ಒಟ್ಟು 62 ಕಡೆಗಳಲ್ಲಿ , 21 ದಾಸರು , 49 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಸೂರ್ಯ | ನಾರಾಯಣ ರಥ ಸೂರ್ಯ ಪ. ಸೂರ್ಯ ರಥವನು ಭಾರಿ ವಸನಾಭರಣ ತೊಡುತಲಿ ಮೂರುಲೋಕವ ಬೆಳಗು ಮಾಡುತ ಭಾರಿ ತಮವನು ಛೇದಿಸುತ್ತ ಅ.ಪ. ಸಪ್ತ ಹಯೆಗಳ್ ಕಟ್ಟುತ | ಚಕ್ರೇಕ ರಥಕೆ ಸಪ್ತ ಋಷಿಗಳ್ ಪೊಗಳುತ | ಅರುಣ ಸಾರಥ್ಯ ಸಪ್ತ ಜಿಹ್ವನ ತೆರದಿ ತೋರುತ ಸಪ್ತ ಶರಧಿಯ ದಾಟಿ ಸಾರುತ ಸಪ್ತಗಿರಿ ಮೇರು ಸುತ್ತುತಾ ರಥ ಶುಭ ದಿವಸದಲ್ಲಿ 1 ವಾಲಖಿಲ್ಯರು ಎದುರಲಿ | ಅರವತ್ತು ಸಾವಿರ ಓಲಗ ತೊಡುತಲಲ್ಲೀ | ಹಿಂದು ಮುಂದಿನಲಿ ಗಾಲಿದಬ್ಬುವ ರಕ್ಕಸೊಬ್ಬನು ವ್ಯಾಳನೊಬ್ಬನು ರಜ್ಜರೂಪಕೆ ಮೇಲೆ ಯಕ್ಷಕಿನ್ನರರು ಸುತ್ತಲು ಕರ್ಮ ಸಾಕ್ಷಿಯು 2 ಉತ್ತರಾಯಣ ಮಾಘದಿ | ಸ್ನಾನವಗೈದು ಉತ್ತಮರಘ್ರ್ಯ ಕರದಿ | ಪಿಡಿಯುತ್ತ ಭರದಿ ಉತ್ತಮ ಗಂಗಾದಿ ತೀರ್ಥದಿ ಉದಿಸಿ ಬರುವಗೆ ಕೊಡುವ ಕತದಿ ಚಿತ್ತ ನಿರ್ಮಲದಿಂದ ಕಾದಿರೆ ಹತ್ತಿ ಛಾಯೆಯೆ ಸಹಿತ ರಥದಿ 3 ಜಗಚಕ್ಷುವೆನಿಸಿದನೂ | ಧರ್ಮಜಗೆ ವಲಿದು ಮಿಗೆ ಅಕ್ಷಪ್ರದನಾದನೂ | ಸವಿತೃ ನಾಮಕನೂ ಬಗೆ ಬಗೆಯ ಜೀವರುಗಳಯುವ ತೆಗೆದು ಸೆಳೆಯುತ ದಿನದಿನದಲಿ ನಿಗಮಗೋಚರ ನಾಜ್ಞೆಧಾರಕ ಸುಗುಣರಿಗೆ ಸುಜ್ಞಾನವೀಯುತ 4 ಕಮಲ | ಗದೆಯ ಧರಿಸಿ ಕಿಂಕರಾದ್ಯರ ನುತಿಗಳ | ಕೇಳುತ್ತ ಬಹಳ ಶಂಖ ಚಕ್ರಾಂಕಿತನು ಶಿರಿಸಹ ಶಂಕಿಸದೆ ತನ್ನ ಹೃದಯದಲ್ಲಿರೆ ಬಿಂಕ ಗೋಪಾಲಕೃಷ್ಣವಿಠಲಗೆ ಕಿಂಕರನು ತಾನÉಂದು ಪೊಗಳುತ 5
--------------
ಅಂಬಾಬಾಯಿ
ಆತ್ಮ ನಿವೇದನೆ ಇಂದು ಪಾವನವಾಗಿರೊ | ಇಂದಿರಾ ರಮಣನ್ನ ದಿನ ವ್ರತವ ಮಾಡಿ ಪ ಅನುಜ ನಿಜಾಂಗನೆ | ತನಯರು ನೆರೆಹೊರೆ ಮನ ಜನಕೆ | ಸಿರಿ | ದಿನ ತ್ರಯವನು ಅನುಸರಿಸಿರೆಂದು 1 ಏಕಾದಶಿದನ ವಿಕೇತನದಲಿ ಪಾಕ ಮಾಡಿದರದು | ಕಾಕಮಾಂಸ ಲೋಕದೊಳಗೆ ಸರಿ | ಲೋಕದೊಳಗೆ ಎಂದು | ತಾ ಕೂಗಿ ಸುಖದಲ್ಲೀ | ವಾದ ಪೇಳುತಲಿದ್ದು ಏಕ ಭಕುತಿಯಲ್ಲೀ2 ಹರಿದಿನದಲ್ಲಿ ನೀರು ಬೆರಳಲಿ ಸುರಿದಾ | ಭೂಸುರನು ಚಾಂಡಾಲನು ನಿರುತದಲೀ | ವರಗೋಮಾಂಸ ನರಕಾ | ನರಿ ನಾಯಿರಾಸ | ಸೂಕರ ಭಕ್ಷಣಿಗಿಂತ | ಪರಮ ಉತ್ತಮನೆಂದು 3 ಪ್ರಾಣತ್ಯಾಗವಾಗಿ ಹಾನಿ ಪ್ರಾಪುತದಿಂದ | ಏನೇನು ಸಂಕಟ ತಾನೊದಗೆ | ಆನಂದ ಮತಿ ಈವಾ ಶ್ರೀನಾಥನ ದಿವಸ | ಧಾನ್ಯದಲಿಟ್ಟು ನಿದಾನಕೆ ಗತಿ ಎಂದು 4 ಇತರ ದಿವಸದಲ್ಲಿ ಅತಿಶಯದಿಂದಲೀ | ಕೃತ ಕರ್ಮಗಳು ವಿಹಿತವಹುದೂ | ರತಿಪತಿಪಿತನ ಅಪ್ರತಿವಾಸರದಲ್ಲೀ | ಅತಿ ಅವಶ್ಯಕವಾ ವರ್ಜಿತ ಮಾಡಿ ಸಜ್ಜನರು 5 ಎಲೆ ಹಾಕದೆ ಜಾಗರವ ಬೇಸರದಲೆ | ಲವಲವಿಕೆಯಿಂದ ಕವಿಗಳೊಡನೆ | ತವಕದಿಂದಲಿ ಪಾಡುತ ಗಾಯನ ಶುದ್ಧಾ | ಶ್ರವಣ ಮಾಡುತ್ತ ಸದಾ | ಪವನ ಮತದೊಳಿದ್ದು6 ದಶಮಿ ವಂದು ಏಕಾದಶಿ ಎಂಟು ತಿಳಿದು | ದ್ವಾದಶಿ ಐದು ಹ | ದಿನಾಲ್ಕು ಎಸವ ಝವಾ | ಪುಶಿಯಲ್ಲ ಇದು ಸಿದ್ಧಾ ಅಸುಯವ ಬಡದಲೇ | ಕುಶಲದಿಂದಲಿ ವ್ರತ ಚರಿಸುತ್ತಲಿ ಚನ್ನಾಗಿ 7 ಏಳೊಂದು ವತ್ಸರದ ಮೇಲೆ | ವತ್ಸರ ಬಿಟ್ಟು ವಾಲಾಯ ಉಳಿದವರು | ನೀಲವರ್ಣನ ವ್ರತವಾ ಲೀಲೆಯಿಂದಲಿ ಚರಿಸಿ 8 ಆವಾದಾದರ ಬಿಡದಿರೀ | ಕೇವಲ ಸಾಧನವೂ | ಈ ವಾರವು ದೇವೇಶ ವಿಜಯವಿಠ್ಠಲಗೆ ಸಮರ್ಪಿಸೆ | ಸೇವಿಯ ಪಾಲಿಸಿ ಕೈವಲ್ಲ್ಯದಲಿ ಇಡುವಾ 9
--------------
ವಿಜಯದಾಸ
ಅದ್ರಿಸಂಭವೆ ಸರ್ವಸಂಭ್ರಮದೊಳುಭಾದ್ರಪದ ಶುದ್ಧ ತದಿಗೆಯ ದಿವಸದಿಸದ್ರಾಜಮಾರ್ಗದಿ ನಡೆತರಲುನಡೆತರೆ ಸತ್ಯಭಾಮೆ ರುಕ್ಮಿಣಿಯೊಳೀಭದ್ರೆ ಯಾರೆಂದು ನುಡಿದಳು 1 ಕೋಟಿ ಸೂರ್ಯಕಾಂತಿಯ ನವರತ್ನ ಕಿರೀಟಾಗ್ರದಿ ಚಂದನ ರೇಖೆಯಮೀಟೆನೆ ತಳೆದು ಬಾಹವಳಾರೆ ಅಕ್ಕಕೈಟಭವೈರಿಯ ಸತಿಕೇಳೆ ಮಧುಕೈಟಭ ದಾನವರ ಗೆಲಿದ ಶಶಿಜೂಟನ ವಲ್ಲಭೆ ಶಂಕರಿ ಶಾಕಂಬರಿಯೀಕೆ ಕಾಣೆ 2 ಸತಿ ಕೇಳೆಚಂಡಾಮುಂಡಾಸುರರನು ಗೆಲಿದು ಭೂಮಂಡಲವ ಕಾಯ್ದ ದೇವಿ ಭವಾನಿಯೀಕೆ ಕಾಣೆ 3 ವೀರಮುದ್ರಿಕೆ ಕಂಕಣ ಕಡಗವದೋರೆ ಹಿಂಬಳೆ ದಂಡು ಮುತ್ತಿನಹಾರವ ಧರಿಸಿ ಬಾಹವಳಾರೆ ಅಕ್ಕನಾರಾಯಣನರಸಿ ನೀ ಕೇಳೆಧೀರನಿಶುಂಭನ ಗೆಲಿದಮರರ ಪರಿವಾರವ ಪೊರೆದ ಪರಶಿವೆ ಪರಮೇಶ್ವರಿ ಕಾಣೆ 4 ಮೆರೆವೇಕಾವಳಿಗುಂಡಿನಸರಪರಿಪರಿ ಚಕ್ರಸರ ನಕ್ಷತ್ರದಸರಗಳ ಧರಿಸಿ ಬಾಹವಳಾರೆ ಅಕ್ಕಕರಿವರದನ ಅರಸಿ ನೀ ಕೇಳೆಧುರದೊಳೆ ಧೂಮ್ರಾಕ್ಷನ ವಧಿಸಿದಗಿರಿರಾಜ ಕುಮಾರಿ ಮಂಗಳಗೌರಿ ದೇವಿ ಈಕೆ ಕಾಣೆ5 ಅಚ್ಚ ಮುತ್ತಿನ ಸರಗಳ ನಡುವೆಪಚ್ಚೆಯ ರತುನದ ಪಂಚಸರಗಳನಿಚ್ಚಳದಿ ಧರಿಸಿ ಬರುವವಳಾರೆ ಅಕ್ಕಅಚ್ಚುತನ ಅರಸಿ ನೀ ಕೇಳೆಅಚ್ಚರಿಯನೆ ಶುಂಭ ನಿಶುಂಭರಕೊಚ್ಚಿದ ರುದ್ರಾಣಿ ಶಿವೆ ಶರ್ವಾಣಿ ಈಕೆ ಕಾಣೆ 6 ಚೆಂಗಾವಿಯ ಸೀರೆಯನುಟ್ಟುರಂಗುರತುನದೊಡ್ಯಾಣವನುಟ್ಟುಭೃಂಗಕುಂತಳನರ್ತಿಸೆ ಬಾಹಳಾರ ಅಕ್ಕಅಂಗಜನ ಮಾತೆ ನೀ ಕೇಳೆಸಂಗರದಲಿ ರಕ್ತಬೀಜನ ಗೆಲ್ದಗಂಗಾಧರನರಸಿ ಕಾಳಭುಜಂಗವೇಣಿ ಈಕೆ ಕಾಣೆ 7 ಝಗಝಗಿಸುವ ಕುಂಕುಮರೇಖೆಮಗಮಗಿಸುವ ಮೃಗಮದ ತಿಲಕದಿಅಗಿಲುಗಂಧದೊಳೊಪ್ಪುತ ಬಾಹಳಾರೆ ಅಕ್ಕನಗಧರನಂಗನೆ ನೀ ಕೇಳೆಜಗಳದೆ ಮಹಿಷನ ಮಿಗೆ ಮರ್ದಿಸಿದಗಣಿತ ಸನ್ಮಹಿಮಾಸ್ಪದೆ ಸರ್ವೇಶ್ವರಿ ಈಕೆ ಕಾಣೆ8 ಕೆಂದಾವರೆಯಂದವ ನಿಂದಿಪಬಂಧುರಪದದಂದುಗೆ ಕಲಿರೆನೆಕುಂದಣದ ಸರಪಣಿಯಿಟ್ಟು ಬಾಹಳಾರೆ ಅಕ್ಕಮಂದರಧರನಂಗನೆ ಕೇಳರ-ವಿಂದಜ ಸಂಕ್ರಂದನಮುಖಿ ಸುರವೃಂದವ ಪೊರೆವ ಮಾಹೇಶ್ವರಿ ಈಕೆ ಕಾಣೆ 9 ಮರುಗ ಮಲ್ಲಿಗೆ ಸುರಗಿ ಸೇವಂತಿಗೆಪರಿಮಳಿಸುವ ಸಂಪಗೆ ಕೇದಗೆ-ಯರಳನೆ ಮುಡಿದು ಬಾಹವಳಾರೆ ಅಕ್ಕಮುರಹರನಂಗನೆ ನೀ ಕೇಳೆವರ ಕೆಳದಿಯ ಪುರದೊಳು ನೆಲಸಿದವರದ ರಾಮೇಶ್ವರನಂಗನೆ ಪಾರ್ವತಿ ಈಕೆ ಕಾಣೆ 10
--------------
ಕೆಳದಿ ವೆಂಕಣ್ಣ ಕವಿ
ಆಲವವೆ ನಮಗೆ ಸಫಲವು ಕಾಣಿರೊ ಶ್ರೀಲಕುಮಿಯ ಪತಿಯ ನೆನೆವೆಯಾಗಿ ಪ ಕೀಳು ಜನರಿಂದ ಆಡುವಾ ನುಡಿಗಳು ಹಾಳು ಹರಟೆಗಳು ಬಹು ಜಾಳು ಮಾತುಗಳು ಕಾಲ ಪರಿವುದು ಕೇಳಿ ಜನರುಗಳೆ ನಾಳೆ ನೋಡಿದಂಥ ದಾಸರು ದೊರೆಯರು1 ವ್ಯಾಳೆ ಬಂದಾಗ ಸಾಧಿಸದವನಾ ಬಾಳಿವೆ ಬೋಳೆ ಅದು ಗೋಳಲ್ಲವೆ ಗಾಳಿ ಬಂದಾ ಕೈಲೆ ತೂರಿಕೊಳ್ಳಿರೊ ಮ್ಯಾಲೆ ತನ್ನೊಶವೇನೊ ದೇಶಕಾಲಗಳು 2 ಸೋಲಿಸಿ ದುರ್ಮತರ ಕೀಳು ಮಳಿಗೆಗಳ ಪರಿ ಸೀಲಿಸೊ ಪ್ರತಿ ದಿವಸದಲಿ ಅಲವ ಬೋಧರ ಮತವ ಲೀಲೆಯಿಂ ತಿಳಿಕೊಂಬ್ಯ ಪಾಲಿಸುವ ದಯದಿಂದ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಆವ ತಾ ಸುಖವೊ ಮತ್ತಾವನಂದವೊ | ಈ ಉಡುಪಿ ಯಾತ್ರಿ ಮಾಡಿದ ಮನುಜಗೆ ಪ ಮನದೊಳಪೇಕ್ಷಿಸೆ ಅವನೀಗ ಹದಿನಾಲ್ಕು | ಮನುಗಳು ಭೂಮಿ ಆಳುವ ತನಕಾ | ಕನಕ ರಜತಪೀಠ ಗೋಕುಲದಿಂದ | ಸ | ಜ್ಬನ ಮಾರ್ಗದಲ್ಲಿ ಗುಣವಂತ ನೆನೆಸುವ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ | ಅಂದೆ ಸುರರೊಳು ಗಣನೆ ಎನ್ನಿ | ಒಂದಕ್ಕೆ ನೂರಾರು ಯಾಗ ಮಾಡಿದ ಫಲ | ತಂದು ಕೊಡುವ ಅಜನಾದಿ ಕಲ್ಪ ಪರಿಯಂತ2 ಅರ್ಧ ಮಾರ್ಗವು ಬರಲು ಬಂದೆ ದಿವಸದಲ್ಲಿ | ಸಾಧರ್À ತ್ರಿಕೋಟಿ ದೇವತೆಗಳಲಿ | ಊಧ್ರ್ವರೇತಸನಾಗಿ ಮಿಂದ ಫಲವಕ್ಕು | ಪರಿಯಂತ 3 ಕ್ಷೇತ್ರದ ಬಳಿಗಾಗಿ ಬರಲು ಅವನ ಏಳು | ಗೋತ್ರ ನೂರೊಂದು ಕುಲದವರು | ಗಾತ್ರವ ಮರೆದು ರೋಮಾಂಚನದಿಂದಲಿ | ಪಾತ್ರವನಾಡೋರು ಮೋಕ್ಷಮಾರ್ಗವ ಸಾರಿ4 ಕರವ ಜೋಡಿಸಿ ನಿಂದು | ಸನ್ನುತಿಸಿ ದರ್ಶನ ಮಾಡಲು | ಕರವ ತಿಳಿದು ಜ್ಞಾನ ಭಕುತಿ ಸಂ | ಪನ್ನ ವಿರುಕುತಿಲಿ ಗತಿಗಭಿಮುಖನಾಹ 5 ಮಧ್ವ ಸರೋವÀರದಲ್ಲಿ ಸ್ನಾನವಗೈದು | ಸಿದ್ಧಾಂತ ಕರ್ಮಗಳನನುಸರಿಸೀ | ಶುದ್ಧಾತ್ಮ ಕೃಷ್ಣನ ದೇವಾಲಯವ ಸಾರೆ | ಪೊದ್ದಿದಾ ಸತ್ಯಲೋಕದ ಸಭೆಯೊಳಗೆ 6 ಕೃಷ್ಣ ಕೃಷ್ಣ ಯೆಂದು | ನವ ವಿಧ ಪೂಜೆಯನ್ನು | ದೃಷ್ಟಿಯಿಂದಲಿ ನೋಡೆ ಅವನೆ ಮುಕ್ತಾ | ಮುಟ್ಟಿ ಪೂಜಿಸುವರ ಸತ್ಪುಣ್ಯ ವಿಜಯ | ವಿಠ್ಠಲ ತಾ ಬಲ್ಲ ನರರೆಣಿಸಲಳವಲ್ಲಾ 7
--------------
ವಿಜಯದಾಸ
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಉಯ್ಯಾಲೆ ಉತ್ಸವಗೀತೆ ಜೊ ಜೊ ಜೊ ಜೊ ಶ್ರೀರಂಗನಾಥ ಜೊ ಜೊ ರಂಗನಾಯಕಿರಮಣನೆ ಭೂಮಿಕಾಂತ ಪ. ಮಂಟಪವನು ಶೃಂಗರಿಸಿದರಂದು ಎಂಟುದಿಕ್ಕಿಗೆ ಪುಷ್ಪಗಳಲಂಕರಿಸಿ ವೈ ಕುಂಠವಾಸನ ಉಯ್ಯಾಲೆಮಂಟಪವನ್ನು ಭಂಟರು ಬಂದು ಶೃಂಗಾರ ಮಾಡಿದರು 1 ಆಶ್ವೀಜ ಮಾಸದ ಶುಕ್ಲಪಕ್ಷದಲ್ಲಿ ಆ ತುಲಾ ಮಾಸದ ಆರುದಿವಸದಲ್ಲಿ ವಾರಿಜಮುಖಿಯರ ಒಡಗೊಂಡು ರಂಗ ವೈ ಯ್ಯಾರದಿಂದಲೆ ಬಂದನು ಮಂಟಪಕೆ 2 ಮತ್ತೆ ಮರುದಿನದೊಳಗಚ್ಚುತನಂತ ಕುತ್ತನಿಅಂಗಿ ಕುಲಾವಿ ಧರಿಸಿ ರತ್ನದ ಪಾನುಪಟ್ಟಿಯು ಅರಳೆಲೆ ಕಟ್ಟಿ ಭಕ್ತವತ್ಸಲನಾಡಿದನುಯ್ಯಾಲೆ 3 ಮೂರುದಿವಸದಲಿ ಮುರವೈರಿ ತಾನು ಭಾರಿ ವಜ್ರದ ಮಕರಕಂಠಿಯಾ ಧರಿಸಿ ನೀರಜನೇತ್ರನು ನಿಗಮಗೋಚರನು ವೈ ಯ್ಯಾರದಿಂದಲಿ ಆಡಿದನುಯ್ಯಾಲೆ 4 ನಾಲ್ಕು ದಿವಸದಲಿ ನಂದನಕಂದ ನವ ರತ್ನದ ಮಕರಕಂಠಿಯಧರಿಸಿ ಧರಿಸಿ ನಾಗಶಯನನಾಡಿದನುಯ್ಯಾಲೆ 5 ಐದು ದಿವಸದಲಿ ಅಕ್ರೂರವರದಗೆ ಕರಿ ದಾದ ಕುಲಾವಿ ಕಲ್ಕಿಯ ತುರಾಯಿ ಗಂಡಭೇರುಂಡಪಕ್ಷಿಯ ಪದಕವನಿಟ್ಟು ಪುಂಡರಿಕಾಕ್ಪನಾಡಿದನುಯ್ಯಾಲೆ 6 ಆರು ದಿವಸದಲಿ ಅಂಗಜನಯ್ಯಗೆ ಕೂರೆ ಕುಲಾವಿ ವೈಯಾರದಿಂಧರಿಸಿ ಹಾರ ಮಾಣಿಕ ರತ್ನ ಸರಗಳಳವಡಿಸಿ ನೀರಜನೇತ್ರನಾಡಿದನುಯ್ಯಾಲೆ 7 ಸಪ್ತದಿವಸದಲಿ ರತ್ನ ಮೌಳಿಯ ಧರಿಸಿ ಹಸ್ತದಿ ರತ್ನಹಾರ ಗಂಧವಿರಿಸಿ ಅರ್ತಿಯಿಂದಲೆ ತನ್ನ ಮಿತ್ರರು ಸಹಿತಲೆ ಬತ್ತವಳಿಸಿ ಬಂದ ಭಕ್ತವತ್ಸಲನು 8 ಓರೆಗೊಂಡೆಯ ವೈಯಾರದಿಂ ಧರಿಸಿ ನಾರಿಯರೆಡಬಲದಲಿ ಕುಳ್ಳಿರಿಸಿ ವಾರಿಜನೇತ್ರನು ನಡುವೆ ಕುಳ್ಳಿರಲು ವಾರಾಂಗನೆಯರೆಲ್ಲ ಪಾಡುತಿರಲು 9 ಅಷ್ಟಮ ದಿವಸದಿ ಅರ್ತಿಯಿಂದಲೆ ಕೃಷ್ಣಮೂರುತಿಗೆ ರಾಜಮುಡಿಯನು ಧರಿಸಿ ಹಿಂದಿನ ತೋಳಿಗೆ ಬಂದಿ ತಾಯಿತನಿಟ್ಟು ಇಂದಿರೆ ರಮಣನಾಡಿದನುಯ್ಯಾಲೆ 10 ಎಡಬಲದಲಿ ಭಕ್ತರು ನಿಂತಿರಲು ಪಿಡಿದು ಚಾಮರ ವ್ಯಜನವ ಬೀಸುತಿರಲು ಬೆಡಗಿನಿಮ್ಮ[ಡಕೆ]ಲೆ ಕರ್ಪೂರದ ಗುಳಿಗೆಯ ಎ ನ್ನೊಡೆಯಗೆ ಭಕ್ತರು ಪಿಡಿದು ನಿಂದಿರಲು 11 ದಾಸರಿಸಂದವು ಧಗಧಗನುರಿಯೆ ಸಹ ಸ್ರ ಸೂರ್ಯನಂತೆ ಪದಕಗಳೊಳೆಯೆ ಲೇಸಾದ ರತ್ನದ ಪಾದುಕೆಯನು ಧರಿಸಿ ವಾಸುದೇವನು ಆಡಿದನುಯ್ಯಾಲೆ 12 ಇಂದಿರೆ ರಮಣ ಒಂಭತ್ತು ದಿನದೊಳು ಚಂದ್ರ ಪುಷ್ಕರಣೀಲಿ ತೀರ್ಥವನ್ನಿತ್ತು ಬಂದು ಮಜ್ಜನವನ್ನು ಮಾಡಿ ವೆಂಕಟರಂಗ ಇಂದಿರೆಸಹಿತಲೆ ನಿಂದ ಹರುಷದಲಿ 13
--------------
ಯದುಗಿರಿಯಮ್ಮ
ಎಂಥಾ ಭಾಗ್ಯವೆ ಎಂಥಾ ಪುಣ್ಯವೆ ಗೋಪಿ ಪ. ಎಂತು ಸಾಕಲಿಂಥ ದುಷ್ಟನ ಎಂತನಿಂತು ಚಿಂತೆಯಾಂತು ಅ.ಪ. ಪುಟ್ಟಿದೇಳು ದಿವಸದಲ್ಲಿ ದುಷ್ಟಪೂತನಿ ಕೊಂದ ದೇವ ದೃಷ್ಟಿವಂತನೆ ದಿಟ್ಟ ತೃಣ ಕೇಶೀಯರ ಪುಟ್ಟಕಾಲಲಿ ಶಕಟನಳಿದ ಕಟ್ಟಿ ಸಕಲ ದನುಜರನ್ನು ದೃಷ್ಟಿ ತಾಕಿತೆ ಕೃಷ್ಣಗೆನುತ 1 ವಿಪ್ರನು ನಿನ್ನ ಮನೆಗೆ ಬಂದು ಕ್ಷಿಪ್ರದಿ ಪೂಜೆ ಕೃಷ್ಣೆಗೆನಲು ಅಪ್ರಮೇಯನು ವಿಪ್ರನ ಮುಟ್ಟೆ ಕಟ್ಟಿ ಕಂಬಕೆ ಬರಲು ನಿಂದು ಕೃಷ್ಣಗರ್ಪಿಸೆ ನೈವೇದ್ಯವಾಗ ಸುಪ್ರಕಾಶದಿ ತೆಗೆದುಕೊಂಡ ಕೃಷ್ಣನನು ನೀನಪ್ಪಿ ಮುದ್ದಿಸೆ2 ಚಂದಿರನ ನೀ ತೋರು ಎನಲು ಇಂದುವದನ ಕೇಳಲಾಗ ಸುಂದರಾನನನಂದದಿ ಗೋವ ಚಂದದಿಂದ ಕಾದು ಕಾಳಿಂಗನಂದದಿ 3 ಸುರರು ಶ್ರೀ ಶ್ರೀನಿವಾಸನ ಶಿರದಿ ಪುಷ್ಪ ಮಳೆಗೆರೆಯಲು ನೆರೆದು ಗೋಪೇರ ಸೀರೆ ಸೆರಗ ಸೆಳೆದು ವರಳನೆಳೆದು ಮುರಿದು ಮರವ ಗರೆದು ಅಮೃತಸದೃಶ ವಾಣಿ ನೆರೆದು ಗೋಪಿಯರೊಡನೆ ನಾಟ್ಯಗರೆದು ರಾಸವಾಡೆ ರಂಗನಕರೆದೆರೆವೆ ಮಗುವೆನ್ನುವ 4
--------------
ಸರಸ್ವತಿ ಬಾಯಿ
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಏನೆಂದುಸುರುವೆ ಈ ನವರಾತ್ರಿಯಾ | ಸ್ವಾನಂದ ಸುಖಮಯ ಮಹಿಪತಿ ಚರ್ಯಾ ಪ ಮೊತ್ತ ಜನರು ಕೂಡಿ ಭಿತ್ತಿ ಬಾಗಿಲುಗಳ ಬಣ್ಣದಿ ನಿಚ್ಚಳ | ತೆತ್ತ ಮಾಡಳರವಿ ತಳಿಲು ತೋರಣದಿ | ಮತ್ತೆ ದೇವಾಲಯ ಮಂಡಿತ ಜಗಲಿಯಾ | ಸುತ್ತ ಕದಳೀ ಕಂಭದಿ ಮ್ಯಾಲಿಯ | ಉತ್ತಮ ಮಂಟಪದಿ ತರಗು ತೆಂಗು | ಉತ್ತತ್ತೀ ಬಹು ಓಲವೀ ಕಟ್ಟಿಹ | ವತ್ತೊತ್ತಿ ಥರ ಥರದಿ ನಮ್ಮಯ್ಯಾನಾ 1 ಕಡಲೆ ತಂಡುಲ ಗುಡ ಶರ್ಕರವ ಮತ್ತೆ ಗೂಡಿಹ ಸಮಸ್ತ | ಘೃತ ವಡವೆಯ ತುಂಬಿಹ ಸ್ಟೈಪಾಕ ಮಾಡಲಿ | ತಡೆಯದೆ ಕೊಡುತಿಹರು ಓಡ್ಯಾಡಲು | ಅಡಿಗಡಿಗೊಬ್ಬೊಬ್ಬರು ಆಜ್ಯವ | ಧೃಡ ಭಕ್ತಿಯುಳ್ಳವರು ನಮ್ಮಯ್ಯನಾ 2 ಏಕೋ ಭಾವನೆಯಲಿ ಯಾತ್ರೆಯ ಸದ್ಭೋಧಾಸಕ್ತರು | ಬೇಕಾದಿ ಸಾಕುವದೇವ ದೇವರಾ ಸಾರಿ ಸುಜನ ವಿಂಡು | ಹಾಕಿ ಸಾಷ್ಟಾಂಗದಲಿ ಪರಿ ಲೋಕ ನೆರೆಯುತಿರಲಿ ನಮ್ಮಯ್ಯನಾ 3 ಮೊದಲಿನ ದಿವಸದಿ ಸಂಧ್ಯಾವಂದನಜಪಾನುಷ್ಠಾನಾ | ವಿದಿತ ಬಂಗಾರ ವೆಳಿಯಲಿ ಬರೆದ ಚದುರ | ಝಗ ಝಗ ಅದು ನಕ್ಷತ್ರ ಮಾಲಿ ನಮ್ಮಯ್ಯನಾ 4 ಪಡದಿಯ ಸೋಂಪಿಲಿ ಬಹು ವಿಚಿತ್ರ | ಸಡಗರದಲಿ ದೇವ ಸಂಪುಟ ಮೆರೆವಾ| ವಡೆಯನ ಏನೆಂದ್ಹೇಳಲಿ ನಮ್ಮಯ್ಯಾನಾ 5 ಸನ್ನುತ ಗಂಗೆಯ ಸಲಿಲವು ಮುನ್ನ ಪಂಚಾಮೃತ ದಾಗಲು ಅಭಿಷೇಕ | ಸುಗಂಧವನ್ನು ಅರ್ಪಿಸಿ ಚಲ್ವದಾ ಸಾಲಾದಾ | ಘನ್ನ ದೀಪದೆಡೆ ಬಲದಾ ನಮ್ಮಯ್ಯನಾ 6 ಪರಿಮಳ ದಿಂಡಿಗೆ ಪರಿ ಪುಷ್ಪದಾ ಪಸರಿಕೆ ಬಹುಳವಾ | ತರುವಾರಾ ಧೂ ಬಲವೆಡಾ ಊದುಬತ್ತಿಯ ಗಿಡಾ | ನೆರೆ ಏಕಾರತಿಯಾಗಲಿ ನೈವೇದ್ಯ ಹರಿವಾಣವನು | ಬರಲಿ ಹರಿಗೆ ಪ್ರತ್ಯಕ್ಷದಲೀ ನಮ್ಮಯ್ಯನಾ 7 ವಾದಾ ಪೂಗೀ ಫಲಾ ಹರಿವಾಣ ಆರತಿ ಪೂರಣಾ | ಛಂದ ಭೇದಿಸಿ ಘನತಾಳಾ ಬಲು ಶಂಖ ನಾಮ ಘೋಷದಿತಿಂತ | ರಾದವರು ಪಾಡಲೀ ನೀರಾಂಜನ | ಸಾದಿಪ ಸಮಯದಲಿ ಕಣ್ಣಿನಲಿ ನಮ್ಮಯ್ಯನಾ 8 ಮೆರೆವ ಷೋಡಷದಿಂದ ಹರಿತೀರ್ಥಕೊಳ್ಳಲು ಹರುಷದಿ ಜನಗಳು | ಕರುವೇದ ಘೋಷ ಮಾಡು ಮಾಡಿ ಕುಳ್ಳಿರೆ | ಪರಮಾನ್ನ ಪರಿ ಶಾಕಗಳು ಸೂಪಘೃತ | ಗಿರಿಸಿಹ ದೀಪಗಳು ನಮ್ಮಯ್ಯನಾ 9 ಪ್ರೌಢದಿ ಹರಿ ನಾಮಾ ಆಡಲೇನದು ತೃಪ್ತಿ ಆಯಿತು ಉಂಡು | ನೀಡೆ ವೇದೋಕ್ತದ ನುಡಿ ಆಶೀರ್ವಾದ | ಮಾಡುತ ಬ್ರಾಹ್ಮರು ಮನೆಗೆ ಹೋಗುವರು | ಗಾಡ ಮದ್ದಲೆ ಸದರು ಸಭೆಯೊಳುಗೂಡಿ | ಒಡೆಯನಿದಿರು ಹರಿಯ ಕೊಂಡಾಡಿ ಆರತಿಯತ್ತೀರ ನಮ್ಮಯ್ಯನಾ 10 ಮುಂಚಿಲಿ ನಡೆಯಲು ಅರ್ಚನೆಯಾ ಅರ್ತಿ | ಸಂಭ್ರಮದಲಿ ನೋಡಿ ಸದ್ಗತಿ ಸೂರ್ಯಾಡಿ | ಕೊಂಬರು ಸ್ವಸ್ಥಲ ಕುರಿತು ಆಜ್ಞೆಗಳ | ಇಂದಿಲ್ಲ ಆನಂದದೀ ಈ ಮಹಿ ಮಾಡಂಬರೆನ್ನ ಮುಖದಿ ನುಡಿಸಿದ | ಶಂಭು ಮಹಿಪತಿ ದಯದಿ ನಂದನ | ಬೊಂಬಿ ಸೂತ್ರ ದಂದದಿ ನಮ್ಮಯ್ಯನಾ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಕಾಯ ಬಲು ಹೇಯವೊ | ಸಾಕು ಸಾಕು ಸಂಸಾರ ನೆಚ್ಚದಿರು ಎಚ್ಚರಿಕೆ ಪ ಊಧ್ರ್ವಾಧೋ ಭಾಗದಿಂದ ಕೂಡಿದಾ ರಕ್ತಶುಕ್ಲ | ಅರ್ಧರ್ಧ ಪ್ರವೇಸಿಯಾಗಿ | ವರ್ಧನಾಗಿ ಮಾಂಸ ಪಿಂಡಿಕೆಯಲಿ ಬೆಳೆದು | ಅರ್ಧವದೊಳಗೆ ಬಳುಲುವುದೇನೊ ಮಹಾ ಕಠೀಣಾ 1 ಸನ್ನಿರೋಧವಾದ ಪ್ರಾದೇಶದಲಿ ನೀನು | ಬನ್ನ ಬಡುವದು ಜನಕೆ ಅರಿಯನಲ್ಲಾ | ಮುನ್ನೆ ಇಂದ್ರನಿಗಾಗಿ ವರವಿತ್ತ ಸಂಪತ್ತು | ಇನ್ನು ನಿನ್ನ ಸುತ್ತ ಬಂದದೆ ತಿಳಿದುಕೋ 2 ವಾತ ಶೈತ್ಯಜ್ವರ ಕೆಮ್ಮು | ಸಪುತ ಧಾತುಗಳಿಂದ ಬರುವ ರೋಗ | ಕ್ಲೇಶ ಮೋಹಗಳೊಡನೆ | ಮಾಯಾ 3 ಕಾಮ ಮದ ಗರ್ವದಲಿ ಪುಂಜನಾಗಿ ದುರಳ ನಿ | ಜ ಮಗಳ ಕೂಡ ಬೆರದಾಡಿ ಬೆರೆದು | ರೋಮರೋಮ ವಿಷಯ ಪೂರ್ತಿಯಾಗಿ ಚರಿಸಿ | ಪಾಮರನಾಗಿ ಬಳಲದಿರು ಬಹು ಜೋಕೆ 4 ಸತಿ ಸುತರು ಮಿಕ್ಕಾದ ಬಂಧುಗಳು ನೆರೆನೆರೆದು | ಪ್ರತಿದಿವಸದಲಿ ಅಟ್ಟುವುದು ನೋಡು| ಮತಿ ಚಂಚಲವಾಗಿ ಸತ್ಕರ್ಮ ವೃತ್ತಿಗೆ | ಪ್ರತಿಕೂಲವಾಗುವದು ಪ್ರೀತಿಯಾಗದು ಮುಂದೆ 5 ಎಂತು ನೋಡಲು ವಿಷಯ ಅನುಭವಿಸಿದರು ಅದರ | ಅಂತು ಕಂಡವರಾರು ವಲ್ಲೆನೆಂದು | ಭ್ರಾಂತಿಯಿಂದಲಿ ತಿರುಗಿ ಬಯಲಾಗೋದಲ್ಲದೆ | ಚಿಂತೆ ಇಷ್ಟಷ್ಟು ಏನೆಂದು ಪೇಳಲಿ 6 ಯಲೋ ಮನವೆ ಸಾರಿ ಪೇಳಿದೆನು ಚನ್ನಾಗಿ ನೀ | ನೆಲೆ ಮಾಡಿಕೋ ಜ್ಞಾನ ಭಕುತಿ ವಿತ್ತಾ | ಸುಲಭ ದೇವರ ದೇವ ವಿಜಯವಿಠ್ಠಲರೇಯ | ಕೆಲಕಾಲ ನೆನೆದು ಸುಖಿಯಾಗು ಸುಜನರಾ ಕೇಳು 7
--------------
ವಿಜಯದಾಸ
ಕೋಲು ಉತ್ಸವಗೀತೆ ಕೋಲುವ ನೋಡುವ ಬನ್ನಿ ಶ್ರೀರಂಗನಾಯಕಿಯ ಕೋಲುವ ನೋಡುವ ಬನ್ನಿರೆಲ್ಲ ಪ ಚಪ್ಪರವನು ಶÀೃಂಗರಿಸಿ ಪಟ್ಟುಪೀತಾಂಬರದ ಮೇಲೆ ಕಟ್ಟುಗಳಿಂದ ವಿಸ್ತರಿಸಿ ಕದಳಿಯಕೊನೆ ಕಬ್ಬು ತೆಂಗಿನ ಫಲಗಳ ವಿಧವಿಧವಾಗಿ ಶೃಂಗಾರ ಮಾಡಿದರು 1 ಭಾದ್ರಪದ ಕನ್ಯಾಮಾಸದಲ್ಲಿ ಶುದ್ಧಪಾಡ್ಯದಲ್ಲಿ ಭದ್ರೆ ಶ್ರೀರಂಗನಾಯಕಿಯು ಬಂದು ಮಜ್ಜನವನು ಮಾಡಬೇಕೆನುತಲೆ ಮೂದ್ರ್ವಾರಮಧ್ಯದಲಿ ತಾ ನಿಂದಳು 2 ತಂದು ಹರವಿದರು ಬತ್ತವ ವಿಸ್ತಾರವಾಗಿ ತಂದಿಟ್ಟು ಕರ್ಪೂರಬಟ್ಟಲುಗಳು ತುಂಬಿ ಕಲ್ಪೋಕ್ತ ದಿಂದಲೆ ಪೂಜೆಯ ಮಾಡಿದರು 3 ಎಂಭತ್ತೊಂಬತ್ತು ಬಟ್ಟಲಲ್ಲಿ ಇರುವ ಉದಕವನು ರಂಭೆಗಭಿಷೇಕವ ಮಾಡೆ ಗಂಧವ ಅಂಬೆ ಶಿರದೊಳು ಧರಿಸಿ ಪೂಮಾಲೆಯ [ಸಂಭ್ರಮದಿ]ಧರಿಸಿ ನಿಂದಳು ದೇವಿ 4 ಸುಖನಿಧಿ ಪದ್ಮಾನಿಧಿಗೆ ಹಣ್ಣಿನ ಹರಿವಾಣವ ಶಂಕೆ ಇಲ್ಲದೆ ಭಕ್ತರು ಪಿಡಿದು [ನಿಂತಿರುವ] ಶಂಖನಾದವು ತಾಳಮೇಳ ವಾದ್ಯಗಳಿಂದ ಪಂಕಜಮುಖಿಗಭಿಷೇಕವ ಮಾಡಿದರು 5 ಪುಷ್ಪದ ಮಂಟಪದಲ್ಲಿ ಪುರುಷೋತ್ತಮನ ಒಪ್ಪವಾದ ಅಶ್ವವ ತಂದಿರಿಸಿದರು ಆನಂದದಿ ಕಲ್ಪೋಕ್ತದಿಂದಲೆ ಪೂಜೆ ನೈವೇದ್ಯವ ಮಾಡಿ ಒಪ್ಪುವ ಕಂಕಣವನು ಕಟ್ಟಿದರಾಗ 6 ರತ್ನದ ಕಿರೀಟವಿಟ್ಟು ಲಲಾಟದಲ್ಲಿ ಮತ್ತೆ ತಿದ್ದಿದ ಕಸ್ತೂರಿಬಟ್ಟು ರತ್ನದ ಪದಕವು ಇಟ್ಟು ಕೊರಳೊಳು ಇಂದಿರೆ ವಂದಾಳು 7 ಮಧ್ಯದ ಕೊಟ್ಟಿಗೆಯಲ್ಲಿ ವಿಪ್ರರು ಕೈಕಟ್ಟಿ ನಿಂದು ಸೇವೆಯ ಮಾಡುತಿರಲು ಅರ್ತಿ ಯಿಂದಲೆ ಧೂಪದೀಪ ನೈವೇದ್ಯದಿ ಲಕ್ಷ್ಮೀ ದೇವಿಗೆ ಪೂಜೆಯ ಮಾಡಿದರು 8 ಭೇರಿ ದುಂದುಭಿ ವಾದ್ಯಗಳಿಂದ ತಾಳಮೇಳವು [ನಾರಿಯರ] ರ ಸಾಲುಗಳಿಂದ ಬಾಣ ಬಿರುಸು ಮತಾಪು ಅಗರುಬತ್ತಿ [ಗಳ ನಡುವೆ] ನಾರಾಯಣನರಾಣಿ ಕೋಲುವಿನಲ್ಲಿ 9 ಛತ್ರಿಚಾಮರ ಸೂರೆಪಾನ ಪಿಡಿಯೆ ಮದ ಹಸ್ತಿಗಳು ಮಾಡುವ ಸಲಾಮು ಸುತ್ತಿ ದೀವಟಿಗೆಯು ತುತ್ತೂರಿ ನಾದವು ಮತ್ತಧಿಕಾರಿಗಳು ಮಂಟಪದಲಿ 10 ಆರುದಿವಸದಲ್ಲೊರೆಗೊಂಡು ಪಾನುಪಟ್ಟಿಯು ಸೂರ್ಯಚಂದ್ರರು ಮುತ್ತಿನಬಟ್ಟು [ಆ]ರಾಗಟೆಹೆರಳು ಭಂಗಾರಗೊಂಡೆಗಳಿಟ್ಟು ವ ಯ್ಯಾರದಿಂದಲೆ ಬಂದಳು ಮಂಟಪಕೆ 11 ಸಪ್ತದಿನದಲಿ ಲಕ್ಷ್ಮೀದೇವಿಗೆ ಉತ್ರಾಜಿಮಾಲೆ ಹಸ್ತವಡಗೆ ಹರಡಿವಂಕಿ ದಕ್ಷಿಣ ಹಸ್ತದಿ ರತ್ನದಹಂಸವು ವಾಮ ಹಸ್ತವ ಮೊಣಕಾಲಿನೊಳಿಟ್ಟಳು 12 ಅಂದುಗೆ ಗೆಜ್ಜೆ ಮುಂಗೈಮುರಾರಿ ಉಂಗುರವು ಕುಂದಣದ ಪಾಗಡವಿಟ್ಟು ಹಿಂದಿನತೋಳಿಗೆ ಬಂದಿ ತಾಯಿತನಿಟ್ಟು ಕುಂದಣದ ಮಂಟಪದಲಿ ಕುಳಿತಳು 13 ಅಷ್ಟಮ ದಿವಸದಲ್ಲಂದು ಸೃಷ್ಟಿಗಿರೀಶ್ವರಿಗೆ ಕಟ್ಟಿದರು ಕಲ್ಕೀತುರಾಯಿ ದೃಷ್ಟಿಯಬಟ್ಟು ರತ್ನದ ಕುಂಡಲ [ಇಟ್ಟು] ಮತ್ತರಗಿಣಿಯನು ಮಾತಾಡಿಸುತ 14 ಮುಕ್ತಿದಾಯಕಿಗೆ ಮೂರು ಪಾವಡೆಯನುಡಿಸಿ ಮತ್ತೆ ವಡ್ಯಾಣವನಿ[ಡಲು] ರತ್ನದ ಹಸ್ತದಿ ಅಭಯವ ಕೊಡುತ [ನಿಂತಳು] ಮೊರ್ನೋಮಿಯ ಮಂಟಪದಲ್ಲಿ 15 ಮುಂದೊಂಭತ್ತು ದಿನದಲ್ಲಿ ರಂಭೆರಂಗನಾಯಕಿಯು ಮಿಂದು ಮಡಿಗಳ ತಾನುಟ್ಟು ಚಂದದಿ ನೈವೇದ್ಯವ ಭಕ್ತರಿಗಿತ್ತು ಬಂದು ಆಸ್ಥಾನದಿ ನಿಂದಳು ದೇವಿ 16
--------------
ಯದುಗಿರಿಯಮ್ಮ
ಜೀವನ್ಮುಕ್ತನೆ ಇದ ಮಾಡು ನಿನಗುಂಟೆ ಜೋಡುದಿವಸದಿಂದಲಿ ದೃಢನಾಗಿ ಸಾಧಿಸುಕೇವಲ ಶಿವನೀನಾಗುವಿ ಆಗುವಿ ಪ ಏರಿಸು ವಾಯುವನು ಏರಿಸಿದ ಬಳಿಕಪೂರಿಸು ಕುಂಭವನು ಘಳಿಗಿಂತಿರಲಲ್ಲಿಭೇರಿಯ ಕಹಳಾರವ ಮೃದಂಗವಸಾರಿಯೆ ಕೇಳುತ ಶ್ರಮವನು ಹರಿಸುತ 1 ಆರು ನೆಲೆಗೆ ಮುಟ್ಟಿನಿಲ್ಲು ನಿಂತ ಬಳಿಕಕಾರಣ ಮೃಡನಾಳಪೊಕ್ಕು ಮರವೆಂದು ಕಳೆದಿಕ್ಕುವಾರಿಯಮೃತಧಾರೆ ತ್ರಿವೇಣಿಯಸಾರಸನದಿಯಲಿ ಮುಳುಗುತ ಮುಳುಗುತ 2 ಚಂದ್ರಮಂಡಲ ಎದುರಲಿ ಇರಲು ನೋಡುತಲಿಮುಂದೆ ಜೋತಿರ್ಮಯವಿರಲು ಬ್ರಹ್ಮವೆ ತಾನಿರಲುಇಂದ್ರಾದಿಗಳಿಗಳವಡದಿಹ ಸ್ಥಾನವಾನಂದದೆ ಎರೈ ಗುರು ಕೃಪೆಯಿಂದಲಿ 3 ಕರ್ಮ ಅವಿದ್ಯೆಯನುಳಿದುತಾಮರ ಸಾಧಿಪ ನಂದದಿ ಬೆಳಗುತ4 ನಿತ್ಯ ಆಗುವುದು ತಥ್ಯಾಯೋಗಿ ಜನಕೆ ಇದು ಪಥ್ಯಾ ಸತ್ಯವಿದು ಸತ್ಯಭೋಗೈಶ್ವರ್ಯದ ಮುಕ್ತಿಗಧಿಪತಿಯಾಗು ಚಿದಾನಂದ ಗುರು ನೀನಾಗಿಯೆ5
--------------
ಚಿದಾನಂದ ಅವಧೂತರು
ಜೋ ಜೋಯನುತಲಿ ಗೋಪಿ ವಾಣಿಲಿತೂಗಿದಳು ಕೃಷ್ಣನ್ನ ಜೋ ಜೋ ಪ ರನ್ನ ಖಚಿತ ತೊಟ್ಟಿಲದೊಳಗ ಚಿನ್ನಾಂಬರದ್ಹಾಸಿಗಿ ಹಾಕಿ ಉನ್ನತ ಮಹಿಮನ ತಂದಿರಿಸಿ ಚೆನ್ನಾಗಿ ಪಿಡಿದ್ಹೆಡೆಯಾಡಿಸುತಾ 1 ದುಷ್ಟ ಸೋದರ ಮಾವನ ತಲೆಯಾ ಅಷ್ಟಮಿ ದಿವಸದ ರಾತ್ರಿಯಲಿ ಸ್ಪಷ್ಟದಿ ಪ್ರಕಟಿಸಿದೈಧರಿಲಿ 2 ಸುರರ ಮನೋಬಯಕೆಯವೃಕ್ಷಾ ಗುರುಮಹಿಪತಿಸುತ ಗಧ್ಯಕ್ಷಾ ಗಿರುವೆನೀ ಮಾಡು ಸಂರಕ್ಷಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು