ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗೆ ಪಾಲಿಪೆ ಎನ್ನ ಗೋ- ಪ ವಿಂದ ಮುಕುಂದ ಆ- ನಂದ ಮೂರುತಿಅ.ಪ ಚರಣಸೇವೆಯ ಕೊಡಿಸಿ ಪರಮಭಕ್ತರೊಳಿರಿಸಿ ದುರಿತರಾಸಿಗಳ ಪರಿಹರಿಸಿ 1 ತಾರದೆ ಸಂತೋಷದಿ ಮಾರಜನಕ ನಿನ್ನ ಧೇನಿಸುವಂತ 2 ಗುರುರಾಮವಿಠ್ಠಲ ನಿನ್ನ ಹೊರತು ಅನ್ಯರಿಲ್ಲ ಸಿರಿನಲ್ಲ 3
--------------
ಗುರುರಾಮವಿಠಲ
ಧ್ಯಾನದ ತುತೂರಿ ಹಿಡಿಯೊ ಸಾಗರ ಶಾಯಿಯೆ ಮೂಜಗ ಧಣಿಯೆಂದು ಜಾಗಟೆ ಡÀಣ್ ಡಣ್ ಬಡಿಯೊ ಪ ಅನುದಿನ ಮನಮುಟ್ಟು ನೆನೆಯುವ ಭಕ್ತರ ಮನದೆಣಿಕೆಯನು ನೀಡುವ ಕನಿಕರದಿಂ ಕಾಪಾಡುವ ಜನಕಜೆವಲ್ಲಭ ತನ್ನವರನು ಬಿಟ್ಟು ಕ್ಷಣ ಅಗಲಿರೆನಾ ವನಜನಾಭನೆಂದು 1 ಎಡೆಬಿಡದೊಡತೊಳ ಧೃಢದಿಂ ಭಜಿಪರ ಕಡುದಯಾದೃಷ್ಟಿಯಿಂ ನೋಡುವ ಸಡಗರದವರೋಳಾಡುವ ಮೃಡವಂದಿತ ತನ್ನಡಿಯ ದಾಸರ ಕರಪಿಡಿದು ಬಿಡದೆ ಕಾಯ್ವ ಸಡಗರದೊಡನೆಂದು 2 ನರಹರಿ ಚರಣವ ಪರಿಪರಿ ಸ್ಮರಿಪರ ದುರಿತರಾಸಿ ದೂರ ಮಾಡುವ ಬರುವ ಸಂಕಟ ನಿವಾರಿಸುವ ಜರಾಮರಣ ದೂರಮಾಡಿ ಪರಮ ಪರತರ ಸಿರಿಸೌಭಾಗ್ಯ ಕರುಣಿಪ ಸ್ಥಿರವೆಂದು 3 ಚಿತ್ತಜತಾಪನ ಸಚ್ಚರಿತವನು ನಿತ್ಯ ಬಿಡದೆ ಕೊಂಡಾಡುವರ ಭಕ್ತ ಜನರ ನೋಡಿ ಬಾಗುವರ ಮೃತ್ಯುಬಾಧೆ ಗೆಲಿ ಸತ್ಯಾನಂದವ ನಿತ್ತು ಪೊರೆವ ಹರಿ ಸತ್ಯ ಸತ್ಯವೆಂದು 4 ದೀನರಾಪ್ತನಾದ ಧ್ಯಾನಮೂರುತಿ ತನ್ನ ಧ್ಯಾನಿಸುವರ ಬೆಂಬಲಿಸುವ ಮಾನದಿಂದ ಭವಗೆಲಿಸುವ ಏನು ಬೇಡಲಾನಂದ ದೀಯ್ವನು ಪ್ರಾಣೇಶ ಶ್ರೀರಾಮ ದೇವ ದೇವನೆಂದು 5
--------------
ರಾಮದಾಸರು
ನೀನೆ ಕರುಣಿ ಗುರುವಾಸದೀನಬಂಧು ಭಕುತಪೋಷ ಪನೆರೆದು ಭಕುತಜನರುಸ್ಮರಿಪ ವರವ ನಡೆಸಿದರುಶನಿತ್ತು ದುರಿತರಾಸಿ ಪರಿಹರಿಸಿಪೊರೆವೆ ಸತತಪರಮಚರಿತ1ಒಪ್ಪಿ ಕಾಸುರುವ್ವಿಬಿಡದೆತಪ್ಪದೆ ಮೂರುಲೋಕದವರಿಂಕಪ್ಪಕೊಳ್ಳುವಿ ಅಸಮಲೀಲಅಪ್ಪ ತಿರುಪತಿತಿಮ್ಮಪ್ಪ2ಮಾರನಯ್ಯ ಮರಣದೂರಮೂರಜಗದ ಸಾರ್ವಭೌಮಧೀರ ಶ್ರೀರಾಮ ನಿಮ್ಮಪಾದವಾರಿಜದಾಸನೆನಿಸು ಎನ್ನ 3
--------------
ರಾಮದಾಸರು