ಒಟ್ಟು 14 ಕಡೆಗಳಲ್ಲಿ , 11 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನ್ಯರವಗುಣವ ಪೇಳುವನು ಬಲ್ಲವನೊ ಪ ಭಿನ್ನವಿಲ್ಲದ ನರನೇನ ಪೇಳುವನು ಅ.ಪ ಅನ್ಯರಿಂದಲು ಹೀನ ತಾನಾಗದಿಹನೆ 1 ದುರಿತವನು ತಾನೆ ಹೊರುವವನೆಂಥ ಮರುಳ 2 ಧರೆಯೊಳವನಿಂದಧಿಕ ಪಾಪಿ ಯಾರಿಹರು 3 ದೊರಕುವದು ಎಂದರಿತು ನಡೆವನೆ ಪುಣ್ಯಾತ್ಮ4 ಪೊರೆಯುವ ಸದಾನಂದ ಸುಖದಿ ಪರಮಾತ್ಮ 5
--------------
ಸದಾನಂದರು
ಎಲ್ಲನು ನಿನಗೆ ಕೂಡಿತಯ್ಯ ಹರಿ ಪುಲ್ಲನಾಭ ದಯ ಮಾಡಯ್ಯ ಪ ಖುಲ್ಲನು ನಾಬಲು ಎಲ್ಲಿಯುಸಲ್ಲದೆ ತಲ್ಲಣಿಸುತ ನಿನ್ನ ಬಲವಂದೆ ದೇವ ದೇವ ಅ.ಪ ಧೃಢಗುಣ ಎನ್ನೊಳಿಲ್ಲಯ್ಯ ಬಲು ನುಡಿ ಹೀನ ನಾಕಡು ಪಾಪ್ಯಯ್ಯ ನಡೆ ನುಡಿ ಇಲ್ಲದೆ ಕಡುನೊಂದೀಗ ನಿಮ್ಮ ನ್ಹುಡುಕುತ ತಿರುಗುವೆ ಜಡಜಾಕ್ಷನೆ ಪೊರೆ 1 ಪರರದ್ರವ್ಯವಪಹರಿಸಿದೆನೊ ನಾ ಪರಮನೀಚನಾಗಿ ಚರಿಸಿದೆನೊ ಅಗಣಿತ ದುರಿತವನುನಾ ಜರೆಯದೆ ಪರಿಪರಿ ಮಾಡಿದೆನೊ ಮರೆವೆಲಿ ಮಾಡಿದ ಪರಮ ಎನ್ನತಪ್ಪು ಕರುಣಾಕರನೆ ನೀಕರುಣದಿ ಕ್ಷಮಿಸಯ್ಯ 2 ಶರಣಾಗತ ವತ್ಸಲನೆಂದು ನಿನ್ನ ಮರೆಯಹೊಕ್ಕೆನೆಯ್ಯ ದಯಾಸಿಂಧು ಮೊರೆಕೇಳು ಭಕ್ತರ ಪ್ರಿಯಬಂಧು ಎನ್ನ ದುರಿತದಿ ಕಡೆ ಹಾಯ್ಸಯ್ ಇಂದು ಶಿರಬಾಗಿ ನಿಮಗೆ ಸೆರೆಗೊಡ್ಡಿ ಬೇಡುವೆ ಕರಪಿಡಿ ಬಿಡಬೇಡ ಸಿರಿವರ ಶ್ರೀರಾಮ 3
--------------
ರಾಮದಾಸರು
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು
ಕಾಯೋ ಪರಮಾನಂದಾ ನಾರಾಯಣಾ | ತೋಯಜಾದಳ ನಯನ ಗರುಡ ಗಮನಾ ಪ ಕರವರಗ ದುಷ್ಟ ಜಲಚರ ಬಂದು ಪಿಡಿಯಲ್ಕೆ | ಭರದಿಂದ ನಿನ್ನ ಸ್ಮರಣೆಯಾ ಮಾಡಲು | ತ್ವರಿತದಿಂದಲಿ ದೇವ ಬಂದು ಆತನ ಮಹಾ | ದುರಿತವನು ಪರಿಹರಿಸಿ ಕಾಯಿದೆ ಹರಿಯೇ1 ಅರಗಿನಾ ಮನಿಯೊಳುಪಾಂಡವರುಸಿಲುಕಿರಲು | ಹರಿ ನೀನೇ ಗತಿಯೆಂದು ಸುಮ್ಮನಿರಲು | ಸಿರಿಲೋಲ ಅದುಕೊಂದು ಪಾಯವನು ರಚಿಸಿದಾ | ವರಕಡಿಗೆ ಪೊರಮಡಿಸಿಕಾಯಿದೆ ಹರಿಯೇ2 ಶರಣ ಪ್ರಲ್ಹಾದಂಗ ದನುಜ ಪೀಡಿಸುತಿರಲು | ಕರುಣ ಸಾಗರ ನಿಮ್ಮ ಧ್ಯಾನಿಸಲ್ಕೆ | ಕರುಳ ಬಗೆದುಕಾಯಿದೆ ಹರಿಯೇ | ನರಹರಿಯ ರೂಪದಿಂದ ಸ್ಥಂಬದೊಳಗುದ್ಭವಿಸಿ3 ದ್ರುಪದ ತನು ಸಂಭವಿಯ ಸೀರೆಯನ್ನು ಸೆಳೆಯಲ್ಕೆ | ತ್ರಿಪುರಾರಿ ಸಖ ನಿಮಗೆ ಮೊರೆಯಿಡಲು | ಕಪಟನಾಟಕ ದಯಾನಂದ ಹರಿಯೆ 4 ಈ ರೀತಿಯಲ್ಲಿ ಬಹು ಭಕ್ತರನು ಕಾಯಿದೆ | ಮುರಹರಿ ಧ್ಯಾನ ಸ್ಮರಣೆ ಯಂಬನದನು | ದಾರಿಯನು ಅರಿಯದ ಅಜ್ಞಾನಿಯ ಪರಾಧವನು ಸೈ ರಿಸುದು ಮಹಿಪತಿ ಸುತ ಪ್ರಿಯನೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನಪಾದ ದೊರಕುವುದು ಎಂತೆನಗೆ ರಂಗ ಗನ್ನಗತಕ ನಾನು ಪುಣ್ಯದ್ಹಾದ್ಯರಿಯೆ ಪ ಕಳ್ಳನಾಗಿ ಜೀವಿಸಿದೆ ಸುಳ್ಳನಾಡಿ ನಾ ದಣಿದೆ ತಳ್ಳಿಕೋರತನದನ್ಯರ್ಹಾಳು ಮಾಡಿದೆನೊ ಖುಲ್ಲತನದಿಂ ಪರರ ನಲ್ಲೆಯರೋಳ್ಮನಸಿಟ್ಟು ಕ್ಷುಲ್ಲಕನಾದೆ ನಾನೆಲ್ಲಿ ನೋಡಲವ 1 ಅನ್ನಕೊಟ್ಟವರಿಗೆ ಅನ್ಯಾಯಯೋಚಿಸಿದೆ ಬನ್ನ ಬಡಿಸಿದೆನಯ್ಯ ನನ್ನನಂಬಿದವರ ಎನ್ನ ಪಡೆದವರನ್ನು ಮನ್ನಿಸಿನೋಡಿಲ್ಲ ನಿನ್ನ ಧ್ಯಾನದ ಖೂನವನ್ನರಿಯೆ ದೇವ 2 ಗುರುಹಿರಿಯರನು ಜರಿದೆ ಪರಿಪರಿಯಲಿ ನಾನು ಪರರಿಗೊಂದಿಕ್ಕಿ ನಾನುಂಡಿರುವೆನೊಂದು ಧರೆಯೊಳೆಣೆಯಿಲ್ಲದ ದುರಿತವನು ಗಳಿಸಿರುವೆ ಕರುಣಾಳು ಶ್ರೀರಾಮ ನೀನೆ ಪೊರಿಬೇಕೊ 3
--------------
ರಾಮದಾಸರು
ಪಾಲಿಸಯ್ಯ ಎನ್ನ ಪಾದಪದ್ಮದೋರಿ ನೀ| ಬಾಲಲೀಲೆ ದೋರ್ವೆ ಗೋಪಾಲ ಬಾಲರನ್ನನೇ ಪ ನಂದ ನಂದ ನಂದು ಓಡಿ ನಂದನೆಯಾ ಭಾವಕಾಗಿ| ಬಂದ ಬಂದು ದುರಿತವನು ಬಂದು ಬಂದು ಹರಿಸಿ| ಛಂದ ಛಂದದಿಂದ ಭಕ್ತರೈವರನು ಕಾಯ್ವೆ ಮು ಸಿಂಧು ವಾಸನೆ 1 ನಾಗನಾಗ ಶಯನ ಯನ್ನ ರಕ್ಷಿಸೆಂದು ಕರೆಯ ಕೇಳಿ| ನಾಗ ನಾಗದವನ ಬಿಟ್ಟು ಓರ್ವನೇ ಮಾರುತಿಯಾ| ವೇಗ ವೇಗದಿಂದ ಬಂದು ಪ್ರಾಣನುಳಹಿದೇ ನಿಗ| ಮಾಗ-ಮಾಗೋಚರ ಭೋಗ ಭೋಗಗನ ವ್ಯಾಪ್ತನೇ2 ಸುಂದ್ರ ಇಂದ್ರ ಚಾಪದಂತೆ ಪೊಳೆವ ಭ್ರೂಲತೆಯು|| ಪೇಂದ್ರ ಚಂದ್ರ ಧರನುತ ಮಂದ್ರಗಿರಿಧರ ಗುಣ| ಸಾಂದ್ರ ಚಂದ್ರಕುಲ ಸಿರೋಮಣೀ ವಾರಜಾಕ್ಷಯಾದ| ವೇಂದ್ರ ಇಂದ್ರನುತ ಮಹಿಪತಿ ನಂದ ನೋಡೆಯನೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಟ್ಟೆಯ ನೆವದಿಂದ ಬಂದು ತಟ್ಟ ಕವನೆ ಕಂಡು ಕಣ್ಣ ತೆರೆದ ಕೃಷ್ಣವೇಣಿ ನಿಮ್ಮ ಕಂಡೆ ದುಷ್ಟ ಮಾನವರ ಬಾಧೆಗೆ ಅಂಜಿ ಇತ್ತ ಬಂದೆ ಕಷ್ಟ ದುರಿತಗಳ ಕಳೆಯೆ ತಾಯೆ ಪ. ಭೋರಿಡುವ ಮಳೆಗೆ ಹಲ್ಲುಗಿಟಗರಿದು ಶೀತತಲೆ- ಗೇರಿ ಕಂಪಿಸಿ ನಡುಗುತ್ತ ಜಾರಿ ಕೆಸರೊಳು ಬಿದ್ದು ಮತ್ತೇಳುತಲಿ ದಾರಿಯನು ಕೇಳಿಕೊಳ್ಳುತ ಕ್ರೂರವಾಗಿದ್ದ ಜಾಲಿಯ ಮುಳ್ಳನೆ ತುಳಿದು ಹರಿ ನಾರಾಯಣ ಎನ್ನುತ ಹಾರೈಸಿ ನಿಮ್ಮ ದರುಶನಕ್ಕೆ ನಾ ಬಂದೆ ಘೋರ ದುರಿತವನು ಕಳೆಯೆ ತಾಯೆ 1 ನಿತ್ಯ ಕಲ್ಯಾಣಿ ನಿರ್ಜರಸ್ತೋತ್ರೆ ಶುಭಗಾತ್ರೆ ಪ್ರತ್ಯಕ್ಷ ವಿಷ್ಣುಜಾತೆ ಮಾತೆ ವಿಸ್ತರಿಸಲಾರೆ ಶ್ರೀ ವಿಷ್ಣು ಸಂಪ್ರೀತೆ ಸತ್ಪಾತ್ರ ಸಂಪೂಜಿತೆ ಪ್ರೀತೆ ಸತ್ತು ಹುಟ್ಟುವ ಜನ್ಮ ಕೋಟಲೆಯ ಖಂಡ್ರಿಸೆ ಪತಿತ ಪಾವನ ಚರಿತೆ ವ್ಯರ್ಥವಾಯಿತು ಜನ್ಮ ಸಾರ್ಥಕವ ಮಾಡಮ್ಮ ಮುಕ್ತಿಸಾಧನದಾತೆ ಮಾತೆ 2 ಸುರಗಂಗೆ ಕೃಷ್ಣಮಲಾಪಹಾರಿ ಮೂವರು ಕೂಡಿ ಬೆರೆದಿದ್ದ ಸಂಗಮದಲ್ಲಿ ಅರಿಸಿಣ ಅಕ್ಷತೆ ಗಂಧ ಕುಂಕುಮ ತಾಂಬೂಲಗಳ ಹರುಷದಿಂದರ್ಪಿಸುತಲಿ ಥರಥರದಿ ನೆರೆದ ಮುತ್ತೈದೆಯರೆಲ್ಲರು ಮರದ ಬಾಗಿನವ ಕೊಡುತಲಿ ಹರುಷದಿಂದಿಪ್ಪುದನು ಕಂಡೆ ಹೆಳವನಕಟ್ಟೆ ಅರಸು ರಂಗನ ಕೃಪೆಯಲ್ಲಿ ತಾಯೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಭಾರತೀಶನೆ ಉದ್ಧರಿಸುವದೆನ್ನ ಪ ಕಂಸಾರಿ ಪ್ರೀಯ ಸಂ - ಸಾರ ಬಂಧನ ನಿವಾರಿಸೊ ಜವದಿ ಅ.ಪ ಅಂಜನಾದೇವಿಯ ಸಂಜಾತನೆ ಭವ ಭಂಜನ ಹರಿಪದಕಂಜಾರಾಧಕ 1 ಮಾರುತಿ ನಿನ್ನ ಸುಕೀರುತಿ ತ್ರಿಜಗದಿ ಸಾರುತಲಿದೆಯುದ್ಧಾರಕನೆಂದು 2 ಹರಿಕುಲಜಾತನೆ ಹರಿಸಂಪ್ರೀತನೆ ಹರಿಹಯ ವಿನುತನೆ ಹರಿದುರಿತವನು 3 ಕಾಮಿತ ಫಲದ ನಿಸ್ಸೀವÀು ಪರಾಕ್ರಮಿ ಪ್ರೇಮವ ಕೊಡು ಶ್ರೀ ರಾಮನ ಪದದಿ 4 ಕುಂತಿ ಕುಮಾರಾದ್ಯಂತ ವಿದೂರನೆ ಅಂತರಂಗದಿ ಹರಿಚಿಂತನೆಯಕೊಡು 5 ಧರ್ಮಾನುಜಸದ್ಧರ್ಮ ಸ್ಥಾಪಕನೆ ಕಿರ್ಮೀರಾಂತಕ ನಿರ್ಮಲ ಚರಿತ 6 ಭೀಮನೆ ಸುದ್ಗುಣ ಧಾಮನೆ ಕುರುಕುಲ ಸೋಮನೆ ಸುರಮುನಿಸ್ತೋಮನಮಿತನೆ 7 ಅರ್ಜುನಾಗ್ರಜನೆ ದುರ್ಜನ ಶಿಕ್ಷಕ ಧೂರ್ಜಟಿವಂದ್ಯನೆ ಮೂರ್ಜಗ ಕರ್ತಾ 8 ಆರ್ಯನೆ ಕೃತ ಸತ್ಕಾರ್ಯನೆ ಜಗದೊಳು ನಾರ್ಯಕುರುಪನೂರು ಶೌರ್ಯದಿ ತರಿದ 9 ಕರಿವರದನ ಚರಣಾರವಿಂದ ಯುಗ ನಿರುತ ಸ್ಮರಿಪತೆರ ಕರುಣಿಸು ಭರದಿ 10 ದುಷ್ಟದ್ವಂಸಕನೆ ಶಿಷ್ಟಪಾಲಶ್ರೀ - ಕೃಷ್ಣನಂಘ್ರಿಯಲಿ ನಿಷ್ಠೆಯ ತೋರೋ 11 ಮಧ್ಯಗೇಹ ಸುತ ಸದ್ವೈಷ್ಣವ ಯತಿ ಅದ್ವೈತಕರಿ ಹರಿ ಸಿದ್ಧಾಂತ ಕರ್ತಾ 12 ಮಿಥ್ಯಾವಾದಿಬಾಯಿ ಎತ್ತದಂತ ಶ್ರು - ತ್ಯರ್ಥವ ಪೇಳ್ದ ಸಮರ್ಥನಹುದು ನೀ 13 ಹರಿಸರ್ವೋತ್ತಮ ಸಿರಿಯು ಅಕ್ಷರಳು ಸುರರೊಳು ನೀನೆ ಪಿರಿಯನು ಸತ್ಯ 14 ಸದಮಲಚರಿತನೆ ಹೃದಯದ ತಿಮಿರವ ವದೆದು ತರಿವುದಕೆ ಉದಿತ ಭಾಸ್ಕರ 15 ಮೂರು ರೂಪಾತ್ಮಕ ಸಾರಿದೆಯನ್ನಯ್ಯs ಪಾರದುರಿತ ಪರಿಹಾರವ ಗೈಸೊ 16 ಹೇಸಿಕೆ ಭವದಲಿ ನಾಶಿಲುಕಿಹೆ ವರ - ದೇಶ ವಿಠಲನ ಸೋಶಿಲಿ ತೋರೊ 17
--------------
ವರದೇಶವಿಠಲ
ಮಂಗಳಾ ವರಯೋಗಿ ರಾಯಗೆ | ಮಂಗಳಾ ಪರಮ ಅವಧೂತಗೆ |ಮಂಗಳಾ ಪರಮಾತ್ಮ ಶ್ರೀ ಗುರು ಸಿದ್ಧ ಬಸವಂಗೆ | ಜಯ ಜಯ ಮಂಗಳಾ ಪ ಆದಿ ಮಧ್ಯಾವಸಾನವಿಲ್ಲದ ನಾದ ಬಿಂದು ಕಲಾ ಶೂನ್ಯಗೆ |ಸಾಧಿಸುವ ಸಿದ್ಧಾಂತ ಅಗಣಿತವಾದ ಬ್ರಹ್ಮವನು | ವೇದ ವೇದಾಂತವ ವಿಚಾರಿಸಿ ನಾದ ಋಷಿ ಅಪಾರ ಚಿಂತ್ಯನು | ಮೇದಿನಿಯ ಭಕ್ತರನುಗ್ರಹಕಿತ್ತ ಬಂದ ಬಸವರಾಜಯೋಗದಲಿ 1 ಮತ್ಸ್ಯ ಕೂರ್ಮ ವರಾಹನಾದ ಮಾಧವಗೆ 2 ಮಾಧವ ಕಲಿಯೊಳಗವತರಿಸಿದ ಬಳಿಕಾ ಬಾಲಕೃಷ್ಣಂಗೆ 3 ನೋಡಿದರೆ ದುರಿತವನು ಕೆಡುವನು, ಬೇಡಿದರೆ ಸಾಯೋಜ್ಯನೀವನು ಮಾಡಿ ಪಾದದ ತೀರ್ಥಕೊಂಡಡೆ ಮರಳಿ ಪುಟ್ಟಗಡ | ಖೇಡನಾಗದೆ ನಾಮಕೀರ್ತಿಯ ಮಾಡು ಮರುಳೆ ಆದಿಪುರುಷನರೂಢಿಯೊಳು ಈಡ್ಯಾಡಿ ಮೆರೆದ ಬಸವರಾಜಯೋಗದಲಿ 4 ಇಂತು ಭಕ್ತರ ಭಕ್ತಿಗೋಸುಗ ಅಚಿಂತ್ಯ ಮಹಿಮನು ಶರೀರವತಾ- ನಂತು ಧರಿಸಿಹನಿಲ್ಲದಿದ್ದಡೆ ದೇಹ ತಾನೇ ತಾ |ಕಂತು ಹರನವತಾರವಲ್ಲದೆ ಭ್ರಾಂತಿ ಬಿಡಿಸಿದ ಕೊಳಕೂರದಲಿಸಂತತವೆ ನೆಲೆಸಿಹನು ಬಸವರಾಜಯೋಗದಲಿ 5
--------------
ಭೀಮಾಶಂಕರ
ಮೃತ್ಯುಂಜಯನೇ ಶರಣು ಶಂಕರನೆ ಶರಣು ಶರಣು ಪ ವಾಸವೇ ಕೈಲಾಸ ವಸನವೇ ದಿಕ್ಕುಗಳು ಪೂಸಿಹುದು ಸರ್ವಾಂಗವೆಲ್ಲ ಭಸ್ಮ ನೇಸರಿನ ತೇಜ ಶಶಿಜೂಟ ಗಂಗಾಧರನ ಪಾಸಟಿಯು ನಿನಗೊಬ್ಬರಿಲ್ಲ ಗೌರೀಶ 1 ಪಂಚ ವಿಂಶತಿ ತತ್ವದೂರ ವಿಶ್ವಾಧಾರ ಪಂಚ ಶರಹರ ವಿರಂಚ್ಯಾದಿ ಸಂಸ್ತುತಾ ನಿತ್ಯ ಪ್ರ ಪಂಚ ಮಯನಾದ ಗಿರಿಜೇಶ ವಿಶ್ವೇಶ 2 ಪರಮ ಪುರುಷ ಪರೇಶ ಪರಮ ಗುಣಗಣ ನಿಲಯ ಶರಣ ಜನ ಸುರಧೇನು ವಿಶ್ವವಂದ್ಯಾ ಭವ ಪೂಜ್ಯಸೂರ್ಯ ಕೋಟಿಪ್ರಕಾಶ ಉರಗ ಭೂಷಣ ವೃಷಭಾರೂಢ ಗೌರೀಶ 3 ಭೂತಪತಿ ಭುವನೇಶ ಪ್ರೇತ ನಿಲಯ ನಿವಾಸ ನೂತನದ ಗಜಚರ್ಮ ನಿನಗೆ ವಿಖ್ಯಾತ ಗೀತ ನೃತ್ಯ ವಿಲಾಸ ಮಾತುಳಾಧ್ವರನಾಶ ಭಾತಿ ಕಂಠದಿ ವಿಷವು ಗೌರೀಶ 4 ಧರೆಯೊಳಧಿಕತರ ವರದ ಮೂಲನಿವಾಸ ಕರಿವದನ ನಂದೀಶ ಶಕ್ತಿ ಉಮೆ ಸಹಿತ ಭರದಿಂದ ನೆಲಸಿ ಸೊಪ್ಪಿನ ಸುಬ್ಬಗೆವರವಿತ್ತೆ ದುರಿತವನು ಪರಿಹರಿಸೋ ಶಂಭುಲಿಂಗೇಶ 5
--------------
ಕವಿ ಪರಮದೇವದಾಸರು
ಸಕಲಲೋಕಪಾಲಕ ರಕ್ಷಿಸೈ ನಿಖಿಲವ್ಯಾಪಕ ಪ ಚರಣದಾಸನ ಮೊರೆಯ ಪಾಲಿಸಿ ಕರುಣವಂ ಬೆರೆಸಿ ಪೊರೆಯೊ ಶರಣಜನ ಪ್ರಿಯಕರನೆ ಮರೆಯ ಹೊಕ್ಕೆನು 1 ಇಂದೊದಗಿಬಂದ ದುರಿತವನು ತಂದೆ ನೀಬಂದು ಪರಿಹರಿಸೊ ಮುಂದಿನ್ನು ಬಂಧನದ ಬಲೆಯಚಿಂದಿಸಿ ಚಂದದಿಂ ಕಾಯೊ 2 ಕಾಯಜಪಿತನೆ ನಿನ್ನ್ಹೊರತು ಕಾಯುವ ಹಿತರು ಇಲ್ಲಯ್ಯ ದೂರದ ಸುತನ ಮೊರೆ ಕೇಳೊ ಕ್ಷಿತಿಜಪತಿಯೆ ಶ್ರೀರಾಮ 3
--------------
ರಾಮದಾಸರು
ಸ್ಮರಿಸೊ ಮನವೆ ಸಿರಿಲೋಲ ಶ್ರೀ ಕೃಷ್ಣನ ಸ್ಮರಿಸಲೊದಗುವ ಸ್ವಾಮಿ ಶ್ರೀ ವಿಷ್ಣುವಿನ ಧ್ರುವ ಸ್ಮರಿಸಿ ಕರಿರಾಜ ಸೆರೆಯಿಂದ ಬಿಡಲಿಲ್ಲವೆ ದುರಿತವನು ಗೆದ್ದರುಷಬಡಲಿಲ್ಲವೆ 1 ಪರಿ ಹರಿ ಮಹಿಮೆ ತಿಳಿಯಲಿಲ್ಲವೆ2 ಸ್ಮರಿಸಿ ದ್ರೌಪದಿ ಅಪತ್ತುಗಳಿಲಿಲ್ಲವೆ ಮೊರೆಯಗೇಳಿ ಕೃಷ್ಣ ಸುಳಿಯಲಿಲ್ಲವೆ 3 ಸ್ಮರಿಸಿ ಪಾಂಡವ ಸತ್ವವು ನಡೆಲಿಲ್ಲವೆ ಅರಗಿನ ಮನೆಯೊಳು ಉಳಿಲಿಲ್ಲವೆ 4 ಸ್ಮರಿಸು ಮಹಿಪತಿ ಮನವ ನಿಜಗೊಲಿಲ್ಲವೆ ಗುರು ಚರಣ ಸ್ಮರಿಸಿ ನೆಲೆಗೊಳಲಿಲ್ಲವೆ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಣವೆÉ ನಿನ್ನಯ ಗುಣವೇನು ಬಣ್ಣಿಪೆನೊ ಪ. ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯಾ ಅ.ಪ. ಬೆಲೆಯಾಗದವನೆಲ್ಲ ಬೆಲೆಯ ಮಾಡಿಸುವಿ ಎಲ್ಲ ವಸ್ತುಗಳನಿದ್ದಲ್ಲೆ ತರಿಸುವಿ ಕುಲಗೆಟ್ಟವರ ಸತ್ಕುಲಕೆ ಸೇರಿಸುವಿ ಹೊಲೆಯನಾದರೂ ತಂದೊಳಗಿರಿಸುವಿ 1 ಅಂಗನೆಯರ ಸಂಗ ಅತಿಶಯದಿ ಮಾಡಿಸುವಿ ಶೃಂಗಾರಾಭರಣಂಗಳ ಬೇಗ ತರಿಸುವಿ ಮಂಗನಾದರೂ ಅನಂಗನೆಂದೆನಿಸುವಿ ಕಂಗಳಿಲ್ಲದವಗೆ ಮಗಳ ಕೊಡಿಸುವಿ 2 ಚರಣಕ್ಕೆ ಬಂದಂಥ ದುರಿತವನು ಬಿಡಿಸುವಿ ಸÀರುವರಿಗೆ ಶ್ರೇಷ್ಠನರನ ಮಾಡಿಸುವಿ ಅರಿಯದ ಶುಂಠನ ಅರಿತವನೆನಿಸುವಿ ಸಿರಿ ಹಯವದನನ ಸ್ಮರಣೆ ಮರೆಸುವಿ 3
--------------
ವಾದಿರಾಜ
ನಾರಾಯಣ ನಿನ್ನ ನಾಮವನು ನೆನೆದರೆ |ಹಾರಿಹೋಹುದು ಪಾಪ ಜನ್ಮಜನ್ಮಾಂತರದಿ |ಶ್ರೀ ರಮಣ ನಿನ್ನ ಕೃಪೆಯಿತ್ತೆಮಗೆ ಮುಕ್ತಿಯ -ದಾರಿ ತೋರಿಸೊ ಮುರಾರಿ ಪಸಕಲ ವೇದ ಪುರಾಣ _ ಶಾಸ್ತ್ರವನು ತಿಳಿದೋದಿ |ತಿಯಿಂಭಕುತ ತಾಯ್ತಂದೆಗಳ ಚಿತ್ತವಿಡಿದರ |ರಕುಷಣೆಯ ಮಾಡಿ ಜಗದೊಳಗೆ ವಿಖ್ಯಾತ ಸುಕು -ಮಾರ ತಾನೆಸಿಸಿಕೊಂಡ1ಪ್ರಕೃತಿಯಲಿ ಹೋಮಕೋಸ್ಕರ ಸಮಿಥೆ ತರಹೋಗಿ |ಶುಕರುಮಗಳಿಂದ ಚಾಂಡಾಲಿಲೆಯ ಕಂಡು ತಾ - |ಮೂಕನಾಗಿನಿಂದು ಮೈಮರೆದು ಪಾತಾಕಿಯ ಬಹ -ದುರಿತವನು ತಾನರಿಯದೆ 2ನಿಲ್ಲು ನಿಲ್ಲೆಲೆ ಕಾಂತೆ, ನಿನಗೊಲಿದೆ ನೀನಾರೆ |ಸೊಲ್ಲಿಸೆನ್ನೊಡನೆ ಸತಿಯರ ಕುಲಕೆಕಟ್ಟಾಣಿ |ಚೆಲ್ಲೆನ್ನ ಮೇಲೆ ಕರುಣವನಿಂತು ಕೋಮಲೆಯೆನಿಲ್ಲೆಂದು ಸೆರಗ ಪಿಡಿದ 3ಎಲೊವಿಪ್ರ ಕೇಳು ನಾ ಕುಲಹೀನೆ ನಮ್ಮ ಮನೆ |ಹೊಲನೆನದು ಗೋಮಾಂಸ ಚರ್ಮದಾ ಹಾಸಿಕೆಯು |ಎಲುವಿನಾ ರಾಶಿ ಒದರುವ ನಾಯ ಹಿಂಡುಗಳು -ಬಹು ಘೋರಘೋರ ವಿಹುದು 4ಬಲೆಗೆ ಸಿಲ್ಕಿದ ಪಕ್ಷಿ ಬೇಟೆಗಾರನದಲೇ ? |ಕುಲವನ್ನು ಕೂಡೆ ನಾ ಕಾಮಿನೀರನ್ನಳೆ |ಚಲದಿಂದ ಬದುಕುವೆನು ಸುಖದಿಂದಲಿರುವೆ ನೀಒಲವು ನನಗೊಂದೆ ಎಂದ 5ವ್ಯರ್ಥ ಎನ್ನೊಡನೆ ಮಾತೇತಕೆಲೊ ಹಾರುವಾ |ಚಿತ್ತ ನನ್ನಲ್ಲಿ ಇದ್ದರೆ ಹೋಗಿ ನೀ ನಿನ್ನ |ಹೆತ್ತ ತಾಯ್ತಂದೆಯರ ಕೇಳು ಸಮ್ಮತಿಸಿದರೆ -ಮತ್ತೆ ನಿನಗೊಲಿವೆನೆನಲು 6ಅತ್ತ ಕಾಮಿನಿಯ ಒಡಗೊಡಿ ತನ್ನಯ ಪಿತನ |ಹತ್ತಿರಕೆ ಹೋಗಿ ಕೇಳಿದರೆ ಆತನು ಎಂದ |ಉತ್ತಮದ ಕುಲವನೀಡಾಡಿ ಈ ಪಾತಾಕಿಯ -ಹಸ್ತಕೊಳಗಾಗದಲಿರೈ 7ಆಗದಾಗದು ನನ್ನ ಕುಲಬಂಧು - ಬಳಗವನು |ನೀಗಿ ನಿನ್ನೊಡನೆ ಕೂಡುವೆನೆಂಬ ಮತವೆನಗೆ |ನಾಗಭೂಷಣನ ಪಣೆಗಣ್ಣಿಲುರಿದನ ಬಾಣತಾಗಿತೆನ್ನೆದೆಗೆ ಎಂದ 8ಕೂಗಿ ಹೇಳುವೆ ನಿನ್ನ ಕುಲವಳಿಯದಿರು ಎಂದ |ಹೋಗಿ ಕೂಡದೆ ನಿನ್ನ ಹೆತ್ತ ತಾಯ್ತಂದೆಗಳಿ - |ಗಾಗದಿದ್ದರೆ ಆಚೆಯಾ ಮನೆಯೊಳಗೆ ಹೋಗಿಇಬ್ಬರೂ ಇರುವೆವೆಂದ 9ಹಾಲಂತ ಕುಲವ ನೀರೊಳಗದ್ದಿ ಪೂರ್ವದಾ |ಶೀಲವನ್ನಳಿದು ಸತಿಯಳ ಕೂಡಿ ತಾನು ಚಾಂ - |ಡಾಲಿತಿಗೆ ಹತ್ತು ಮಕ್ಕಳನು ಪಡೆಕೊಂಡವರಲೀಲೆ ನೋಡುತಲಿ ಹಿಗ್ಗಿ 10ಬಾಳಿನಲ್ಲೀ ರೀತಿ ಅಜಮಿಳನು ಇರುತಿರಲು |ಕಾಲ ಬಂದೊದಗಿತ್ತು ಕರೆಯಿರೆವೆ ಪಾತಕನ |ಜೋಲುದುಟಿಡೊಂಕು ಮೋರೆಯ ಅಬ್ಬರದಿ ಯಮನ -ಆಳುಗಳು ಬಂದರಾಗ 11ಎಡಗೈಯೊಳಗೆಪಾಶ ಹಿಡಿದು ಚಮ್ಮತಿಗೆಗಳ |ಒಡನೆ ಜಾವಳಿನಾಯಿ ವಜ್ರಮೋತಿಯ ಕಾಯಿ |ತುಡಿಕಿರೋ ಕೆಡಹಿ ಕಟ್ಟಿರೋ ಪಾತಕನನೆಂದುಘುಡುಘುಡಿಸಿ ಬಂದರಾಗ 12ಗಡಗಡನೆ ನುಡುಗಿ ಕಂಗೆಟ್ಟು ಅಜಮಿಳನು ತಾ |ಕಡೆಯ ಕಾಲಕೆ ಅಂಜಿ ಮಗನ ನಾರಗನೆಂದು |ಒಡನೊಡನೆ ಕರೆಯಲ್ಕೆ ಯಮನಾಳ್ಗಳೋಡಿದರುಮುಟ್ಟಿದುದು ಹರಿಗೆ ದೂರು 13ಕೊರಳ ತುಳಸಿಯ ಮಾಲೆಯರಳ ಪೀತಾಂಬರದ |ವರಶಂಖ ಚಕ್ರದ್ವಾದಶನಾಮಗಳನಿಟ್ಟ |ಹರಿಯ ದೂತರು ಅಂಜಬೇಡ ಬೇಡನ್ನುತಲಿಹರಿದೋಡಿಬಂದರಲ್ಲಿ 14ಪುಂಡರೀಕಾಕ್ಷನೀ ಭೃತ್ಯನನು ಬಾಧಿಸುವ |ಲಂಡಿರಿವರಾರು ನೂಕಿರಿ ನೂಕಿರೆಂತೆಂದು |ದಂಡವನು ತೆಗೆದು ಬೀಸಾಡಿ ಯಮನವರಿಗು - |ದ್ದಂಡರಿವರೆಂದರಾಗ 15ತಂದೆ ಕೇಳಿರಿ ಒಂದು ಭಿನ್ನಪವ ಲಾಲಿಸಿರಿ |ಒಂದು ದಿನ ಹರಿಯೆಂದು ಧ್ಯಾನವನ್ನರಿಯ ನಾವ್ - |ಬಂದಾಗ ಆತ್ಮಜನ ನಾರಗನೆ ಎಂದೆನಲುಕುಂದಿದುವೆ ಇವನ ಪಾಪ ? 16ಹಂದೆ - ಕುರಿಗಳಿಗೆ ನಿಮಗಿಷ್ಟು ಮಾತುಗಳೇಕೆ |ನಿಂದಿರದೆ ಹೋಗಿ ನಿಮ್ಮೊಡೆಯನಿಗೆ ಪೇಳೆನಲು |ಸಂದಲಾ ಯಮಭಟರು ಅಜಮಿಳನ ಹರಿಭಟರುತಂದರೈ ವೈಕುಂಠಕೆ 17ಮದ್ಯಪಾನವ ಮಾಡಿ ಪೆಂಗಳನು ಒಡಗೂಡಿ |ಅದ್ದಿದೆನು ನೂರೊಂದು ಕುಲವ ನರಕದೊಳೆಂದು |ಹದ್ದಿನಾ ಬಾಯೊಳಗಿನುರಗನಂತಜಮಿಳನುಇದ್ದನವ ನೆರೆಮರುಗುತ 18ವಿಪ್ರಕುಲದಲಿ ಹುಟ್ಟಿ ವೇದಶಾಸ್ತ್ರವನೋದಿ |ಮುಪ್ಪಾದ ತಾಯಿ - ತಂದೆಗಳೆಲ್ಲರನು ಬಿಟ್ಟು |ಒಪ್ಪಿ ಧಾರೆಯನೆರೆದ ಕುಲಸತಿಯ ಬಿಟ್ಟು ಕಂ -ದರ್ಪನಾ ಬಲೆಗೆ ಸಿಕ್ಕಿ 19ವಿಪ್ರ ನಾನಾದರೂ ಜಗದಿ ನಿಂದ್ಯನು ಆಗಿ |ಇಪ್ಪೆ ನೀ ಪರಿಯೊಳೆನ್ನಂಥ ಪಾತಕಿಯಿಲ್ಲ |ತಪ್ಪಲಿಲ್ಲವೊ ಹಣೆಯಬರೆಹವಿದು ಭುವನದೊಳುಬೊಪ್ಪರೇ ವಿಧಿಯೆಂದನು 20ಇಳೆಯೊಳಗೆ ಶ್ರೀಪುರಂದರ ವಿಠಲನಾಮವನು |ನೆಲೆಯರಿತು ನೆನೆವರಿಗೆ ಯಮನ ಬಾಧೆಗಳಿಲ್ಲ |ಸುಲಭದಿಂದಲ್ಲಿ ಸಾಯುಜ್ಯಪದವಿಯು ಸತ್ಯಬಲುನಂಬಿ ಭಜಿಸಿ ಜನರು21
--------------
ಪುರಂದರದಾಸರು