ಒಟ್ಟು 38 ಕಡೆಗಳಲ್ಲಿ , 12 ದಾಸರು , 38 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷಯಾತ್ಮ ಹರಿ ಜೈ ಜೈ ರಂಗ ಪಕ್ಷಿವಾಹನಾ ಮಾಂಗಿರಿರಂಗ ಪ ಅಕ್ಷಯ ಸುಖಕರ ಜೈ ಜೈ ರಂಗ ಸಿರಿ ಮಾಂಗಿರಿರಂಗ ಅ.ಪ ಉರಗಶಯನ ಹರಿ ಜೈ ಜೈ ರಂಗ ಸರಸಿಜಲೋಚನ ಮಾಂಗಿರಿರಂಗ ಉರುತರ ಮಹಿಮಾ ಜೈ ಜೈ ರಂಗ ಸನ್ನುತ ಮಾಂಗಿರಿರಂಗ 1 ಮಧುಮೃದು ವಚನಾ ಜೈ ಜೈ ರಂಗ ಬುಧಜನರಂಜನ ಮಾಂಗಿರಿರಂಗ ಮಧುರನಾಯಕ ಜೈ ಜೈ ರಂಗ ಮಧುದೈತ್ಯಾಂತಕ ಮಾಂಗಿರಿರಂಗ 2 ಓಂ ನಮೋ ಕೇಶವ ಜೈ ಜೈ ರಂಗ ದೀನದಯಾಪರ ಮಾಂಗಿರರಂಗ ಶ್ರೀನಾರಾಯಣ ಜೈ ಜೈ ರಂಗ ಸಿರಿ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇದೇ ಹೌದು ಭವತರಿಯುವ ಶಸ್ತ್ರ ಪದೇ ಪದೇ ಸಿರಿವರನ ಸ್ತೋತ್ರ ಪ ಅಧಮಮತಿಯ ಬಿಟ್ಟು ಸದಮಲ ಮನದಿಂ ವಿಧವಿಧ ಹರಿಯೆಂದೊದುರುತ ಕಾಣುವುದೆ ಅ.ಪ ದಾನಧರ್ಮಯಜ್ಞ ಇವು ಯಾಕೊ ಸ್ನಾನ ಮೌನ ಜಪ ಮತ್ತ್ಯಾಕೊ ನಾನಾ ಮಂತ್ರ ತಂತ್ರ ಗೋಜ್ಯಾಕೆಬೇಕೊ ಕ್ಷೋಣಿ ತಿರುಗಿ ಬಹು ದಣಿಲ್ಯಾಕೊ ನಾನಾಪರಿಯಲಿಂದ ದೀನದಯಾಪರ ಗಾನಲೋಲನ ಭಜನಾನಂದ ಪಡೆವುದೆ1 ವೇದಪುರಾಣ ಪುಣ್ಯ ಶಾಸ್ತ್ರಗಳ್ಯಾತಕೊ ಸಾಧನಸಿದ್ಧಿಗಳ ಬಲವ್ಯಾಕೋ ಭೇಧಯೋಗದ ಬಹು ಬೋಧಗಳ್ಯಾತಕೊ ಓದಿಓದಿ ದಿನಗಳಿಲ್ಯಾಕೊ ವೇದಗಮ್ಯದಾದಿ ಮೂರುತಿ ಶ್ರೀ ಪಾದವರಿತು ಆರಾಧಿಸುತಿರುವುದೆ 2 ಕಾಶಿ ಕಂಚಿ ಕಾಳಹಸ್ತಿ ತಿರುಗಲ್ಯಾಕೊ ಸಾಸಿರದೈವಕೆ ಬಾಗುವುದ್ಯಾಕೊ ಮಾಸಪಕ್ಷ ವ್ರತ ನೇಮಗಳ್ಯಾತಕೊ ಘಾಸಿಯಾಗಿ ದೇಹ ದಂಡಿಸಲ್ಯಾಕೊ ಶೇಷಶಯನ ನಮ್ಮ ಶ್ರೀಶ ಶ್ರೀರಾಮನ ಲೇಸಾದ ನಾಮವೊಂದೆ ಧ್ಯಾಸದಿಟ್ಟು ನುಡಿ 3
--------------
ರಾಮದಾಸರು
ಎಲೆ ಮನಸೆ ಎಲೆ ಮನಸೆ ಹರಿಪಾದ ನಂಬು ಸುಲಭ ಭಕ್ತರಿಗಾತ ಕೊಡುವ ನಿನಗಿಂಬು ಪ ಕುಲಹೀನನೆನಬೇಡ ಹಳಿದುಕೊಳ್ಳಲಿ ಬೇಡ ತಿಳಿಗೇಡಿಯೆನಬೇಡ ಕಳವಳಿಸಬೇಡ ಮಲಿನವೆಂದೆನಬೇಡ ಜಳಕ ಮಡಿಯೆನಬೇಡ ತಿಳಿದು ಭಜಿಪರ ಬೆಂಬಲನು ನಾನೆಂಬ 1 ವಿಪಿನ ಸೇರಲಿಬೇಡ ಕೌಪೀನ ಬೇಡ ಕಪಟಬುದ್ಧಿಯ ಬಿಟ್ಟು ಸಫಲ ಮಾನಸದಿಂದ ಆಪತ್ತು ಬಂಧುಯೆನೆ ಕೃಪೆಮಾಡ್ವ ಬಂದು 2 ದಾನಧರ್ಮವು ಬೇಡ ನಾನಾ ಕರ್ಮವು ಬೇಡ ಮೌನದೊಳಿರಬೇಡ ಏನುವ್ರತಬೇಡ ಧ್ಯಾನದಾಯಕ ಎನಗೆ ನೀನೆ ಗತಿಯೆಂದೆನಲು ದೀನದಯ ಶ್ರೀರಾಮ ಮಾಣದೆ ಕಾಯ್ವ 3
--------------
ರಾಮದಾಸರು
ಏನುಧನ್ಯನೊ ಇವನು ಎಂಥ ಪುಣ್ಯನೊ ದೀನದಯಾಳು ಜಾನಕೀಶನ ಧ್ಯಾನ ಮಾಳ್ಪ ಮಾನವನು ಪ ಜ್ಞಾನದಿಂದ ತಿಳಿದು ಜಗ ಶೂನ್ಯವೆಂದು ಊಹಿಸಿ ಮನದಿ ದಾನವಾಂತಕನಾದ ಹರಿಯ ಧ್ಯಾನವೊಂದೇ ಕಾರಣೆಂದು ಜ್ಞಾನಬೆಳಗಿನೊಳಗೆ ನೋಡಿ ಆನಂದಿಸುತಲ್ಹಿಗ್ಗುವವ 1 ಆಶಪಾಶಗಳನು ನೀಗಿ ಈ ಮೋಸಮಯ ಸಂಸಾರದೊಳು ವಾಸನಾರಹಿತನಾಗಿ ಸದಾ ದಾಸಸಂಗಸುಖಪಡೆದು ಈಶ ಭಜನೆಯೊಳ್ಮನವಿಟ್ಟು ಈಸಿಭವಾಂಬುಧಿ ಪಾರಾಗುವವ 2 ನಂಬಿಗಿಲ್ಲದ ದೇಹವಿದನು ನಂಬಿನೆಚ್ಚಿ ಸಂಭ್ರಮಿಸದೆ ಕಂಬುಕಂಧರ ಶಂಭುವಿನುತ ಅಂಬುಜಾಕ್ಷ ಶ್ರೀರಾಮನ ನಂಬಿ ಗಂಭೀರಸುಖದೊಳಿರುವವ 3
--------------
ರಾಮದಾಸರು
ಏನೆಂದು ಕರೆದರೆ ಬರುವಿ ನಿನ್ನ ಧ್ಯಾನಿಸಿ ಕರೆದರೆ ಬಾರದೆ ಇರುವಿ ಪ ದೀನದಯಾಳು ಶ್ರೀ ಅನಂತ ಮಹಿಮೆಂದು ಗಾನದಿಂ ಪಾಡಲು ಕೇಳದೆ ಇರುವಿಅ.ಪ ಸೊಪ್ಪಮೆದ್ದವನೆಂದೆನಲೆ ನಿನ್ನ ತಿಪ್ಪೆತಿರುಕನೆಂದು ಗೌಪ್ಯದಿಂ ಕರಿಲೇ ಕಪ್ಪುಮೈಯವನೆನ್ನಲೊಪ್ಪಿಕೊಂಡು ಬಂದು ಅಪ್ಪಿಕೊಂಡ್ವರವೀವ್ಯೋ ಮುಪ್ಪುರಾಂತಕನೆ 1 ಏಸುಕಾಲದ ಮುದುಕನೆನಲೇ ನಿನ್ನ ಆಸೆಕಾರನೆಂದು ಆಶಿಸಿ ಕರಿಲೇ ಹಾಸಿಕೆ ಕಾಣದೆ ಶೇಷನಮೇಲೇರಿ ವಾಸಿಸುವಿಯೆನಲು ಪೋಷಿಸುವೆಯೋ ಬಂದು 2 ಬಲುಬಲು ಕಪಟಿಯೆಂದೆನಲೇ ನೀ ಕಳವಿನೋಳ್ ಪ್ರವೀಣನೆಂದು ಕೂಗಲೇ ಕುಲಗೆಟ್ಟು ಭಕ್ತರ ಕಲೆಸಿ ಗುಪ್ತದಿಂದ ಕುಲದಿ ಬಿದ್ದವನೆನಲು ಒಲಿದು ಕಾಯುವೆಯೋ 3 ಆಲಯ ಕಾಣದೆ ಹೋಗಿ ನೀನು ಪಾಲಸಾಗರವಾಸನೆಂದು ಕರಿಲೇ ಬಾಲೆಯರುಡವ ದುಕೂಲ ಚೋರನೆಂದು ಮೇಲಾಕೂಗಲು ಪಾಲಿಸುವೆಯೋ ಒದಗಿ 4 ಅರಣ್ಯವಾಸಿಯೆಂದೆನಲೇ ನೀನು ನಾರಿಯಳ ಕಳಕೊಂಡನೆಂದು ಸಾರಲ್ಯೋ ಕೋರಿದವರ ಮನಸಾರ ವರನ ನೀಡ್ವ ಧೀರ ಶ್ರೀರಾಮನೆಂದ್ಹಾರೈಸಿ ಕರೆಯುವೆ 5
--------------
ರಾಮದಾಸರು
ಕರುಣ ಬಾರದೇ ಸ್ವಾಮಿ ಕರುಣ ಬಾರದೆ ಪ ಶ್ರುತಿ ಪುರಾಣ ವೇದ ಶಾಸ್ತ್ರ ಪತಿತಪಾವನ ನೀನೆಯೆಂದು ನುತಿಸಿ ಸಾರಿ ಪೇಳ್ವುದ ಕೇಳಿ ಪಿತ ನೀನೆಂದು ನಂಬಿದೆನಯ್ಯಾ ಅ.ಪ ಕಡಲಿಗುರುಳಿದೆನ್ನ ಕೈಯ ಪಿಡಿವರಿಲ್ಲ ಮಾರನಯ್ಯ ದಡವ ಸೇರಿಸಿ ಪಾಲಿಸೊ ಜೀಯ ಅಡಿಯ ಪಿಡಿದು ಬೇಡುವೆನು 1 ಶತಶತಾಪರಾಧಿ ನಾನು ಸತತ ದೀನದಯಾಮಯನು ಪಿತನು ಹಿತನು ನೀನೇ ಬೇರೆಗತಿಯ ಕಾಣೆ ಮಾಂಗಿರೀಶ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರುಣಾಕರನೀತ ಕರಿಭಯ ಹರಿದಾತ ಹರಿಪರಂದೈವೀತ ಗುರುನಾಥ ಧ್ರುವ ಮೂರುಗುಣರಹಿತ ಮೂರುಲೋಕ ವಂದಿತ ಮುರಹರನಹುದೀತ ಗುರುನಾಥ 1 ಸುರಜನ ಪೂಜಿತ ಪರಮಾನಂದಭರಿತ ತಾರಕನಹುದೀತ ಗುರುನಾಥ 2 ಪತಿತಪಾವನೀತ ಪಿತಾಮಹನ ಪಿತ ದಾತನಹುದೀತ ಗುರುನಾಥ 3 ಅನುದಿನ ಸಾಕ್ಷಾತ ದೀನದಯಾಳುನೀತ ಗುರುನಾಥ 4 ಭಕ್ತವತ್ಸಲನೀತ ಶಕ್ತಸದ್ಗುರುನಾಥ ಮುಕ್ತಿದಾಯಕನೀತ ಗುರುನಾಥ 5 ಜನವನದೊಳಗೀತ ಮನೋಭಾವಪೂರಿತ ಆನಂದೋ ಬ್ರಹ್ಮನೀತ ಗುರುನಾಥ6 ಗುಹ್ಯಕೆ ಗುಹ್ಯನೀತ ಬಾಹ್ಯಂತ್ರ ಸದೋದಿತ ಮಹಾಮಹಿಮನೀತ ಗುರುನಾಥ 7 ಇಹಪರ ನಮಗೀತ ಮಹಿಪತಿ ಪ್ರಾಣನಾಥ ಸಹಾಕರನಹುದೀತ ಗುರುನಾಥ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯಯ್ಯ ಕಂಜಲೋಚನ ದಯಲೆನ್ನ ಕರುಣಾ ದಯಲೆನ್ನ ಧ್ರುವ ಅಕ್ಷಯಾನಂದ ನೀ ಪೂರ್ಣ ಲಕ್ಷುಮೀ ರಮಣ ಸಗುಣಾ ಲಕ್ಷ್ಮೀರಮಣ ಪಕ್ಷಪಾಂಡವರ ಪ್ರಾಣ ರಕ್ಷಿಸೊ ನಾರಾಯಣ 1 ಅಣುರೇಣು ವೊಳನುಕೂಲ ಮುನಿಜನಪಾಲ ಲೋಲಾ ಘನಸುಖದ ಕಲ್ಲೋಳ ನೀನೆ ದೀನದಯಾಳಾ 2 ಕರುಣಾಸಾಗರ ಪೂರ್ಣ ಹೊರಿಯೊ ಮಹಿಪತಿಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗಟ್ಟಿ ಮನವ ಕೊಡೊ ಹರಿ ಹರಿ ಗಟ್ಟಿ ಮನವ ಕೊಡೊ ಪ ಸೃಷ್ಟಿಕರ್ತನೆ ನಿನ್ನ ಶಿಷ್ಟ ಪಾದದೆನಗೆ ನಿಷ್ಠೆ ಭಕ್ತಿಯ ನೀಡು ಬಿಟ್ಟು ಅಗಲದಂತೆ ಅ.ಪ ದುರಿತದೋಷಗಳು ಕಡಿದು ಬರುವ ಕಂಟಕವನ್ನು ಪರಹರಿಸೆನಗೆ ಅರಿವು ನಿಲಿಸಾತ್ಮನ ಕುರಹು ತಿಳಿಸುಸಿರಿವರನೆ ಕರುಣದಿ 1 ಚಲನವಲನಗಳನು ಕಳೆದು ನಿಲಿಸು ಜ್ಞಾನವನ್ನು ಹೊಲೆಯ ದೇಹದ ನೆಲೆಯ ತಿಳಿಸಿ ಎನ ಗಳುಕಿಸು ಭವದಾಸೆ ಘಳಿಲನೆ ಒಲಿದು 2 ತಾಪತ್ರಯಗಳನು ಛೇದಿಸಿ ಪಾಪಶೇಷಗಳನ್ನು ಲೋಪಮಾಡಿ ಇಹದ್ವ್ಯಾಪರದೊಳಗಿಂದ ನೀ ಪೊರೆ ಭವನಿರ್ಲೇಪನೆ ದಯದಿ 3 ಕಟ್ಟಿ ಕಾದುತ್ತಿರುವಸಂಸಾರ ಕೆಟ್ಟಬವಣೆಜನ ಬಟ್ಟ ಬಯಲು ಮಾಡಿಕೊಟ್ಟು ನಿಜಾನಂದ ಶಿಷ್ಟರೊಳಾಡಿಸೆನ್ನ ಸೃಷ್ಟೀಶ ದಯದಿಂ 4 ನೀನೆ ಕರುಣದಿಂದ ಬಿಡಿಸಯ್ಯ ಯೋನಿಮಾರ್ಗ ತಂದೆ ಧ್ಯಾನದಿರಿಸಿ ನಿನ್ನ ಮಾಣದ ಪದ ನೀಡು ದೀನದಯಾಳು ಶ್ರೀ ಜಾನಕಿರಾಮ 5
--------------
ರಾಮದಾಸರು
ಜಯ ಜಯ ಮಂಗಳ ಮಹಿಮ ಸುದಾತ ಜಯ ಜಯ ಸ್ವಾಮಿ ಶ್ರೀಗುರು ಅವಧೂತ ಧ್ರುವ ನೀನಹುದೊ ಮುನಿಜನ ಪ್ರತಿಪಾಲ ಅನಾಥ ಬಂಧು ದೀನದಯಾಳ 1 ಪತಿತಪಾವನ ಯತಿಜನಪ್ರಿಯ ಅತಿಶಯಾನಂದ ನೀನಹುದೊ ನಮ್ಮಯ್ಯ 2 ಭಾವಿಕರಿಗೆ ನೀ ಜೀವಕೆ ಜೀವ ಅವಗೆ ಮಹಿಪತಿ ಕಾವ ನೀ ದೈವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಸದ್ಗುರು ಮೂತಿ ದಯವುಳ್ಳ ನಿಮ್ಮ ದಯ ಕೀರ್ತಿ ಧ್ರುವ ದಯಗುಣದಲಿ ಬಲು ಉದಾರ ತ್ರೈಲೋಕ್ಯಕೆ ನೀನೆ ಆಧಾರ ಜಯ ಸದ್ಗುರು ಮಾಮನೋಹರ ಇಹಪರ ಸಹಕಾರ 1 ಮುನಿಜನರಿಗೆ ನೀ ಪ್ರತಿಪಾಲ ಸ್ವಾನುಭವದ ಸುಖದ ಕಲ್ಲೋಳ ಘನಗುರು ನೀನೆ ಕೃಪಾಲ ದೀನದಯಾಳ 2 ಜೀವದ ಸುಪ್ರಾಣ ಪರಮಾಮೃತದ ನಿಧಾನ ಹೊರಿಯೊ ನೀ ಕರುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತೋರಬಾರದೆ ನಿಮ್ಮ ಚರಿತೆಯನು ನರರೊಳು ನಗೆಗೀಡು ಮಾಡದ ಹಾಗೆ ಪ. ಕಲ್ಲೊಳು ಕಾಂತೆಯ ಮಾಡಿದವನೆಂ- ದೆಲ್ಲರು ಜಗÀದೊಳು ಪೇಳುವರು ಅಲ್ಲಿ ಮಾಡಿದ ಹಾಗೆ ಇಲ್ಲಿ ತೋರಿಸಿದರೆ ಬಲ್ಲಿದನೆನ್ನೊಡೆಯ ದೊಡ್ಡವನೆಂದು ಸಾರುವೆ 1 ಅಹಹ ಕುಬುಜೆಯಳ ತನುವನ್ನೆತ್ತಿ ಮಹಿಯೊಳು ಯುವತಿಯ ಮಾಡಿದೆಯೆಂಬರು ಬಹು ಪರಾಕ್ರಮವನ್ನು ಈಗ ತೋರಿಸಿದರೆ ಅಹುದೋ ಎನ್ನೊಡೆಯ ದೊಡ್ಡವನೆಂದು ಸಾರುವೆ 2 ನೀನೆ ಗತಿಯೆಂದು ಬಂದ ಭಕ್ತನ ಕ- ಣ್ಣುನವ ತಿದ್ದಿ ನಿಜವ ತೋರಿಸಯ್ಯ ದೀನದಯಾಳು ಹೆಳವನಕಟ್ಟೆ ರಂಗಯ್ಯ ದಾನಿ ಎನ್ನೊಡೆಯ ದೊಡ್ಡವನೆಂದು ಹೊಗಳುವೆ 3
--------------
ಹೆಳವನಕಟ್ಟೆ ಗಿರಿಯಮ್ಮ
ದೀನದಯಾಪರ ಜಾನಕೀನಾಥ ನೀನೆ ದಯಾರ್ಣವಅನಾಥಜನಾಪ್ತ ಪ ಘನತರ ಭವತಾಪವನು ಪರಿಹರಿಸೊ ಕನಿಕರಯುತ ನೀನೆ ಮನುಮುನಿವಿನುತ 1 ಲಾಖಚೌರೈಂಸಿಜನ್ಮ ಸಾಕಾದೆ ತಿರುತಿರುಗಿ ಕಾಕುಬವಣೆ ಸಾಕೋ ಲೋಕೇಶ ಕೃಪಾ ದೇ 2 ಭಕುತಾಭಿಮಾನಿ ನೀ ನಿಖಿಲಜಗಸೂತ್ರ ಭಕುತನ ಮೊರೆ ಕಾಯೊ ಭಕುತಾಭಿರಾಮ 3
--------------
ರಾಮದಾಸರು
ದೇವನಹುದೊ ದೇವಾಧಿದೇವ ಕಾವಕರುಣ ಶ್ರೀ ವಾಸುದೇವ ಭಾವಿಕರಿಗೆ ಜೀವಕೆ ಜೀವ ಧ್ರುವ ಸಾಮಜಪ್ರಿಯ ಸುರಲೋಕಪಾಲ ಕಾಮಪೂರಿತ ನೀ ಸಿರಿಸಖಲೋಲ ಸಾಮಗಾಯನಪ್ರಿಯ ಸದೋದಿತ ಸ್ವಾಮಿನಹುದೊ ನೀನೆವೆ ಗೋಪಾಲ 1 ಅಕ್ಷಯ ಪದ ಅವಿನಾಶ ಪೂರ್ಣ ಪಕ್ಷಿವಾಹನ ಉರಗಶಯನ ಪಕ್ಷಪಾಂಡವಹುದೊ ಪರಿಪೂರ್ಣ ಲಕ್ಷುಮಿಗೆ ನೀ ಜೀವನಪ್ರಾಣ 2 ದಾತನಹುದೊ ದೀನದಯಾಳ ಶಕ್ತಸಮರ್ಥ ನೀನೆ ಕೃಪಾಲ ಭಕ್ತವತ್ಸಲನಹುದೊ ಮಹಿಪತಿ ಸ್ವಾಮಿ ಪತಿತಪಾವನ ನೀನವೆ ಅಚಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು