ ಜನುಮಗಳು ಬರಲಿಅತಿ ಹಿತ ನೀನೆ ಎನಗೆ ಇಹ ಪರದಿಅತಿಶಯ ಕೃಪಾನಿಧೆ ಗುರು ವಿಜಯ ವಿಠ್ಠಲರೇಯಅತಿ ಪೀಯನಾಗುವನು ನಿನ್ನ ದಯದಿ 1 ಮಟ್ಟತಾಳ ಬಾಂಧವನು ನೀನೆ ಎರಡು ಬಗೆಯಿಂದ ತಂದೆ ನಿನ್ನುಪಕಾರ ಅನಂತ ಜನುಮದಲಿಮಂದನಾದವ ನನು ತೀರಿಸಬಲ್ಲೆನೆಬಂಧು ಅನಿಮಿತ್ಯ ಗುರು ವಿಜಯ ವಿಠ್ಠಲ ನಿ-ನ್ನಿಂದಲಿ ಎನಗೆ ಅನುಗ್ರಹ ಮಾಡುವನೊ 2 ತ್ರಿವಿಡಿತಾಳ ನಿನ್ನ ಕರುಣಪೇಕ್ಷ ಮಾಡದಲೆ ಒಂದುಜನುಮ ಹರಿ ಕರುಣವಿಲ್ಲದಲೆ ಕಳದೇಅನಂತರದಿ ಎನ್ನ ಪುಣ್ಯ ಸಾಸಿರದಿಂದಅನುಜನಾದೆ ನಿನ್ನ ಕೃಪೆಯಿಂದಲಿಮನುಜ ಕೃತಿಯಾದರು ಪ್ರತಿಮದಲ್ಲಿ ಘನ್ನ ಚೇಷ್ಟಾದಿಗಳು ತೋರಿದಂತೆ ಎನ್ನ ನಾಮಕನಾಗಿ ಎನ್ನ ರೂಪದಿಂದಎನ್ನ ಕೃತ್ಯಗಳೆಲ್ಲ ನೀನೆ ಮಾಡಿಉನ್ನತವಾದ ಕೀರ್ತಿ ತಂದು ಇತ್ತು ಎನ್ನಜನ್ನರ ಮಧ್ಯದಲಿ ಶ್ರೇಷ್ಠನೆನಸಿಪನ್ನಗ ತಲ್ಪನ್ನ ಕರವಶನೆನನಿಸಿದಿನಿನ್ನ ಕರುಣಕೆ ಎಣೆ ಆವದಯ್ಯಾಎನ್ನ ಸ್ವಭಾವದಿಂದ ಹರಿ ತಾನು ಇನಿತಾದ ಮನ್ನಣೆ ಮಾಡುವನೆ ಎಂದಿಗನ್ನನಿನ್ನುಪಕಾರವೆಂಬ ವನ್ನಧಿಯೊಳಗೆ ನಿರುತಮುಣಗಿ ಇಪ್ಪೆನಯ್ಯಾ ತೆರವಿಲ್ಲದೆ ಚನ್ನ ಪ್ರಸನ್ನ ಗುರು ವಿಜಯ ವಿಠ್ಠಲರೇಯನಿನ್ನಿಂದಲೆ ಎನಗೆ ಬಂಧುನಾದಾ 3 ಅಟ್ಟತಾಳ ದುರುಳ ಮತಗಳೆಂಬೊ ಮಾಯಿ ಗೋಮಾಯಿಗಳುಶಿರವೆತ್ತಿ ನೋಡದೆ ಪಲಾಯಧ್ವರಾದರು ಈತೆರವಾದ ಮಹತ್ಮಿ ನಿನ್ನದು ನಿನ್ನದುಮರಳೆ ಮಾತುಗಳನ್ನು ತೋರದಿದ್ದರನಿಗೆ (ರೆನಗೆ)ಕರುಣವಲ್ಲದೆ ಅನ್ಯಾಲೋಚನೆ ಇದಕ್ಕಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಪೊರೆವನು ನಿನ್ನಯ ಬಲದಿಂದಲಾವಾಗ 4 ಆದಿತಾಳ ಮೂರ್ತಿ ಗುರು ವಿಜಯ ವಿಠ್ಠಲರೇಯನಿನ್ನಿಂದ ಮಾಡಿಸುವ ವಸುಧಿಯ ವ್ಯಾಪಾರ 5 ಜತೆ ನಿಖಿಳ ಸೌಖ್ಯವೆ ಉಂಟುಉನ್ನತ ಮಹಿಮ ಗುರು ವಿಜಯ ವಿಠ್ಠಲ ಒಲಿವ || [ನಳ ನಾಮ ಸಂ|| ಚೈತ್ರ ಬ|| 12 ಆದಿತ್ಯವಾರ]
--------------
ಗುರುವಿಜಯವಿಠ್ಠಲರು
* ನೆರದು ಗೋಪಿಯರೆಲ್ಲಾರು ಕೃಷ್ಣಯ್ಯನ ಶೆರಗಪಿಡಿದುಕೊಂಡು ಅರುಹಿದರತಿ ಬೇಗದಿ ಪ. ಹಾಲು ಕರವುತಿರಲು ತೊಲೆಗೆ ನಿಚ್ಚಣಿಕೆಯ ಹಾಕದೆ ಸುರಿದಾನು ನೆಲವಿನ ಪಾಲ್ಮೊಸರಾ 1 ಅಂಮೈಯ್ಯಾ ಇಲ್ಲಾ ಕಾಣೆ ಇವಳು ಯಂನ್ನಾ ಸುಂಮ್ಮಾನೆ ದೂರುವಳು ಹುಂಮ್ಮಿಂದ ನಾನವಳ ಅಟ್ಟಕ್ಕೆ ನೆಗವೊರೆ ಬೊಮ್ಮ ಜಟ್ಟಿಗನೆ ನಾನು 2 ಮತ್ತೊರ್ವಳಿಂತೆಂದಳು ನಿಂನಮಗ ಹತ್ತಿ ಗವಾಕ್ಷಿಯಿಂದಾ ಬಚ್ಚಿಟ್ಟ ಬೆಣ್ಣೆಯನೆಲ್ಲಾವ ಮೆದ್ದಾನು ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆಯ ಮೆಲ್ವಾರೆ ಇವನ ಹೊಟ್ಟೆ ಕೆರೆಭಾವಿಯೇನೆ ಅಮ್ಮಾ ಹುಡುಗರಿಗೆ ಎಂದು ಬಚ್ಚಿಟ್ಟ ಬೆಣ್ಣೆಯನೆಲ್ಲಾ ಹೊಡೆದರವರ ಮಕ್ಕಳು 4 ಮಲಗೋಮಂಚದ ಮೇಲೆ ನಾ ಮಲಗೀರೆ ಮೊರೆವ ಹಾವನು ಪಿಡಿದು ಅರಿಯದಂತೆ ಬಂದು ಮುಸುಕಿ- ನೊಳಗಿಟ್ಟು ಅರಿಯಾದೆ ಹೋದನಂಮಾ 5 ಹರನಡುಗುವ ಹಾವನು ನಾ ಪಿಡಿವಾರೆ ತರಳಾನು ತಡೆಕಾರನೆ ಹರಕೆಯ ಹೊತ್ತುದವಪ್ಪಿಸದಿದ್ದರೆ ಗುರುತು ತೋರÀಲು ಬಂತೇನೊ 6 ಮಕ್ಕಳ ಪಡೆದವರುಯಿಲ್ಲದ ಕಳ ವಿಕ್ಕಲಿ ಬಹುದೆ ಕೃಷ್ಣಗೆ ಸಿಕ್ಕಿದ ತಪ್ಪು ಸಹಿತವೆ ತಂದರೆ ನಾನು ತಕ್ಕ ಬುದ್ದಿಯ ಪೇಳುವೆ 7 ಅಣುಮಯರೂಪ ಕಾಣೆ ನಿಂನಯ ಮಗ ಚಿನುಮಯ ರೂಪ ಕಾಣೆ ಚಿನುಮಯ ರೂಪ ಹೆಳ ವನಕಟ್ಟೆ ಆದಿಕೇಶವ ರಂಗನೆ8
--------------
ಹೆಳವನಕಟ್ಟೆ ಗಿರಿಯಮ್ಮ
1. ದೇವದೇವತಾ ಸ್ತುತಿ (ಅ) ಶ್ರೀ ಗಣೇಶ ಸ್ತವನ 100 ಗಜಮುಖನೆ ಸಿದ್ಧಿದಾಯಕನೆ ವಂದಿಪೆ ಶರಣು ಭಜಕರಿಷ್ಟವÀ ಕೊಡುವೊ ಗÀಣನಾಥ ಶರಣು ಪ. ತ್ರಿಜಗ ವಂದಿತನಾದ ದೇವ ದೇವನೆ ಶರಣು ಸುಜನರಿಗೆ ವಿಘ್ನವನು ಪರಿಹರಿಪೆ ಶರಣು ಅ.ಪ ಮಂದ ಮತಿಯನು ಬಿಡಿಸಿ ಚಂದ ಜ್ಞಾನವನಿತ್ತು ಪಾದ ಹೊಂದಿಪ್ಪ ತೆರದಿ ಸುಂದರಾಂಗನೆ ನಿನ್ನ ಪದದ್ವಂದ್ವಕೆರಗುವೆನು ಇಂದು ಕರುಣಿಪುದು 1 ಹರನ ತನಯನೆ ಕರುಣಾಕರನೆ ಸುರನರ ವರದ ಮೊರೆಯ ಲಾಲಿಸಿ ಎನ್ನ ಕರಗಳನೆ ಪಿಡಿದು ಪೊರೆಯದಿದ್ದರೆ ಬಿಡೆನು ನೆರೆದೆ ನಿನ್ನಡಿಗಳನು ತ್ವರಿಯದಿಂದಲಿ ನೋಡು ಶರಣೆಂಬೆ ನಿನಗೆ 2 ಸಿದ್ಧಿದಾಯಕ ನಿನ್ನ ಹೊದ್ದಿ ಮೆರೆವೆನೊ ನಾನು ಅಬ್ಧಿಶಯನನ ಮಹಿಮೆ ಶಬ್ದದಲಿ ಪೇಳ್ವ ಶುದ್ಧಮತಿಯನು ಕೊಟ್ಟು ಉದ್ಧರಿಸಬೇಕೆನ್ನ ಮಧ್ವವಲ್ಲಭವೇಣುಕೃಷ್ಣಗತಿಪ್ರಿಯ3
--------------
ವ್ಯಾಸರಾಯರು
2. ಆತ್ಮ ನಿವೇದನೆ ಅಪರಾಧವೆನ್ನದೈಯ ಹೇ ಜೀಯಅಪರಾಧವೆನ್ನದೈಯ ಅಪರಿಮಿತವೆ ಸರಿ ಪ ಕೃಪೆ ಮಾಡೊದಿಲ್ಲವೆ ಕೃಪಣವತ್ಸಲ ಕೃಷ್ಣ ಅ.ಪ ಹುಡುಗರು ಮಾಡುವ ತಪ್ಪಿಗೆ ಜನನಿ ತಾಬಿಡುವಳೆ ಅದರಿಂದ ಕೃಪೆಯ ಮಾಡದಲೆನಡೆವ ಕುದುರೆ ತಾನು ಎಡಹಿದರೆ ಸ್ವಾಮಿಕಡೆಗೆ ಕಟ್ಟುವನೇನೊ ತಿರುಗಿ ನೋಡದಲೆ 1 ಮಾಡು ಎಂದದ್ದನು ಬಿಟ್ಟರೆ ಅಪರಾಧಬೇಡವೆಂದನು ಮಾಡುವುದಪರಾಧಈಡಿಲ್ಲ ನಿನ್ನ ದಯ ಬೇಡುವೆನೋ ನಿನಗೆಮಾಡುವೆ ಬಿನ್ನಹ ನಾಚಿಕೆಯಿಲ್ಲದಲೆ2 ವಾಸುದೇವ ಶ್ರೀಹರಿಯೆನೋಡದಿದ್ದರೆ ಭಕುತ ಜನರು ತಮ್ಮಬೀಡ ಸೇರಿಸರೆನ್ನ ಕೇಡೇನೊ ಇದಕಿಂತನೋಡೊ ನೀ ದಯದಿಂದ ಭಕುತವತ್ಸಲ ಕೃಷ್ಣ 3
--------------
ವ್ಯಾಸರಾಯರು
624ಚಿ ಇಂದು ಧನ್ಯವಾಯಿತು ಜನುಮ ಬಂದು ಕೂಡಿದ ಘನ ಮಹಿಮ ಧ್ರುವ ಏನು ಪುಣ್ಯ ಮಾಡಿದ್ದೆವೊ ಮೊದಲೆ ಖೂನಗಂಡೆವೊ ಹರಿಯ ಮನದಲಿ ಕಾಣದಿದ್ದೆವೊ ಏಸು ಜನ್ಮದಲಿ ತಾನೆ ಒಲಿದು ಬಂದು ಸುಪ್ರಸನ್ನಲಿ 1 ಬ್ರಹ್ಮಾದಿಕರಿಗೆ ದಾವ ದುರ್ಲಭ ನಮ್ಮ ನೆನವಿನೊಳಾದವ ಸುಲಭ ತಮ್ಮ ನಿಜಸುಖದ ನೆಲೆನಿಭ ಬ್ರಹ್ಮಾನಂದ ದೋರಿದ ಪ್ರಾಣದೊಲ್ಲಭ 2 ಖೂನದೋರಿತು ಮುನ್ನ ನಾ ಮಾಡಿದ ಭಾನುಕೋಟಿತೇಜನ ಕೈಗೂಡಿದ ಅನುಭವಾಮೃತಸಾರ ನೀಡಿದ ದೀನ ಮಹಿಪತಿ ಮನೋಹರ ಮಾಡಿದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು