ಒಟ್ಟು 10 ಕಡೆಗಳಲ್ಲಿ , 9 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಿ ವೃಷ್ಟಿಗರಿ ಕಮಲನಯನನರರಪರಾಧಗಳ ನೋಡದಲೆ ವೇಗದಲಿ ಪ ತ್ರಿವಿಧ ಸಾಧನ ಪೂರ್ತಿಪದು ||ಅನ್ನದಿಂದಲೆ ಅಭಿವೃಧ್ದಿ ಆಹದರಿಂದ ಪ-ರ್ಜನ್ಯದಿಂದಲಿ ಅನ್ನ ಜನಿಸುವ ಕಾರಣದಿ 1 `ಭೀಷ್ಮಾಸ್ಮಾದ್ವಹತಿ ಪವತಿ` ಎಂಬೋಕ್ತಿಯಲಿಈ ಸಮಸ್ತಮರರೂ ನಿನ್ನ ಭಯದಿ ||ಬ್ಯಾಸರವೆ ತಮ ತಮ್ಮ ವ್ಯಾಪಾರಗಳ ಮಾಡಿಪೋಷಿಸುವರು ಜಗವ ಪ್ರೀತಿಯಿಂದ 2 ಸುರರು ನಿಮಿತ್ಯ ಮಾತ್ರಪರಮ ಗುಣಸಾಂದ್ರ ಹೇ ಕರುಣಾಬ್ಧಿ ಚಂದ್ರ 3 ನರನೊಬ್ಬ ಪ್ರಭು ತನ್ನ ಪರಿಚಾರಿಗಳನ್ನು ಪರಮ ಅಭಿಮಾನದಲಿ ಪರಿಪಾಲಿಪ ||ಸುರರ ಬ್ರಹ್ಮಾದಿಗಳ ದೊರೆಯ ನಿನಗೀ ಮಾತುಸರಿಹೋದರೆ ವಚನ ಸಲಿಸು ಕೃಪೆಯಿಂದ 4 ಆವಾವ ಸಾಧನದಿ ಆವ ಸುಖವೈದುತಿರೆದೇವ ನಿನ್ನಯ ಕೀರ್ತಿ ಬರುವದೆಂತೋ ||ದೇವ ದೇವೇಶ ಗುರು ವಿಜಯ ವಿಠಲರೇಯ ಸಾವಧಾನದಲಿತ್ತು ಪರಿಪಾಲಿಪುದು ಬಿನ್ನಪವ 5
--------------
ಗುರುವಿಜಯವಿಠ್ಠಲರು
ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸರಾಯ ಪುರಂದರದಾಸರಾಯ ಪ. ಘಾಸಿಗೊಳಿಸದೆ ಇತ್ತು ಕರುಣಿಸಿ ವಾಸುದೇವನ ಕೃಪೆಗೈಸಿರಿ ಅ.ಪ. ದಾಸಕೂಟಕೆ ಮೊದಲನೆ ಗುರು ದೊಷವರ್ಜಿತ ಭಕ್ತರೆನಿಸಿ ಆಶಪಾಶವೆ ತೊರೆದು ಹರಿಯ ದಾಸತನವನು ತೋಷದಲಿ ಕೊಂಡು ಕೇಶವನು ಸರ್ವೋತ್ತಮನು ಎನ್ನುತ ಶ್ರೀಶನ ಗುಣಗಳನೆ ಪೊಗಳುತ ಭೂಸುರರ ರಕ್ಷಿಸುತ ಭಕ್ತರ ಕ್ಲೇಶಗಳೆÉದಂಥ ಗುರುವರ 1 ವೀಣೆ ಕರದಲಿ ಗಾನಮಾಡುತ ಜಾಣತನದಲಿ ಕೃಷ್ಣನೊಲಿಸುತ ಆನಂದದಲಿ ನರ್ತಿಸುತ್ತ ಧ್ಯಾನದಲಿ ಶ್ರೀ ಹರಿಯ ನೋಡುತ ಆನನವ ತೂಗುತ್ತ ವೇದ ವಿ- ಧಾನದಲಿ ಪದಗಳನೆ ರಚಿಸುತ ಮೌನಿವ್ಯಾಸರ ಶಿಕ್ಷೆಯಿಂದಲಿ ದಾನವಾಂತಕ ಹರಿಯನೊಲಿಸಿದ 2 ಪಾಪಿಗಳ ಪಾವನಗೈಸುತ ಶ್ರೀ ಪತಿಯ ಅಂಕಿತವ ನೀಡುತ ಈ ಪರಿಯಲಿ ಮೆರೆದ ಮಹಿಮೆಯ ನಾ ಪೇಳಲಳವಲ್ಲವಿನ್ನು ನಾ ಪಿರಿಯರಿಂ ಕೇಳಿದುದರಿಂ ದೀಪರಿ ನುಡಿದಿರುವೆನಲ್ಲದೆ ಗೋಪಾಲಕೃಷ್ಣವಿಠ್ಠಲನ ರೂಪ ನೋಡುತ ಸುಖಿಸುವಂಥ 3
--------------
ಅಂಬಾಬಾಯಿ
ದ್ವಾದಶನಾಮ ನಿರ್ವಚನ ಶ್ರೀಕೃಷ್ಣ ನಿನ್ನ ಚರಣಾರವಿಂದಕ್ಕೆರಗಿ ಭಕುತಿಯಿಂ ನಿನ್ನ ಪನ್ನೆರಡು ರೂಪಗಳ ನಾಮ ನಿರ್ವಚನದಿಂ ಕೂಡಿ ನುತಿಸುವೆ ನಾನು ಸರ್ವಸಿದ್ಧಿಯನ್ನಿತ್ತು ಕಾಪಾಡು ಹರಿಯೆ 18 ಸೃಷ್ಟಿಲಯಕಾರಿಗಳು ಬೊಮ್ಮರುದ್ರರು ಇವರೆ ಕೇಶವೆಂಬಕ್ಷರದಿ ಮೆರೆಯುತ್ತಲಿಹರು ವರ್ತನವು ಯಾರಿಂದಲಹುದವನೆ ಪರದೇವ ಕೇಶವಾತ್ಮಕನವನು ಶ್ರೀಕೃಷ್ಣ ದೇವ 19 ನಾರವೆಂದರೆ ದೋಷ ಲೇಶವಿಲ್ಲದ ಗುಣವು ನಾರವೆಂದರೆ ನೀರು ಜೀವನಾಧಾರ ನಾರವಯನವು ಯಾರಿಗವನೆ ನಾರಾಯಣನು ರಜತಪೀಠದ ಪುರದ ಪರದೈವವವನು 20 ಮಾಧವನು ಮಾಲಕುಮಿಗೊಡೆಯನವ ಪರಮಾತ್ಮ ಮಾಯೆಯನು ಎದೆಯಲ್ಲಿ ತಾಳ್ದ ಸಿರಿವರನು ಮಾಯೆಯಿಂದಲಿ ಮಾನವಗೆ ಮುಸುಕನು ಹಾಕಿ ತನ್ನ ರೂಪವನಾರು ನೋಡದಂತಿಹನು 21 ಹಿರಿ ಬೆಟ್ಟವನು ತಾನು ಕಿರಿ ಬೆಟ್ಟಿನಲಿ ಹೊತ್ತು ಗೋವುಗಳ ರಕ್ಷಿಸಿದ ಗೋಪಾಲ ನೀನು ವೇದರಕ್ಷಕನಾಗಿ ಗೋವಿಂದನೆನಿಸಿರುವೆ ಶ್ರೀಕೃಷ್ಣ ನಿನ್ನ ಮಹಿಮೆಯನೇನ ಪೇಳ್ವೆ 22 ಚೇಷ್ಟಕನು ಬಲರೂಪನಾಗಿರುವ ಕಾರಣದಿ ವಿಶ್ವದಲ್ಲೆಲ್ಲು ವ್ಯಾಪಿಸಿರುವುದರಿಂ ವಿಷ್ಣುನಾಮದ ನೀನು ವೈಷ್ಣವರ ಕುಲದೊಡೆಯ ಮಧ್ವಹೃನ್ಮಂದಿರದ ನೆಲೆಯಲ್ಲಿ ಇರುವೆ 23 ಮಧುವೆಂಬ ದೈತ್ಯನನು ಸೃಜಿಸಿಯವನನು ಕೊಂದು ಮಧುಸೂದನನು ಎಂಬ ಬಿರುದು ನೀ ಪೊತ್ತೆ ದುರ್ಜನರ ಸಂಹಾರ ಸಜ್ಜನರ ಉದ್ಧಾರ ಎಂಬೆರಡು ಕಾರ್ಯಗಳಿಗಾಗಿಯವತಾರ 24 ತ್ರೈವಿಕ್ರಮಾವತಾರವ ತಾಳ್ದು ದೇವ ಕಾಲ ತೊಳೆದು ಮೂರು ಲೋಕದ ಭಕುತರಿಗೆ ದರ್ಶನವ ಕೊಟ್ಟು ಭಕ್ತರಕ್ಷಕನಾಗಿ ಮೆರೆದೆ ಸಿರಿವರನೆ25 ವಾಮನನು ನೀನಾಗಿ ವಾಮಪಂಥದಿ ಹೋಗಿ ಬಲಿ ಚಕ್ರವರ್ತಿಯಲಿ ಮೂಹೆಜ್ಜೆ ಬೇಡೆ ಭಕುತಿಯಿಂದವ ಕೊಡಲು ಮುಕುತಿಯನು ಕೊಡಲೆಂದು ಬಲಿಯ ಮನೆಯೂಳಿಗವ ಗೈದೆ ಪರಮಾತ್ಮ26 ಸಿರಿಯನೆದೆಯಲಿ ಪೊತ್ತು ಶ್ರೀಧರನು ನೀನಾಗಿ ಸರ್ವ ಭೂಷಣಗಳಿಂ ಶೋಭಿಸುತಲಿರುವೆ ಅನ್ನದಾತನು ನೀನು ಅನ್ನಭೋಕ್ತøವು ನೀನು ಭುಕ್ತಿ ಮುಕ್ತಿ ಪ್ರದನು ನೀನಿರುವೆ ದೇವ 27 ಇಂದ್ರಿಯಗಳು ಹೃಷೀಕಾಭಿಧಾನದಲಿಹವು ನೀನವುಗಳಿಗೆ ಎಲ್ಲ ಒಡೆಯನಾಗಿರುವೆ ಹೃಷೀಕೇಶ ನಾಮವದು ನಿನಗೊಪ್ಪುವದು ಹರಿಯೆ ನನ್ನ ಮನ ನಿನ್ನಡಿಯೊಳಿರುವಂತೆ ಮಾಡು28 ಸಾಗರವನುದರದಲ್ಲಿರಿಸಿ ನೀನದರಿಂದ ನಾಭಿಯಲಿ ಪದುಮವನು ಸೃಷ್ಟಿಸಿದೆ ದೇವಾ ಪದುಮನಾಭನು ನೀನು ಬೊಮ್ಮಪಿತನಾಗಿರುವೆ ಮಾಯಾ ರೂಪವನೇನಪೇಳ್ವೆ29 ಮೊಸರ ಕುಡಿಕೆಯನೊಡೆದು ತಾಯಿಯಿಂ ಬಂಧಿತನು ದಾಮೋದರನು ಎನಿಸಿ ಉಜಡೆಯನ್ನೊಯ್ದು ಮರಗಳೆಡೆಯಲಿ ಪೊಕ್ಕು ಬೀಳಿಸುತಲವುಗಳನು ಭಕುತರಾ ಶಾಪಮೋಚನೆಯ ನೀ ಮಾಡ್ದೆ30 ಕೇಶವನೆ ಮೊದಲಾದ ಪನ್ನೆರಡು ನಾಮಗಳ ಅರ್ಥವರಿತನವರತ ಪೇಳಲವಗೊಲಿದು ಸಂಸಾರ ಬಂಧನವ ತೊಲಗಿಸಿಯೆ ಪರಮಾತ್ಮ ತನ್ನ ಬಳಿಗೊಯ್ಯುವನು ನಿಜ ಪೇಳ್ವೆ ನಾನು31 ಶ್ವೇತ ರಕ್ತವು ಪೀತ ಕೃಷ್ಣ ವರ್ಣಗಳೆಂಬ ನಾಲ್ಕು ಬಣ್ಣದ ದೇವನೊಬ್ಬನೇ ಇಹನು ಕಲಿಯುಗದ ಕಾಲದಲಿ ಕೃಷ್ಣನೊಬ್ಬನ ನೆನೆದು ನಾಮಜಪ ಮಾಡಿದರೆ ಮುಕ್ತಿಯನು ಕೊಡುವ 32
--------------
ನಿಡಂಬೂರು ರಾಮದಾಸ
ಪೂಜಾನುಷ್ಠಾನವ ಯೋಚಿಸಿ ಮನದೊಳುಪೂಜೆ ಷೋಡಶಗಳ ಮಾಜದೆ ಮಾಡಿರೋ ಪ ಉಷಃ ಕಾಲದಲೆದ್ದು | ಝಷಕೇತು ಪಿತ ನಾಮಉಸುರು ತಿಪ್ಪುದೇ ಪೂಜೆಯೋ 1 ಶೌಚ ಬಾಹ್ಯವು ಮೃತ್ತು ಶೌಚ ಮಾಡಿಕೊಂಡುಶುಚಿಷತ್ತು ನಿನ ನಾಮ ಉಚ್ಚರಿಪುದೆ ಪೂಜೆಯೋ2 ತುಲಸಿ ಮೃತ್ತಿಕೆ ಹಚ್ಚಿ | ತುಲಸಿ ವಂದನೆ ಮಾಡಿಅಲಸಾದೆ ಕೃಷ್ಣನ ವಲಿಸೂವುದೇ ಪೂಜೆಯೋ 3 ಗೋವನೆ ಬಳಸುತ್ತ ಗೋಪುಚ್ಛ ಪಿಡಿಯುತ್ತಗೋವ ವಂದಿಪುದೆಲ್ಲ ಗೋಪಾಲ ನಿನ ಪೂಜೆಯೋ4 ಸ್ನಾನ ಸಂಧ್ಯಾನ ಮೇಣೂಧ್ರ್ವ ಪುಂಡ್ರವ ಧರಿಸಿಭಾನುಗಘ್ರ್ಯವ ನೀಯೆ ಶ್ರೀನಿವಾಸ ಪೂಜೆಯೋ 5 ಪಾದ ತೀರ್ಥ ಸೇವನೆ ಪೂಜೆಯೋ 6 ಅಷ್ಟ ಮಹಾಮಂತ್ರ ಶಿಷ್ಪನಾಗುತ ಹೃದಯಅಷ್ಟ ಕಮಲದಲ್ಲಿ ಧ್ಯಾನ ಮಾಳ್ಪುದೆ ಪೂಜೆಯೋ 7 ಮಂಟಪೋತ್ತಮ ಪೂಜೆ ಸುಷ್ಠು ಕಲಶ ಪೂಜೆಶ್ರೇಷ್ಠ ಪಂಚಾಮೃತ ಪೀಠ ಶಂಖ ಪೂಜೆಯೋ 8 ಘಂಟನಾದಾ ಅಖಂಡ ಶ್ರೇಷ್ಠ ದೀವಿಗೆ ಪೂಜೆಪೀಠಾವರಣ ಹೃತ್ಪೀಠ ಚಿಂತನೆ ಪೂಜೆಯೋ 9 ಮೂರ್ತಿ ಗುರುಮೂತ್ರ್ವೆಕ್ಯವೆ ಪೂಜೆಯೋ || ಚಿಂತಿಸಿ ಸ್ವಾಂತಸ್ಥ ಬಿಂಬನೋಳೈಕ್ಯವಚಿಂತಿಸುತ್ತಾನೇಕ ಗೈವ ವೈಭವ ಪೂಜೆಯೋ 11 ಹೃತ್ಪುಂಡರೀಕಗೆ ಕಲ್ಪ ತರುವನೆ ಬೇಡುತ್ತಪ್ರೀತ್ಯಾದ ಮಾನಸ ಪದಾರ್ಥಗಳ ಪೂಜೆಯೋ 12 ಪೂರ್ಣ ಶೃತಿಯ ಭಾವ ಚೆನ್ನಾಗಿ ಗ್ರಹಿಸುತ್ತಪೂರ್ಣನ ಕಳೆಯೊಂದು ಪ್ರತಿಮಾದಲ್ಲಿರಿಸೋ 13 ನಿಷುಸೀದ ಶ್ರುತಿಯಂತೆ ವಸುದೇವ ಕೃಷ್ಣನೆಅಸಮ ಪೂಜಕ ಪೂಜ್ಯ ಅವನೇವೆ ತಿಳಿಯೊ 14 ಬಾಹ್ಯದರ್ಚನೆಗಳು ಶ್ರೀ ಹಸ್ತದಿಂದಲಿವ್ಯಾಹರಣೆಂಬೋದೆ ಹರಿ ಪೂಜೆಯೋ 15 ಆವಾಹನಭಿಷೇಕ ನೈವೇದ್ಯಾದಿ ಪೂಜೆದೇವಗಾರುತಿ ಶಂಖ ಭ್ರಮಣಾದಿ ಪೂಜೆಯೋ 16 ಸರ್ವವನರ್ಪಿಸಿ ಅಸ್ವಾತಂತ್ರ್ಯವ ಗ್ರಹಿಸಿಶರ್ವಾದಿ ವಂದ್ಯ ಬಿಂಬಗೆ ಸರ್ವ ಪೂಜೆಯೋ 17 ಸರ್ವಾಪರಾಧವ ಸರ್ವೇಶನಲಿ ಪೇಳಿವೈಶ್ವ ದೇವಾದಿಗಳ್ ಸತ್ಕರ್ಮಗಳೆ ಪೂಜೆಯೋ 18 ಯತಿಗಳರ್ಚನೆಯನ್ನು ಮತಿಯಿಂದ ಗೈಯುತ್ತಸುತ ವಿಪ್ರಾದಿಯ ಸಹ ಹುತಶೇಷ ಮೆಲ್ಲೋದೆ ಪೂಜೆಯೋ 19 ಪ್ರಾಣಾಗ್ನಿ ಹೋತ್ರಾನು ಸಂಧಾನದಲಿ ಮದ್ದುಪ್ರಾಣನ ಪ್ರಾಣ ವೈಶ್ವಾನರಗೀಯೋದೆ ಪೂಜೇ 20 ಅಂತರಂಗದ ಪೂಜೆಗೊಲಿದ ಸಂತತ ಹರಿಕಂತು ಪಿತನು ಗುರು ಗೋವಿಂದ ವಿಠಲಾ 21
--------------
ಗುರುಗೋವಿಂದವಿಠಲರು
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಭಕ್ತಿಗೆ ಮೂರು ಗುಣಗಳು ಬೇಕು ಯುಕ್ತಿವಂತರು ಕೇಳಿ ಮುಕ್ತಿಶೀಲವು ತಿಳಿದು ನಿಜವಿರಕ್ತತನದಲಿ ಬಾಳಿ ಧ್ರುವ ಪ್ರೇಮ ಪ್ರೀತಿ ರತಿ ನೇಮದಲಿ ಶ್ರೀಸ್ವಾಮಿ ಚರಣದಲಿಡಬೇಕು ಸೌಮ್ಯ ಸಮಾಧಾನದಲಿ ತಾನಮೃತವನು ಹಿಡಿಯಬೇಕು ನಿರ್ಮಳದಲಿ ನಡಿಬೇಕು ಪಡೆದು ಸಮದೃಷ್ಟಿಗುಡಬೇಕು 1 ನಿತ್ಯ ವಿವೇಕವು ತಿಳಿದು ಪಥ್ಯದಲಿ ನಡಿಯಬೇಕು ಚಿತ್ತವೃತ್ತಿ ಸವೃತ್ತಿಯ ಮಾಡಿ ಸತ್ಯದಲಿ ನುಡಿಯಬೆಕು ಉತ್ತಮೋತ್ತಮ ವಸ್ತುದ ನಿಜಸುಖ ಹೃತ್ಕಮಲದಲಿಡಬೇಕು ಭಕ್ತಿಗೆ ಭಾವನೆ ಬಲಗೊಂಡು ವೈರಾಗ್ಯದ ಸುಖ ತೊಡಬೇಕು 2 ಸೋಹ್ಯ ಸೋನ್ನಿಯ ಸೂತ್ರವ ತಿಳಿದು ಸ್ಥಾಯಿಕನಾಗಿರಬೇಕು ಧ್ಯೇಯಧ್ಯಾತಧ್ಯಾನವ ತಿಳಿದು ಮಾಯದ ಮೊನೆ ಮುರಿಬೇಕು ನ್ಯಾಯ ನೀತಿಯ ನೆಲೆನಿಭವನು ಉಪಾಯದಲಿ ಅರಿಯಬೇಕು ಪಾಯಕನಾಗನುದಿನ ಮಹಿಪತಿ ಗುರುಪಾದದಿ ಸ್ಥಿರವಿರಬೇಕು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಂಗಳಾಂಗನ ಭಜಿಸೆ ಹಿಂಗಿಸುವ ಭವವ ಎನ್ನಂಗದೊಳಡಗಿಹನೊ ಶ್ರಿಂಗಾರ ಮೂರುತೀ ಪ. ಧ್ಯಾನಕೆ ತಂದು ನಿಧಾನದಲಿ ಯೋಚಿಸು ಜ್ಞಾನಿಗಳರಸನ ಮಾನಸದೊಳಗೆ ಕಾನನದೊಳು ವೃದ್ಧ ಶಬರಿಯೆಂಜಲನುಂಡು ದಾನಶೀಲನು ರಾಮ ಕೈವಲ್ಯವನಿತ್ತಾ 1 ದುಷ್ಟ ಕಂಸನ ಹರಿಸಲು ಉತ್ಕøಷ್ಟ ಕೃಷ್ಣ ಬರೆ ಸೃಷ್ಟಿಗೊಡೆಯಗೆ ಗಂಧವಿತ್ತಳಾ ಕುಬ್ಜಿ ದಿಟ್ಟ ರೂಪವ ಉಂಗುಷ್ಠದಿಂದೊತ್ತುತ್ತ ಭಕ್ತ ರಿಷ್ಟವನು ಸಲಿಸಲು ಕಷ್ಟವೇ ಹರಿಗೆ 2 ಯಾವಾಗ ಸ್ತುತಿಸಿದರು ಮತ್ತಾವಲ್ಲಿ ಕರೆದರೂ ಧಾವತಿಗೊಂಡು ಬಹ ಶ್ರೀ ಶ್ರೀನಿವಾಸ ಹಾವಭಾವದ ತೆರದಿ ದೇವ ಬಂದೊದಗುವ ಮತ್ತಾವ ದೇವರ ಕಾಣೆ ಶ್ರೀವರನಲದೇ 3
--------------
ಸರಸ್ವತಿ ಬಾಯಿ
ಶ್ರೀನಾಥ ಸಲಹೊ ಸತತ ನಿನ್ನ ಪದ ಧ್ಯಾನಾನಂದವಿತ್ತು ಪ ತಂದೆ ನಿನ್ನನುಗ್ರಹದಿ | ಜಗದೊಳಗೆ ಬಂದೆ ಭೂಸುರ ಜನ್ಮದಿ ಪೊಂದಿ ತ್ವತ್ವದ ಭಜಿಸದೆ ಭವದೊಳಗೆ ಬೆಂದು ಬೆಂಡಾದೆನು ನಾ1 ಪಗೆಯಾರುಖಳರು ಎನ್ನ | ಪಾಶದಲಿ ಬಿಗಿದು ಬಂಧಿನಿ ಎಳೆಯುತ || ಬಗೆ ಬಗೆಯ ಮಂಗನಂತೆ ಕುಣಿಸ್ಯಾಡಿ ಹಗರಣವ ಮಾಡುತಿಹರೋ 2 ಪರಸ್ವತಿಯರ ರೂಪನೋಡಿ | ಮರಳಾಗಿ ಬೆರೆತವಳ ಕ್ರೀಡಿಸುತಲಿ ಪರಗತಿಯ ಚಿಂತೆ ಬಿಟ್ಟು | ಪರಮಾತ್ಮ ನರಕಕ್ಕೆ ಗುರಿಯಾದೆನೋ 3 ಧನದಾಪೇಕ್ಷೆಯಿಂದ | ಧನಿಕರ ಮನೆಗ್ಹೋಗಿ ಲಜ್ಜೆ ತ್ಯಜಿಸಿ ಘನದಾತರೆಂದವರನು | ಬಲು ತುತಿಸಿ ದಿನಗಳೆದೆ ಶುನಕನಂತೆ 4 ಹರಿನಿನ್ನವಾಸರದಿ | ಉಪವಾಸ ಇರುಳು ಜಾಗರವ ಜರಿದು ಬರಿದೆ ಕಾಲವ ಕಳೆದೆನೋ ರವಿಸುತಗೆ | ಅರುಹಲು ಬಾಯಿಲ್ಲವೋ 5 ಪವಮಾನ ಕೃತಸುಶಾಸ್ತ್ರ | ಪ್ರವಚನವ ಕಿವಿಗೊಟ್ಟು ಕೇಳಲಿಲ್ಲ ಅವನಿ ದ್ವಿಜರ ಪಾದವ ಸೇವಿಸದೆ ಭಾರ ನಾನಾದೆನೊ 6 ಬಾಯೆಂದು ಕೂಗಿ ಕರೆವೆ | ಸರ್ವೇಶ ಓಯೆಂದು ಬೇಗ ಬಾರೋ || ಮಾಯಾ ಮೋಹವನೆ ಬಿಡಿಸೋ | ನಿನ್ನಂಘ್ರಿ ತೋಯಜಧ್ಯಾನವನಿತ್ತು 7 ಶಿಲೆಯಾದ ಸಲಹಿದ ತೆರದಿಲಿ ತುಳಿದು ಸಲಹಿದ ತೆರದಲಿ ಇಳಿಸುರನ ಮಹತ್ಪಾಪ ಕಳೆದವಗೆ ಸಲೆಮುಕ್ತಿ ಸಲಿಸಿದಂತೆ 8 ಇಂದಿನಾರಭ್ಯವಾಗಿ | ಎನ್ನಿಂದ ನಿಂದ್ಯಕರ್ಮವ ನಡೆಸದೆ ಮಂದರೋದ್ಮರನೆ ನಿನ್ನ |ಸದ್ಭಕ್ತ ವೃಂದದೊಳು ಕೂಡಿಸಯ್ಯ 9 ಅಪರಾಧ ಕ್ಷಮಿಸುವಲ್ಲಿ | ನಿನ್ನಂಥ ಕೃಪಣವತ್ಸಲ ಕಾಣೆ ಕೃಪೆಯಿಂದ ಕರಪಿಡಿಯೊ ಕರಿವರದ ಕೌಸ್ತುಭ ಕೃಷ್ಣ 10 ನಿನ್ನ ನಾಮದ ಭೂಸುರ ಕುಲಹೀನ ಕನ್ಯೆಯಳ ಸಂಗ ಮಾಡಿ ನಿನ್ನ ಪರ್ವತ ಮೆಟ್ಟಿಲು ಅವಗೊಲಿದು ನಿನ್ನಾಪ್ತನೆನಿಸಿದಂತೆ 11 ನಿನ್ನೊಲುಮೆ ಪಾತ್ರರಾದ ಗುರು ಜಗನ್ನಾಥಾಖ್ಯ ದಾಸಾರ್ಯರ ಸನ್ನಿಧಾನದಲಿ ಇಪ್ಪ | ಇವನೆಂದು ಮನ್ನಿಸೊ ಮಹಮಹಿನೆ 12 ದುರಿತ ರಾಶಿ | ಪೇಳಲ್ಕೆ ಭೂಮಿಧರಗಳವಲ್ಲವೋ ಪ್ರೇಮದಿಂದಲಿ ಪಾಲಿಸೋಮಮಸ್ವಾಮಿ ಶಾಮಸುಂದರ ದಯಾಳು 13
--------------
ಶಾಮಸುಂದರ ವಿಠಲ
ಮರತೆ ನೀ ಕಂಡ್ಯ ಮನವೇ ಎಚ್ಚರವುಗುರುವರನ ನೆನೆಯೋ ನೀನುಅರಿತು ಸರ್ವಸರ್ವರಲ್ಲಿ ಆತ ತಾನಿಹನೆಂದುಹಿಂದು ನೆಲೆಗೊಳಿಸು ಬೇಗಪಅಣುಮಹತ್ತಾದನೆಂದುಅನಂತ ಗುಣಗಣನೆಯಾದನೆಂದುಎಣಿಸೆ ಏಕ ದೇವಾದವನಕುಣಿಕುಣಿದು ನೆನೆದು ಆಡುವಾಡು1ಆವಾವಸ್ಥೆಯ ತೋರ್ಪಅವನೆಲ್ಲ ತೀವಿಹನು ಪೂರ್ಣನಾಗಿದೇವದೇವಾದವನ ಧೈರ್ಯದಿಂ ಹೃದಯದಲಿಸಾವಧಾನದಲಿ ನಿಲಿಸು ಬಲಿಸು2ನಿರುಪಮ ನಿರಾಶಾಪರ ನಾನಿಶ್ಚಿಂತ ನಿರುತ ನಿರ್ಲೇಪನಾಪರಮಪಾವನಮೂರ್ತಿಪದ್ಮಾವತಿ ಶತಕೋಟಿವರಚಿದಾನಂದ ಗುರುವಾ ಸ್ಥಿರವಾ3
--------------
ಚಿದಾನಂದ ಅವಧೂತರು