ಒಟ್ಟು 10 ಕಡೆಗಳಲ್ಲಿ , 6 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉರುಟಣಿಯಾ ಸರಸಿಜನಾಭಾಗ್ಹರುಷದಲಿ ಮಾಡುವೆನಾ ಪ ಶಂಖಚಕ್ರಧರಾ ವೆಂಕಟೇಶ ನಿಮಗೆ | ಕುಂಕುಮ ಹಚ್ಚುವೆ ಪಂಕಜಾಕ್ಷಿ ನಾ 1 ನಂದಗೋಪಿಕಂದ ಹಚ್ಚುವೆ ಗಂಧ ಹಚ್ಚುವೆ ಸುಗಂಧ | ಮುಕುಂದಗೆ 2 ಯಶೋದೆಯ ಬಾಲಾ ಕಾಮಿತಶೀಲಾ ಹಾಕುವೆನು ಮಾಲಾ ಗೋಪಾಲಗೆ 3 ಪೊಡವಿ ಪಾಲಿಪಾ | ಕಡಲಶಯನಾ | ಕೊಡುವೆನು ವಿಡಾ ಪಿಡಿ ಬೇಗನೆ 4 ಪೊಡವಿ ಪಾಲಿಪಾ ಕಡಲಶಯನಾ | ವಂದಿಸಿ ಪ್ರಾರ್ಥನೆಗೈಯುವೆನಾ 5
--------------
ಶಾಮಸುಂದರ ವಿಠಲ
ಎಂದ ಮಾತು ಚಂದವಾಯಿತಿಂದು ಗೋಪಿ-ಮುನಿ-ಸಿಂದ ನಮ್ಮನಾಡಲೇಕೆ ನಂದಗೋಪಿ ಪ ಗೋಪಿ 1 ಕರಿಯ ಭಂಟ ಕಳ್ಳ ಕೃಷ್ಣ ಕಾಣೆ ಗೋಪಿ- ಹತ್ತಿಲಿರುವ ಹರಿಯು ಬಲು ತುಂಟ ಕಾಣೆ ಗೋಪಿ2 ಗೋಪಿ 3 ಅಪರಿಮಿತದಾಟಗಾರನಿವ ಗೋಪಿ-ಕೃಷ್ಣಕಪಟನಾಟಕ ಸೂತ್ರಧಾರ ಗೋಪಿ4 ಗೋಪಿ 5 ದಾತ ಗೋಪಿ 6 ಗೋಪಿ 7
--------------
ವ್ಯಾಸರಾಯರು
ಗಿಣಿಯೆ ನಿನಗೇನು ಬೇಕದನೀವೆ ಹಯವದನ-ನೆನಿಪ ಹರಿಯನು ಕರೆತಾರೆ ಗಿಣಿಯೆಮುನಿ ವಾದಿರಾಜನಿಗೆ ವರವೀವ ದೇವನವನೆನೆವವರ ಬಿಡನೆಲೆ ಗಿಣಿಯೆ ಪ. ವೃಂದಾವನದಿ ಚಂದ್ರನಂತೆಸೆವ ಗೋವಿಂದಚಂದದಿ ನಿನ್ನ ಮಾತ ಮನ್ನಿಸುವನಂದಗೋಪಿಯ ಮುದ್ದುಕಂದನೆನಿಪ ಮುಕುಂದನ-ನಿಂದಿರುಳು ತಂದು ತೋರು ಗಿಣಿಯೆ 1 ಮೂರು ಬಣ್ಣದ ಕೊರಳ ತಿರಿಯುಳ್ಳ ಗಿಣಿ ನೀನುಮೂರು ಬಣ್ಣದ ಚಾರುನಯನಮಾರನನುಚರ ನೀನು ಮಾರನ ಜನಕನವನುಮೀರ ನಿನ್ನ ಬಿನ್ನಪವ ಗಿಣಿಯೆ 2 ಸತತ ಸಿರಿದೇವಿಯರ ಸುತನೆನಿಪ ಕಾಮನಿಗೆರಥವಾಗಿ ಮೆರೆವೆ ನೀ ಗಿಣಿಯೆಕೃತಕೃತ್ಯನಾದರೂ ಅದರಿಂದ ನಿನ್ನ ಮಾತಪ್ರತಿಪಾಲಿಸುವನೆÉಲೆ ಗಿಣಿಯೆ 3 ಎಲ್ಲರು ಭುಂಜಿಸುವ ಮೊದಲೆ ಭುಂಜಿಸುವ ನಮ್ಮಿನಿಯಬಲ್ಲಿದಾತನ ಬಿರುದ ನಿನಗಿತ್ತಚೆಲುವ ಸಸಿಗಳ ತೆನೆಯ ತಂದು ತಂದು ಮೆಲುವೆ ಗಡಸಲುವುದು ಮೋಹನದ ಗಿಣಿಯೆ 4 ಪಚ್ಚೆಯ ಬಣ್ಣದ ಗರಿಯ ಸಿರಿಯುಳ್ಳ ಗಿಣಿ ನೀನುಪಚ್ಚೆಯ ಬಣ್ಣದ ವ್ಯಾಸನವನುಎಚ್ಚರಿಸಿ ಕೊಡುತಿದೆ ನಿನ್ನ ಕಂಡರಾ ಮುನಿಯಮೆಚ್ಚಿದೆ ನಾನವನ ತಂದು ತೋರು ಗಿಣಿಯೆ 5 ಕೆಂದಾವರೆಯ ಪೋಲ್ವ ನಿನ್ನ ಚರಣ ಹರಿಯ ಪದದÀಂದವನು[ತಂದುತೋರು]ಗಿಣಿಯೆಚೆಂದದ ಅವನ ಚೆಂದುಟಿಯಂತೆ ನಿನ್ನ ಚೆಲುವ ಮುಖ ಕೆಂಪುತÀಂದು ಮುಂದಿರಿಸು ನೀ ಗಿಣಿಯೆ6 ಅವನ ವಾಹನನೆನಿಪ ಗರುಡನ ಕುಲದಲುದ್ಭವಿಸಿ-ದವ ನೀನೆಲೆ ಗಿಣಿಯೆಅವನ ಮುದ್ದು ನುಡಿಯ ಬಲ್ಲರೆ ನೀನು ಜಗದೊಳಗೆಸವಿಮಾತುಗಳ ನುಡಿವೆ ಗಿಣಿಯೆ 7 ಗಮನ ನಿನಗೆಸೊಗಸುನುಡಿಯಿಂದವನ ಪದಕೆ ಬಿನ್ನಹ ಮಾಡಿಸುಗುಣನ ಕರೆತಾರೆ ಗಿಣಿಯೆ8 ತಮ್ಮ ತಮ್ಮ ಮನೆಗಳಲ್ಲಿ ರಮೆಯರಸ ಕೃಷ್ಣನ-ನು ಮನದಲ್ಲಿ ಅರ್ಚಿಸಿ [ಪೂಜಿಸುವರು]ಸುಮುಖನೆಂದು ನಿನ್ನ ಮನೆಯ ಚಾವಡಿಯಲಿ ಇಹ-ನ ಮನ್ನಿಪರೆಲೆ ಗಿಣಿಯೆ 9 ಉರದಲ್ಲಿ ಸಿರಿವತ್ಸಯೆಂಬ ಕುರುಹುಂಟವಗೆಕರಗಳಲಿ ಶಂಖಚಕ್ರಗಳು ಕೊರಳಲ್ಲಿ ಕೌಸ್ತುಭಮಣಿಯಿಹ ಹಯವದನ ನ-ಮ್ಮರಸನೆಂದರಿತುಕೊ ಗಿಣಿಯೆ 10
--------------
ವಾದಿರಾಜ
ದೇವ ದೇವ ದೇವ ದಿವಿಜರೊಡಿಯನೆ ಭಾವ ಪೂರ್ವಕ ವಿಧದಿ ಭಜಿಸುವೆನು ನಾನು ಪ ನಂದಗೋಪಿಯ ಕಂದನಾದ ಸುಂದರಾಂಗನೆ ಸಿಂಧುಶಯನ ಮಂದರಧರ ಇಂದಿರೇಶನೆ ಎಂದು ನಿನ್ನ ಪೊಂದಿದವರನಂದ ಪೊರೆವನೆ 1 ಹೆಂಗಳೆರ ಸಂಗವುಳ್ಳ ಮಂಗಳಾಂಗನೆ ಶೃಂಗಾರಾಂಗ ರಮಾಸಂಗವುಳ್ಳ ರಂಗನೆ ಗಂಗಾಜನಕ ನೀರಜಾಂಬಕ ಗಾನಲೋಲನೆ ಮಂಗಳಕರದಿಂದ ಲಭಯಂಗಳೀವನೆ 2 ರನ್ನೆ ಸೀತೆಯನ್ನು ವೈದವನ್ನ ತರಿದನೆ ನಿನ್ನವರಿವರೆನ್ನುವವರನ್ನು ಕಾಯ್ವನೆ ಪನ್ನಗಶಯನನಾದ ಚೆನ್ನ ನೀವನೆ ಘನ್ನ ' ಶ್ರೀ ಹೆನ್ನೆವಿಠಲ’ ನನ್ನ ಕಾರುಣಿ 3
--------------
ಹೆನ್ನೆರಂಗದಾಸರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ರಂಗ ಬಂದ ಬೃಂದಾವನದಲಿ ನಿಂದಕೊಳಲಿನ ಧ್ವನಿ ಬಹು ಚೆಂದ ಪ ನಂದಗೋಪಿಯರ ಕಂದ ಮುಕುಂದಸುಂದರಿಯರ ಆನಂದ ಗೋವಿಂದ ಅ.ಪ ಮಂದಗಮನೇರ ಕೂಡಿ ಸರಸವನಾಡುತಇಂದಿರೆಯರಸ ನಗುತ ಕೊಳಲನೂದುತಎಂದೆಂದಿಗೂ ತನ್ನ ನಂಬಿದ ಭಕ್ತರಬಂದು ಪೊರೆವ ಗೋವಿಂದ ಮುಕುಂದ 1 ಉದಧಿ ಸಂಚಾರ ಗುಣಗಂಭೀರನವನೀತದಧಿ ಭಾಂಡಚೋರ ರುಗ್ಮಿಣಿ ಮನೋಹರಮದನ ಗೋಪಾಲನು ಭಜಿಸುವ ಭಕುತರಹೃದಯದೊಳಗೆ ನಿಂದು ಮುದವನು ಕೊಡುವ2 ಮಧುರೆಯಿಂದಲಿ ಬಂದ ಮಾವನ್ನ ಕೊಂದಕಡೆಗೋಲ ನೇಣ ಕೈಲಿ ಪಿಡಿದ ದ್ವಾರಕಾವಾಸಹಡಗಿನಿಂದಲಿ ಬಂದು ಉಡುಪಿಲಿ ನೆಲೆಸುತಬಿಡದೆ ಪೂಜೆಗೊಂಬ ಒಡೆಯ ಶ್ರೀಕೃಷ್ಣ3
--------------
ವ್ಯಾಸರಾಯರು
ಶ್ರೀಶ ಕೇಶವ ಮಾಧವ ವಾಸವ ವಂದಿತ ಪ ಸಾಸಿರನಾಮನೆ ಭೂಸುರಪಾಲನೆ ದೋಷವಿದೂರನೆ ಶೇಷಶಯನಹರಿ 1 ಇಂದಿರಾರಮಣನೆ ನಂದಗೋಪಿಯ ಕಂದ ಮಂದರಧರ ಗೋವಿಂದ ಗೋ ಗೋಪಪಾಲ2 ಭುವನ ಮೋಹನರೂಪ ನವನವ ಚರಿತನೆ ನವನೀತಧರ ಕೃಷ್ಣ ಭುವನ ವಿಲಕ್ಷಣನೆ 3 ರಂಗನಾಯಕನೆ ಪ್ಲವಂಗ ವತ್ಸರದೊಳು ಭಂಗಗಳಳಿಯುವ ಶೃಂಗಾರ ಮೂರುತಿ4 ಶ್ರಮ ಪರಿಹರಿಸುತ ಮಮತೆಯಿಂದಲಿ ಕಾಯ್ವಸುಮನಸವಂದ್ಯ ಶ್ರೀ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಬಾ ಬಾ ಬಾ ಬಾರೋ ಕೃಷ್ಣಬಾರೋ ಮುಖವ ತೋರೋ ಪಬಾರೋ ಮುಖವ ತೋರೋಸರಸಾಮೃತ ಬೀರೋ ಬಾ ಬಾ ಬಾ 1ಸಾ ಸಾ ಸಾ ಸಾಕೋ ನಿನಗೀಲೋಕಮಾಯ ಮೋಹನಾ |ಲೋಕಮಾಯ ಮೋಹನಾ |ಶೋಕನೇಕ ನಾಶನಾ 2ಕೋ ಕೋ ಕೋ ಕೊಡಿಸೊನಮ್ಮ ಉಡುವ ಶೀರೆಕುಪ್ಪಸಾ |ಉಡುವ ಶೀರೆ ಕುಪ್ಪಸಾ |ಮಡದಿಯರಿಗೆ ಒಪ್ಪಿಸಾ 3ಅಲ್ಲ ಲ್ಲ ಲ್ಲ ಲ್ಲದಿದನೆಲ್ಲಗೋಪಿವಲ್ಲಭನೊಳ್ | ಎಲ್ಲಗೋಪಿವಲ್ಲಭನೊಳ್ |ಸೊಲ್ಲಿಸುವೆವು ನಿಲ್ಲದೇ 4ನಂದಂದನ ನಂದಗೋಪಿ|ಕಂದನೇ ಮುಕುಂದನೆ |ಕಂದನೇ ಮುಕುಂದನೇ|ಸುಂದರಾ ಗೋವಿಂದನೇ 5
--------------
ಗೋವಿಂದದಾಸ
ಮರವನೇರಿ ಮಡುವದು ಮುಂದಾ ಶ್ರೀ ಕೃಷ್ಣ ಕಾಳಿಶಿರವನೇರಿ ತಾಂಡವವಾಡಿದಾಸ್ಮರಿಸಲವನ ತರುಣಿಯರಿಗೆ ವರವ ಪ್ರಾಣವಿರಿಸಿ ಕೊಟ್ಟುಶಿರದಿಚರಣಗುರುತನಿರಿಸಿ ಪೊರೆದ ಕಾಳಿಂಗನನು ಕೃಷ್ಣ 1ರಜತಗಿರಿಗೆ ಸದೃಶವೆನಿಸಿದ ಶ್ರೀಕೃಷ್ಣ ಯಮ-ಳಾರ್ಜುನವೆಂಬ ಮರವ ಕೆಡಹಿದಅಜಗರನ ನಿಜ ಉರಕೆ ಬಿಜಯಂಗೈದು ಸುಜನೋದ್ಭಾರಿಭಜಿಸೆ ಗೋವ್ರಜವ ಕಾಯ್ದ ಅಜಗರನ ಸೀಳಿ ಕೃಷ್ಣ 2ಚಂದ್ರಮುಖಿಯರುಡುವ ಶೀರೆಯ ಶ್ರೀಕೃಷ್ಣನು ಮರದಿಬಂಧಿಸಿಟ್ಟು ಮಾನಗಳೆವೆಯಾನಂದನನ್ನು ಬಂದು ತುಡುಕಿದಂದು ಫಣಿಯ ಹೊಂದಿಸಿದೆನಂದಗೋಪಿ ಕಂದ ಗೋವಿಂದದಾಸವಂದ್ಯ 3
--------------
ಗೋವಿಂದದಾಸ
ಶ್ರೀಧರಾ ಸುಶೀಲ |ಸುಜನಪಾಲಪಾಹಿಮಾಂ | ನಮೋ ನಮಃ |ಶ್ರೀಧರಾ ಸುಶೀಲಸುಜನಪಾಲ ಪಾಹಿಮಾಂಪಮಾಧವಮಹಿಮ ಸಾಧು ಸಜ್ಜನ ಪ್ರೇಮ |ಮೋದವಿನೋದಾ ಸುಪಾದಕೆ ನಮೋ ನಮಃ1ನಾಶನಕರ್ತವಿನಾಶನ ಚರಿತ | ದಾಸವಿಶೇಷ |ಸರ್ವೇಶನೇ ನಮೋ ನಮಃ2xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಶಂಕರ ಸಖನೆ ಶ್ರೀ ವೆಂಕಟರಮಣ |ಶಂಖ ಚಕ್ರಾಂಕ ಸರ್ವಾಂಕಿತ ನಮೋ ನಮಃ3ಚಂದ್ರ ಸಮಾನ್ವಿತ ನಂದಗೋಪಿಯಸುತ |ನಂದ ಮುಕುಂದ ಗೊೀವಿಂದನೇ ನಮೋ ನಮಃ4
--------------
ಗೋವಿಂದದಾಸ