ಒಟ್ಟು 19 ಕಡೆಗಳಲ್ಲಿ , 17 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ ಪ ಕಳ್ಳರಿಗೆ ಕಳ್ಳನಂತೆ - ಬೆಳ್ಳಕ್ಕಿಯಂದದಿ ಡಂಭಅ ಗಾಣದೆತ್ತಿನಂತೆ ಕಣ್ಣಮುಚ್ಚಿ ಪ್ರದಕ್ಷಿಣೆಯ ಮಾಡಿಕಾಣದೆ ತಿರುಗುವೆನೆರಡು ಕಣ್ಣಿದ್ದು ನಾನುಮಾಣಿಕ್ಯದ ರಾಶಿಯಲ್ಲಿ ಅಂಧಕರೈವರು ಕೂಡಿಆಣಿಮುತ್ತ ಹಿಡಿದು ಹಿಡಿದು ಬಿಡುವ ಭ್ರಮಿತನಯ್ಯ1 ಗುಂಡು ಮುಳುಗನ ಹಕ್ಕಿಯಂತೆ ಕಂಡ ಕಂಡ ನೀರ ಮುಳುಗಿಮಂಡೆ ಶೂಲೆ ಬಾಹೋದಲ್ಲದೆ ಗತಿಯ ಕಾಣೆನೊಮಂಡೂಕನಂದದಲಿ ನೀರ ತಡಿಯಲಿ ಕುಳಿತುಕೊಂಡುಮುಂಡೆ ಮುಸುಕನಿಕ್ಕಿ ಮೂಗು ಹಿಡಿದು ಬಿಡುವ ಭ್ರಮಿತನಯ್ಯಾ 2 ಇಕ್ಕುಳದ ಕೈಯಲ್ಲಿ ಹಿಡಿದ ಕಾದ ಕಬ್ಬಿಣದಂತೆಸಿಕ್ಕಿ ಸಿಡಿಮಿಡಿಗೊಂಬೆ ಗತಿಯ ಕಾಣದೆಹೊಕ್ಕುಳ ಹೂವಿನ ಬಾಡದಾದಿಕೇಶವನ ಮೊರೆಹೊಕ್ಕೆನಿಂದು ಮನ್ನಿಸಿ ಕಾಯೋ ದೇವದೇವೋತ್ತಮನೆ 3
--------------
ಕನಕದಾಸ
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಗುರುರಾಯ ಪಾಲಿಸುವುದು ನೀ ಎನ್ನ ಪ ಅನ್ಯರೊಬ್ಬರನಾ ನಾ ಕಾಣೆ ಮನ್ನಿಸಿ ಸಲಹುವರನಾ ನಿನ್ನವನೊ ನಾನು ಅನುದಿನದಲಿ ನಿನ್ನ ನೆನೆದು ನೆನೆದು ಇಂದಿನವರೆಗೆ ನಾ ದಿನಗಳೆದೆನೋ ಅ.ಪ. ಇಷ್ಟುದಿನ ಪಟ್ಟ ಕಷ್ಟವು ಸಾಕೋ ಇಷ್ಟಕೆ ನೀ ದಯಾದೃಷ್ಟಿ ಇಟ್ಟು ಜ್ಞಾನವ ಕೊಡಬೇಕೊ ಕಪಟ ಬುದ್ಧಿಯನಷ್ಟು ಕಳೆದಿಷ್ಟವ ಪೂರೈಸಬೇಕೊ ಬಿಟ್ಟವನಲೊ ್ಲನಾ ಕೊಟ್ಟವರು ಪರಿಕರ ಬಿಟ್ಟವರು ಸರಿ ನಾ ಕಟ್ಟಿಕೊಳ್ವೆ ತವ ಚರಣವ ಕೊರಳಿಗೆ 1 ಅಷ್ಟದಿಕ್ಕುಗಳಿಗೆ ಪರಿಹರಿಸಿಹುದೊ ಇಷ್ಟೆಲ್ಲ ಕೇಳಿ ನಾ ಇಟ್ಟೆ ಮನವನು ತವ ಪಾದದಿ ತಿಳಿದು ಸಂತುಷ್ಟನೆ ಎನ್ನ ಬಿಟ್ಟರೆ ಮುಂದಿನ ಬಟ್ಟೆಯ ಕಾಣದೇ ಕೆಟ್ಟು ನಾ ಮೂರಾಬಟ್ಟೆಯಾಗುವೆನೋ 2 ತವ ಪಾದದಿ ತುಳಿದು ಮೆಟ್ಟಿ ಎನ್ನ ಶಿರ ಥಟ್ಟನೆ ಭೂಮಿಯಲಿ ಕೆಡಹುವುದು ಹುಟ್ಟಿದರೆ ದಯವು ಅಟ್ಟಿ ಅಜ್ಞಾನವ ಕಟ್ಟಿ ಸುಜ್ಞಾನವ ಘಟ್ಟಿ ಭಕುತಿಯನು ಕೊಟ್ಟು ನೀ ಪಾಲಿಸೊ 3
--------------
ಹನುಮೇಶವಿಠಲ
ದೇವಿ ಯಶೋದೆಯು ದೇವ ಶ್ರೀ ಕೃಷ್ಣಗೆ ಪ. ಅಷ್ಟು ಬ್ರಹ್ಮಾಂಡವ ಪೊಟ್ಟೆಯೊಳಿಂಬಿಟ್ಟ ದಿಟ್ಟ ಶ್ರೀ ಕೃಷ್ಣಗೆ ಸೃಷ್ಟಿಯೊಳ್ ಸುಖಿಸೆಂದು 1 ದಿಟ್ಟಡಿಯಿಡುತಲಿ ದಿಟ್ಟ ಲೀಲೆಗಳನ್ನು ನೀ ನಷ್ಟು ತೋರಿಸು ಎಂದು ಪುಟ್ಟ ಶ್ರೀ ಕೃಷ್ಣನ 2 ಅಷ್ಟೈಶ್ವರ್ಯದಿ ದಿಟ್ಟ ಶ್ರೀ ಶ್ರೀನಿವಾಸ ಸುಖಿಸೆಂದು 3
--------------
ಸರಸ್ವತಿ ಬಾಯಿ
ಧೀರತನವ ಪಾಲಿಸೋ ಪ ಭವ ತೀರಕ್ಕೆನ್ನನು ಸೇರಿಸೋ ಅ.ಪ ತೊಳಲುತ ಖಿನ್ನನಾಗಿ ವರ್ಣಶ್ರೇಷ್ಠರಕುಲದಿಬಹು ಪುಣ್ಯದಿ ಇನ್ನು ಪುನರಪಿ ಜನ್ಮವಿಲ್ಲ ನಿನ್ನ ಕಿಂಕರನನ್ನು ಸೇರಿಸಿ ಪಾಲಿಸಿ ||ನಾರಾ|| 1 ಅಷ್ಟಯೋನಿಗಳಲ್ಲಿ ಹುಟ್ಟಿಸಾಯುತ ಬಲು ಮೊರೆಯಿಟ್ಟು ಬೇಡಲಿ ಎಳ್ಳಿನಷ್ಟು ಕಾರುಣ್ಯವು ಪುಟ್ಟದೇನೋ ಸೃಷ್ಟಿಗೈಯುವೇ ಪುಷ್ಠಿಗೈಯುವೆ ಕಟ್ಟಕಡೆಯೊಳು ನಷ್ಟಪಡಿಸುವೆ ಸೃಷ್ಟಿಯೊಳು ಜೊತೆಗಟ್ಟಿನೋಡುವ ದಿಟ್ಟರಾರೈ ವಿಷ್ಟಮೂರುತಿ2 ಧರೆಯ ರಾಜ್ಯವನೊಲ್ಲೆ ಸಿರಿಯಸಂಪದ ವೊಲ್ಲೆ ಸುರರು ಭೋಗಿಪ ಸುರಪುರವಾನೊಲ್ಲೆ ನಿನ್ನ ಹೊರತಾದಕೈವಲ್ಯ ಸ್ಥಿರವೊಲ್ಲೆನು ನಾನಾ ತೆರದಿ ಭಕ್ತಿಯೊಳಿರಲಿ ಯನ್ನಯ ಕರಣವೃತ್ತಿಯು ಪರಮ ಪುಲಿಗಿರಿ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ನಂಬದಿರು ಈ ದೇಹ ನರಲೋಕವೆಂಬುದು ಸುಖವೆಂದು ಮಾಯಾ ಪ್ರಪಂಚವನು ಅನುಗಾಲಾ ನಂಬು ನಮ್ಮಂಬುಜಾಂಬಕನ ಪಾದಾಂಬುಜವ ನಂಬಿದರೆ ಮುಕ್ತಿಯಲಿ ಇಂಬುಂಟು ಮರುಳೆ ಪ ತಂದೆ ತಾಯಿ ತಮ್ಮ ಸುಖಕೆ ಏಕಾಂತದಲಿ ಒಂದು ದಿನಲಿರಲಾಗಲವರರೇತಸು ಬಿಂದುವಿನಲಿ ಉತ್ಪತ್ಯವಾಗಿ ಬೆರೆದಾಗ ದು ರ್ಗಂಧದೊಳು ಬಂದು ನಿಂದೂ ಬಂಧನದೊಳಗೆ ಸಿಲುಕಿ ಒಂದೆಂಟು ತಿಂಗಳು ಪೊಂದಿ ಯಾತನೆಬಟ್ಟು ಮಲಮೂತ್ರ ಹೇಸಿಕೆಯಿಂದ ಕುದಿದು ಬಿಂದು ಕೆಳಗೆ ಹೊರಳಿದಿರು ಮರುಳೆ 1 ತಾಮಸವ ಕವಿದು ಕಾವಳಗೊಂಡ ಕತ್ತಲೆಯ ಸೀಮೆಯೊಳಗೆ ಸಿಲ್ಕಿ ಬಾಲತ್ವತನದಲ್ಲಿ ನೀ ಮಂದನಾಗಿ ಮರುಳಾಟಕ್ಕೆ ಮನವು ಉಬ್ಬಿ ಮುಂಜಿಯನು ಕಟ್ಟಿ ಬಂಧುಬಳಗ ಪ್ರೇಮದಿಂದಲಿ ನೆರೆದು ಮೋಹದಲಿ ಒಬ್ಬ ಕೋಮಲೆಯ ಜತೆಮಾಡಲು ನೋಡಿ ಹಿಗ್ಗುತ್ತಾ ಛೀಮಾರಿಯಾಗಿ ತಿರುಗಲಿ ಬೇಡ ಮರುಳೆ 2 ಮದ ಮತ್ಸರ ಲೋಭ ಮೋಹ ಕಾಮಾದಿಯಲಿ ಮದನ ಬಲಿಗೆ ಬಿದ್ದು ಅಹಂಮತಿ ಪಂಕದಾ ಹುದಲಿನೊಳಗೆ ಮುಣುಗಿ ಮುಂಗಾಣದಲೆ ತನು ರೂಹ ತುಂಬಿ ಕಾಲವನು ಕಳೆದು ಮಕ್ಕಳ ಪಡೆದು ತುದಿಮೊದಲು ಧರ್ಮವನು ಮರೆದು ಮಮತೆಯಲ್ಲಿ ಸದರೆಂದಿಲ್ಲದಾ ದುಷ್ಕರ್ಮಗಳು ಮಾಡಿ ಮುದದಿಂದ ನರಕದೊಳು ಬೀಳುವಾ ಹುರುಳೆ 3 ಇದ್ದಾಗ ನೆಂಟರಿಷ್ಟರು ಬಂದು ಚೆನ್ನಾಗಿ ಹೊದ್ದಿಕೊಂಡು ನಿನ್ನ ಕೊಂಡಾಡಿ ನೂರಾರು ಸುದ್ದಿಯನು ಪೇಳಿ ನಡುಮನೆಯೊಳಗೆ ಇದ್ದು ನಿನ್ನಯ ಬದುಕು ಉದ್ದಿನ ಕಾಳಿನಷ್ಟು ಉಳಿಯಲೀಸದೆ ನಿತ್ಯಾ ಬದ್ಧವಿಲ್ಲದಲೆ ಕರಗಾತಿಂದು ಬಡತನಾ ಸಿದ್ಧನಾಗಲು ತಿಂದವರು ಹರದೋಡಿ ಎದ್ದು ಪೋಗಲು ಕೆಟ್ಟಬಾಯಿದೆರವಾ ಮರುಳೆ 4 ಬಿಡು ಬಿಡು ಅಕಟ ಸಂಸಾರ ಸಾಗರದ ಮಡುವಿನೊಳಗೆ ಬಿದ್ದು ಕಾಲ್ಗೆಡೆದು ಪೋಗದೆ ಹಿಡಿ ಹಿಡಿ ಪರಮ ಭಾಗವತರ ಸಂಗತಿಯ ಸರ್ವಜ್ಞತೀರ್ಥರ ಮತದ ಕರುಣವನು ಪಡೆಯಲು ಅಧಿಕಾರನಾಗಿ ಸಿರಿದೇವಿಯ ವೊಡಿಯ ವಿಜಯವಿಠ್ಠಲನಂಘ್ರಿ ನೆರೆ ನಂಬಿ ತಡಿಯದಲೆ ಸದ್ಗತಿಗೆ ಸೇರುವದು ಮರುಳೆ5
--------------
ವಿಜಯದಾಸ
ನಾರಾಯಣನಿನ್ನಪಾರಾಯಣಗೈವ ಧೀರತನವಪಾಲಿಸೋ ಪ ತೀರಕೆನ್ನನು ಸೇರಿಸೋ ಅ.ಪ ಜನ್ಮದಿ ತೊಳಲುತ ಖಿನ್ನನಾಗಿ ವರ್ಣಶ್ರೇಷ್ಠಕುಲದಿ ಬಹುಪುಣ್ಯದಿ ಘನ್ನ ಮಹಿಮನೆ ನಿನ್ನ ಸೇವೆಯೊ ಳುನ್ನತದ ರತಿಯನ್ನು ಪಾಲಿಸಿ 1 ಅಷ್ಟಯೋನಿಗಳಲ್ಲಿ ಹುಟ್ಟಿ ಸಾಯುತ ಬಲು ಕೆಟ್ಟಕರ್ಮವ ಮಾಡಿ ಕಷ್ಟಪಟ್ಟು ಎಷ್ಟು ನಿನಗೆ ಮೊರೆಯಿಟ್ಟು ಬೇಡಲು ಎಳ್ಳಿ ನಷ್ಟು ಕಾರುಣ್ಯವು ಪುಟ್ಟದೇನೋ ಕಟ್ಟಕಡೆಯೊಳು ನಷ್ಟಪಡಿಸುವೆ ದಿಟ್ಟರಾರೈ ಇಷ್ಟ ಮೂರುತಿ 2 ಪರಮೇಷ್ಟಿ ಪುರದೊಳಗಿರಲಾನೊಲ್ಲೆನು ನಿನ್ನ ನಿರುತ ನಿನ್ನಯ ಚರಿತೆಯಲಿ ಮನ ವಿರಲಿ ನಾನಾತೆರದ ಭಕ್ತಿಯೊಳು ಪರಮ ಪುಲಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ಪಂಥವ್ಯಾಕೋ ಗುಣವಂತ ಸಖಿಯೊಳಿನ್ನು ಪುಷ್ಪಾವ- ಸಂತ ಆಡಿದೊರೆಯೆ ಶ್ರೀಮಂತ ದೇವನೂರಲಿ ನಿಂತ ಲಕ್ಷ್ಮೀಯ ಕಾಂತ ಪ ರೂಢಿಯೊಳಗೆ ನೀನಾಡಿ ಪೆಣ್ಣಲ್ಲವೆಂದು ನೋಡಿ ಸವಿಮಾತನಾಡಿ ಗಾಡಿಕಾರೆಯರ ಒಡ- ಗೂಡಿ ಬಲ್ಮೊಲೆಗೆ ಕೈಯನೀಡಿ ಸುರತದೊಳು ಕೂಡಿ ಮೋಹವ ಮಾಡಿ ||1|| ಎಲ್ಲರಂತೆ ನಾ ತರುಣಿಯಲ್ಲ ಬಣ್ಣನೆ ಮಾತು ಒಲ್ಲ ಅವಳು ಮೊದಲೆ ಅಲ್ಲಿ ಇಲ್ಲದೆ ಪೂವಿಲ್ಲ ಇನ್ನಷ್ಟು ದಯವಿಲ್ಲ ಶ್ರೀ ವಲ್ಲಭ ನಿನಗೀ ನಿತ್ತವಲ್ಲ 2 ಜಾರವಿದ್ಯದಿ ನೇಮಗಾರ ಯೆನ್ನಯ ಮಾತ ಮೀರದೆ ಕೃಪೆ ಬಂದು ಸರಸಗುಣ ವಿ- ಚಾರವರಿತು ವೈಯಾರ ಪೊರೆದೆಯೇ ದೇವ- ನೂರ ವಿಹಾರ ಲಕ್ಷ್ಮೀಮನೋಹರ ಮೋಹನಾಕಾರ3
--------------
ಕವಿ ಲಕ್ಷ್ಮೀಶ
ಪೊರೆಯೊ ಶ್ರೀಶನೆ ಸರುವ ಲೋಕ ಪೊರೆವನೆ ಪ ಅರಿತು ಅರಿಯದಂತೆ ನಾನು ಗರುವದಿಂದ ಮೆರೆದನಯ್ಯ ಅ.ಪ ಅರುಣ ಉದಯದಲ್ಲಿ ಎದ್ದು ಹರಿಯೆ ನಿನ್ನ ಸ್ಮರಣೆ ಬಿಟ್ಟು ಗೊರಿಕೆ ಹೊಡಿದು ನಿದೆÀ್ರಮಾಡಿ ದುರಿತದಲ್ಲಿ ಪೊರಳುವವನ 1 ಕುತುಬ ಕಾಲದಲ್ಲಿ ಬಂದ ಅತಿಥಿಗಳನು ಜರೆದು ನೂಕಿ ಮಿತಿಯ ಮೀರಿ ಸವಿಯುತ ಪರ- ಗತಿಯ ದಾರಿ ಕಾಣದವನ 2 ದಾನಧರ್ಮ ಕೇಳಬಂದ ಮಾನವಂತ ಜನರ ಬಹಳ ಹೀನ ಮಾತಿನಿಂದ ಬೈದ ಜ್ಞಾನರಹಿತನಾದ ನರನ 3 ರೊಕ್ಕವಿರುವದೆಂದು ಬಹಳ ಸೊಕ್ಕಿನಿಂದ ಬಡವರನ್ನು ಲೆಕ್ಕಿಸದೆ ಮಾತನಾಡಿ ಧಿಕ್ಕರಿಸಿದ ಅಧಮ ನರನ 4 ಪಟ್ಟದರಸಿಯಿರಲು ಅವಳ ಬಿಟ್ಟು ಪರರ ಸತಿಯ ಬಯಸಿ ಅಟ್ಟಹಾಸದಿಂದ ನಗುತ ಕೆಟ್ಟು ಹೋದ ಭ್ರಷ್ಟ ನರನ 5 ಎಷ್ಟು ಮಾಡಲೇನು ಎಳ್ಳಿ ನಷ್ಟು ಸುಖವ ಕಾಣಲಿಲ್ಲ ಇಷ್ಟ ಮಿತ್ರ ನೀನೆಯೆಂದು ಗಟ್ಟಿಯಾಗಿ ತಿಳಿದುಕೊಂಡೆ 6 ಶ್ರಿಷ್ಟಿಗೊಡೆಯನು ರಂಗೇಶ- ವಿಠಲನೆಂಬ ಮತಿಯ ಎನಗೆ ಎಷ್ಟು ಮಾತ್ರ ಕೊಟ್ಟು ಸಲಹೊ ಕೆಟ್ಟ ಮೇಲೆ ಬುದ್ಧಿ ಬಂತು 7
--------------
ರಂಗೇಶವಿಠಲದಾಸರು
ಪ್ರಾಣಾ ನೀ ಕಲ್ಯಾಣಗುಣ ಗೀರ್ವಾಣಾದ್ಯರ ಮಣಿ ಜೀವಗಣ ಗುಣಕಾರ್ಯತ್ರಾಣ ಅಗಣಿತಮಹಿಮ ಪ ಇನ್ನೆಣೆಯುಂಟೆ ತ್ರಿಭುವನ ತ್ರಾಣ ನಿನ್ನ ಆಣತಿಯಂತೆ ಪಂಚಪ್ರಾಣ ಅಣುಘನತೃಣ ಮೊದಲು ಪಣೆಗಣ್ಣ ಸುರ ಗಣಾದ್ಯಮರರೊಳಗನವರತ ನೀ ಘನ್ನ ಫಣಿರಾಜಗುರು ನಿನಗೆಣೆಯುಂಟೆ ನೀರಜಭ ಮುಖ್ಯಪ್ರಾಣ ಬಾದರಾ ಯಣನನುಗ ಆನಂದಗುಣಭರಿತ ಕೃತಿರ- ಮಣನ ಸುತೆ ರಮಣ ನೀ ಕ- ರುಣಿಸಿದರುಂಟು ಶ್ರೀಹರಿಯ ಕರುಣಾಅ.ಪ ಮರುತಾ ಶ್ರೀ ಹರಿಯಿಂದಲನವರತ ಪ್ರೇರಿತನಾಗಿ ನಿರುತಾ ಜಗಕಾರ್ಯದೊಳು ಸತತ ನೀ ಬಿಡದಿರೆಡರಿಲ್ಲ ಮರುತಾ ಜಗಚೇಷ್ಟಪ್ರದ ನೀನಹುದೊ ಶಕ್ತಾ ವರ ಮಂತ್ರಿಯಾಗಿ ನೀ ಹರಿಗೆ ಭಕ್ತಾಗ್ರಣಿಯೆ ಯಂತ್ರೋ- ದ್ಧ್ದಾರ ಶ್ರೀ ಹನುಮಂತಾ ಬಲಭೀಮ ಗುರುಮಧ್ವಶಾಂತಾ ತ್ರಿಕೋ ಟಿರೂಪಧರ ಖ್ಯಾತ ಸುರಾಸುರನರೋರಗಗಳನವರತ ಸರ್ವವ್ಯಾಪಾರ ನೀ ನಡೆಸಿ ಪೊರೆವ ಸದ್ಗುರುವರ ಸುಸಮೀರಾ ನೀರಜಾಂಡವ ಕೂರ್ಮರೂಪದೊಳು ನಿಂತು ನೀ ಭಾರವಹಿಸಿ ಮೆರೆದೆ ಶ್ರೀ ವಾಯುಕುವರಾ1 ಸೃಷ್ಟಿಗೊಡೆಯನಿಗೆ ನೀನಿಷ್ಟಪುತ್ರ ನಿನ್ನಷ್ಟುಜ್ಞಾನ ಪರಮೇಷ್ಠಿಗಲ್ಲದೆ ಎಷ್ಟು ನೋಡಿದರು ಇತರರಲಿ ಎಳ್ಳಷ್ಟಿರೆಣೆಯಿಲ್ಲ ತುಷ್ಠಿಪಡಿಸುವೆ ಹರಿಯ ಜೇಷ್ಟದಾಯರ ಶ್ರೇಷ್ಟ ಮೂರುತಿ ಕವಿಶ್ರೇಷ್ಟ ನೀನೆನಿಸಿ ಲಂಕಾ ಶ್ರೇಷ್ಟನೆನಿಸಿದ ದುಷ್ಟದೈತ್ಯನಾ ಮರವನ್ನ ಹುಟ್ಟನಡಗಿಸಿ ಸುಟ್ಟಿ ಲಂಕಪಟ್ಟಣವನ್ನು ಪುಟ್ಟಿದಾಗಲೆ ಬೆಟ್ಟ ಹಿಟ್ಟನು ಮಾಡಿ ಆ ದುಷ್ಟಭಾಷ್ಯಗಳ ಕಷ್ಟ ಪರಿಹರಿಸಿ ನಿ- ರ್ದುಷ್ಟತತ್ವವ ತೋರ್ದೆ ಎಷ್ಟು ಶಕ್ತನು ಜೀವ- ಶ್ರೇಷ್ಠಮೂರುತಿ ಸರ್ವ ಕಷ್ಟ ಹರಿಸಿ ನಿನ್ನ ಇಷ್ಟಭಕುತರ ಸೇವೆ ಕೊಟ್ಟು ಶ್ರೀ ಹರಿಯ ಶ್ರೇಷ್ಠಮೂರುತಿ ತೋರೋ ಇಷ್ಟದಾಯಕ ಗುರು ಶ್ರೇಷ್ಠ ಮಾರುತಿಯೆ2 ಈಶ ಪ್ರೇರಣೆಯಿಂದ ಈ ನಶ್ವರದೇಹದೊಳು ಆ ಸಮಯದಲಿ ಅಪಾನನಿಂದೊಡಗೂಡಿ ಪ್ರಾಣೇಶ ನಿನ್ನಿಂದ ಎಲ್ಲ ಚೇತನವಿಹುದೋ ವಾಸವಾಗಿರುವನಕ ಈ ಶರೀರ ಕಾರ್ಯ ಶಾಶ್ವತ ನಡೆವುದೋ ಕಲ್ಪಾವಸಾನ ಮೋಕ್ಷಪರಿಯಂತ ಲೇಶ ಬಿಡದಲೆ ಬಪ್ಪ ಜಡದೇಹದೊಳು ನೀ ವಾಸವಾಗಿಹೆ ದೇವ ಶಾಶ್ವತನಾಗಿ ಆಯಾಸವಿಲ್ಲದಲೆ ಊಧ್ರ್ವಗಮನದಿ ಪ್ರಾಣ ಅಪಾನನಿಂದಗಲಲೀದೇಹ ಭೂಶಯನ ವಾಸ ಜಡವೆಂದೆನಿಸಿ ಆ ಶರೀರವು ಭೂತಪಂಚಕದಿ ಸೇರುವುದು ಪ್ರಾಣೇಶ ನೀನಾಗ ಹರಿಯನ್ನು ಸೇರುವೆ ಏಸು ಚರಿತೆಯೊ ಅನಿಲ ಶಾಶ್ವತನು ನೀನು ಅಶಾಶ್ವತ ದೇಹಗಳ ಮಾಳ್ಪ ನಿನ್ನಯ ಕಾರ್ಯ ಏಸುಕಾಲಕು ದೇಹದಿಂ ಮೃತರೈಯ್ಯ ಜೀವರು ಶ್ರೀಶನಾತ್ಮಜ ನೀನಮೃತನೆನಿಸೀ ಮೆರೆವೆ ಈಶ ಪ್ರೇರಣೆ ನಿನಗೆ- ನಿನ್ನ ಪ್ರೇರಣೆ ಎಮಗೆ ಅಸುಪತಿಯೆ ನಿನಗಿದು ಹೊಸ ಪರಿಯಲ್ಲವೊ ಮೀಸಲಾಗಿರಿಸು ಶ್ರೀ ವೇಂಕಟೇಶನ ಪಾದ ದಾಸನೆನಿಸೊ ಪವನೇಶ ಉರಗಾದ್ರಿವಾಸ ವಿಠಲನ ದಾಸ ಎನ್ನ ಮನದಾಸೆ ನೀ ಸಲಿಸಿ ನಿಜ ದಾಸಜನ ಸಹವಾಸವಿತ್ತು ಅನಿಶ ಭವ ಪಾಶ ಸಡಿಲಿಸಿ ಸುಖವಾಸವೀಯೊ ಗುರು ಮಾತರಿಶ್ವ 3
--------------
ಉರಗಾದ್ರಿವಾಸವಿಠಲದಾಸರು
ಮನವೆ ಶ್ರೀನಾರಾಯಣನನು ಸ್ಮರಿಸದೆ ಮಾಯಾಪಾಶಕೆ ಸಿಲುಕುವರೇ ಪ. ವನಜನಾಭನ ಪದ ವನರುಹಯುಗ್ಮವ ಅನುದಿನ ನೆನೆಯದೆ ಒಣಗುವರೇ ವನಿತಾಲಂಪಟನಾಗುತ ಸಂತತ ಮನಸಿಜಯಂತ್ರಕೆ ಮನಮರಗುವರೇ ಅ.ಪ. ತುಂಡು ಸೂಳೆಯರ ದುಂಡುಕುಚವ ಪಿಡಿದು ಗಂಡಸುತನವನು ಕೆಡಿಸುವರೆ ದಂಡಧರನ ಬಾಧೆ ಹೆಂಡತಿಯನು ಪಡ ಕೊಂಡು ವೇದನೆಯನು ತಾಳುವರೆ ಕಂಡು ಕಂಡು ನೀ ಗುಂಡಿಗೆ ಬಾಳ್ವರೆ ಹೆಂಡಿರ ಸುಖರಸ ಉಂಡರು ಸಾಲದೆ 1 ಬಂದ ಸುಖಕೆ ನೀ ಮುಂದುವರೆಯುತಲಿ ಮಂದ ಅಸಮ ದುಃಖ ತಾಳುವರೇ ಬಂದುದೆನ್ನ ಕಣ್ಣ ಮುಂದೆಯನುಭವಿಪೆ ಎಂದಿಗೆನ್ನಾಜ್ಞೆಯು ಬಂದಪುದೋ ನಿಜ 2 ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹ ಪಟ್ಟ ಭಾಗ್ಯವನೆಲ್ಲ ತೋರೊ ನೀನು ಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ- ನಷ್ಟು ಸುಖವನ್ನು ಕಾಣೆನಿನ್ನು ಇಷ್ಟಾರ್ಥಗಳೆಲ್ಲ ದೊರೆಕುವುದೈ ಪರ ಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3 ವಿಷಯ ಪಳಂಚಿತನಾಗುವ ಸಂತತ ಪಂಚಡಕೀರನು ಆಗುವರೇ ಕರ್ಮ ಸಾಲದೆಂದೆನುತಲಿ ಸಂಚಿತ ಪಾಪವ ಸಂಗ್ರಹಿಸುವರೇ ಚಂಚಲಾಕ್ಷಿಯರ ಚಪಲದ ಮಾತನು ವಂಚನೆ ಎಂಬುದು ತಿಳಿಯದೆ ಇರುವರೆ 4 ಸಾರಿಸಾರಿ ಕೈ ಮುಗಿದು ಬೇಡುವೆನು ವಿ- ಕಾರ ದುರ್ಬುದ್ಧಿಯ ಬಿಡು ಎಂದು ಭಾರಿ ತಪ್ಪುಗಳ ಕ್ಷಮಿಸಿ ಕಾವ ಲಕ್ಷ್ಮೀ ನಾರಾಯಣ ನೀನೇ ಗತಿಯೆಂದು ಪಾರಮಾರ್ಥಿಕ ವಿಚಾರವ ಮಾಡುತ ಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಪಾಂಡುರಂಗ ಪ್ರಾರ್ಥನೆ ಪಾದ ಅಮಿತ ನೀಲಮೇಘಶ್ಯಾಮ ವಿಠಲನ್ನ 1 ಶಿಲೆಯನುದ್ಧರಿಸಿರ್ಪ ಪಾದಕೆ ಬಲಿಯ ಮೆಚ್ಚಿದ ಪಾದಕಮಲಕೆ ನಲಿವಿನಿಂದಲಿ ನಮಿಸಿ ಪೊಗಳುವೆಕಲಿಮಲಂಗಳನೆಲ್ಲ ತರಿಯುತತಲೆಯೊಳಾಶೀರ್ವಾದವೀಯಲು ಬಿದ್ದು ಬೇಡುವೆನು 2 ಕ್ರೂರ ರಕ್ಕಸರುಪಟಳಂಗಳ ವೀರತನದಿಂ ಚಕ್ರದಡಗಿಸಿ ಮಾರಪಿತ ಭವದೂರ ಕಂಸರಲಿ ದಣಿಯುತಲಿ ಯಾರ ಗೊಡವೆ ನಮಗೇನು ಎನ್ನುತ ಶ್ರೀ ರಮಾವರ ದೇವಿ ಸಹಿತೀ ದಾರಿಯೋಳ್ಮಿಜ ಭಕ್ತಗಾಶ್ರಯನಾಗಿ ನಿಂತಿಹನೆ 3 ಕಾಯ ಧರಿಸಿದ ಭಕ್ತವರ್ಯನ ಮಾಯೆಯಿಂದಲಿ ನೋಡಿ ನಲಿಯಲು ಬಂದ ವಿಠ್ಠಲನೆತೋಯಜಾಕ್ಷಿಯಳಾದ ಲಕುಮಿಯರಾಯ ಶ್ರೀಹರಿ ನಿನಗೆ ಇಟ್ಟಿಗೆ ಯಾಯಿತೇ ಬಲು ಸಂಖ್ಯದಂಸನ ನಿಂತುಕೊಳ್ಳಿಲ್ಕೆ 4 ತಾತನಂಘ್ರಿಯ ಸೇವೆಗೆಯ್ದಿರು-ವಾತ ಬರ¯ಂದನಿಮಿಷಾಗ್ರಣಿ ತಾತ ನಿಂತೆಯ ಸೊಂಟದ ಮೇಲೆ ಕೈಯಿಟ್ಟುಮಾತೆಯಾದವರು ಹಾಗೆ ಸಂಗಡ ಪ್ರೀತಿಯಿಂದಲೆ ನಿಂತುಕೊಂಡಳು ಖ್ಯಾತಿಯಾಯಿತು ಪಾಂಡುರಂಗನ ಲೀಲೆ ಭಕ್ತರಲಿ 5 ಸತ್ತು ಹುಟ್ಟುವ ಬಾಧೆಯಿಲ್ಲದಸತ್ಯವಂತನೆ ಕೊಟ್ಟ ಇಟ್ಟಿಗೆ ಮೆತ್ತಗಿಹುದೆÉೀನಷ್ಟು ದಿವಸವು ನಿಂತುಕೊಂಡಿರುವೆಮತ್ತೆ ಪೇಳುವುದೇನು ದೇವನೆ ಸುತ್ತು ಮುತ್ತಿನ ಜಗಕೆ ಆಸರವಿತ್ತೆ ನಿನಗಾಸರವು ಯಾವುದು ಭಕ್ತವತ್ಸಲನೆ 6 ಹೇ ದಯಾನಿಧೆ ಯಾದವಾಗ್ರಣಿ ಮಂದವಾಖ್ಯನೆ ಭೀಮತಡೆಯೊಳು ಆದರಮ್ಮಿಗೆ ತೋರಿ ಕರೆದನೆ ನಿಮ್ಮನೀರ್ವರನು ಬಾಧೆಬಡುತೀ ನಿಂತ ಕಾಲಿಗೆಹಾದಿನೋಡುವವೆಷ್ಟೊ ಬೆಳೆಯುಚೋದ್ಯವಲ್ಲವೆ ನಿನ್ನ ಲೀಲೆಯು ದಿವ್ಯವಿಗ್ರಹನೇ 7 ಆದಿಮೂರುತಿ ನಿನ್ನ ಹುಡುಕಲುವೇದ ಶಾಸ್ತ್ರ ಪುರಾಣವೆಂಬವು ಹಾದಿ ಕಾಣದೆ ನಿಂತವಲ್ಲೈ ನೀನೆ ಬಂದೀಗಮೇದಿನೀ ತಳದಲ್ಲಿ ಭಕ್ತರಹಾದಿ ನೋಡುತ ನಿಂತುಕೊಂಡಿರೆಹೋದವೆಷ್ಟೋ ದಿವಸ ಶ್ರೀಹರಿ ನಿನ್ನ ಲೀಲೆಯಲಿ 8 ನೀಲಮೇಘ ಶ್ಯಾಮ ಕೀರ್ತಿಯ ಜಾಲವನ್ನುರೆ ಭಜನೆ ಮಾಡುತತಾಳಹಾಕುತ ಸಂತಮಂಡಳಿ ಕುಣಿದು ಬರುತಿರಲುಧೂಳವೇಳುವದನ್ನು ಕಣ್ಣಲಿವೇಳೆಗಳೆಯದೆ ನೋಡಿ ನಲಿವುದುಲೀಲೆಯಲ್ಲವೆ ಪಾಂಡುರಂಗನೆ ವಿಶ್ವಚಾಲಕನೆ9 ಸರಸಿಜಾಕ್ಷನೆ ಕರಗಳೆರಡನುಇರಿಸಿ ಟೊಂಕದೊಳೇನು ನೋಡುವಿಪರಮ ಭಕುತನ ತಂದೆ ತಾಯ್ಗಳ ಸೇವೆ ಮಾಡುವುದುದೊರೆಯಲಾರದೆ ಕಲಿಯ ಕಾಲದೆ ದುರಿತ ನೀಗಿಸಿಕೊಂಡನಲ್ಲವೆ ಆರುಗಿಯಾದರು ನೋಡಲೊಲ್ಲನು ಭಕ್ತಿಬಲದಿಂದ 10 ಚಿನ್ನದರಸನೆÉ ನಿನ್ನ ಕೈಯನುಘನ್ನ ಟೊಂಕದ ಮೇಲೆ ಇರಿಸುತನನ್ನಿಯಿಂ ಭರವಸೆಯ ಕೊಡುವಿಯೊ ಭವದ ಸಾಗರವುತನ್ನ ನಂಬುತ ದಾಟಿ ಹೋಗುವಸನ್ನುತಾತ್ಮರಿಗಿಷ್ಟಯೆಂಬುದ ಚೆನ್ನವಾಗಿಯೆ ತಿಳಿಸಲೋಸುಗ ಹೀಗೆ ನಿಂತಿಹೆಯಾ 11 ನಾನು ನಿನ್ನನು ಕರೆಯದಿದ್ದರು ನೀನೆ ಬಂದಿಲ್ಲೇಕೆ ನಿಂತೆಯೊ ದೀನಪಾಲಕನೆಂಬ ಬಿರುದನೆ ಕಾಯಲೋಸುಗವೇಶಾನೆ ಸಂಪದವಿದ್ದ ದ್ವಾರಕೆ ಯಾನೆ ಕುದುರೆಗಳಿಂದ ಶೋಭಿಪ ದಾನವಾಂತಕ ಕೃಷ್ಣರಾಯನೆ ಈಗ ಪಂಡರದೀ 12 ಕರ್ಮ ಮುಗಿದಿಹುದೇಮಿಕ್ಕಿದವರೇನನ್ಯಯ ಪುತ್ರರೆ ತಕ್ಕ ಯೋಚನೆಗೆಯ್ದು ನಂತರತೆಕ್ಕೆಯೋಳ್ಸಲಹುವದು ಲೇಸೈ ಭಕ್ತವತ್ಸಲನೆ 13 ಹಾಲು ಮೊಸರಾ ಬೆಣ್ಣೆಯುಂಡೆಯ |ಲೀಲೆಯಿಂದಲೆ ಕದ್ದ ಕಳ್ಳನೆಚ್ಯಾಳಿಬಲಿತಾ ಬಳಿಕ ಬಿಡುವೆಯಾ ಭಕ್ತರಂತಹರಗಾಳಿ ಸೋಂಕಿದ ನೆವ ಮಾತ್ರಕೆಜಾಲಬೀಸುತ ಕದ್ದು ಕೊಳ್ಳುವಿಹೇಳಲೇನೈ ಹಿಂದಿನೆಷ್ಟೊ ಜನ್ಮದಘನಿದನಾ 14 ನಿನ್ನನೇ ನೆರೆ ನಂಬಿ ಭಜಿಸುವಪುಣ್ಯವಂತರ ಹೃದಯಮಂದಿರ-ವನ್ನೆಮಾಡಿದ ಪಾಂಡುರಂಗನೆ ನೀನು ಜಗದೊಳಗೆಘನ್ನ ಪಾಪದಿ ಬಳಲುತಿರುವವ-ರನ್ನುಸಲುಹಲು ಬಂದೆಯೇನೈಸನ್ನುತಾಂಗನೆ ಭಜನಿಗೊಲೆಯುವ ದಿವ್ಯ ವಿಠ್ಠಲನೆ 15 ವೇದಗಳ್ಳನ ಸದೆದು ಬ್ರಹ್ಮಗೆ ಮೋದದಿಂದಲಿ ಕೊಟ್ಟ ಮತ್ಸ್ಯನೆಆದಿಕೂರ್ಮನೆಯಾಗಿ ಮಂದರನೆಗಹಿ ನಿಂದವನೇಬಾಧೆÉ ಬಿಡಿಸುವ ಕ್ರೂರ ರಕ್ಕಸಭೇದಿಯಾಗುತ ಧರಣಿ ಮಂಡಲಸೇದಿ ತಂದನ ನೀನೆಯಲ್ಲದೆ ದಿವ್ಯ ವಿಠ್ಠಲನೆ 16 ಒಂದೆ ಮನದೊಳು ನೆನೆದ ಕುವರಗೆಬಂದೆ ಕಂಬದೆ ನಾರಸಿಂಹನೆನಿಂದ ಮಾತ್ರಕೆ ಮೂರು ಪಾದದ ಭೂಮಿದಾನದಲೀತಂದು ಪಾತಾಳದಲಿ ಬಲಿಯನುಚಂದದಿಂದಲಿ ಇಟ್ಟ ವಾಮನತಂದೆಯಾಡಿದ ನುಡಿಯ ನಡಿಸಿದ ಭಾರ್ಗವತ್ತೀ 17 ಸೀತೆಗೋಸುಗ ರಾಮನಾಗುತಖ್ಯಾತಿಗೋಸುಗ ಕೃಷ್ಣನಾದೆಯಲೇಪ್ರೀತಿಗೋಸುಗ ಬಾಧ್ಯನಾಗುತ ಜಗವ ಪಾಲಿಸಿದ್ಯಾಜಾತಿಯಶ್ವವನೇರಿ ರಿಪುಗಳÁತ ಮಾಡಿದ ಕಲ್ಕ್ಯರೂಪನೇಯಾತಕೀಪರಿ ಚಂದ್ರಭಾಗದಿ ನಿಂತೆ ಬೆರಗಾಗಿ 18 ನಿನ್ನ ನಾಮಗಳಮಿತವಿದ್ದರುನನ್ನ ನಾಲಿಗೆಗಷ್ಟು ಬರುವವೆ ?ಸನ್ನುತಾಂಗನೆ ಪಾಂಡುರಂಗನೆ ದಿವ್ಯ ವಿಠ್ಠಲನೆನ್ನುತಿಷ್ಟೇ ನಾಮಗರೆವೆನುಚಿನ್ನದರಸನೆ ಭಕ್ತಸಂಘದೊಳೆನ್ನ ಕೂಡಿಸಿ ಕಾಯಬೇಕೈ ಪರಮ ಭಗವಂತಾ 19 ಕಾಲಕಾಲಕೆ ನೇಮನಿತ್ಯಗ-ಳಾಲಯಂಗಳ ಮಧ್ಯದೆಸಗದೆಜಾಲಿಯಂತೇಗೆಲ್ಲ ಜನರಿಗೆ ಬೆಳೆದೆ ಬಾಧಿಸುತಬಾಲ ಯೌವನ ವಾರ್ಧಿಕತ್ವದೆಕಾಲಪೋಯಿತು ನಿನ್ನ ನೆನೆಯದೇ ಹೇಳಲೇನೈ ಕಾಲನೆಳೆಯುವನು 20 ಕಂತು ಜನಕನೆ ನಿನ್ನ ನಾಮದಮಂತ್ರವೆನಗಿನ್ನೆಲ್ಲಿ ಬರುವುದು ಶುದ್ಧ ಪಶುವಾದೇಅಂತರಾತ್ಮನೆ ನೀನು ಈ ತೆರನಿಂತುಕೊಂಡರೆ ನನ್ನ ಗತಿಯೇ-ನೆಂತ ಹೇಳಲಿ ಸಂತೆ ತೀರಿತು ಸಲಹೊ ವಿಠ್ಠಲನೇ 21 ಕಾಲ ಬಂದಿದೆಸದ್ಯಕಾರೂ ಕಾವರಿಲ್ಲವುದ್ಧಪಾಶದಿ ಬಿಡಿಸಬಾರೈ ದೀನ ಬಾಂಧವನೇ 22 ಕಾಯಕಿರುವದ ಬಂಧು ಬಳಗವು ಹೇಯ ದುಡ್ಡನೆ ಶಳಯಲೋಸುಗಜೀಯ ನಿನ್ನಂತಾರು ಇಲ್ಲವು ಜೀವಕನು ಸರಿಸೀತಾಯ ತಂದೆಯ ಜಗಕೆ ಲಕ್ಷ್ಮೀರಾಯ ನೀನೇ ಅಲ್ಲವೇನೈ ಬಾಯ ಬಿಡುವೆ ಅಜ್ಞಬಾಲರ ಕಾಯೊ ವಿಠ್ಠಲನೇ 23 ಅಣ್ಣನಾಗುತ ದ್ರುಪದ ಸುತೆಗಾಬಣ್ಣದಂಚಿನ ಸೀರೆ ಉಡಿಸಿದೆನಿನ್ನ ಬಾಲ್ಯದ ಸುಖ ಸುಧಾಮಗೆ ಕೊಟ್ಟಿಯ್ಯೆಸಿರಿಯಹಣ್ಣಿನಾಶೆಗೆ ಶಬರಿ....ಗೊಲಿದೈಬೆಣ್ಣೆಯಾಶೆಗೆ ಗೋಪಿಗೊಲಿದೈಮಣ್ಣಿನಾಶೆಗೆ ಬಲಿಯ ಬಾಗಿಲ ಕಾಯ್ದ ವಿಠ್ಠಲನೇ 24 ನಿನ್ನ ನೆಂದು ಕಾಣದಿದ್ದವಕುನ್ನಿ ಪಾಮರನಣ್ಣನೆಂಬೆನೆಹಣ್ಣು ಹಂಪಲವೆನಗೆ ಸಾಲವು ನಿನಗೆ ಕೊಡಬಹುದೇನನ್ನ ತೆರದಾಚಾರ ಹೀನರೆಇನ್ನು ಗೆಳೆಯರು ನನಗೆ ಆದರುಮುನ್ನ ಮಾಡಿದ ಪಾಪ ಬಹಳಿದೆ ಕೊಳ್ಳೊ ನೀನದನೂ 25 ಹಿರಿಯರೆಸಗಿದ ಪುಣ್ಯದಿಂದಲೆದೊರಕಿತಲ್ಲವೆ ನಿನ್ನ ನೆನೆವುದುಪರಮ ಸುಂದರ ಪಾಂಡುರಂಗನೆ ಬಾರೊ ಮಾನಸದೀತರಳರಾಟದಿ ತನ್ನ ತಾಯಿಯಮರೆತ ತೆರದಿಂ ಬಿಟ್ಟು ಕೆಟ್ಟೆನುಕರಗದೇನೈ ನನ್ನ ಮನವದು ನಿನ್ನ ದೆಶೆಯಿಂದ 26 ಕೂಸು ಆಟದೊಳಿದ್ದರೇನೈಹೇಸಿ ಕೆಲಸಹೊಳಿದ್ದರೇನೈದೋಷಗಳೆಯುತ ಪೊರೆವಳಲ್ಲಿದೆ ಪಡೆದ ತಾಯವ್ವಶ್ರೀಶ ವಿಠ್ಠಲ ಪಾಂಡುರಂಗನೆಘಾಸಿಗೊಳಿಸುವ ಮುನ್ನಯವನರುಪಾಶ ಬಿಡಿಸೈ ಭಕ್ತವತ್ಸಲ ದಿವ್ಯ ವಿಠ್ಠಲನೇ 27 ಕಾಮನಯ್ಯ ಸುಧಾಮ ಸಖ ಶ್ರೀರಾಮ ವಿಠ್ಠಲ ದಿವ್ಯ ರೂಪನೆಪ್ರೇಮವೆನ್ನಲ್ಲಿಟ್ಟು ಸಲಹೊ ಪುಣ್ಯವರ್ಜಿತನೆತಾಮಸತ್ವದ ಕೆಲಸವೆಲ್ಲವನೇಮದಿಂದಲೆ ಮಾಡಿ ನಾ ನಿ-ಸ್ಸೀಮನಾಗಿಹೆ ಕಾಯೆಯೊ ವಿಶ್ವವ್ಯಾಪಿ ವಿಠ್ಠಲನೇ 28 ನಾನು ಹೇಳುವುದೇನು ದೇವನೆನೀನೆ ತಿಳಕೊಂಡಿರ್ಪೆ ಎನ್ನಯಮಾನಕುಚಿತಪ್ಪಂತೆ ಸತ್ಫಲ ಕೊಡು ದಯಾಂಬುಧಿಯೇನೀನು ನಿಂvಡೆÉಗೆನ್ನ ಜಗ್ಗುತಸಾನುರಾಗದೆ ಪೊರೆಯೊ ವಿಠ್ಠಲನೀನೆಯಾದರು ಬಾರೊ ಭಕ್ತರ ಹೃದಯ ಮಂದಿರಕೆ 29 ಮಂಗಳಂ ಮಧುಕೈಟಭಾರಿಗೆಮಂಗಳಂ ಶ್ರೀವತ್ಸಧಾರಿಗೆಮಂಗಳಂ ಬ್ರಹ್ಮಾಂಡ ಪಾಲಕ ಪಾಂಡುರಂಗನಿಗೆಮಂಗಳಂ ಶ್ರೀ ಲಕುಮಿದೇವಿಗೆಮಂಗಳಂ ಭೀಮಾತಟಾಕಿಗೆಮಂಗಳಂ ಸದ್ಭಕ್ತ ಮಂಡಳಿಗೆಗಳ ಭೂತಳಕೆ 30
--------------
ಪಾಂಡುರಂಗ
ಸಾಕು ಸಾಕು ಮನುಜಸೇವೆಯು, ರಂಗಯ್ಯ ಇನ್ನು ಪ ಸಾಕು ಸಾಕು ಮನುಜಸೇವೆ ಮಾಡಿ ದಣಿದು ನೊಂದೆ ನಾನುಬೇಕು ನಿನ್ನ ಪಾದಭಜನೆ ಕೊಟ್ಟು ಸಲಹೊ ರಂಗಯ್ಯ ಅ ಹೊತ್ತರೆದ್ದು ಹೋಗಿ ಪರರ ಚಿತ್ತವೃತ್ತಿಯನ್ನು ತಿಳಿದುಹತ್ತರಿದ್ದು ಹಲವು ಕೆಲಸ ಭೃತ್ಯನಂತೆ ಮಾಡಿ - ರಿಕ್ತಹಸ್ತದಿಂದ ಮನೆಯ ಸೇರುವೆ - ಆಸೆಗಾಗಿಮತ್ತೆ ಕಂಡ ಕಡೆಗೆ ತೊಲಗುವೆ - ಬಂದು ಅಪರರಾತ್ರಿಯಲ್ಲಿ ತಿಂದು ಒರಗುವೆ ರಂಗಯ್ಯ ರಂಗ 1 ಸ್ನಾನ ಸಂಧ್ಯಾನುಷ್ಠಾನ ನೇಮವೆಲ್ಲ ತೊರೆದುಬಿಟ್ಟುಹೀನನಾಗಿ ಕೆಟ್ಟ ಜನರ ಮನೆಗಳನ್ನು ತಿರುಗಿ ತಿರುಗಿಶ್ವಾನನಂತೆ ದಿನವ ಕಳೆವೆನೊ - ದುರಾಸೆಯನ್ನುಮನಸಿನಲ್ಲಿ ಮಡಗಿಕೊಂಡು ಕುದಿವೆನೊಕೊನೆಗೂ ಎಳ್ಳುಕಾಳಿನಷ್ಟು ಸುಖವ ಕಾಣೆನೊ ರಂಗಯ್ಯ ರಂಗ2 ಮಾಧವ - ರಂಗಯ್ಯ ರಂಗ3
--------------
ಕನಕದಾಸ