ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಜಮುಖ ಗಣಪನಂಬುಜಪಾದಕ್ಕೆರಗುವೆ ನಿಜವಾದ ವರವ ನಾ ಬೇಡಿಕೊಂಬೆ ಅಜನರಸಿಗೆ ಅತಿ ಭಕ್ತಿಂದೆ ಭಜಿಸುವೆ ತ್ರಿಜಗವಂದಿತನ ಕತೆಯ ಪೇಳ್ವೆನು 1 ಗೋಕುಲದೊಳಗೆಲ್ಲ ಗೋಪಾಂಗನೇರು ಕೂಡಿ ಏಕವಾಗಿ ಮಾತನಾಡಿಕೊಂಡು ತಾವು ಅ- ನೇಕ ಸಂಭ್ರಮದಿಂದ ಆಡಿ ನೀರಾಟವ ಬೇಕಾದೂಟವನುಂಡು ಬರುವೋಣೆಂದು 2 ಘೃತ ಪರಮಾನ್ನವು ಚಕ್ಕುಲಿ ಗಿಲುಗಂಜಿ ಗುಳ್ಳೋರಿಗೆ ಬುಂದ್ಯ ಭಕ್ಷ್ಯ ಮಂಡಿಗೆ ಫೇಣಿ ಬುತ್ತಿ ಚಿತ್ರಾನ್ನ ಹಪ್ಪಳ ಸಂಡಿಗಂಬೋಡುಪ್ಪಿನಕಾಯಿಗಳು 3 ಕೇಸರಿ ಕುಂಕುಮರಿಷಿಣ ಅಚ್ಚಮಲ್ಲಿಗೆ ಶಾವಂತಿಗೆ ಸರವು ದಿವ್ಯ ಕರ್ಪೂರದಡಿಕೆ ಯಾಲಕ್ಕಿ ಎಲೆಯ ಸುಣ್ಣ ಪತ್ರೆ ಲವಂಗ ತಬಕಿಲೆ ತಂದರು 4 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆ ಸಂಪಿಗೆ ಮುಡಿದು ದಿವ್ಯ ಕೊರಳ ಕಟ್ಟಾಣಿ ಸರಿಗೆ ಚಂದ್ರಹಾರ ಪು- ತ್ಥಳಿ ಪಚ್ಚಪದಕಗಳ್ಹೊಳೆಯುತಲಿ 5 ಕಡಗ ಕಂಕಣ ದ್ವಾರ್ಯ ನಾಗಮುರಿಗೆ ವಂಕಿ ಬಿಡಿಮುತ್ತಿನ ಗೊಂಡ್ಯ ಬಾಜುಬಂದು ದೊಡ್ಡ ವಾಲೆ ಸರಪಳಿ ಮುತ್ತು ಬು- ಗುಡಿ ಚಂದರ ಬಾಳ್ಯ ಹೊಳೆಯುತಲಿ 6 ಮುದ್ದು ಮೋರೆಗೆ ತಕ್ಕ ಮುಕುರ್ಯ ಬುಲಾಕನಿಟ್ಟ ವ- ಜ್ರದ್ಹರಳು ಬಲಮೂಗಿನಲಿ ದಿವ್ಯ ತಿದ್ದಿ ಮುಂಗುರುಳು ಮುತ್ತಿನ ಬೊಟ್ಟು ಕುಂಕುಮ ಪದ್ಮದ್ಹೂವಿನ ಕುಬುಸಗಳ ತೊಟ್ಟು 7 ಹರದಿಯರೆಲ್ಲರು ಪರಮ ಸುಭ್ರಮದಿಂದ ಜರದ ಪೀತಾಂಬರ್ವಜ್ಜರದ ಪಟ್ಟಿನಿಟ್ಟು ಪರಿ ಬಣ್ಣ ಸೀರೆಗಳುಟ್ಟು ಕಾಲ- ಲಿ ರುಳಿ ಕಾಲುಂಗರ ಗೆಜ್ಜೆ ಪೈಜಣವು 8 ಚೆಲ್ವೆಯರೆಲ್ಲರು ಉಲ್ಲಾಸದಿಂದಲಿ ಘುಲ್ಲು ಘಲ್ಲೆಂದು ಹೆಜ್ಜನಿಡುತ ತಾವು ಮಲ್ಲೆ ಮಲ್ಲಿಗೆ ಪುನ್ನಾಗ ಸಂಪಿಗೆ ತೋಟ ಅಲ್ಲಲ್ಲೆ ನಿಂತು ನೋಡುತ ಬಂದರು 9 ಕುಂದ ಮಂದಾರ ಸುಗಂಧಿಕ ದವನವು ಬಂಗಾರದಂಥ ಕ್ಯಾದಿಗೆಯಮಲ ಚೊಕ್ಕ ದುಂಡುಮಲ್ಲಿಗೆ ಪಾರಿಜಾತ ತಾವರೆಮೊಗ್ಗು ಚೆಂದ ಚೆಂದದ ಶಾವಂತಿಗೆ ವನವು 10 ಹತ್ತಿ ಆಲದ ಮರ ಅಡಕೆ ತೆಂಗಿನ ಮರ ಅ- ಶ್ವತ್ಥ ಕಪಿತ್ಥ ಕಿತ್ತಳೆ ಹಲಸು ನೋಡು- ತ್ತತ್ತಿ ದ್ರಾಕ್ಷಿ ನೀರಲ ನಿಂಬೆ ದಾಳಿಂಬ್ರ ಪಕ್ವಾದ ಜಂಬು ಸೀತಾಫಲವು 11 ಎಲೆದೋಟದೊಳಗೆ ಯಾಲಕ್ಕಿಗೊನೆಯು ನೋಡೆ ಕಳಿತ ಮಾವಿನ ಹಣ್ಣು ಕದಳೀ ಫಲ ಬೋರೆ ಶ್ರೀತುಳಸಿ ವನಗಳಲ್ಲೆ ಅರಿಷಿಣಂಜೂರಿ ಔದುಂಬ್ರ ಫಲ 12 ಚಕೋರ ಚಾತಕ ಗಿಳಿ ಚಕ್ರವಾಕ ಪಕ್ಷಿ ಗಿಳಿಹಿಂಡು ಗಂಡೆರಳೆ ಗರುಡ ಹಂಸವು ನೋಡೆ ಹರಿ ಬ್ರಹ್ಮ ತಂದೆ ಮಕ್ಕಳು ಏರೋವಾಹನವು 13 ಕಸ್ತೂರಿಮೃಗ ಪುನುಗಿನ ಬೆಕ್ಕು ಪಾರ್ವಾಳ ಜಕ್ವಕ್ಕಿ ಕೊಳಲ್ಹಕ್ಕಿ ಸಾರಂಗವು ಚಾರಿ ಕುಕ್ಕುಟ ಭೈರುಂಡ ಎಡಖಗ ಬಲಕ್ಕಾಗಿ ಕೊಟ್ಟವು ಶಕುನ ಜಲಕ್ರೀಡೆಗೆ 14 ಕಾಳಿಮರ್ದನ ಕೃಷ್ಣ ಹಾರಿದ ಮಡುವಿದು ಕಾಳಿಂಗನೋಡಿಸಿ ಕಳೆದ ವಿಷ ಕೆಟ್ಟ ನೋಡೆ ಅಮೃತಕೆ ಮಿಗಿಲಾಗಿದೆ ಈ ಜಲ ಏನು ಪುಣ್ಯ ಮಾಡಿದ್ದಳೊ ಯಮುನಾ 15 ನೀಲ ಮಾಣಿಕ್ಯ ಮುತ್ತು ಕೂಡಿಸಿದಂತೆ ತ್ರಿವೇಣಿ ಆ- ದಳು ತಾ ಪ್ರಯಾಗದಲಿ ತ್ರಿವೇಣಿ ಭಾಗೀರಥಿ ಸರಸ್ವತಿ ಕೂಡಿ ಸಂಗಮಳಾಗಿ ಪೋಗೋಳು ಕಾಶಿ ಪಟ್ಟಣಕೆ 16 ಕಮಲಸಖನ ಪುತ್ರಿ ಕಾಮಿತ ಫಲಕೊಟ್ಟು ವರುಣನರ್ಧಾಂಗಿ ನೀ ವರವ ಕೊಡೆ ತಾಯೆ ಯಮಧರ್ಮರಾಯನ ಭಗಿನಿ ನಿಮ್ಮ ಸ್ನಾನ- ಫಲಕೊಟ್ಟು ಪಾಲಿಸೀಗೆಂದೆನುತ 17 ನೋಡುತ ನಗುತ ಮಾತಾಡುತ ನಿಂತರು ಓಡುತಾವೆ ಜಲ ಸೆಳವಿನಿಂದ ಆಹ ಮಾಡುವೋಣ್ಹ್ಯಾಗೆ ಸ್ನಾನವ ನಾವು ಎನುತಲಿ ಜೋಡಿಸಿ ತಮ್ಮ ್ಹಸ್ತ ಮುಗಿದರಾಗ 18 ಉಟ್ಟ ಸೀರೆಗಳನು ಬಿಟ್ಟು ಕುಪ್ಪಸ ಕಟ್ಟಿ ಇಟ್ಟರು ಉಸುಕಿನ ಮಿಟ್ಟಿಯಲ್ಲೇ ತಾವು ಮಿತ್ರೆಯರೆಲ್ಲ ತಮ್ಮ ಸ್ತನಗಳ್ಹಿಡಕೊಂಡು ಥಟ್ಟನೆ ಇಳಿದರು ನದಿಯೊಳಗೆ 19 ವಾರಿಗೆ ಗೆಳೆತೇರು ವರ ಮೋಹನಾಂಗೇರು ಮೋರೆಗೆ ಅರಿಷಿಣ ಕುಂಕುಮ್ಹಚ್ಚಿ ತಮ್ಮ ನೀರಜಾಕ್ಷಿಯರೆಲ್ಲ ನಿರ್ಮಲವಾಗಿದ್ದ ನೀರೊಳು ನಿಂತು ಮೈ ತೊಳೆದರಾಗ 20 ಭಾರಿ ಸೆಳವಿನೊಳು ಬತ್ತಲೋಲ್ಯಾಡುತ ಸಾರಸಮುಖಿಯರು ಸರಸದಿಂದ ಚೆಲ್ಲೆ ದ್ವಾರ್ಯ ಕಂಕಣಕರ ಬೊಗಸೆಲಿಂದ ನೀರು ತುಂಬಿ ಚೆಲ್ಲ್ಯಾಡುತಲಿ 21 ಸರ್ಪನಂಥ ಹೆರಳೊಲಿವುತ ನೀರೊಳು ಮುತ್ತಿನ ಸರಪದಕ್ಹೊಳೆಯುತಲಿ ಬುಕ್ಕ್ಹಿಟ್ಟು ಗಂಧ ಮಲ್ಲಿಗೆ ಪಾರಿಜಾತವು ತೆಪ್ಪದಂದದಲಿ ತೇಲಾಡುತಿರೆ22 ಅಂಬುಜಮುಖಿಯರು ಸಂಭ್ರಮದಿಂದಲಿ
--------------
ಹರಪನಹಳ್ಳಿಭೀಮವ್ವ
ಪಡಿ | ಪರಗತಿಯನ್ನ ಮನವೇ ಪ ಹರಿವ ನದಿಯೊಳಗ ಕುಳಿತಿರುವ ಜ | ನರನು ಧಡಿಯ ಪೊರೆಗೊಯ್ದು ತೆರದಂತೆ | ಭವ ಸಮುದ್ರದಿಂ | ತ್ವರಿತದಿಂ ದಾಟಿಸುವ ತಾನು 1 ಕಟ್ಟಿ ಮನಿಯ ಪುಳವ ತಂದಿಟ್ಟು ತನ್ನಂದದಿ | ಘಟ್ಯಾಗಿ ಮಾಡುತಿಹಾ | ಸ್ಪಷ್ಟ ಭೃಂಗಿಯ ವೊಲು ಮುಟ್ಟಿ ಬಂದರೆ ತನ್ನ | ಮಟ್ಟ ತನ್ನಂತ ಮಾಳ್ಪಾ ಭೂಪಾ 2 ಈ ಪರಿಯಲಾಗಿಹ ಮಹಿಪತಿ ಗುರು ಮಹಿಮೆಯ | ನಾ ಪೊಗಳಲೆನ್ನ ಅಳವೇ | ತಾ | ಪಸುಳೆ | ಕೃಷ್ಣನಾ ಟೋಪಮಂ | ಗೆಲಿಪನಾ | ಶ್ರೀ ಪದವ ಹೊಂದಿ ಸುಖಿಸೋ ತರಿಸೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವರತೀರ್ಥರಾಜ ಪ್ರಯಾಗವೆನಿಸುವ ಕ್ಷೇತ್ರ - |ದೊರೆ ಮಾಧವನ ಭಜಿಸಿರೈ 3ಆ ಮಾಘಮಾಸದತಿಶಯವಾದ ಸ್ನಾನವನು |ಈ ಮಹಾನದಿಯೊಳಗೆ ಮಾಡಲೋಸುಗಬೊಮ್ಮ |ಸೋಮಶೇಖರ ಮುಖ್ಯ ದೇವತೆಗಳೈತಹರು |ಪ್ರೇಮದಿಂದಲಿ ನಿರುತ ||ನೇಮವಿದು ದ್ವಿಜಕುಲೋತ್ತಮರಾದವರುಕೇಳಿ |ಕಾಮ - ಕ್ರೋದವ ಜರಿದ ಪ್ರಾಯಾಗ ಕ್ಷೇತ್ರದಲಿ |ರಾಮಣೀಯಕ ಸ್ನಾನನುಷ್ಠಾನ ತೀರ್ಥವಿಧಿ |ಹೋಮಗಳ ಮಾಡಿರಯ್ಯ 4ಆರ್ಯವರ್ತದ ಬ್ರಹ್ಮವರ್ತ ದೇಶದ ಮಧ್ಯೆ |ಧಾರ್ಯವಾದಲೆ ಪುಣ್ಯವಾರಾಣಾಸೀ ಕ್ಷೇತ್ರ |ಕಾರ್ಯವಿಶ್ವೇಶತಾರಕ ಮಂತ್ರವುಪದೇಶಿ |ಸೂರ್ಯಚಂದ್ರಾಗ್ನಿನಯನ||ತ್ವರ್ಯುಗ್ರನೆನಿಪಭೂತೇಶ ಭೈರವನಲ್ಲಿ |ವೀರ್ಯದಿಂದಘಾಕಾರಿ ಜೀವಿಗಳ ಶಿಕ್ಷಿಸುವ |ಶೌರ್ಯಅಗಣಿತ ಮಹಿಮ ಶ್ರೀ ಬಿಂದು ಮಾಧವಗೆ |ಕಾರ್ಯದೊರೆತನವು ಅಲ್ಲಿ 5ಅರ್ತಿಯಲಿ ಪಂಚಗಂಗೆಯಲಿ ಮಜ್ಜನಮಾಡಿ |ನಿತ್ಯ ನೈಮಿತ್ತ್ಯ ಕರ್ಮಂಗಳನು ಪತಿಕರಿಸಿ |ಸುತ್ತಿ ಅಂತರ್ವೇದಿಯನ್ನು ಪಂಚಕ್ರೋಶ - |ಯಾತ್ರೆಗಳ ಮಾಡಿ ಬಳಿಕ ||ಮತ್ತೆ ಶ್ರೀ ವಿಶ್ವೇಶ್ವರಗೆ ಪ್ರದಕ್ಷಿಣೆ ಮಾಡಿ |ಭಕ್ತಿಪೂರ್ವಕವಾಗಿ ಅಲ್ಲಲ್ಲಿ ಇಹ ವೈಷ್ಣ - |ವೋತ್ತಮರಿಗೆರಗಿ ಸದ್ಧರ್ಮಗಳ ಮಾಡಿ -ಕೃತ ಕೃತ್ಯರೆಂದೆನಿಸಿದರಯ್ಯ 6
--------------
ಪುರಂದರದಾಸರು