ಒಟ್ಟು 98 ಕಡೆಗಳಲ್ಲಿ , 42 ದಾಸರು , 94 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ಮಧುರೆಗೆ ತಾ ಕೊಂದು ಮಾತುಳನ ಬಂಧನ ರಹಿತವಾಗಲು ಮಾತಾಪಿತರು 1 ಜರೆಯಸುತನ ಬಾಧೆಯು ಘನವಾಗುತಿರಲು ಜಲದೊಳು ದ್ವಾರಕಾಪುರವ ನಿರ್ಮಿಸಿದ 2 ಯದುನಂದನ ತನ್ನಗ್ರಜ ಬಲರಾಮನ ಕೂಡ ಮುದದಿಂದಾವಾಸ ಯಾದವರ ಸಹಿತಾಗಿ3 ಇರುತಿರೆ ರುಕುಮ ತನ್ನನುಜೆ ಸಹಿತಾಗಿ ಚೆಲುವ ಸುಂದರಿಗೆ ಬ್ಯಾಗ್ವಿವಾಹದುತ್ಸವವು 4 ಅಕ್ಕರದನುಜೆ ರುಕ್ಮಿಣೀದೇವಿಗಿನ್ನು ಚಿಕ್ಕ ಚೆನ್ನಿಗನಾದ ತಕ್ಕ ವರನ್ಯಾರು 5 ವಸುಧೆಪಾಲರ ಮಧ್ಯ ಶಿಶುಪಾಲನೀಗಧಿಕ ಕುಸುಮಗಂಧಿನಿಗೆ ನಿಶ್ಚಯವ ಮಾಡಿದರು 6 ಅಗ್ರಜನ್ವಾಕ್ಯವ ಕೇಳಿ ಮನದಲ್ಯೋಚಿಸುತ ಘನಮಹಿಮಗೆ ಓಲೆ ಬರೆದಳು ಲಿಖಿತ 7 ಹರಿ ನೀನೆ ಮುರವೈರಿ ಸರುವಾಂತರಯಾಮಿ ನಿನ್ನ ಸ್ಮರಣೆ ದರುಶನ ಮಾತ್ರಕೆ ಪರಮಲಾಭೆನಗೆ 8 ಎಂದೆಂದಿಗೆನ ಕೂಡಾನಂದವ ಬಟ್ಟು ಇಂದೆ ಕೈಬಿಟ್ಟು ದೂರಿಂದ ನೋಡುವರೆ 9 ಪ್ರಾಣಪತಿ ನೀ ಪಾಣಿಗ್ರಾಣ (ಗ್ರಹಣ?) ಮಾಡದಲೆ ಇರೆ ಪ್ರಾಣ ಉಳಿಯದು ಕೇಳೆನ್ನಾಸೆ ಹುಸಿಯಲ್ಲ 10 ಸರ್ವರ್ವಂದಿತ ನಿನ್ನ ಅರಮನೆದ್ವಾರ ಕಾದಿರುವೋ ಭೃತ್ಯರಿಗೊಪ್ಪಿಸಿಕೊಡದೆ ಕರುಣಾಳು 11 ದೇಶಕಾಲಕೆ ನಾ ನಿನ್ನ ಸಮಳ್ವಾಸುದೇವ ಗುಣಕಸಮಳೆಂದು ಉದಾಸೀನ ಮಾಡಬ್ಯಾಡ 12 ವಕ್ಷಸ್ಥಳದ ವಾಸಿಯ ತುಚ್ಛಮಾಡದಲೆ ಲಕ್ಷೀಲೆ ಕರೆದೊಯ್ಯೊ ಪಕ್ಷಿವಾಹನನೆ 13 ಎನ್ನ ಬಿನ್ನಪ ಕೇಳಿ ಮನ್ನಿಸೊ ಕೃಷ್ಣ ಪನ್ನಂಗಶಯನ ನಿನ್ನ ಪಾದಕ್ಕೆರಗುವೆನು 14 ಪಾದ ಉರಗ ಮೆಟ್ಟಿದ ಪಾದ ನಿನ್ನ ಧ್ವಜವಜ್ರಾಂಕುಶ ಪಾದಕ್ಕೆರಗಿ ನಮಿಸುವೆನು 15 ಬರೆದ ಓಲೆಗೆ ಹಚ್ಚಿ ಅರೆದರಿಷಿಣವ ಕರವ ಜೋಡಿಸಿ ಕೊಟ್ಟು ಕಳುಹೆ ದ್ವಾರಕೆಗೆ16 ಜಗದೀಶಗೆ ಪತ್ರವ ಜಾಣೆ ತಾ ಬರೆದು ದ್ವಿಜನ ಕೈಯಲಿ ಕೊಟ್ಟು ಕಳುಹೆ ದ್ವಾರಕೆಗೆ 17 ವ್ಯಾಳ್ಯ ಮೀರುವುದೆಂದು ಎದ್ದಾಗ ರುಕುಮ ಭೇರಿ ತಾಡನ ಮಾಡಿಸೆ ಭೋರೆಂಬೊ ರಭಸ 18 ಎರೆದು ಮುಡಿಯನ್ಹಿಕ್ಕಿ ಜಡೆಯಬಂಗಾರ ಚೌರಿ ರಾಗಟೆ ಗೊಂಡ್ಯ ಧರೆಗೆ ಮುಟ್ಟುತಿರೆ 19 ಅಚ್ಚ ಜರತಾರಿ ಹೊಳೆವಷ್ಟಪತ್ರಿಕೆಯು ಮ್ಯಾಲೊಪ್ಪುವೊ ಪಟ್ಟೀನೊಡ್ಯಾಣ ಸರಿಸಿಟ್ಟು 20 ಕಂಕಣ ಚೂಡ್ಯ ದ್ವಾರ್ಯ ್ಹರಡಿ ಕೈಕಟ್ಟು ಮ್ಯಾ- ಕಂಚುಕ ತೊಟ್ಟು 21 ಹರಳು ಮಾಣಿಕ್ಯದ್ವಾಲೆ ಬುಗುಡಿ ಬಾವುಲಿಯು ಹೊಳೆವೊ ಮುತ್ತಿನ ಮೂಗುತಿ ಥಳಥಳಸುತಲಿ 22 ಹಾರ ಪದಕದ ಮಧ್ಯ ಮೇಲಾದೇಕಾವಳಿಯು ತೋರ ಮುತ್ತಿನ ದಂಡೆ ಲೋಲ್ಯಾಡುತಿರಲು 23 ಕನ್ನಡ್ಯಂದದಿ ಗಲ್ಲ ಕಳೆಯ ಸುರಿಸುತಲಿ ಸಣ್ಣಮುತ್ತಿನ ಗೊಂಚಲು ಸರಗಳಲೆಯುತಲಿ 24 ಝಗಝಗಿಸುತ ಬಂದಳು ಜಗದ ಮೋಹಿನಿಯು ಮುಗುಳು ನಗೆಯಿಂದ ಮೂರ್ಜಗವ ಮೋಹಿಸುತ 25 25 ಗೆಜ್ಜೆ ಸರಪಳಿ ಅಂದಿಗೆ ಹೆಜ್ಜೆಸರಿಸಿಡುತ ನಿರ್ಜರೇಶನ ಮಾರ್ಗದ ನಿರೀಕ್ಷಣದಿಂದ 26 ಸುತ್ತ ಮುತ್ತೈದೇರು ಕತ್ತಿಕೈ ಭಟರು ತುತ್ತೂರಿ ವಾದ್ಯ ಭೇರಿ ತಮ್ಮಟೆ ಕಾ(ಕಹ?) ಳೆ 27 ನಡೆದು ರುಕ್ಮಿಣಿ ಹೊಕ್ಕಳು ಗುಡಿಯ ಮಹಾದ್ವಾರ ಮೃಡನರಸಿಯ ಪೂಜಿಸಿ ದೃಢಭಕ್ತಿಯಲಾಗ 28 ಹಿರಿಯ ಮುತ್ತೈದೇರಿಗೆ ಮರದ ಬಾಗಿನವ ಅರೆದರಿಷಿಣ ಕುಂಕುಮ ಕರದಲ್ಲಿ ಗಂಧ 29 ಕಡಲೆ ಕಬ್ಬು ಕಾಯಿ ಉಡಿಯ ತುಂಬುತಲಿ ಕಡಲಶಯನನ ಮಾರ್ಗವ ಬಿಡದೆ ನೋಡುತಲಿ 30 ಮಂಗಳಗೌರಿಯೆದುರಿಗೆ ಮುತ್ತೈದೇರು ಅಂಗನೆ ಭೈಷ್ಮಿ ಪೀಠದಲಿ ಕುಳ್ಳಿರಿಸಿ 31 ಮಂಗಳಾಂಗನು ನಿನ್ನ ಪತಿಯಾಗಲೆಂದು ಮಂಗಳಸೂತ್ರ ಬಂಧನ ಮಾಡಲು ನಗುತ 32 ಮಾರನಯ್ಯನ ಮೋರೆ ನೋಡಿದಾಕ್ಷಣದಿ ಮಹಾ- ದ್ವಾರದಿ ಮುತ್ತು ಸೂರ್ಯಾಡೇನೀಕ್ಷಣದಿ 33 ಹರನ್ವಲ್ಲಭೆ ತೋರೆ ಮುರಹರನ ಕರಿವರನ ಭಯ- ಹರನ ಶ್ರೀಧರನ ಕೊಡುವೆನೀ ದೇವರನು 34 ಮಚ್ಛಲೋಚನೆ ಧ್ಯಾನ ಅಚ್ಚ್ಯುತನಲ್ಲೇ ಇಡೆ ಭಕ್ತ- ವತ್ಸಲ ಬಂದನೆಂದೆಚ್ಚರಿಸಿದರು35 ಹತವಾದ ಪ್ರಾಣ ಬರಲತಿ ಹರುಷವ್ಹ್ಯಾಗೋ ರಥವ ಕಾಣುತ ರುಕ್ಮಿಣಿ ಕೃತಕೃತ್ಯಳಾಗ 36 ಸೃಗಾಲದ ಮಧ್ಯ ಒಂದು ಸಿಂಹ ಹೊಕ್ಕಂತೆ ಶ್ರೀನಾಥ ರುಕ್ಮಿಣಿಯ ಸ್ವೀಕಾರ ಮಾಡಿದನು 37 ರಥವು ಮುಂದಕೆ ಸಾಗೆ ಪಥವು ತೋರದಲೆ ಅಲೆ ಬಾಯ ಬಿಡುತ ಶ್ರೀಪತಿಯ ಬೆನ್ನ ್ಹತ್ತಿ 38 ಬಂದ ರುಕುಮನ ಗಡ್ಡ ಮಂಡಿ ಸವರುತಲಿ ಬಂಧನ ರಥಕೆ ಮಾಡಿದ ನಂದಸುತನು 39 ವಾರೆನೋಟದಿ ನೋಡಿ ಮೋರೆ ತಗ್ಗಿಸಿದ ನಾರಿ ರುಕ್ಮಿಣಿಯ ಮುಖ ನೋಡಿ ಶ್ರೀಕೃಷ್ಣ 40 ಕರುಣವಿರಲಿಕ್ಕೆ ನೀ ಬರೆದ್ಯಾತಕೆ ಓಲೆ ತಿಳಿಯಲಿಲ್ಲವೆ ಎಂದೀಪರಿ ಹಾಸ್ಯದಿ ನುಡಿದ41 ಒಡಹುಟ್ಟಿದವನಲ್ಲಿ ಕಡು ಮೋಹವಿನ್ನೂ ಹಿಡಿಯದೆನ್ನೊಳು ಕೋಪ ಬಿಡುರುಕ್ಮಿಣಿ ಎಂದ 42 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
351ಆದಿತ್ಯದೇವ ತ್ವತ್ಪಾದಯುಗಳಕಭಿ ವಾದನವ ಮಾಳ್ಪೆ ಅನುದೀನ | ಅನುದೀನ ಸಜ್ಜನರ ವ್ಯಾಧಿಯ ಕಳೆದು ಸುಖವೀಯೊ 1 352ಸಂಜ್ಞಾರಮಣ ನಿನಗೆ ವಿಜ್ಞಾಪಿಸುವೆನೊ ಸ ರ್ವಜ್ಞ ನೀನೆಂದು ಸರ್ವತ್ರ | ಸರ್ವತ್ರ ಎನಗೆ ಬ್ರ ಹ್ಮಜ್ಞಾನ ಭಕುತಿ ಕರುಣೀಸೊ 2 353 ಸೂರಿಗಮ್ಯನೆ ವಾಕ್ಶರೀರ ಬುದ್ಧಿಜವಾದ ಪಾರ ದೋಷಗಳನೆಣಿಸಾದೆ | ಎಣಿಸಾದೆ ಭಗವಂತ ನಾರಾಧನೆಯನಿತ್ತು ಕರುಣೀಸೊ 3 353 ರೋಹಿಣೀರಮಣ ಮದ್ದೇಹಗೇಹಾದಿಗಳ ಮೋಹ ಪರಿಹರಿಸಿ ಮನದಲ್ಲಿ | ಮನದಲ್ಲಿ ಎನಗೆ ಗರುಡ ವಾಹನನ ಸ್ಮರಣೆಯನು ಕರುಣೀಸೊ 4 354ಕ್ಷೀರಾಬ್ದಿಜಾತ ಮಾರಾರಿಮಸ್ತಕಸದನ ವಾರಿಜೋದ್ಭವನ ಆವೇಶ | ಆವೇಶಪಾತ್ರ ಪರಿ ಹಾರ ಗೈಸೆನ್ನ ಭವತಾಪ 5 355 ದತ್ತದೂರ್ವಾಸನನುಜ ಅತ್ರಿಸಂಭವನೆ ತ್ವ ದ್ಭøತ್ಯ ನಾನಯ್ಯ ಎಂದೆಂದು | ಎಂದೆಂದು ಪ್ರಾರ್ಥಿಸುವೆ ಹೃತ್ತಿಮಿರ ಕಳೆದು ಸಂತೈಸೊ 6 356 ಕೋಲ ಭೂನಂದನ ಪ್ರವಾಳ ಸಮವರ್ಣ ಕರ ವಾಳ ಸಮಖೇಟ ನಿಶ್ಯಂಕ | ನಿಶ್ಯಂಕನಾಖ್ಯ ಸುರ ಮೌಳಿ ನೀಯೆನ್ನ 7 357 ಮಂಗಳಾಹ್ವಯನೆ ಸರ್ವೇಂಗಿತಜ್ಞನೆ ಅಂತ ರಂಗದಲಿ ಹರಿಯ ನೆನೆವಂತೆ | ನೆನೆವಂತೆ ಕರುಣಿಸೊ ಅನುದಿನ 8 358 ಭೌಮರಾಜನೆ ತ್ವನ್ಮಹಾಮಹಿಮೆ ತುತಿಸಲ್ಕೆ ಪಾಮರನಿಗಳವೆ ಎಂದೆಂದು | ಎಂದೆಂದು ಸಜ್ಜನರ ಕಾಮಿತಾರ್ಥವನೆ ಕರುಣೀಸೊ 9 359 ಬುಧನೆ ನೀ ಸುಗುಣವಾರಿಧಿಯೆಂದು ಬಿನ್ನೈಪೆ ಕ್ಷುಧೆಯ ಸಂಹರಿಸಿ ಸುಜ್ಞಾನ | ಸುಜ್ಞಾನ ಸದ್ಭಕ್ತಿ ಸುಧೆಯ ಪಾನವನೆ ಕರುಣೀಸೊ 10 360 ಚಂದ್ರನಂದನ ಸತತ ವಂದಿಸುವೆ ಮನ್ಮನದ ಮಮದೈವ ಸರ್ವ ಗೋ ವಿಂದನಹುದೆಂದು ತಿಳಿಸಯ್ಯಾ 11 361 ತಾರಾತ್ಮಜನೆ ಮಚ್ಛರೀರದೊಳು ನೆಲೆಗೊಂಡು ತೋರು ಸಜ್ಜನರ ಸನ್ಮಾರ್ಗ | ಸನ್ಮಾರ್ಗ ತೋರಿ ಉ ದ್ಧಾರಗೈಸೆನ್ನ ಭವದಿಂದ 12 362 ನತಿಸಿ ಬೇಡುವೆ ಬೃಹಸ್ಪತಿ ಗುರುವೆ ಎನ್ನದು ರ್ಮತಿಯ ಪರಿಹರಿಸಿ ಸುಜ್ಞಾನ ಸುಜ್ಞಾನವಿತ್ತು ಶ್ರೀ ಪತಿಯ ತೋರೆನ್ನ ಮನದಲ್ಲಿ 13 363 ಸುರರಾಜಗುರುವೆ ತ್ವಚ್ಚರಣಾರವಿಂದಗಳಿ ಗೆರಗಿ ಬಿನ್ನೈಪೆ ಇಳೆಯೊಳು ಇಳೆಯೊಳುಳ್ಳಖಿಳ ಬ್ರಾಹ್ಮ ಣರ ಸಂತೈಸೋ ದಯದಿಂದ 14 364 ತಾರಾರಮಣನೆ ಮದ್ಬಾರ ನಿನ್ನದೊ ಮಹೋ ದಾರ ನೀನೆಂದು ಬಿನ್ನೈಪೆ | ಬಿನ್ನೈಪೆ ದುರಿತವ ನಿ ವಾರಿಸಿ ತೋರೊ ತವರೂಪ 15 365 ಶಕ್ರಾರಿಗಳ ಗುರುವೆ ಶುಕ್ರಮುನಿರಾಯ ದರ ಚಕ್ರಾಬ್ಜಪಾಣಿ ಗುಣರೂಪ | ಗುಣರೂಪ ವ್ಯಾಪಾರ ಪ್ರಕ್ರಿಯವ ತಿಳಿಸೊ ಪ್ರತಿದೀನ 16 366 ಕವಿಕುಲೋತ್ತಂಸ ಭಾರ್ಗವ ಬೇಡಿಕೊಂಬೆ ಭಾ ಗವತ ಭಾರತ ಮೊದಲಾದ | ಮೊದಲಾದ ಶಾಸ್ತ್ರಗಳ ಶ್ರವಣ ಸುಖವೆನಗೆ ಕರುಣೀಸೊ | 17 367 ನಿಗಮಾರ್ಥ ಕೋವಿದನೆ ಭೃಗುಕುಲೋತ್ತಂಸ ಕೈ ಮುಗಿದು ಬೇಡುವೆನೊ ದೈವಜ್ಞ | ದೈವಜ್ಞ ಹರಿಯ ಓ ಲಗದಲ್ಲಿ ಬುದ್ಧಿಯಿರಲೆಂದು 18 368 ತರಣಿನಂದನ ಶನೈಶ್ಚರ ನಿನ್ನ ದಿವ್ಯ ಪದಾಬ್ಜ ಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಬಹುಜನ್ಮಕೃತ ಪಾಪ ತ್ವರಿತದಿಂದಿಳಿಸಿ ಪೊರೆಯೆಂದು 19 369 ಛಾಯಾತನುಜ ಮನೋವಾಕ್ಕಾಯ ಕ್ಲೇಶಗಳಿಂದ ಸಮಯದಿ ಶ್ರೀ ಲಕ್ಷ್ಮೀನಾ ರಾಯಣನ ಸ್ಮರಣೆ ಕರುಣೀಸೊ 20 370 ಇದನೆ ಬೇಡುವೆ ಪದೇಪದೆಗೆ ಪುಷ್ಕರನ ಗುರುವೆ ಹರಿಮೂರ್ತಿ ಕೀರ್ತನೆಗೆ ಳೊದಗಲೆನಗೆಂದು ಬಿನ್ನೈಪೆ 21 371ಅಹಿಕ ಪಾರತ್ರಿಕದಿ ನರಹರಿಯದಾಸರ ನವ ಗ್ರಹದೇವತೆಗಳು ದಣಿಸೋರೆ | ದಣಿಸೋರೆ ಇವರನ್ನು ಅಹಿತರೆಂದೆನುತ ಕೆಡಬೇಡಿ22 372 ಜಗನ್ನಾಥವಿಠ್ಠಲನ ಬದಿಗರಿವರಹುದೆಂದು ಹಗಲಿರುಳು ಬಿಡದೆ ತುತಿಸುವ | ತುತಿಸುವ ಮಹಾತ್ಮರಿಗೆ ಸುಗತಿಗಳನಿತ್ತು ಸಲಹೋರು 23
--------------
ಜಗನ್ನಾಥದಾಸರು
ಅರುಣಾನುಜ ವೈರಿಯಾ ಭರಣನ ಮಿತ್ರನ ತೋರೇ ಪ ಉರಗಾ ಹರಿಧ್ವಜಪಿತನಾ | ಅರಿಪಿತ ಸಂಹಾರಕನಾ | ಗಿರಿಜಾವಲ್ಲಭರಿಯನಾ | ಶರಗರ್ಭನನುತನ ತೋರೆ 1 ಶೂರರಾಯನಂದನಾ | ಅರಸಿ ಯಣ್ಣನ ಮದನನಾ | ಮೈರೋಚನ ಆತ್ಮಜನಾ | ವರದನ ತಂದು ತೋರೆ 2 ಗಿರಿ ರಿಪುತನು ಸಂಭವನಾ | ಅರಸಿಯಣ್ಣನನುಜನಾ | ಗುರುವರ ಮಹಿಪತಿ ಪ್ರೀಯನಾ | ಹರಿಣಾನೇತ್ರನೀ ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವುಗಳ ಹಾವಳಿಗಂಜುವಳಲ್ಲ ಅ ಲ್ಲವುಗಳ ಸ್ಮøತಿಗೆ ನಾನಂಜುವೆನೆ ಪ ಚಂದ್ರ ಚಂದ್ರಿಕೆಯು ಉದಯಿಸಲ್ಯಾತಕೆ ನಿಂದ್ರಿಸುವೆನೆ ನಾನದರನ್ನು ಇಂದ್ರನನುಜನಾ ಶ್ರುತಿಗೆ ಸ್ಮøತಿಗೆ ಬರಲು ನಿಂದ್ರಿಸಲಾರೆನೆ ನಿಮಿಷ ಮನ 1 ಪಲ್ಲವಿಸವ್ಯಾತಕೆ ಚೂತ ತರುಗಳಿಗಿನ್ನು ನಿಲ್ಲಿಸುವೆನೆ ಅದರುಲ್ಬಣವ ಪಲ್ಲವ ಪಾದವ ಮನಸಿಗೆ ಬಂದರೆ ತಲ್ಲಣಿಸುವೆನೆ ತಾವರೆ ನಯನೆ 2 ಅಂಬುದಗಳೆಲ್ಲ ಅಂಬರವೇರಲಾ ಇಂಬು ಕೊಡೆ ಅಂಬುದ ಶ್ಯಾಮನು ಮನದಲಿ ನಿಲಲು ಕಂಬು ಕಂಠಿ 3 ಕುಂದ ಕುಸುಮಗಳು ವಿಕಸಿತವಾದರು ಅಂದಗೆಡುವುದಿಲ್ಲ ಮನಸಿನಲಿ ಕುಂದರದನ ಎನ್ನ ಮನಸಿಗೆ ತೋರಲು ಕಂದಿ ಕುಂದುವೆ ಮನ ಮಂದಿರದಿ 4 ಏವಮಾದಿಗಳೆಲ್ಲ ಏನು ಮಾಡವೋ ವಾಸು- ದೇವವಿಟ್ಠಲ ಸ್ಮøತಿ ಬಾರದಿರೆ ಶ್ರೀವರ ಚಿತ್ತಕ್ಕೆ ಬಂದರೆ ನಿಂದರೆ ತಾವರೆನಯನೆ ನೀ ತಂದು ತೋರೆ 5
--------------
ವ್ಯಾಸತತ್ವಜ್ಞದಾಸರು
ಈತನೀಗ ವಾತಜಾತನು ತನ್ನ ಪ ತÁತಗಾಗಿ ದನುಜಕುಲವಘಾತಿಸಿದ ವನೌಕಸಾರ್ಯಅ.ಪ. ಅಂಬುಧಿಯ ಲಂಘಿಸಿ ಭರದಿಲಂಬ ಶಿಖರದಲ್ಲಿ ಧುಮುಕಿಸಂಭ್ರಮದಿಂದ ಲಂಕೆಗೆ ಪೋಗಿಅಂಬುಜಾಕ್ಷಿಯನರಸಿದಾತ1 ಧರಣಿಸುತೆಯ ಚರಣಕೆರಗಿಕರುಣಿ ರಾಮನುಂಗುರವಿತ್ತುಕರದಿ ದಾನವರನು ಸವರಿಶರಧಿಯನುತ್ತರಿಸಿದಾತ 2 ಕಡಲ ತಡಿಯೊಳಿರ್ದ ಕಪಿಗ-ಳೊಡನೆ ರಾಮನಂಘ್ರಿಗೆರಗಿಮಡದಿ ಚೂಡಾರತುನವಿತ್ತುಕಡು ಕೃತಾರ್ಥನೆನಿಸಿಕೊಂಡ 3 ದುರುಳ ಕೌರವನನುಜನುರವಕರದಿ ಸೀಳಿ ರಕ್ತವ ಸುರಿದುನರಸಿಂಹನಿಗೆ ಅರ್ಪಿಸಿದಧರೆಗೆ ಭೀಮನೆನಿಸಿದಾತ 4 ಇಳೆಯೊಳಿದ್ದ ಮಧ್ಯಗೇಹನಕುಲದಿ ಜನಿಸಿ ಶುದ್ಧವಾದನಳಿನನಾಭನ ಒಲುಮೆಯಿಂದಮಲಿನರನ್ನು ಅಳಿದ ಧೀರ 5 ಇಪ್ಪತೊಂದು ಕುಮತಗಳನುಒಪ್ಪದಿಂದ ಗೆಲಿದು ಭಕ್ತಕಲ್ಪವೃಕ್ಷನೆನಿಸಿ ಮೆರೆದಸರ್ಪಶಯನನ ನಿಜವ ತೋರ್ದ6 ಧರಣಿ ಮಂಡಲದೊಳಗೆ ಭೂಮಿಸುರರ ಗಣಕೆ ಶಾಸ್ತ್ರಾಮೃತವಎರೆದು ಕೃಷ್ಣನ ಇರವ ತೋರಿವರ ಬದರಿಯೊಳ್ ನಿಂದ ಧೀರ7
--------------
ವ್ಯಾಸರಾಯರು
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ
ಎಷ್ಟು ಚಲುವರೋ ರಾಮಕೃಷ್ಣರೆಷ್ಟು ಚಲುವರೊಎಷ್ಟು ಚಲುವರಿವರ ಶಿರದಿ ಬಿಟ್ಟ ಜುಲುಪಿ ಕೇಶ ಚಂದ ಪುಟ್ಟ ಬಾಲಕಾರು ಕೂಡಿ ಗೋಷ್ಟದೊಳಗೆ ಚಲಿಸಿದಾರೊ ಪ ನಿನಗು ಇದ್ದವೋ ಈ ಜುಲುಪಿ ನಿನ್ನನುಜಗಿದ್ದವೊಮುನಿಯ ಕೂಡಿ ಪೋಗುವಾಗ ವನದಿ ನಾಲ್ಕು ಹತ್ತು ವರುಷಜನತೆಗಾದ ನಯನ ಸುಖದ ಘನತೆ ನೀನು ತಿಳಿದು ಪೇಳೋ 1 ಬಹಳ ಶೂರನೋ ತಥೋಪಿ ಧೈರ್ಯಶೀಲನಾಮನೋಶೂಲ ಪಾಣಿ ಧನದ ಭೂಮಿ ಪಾಲು ಸಾಧಿಸಿ ಮುರಿದು ನಿಂತಬಾಲಕೃಷ್ಣ ಶತ್ರುಗಣದಿ ಬಾಲೆಯೆತ್ತಿಕೊಂಡು ಪೋದ 2 ಕಾಲ ಎತ್ತಜೀವ ಎತ್ತಕಾಯಪುತ್ರ ವೃತ್ತಿ ಮಾತೆ ಗುರು ಸುಪಾತ್ರರನ್ನು ಸುಖಿಸಿದಾರು 3 ಪಿತೃನಾಗ್ಞದಿ ನೋಡುತಲೆ ವನದೊಳ್ಹೆತ್ತೆ ಮಾಡಿದೆಮತ್ತ ಆನೆಯಮಲ್ಲ ಕಂಸನೊತ್ತಿ ತುಳಿದು ಮಧುರೆಯಲ್ಲಿಹತ್ತು ಒಂದು ವಯದ ಬಾಲ ಮುತ್ಯಾ ಮಾತೆಯರನು ಕಾಯ್ದ 4 ಕೂಸುಪಿಡಿಯಿತು ಪೂಥಣಿಯ ಮೊಲೆಯ ತಾಸು ತಿಂದಿತುಈ ಶರೀರದೊಳಗೆ ತಾಟಕಾಸುರೀಯ ಕೊಂದ ಇಂದಿರೇಶಅದ್ಭುತಾವದಿದರೊಳಾರು ಪೇಳೊ ದಾಶರಥಿಯೆ 5
--------------
ಇಂದಿರೇಶರು
ಏಸೇಸು ಕÀಲ್ಪ್ಪಕ್ಕು ಈಶನು ನೀನಯ್ಯಾ ಆಸಾಸು ಕಲ್ಪಕ್ಕು ದಾಸನು ಇವನಯ್ಯಾ ಉದಾಸೀನ ಮಾಡದೆ ಪೋಷಿಸಬೇಕಯ್ಯ ವಾಸನ ನೀ ಮಾಡಿ ವಾಸನ ಮಯರೂಪÀ ಸೋಸಿಲಿ ತೋರಿಸಿ ದಾಸನ ಮಾಡಿಕೊ ಆಸೆ ಬಿಡಿಸಿ ವಿಶೇಷ ಭಕುತಿ ಜ್ಞಾನ ಲೇಸಾಗಿ ನೀನಿತ್ತು ಶ್ರೀಶಗುರು ಜಗನ್ನಾಥ ವಿಠಲ ವರ- ಪರಿ ಪರಿ ದೇಶದಲ್ಲಿ ಮೆರಿಸಿ ಆಶೆಯ ಪೂರ್ತಿಸು ವಾಸವನನುಜಾ
--------------
ವರದೇಶವಿಠಲ
ಔಷಧದ ಬೇರೊಂದನು ನಾರದನು ತಂದ ಪೋಷಣೆಗೆ ಸಕಲರೂ ಸವಿಯಲೆಂದ ಪ ಜ್ವರಭೇದಗಳಿಗೆಲ್ಲ ನರಹರಿ ಎಂಬ ಬೇರು ಶಿರವೇಧೆ ಎಂಬುದಕೆ ಹರಿಹರಿ ಎಂಬ ಬೇರು ವಾತ ರುಜೆಗಳಿಗೆ ಸಿರಿಲೋಲನೀ ಬೇರು ಪರಿಪರಿಯ ಭವಗಳಿಗೆ ನಾರಾಯಣಾ ಎಂಬ ಬೇರು 1 ಪಿತ್ತರೋಗಂಗಳಿಗೆ ಚಿತ್ತಜನಪಿತನೆಂಬ ಪೃಥ್ವಿಯೊಳಗತ್ಯಧಮ ವಿಭಂದ ರೋಗಗಳಿ ಗರ್ಥಿಯಿಂ ಲೇಪಿಸುವ ಸತ್ವಗುಣನಿಧಿಯೆಂಬ ನಿತ್ಯಶೌರಿಯ ನಾಮ ಶಿವಬೇರು 2 ನಾರದನು ಬೇರೂರೆ ನೀರೆರೆದ ಪ್ರಹ್ಲಾದ ಧೀರಬಲಿ ಬೆಳೆಯಿಸಿದ | ನೀರ ಗಜನೆರೆದ ವೀರದಶಶಿರನನುಜನೆಚ್ಚರದೊಳಿದ ಕಾಯ್ದ ನಾರಿ ದ್ರೌಪದಿ ಶಿರದಿ ಮೊಗ್ಗಾಗಿ ಧರಿಸಿದಂಥ 3 ಅರಳಿದ ಸುಮಗಳನು ಅಕ್ರೂರ ಪೋಷಿಸಿದ ತ್ವರಿತದಿ ಕಾಯ್ಗಳನು ಶುಕದೇವ ಕಾಯ್ದ ನರರೆಲ್ಲರೀ ಫಲವ ದಿನದಿನವು ಮೆಲಲೆಂದು ವರದ ಮಾಂಗಿರಿರಂಗ ಪೇಳುತಿಹನು 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂಜಾಕ್ಷ ಕಾಯಯ್ಯ ಕರುಣಾನಿಧಿಯೆ ಬಲಭಂಜನನನುಜನೆ ನೋಡೆನ್ನ ಪ . ಅಂಜದೆ ನಾ ನಿನ್ನ ಅಡಿಳಿಗೆರಗುವೆಕುಂಜರವರದನೆ ಕೂಡೆನ್ನ ಅ.ಪ. ನಿಖಿಳ ಸಂಪದ ತನ್ನಿಂ-ತಾನೆ ಬಹುದು ತಡವಿಲ್ಲಆ ನಳಿನಭವಾದ್ಯಮರರಿದಕೆ ಸಾಕ್ಷಿಭಾನುಸನ್ನಿಭ ಬಾರೊ ನಲ್ಲ1 ಬೋವ ನೀನಾದಂದು 2 ವೃಂದಾರಕೇಂದ್ರ ಶ್ರೀ ಹಯವದನ ಮುಕುಂದಮಂದರೋದ್ಧಾರ ಮತ್ತೊಂದರಿಯೆಇಂದಿರೆಯರಸ ಬಾ ಇಂದುವದನ ದೀನ-ಬಂಧುವೆ ಭಕ್ತರ ಸಿರಿಯೆ 3
--------------
ವಾದಿರಾಜ
ಕಂಡೆ ನಾ ಕಣ್ಣಾರೆನಾ | ಕಂಡೆನಾ ಪ ಕಂಡೆನು ಕರುಣಾಸಾಗರನ | ಕರ ದಂಡ ನಾಮಕೊಲಿದವನ | ಆಹಾ ದಂಡ ಧಂಡದ ಲೀಲೆ ತೋಂಡರೊಡನಾಡು ಮೂರ್ತಿ 1 vಟಿಟತಮತ್ಕೋಟಿ ಸನ್ನಿಭನ | ದೇವ | ತಟಿನಿಯ ಪದದಿ ಪೆತ್ತವನ | ಚಾರು ಕರವ ನಿಟ್ಟವನ | ನಿಜ ಭಟ ಜನರಿಗೆ ಮುಕ್ತಿ ಪ್ರದನ ||ಆಹಾ || ಜಠರದಿ ಜಗವಿಟ್ಟು ವಟದೆಲೆಯೊಳು ಮಲಗಿ ವಟುರೂಪದಲಿ ಪಾದಾಂಗುಟವನು ಮೆಲುವನ 2 ಭುವನದೊಳು ಸಂಚರಿಸುವನ | ಕೂರ್ಮ ಮಾನವ ಪಂಚಮುಖನ | ಋಷಿ ಕುಮಾರ ಕುವರರ ಕಡಿದವನ ಮಹಿ ಕರವ ಕುವಲಯ ಸಖ ಕುಲೋಧ್ಭವ ಭವಮಾರ್ಗಣ ಬವರದಿ ಹಯವೇರಿ ಯವನರ ಬಡಿದನ 3 ಲ್ಮೊಗನ ನಾಭಿಲಿ ಪಡೆದವನ | ರವಿ ಮಗನಿಗೆ ಮಗನಾದವನ ತನ್ನ ಪೊಗಳುವಂಥರಫÀ ಕಳೆಯವವನ ಆಹಾ ಜಗನ್ನಾಥದಾಸರಿಗೆ | ಸೊಗಸಾದ ಮೃಷ್ಟಾನ್ನ ಬಗೆ ಬಗೆ ಉಣಿಸಿದ ಖಗಪತಿ ಗಮನನ4 ಸಾಸಿರನಯನನುಜನ | ಮಹಿ ದಾಸ ಕಪಿಲದತ್ತಾತ್ರೇಯನ ವೇದ ವ್ಯಾಸ ವೃಷಭ ಹಯಮುಖನ ಭಾರ ಶ್ರೀಶ ಮಾನಸಮಂದಿರ ||ಆಹಾ || ಶ್ರೀಶ ತಂದೆ ವೆಂಕಟೇಶ ವಿಠಲಂಘ್ರಿ ದಾಸರ ಸತ್ಯಹವಾಸದಿಂದಲಿಯಿಂದು 4 ತಂದೆ ತಾಯ್ಗಳ ಸುಕೃತವೊ | ನಮ್ಮ ಒಂದೂರಾರ್ಯರ ಅನುಗ್ರಹವೋ | ಸ್ತಂಭ ಮಂದಿರ ರಾಯರ ದಯವೊ | ದಾಸ ವೃಂದ ಕೃತಾಶೇಷ ಫಲವೊ | ಆಹಾ ಇಂದು ಭಾಗದಿ ಭಕ್ತಾವೃಂದಕೆ ದರುಶನಾ ನಂದಗರೆವ ಶಾಮಸುಂದರ ವಿಠಲನ 5
--------------
ಶಾಮಸುಂದರ ವಿಠಲ
ಕಂಬು ಕಂಧರ ಸತತ ಬಿಡದೆ ರಕ್ಷಿ ಸಂಬೋಜೋಧ್ಭವನ ತಾತ ಪ ಜಂಭಾರಿ ವೈರಿಕುಲಾಂಬುಧಿ ಕುಂಭಜ ಕುಂಭಿಣಿಸುರ ನಿಕÀರುಂಬ ಪೋಷಕದೇವ ಅ.ಪ ನಳಿನಾಕ್ಷ ನರಕೇಸರಿ ನಂಬಿದೆ ನಿನ್ನ | ಶೌರಿ || ಸಿರಿ | ನಿಲಯ ನಿತ್ಯಾನಂದ ಎಲರುಣಿ ವರಶಾಯಿ ಕಲುಷಸಂಹಾರಕ ಜಲದರಿಪುವಿನ ತನಯಾನನುಜನ ಕಲಹದೊಳು ಜೈನಿದನ ತಾತನ ಕುಲವಿರೋಧಿಯ ಧ್ವಜನ ಜನಕಗೆ ಒಲಿದು ಬೆಂಬಲನಾದ ಕೇಶವ 1 ನಿಗಮ ರಕ್ಷಕ ಕೂರ್ಮಕೀಟ ಮಾನವ ಮೃಗವಟು ಪರಶುರಾಮ ಅಗಜೇಶ ಶರಕಾಲ | ನಗಪತಿ ವರದನೆ ಅ(ಗ)ಗಜರಾಜನ ಮಗಳಿಗೋಸುಗ ನಗುತ ಮಡದಿಯನಗಲಿ ಬಂದು ಜಗದಿ ಪೊತ್ತನ ನಗದಿ ನೆಲಸಿದ ತ್ರಿಗುಣ ವರ್ಜಿತ ಖಗವರೂಧನೆ 2 ಮಂದರೋದ್ಧರ ವಿಶಾಲಮಹಿಮನಾದ ಸಿಂಧೂರ ಪರಿಪಾಲ | ಕಂದರ್ಪಪಿತ ಶಾಮಸುಂರವಿಠಲನೆ ವಂದಿಸುವೆನು ಎನ್ನ | ಬಂಧನ ಬಿಡಿಸಯ್ಯ ಫಣಿ ಪತಿ ಪತಿ ವಿರೋಧಿ | ಪು ರಂದರಾರ್ಯರ ವೃಂದ ವಂದಿತ ನಂದ ಸುತ ಗೋವಿಂದ ಗೋಪತಿ 3
--------------
ಶಾಮಸುಂದರ ವಿಠಲ
ಕರ ಮುಗಿವೆ ಶರಜನೇ ಪ ಕರಗಳ ಮುಗಿವೆನು ಕರುಣಿಗಳರಸನೇ ಕರಮುಗಿವೆ ಅ.ಪ ಕಾಲಕಾಲನ ಪ್ರಿಯ ಬಾಲ ಕುಮಾರ | ಶೀಲ ಸುಗುಣ ರತ್ನಾಮಾಲ ಗಂಭೀರ | ಕರಮುಗಿವೆ 1 ಬೆನಕನನುಜ ಗುಹ ದಿನಪನ ತೇಜಾ ರಣದÀಲಿ ಸೇನಾನಿ ಸನಕಾದಿ ಪೂಜಾ | ಕರಮುಗಿವೆ2 ಚರಣ ದಾಸರಿಗಿಷ್ಟ ಕರುಣಿಸಿ ಕೊಡುವಾ ಸುರವರ ಪಾವಂಜೆ ಪುರದ ಶ್ರೀ ದೇವಾ | ಕರಮುಗಿವೇ 3
--------------
ಬೆಳ್ಳೆ ದಾಸಪ್ಪಯ್ಯ
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು