ಒಟ್ಟು 19 ಕಡೆಗಳಲ್ಲಿ , 14 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇವ ನೋಡಮ್ಮ ನವನೀತಚೋರ ದೇವದೇವ ಮಾ ಮನೋಹರ ಧ್ರುವ ಗೋವನಿವ ಗೋಪಾಲ ಶ್ರೀಧರ ಗೋವಿಸುವ ಇವ ದಾಮೋದರ ಸಾವಿರ ನಾಮದೊಡೆಯ ಸಹಕಾರ ಫಣಿ ಮೆಟ್ಟಿದ ವೀರ 1 ಸಿರಿಯ ಲೋಲನಿವ ನಂದಕುಮಾರ ಉರಗಶಯನ ಕೌಸ್ತುಭಭರ ಪರಮ ಪುರಷ ಹರಿಯ ಸುರವರ ಮರುಳಮಾಡಿದವ ಗೊಲ್ಲತೇರ 2 ಬೆಣ್ಣೆ ಮೊಸರು ಕದ್ದು ವೈವನ ಕಣ್ಣಿಲೆ ಕಟ್ಟಬೇಕು ಇವನ ಪುಣ್ಯಯುಳ್ಳ ಯಶೋದೆ ಕಂದನ ಬಣ್ಣಿಸೊ ಮಹಿಪತಿಗನುದಿನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಈತನೆಂಥಮಹಿಮೆ ನೊಡಿರೆ ರಂಗಯ್ಯ ರಂಗ ಈತನೆಂಥ ಮಹಿಮ ನೋಡಿರೆ ಪ ಈತನೆಂಥ ಮಹಿಮ ಓರ್ವ ಮಾತೆಯುದರದಿ ಜನಿಸಿ ಮತ್ತೊಬ್ಬ ಮಾತೆಕೈಯಿಂದ ಬೆಳೆದು ಗೋಕುಲ ನಾಥ ನವನೀತಚೋರನೆನಿಸಿದ ಅ.ಪ ಕಾಳಕೂಟ ವಿಷವ ಕುಡಿಸಿದ ಆ ಮಾಯದೈತ್ಯಳ ಕಾಲನ ಆಲಯಕೆ ಕಳುಹಿದ ಮಡುವನ್ನು ಧುಮುಕಿ ಕಾಳಿ ಹೆಡೆಮೆಟ್ಟಿ ನಾಟ್ಯವಾಡಿದ ಗೋವುಗಳ ಕಾಯ್ದ ಬಾಲನೆಂದೆತ್ತೊಯ್ಯಲು ಬಂದ ಖೂಳ ಶಕಟನ ಸೀಳಿ ಒಗೆದು ಕಾಳಗದಿ ಧೇನುಕನ ತುಳಿದು ಬಾಲಲೀಲೆಯ ತೋರಿ ಮೆರೆದ 1 ಪರಿಪರಿಯ ಮಾಯದಿಂ ಕಾಡ್ವ ಭೂಭಾರಿಯಾಗಿ ಧರಣಿಜನರತಿಶಯದಿ ಬಳಲಿಸುವ ಪರಮಕಂಟಕ ದುರುಳ ಕಂಸನೆಂಬುವನ ಶಿರವ ತರಿದ ಮಾಧವ ಧರಣಿತಾಪವನ್ನೆ ಕಳೆದು ಸೆರೆಯ ಬಿಡಿಸಿದ ಜನನಿ ಜನಕರ ಮಹಿಮೆ ತೋರ್ದ 2 ಗೊಲ್ಲ ಬಾಲರ ಸಮೂಹವನು ನೆರೆಸಿ ಮನೆಯಲ್ಲಿ ಯಾರು ಇಲ್ಲದ ಸಮಯವನೆ ಸಾಧಿಸಿ ಮೆಲ್ಲಮೆಲ್ಲನೆ ಎಲ್ಲ ಬಾಲರ ಒಳಗೆ ತಾ ಹೊಗಿಸಿ ಪಾಲ್ಮೊಸರು ಸವಿಸಿ ಕಳ್ಳ ಕೃಷ್ಣೆಮ್ಮ ನಿಲ್ಲಗೊಡನೆಂದು ಗೊಲ್ಲಸ್ತ್ರೀಯರು ಗುಲ್ಲುಮಾಡಲು ನಿಲ್ಲದೋಡಿ ತಾ ಪುಲ್ಲನಾಭನು ಎಲ್ಲಿ ನೋಡಿದರಲ್ಲೆ ತೋರುವ 3 ಶಿಶುವು ಈತನೆಂದು ಮುದ್ದಿಸುವಾಗ ಕುಶಲದಿಂದಪ್ಪಿ ಅಧರ ಸವಿಯುವ ಎಂಥ ಶಿಶುವನೆ ಹಸುಮಗಾಗೆಳೆದೊಯ್ದು ರಮಿಸುವ ಮಿಸುಗಗೊಡನಿವ ಕಸಿದು ಭಾಂಡ ದೆಸೆದೆಸೆಗೆ ಎಳೆದು ವಸುಧೆಯೊಳು ತನ್ನ ಅಸಮ ಮಹಿಮೆಯ ಪಸರಿಸಿದ ಹರಿ4 ಮಣ್ಣು ತಿಂದು ತಾಯ ಬಳಿಗೈದಕಂದ ಏನಿದು ಮಣ್ಣು ತಿನ್ವರೆ ಉಗುಳೆಂದೆಶೋದೆ ಕಣ್ಣು ತಿರುವÀಲು ತನ್ನ ಬಾಯೊಳ್ಬ್ರಹಾಂಡ ತೋರಿದ ಭಿನ್ನವಿಲ್ಲದ ತನ್ನ ತಾನು ಅರಿಯದೆಶೋದಿನ್ನು ಈರೂಪವಡಗಿಸೆನ್ನಲು ಸಣ್ಣಮಗುವಾಗಿ ಚಿಣುಫಣುವಿಡಿದುನ್ನ - ತೋನ್ನತ ಆಟವಾಡಿದ 5 ಪರಿಪರಿಯಲಿ ಕಾಡ್ವ ಕೃಷ್ಣನ್ನ ವರದೇವಿ ತಡೆಯದೆ ಸರವೆನಡುವಿಗ್ಹಚ್ಚಿ ತರಳನ್ನ ಸರಸರನೆ ಬಿಗಿದು ಒರಳಿಗ್ಹಾಕಿ ಕಟ್ಟಿ ಮುರಹರನ ಮರೆಯಾಗಲಾಕ್ಷಣ ಊರುತಂಬೆಗಾಲು ಊರಬೀದಿಲಿ ಒರಳನೆಳೆಯುತ ಹೊರಗೆ ಹೋಗಿ ತರಗುಳಿರಕಿಲದೊರಳ ಸೇರಿಸಿ ಮುರಿದು ಶಾಪದಿಂ ಮುಕ್ತಮಾಡಿದ 6 ಪುಂಡತನದಿಂ ಸೊಕ್ಕಿಮರೆಯುವ ಆ ರುಗ್ಮನಿಡಿಕೈಯ ಬಂಡಿಗಾಲಿಗೆ ಕಟ್ಟಿ ಶ್ರೀಧರ ರುಗ್ಮಿಣಿಯನ್ನು ಕೊಂಡು ಗೋಕುಲ ಸೇರಿ ವೈಭವ ನಡೆಸಿ ಯಾದವ ರ್ಹಿಂಡಲಿಗೂಡಿಸಿ ಪುಂಡದೇವಿಯುದ್ದಂಡತನದಿ ಕೈ ಕೊಂಡ ಕಲ್ಯಾಣ ಗಂಡುಗಲಿಗಳ ಗಂಡನೆನಿಸಿದ ಹಿಂಡುದೇವರ ಸಾರ್ವಭೌಮ 7 ಚರಣದಾಸರ ಒಡೆಯ ತಾನಾದ ವರ್ಣಿಸಲಳವಲ್ಲ ಚರಣದಾಸರ ದಾಸನೆನಿಸಿದ ಪುಸಿಯಲ್ಲ ಕೇಳಿರಿ ನರನ ಕುದುರೆಯ ವಾಘೆಯನು ಪಿಡುದು ರಥವ ನಡೆಸಿದ ಕರೆಯಲೋಡಿದ ಸರಸಿಯಲ್ಲಿಗೆ ಭರದಿ ಒದಗಿದ ಕುರುಪಸಭೆಯಲ್ಲಿ ಪರಮ ನಿಗಮಗಳ್ಗಿರುವನಗೋಚರ ಸ್ಮರಿಸಿದವರಿಗೆ ಭರದಿ ನೆರವಾದ 8 ತಾಳಿಬಂದ ನಾರಾಯಣಾವತಾರ ಪಾಲಿಸಲು ಜಗವಂ ಬಾಲಗೋಪಾಲ ಭಕ್ತರಾಧಾರ ಗೊಲ್ಲನೆನಿಸಿ ಲೀಲೆನಡೆಸಿದ ಶಾಮಸುಂದರ ಭವಜಾಲಪರಿಹರ ಕಾಳರಕ್ಕಸರೊಳು ಕಾದಿ ನಿರ್ಮೂಲಮಾಡಿ ಜಗಪಾಲಿಸಿದ ತ್ರಿ ಜಾನಕಿಲೋಲ ಶ್ರೀರಾಮ 9
--------------
ರಾಮದಾಸರು
ಏನ ಬೇಡಲೊ ನಿನ್ನ ದೇವಾಧಿ ದೇವ ಪ ಏನಹುದೊ ನಿನ್ನೊಳಗೆ ಮಹಾನುಭಾವ ಅ.ಪ ವನಧಿ ಹಾಸಿಗೆಯು ವಟಪತ್ರವನಿತೆಯರ ಬೇಡಲೆ ಬ್ರಹ್ಮಚಾರಿಘನ ಸಖ್ಯವನು ಬಯಸೆ ನೆನೆಯುವರ ಮನದಲಿಹೆತಿನುವುದಕೆ ಕೇಳುವೆನೆ ನವನೀತಚೋರ 1 ಒಡವೆಗಳ ಬಯಸೆ ಶಿಖಿಪಿಂಛ ತುಳಸಿ ಪತ್ರಕಡು ಸೈನ್ಯವನೆ ಬಯಸೆ ಗೋಪಾಲನುಬಿಡದೆ ರೂಪವÀ ಬಯಸೆ ನೀಲಮೇಘಶ್ಯಾಮಉಡುವುದಕೆ ಕೇಳುವೆನೆ ಸ್ತ್ರೀವಸನ ಚೋರ 2 ಶಕ್ತಿಯನು ಗೋಪಿಕಾ ಸ್ತ್ರೀಯರಲಿ ವ್ರಯಗೈದೆಭಕ್ತಿಯನು ಸತ್ಯವಂತರಿಗಿತ್ತಿಹೆಭಕ್ತರನು ವಂಚಿಸುತ ನೀನು ಬಚ್ಚಿಟ್ಟಿರುವಮುಕ್ತಿ ಕಾಂತೆಯ ಕೊಡು ಸುಖಿಪೆನೊ ಶ್ರೀಕೃಷ್ಣ3
--------------
ವ್ಯಾಸರಾಯರು
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏಳಯ್ಯ ರಾಕ್ಷಸಾಂತಕ ದನುಜಸಂಹಾರ ಪ ಏಳಯ್ಯ ರಾಜೀವನಯನ ನವನೀತಚೋರ ಏಳು ಲಕ್ಷ್ಮೀಮನೋಹರ ಹರಿಯೆ ಅ.ಪ ದಿನಪನುದಯಂಗೆಯ್ಯೆ ದಿಕ್ಪಾಲಕರ್ನೆರೆಯೆ ಕನಕಭೂಷಣದ ಕಾಂತೆಯರು ಆರತಿಪಿಡಿಯೆ ಅನುಪಮಗೆ ಜಯವೆಂದು ಬಂದು ನಿಂದೈದಾರೆ ಇನಕುಲನೆ ನಲಿದುಪ್ಪವಡಿಸು ಶ್ರೀಹರಿಯೇ 1 ಪ್ರಹ್ಲಾದ ನಾರದರು ವಾಸಿಷ್ಠ ವಿಶ್ವಾಮಿತ್ರರು ಮಹಮುನಿಗಳತ್ರಿ ಭಾರದ್ವಾಜ ಜಮದಗ್ನಿ ಗೌತಮರು ಬಹುವಿಧದಿ ಕಶ್ಯಪರು ಹನುಮಂತ ತುಂಬುರರು ಹರುಷದಿ ಪಾಡುತ್ತಲೈದಾರೆ ಇನಕುಲನೆ ನಲಿದು 2 ದೇವಗಂಗೆಯಕೊಂಡು ದೇವರ್ಕಳೈದಿದರು ದೇವತಾವಳಿ ಬಂದು ದೇವ ಜಯವೆನುತಿಹರು ದೇವಪುರದಲಿ ನಿಂದ ದೇವಕಿಯ ವರಕಂದ ದೇವ ಲಕ್ಷ್ಮೀಪತಿಯ ದೇವ ನೀನೇಳೈ ಹರಿಯೇ 3
--------------
ಕವಿ ಲಕ್ಷ್ಮೀಶ
ಕರುಣವಾರಿಧಿಯಲಾ ವಿಶ್ವರೂಪ ಪ ಸಾರಸಾಕ್ಷ ನವನೀತಚೋರಾ ಅ.ಪ ಘನಗುಣ ಮಣಿಗಣ ರಂಜಿತ ವಿಮಲ 1 ದಾನವರಿಪು ಮಾಲೋಲ ಮಾಂಗಿರೀಶಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೊಡು ತಾಯೆ ವರವ ಧೃಡವಾಗಿರುವ ಕೊಡು ತಾಯೆ ವರವಾ ಪ. ಕೊಡೆ ವರ ತಡಮಾಡದೆ ಧೃಡ ಭಕ್ತಿ ಎಂಬ ಮಾಂಗಲ್ಯ ಭಾಗ್ಯ ಧೃಡವಾಗಿರುವಂತೆ ಅ.ಪ. ಪರಿಪರಿ ಧ್ಯಾನಿಸೆನ್ನ ಮನಮಂದಿರವೆಂಬ ವರಗೃಹದಲಿ ಯೆನ್ನಯ ಭಕ್ತಿಮಂಟಪದಿ ಹರದಿ ಲಕುಮಿ ನಿನ್ನ ಪೂಜಿಸಿ ನಮಿಸಲು ವರ ಅಘ್ರ್ಯಪಾದ್ಯ ಆಚಮನವಿತ್ತು ನಲಿವೆ 1 ನವವಿಧ ಭಕ್ತಿಯೆಂಬ ನವರತ್ನ ಮಂಟಪದಿ ನವವಧು ಹರಿಗೆ ನೀನೆಂದು ಕುಳ್ಳಿರಿಸಿ ನವವಿಧ ಪಂಚಾಮೃತ ಸ್ನಾನಗೈಸಿ ನವನೀತಚೋರ ನಿನಗೆ ವಸ್ತ್ರಾಭರಣವನಿಟ್ಟು ನವವಿಧ ಭಕುತಿಲಿ ಪೂಜಿಪೆ 2 ಜಾಜಿ ಮಲ್ಲಿಗೆ ರೋಜ ಸಂಪಿಗೆ ರಾಜಿಪಲಕ್ಷ್ಮಿಗೆ ಮಲ್ಲಿಗೆ ದಂಡೆ ಮುಡಿಸಿ ಜಡೆಗೆ ಕಮಲ ಕೆಂಪಿನ ತಿರುಪಿನ ಹೂವ ತಿರುಗಿಸಿ 3 ಅರಿಶಿನ ಕುಂಕುಮ ಪರಿಮಳ ಗಂಧದಿ ವರಮಹಾಲಕ್ಷ್ಮಿಗೆ ಪೂಜಿಸುವೆ ವರಲಕ್ಷ್ಮಿಗೆ ಪರಿಪರಿ ಪುಷ್ಪ ಅಷ್ಟೋತ್ತರಗಳಿಂದರ್ಚಿಸೆ ಕೊಡು ವರ ದೃಢಭಕ್ತಿಯೆಂದು ಬೇಡುವೆ 4 ಷಡ್ರಾಸಾನ್ನ ಪಾಯಸ ಭಕ್ಷ್ಯಗಳ ಷಡ್ವಿಧ ದದಿಘೃತ ಪಾಲು ಸಕ್ಕರೆ ಬಗೆಬಗೆ ಉಂಡೆಗಳ ಷಡ್ವಿದ ಫಲಗಳನರ್ಪಿಸಿ ಧೂಪ ದೀಪದಿ ವರ ಅಷ್ಟ ಮಂಗಳಾರತಿ ಬೆಳಗಿ ಪಾಡುತ ನಮಿಸುವೆ 5
--------------
ಸರಸ್ವತಿ ಬಾಯಿ
ದೇವಾದಿದೇವನೇ ನಮೋ ನಮೋ ಪರವಾಸುದೇವನೇ ನಮೋ ನಮೋ ಪ. ನಿಗಮೋದ್ಧಾರನೇ ನಮೋ ನಮೋ ನಗಧರನೇ ನಮೋ ನಮೋ ಜಗತ್ಪತಿವರಾಹ ನಮೋ ನಮೋ 1 ನೃಪಂಚಮುಖಸ್ವರೂಪ ನಮೋ ನಮೋ ಕಪಟವಟುವಾಮನ ನಮೋ ನಮೋ ತಪನಕುಲತಿಲಕ ನಮೋ ನಮೋ 2 ನವನೀತಚೋರ ನಮೋ ನಮೋ ಭವಬಂಧಮೋಚನ ನಮೋ ನಮೋ ನವಮೋಹನಾಂಗ ನಮೋ ವಸುದೇವತನಯ ನಮೋ ನಮೋ 3 ಬುದ್ಧ ಸ್ವರೂಪ ನಮೋ ನಮೋ ಸಿದ್ಧಸಂಕಲ್ಪ ನಮೋ ನಮೋ ಚಿದ್ವಿಲಾಸ ನಮೋ ನಮೋ 4 ಸತ್ಯಕಾಮ ವೈಕುಂಠಧಾಮ ನಮೋ ನಮೋ ನಿತ್ಯತೃಪ್ತ ನಿರ್ಮಲಾತ್ಮ ನಮೋ ನಮೋ ಸತ್ಯಭಾಮಾರಮಾ ನಮೋ ನಮೋ 5
--------------
ನಂಜನಗೂಡು ತಿರುಮಲಾಂಬಾ
ನಂದನಂದನÀ ಪಾಹಿ ಗುಣವೃಂದಸುಂದರ ರೂಪ ಗೋವಿಂದ ಮುಕುಂದ ಪ ದಿನಕರಭವಪಾಲ ಕನಕಾಂಕಿತ ಚೇಲಜನಕಜಾಲೋಲ ಜನಕಾನುಕೂಲ 1 ಪವನಜ ಪರಿವಾರ ಯವನವಿದಾರನವರತ್ನಹಾರ ನವನೀತಚೋರ2 ತುಂಗ ವಿಹಂಗತುರಂಗ ದಯಾಪಾಂಗ ರಂಗವಿಠಲ ಭವಭಂಗ ಶುಭಾಂಗ3
--------------
ಶ್ರೀಪಾದರಾಜರು
ವೇಣುನಾದ ಪ್ರಿಯ ಗೋಪಾಲಕೃಷ್ಣ ಪ. ವೇಣುನಾದ ವಿನೋದ ಮುಕುಂದಗಾನವಿನೋದ ಶೃಂಗಾರ ಗೋಪಾಲ ಅ.ಪ. ವಂದಿತಚರಣ ವಸುಧೆಯಾಭರಣಇಂದಿರಾರಮಣ ಇನಕೋಟಿತೇಜಮಂದರಧರ ಗೋವಿಂದ ಮುಕುಂದಸಿಂಧುಶಯನ ಹರಿ ಕಂದರ್ಪಜನಕ 1 ನವನೀತಚೋರ ನಂದಕುಮಾರಭುವನೈಕವೀರ ಬುದ್ಧಿವಿಸ್ತಾರರವಿಕೋಟಿತೇಜ ರಘುವಂಶರಾಜದಿವಿಜವಂದಿತ ದನುಜಾರಿ ಗೋಪಾಲ2 ಪರಮದಯಾಳು ಪಾವನಮೂರ್ತಿವರ ಕೀರ್ತಿಹಾರ ಶೃಂಗಾರಲೋಲಉರಗೇಂದ್ರಶಯನ ವರ ಹಯವದನಶರಣರಕ್ಷಕ ಪಾಹಿ ಕೋದಂಡರಾಮ 3
--------------
ವಾದಿರಾಜ
ಸರಸಿಜಾಕ್ಷ ಸರಸದಿಂದ ಸರಸಿಜೋದ್ಭವಗೊಲಿದು ಬಂದ ಪ ಉರಸಿನ ಮ್ಯಾಲೆ ಸರಸಿಜಾಕ್ಷಿಯನಿರಿಸಿ ಬಂದಅ.ಪ. ಶರಧಿ ಗಂಭೀರ ವರಘನಸಾರ ಕಸ್ತೂರಿ ತಿಲಕಧರಹೀರ ಮೌಕ್ತಿಕ ಕೇಯೂರ ಧರಿಸಿದ ನವನೀತಚೋರ ಬಂದ 1 ನಂದ ಗೋಪಿಗಾನಂದವೂಡಿದ ಕಂದ ಗೋಕುಲದಿ ಬಂದಅಂದದಿಂದ ಸೌಂದರಿಯರ ಗೋವಿಂದ ಮುಕುಂದ 2 ಅಂಗನೆಯರ ಕುಚಗಳಾಲಿಂಗನವ ಮಾಡಿ ನವಮೋಹನಾಂಗರಂಗವಿಠಲನು ನಮ್ಮಂತರಂಗದೊಳಗಿಹ ಕಲ್ಮಷಭಂಗ3
--------------
ಶ್ರೀಪಾದರಾಜರು
ಅಂಬೆಗಾಲಿಕ್ಕುತಲಿ ಬಂದ ಗೋವಿಂದ |ಅಂಬುಜನಾಭ ದಯದಿಂದೆನ್ನ ಮನೆಗೆ ಪಜಲಚರಜಲವಾಸ ಧರಣೀಧರ ಮೃಗರೂಪ |ನೆಲನಳೆದೀರಡಿ ಮಾಡಿ ಬಂದ ||ಕುಲನಾಶಿ ವನವಾಸಿ ನವನೀತಚೋರನಿವ |ಲಲನೆಯರ ವ್ರತಭಂಗ ವಾಹನತುರಂಗ 1ಕಣ್ಣ ಬಿಡುವನು ಮುಖ ತಗ್ಗಿಸಿ ನೆಲವಗಿದು |ಅಣಕಿಸುವ ಬಾಯ್ದೆರೆದು ಬಾಲತನದಿ ||ಪ್ರಾಣಘಾತಕನುಣಲೊಲ್ಲ ಬೆಣ್ಣಿಯ ಮೆಲುವ |ಮಾನವ ಬಿಟ್ಟು ಕುದುರೆಯನೇರಿ ಮೆರೆವ2ನೀರ ಪೊಕ್ಕನು ಗಿರಿಯ ನೆಗಹಿ ಧಾರಿಣಿ ತಂದ |ನರಮೃಗ ಬಲಿಬಂಧ ಕೊರಳಗೊಯ್ಕ ||ಶರಮುರಿದೊರಳೆಳೆದು ಬತ್ತಲೆ ಹಯವನೇರಿ |ಪುರಂದರವಿಠಲ ನಮ್ಮ ಮನೆಗೆ ಹರುಷದಲಿ 3
--------------
ಪುರಂದರದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ಜಯ ಪಾಂಡುರಂಗ ಹೋ ಜಲದ ನಿಭಾಂಗ ಹೋ|ಜಗದಂತರಂಗ ಹೋ ಜಯ ಪಾಂಡುರಂಗ ಹೋ ಪನೀಲಭೂಧರವಾಸಕೌಸ್ತುಭಭೂಷ ರಮೆಯಾಧೀಶಸುಮನಸ|ಪಾಲ ಗುಣಗಂಭೀರ ನವನೀತಚೋರ ಕುಜನಕುಠಾರ| ನರಹರಿ ||ಫಾಲಲೋಚನಬಂಧು ದೈತ್ಯನ ಕೊಂದು ವೇದವ ತಂದು ದ್ರುಹಿಣಗೆ |ಮೇಲು ಶರುಣುದಲಿತ್ತೆ,ಮಂದರಪೊತ್ತೆ ಸುಂದರ ಮೂರ್ತಿ 1ನಿಗಮವಂದಿತ ರಾಮಹರಿಪೂರ್ಣ ಕಾಮ ಸದ್ಗುಣಧಾಮ, ವಾಮನ |ಮಗನ ಮೂಗಿಲಿ ಪುಟ್ಟಿ, ಹೇಮನ ಕುಟ್ಟಿ,ಅವನಿತಂದಿಟ್ಟಿ, ಈರೇಳು ||ಜಗದಿ ಪೂಜಿತನಾದಿ ಕೈಟಭ ಭೇದಿ ಇಭಪನ ಕಾಯ್ದಿ, ಪ್ರಣತರ |ಅಘವನೋಡಿಸುತಿಪ್ಪ ಹಲಾಯುಧತಲ್ಪಮನ್ಮಥನಪ್ಪ 2ವೇದ ವಿಸ್ತರ ಮಾಡ್ಡೀ, ದಾನವ ಬೇಡ್ಡೀ, ದನುಜನಿಗ್ಯೋಡ್ಡೀ, ಕುರುಕುಲ |ಸೂದನ, ಕಿರೀಟ ಸೂತ, ಪವಮಾನ ತಾತ, ದುರ್ಬಲನಾಥ ಎನ್ನನು ||ಆದರದಿ ಕೈಪಿಡಿಯೋ, ದುರಿತವ ತಡೆಯೊ, ದುರ್ಮತಿ ಕಡಿಯೊ,ಅಗಣಿತ|ಮೋದಪ್ರಾಣೇಶ ವಿಠಲ, ನರಮೃಗ, ನಿಟಿಲನೇತ್ರ, ಅಕುಟಲ3
--------------
ಪ್ರಾಣೇಶದಾಸರು
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ