ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಲಾಂಬುಧಿ ಚಂದ್ರ ಶ್ರೀ ರಾಮಚಂದ್ರ ಪ ಒಂದೇ ಭಾಷಣ ನಿನಗೊಂದೇ ಮಾರ್ಗ ಸಾಕು ಒಂದೇ ಸ್ಥಾನದೊಳಾಶ್ರಿತರನೇ ನಿಲ್ಲಿಸುವಿ ಒಂದೇ ಬಾರಿಯೆ ಕೊಟ್ಟುದ್ಧರಿಸುವೆÉ ಭೃತ್ಯರ ಒಂದೇ ಪತ್ನಿಯು ನಿನಗೆಂಬುದು ಬಿರುದು 1 ನಿನ್ನ ತಮ್ಮನು ನಿನ್ನ ರಾಣಿಯ ಭೃತ್ಯನು ನಿನ್ನಂಥ ಭಾಗ್ಯ ಮತ್ತೆಲ್ಲಿ ತೋರುವುದು ಘನ್ನ ಮಹಿಮ ನೀನು ಮಲತಾಯಿ ನುಡಿಯಲು ತನ್ನ ರಾಜ್ಯಗಳನ್ನು ತಮ್ಮನಿಗೊಪ್ಪಿಸಿದೆ 2 ಭರತನು ನಿನ್ನಡಿಗಾಗಿ ಬೇಡಿದರೂ ನೀ ಹರುಷದಿಂದಲಿ ಕಾಲಾಂತರವ ಪೇಳಿರುವಿ ಮರಳಿ ರಾಜ್ಯದಿ ಬಂದು ರಾಜೇಶ ಹಯಮುಖ ಕರುಣಿಸಿ ಪಟ್ಟಾಭಿಷಿಕ್ತನಾಗಿರುವಿ 3
--------------
ವಿಶ್ವೇಂದ್ರತೀರ್ಥ
ಭೋಗಿವರನೇ ಪಾಲಿಸೋ ಪ ಆಗಸದೊಳು ನೀನಾಗಮಿಸುತಲಿ ಸ-ದಾಗತಿ ಭೋದವ ಭೋಗಿಸಿ ನಿಂದೇ ಅ.ಪ. ಪರಿ ಪ್ರಾ |ರಬ್ಧವ ಭೋಗವ | ನಾದರದನುಭವಸಾಧನವೀವುದು | ಹೇ ದಯವಂತ 1 ಹೃದಯಾಬ್ಜಾಮಲ | ಸದನದಿ ಸುರತರುಹದುಳ ದೊಳಾಶ್ರಿತ | ಬದಿಗನಿನಾದೆಯೊ |ಸದಮಲ ಶಯ್ಯನೆ | ಇದಿರಾವನು ತವಪದವಿಗೆ ಸುರರೊಳು | ಬುಧಜನ ವಂದ್ಯ 2 ಪತಿ ಗುರುಗೋವಿಂದ ವಿಠಲನ | ಭಾವದಿ ಕಾಣಿಸಿ 3
--------------
ಗುರುಗೋವಿಂದವಿಠಲರು