ಒಟ್ಟು 566 ಕಡೆಗಳಲ್ಲಿ , 89 ದಾಸರು , 520 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಎಷ್ಟೆಂದು ಪೇಳುವೆನು ನಮ್ಮುಡುಪಿಯ ಕೃಷ್ಣನÀ ಮಹಿಮೆಯನು ಅಷ್ಟೋತ್ತರ ಶತಯೀರೆಂಟು ಸಾವಿರ ಶ್ರೇಷ್ಠ ಮಹಿಷಿಯರ ಸೇವೆ ಕೈಗೊಂಬುದ ಪ. ದ್ವಾರಕೆಯೊಳಗೆ ನೆಲೆ ತೋರುತಲಿದ್ದು ಸ್ವಾರಿ ಹೊರಟ ಮೇಲೆ ಕಾರುಣ್ಯನಿಧಿ ಕಡಲೊಳು ಬಂದು ಕಮಲಾಸ- ನಾರೂಹನಾಗುವ ನರಯತಿಯನು ಕಂಡು ಘೋರತರ ಸಂಸಾರಕೂಪವ ಸೇರಿ ಬಳಲುವ ಸಕಲಸುಜನೋ- ದ್ಧಾರ ಮಾಡುವೆನೆಂದು ಮೂರ್ತಿಯ ತೋರುತಿಲ್ಲಿಹ ತ್ರಿಭುವನೇಶನ 1 ಪಾಪಿಷ್ಠ ಕಲಿಯಾಳುತ್ತಿರುವ ಕಾಲದಲಿ ಸ್ತ್ರೀ ರೂಪದಿಂದಲಿ ಪೂಜೆಯ ಕೊಳಲು ಸುಜ- ನಾಪವಾದದ ಭೀತಿಯ ತಾನೆನಸಿ ಮನದಲಿ ಕಾಪುರುಷನನು ಕಣ್ಣ ಕಟ್ಟಿ ಮಹಾಪರಾಧಿಗಳೊಳಗೆ ಸೇರಿಸಿ ಭೂಪತಿಗಳಲ್ಲಿರುವ ಯತಿವರ ರೂಪರೊಡನಾಡುವ ಪರಾತ್ಮನ 2 ಪಾಂಡುಕುಮಾರರು ಪರಿಯಾರು ಕ್ರಮದಿಂದ ಹೆಂಡತಿಯಾಳ್ದರೆಂದು ದೂಷಿಸುವರ ಕಂಡು ತಾ ಮನಕೆ ತಂದು ಕಾರುಣ್ಯ ಸಿಂಧು ಕುಂಡಲೀಂದ್ರ ಗಿರೀಂದ್ರ ನಿಜಪದ ಪುಂಡರೀಕ ಛಾಯಗಳ ಮತಿ- ವತ್ಸರ ದ್ವಯ ಖಂಡನೆ ಕೈಕೊಂಡು ಮೆರಪನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜೈ ಭೀಮ ಜರೆಸುತನ್ವೈರಿ ಜೈ ಭೀಮ ಜಯ ಜಯ ಜಯ ಮುಖ್ಯಪ್ರಾಣ ಸೋಮ ಕುಲದೊಳುದ್ಭವಿಸಿ ಗೀರ್ವಾಣ ಬಲು ಬಲುಮೆಯಿಂದಲಿ ದುರ್ವಾದಿಗಳನ್ನೆ ಮೂತಿಂದ್ವೊತ್ತಿ ಸಲಹೆನ್ನ ಶ್ರೀಮ- ದಾನಂದತೀರ್ಥಮುನಿ ಪ ರೋಮ ರೋಮಕೆ ಕೋಟಿಲಿಂಗ ಜಗತ್ಪ್ರಾಣಿಗಳಿಗೆ ಅಂತರಂಗ ಲಂಕೆನಾಳ್ವೋ ಭೂಪತಿಗತಿ ಭಂಗಬಡಿಸಿ ಕ್ಷೋಣಿಸುತೆಗೆ ಉಂಗುರಿಟ್ಟು ರಾಮರಲ್ಲೆ ಪ್ರೇಮ- ವಾರ್ತೆಯ ತಂದ ಪ್ರಾ- ಣೇಶ ದಯವಾಗೊ 1 ಮಧುವೈರಿ ಮಾತುಳನಾಗೆ ಬಂದು ಮಗಧ ಮುತ್ತಿಗೆ ಹಾಕೆ ಬ್ಯಾಗ ವೃಕೋದರ ಛಲವ್ಹಿಡಿದು ತಾ ಹೋಗೆ ಅಲ್ಲೆ ದ್ವಿಜನ್ವೇಷಧರಿಸ್ವಾಸುದೇವ ವಾಸವಿ ಕೂಡಿ ಮಗಧರಾಜನ ಮ- ರ್ಮಗಳಿಂದ ಸೀಳಿದ್ಯೊ 2 ಹಾಟಕಾಂಬರನಲ್ಲಿ ಭಕ್ತರೆಂದು ಅರಿಯದೆ ಅಂತಕನ ಪುತ್ರ(ನ) ಜೂಜಿನಾಟ(ದಿ) ಸೋಲಿಸಿ ಸೆಳೆಯೆ ವಸ್ತ್ರ ಕೃಷ್ಣೆ ನೋಟದಿ ಭಸ್ಮ ವಿಚಿತ್ರ ಸವ್ಯಸಾಚಿ ಸಹಿತವಾಗ್ವಿರಾಟ- ವರ್ಗದಿ ಸತಿಗೆ ಕಾಟ ಕಳೆದ್ಯಮ- ಪುರಿಗೆ ದಾಟಿಸ್ದ್ಯೋ ಕೀಚಕನ 3 ಕಳೆದÀು ಅಲ್ಲಜ್ಞಾತವಾಸ ಬಂದು ಖಳರೊಳಗಧಿಕ ದುಶ್ಶಾಸ(ನ) ಅವನ ಕರುಳ ಬಗೆಯಲತಿ ರೋಷ ಕಾಲಕ್ಕೊದಗಲು ನರಹರಿ ಆ- ವೇಶ ಕಂಡು ಸುರರಸುರರ ಸೈನ್ಯ ಜರಿದು ಹಿಂದಕೆ ನಿಲ್ಲೆ ರಣಧೀರ- ಗೆಣೆಯಿಲ್ಲ ಪರಮ ಪರಾಕ್ರಮ 4 ಸಕಲ ಜೀವರಿಗಾಧಾರಕನೊ ಭಾರತಿ ಪ್ರಾರಂಭಕ್ವೊಂದಿತನೊ ಮಧ್ವಮತ ಶಾಸ್ತ್ರಗಳ ಉದ್ಧಾರಕÀನೊ ತ್ರಿಗುಣ ಜೀವನು ಸಾರಪ್ರೇರಕನು ವಾಯು ಸಕಲ ಸುರರೊಡೆಯ ಭೀಮೇಶ ಕೃಷ್ಣನಲ್ಲಿ ಭಕುತಿ ಜ್ಞಾನವ ದಿವ್ಯ ಮುಕುತಿ ಮಾರ್ಗವ ತೋರಿದಿ 5
--------------
ಹರಪನಹಳ್ಳಿಭೀಮವ್ವ
ನಿನ್ನಂಥ ಕರುಣಿಗಳಿನ್ನುಂಟೆ ಭುವಿಯಲ್ಲಿ _ ಧನ್ವಂತರೇ ಪ ಚೆನ್ನ ಪ್ರಸನ್ನ ನೀನಾಗುತ ಇವಗಿನ್ನುಘನ್ನ ರೋಗವ ಕಳೆದುನ್ನುತ ಸುಖವೀಯೋ ಅ.ಪ. ಉಪಟಳ - ಕತ್ತರಿಸು ಶೀಘ್ರದೀಹಸ್ತ ಕಲಶಾಮೃತ - ಸ್ರವಿಸಿ ವೇಗದಿ ಅಪಮೃತ್ಯುವ ಹರಿಸಯ್ಯ - ಭಕ್ತಳ ಭರ್ತುವಿನ1 ಆರ್ತರುದ್ಧಾರಿಯೆ - ಭಕ್ತರ ಪರಿಪಾಲಕರ್ತ ಸಂಹರ್ತ - ಮೂರ್ಜಗಕೆಲ್ಲ ನೀನೇನಿತ್ಯಾನಿತ್ಯದ - ಜಗಕೆಲ್ಲ ಸ್ವಾಮಿಯೆಭೃತ್ಯಳ ಮಾಂಗಲ್ಯ - ಘಟ್ಟಿಯೆಂದೆನಿಸೋ 2 ಪ್ರಾಣ ಗುರು ಜಯ - ವಿಠಲ ದಾಸಿಯಪ್ರಾಣನಾಥನ ಪ್ರಾಣ - ಉಳಿಸುವುದೆನುತಪ್ರಾಣ - ಪ್ರಾಣನೆ ಎನ್ನ - ಬಿನ್ನಪವ ಜಗತ್ರಾಣ ಗುರು ಗೋವಿಂದ ವಿಠಲ - ಸಲ್ಲಿಸೋ 3
--------------
ಗುರುಗೋವಿಂದವಿಠಲರು
ಮಂಗಳ ಜಯಮಂಗಳ ಶುಭ ಮಂಗಳ ಶ್ರೀ ಗುರುಮೂರ್ತಿಗೆ ಧ್ರುವ ವೇದೋದ್ಧಾರ ಶ್ರೀಮತ್ಸ್ಯಗೆ ಮಂಗಳ ಮೇದಿನಿಯ ಪೊತ್ತ ಕೂರ್ಮಗೆ ಮಂಗಳ ಕಾದಿ ಗೆದ್ದ ಶ್ರೀವರಾಹಗೆ ಮಂಗಳ ಒದಗಿ ಮೂಡಿದ ನರಸಿಂಹಗೆ ಮಂಗಳ 1 ಧರಿಯೆ ದಾನವಕೊಂಡ ವಾಮನಗೆ ಮಂಗಳ ಶೂರ ಪರಶುರಾಮಗೆ ಮಂಗಳ ಶರಣ ರಕ್ಷಕ ಶ್ರೀರಾಮಗೆ ಮಂಗಳ ಸಿರಿಯನಾಳುವ ಶ್ರೀಕೃಷ್ಣಗೆ ಮಂಗಳ 2 ಗುಹ್ಯ ಗೋಪ್ಯದಲಿಹ ಬೌದ್ದಗೆ ಮಂಗಳ ಹಯವನೇರಿದ ಕಲ್ಕಿಗೆ ಮಂಗಳ ಜಯ ಜಯ ಮಹಿಪತಿಸ್ವಾಮಿಗೆ ಮಂಗಳ ದಯುವುಳ್ಳ ಶ್ರೀದೇವಿದೇವಗೆಮಂಗಳ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶರಣೆಂಬೆ ನಾ ಶರ್ವಾಣಿ ವರನ | ಸಿರಿಪತಿ ಶಾಙ್ರ್ಗಧರನ ವರಸಿಂಧು ನಗರದೊಳು |ಸ್ಥಿರ ಭೋಗಗೊಂಬ ಸಂಗಮನ ಪ ಬಾಲೇಂದು ಮುಡಿದ ಭಸಿತಾಂಗ | ಕಾಳಿಗರ್ಧಾಂಗಾ |ಪಾಲಿಸಿ ಕೊಡುವರೆ ದೊರೆಯ ಪೇಳಲಿಕಿನ್ನಾರನೈದಾರೆ |ಭಾಲಾಕ್ಷನ ಲೀಲಾ ವಿಲಾಸ ಭೋಳಾ ದೇವೇಶ | ಕಾಲಿ ಗೆರಗಿ ಬ್ರಹ್ಮಾದಿಕರು ಕಾಲಾಂತಕನ ವರ ಪಡೆವರು |ನೀಲಕಂಧರನ ನಿಗಮೋದ್ಧಾರನ ಸ್ಥೂಲ ಶರೀರನ ಸುಖಸಂಚಾರನ ಶೀಲಕ ದೂರನ | ಶಾಂತಾಕಾರನ |ಮಾಲಾಧರನ ಮಹಾ ಗುರುಹರನ1 ಕಳೇವರ ತಾಪ ಪಾವಕ ನೇತ್ರನ ಸುರಮುನಿ ಸ್ತೋತ್ರನ ಸುಂದರ ಗಾತ್ರನ ನರಹರಿ ಮಿತ್ರನಹಿಗಳ ಸೂತ್ರನ ಶಿರಕರ ಪಾತ್ರನ ಶಿವಸ್ವತಂತ್ರನ 2 ಅಮಿತ ಭಕ್ತರು ಇಳೆಯೋಳ್ ಇಹರು ನಮಿಸಲು ಸಲಹಿಕಾವನು |ಅಮರರ ಹೊರೆವನ ಅಧಿಕ ಪ್ರಭಾವನ ತಿಮಿರವ ಕಳೆವನ ತೀರದಲಿವನ ಹಿಮಸುತೆ ಜೀವನ ಹಿಡಿದಿಹ ತ್ರಿಭುವನನ | ಶ್ರಮಗಳನಳಿವನ ಶಂಕರ ಭೀಮಾ ಶಂಕರನ 3
--------------
ಭೀಮಾಶಂಕರ
ಸಿಂಧು ಶಯನ ಬಾರೆಲೋ - ಮಂದರೋದ್ಧಾರೀಇಂದಿರೆಯರಸ ಮುಕುಂದನೇ ಪ ಮಾಧವ ಹೇ ದಯಾಂಬುಧೆ - ವಂದಿಸುವೆ ತ್ವತ್ಪಾದ ದ್ವಂದ್ವಕೇ ಅ.ಪ. ಹೃದಯ ಮಧ್ಯದಿ ಮಂಟಪಾ - ಬುಧ ಜನ ವಂದ್ಯಸಿದ್ಧವಾಗಿಹುವು - ಮಾಧವಾ |ಸಿದ್ಧ ಸಾಧನ ಪವನ - ಉದಾನಾದಿಗಳೆಲ್ಲಹೆದ್ವಾರಗಳ ಕಾದಿಹರೋ ||ಮಧು ವಿರೋಧಿಯೆ ನಿನ್ನ ಪದ - ಸದ್ವನಜ ಕೀರುತಿ ಸುಧೆಯ ಸವಿಯುವಮುದವ ಕರುಣಿಸು ಶ್ರೀದ ನರಹರಿ - ಹೃದಯ ಸದನಕೆ ವದಗಿ ಬೇಗ 1 ಚಿತ್ತ ಸಿಂಹಾಸನವೂ - ಚಿತ್ತ ಜನಯ್ಯಾಸ್ತೋತ್ರ ರತುನ ಖಚಿತವೂ ||ಉತ್ತಮ ಮತಿ ಸುದತೇರೂ - ಛತ್ರಿ ಚಾಮರಗಳಎತ್ತಿ ಬೀಸುತಲಿಹರೋ ||ಕೃತ್ತಿವಾಸನ ಸಖನೆ ಪರಮ ಸು - ಹೃತ್ತಮೋತ್ತಮ ಚಿತ್ಸುಖ ಪ್ರದಚಿತ್ತವಿಸು ಚಿತ್ತಾಖ್ಯ ಪೀಠಕೆ - ಸತ್ಯಕಾಮ ಶರಣ್ಯ ಶಾಶ್ವತ 2 ಭವ ಪಿತ ತೋಯ ಜಾಕ್ಷನೆ -ದಾಯ ನಿನ್ನದು ಎನ್ನ ಗತಿಗೇ ಪ್ರೇರ್ಯ ಪ್ರೇರಕ ಶ್ರೀಗುರು - ಗೋವಿಂದ ವಿಠಲನೆ ಕಾಯೊ ಬೇಗ 3
--------------
ಗುರುಗೋವಿಂದವಿಠಲರು
ಹ್ಯಾಗೆ ಸದ್ಗತಿ ಆಗುವುದೆನಗೆ ಯೋಗಿಗಳ ಒಡೆಯ ಹರಿಯೆ ಈಗಾಗಲೆ ತಿಳಿಸಿ ಸಾಗುವಂತೆ ಸಾಧನ ಬ್ಯಾಗ ಮಾಡಿಕೊ ನಾಗತಲ್ಪನೆ ಪ ಮೇಲಧಿಕಾರಿಯು ಕೊಂಡಾಡಲು ಕುಲ ಉದ್ಧಾರವೆಂದು ಹಿಗ್ಗುವೆ ಕಲುಷ ಕಂಡಾಗÀಲು ಅಳುತ ಧರೆಗೆ ಇಳಿವೆನೊ ನಾನು 1 ಶಿಕ್ಷ ರಕ್ಷ ಸಧ್ಯಕ್ಷ ಲಕ್ಷ್ಮೀಪತಿಯೆಂದರಿಯದೆ ಕುಕ್ಷಿ ಭರಣಕೆ ಯೋಚಿಸುವೆ ಪಕ್ಷಿವಾಹನನಲ್ಲಿ ಲಕ್ಷ್ಯವಿಲ್ಲದೆ ಬಕ ಪಕ್ಷಿಯಂತೆ ಧೇನಿಸುವೆ ನಾ 2 ನಷ್ಟ ದೇಹ ಪುಷ್ಟಿಗಾಗಿ ದುಷ್ಟರಿಗೆ ಎನ್ನ ಕಷ್ಟ ಪೇಳಲು ದೃಷ್ಟಿಸಿ ನೋಡಿದರೆ ಬೆಟ್ಟ ಮೇಲಿದ್ದಂತೆ ಕಂ ಗೆಟ್ಟು ಮೊರೆಯಿಸುವೆ 3 ಒಂದು ಲಾಭವಿಲ್ಲದೆ ಮಂದಿ ನೆರಹಿ ಸಂದಿಗೊಂದ್ಹರಿದ್ಯಾಡಿ ಸಂದು ಹೋಯಿತÀು ಹೊತ್ತಯೆಂದು ಆಸ್ಥಾನಕೆ ಮಿಂದು ಬ್ಯಾಗನ್ನ ತಿಂದೋಡುವೆನೊ 4 ಮಾನನೀರ ಚೆಲ್ವಿಕೆಗೆ ಮನಸೋತು ನೆನೆನೆನೆದು ಬೆಂಡಾಗುವೆ ಹೀನರಾ ಕೂಡಿಕೊಂಡು ದೀನರಾ ಬಾಯಿಬಡಿದು ಧನ ಸಾಧಿಸಿದ್ದು ಕೊನೆಗೆ ಸಾಯುವ ನರಗೆ 5 ಉದಯದಲೆದ್ದು ನದಿಗೆ ಪೋಗಿ ನಾ ಮುದದಿಂದ ಮಿಂದು ಉದಯಾರ್ಕಗಘ್ಯ ಒದಗೀಸಿ ಕೊಡದ ಮದಡನಾಗಿದ್ದವಗೆ 6 ವರ ಸುದರ್ಶನ ಗ್ರಂಥಗಳ ಗುರುಗಳಲ್ಲಿ ನಿರುತ ಪಠಿಸಲಿಲ್ಲ ಭಾಗವತ ಪುರಾಣಗಳು ಪರಮ ಭಕ್ತೀಲಿ ಕೇಳಲಿಲ್ಲ 7 ಭಾವ ಶುದ್ಧಿಯಿಂದ ದೇವತಾರ್ಚನೆ ಆವ ಕಾಲಕು ಮಾಡಲಿಲ್ಲ ಪವನಸಖ ಮಖದೊಳಾಹುತಿನಿತ್ತು ಕವಿಗಳಿಗನ್ನ ಕೊಟ್ಟವನಲ್ಲ 8 ಧ್ಯಾನ ಮಾಡುವುದನ್ನು ಮೌನಿಗಳ ಕೇಳಿ ಮನನ ಮಾಡಲಿಲ್ಲ ಪಾದ ಕನಸಿನಲಾದರೂ ಒಮ್ಮೆ ನೋಡಲಿಲ್ಲ 9
--------------
ವಿಜಯ ರಾಮಚಂದ್ರವಿಠಲ
(ಅ) ಧಾಮ - ನಿಸ್ಸೀಮ ಸುಮನೋರಮ ಪ ಕಾಮಾರಿಸ್ತುತ ಮಂಗಳನಾಮ ಅ ದುರಿತ ವಿದೂರ ಕರುಣಾಕರ ಸುಂದರ ಗಂಭೀರ 1 ದೀನೋದ್ಧಾರ ವಿಪಿನವಿಹಾರ ದಾನವಹರ ಸುರಕಾವ್ಯ ವಿಚಾರ 2 ಸೀತಾನಾಥ ವಾನರಯೂಥ ವಾತಾತ್ಮಜ ನುತ ಶ್ರೀ ಲಕ್ಷ್ಮೀಕಾಂತ 3
--------------
ಲಕ್ಷ್ಮೀನಾರಯಣರಾಯರು
(ಅ) ಶಂಭೋ ಅಂಬಾಮನೋಹರ ದೇವ ಮಹದೇವ ಪ ಘನ ಗಂಭೀರ ನಂಬಿದೆ ಕಾಯೊ ವರವೀಯೋ ಅ.ಪ ಸುರನರ ಭುಜಂಗ ಸಂಸೇವ್ಯ ಸುಭಾವ್ಯ ಸರ್ವಕಾಂiÀರ್i ಸತತ ಸಹಾಯ ಧೀರ ಅಘೋರ ರಿಪು ಸಂಹಾರ ಉದಾರ ದಾತಾರ ದುರಿತವಿದೂರ 1 ವರದೇಶ ದಿನೇಶ ಪ್ರಕಾರ ಸರ್ವೇಶ ಕೈಲಾಸ ವರ ಗಿರಿವಾಸ ಈಶ ಮಹೇಶ ವಿಶ್ವೇಶ ಉಮೇಶ ದುರ್ವಾಸ ಪರಮ ವಿಲಾಸ 2 ಶರಣರ ಆಧಾರ ಪರಮಾರ್ಥ ವಿಚಾರ ಉರಗೇಂದ್ರ ಭೂಷಿತಹಾರ ಮಾರಸಂಹಾರ ಭವದೂರ ಉದ್ಧಾರ ಶ್ರೀಕಾಂತ ಪ್ರಿಯ ಮಂದಾರ 3
--------------
ಲಕ್ಷ್ಮೀನಾರಯಣರಾಯರು
ಅಂಕಿತ-ತಾತ ಮಹಿಪತಿ ದಯಾಕರಾ | ಶ್ರೀಕರಾ | ಭಯ ಪರಿಹಾರಾ | ಜಗದೋದ್ಧಾರಾ ಪ ವನಜನಯನ ಪಾವನ ಕೃತಲೀಲಾ | ವನ ನಿಧಿ ಶಯನ ಸುವನ ಜಾಲೋಲಾ | ವನಜ ಸುಚರಣಾ ವನನರಪಾಲಾ | ವನಜ ಭವಾರ್ಚಿತ ವನಶುಭ ಮಾಲಾ1 ಹರಿಕೇಶವ ನರಹರಿ ಸರ್ವೇಶಾ | ಕರಿ ಹರಮುನಿ ಪೋಷಾ | ಹರಿಕುಲ ತಿಲಕ ವಿಹರಿಜಿತ ಭಾಸಾ | ಹರಿಚರರಿಪು ಸಂಹರ ಜಗದೀಶಾ2 ಗಿರಿಧರ ವಾಮನ ಗಿರಿರಿಪು ತಾತಾ | ಗಿರಿಧರ ಪರಿಶತ ಗಿರಿವರ ಪ್ರೀತಾ | ಗಿರಿಧರ ತನುಭವ ಗುರುವಿಖ್ಯಾತಾ | ಗಿರಿಮಾ ವೆಂಕಟ ಗಿರಿಧರ ದಾತಾ 3 ಅಂಕಿತ-ವೆಂಕಟ ಗಿರಿಧರ (?)
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿದೆನು ಸರ್ವೇಶಾ ಸ್ಮರಣೆಯೆ ಉಲ್ಲಾಸಾ 1 ಮಾಡಲಿಬೇಡ ಇನ್ನಾ ಇಚ್ಛಿಸುವೆ ಭಕ್ತಿರನ್ನಾ | ಯನಗೆ ಪ್ರತ್ಯಕ್ಷನಾಗೂಯತಿರನ್ನಾ 2 ಎಂಥೆಂಥವರನು ಪೊರೆದೇ | ಯನ್ನಂಥವರು ನಿನಗೆ ಹಿರಿದೇ ಚಿಂತೆಯನೀ ತರಿದೇ 3 ನಿನ್ನ ಮೆಚ್ಚಿಸಲೆನಗೆ ಶಕ್ತಿ | ಘನ್ನ ಮಹಿಮನೇಕೊಡು ಭಕ್ತಿ ಚೆನ್ನಾಗಿ ಪಾಲಿಸು ಮುಕ್ತೀ 4 ಪ್ರಥಮದಲಿ ಪ್ರಹ್ಲಾದನಾಗೇ | ಅಲ್ಲಿದಿತಿವಂಶದಲಿ ನೀ ಪೋಗೇ ಹತ ಮಾಡದೆ ಅವನೀಗೇ | ಪಿತಗೆ ಸದ್ಗತಿಯಿತ್ತೆಯೋಗೀ 5 ಮೂರ್ತಿ ಲೋಕದಲಿ ಪ್ರಖ್ಯಾತಿ ಏನೆಂಧೆÉೀಳಲಿ ವಾರ್ತೀ | ರಾಶಿರಾಶಿತುಂಬಿದವು ನಿನ್ನ ಕೀರ್ತೀ 6 ಮನಸಿಗೆ ಪ್ರೀಯಾ ಬಂದು ಪಿಡಿಕೈಯಾ 7 ಸತ್ಯ ಸಂಧರು ನೀವೆನಿಸೀ | ದೊಡ್ಡ ಉತ್ತರಾದಿ ಮಠದಿ ಜನಿಸೀ ಭಕ್ತರನೆಲ್ಲಾ ಸ್ವೀಕರಿಸೀ | ಮಧ್ವಮತವನುದ್ಧರಿಸೀ 8 ಬಿದ್ದೆ ನಿನ್ನ ಪಾದಕೈಯಾ | ಎನ್ನ ವುದ್ಧಾರ ಮಾಡುಜೀಯಾ ವಿದ್ವಾಂಸರಿಗೆ ನೀ ಘೇಯಾ | ಬೇಗ ಎದ್ದು ಬಂದು ಪಿಡಿಕಯ್ಯಾ 9 ನರಸಿಂಹ ವಿಠಲನ ಪ್ರೀಯಾ | ಕರೆಸಿದ್ದು ನೀ ಎನ್ನ ಖರೆಯಾ ಮಹರಾಯಾ 10
--------------
ಓರಬಾಯಿ ಲಕ್ಷ್ಮೀದೇವಮ್ಮ
ಶೇಷಪ್ರಭುಗಳ ರಚನೆಗಳು ಪಾಲಿಸು ಶ್ರೀಹರಿಯೇ | ಸದ್ಗುಣ | ಶೀಲ ಭಾಗ್ಯನಿಧಿಯೇ | ಶ್ರೀಲಲಾಮ ಶೇಷಾಚಲಾಧೀಶ ಶ್ರೀಲೋಲ ಬಾಲಭಾಸ್ಕರ ಸಂಕಾಶನೆ ಪ ಕಂಡವರಿಗೆರಗಿ ದೈನ್ಯವ | ಗೊಂಡೆ ಖಿನ್ನನಾಗಿ ಭಂಡನಾಗಿ ಬಳಲಿಸಿ ಬಹು ಕಾಯವ ದಂಡಿಸಿದೆನು ರಕ್ಷಿಸೋ ಶ್ರೀಹರಿಯೇ 1 ಯಾರಿಗೆ ದೂರುವೆನು ಭಕ್ತೋ | ದ್ಧಾರನಲ್ಲವೆ ನೀನು | ಘೋರದುರಿತ ದಾರಿದ್ರ್ಯದ ವ್ಯಥೆಯ ಇ- ನ್ಯಾರಿಗೊರೆವೆ ಅದನ್ಯಾರು ಕಾವರೈ 2 ಏನಪರಾಧವ | ಗೈದೆ ನಾ -ನೇನು ಪಾಪಾತುಮನೋ | ಈಸಪರಾಧವನೆಣಿಸದೆ | ಎನ್ನಯ | ಕ್ಲೇಶವ ಪರಿಹರಿಸೋ ದಯಾನಿಧೇ 3 ಪರ ಪುರುಷೋತ್ತಮ | ಪರಂಜ್ಯೋತಿ ಪರಬ್ರಹ್ಮಸ್ವರೂಪನೆ 4 ಗಮನ ಮಾಧವ ಕರುಣಾ-| ಪಾಂಗರಂಗ ಮಂಗಲಾಂಗ ರಕ್ಷಿಸು 5
--------------
ಅನ್ಯದಾಸರು
--------ಹರಿ ನಾರದವರದ ಪ ಅಗಣಿತ ಮಹಿಮನ ಆನಂದ ನಿಲಯನ ಬಗೆ ಬಗೆಯಲಿ ಭಕ್ತರನ ಬಿಡದೆ ಪೊರೆವನಾ 1 ಸುಜನ ವಿಲಾಸನ ಕಂದನ ಕಾಯ್ದನ -----ವರದನಾ ಸುಂದರ ರೂಪನಾ 2 ಜಲದೊಳಾಡುವನ ನೆಲದ ಮೇಲಾಡುವನ ಬಲವುಳ್ಳ ಅರಸನ ಬತ್ತಲೆ ಹಯವನೇರಿದನ 3 ಶೃಂಗಾರ ಭೂಷಣನ ಸುರಮುನಿವಂದ್ಯನ ಗಂಗೆಯ ಪಡೆದನ ಕರುಣಾಸಾಗರನ 4 ಕರ್ಣ ಮೌಕ್ತಿಕ ಹಾರನಾ ಸಕಲ ಆಭರಣನ ಸರಸಿಜನಯ್ಯನ 5 ನಿತ್ಯ ಕಲ್ಯಾಣನ ಜಗದೋದ್ಧಾರನ ಜಾನಕಿ ಪ್ರೇಮನಾ 6 ಅಚ್ಯುತಾನಂತನ ಹರಿ 'ಹೊನ್ನ ವಿಠ್ಠಲನ’ ಸಚ್ಚಿದಾನಂದ ಸರ್ವೋತ್ತಮ ದೇವನ 7
--------------
ಹೆನ್ನೆರಂಗದಾಸರು
(3) ಶ್ರೀಕೃಷ್ಣ ಶ್ರೀಪಾರ್ಥಸಾರಥಿ ನಿರುಪಮಗುಣ ನಿತ್ಯಕಲ್ಯಾಣ ಪ ಆಪದದೂರ ಮುನಿಜನಮಂದಾರ ದಾನವಭಯಂಕರ ಅ.ಪ ಮಂಗಳಕರಮೂರ್ತಿ ಸುಗುಣಾಭರಣ ಕವಿಜನವರ್ಣನ ಶೃಂಗಾರಸಾಗರ ಗೋವರ್ಧನೋದ್ಧಾರ ಆನತಹಿತಂಕರ 1 ಸಾಧುಹೃದಯವಾಸಓಶ್ರೀನಿವಾಸತವದಾಸಾನುದಾಸ ಶ್ರೀ ಸನ್ನುತ 2 ಜಾಜೀಶ ಕೇಶವ ಜಯಜಯವಿಭವ ಶ್ರೀ ಭೂನೀಳಾಧವ 3
--------------
ಶಾಮಶರ್ಮರು