ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸೊ ಶ್ರೀ ಗುರುರಾಜ ಬರದ್ಯಾಕೆ ಎನ್ನೊಳು ದಯ ಪ ದಯಮಾಡೊ ಶ್ರೀ ಗುರುರಾಜ ಹಯವದನನಿಗತಿ ಪ್ರಿಯ ಅ.ಪ ಒಲಿಸಾದೆ ವಿದ್ಯೆಗಳನ್ನು ಬಾಲತನದಿ ಬಹುಕಾಲ ಕಳೆದೆ ಕುಲೀಲೆಗಳಲ್ಲಿ ಛಲವ್ಯಾಕೆ ಎನ್ನೊಳು ಬಲ್ಲಿ 1 ಜ್ಞಾನರಹಿತ ಪ್ರಾಯದಿ ಮಾನಾಪೇಕ್ಷೆಯನೆ ಮಾಡಿ ಮೌನಿ ವೇಷವನೆ ಧರಿಸಿ ಹೀನಾಚರಣೆಯಲ್ಲಿರುವೆ 2 ಪತಿತಾಗ್ರಣಿಯು ನಾ ಬಲ್ಲಿ ಪತಿತಪಾವನ ನೀ ಬಲ್ಲೆ ಗತಿಪದ ಮತಿಯನಿತ್ತು ರತಿಪತಿಪಿತನ ತೋರಿ3 ಬಲ್ಲವರನು ರಕ್ಷಿಪುದು ಅಲ್ಲ ಬಿರುದು ಘನವಾದ್ದು ಅಲ್ಪನ ಪೊರೆಯಲು ನಿನಗೆ ಒಳ್ಳೆ ಕೀರುತಿ ಬರುವುದು 4 ಸರ್ವಜ್ಞ ನಿನಗೆ ನಾನೆಂತೋ ಉರ್ವೀಭಾರನು ನಾ ಪೇಳ್ವೆ ಪರ್ವ ಪಂಚಕಗಳ ಕಳೆ ಶ್ರೀ ನರಹರಿಯನೆ ಪೊಂದಿಸಿ 5
--------------
ಪ್ರದ್ಯುಮ್ನತೀರ್ಥರು
ವರ ಮಂತ್ರಾಲಯದೊಳು ಘನವಾಗಿ ನೆಲಸಿರ್ಪ ಪರಮ ಸದ್ಗುರುವರ್ಯ ಶ್ರೀ ರಾಘವೇಂದ್ರ ಪ ತವಕದಿಂ ದಿನದಿನವು ತೇಜವನು ಬೆಳಗುವೆ 1 ನರನಂತೆ ಮೆರೆಯುವ ಜಯಮುನಿಕೃತಶಾಸ್ತ್ರ ಪರಿಮಳವನು ನೀನು ಪಸರಿಸಿದೆಯಲ್ಲವೆ 2 ಮಧ್ವಮತವೆಂಬ ದುಗ್ಧಸಾಗರದೊಳು | ಉದ್ಭವಿಸಿದ ಪೂರ್ಣ ಹಿಮಕರ ತೇಜ 3 ಅಸುರನಂದನನಾಗಿ ನರಹರಿಯನೆ ಕಂಡ ಸಿರಿ ಗುರುರಾಘವೇಂದ್ರ 4 ರಾಜೇಶ ಹಯಮುಖ ಭಜಕರೊಳಗೆ ನೀನು ರಾಜಿಪ ಸುರತರುವಂತಿರ್ಪೆ ಗುರುವೆ 5
--------------
ವಿಶ್ವೇಂದ್ರತೀರ್ಥ