ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮಿಸುವೆ ಗುರುರಾಜ - ಸುತೇಜ ಪ ನಮಿಸುವೆ ಸುಜನರ ಕಲ್ಪಭೂಜ ಅ.ಪ ಶರಣ ಜನಾವನ ಕರುಣಾಭರಣ ಹರಿಚರಣಾರಾಧನ ಧುರೀಣ 1 ಮೂರಾವತಾರವನೆತ್ತಿದ ಧೀರ ಸಾರಿದವರ ಸಂತಾಪ ವಿದೂರ 2 ದ್ವಿಜಕುಲದೀಪ ಭವ್ಯ ಸ್ವರೂಪ ಅಜರಾಮರ ಸತ್ಕೀರ್ತಿ ಪ್ರತಾಪ 3 ಜ್ಞಾನವಿರಕ್ತಿ ನಿರ್ಮಲಭಕ್ತಿ ಮಾಣದೆ ಕೊಡುವುದು ಮನಸಿಗೆ ಶಾಂತಿ 4 ವರ ಮಂತ್ರಾಲಯ ಸುರುಚಿರ ನಿಲಯ ಕರಿಗಿರೀಶ ಶ್ರೀ ನರಹರಿಪ್ರಿಯ 5
--------------
ವರಾವಾಣಿರಾಮರಾಯದಾಸರು
ನಮೋ ನಮೋ ನರಹರಿಪ್ರಿಯಾನರಸಿಂಹಾರ್ಯ ಪಗಲಗಲಿ ಶ್ರೀ ನರಸಿಂಹಾರ್ಯ ಕರುಣದಿಪೊರೆಸದ್ಗುರುವರ್ಯಾ ಶರಣು ಬಂದೆನು ತಂದೆಮಾಡೊ ದಯಾ ತಂದೆ ಮಾಡೊ ದಯಾಪುನರ್ಜನ್ಮ'ತ್ತ ಮಹಾರಾಯಾ 1ನಿಮ್ಮ ಚರಿತ್ರವೆನಗೆ ಸ್ಪೂರ್ತಿನಿಮ್ಮ ಸ್ಮರಣೆ ಜ್ಞಾನದ ಜ್ಯೋತಿನಿಮ್ಮ ಅನುಗ್ರಹವೆ ಕೀರ್ತಿನಿಮ್ಮ ಪಾದವೇ ಎನಗೆ ಗತಿ 2ನಿ'್ಮುಂದಲೇ ಗಾಲವ ಕ್ಷೇತ್ರನಿಮ್ಮ ಮನೆಯು ಸದಾ ಅನ್ನಛತ್ರನಿಮ್ಮ ಆಶ್ರಯವೇ ಜ್ಞಾನ ಸತ್ರನಿಮ್ಮ ಸಂಚಾರವೇ ಮಹಾಯಾತ್ರಾ 3ಅಷ್ಟೋತ್ರ ಶತಕುಂಭ ಸ್ನಾನಾ ನಿತ್ಯ ಅಷ್ಟೋತ್ರರ ಶತ ಕುಂಭಸ್ನಾನಾಕೃಷ್ಣಾ ಭಾಗೀರಥಿ ನನ್ನಿಧಾನಾ ಸೀತಾರಾಮ ಪ್ರತಿಮಾರ್ಚನಾನಿತ್ಯ ರಾತ್ರಿ ಸುಭೋಜನಾ 4ಮುದ್ಗಲಾರ್ಯ ಬಾಬಾರ್ಯನಮೋ ಸದ್ಗುರು ನರಸಿಂಹಾರ್ಯ ನಮೋಸದ್ಭಕ್ತಪ್ರಿಯ ಭೂಪತಿ'ಠ್ಠಲ ಗಲಗಲಿ ನರಹರಿತೊರ'ಯ ನರಹರಿ ಶೂರ್ಪಾಲಿಯ ನರಹರಿ ನಮೋ ನಮೋ 5
--------------
ಭೂಪತಿ ವಿಠಲರು