ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಮಾರವ್ಯಾಸ ನಿತ್ಯ ಶುಭ ಮಂಗಳಂ ಪ ಮಂಗಳಂ ವೀರನಾರಾಯಣನ ಭಕ್ತಂಗೆಮಂಗಳಂ ಶಿವನಂಶ ದ್ರೋಣಸುತ ಶಿಷ್ಯಂಗೆಮಂಗಳಂ ಕನ್ನಡದೆ ಭಾರತವನೊರೆದವಗೆಮಂಗಳಂ ಯೋಗೀಂದ್ರ ಕುವರವ್ಯಾಸಂಗೆ 1 ಕವಿ ಪುಂಗವಂಗೆ 2 ಭಾರತದ ಶಾಸ್ತ್ರಾರ್ಥದೊಗಟವನು ಬಿಡಿಸುತಲಿಸಾರಿಜನರಿಗೆ ರಮ್ಯಗಮಕದಲಿ ಹೇಳಲಿಕೆಭಾರತದ ಶ್ರೀ ಬಿಂದುರಾಯರನು ಪ್ರೇರಿಸಿದ ತೋರ ಗದುಗಿನ ವೀರ ನಾರಾಯಣಂಗೆ 3
--------------
ವೀರನಾರಾಯಣ
ಶ್ರೀವಾಯು ದೇವರು ಅನುದಿನ ಸ್ತುತಿಸುವೆ ದೀನಮನುಜನ ಜನುಮಗಳಳಿಸೋ ಪ ವಾಣಿವಂದಿತ ಪಾದಪದ್ಮನೆ ಕಾಯೋ ಈಗಲೇ ಅ.ಪ. ಜಾನಕೀರಮಣನ ಪ್ರಿಯ ದಾನವಾಂತಕ ಕಾಯ ಮಣಿಮಂತಾದಿಗಳ ಶೂಲ ಘನ ಪರಾಕ್ರಮ ಭೀಮ ಜ್ಞಾನದಾಯಕ ವಪುಷ ಆನಂದ ತೀರ್ಥಪ್ರಖ್ಯಾತ ಮೌನಿಮಾನಸ ಚಂದ್ರ ಅನಿಮಿಶೇಷಗಳಾದಿಗೊಡೆಯ ಭಾನುಕುಲತಿಲಕ ದೂತನೆ ಭಾನುಕೋಟಿತೇಜರೂಪನೆ ಗಣಿಸಲಾಗದ ಸತ್ವಮಂದಿರ ಮೌನಿಗಳ ಕಲಶ ಪ್ರಾಯನೆ ಕನಕವರ್ಣದಶುಭಗಾತ್ರನೆ ಧ್ಯಾನಗೋಚರ ವಿಶ್ವರೂಪನೆ ಮಾನದಿಂದಲಿ ಪಾಲಿಸಯ್ಯ 1 ವಾರಿಧಿ ದಾಟಿದಶೂರ ಭಾರಿವನವ ಕಿತ್ತವೀರ ಜರಾಸಂಧನ ಕೊಂದ ಧೀರ ವೈರಿತಿಮಿರಕೆ ಸೂರ್ಯ ಹರಿಯ ಹರಡಿದ ರಾಯ ಪರಾಶರಾತ್ಮಜಪ್ರಿಯ ಕರಿರಾಜವರದನೆ ಪ್ರಥಮಾಂಗ ಭಾರತಿ ರಮಣಮುಖ್ಯಪ್ರಾಣ ಹರಿಯು ಆಗಿ ಹರಿಯ ಒಲಿಸಿದೆ ವೀರಮಾರುತಿ ದೇವ ದೇವನೆ ಬಗೆದು ಧರಿಸಿ ಮೆರೆದೇ ಎಂದು ಸಾರಿದೆ ತೋರಿಸಿ ಕಾಯೊ ಸೂತ್ರನೆ 2 ಅಕ್ಷಯನ ಕೊಂದು ಮೆರೆದ ಲಕ್ಷ್ಮಣನ ಪ್ರಾಣವನುಳಿದ ರುಕ್ಮಿಣೀ ಪತಿಯ ಕಿಂಕರನಾದ ಲಕ್ಷ್ಯವಿಲ್ಲದೆ ಸೈನ್ಯಗಳಳಿದಾ ಪಕ್ಷವಾಹನನೆ ದೈವವೆಂದ ಮೋಕ್ಷಸಾಧನಗಳ ತೋರಿನಿಂದ ವೈರಿ ಅನಿಲ ರಕ್ಷಿಸು ರಕ್ಷಿಸು ತತ್ವೇಶರೊಡೆಯ ಲಕ್ಷ್ಮಿಮಾತೆಯಕಂಡುವಂದಿಸಿ ಲಂಕೆ ಸುಟ್ಟು ಸೊಕ್ಕೂ ಮುರಿದೆ ಅಕ್ಷನಾಟವ ಸೋತುನಟಿಸಿ ಕಾಂತೆಗಭಯವ ನೀಡಿ ಪೊರೆದೆ ಅಕ್ಷರೇಡ್ಯನ ಕರುಣದಿಂದಲಿ ಸೂತ್ರಭಾಷ್ಯವ ರಚಿಸಿ ಮೆರೆದೇ ಇಕ್ಷುಚಾಪನ ಪಿತನ ತೋರಿಸೋ ದಕ್ಷಿಣಾಕ್ಷಿಗವತ್ಸರೂಪಿಯೆ 3 ವಿಷಉಂಡುಪೊರೆದ ರೋಮರೋಮಕೆ ಕೋಟಿ ಲಿಂಗಗಳುದುರಿಸಿ ಬಂದ ಧಾಮಸಕಲ ಗುಣಕೆಂದೆನಿಕೊಂಡ ಅನಾದಿ ಅಪರೋಕ್ಷದೇವ ರಾಮಭಕ್ತಾಗ್ರೇಸರನೆನಿಸಿದ ತಾಮಸಾಂತಕ ವಿಜಯರಥಧ್ವಜ ಭಾಮೆಯರೂಪವ ತಾಳಿಮೆರೆದ ಭೀಮವಿಕ್ರಮ ಸಪ್ತಶಿವಧರ ಸಾಮಗಾಯನ ಲೋಲ ಕೃಷ್ಣನ ಪ್ರಿಯದಾಸ ಮೋದಮುನಿಯೆ ಎನಿಸಿಮೆರೆಯುವೆ 4 ವಾನರರೂಪಿಲಿ ಬಂದ ಜಾನಕಿ ಗುಂಗುರಕೊಟ್ಟು ನಿಂದ ರಾಜಸೂಯವ ಮಾಡಿನಿಂದ ಹರಿಯು ಎಂದ ವನಜನಾಭನಮುಖ್ಯ ಪ್ರತಿಬಿಂಬ ಕ್ಷಣದಿ ಸಂಜೀವನವ ತಂದೆ ವಾನರರ ಪ್ರಾಣ ಉಳಿಸಿದೆ ದ್ರೋಣಸುತನ ಅಸ್ತ್ರನಿಲಿಸಿದೆ ಸಾಮ ದೂರ ಖ್ಯಾತನಾಮನೆ ವಾಯು ಅಂತರ ವಿಶ್ವ ಚರಣ ನಂಬಿದೇ 5
--------------
ಕೃಷ್ಣವಿಠಲದಾಸರು
ಹರಿಹರರು ಸರಿಯೆಂಬ ಮರುಳು ಜನರುಹರಿಹರರ ಚರಿತೆಯನು ತಿಳಿದು ಭಜಿಸುವುದು ಪ ಸುರರು ಮುನಿಗಳು ಕೂಡಿ ಪರದೈವವಾರೆಂದುಅರಿಯಬೇಕೆಂದೆರಡು ವರಧನುಗಳಹರಿಹರರಿಗಿತ್ತು ಸಂಗರವ ಮಾಡಿಸಿ ನೋಡೆಮುರಹರನು ಪುರಹರನ ಗೆಲಿದುದರಿಯಾ 1 ಕರವ ಶಿರದ ಮ್ಯಾಲಿರಿಸಿ ಖಳ-ನುರುಹಿ ಹರನನು ಕಾಯಿದ ಕಥೆಯ ನೀನರಿಯಾ 2 ದೂರ್ವಾಸರೂಪ ಹರನಂಬರೀಷನ ಮುಂದೆಗರ್ವವನು ಮೆರೆಸಿ ಜಡೆಯನು ಕಿತ್ತಿಡೆಸರ್ವಲೋಕದೊಳವನ ಚಕ್ರನಿಲಲೀಯದಿರೆಉರ್ವೀಶನನು ಸಾರಿ ಉಳಿದನರಿಯಾ 3 ಹರನಂಶ ದ್ರೋಣಸುತನು ಪಾಂಡವಾ ಎಂದುಉರವಣಿಸಿ ನಾರಾಯಣಾಸ್ತ್ತ್ರವನು ಬಿಡಲು ಹರಿ ಬಂದು ಬೇಗ ತನ್ನಸ್ತ್ರವನು ತಾ ಸೆಳೆದುಶರಣಾಗತರ ಕಾಯಿದ ಕಥೆಯನರಿಯಾ 4 ನರನಾರಾಯಣರು ಬದರಿಕಾಶ್ರಮದಲಿರೆಹರನು ಹರಿಯೊಡನೆ ಕದನವನು ಮಾಡೆಹರಿ ಹರನ ಕಂಠವನು ಕರದಲಿ ಪಿಡಿದು ನೂಕೆಕೊರಳ ಕಪ್ಪಾದ ಕಥೆ ಕೇಳಿ ಅರಿಯಾ 5 ಹರಿ ಸುರರಿಗಮೃತವನು ಎರೆದ ರೂಪವನೊಮ್ಮೆಹರ ನೋಡುವೆನೆಂದು ಸಂಪ್ರಾರ್ಥಿಸೆಪರಮ ಮೋಹನ ರೂಪಲಾವಣ್ಯವನು ಕಂಡುಹರ ಮರಳುಗೊಂಡ ಕಥೆ ಕೇಳಿ ಅರಿಯಾ 6 ಹರಿಯ ಮೊಮ್ಮನ ಬಾಣಾಸುರನು ಸೆರೆವಿಡಿಯೆಗರುಡವಾಹನನಾಗಿ ಕೃಷ್ಣ ಬಂದುಹರನ ಧುರದಲಿ ಜಯಿಸಿ ಅವನ ಕಿಂಕರನ ಸಾ-ವಿರ ತೋಳುಗಳ ತರಿದ ಕಥೆಯ ನೀನರಿಯಾ 7 ಸುರತರುವ ಕಿತ್ತು ಹರಿ ಸುರಲೋಕದಿಂದ ಬರೆಹರನು ಹರಿಯೊಡನೆ ಕದನವನು ಮಾಡೆತರಹರಿಸಲಾರದೋಡಿದ ಕಥೆಯ ನೀನೊಮ್ಮೆಹಿರಿಯರ ಮುಖದಿ ಕೇಳಿ ನಂಬು ಹರಿಯಾ 8 ಹರಸುತನು ತಪದಿಂದ ಹರಿಯ ಚಕ್ರವ ಬೇಡೆಪರಮ ಹರುಷದಲಿ ಚಕ್ರವನೀಯಲುಭರದಿಂದ ಧರಿಸಲಾರದೆ ಚಕ್ರವನಂದುಹರನು ಭಂಗಿತನಾದನೆಂದರಿಯಲಾ 9 ರಾವಣಾಸುರ ಕುಂಭಕರ್ಣ ನರಕಾದಿಗಳುಶೈವತಪವನು ಮಾಡಿ ವರವ ಪಡೆಯೆಅವರುಗಳನು ವಿಷ್ಣು ನರರೂಪಿನಿಂದರಿದುದೇವರ್ಕಳನು ಕಾಯಿದ ಕಥೆಯ ನೀನರಿಯಾ 10 ಗಂಗಾಜನಕನÀ ಸನ್ಮಂಗಲ ಚರಿತ್ರ್ರೆಗಳಹಿಂಗದಲೆ ಕೇಳಿ ಸುಖಿಸುವ ಜನರಿಗೆಭಂಗವಿಲ್ಲದ ಪದವನಿತ್ತು ಸಲಹುವ ನಮ್ಮರಂಗವಿಠ್ಠಲರಾಯನ ನೆರೆ ನಂಬಿರೋ11
--------------
ಶ್ರೀಪಾದರಾಜರು
ಹಿಗ್ಗದಿರು ಹಿಗ್ಗದಿರು ಮನುಜಪಶುವೆ | ಮುಗ್ಗಿತಗ್ಗುವುದು ಮುಂದರಿಯದಲೆ ಮರುಳಾದೆ ಪ ಆಯುದಲಿ ದ್ರೋಣಸುತ ಕೃಪ ವಿಭೀಷಣನೇನೊ | ಶ್ರೇಯದಲಿ ದಶರಥ ನಹುಷನೇನೊ || ಈಯುದ್ದಕೆ ಮಯಾರ ಧ್ವಜ ಶಿಬಿ ಬಲಿಯೇನೊ | ಮಾಯಾ ಬಿಡುವಲ್ಲಿ ಜಡ ಭರಿತ ನೀನೇನೊ 1 ಶೂರತ್ವದಲಿ ಭೀಷ್ಮ ಅಭಿಮನ್ಯು ನೀನೇನೊ | ಘೋರ ತಪಸಿನಲಿ ವಿಶ್ವಾಮಿತ್ರನೇನೊ || ವಿರುಕುತಿಯಲಿ ಸುರಸೈನ್ಯ ನಾಯಕನೇನೊ | ಹಾರುವ ಬಿಂಕದಲಿ ಗರುಡ ನೀನೇನೊ 2 ಬಲದಲ್ಲಿ ಬಲರಾಮ ಶಲ್ಯ ಕೀಚಕನೇನೊ | ತಿಳಿವಳಿಕೆಯಲಿ ವಿದುರ ಸಂಜಯನೇನೊ || ಒಲಿದು ಪಾಡುವಲಿ ನಾರದ ತುಂಬುರನೇನೊ | ಛಲ ಮಾಡುವಲ್ಲಿ ಧ್ರುವರಾಯ ನೀನೇನೊ 3 ಭಕುತಿಯಲಿ ಪ್ರಹ್ಲಾದ ಪುಂಡರೀಕನೇನೊ | ಭುಕುತಿಯಲಿ ಅಗಸ್ತ್ಯ ಬಕ ನೀನೇನೊ || ಉಕುತಿಯಲಿ ಸೂತ ಸಹದೇವ ಶೌನಕನೇನೊ | ಶಕುತಿಯಲಿ ವಾಲಿ ಯಮರಾಯ ನೀನೇನೊ 4 ಶುಕ ಜನಕ ಸನಕಾದಿಗಳೇನೊ | ಕರ್ಣ ನೀನೇನೊ || ಭೋಗ ಬಡುವಲ್ಲಿ ಮಹಾಭಾಗ ಇಂದ್ರನೇನೊ | ವೇಗದಲಿ ಪುರುಷ-ಮೃಗನು ನೀನೇನೊ 5 ಸಖತನ ಮಾಡುವಲ್ಲಿ ಶ್ವೇತವಾಹನನೇನೊ | ನಿಖಿಳ ಕಥೆ ಕೇಳುವಲ್ಲಿ ಪರೀಕ್ಷಿತನೇನೊ || ಅಖಿಳರನು ಗೆಲುವಲ್ಲಿ ಕಾರ್ತವೀರ್ಯನೇನೊ | ಸುಖದಲ್ಲಿ ಇಪ್ಪದಕೆ ಪವನ ನೀನೇನೊ 6 ವಿತ್ತದಲಿ ನೀನು ವೈಶ್ರವಣನೇನೊ | ಮತ್ತೆ ಕ್ಷಮೆಯಲಿ ಹರಿಶ್ಚಂದ್ರನೇನೊ | ಭೃತ್ಯತನ ಪಡೆವಲ್ಲಿ ಅಕ್ರೂರ ನೀನೇನೊ | ಸುತ್ತವಲಿ ಪ್ರಿಯವ್ರತ ರಾಯನೇನೊ 7 ವ್ರತದಲ್ಲಿ ಅಂಬರೀಷ ರುಕುಮಾಂಗದನೇನೊ | ಸ್ತುತಿಯಲ್ಲಿ ಮುಚುಕುಂದರಾಯನೇನೊ || ಅತಿ ಚೆಲುವತನದಲ್ಲಿ ಮನ್ಮಥ ನಕುಲನೇನೊ | ಕ್ರತು ಮಾಡುವಲ್ಲಿ ಧರ್ಮಪುತ್ರ ನೀನೇನೊ8 ಶಾಪಗಳ ಕೊಡುವಲ್ಲಿ ಬ್ರಹ್ಮಪುತ್ರನೇನೊ | ತಾಪ ತೋರುವಲ್ಲಿ ರವಿ ಅನಳನೇನೊ | ಕೋಪ ಮಾಡುವಲ್ಲಿ ಗಿರಿಜಾರಮಣನೇನೊ | ತಾಪಸಿರ ನಡುವೆ ವಸಿಷ್ಠ ನೀನೇನೊ9 ಉನ್ನತದಲಿ ನೀನು ಮೇರು ಪರ್ವತನೇನೊ | ಘನ ಮದದಲಿ ಧೃತರಾಷ್ಟ್ರನೇನೊ || ಇನ್ನು ಮತಿಯನ್ನು ಕೊಡುವಲಿ ಗಜಮೊಗನೇನೊ | ಮುನ್ನೆ ಕವನದಲ್ಲಿ ಶುಕ್ರದೇವನೇನೊ 10 ಹಮ್ಮಿನಲಿ ಬಾಳದಿರು ಹಿತವಾಗದೊ ನಿನಗೆ | ಆ ಮಹಿಮರ ಸರಿ ನೀನಲ್ಲವೊ || ಸಿರಿ ವಿಜಯವಿಠ್ಠಲರೇಯನ್ನ | ನೆಮ್ಮಬೇಕಾದರೆ ಸೋಹಂ ನಿರಾಕರಿಸು11
--------------
ವಿಜಯದಾಸ