ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಹೆದರಿಕೆ ಯಾತರದೋ ತ್ರಿಜಗದಿ ಪಾದ ಸದಮಲದಾಸರಿಗೆ ಪ ಗರುಡನ ಮಂತ್ರಕೆ ಉರಗನ ಭಯವುಂಟೆ ದುರಿತದಂಜಿಕೆಯುಂಟೆ ನರಹರಿಸ್ಮರಣೆಗೆ 1 ಬಿರುಗಾಳಿ ಬೀಸಲು ಗಿರಿ ನಡುಗುವುದುಂಟೆ ಪರಿಭವ ಬಂಧಮುಂಟೆ ಸಿರಿವರನರ್ಚಕರಿಗೆ 2 ಶ್ರೀರಾಮನಡಿವಾರಿಜಭಜಕರ್ಗೆ ಸಾರಮೋಕ್ಷಂಗಳು ದೂರವಿನ್ನುಂಟೆ 3