ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸರ ಮೊರೆ ಲಾಲಿಸೋ ವೆಂಕಟಾಚಲ ವಾಸ ಬಿನ್ನಪ ಲಾಲಿಸೊ ಪ ಲೇಸು ಭಕುತಿಯು ಮಾಡದಲೆ ಬಲು ಘಾಸಿಯಾಗುತ ಮನದಿ ನೊಂದು ದಾಸನಾಗದೆ ಕ್ಲೇಶಪಟ್ಟೆನೊ ಈಸುದಿನಗಳ ಕಳೆದೆನೊ ವೃಥಾ1 ತಳಿರು ಪೋಲುವ ನಿನ್ನಯ ಪಾದ- ಕ್ಕೆರಗದೆನ್ನಯ ಸಿರವು ದಣಿಯನೋಡದೆ ನಿನ್ನನು ಮಹಾಪಾಪ ಗಳನೆ ಮಾಡುತ ನೊಂದೆನು 2 ಅನಿಮಿಷೇಶನೆ ನಿನ್ನ ಮಹಿಮೆಯ ಕ್ಷಣಬಿಡದೆ ಧ್ಯಾನವನೆ ಮಾಡುವ ಅನಲಸಖತನಯನಿಗೆ ನಮಿಸುವೆ ಕ್ಷಣ ಬಿಡದೆ ಎನ್ನ ಪೊರೆವ ಕರುಣಿ3 ಕಟಿಯ ಕಾಂಜಿಯ ದಾಮವು ನವರತ್ನದ ಸ್ಫ್ಪಟಿಕ ಮುತ್ತಿನ ಹಾರವು ಲಕುಮಿ ಧರಿಸಿದ ವಕ್ಷ ಕೌಸ್ತುಭಹಾರ ಸ್ಫುಟದಿ ಶೋಭಿಪ ಉರವು 4 ವಟುವಿನಂದದಿ ಪ್ರಕಟನಾಗುತ ಕುಟಿಲ ದಿತಿಜರಿಗಖಿಳ ವಿಧ ಸಂ- ಕಟಗಳನೆ ಸಂಘಟನೆ ಮಾಡುವ ನಟನ ತೆರ ವಟಪತ್ರಶಾಯಿ 5 ನೊಸಲ ಕಸ್ತೂರಿ ತಿಲಕ ರಂಜಿಸುವ ಚಂ- ಪಕವ ಪೋಲುವ ನಾಸಿಕ ಎಸೆದು ಶೋಭಿಪ ಮೌಕ್ತಿಕ ಪೋಲುವ ದಂತ ನಸುನಗುತಿಹ ಹಸನ್ಮುಖ6 ಶಶಿಯ ಧರಿಸಿದ ಅಸಮ ಭಕುತನು ನಿಶಿಹಗಲು ತನ್ನ ಸತಿಗೆ ಬೆಸಸಿದ ಅತಿಶಯದ ಮಹಿಮೆಯನೆ ಕೇಳುವ ಮತಿಯ ಕೊಡು ಮನ್ಮಥನ ಪಿತನೆ 7 ಚಿತ್ತದೊಳಗೆ ನಿನ್ನಯ ಪಾದಾಂಬುಜ ಭಕ್ತಿಯಿಂದಲಿ ಕಾಂಬುವ ಭಕ್ತಜನರ ವೃಂದವ ಕರುಣದಿ ಕಾಯ್ವ ವಿಷ್ಣು ಮೂರುತಿ ಕೇಶವ 8 ಎತ್ತನೋಡಿದರಿಲ್ಲ ನಿನ್ನ ಸಮ ಉತ್ತಮರ ಕಾಣುವುದೆ ಮಿಥ್ಯವೊ ಸತ್ಯವಿದು ಪುರುಷೋತ್ತಮನೆ ಎನ್ನ ಚಿತ್ತದಲಿ ನಲಿನಲಿದು ಶ್ರೀಶ 9 ಕಮಲಸಂಭವ ಪಿತನೆ ಪ್ರಾರ್ಥಿಸುವೆ ಶ್ರೀ- ರಮೆಧರೆಯರಿಂ ಸೇವ್ಯನೆ ಕ್ಷಣಬಿಡದಲೆ ನಿನ್ನನೆ ಚಿಂತನೆ ಮಾಳ್ಪ ಸುಜನರಿಗೊಲಿಯುವನೆ 10 ಶ್ರವಣ ಮನನಕೆ ಒಲಿವ ದೇವನೆ ದಿನದಿನದಿ ನಿನ್ನ ಮಹಿಮೆ ತೋರು ಶ್ರೀ- ಕಮಲನಾಭ ವಿಠ್ಠಲನೆ ಕರುಣದಿ ಶ್ರಮವ ಹರಿಸುಸುಧಾಮ ಸಖನೆ11
--------------
ನಿಡಗುರುಕಿ ಜೀವೂಬಾಯಿ
ನಿತ್ಯ ಶುಭಮಂಗಳಂ ಪ. ವಸುದೇವತನಯನಿಗೆ ವೈಕುಂಠನಿಲಯನಿಗೆಕುಸುಮನಾಭನಿಗೆ ಕೋಮಲರೂಪಗೆಯಶೋದೆನಂದನಗೆ ವಸುಧೆಯ ರಮಣನಿಗೆನಸುನಗೆಯೊಳೊಪ್ಪುವ ನರಸಿಂಹಗೆ1 ಕೌಸ್ತುಭ ಹಾರಗೆಕನಕಾಂಬರಧರನಿಗೆ ಕಾರುಣ್ಯರೂಪನಿಗೆಸನಕಾದಿ ಮುನಿವಂದ್ಯ ನರಸಿಂಹಗೆ2 ಪಂಕಜನಾಭನಿಗೆ ಪಾಂಚಾಲಿರಕ್ಷÀಕಗೆಲಂಕೆಯನು ವಿಭೀಷಣನಿಗಿತ್ತವಗೆಕುಂಕುಮಾಂಕಿತನಿಗೆ ಕುವಲಯನೇತ್ರನಿಗೆಬಿಂಕದಿಂದಲಿ ಮೆರೆವ ನರಸಿಂಹಗೆ 3 ಪಕ್ಷಿವಾಹನನಿಗೆ ಪರಮಪಾವನನಿಗೆಕುಕ್ಷಿಯೊಳು ಜಗವನಿಂಬಿಟ್ಟವನಿಗೆಲಕ್ಷುಮೀಕಾಂತನಿಗೆ ಲಕ್ಷಣವಂತನಿಗೆಲಕ್ಷಣದೊಳೊಪ್ಪುವ ನರಸಿಂಹಗೆ4 ಭಕ್ತವತ್ಸಲನಿಗೆ ಭವದುಃಖದೂರನಿಗೆಮುಕ್ತಿದಾಯಕಗೆ ಚಿನ್ಮಯರೂಪಗೆಮಿತ್ರೆರುಕ್ಮಿಣಿ ಸತ್ಯಭಾಮೆಯರರಸನಿಗೆನಿತ್ಯಕಲ್ಯಾಣ ಶ್ರೀಹಯವದನಗೆ 5
--------------
ವಾದಿರಾಜ
ಭಗವಂತನ ಸಂಕೀರ್ತನೆ ಅನುದಿನ ನೆನೆಯಲೊ ಹನುಮನಿಗತಿ ಪ್ರಿಯ ಪರಮ ಪಾವನ ರಾಮನಾಮ ಪ ಇನಕುಲ ಭೂಷಣ ಮುನಿಜನ ತೋಷಣ ಜಾನಕಿರಮಣನ ನಾಮ ಅ.ಪ ಗೌತಮ ಸತಿಯೆ ಪುನೀತಳ ಮಾಡಿ ಪ್ರ- ಖ್ಯಾತಿ ಪೊಂದಿದ ದಿವ್ಯನಾಮ ಶೀತಲ ಕಿರಣ ಭೂಷಣನ ಧನುವ ಮುರಿದು ಸೀತೆಯ ಪೊಂದಿದ ನಾಮ 1 ಜನಕನ ವಚನವನುಳಿಸುವ ನೆವದಲಿ ವನವಾಸ ಮಾಡಿದನ ನಾಮ ವನದಲಿ ಖರದೂಷಣ ಮುಖ ದನುಜರ ಹನನ ಮಾಡಿದ ದಿವ್ಯನಾಮ2 ಶರಭಂಗಮುನಿಗೆ ಪರಮ ಪದವನಿತ್ತ ಪರಮ ಪವಿತ್ರನ ನಾಮ ನಾಸಿಕ ಕರ್ಣ ಮುರಿಸಿದವನ ಶುದ್ಧ ನಾಮ 3 ಭೂಮಿಜೆಯನು ಮೋಸದಿಂದ ಅಗಲಿಸಿದ ಮಾರೀಚನ ಕೊಂದ ನಾಮ ಸ್ವಾಮಿಯ ಪ್ರೇಮಕ್ಕೆ ಮಡಿದ ಜಟಾಯುಗೆ ಅಭಯ ಹಸ್ತವನಿತ್ತ ನಾಮ 4 ಆ ಮಹಾ ಹನುಮನ ಕಾಮಿತದಂತೆ ಮಹೇಂದ್ರ ಸುತನ ಕೊಂದ ನಾಮ ಕಮಲ ಸುಹೃದತನಯನಿಗೆ ಸಾಮ್ರಾಜ್ಯವನಿತ್ತ ನಾಮ 5 ಪರಿಪರಿವಾರದಿಂ ಶರಧಿಯೊಳ್ ಸೇತು ಬಂಧನವ ಮಾಡಿದ ರಾಮನಾಮ ದುರುಳ ರಾವಣ ಮುಖ ರಕ್ಕಸರನೆ ಕೊಂದು ಧರಣಿ ಸುತೆಯ ಕಂಡ ನಾಮ6 ಶರಣವ ಪೊಂದಿದ ಭಕುತ ವಿಭೀಷಣಗೆ ತರುಣಿ ಸೀತೆ ಲಕ್ಷ್ಮಣರಿಂದ ಕೂಡಿ ಪು ಷ್ಪಕವನೇರಿದ ಸಾಧು ನಾಮ 7 ಉರುತರ ತಪದಲಿ ನಿರತನಾದ ತಮ್ಮ ಭರತನ ಉಳಿಸಿದ ನಾಮ ದೊರೆತನವೊಂದಿ ಸಕಲ ಸುಜನರುಗಳಿಗೆ ಪರತರ ಸುಖವಿತ್ತ ನಾಮ 8 ತನ್ನ ಭಕುತರೊಳು ಉನ್ನತನೆನಿಸಿದ ಘನ್ನಮಾರುತಿಗೊಲಿದ ನಾಮ ಪ್ರ ಸನ್ನನಾಗಿ ಸಂತತ ಇವನಿಗೆ ತನ್ನ ಸಹ ಭೋಗ ಸುಖವಿತ್ತ ನಾಮ 9
--------------
ವಿದ್ಯಾಪ್ರಸನ್ನತೀರ್ಥರು
ಮಂಗಲಂತ್ರಿಪುರಸುಂದರಿ ಬನ ಶಂಕರಿಗೆ |ಮಂಗಲಂ ಸನ್ನಿಧಿಯ ಕೌಮಾರಿಗೆ |ಮಂಗಲಂ ಭ್ರಮರಾಂಬದೇವಿ ಚೌಡೇಶ್ವರಿಗೆ |ಮಂಗಲಂ ಶ್ರೀ ಲಕ್ಷ್ಮೀ ಮಹಾ ಮಾಯಿಗೆ | ಮಂಗಲಂ ಜಯಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಕಮಲದಳ ನಯನಿಗೆ ಕಮಠಾವಲೋಚನೆಗೆ ವಿಮಳವರವೀವ ಚೂಡಿದರಕೊರಳಿಗೆ |ದ್ಯುಮಣಿಶಶಿಕಿರಣದ ಶ್ರವಣ ಭೂಷಣಿಗೆ ಭ್ರಮರಾರಿ ನಾಸಿಕದಮಣಿಮೌಕ್ತಿಗೆ ಮಂಗಲಂ ಜಯಶುಭಮಂಗಲಂ1ಓಂಕಾರ ವದನಿಗೆ ವೇದಾಂತ ರದನಿಗೆ |ಪಂಕವಿರಹಿತದ ಚಿದ್ರಸ ಜಿವ್ಹೆಗೆ |ಅಂಕದಲಿ ಬ್ರಹ್ಮಪೀಯೂಷರಸ ಸುರಿವ ರುಣದಂಕುರಿಪಪವಳಮಣಿರುಚಿಯ ಧರಿಗೆ ಮಂಗಳ2ಕನಕಕಲಶ ತೋಳಿಗೆ ಕಲಶ ಕುಚಯುಗಳಿಗೆ |ಚಿನಕ ಪೂರ್ವಣ್ಯ ಕಂಚುಕದ ರುಚಿಗೆ ಸನಕಾದಿಗಳತಲೆಯ ಮೇಲಿಡುವ ಹಸ್ತಯುಗ ವನಜೆಶ್ರೀದೇವಿಯಂಗುಲಿಯ ನಖಕೆ ಮಂಗಳ3ಹಸ್ತದಾಭರಣಿಗೆ ಕೊರಳ ಭೂಷಣಿಗೆನಿಜನಿತ್ಯಮಂಗಳಿಗೆಹಾಟಕವರ್ಣಿಗೆ |ರತ್ನ ಬೈತಲಿಗೆ ವಜ್ರಾಣಿ ಪಾರಂಗಣಿಗೆ ನಿಜ |ಮುತ್ತಿನ ಬೊಟ್ಟು ಕುಂಕುಮದ ಫಣಿಗೆ ಮಂಗಳ4ಮರಗು ಮಲ್ಲಿಗೆ ಮುಡಿಗೆ ದುಂಡ ದಂಡಿಯತಲೆಗೆ ಕೊರಳ ಹಾರವ ತುದಿಯ ಕಾಲಿಂದಿಗೆ |ಪರಿಕ್ರಮದ ತಾಂಬೂಲವದನನಸು ನಗೆ ಮೊಗದಪರಿಮಳದ ಘನಸಾರತನುಲೇಪಿಗೆ | ಮಂಗಳ5ಪರಬ್ರಹ್ಮರೂಪಿಗೆ ಪರಾತ್‍ಪರ ಶಂಕರಿಗೆ ನಿರುಪಮಾನಂದಶ್ರೀ ಮಹಾಲಕ್ಷ್ಮಿಗೆ | ಶಿರಸ ಪೂಜೆಯ ಅರಳು ಮಲ್ಲಿಗೆಯುಕೃಪೆಯಿಂದಜರಿದುಉದರಿದವು ಗಿರಿದ್ವಾರದಲ್ಲಿ ||ಮಂಗಳ6
--------------
ಜಕ್ಕಪ್ಪಯ್ಯನವರು