ಒಟ್ಟು 42 ಕಡೆಗಳಲ್ಲಿ , 23 ದಾಸರು , 40 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೋಗಣೆಯ ಮಾಡು ಸಾರಸುಖದೊಡೆಯ ಪ. ಸತ್ಯವಾದ ಜಗಕೆ ಕರ್ತುಕಾರಣ ನೀನೆ ಮುಕ್ತಿದಾಯಕ ನಿತ್ಯತೃಪ್ತನಹುದೈ ಸತ್ಯವಾದವತಾರ ಸಕಲಗುಣ ಪರಿಪೂರ್ಣ ಸಿರಿ ಪರಮ ದಯಾಳು1 ಅಣುರೋಮಕೂಪದಲಿ ಅಂಡಜಾಂಡಗಳಿರಲು ಘನಕೃಪಾಂಬುಧಿ ನಿಮ್ಮ ಪೊಗಳಲಳವೆ ಫಣಿಶಾಯಿಯಾಗಿದ್ದ ಭುವನವ್ಯಾಪಕ ಹರಿಯ ಘನಭಕುತಿಲ್ಯಜಭವರು ಪೂಜೆಮಾಡುವರು 2 ಗಂಗೆಗೋದಾವರಿ ತುಂಗಭದ್ರೆ ಯಮುನೆ ರÀಂಗಸನ್ನಿಧಿಯಾದ ಕಾವೇರಿಯು ಮಂಗಳ ಭೀಮರಥಿ ನಿಮಗೆ ಮಜ್ಜನಕೆ ಅಣಿಮಾಡಿ ಅಂಗಜನಯ್ಯ ಭಾಪೆಂದು ಪೊಗಳೆ 3 ರನ್ನಮಯವಾಗಿರ್ದ ಹೊನ್ನಮಂಟಪದೊಳಗೆ ಸ್ವರ್ಣಪಾತ್ರೆಗಳಲ್ಲಿ ಸ್ವಯಂಪಾಕವು ನಿನ್ನ ಸೊಸೆ ವಾಣಿ ಭಾರತಿದೇವಿ ಕಡುಜಾಣೆ ಚೆನ್ನಾಗಿ ನೈವೇದ್ಯವನ್ನೆ ಮಾಡುವರು 4 ಗಂಧ ಕಸ್ತೂರಿ ಪುನುಗು[ಚಂದನ] ಜವ್ವಾಜಿ ಮುಂದೆ ಕುಂಕುಮದ ಕೇಸರಿಯ ಲೇಪ ಚೆಂದದ ಕೇದಿಗೆ ಮುಡಿವಾಳ ಸಂಪಿಗೆ ಕಂದರ್ಪನಯ್ಯಗೊಪ್ಪಿತು ಮಲ್ಲಿಗೆ 5 ದೆಸೆದೆಸೆಗೆ ಪರಿಮಳಿಪ ಕುಶಲದ ಚಿತ್ರಾನ್ನ ಬಿಸಿದೋಸೆಗೆ ಬೆಣ್ಣೆ ಲೇಹ್ಯಪೇಯ ಬಸಿರೊಳಗೆ ಈರೇಳು ಜಗವನಿಂಬಿಟ್ಟವಗೆ ನಸುನಗುತ ಇಂದಿರಾದೇವಿ ಬಡಿಸೆ 6 ನೂರು ಯೋಜನದಗಲ ಸರಸಿಜ ಬ್ರಹ್ಮಾಂಡ ಹದಿ ನಾರು ಬಣ್ಣದ ಚಿನ್ನದ್ಹರಿವಾಣವು ಸಾರೆಯಲಿ ಪೊಂಬಟ್ಟಲೆಂಬ ಸಾಗರದೊಳಗೆ ಮೇರುಗಿರಿಯೆಂಬೊ ದೀಪಗಳು ಬೆಳಗೆ 7 ಘೃತ ಸೂಪ ಲೋಕಪತಿಗನುವಾದ ದಿವ್ಯಾನ್ನವು ಬೇಕಾದ ಪಂಚಭಕ್ಷ್ಯ ರಸಾಯನವ ಏಕಾಂತದಲ್ಲಿ ನಿಮ್ಮ ದೇವಿ ಬಡಿಸೆ 8 ಖಳರಕುಲವೈರಿಗೆ ತಿಳಿನೀರುಮಜ್ಜಿಗೆ ಎಳನೀರು ಪಾನಕ ಸೀತಳುದಕ ಬಳಲಿದಿರಿ ಬಳಲಿದಿರಿ ಎನುತ ಹಯವದನಗೆ ನಳಿನಾಕ್ಷಿ ಕರ್ಪೂರವೀಳ್ಯವನೆ ಕೊಡಲು 9
--------------
ವಾದಿರಾಜ
ಈ) ರುದ್ರದೇವರು ವೃಷಭನೇರಿದ ವಿಷಧರನ್ಯಾರೆ ಪೇಳಮ್ಮಯ್ಯ ಪ ಹಸುಳೆ ಪಾರ್ವತಿಯ ತಪಸಿಗೆ ಮೆಚ್ಚಿದಜಟಾಮಂಡಲಧಾರಿ ಕಾಣಮ್ಮ ಅ.ಪ. ಕೈಲಾಸಗಿರಿಯ ದೊರೆಯಿವನಮ್ಮ-ಅದು ಅಲ್ಲದೆ ಕೇಳೆಬೈಲು ಸ್ಮಶಾನದಿ ಮನೆಯಿವಗಮ್ಮ-ಸಂಕರ್ಷಣನೆಂದುಕೇಳೆ ಮಹಿಯೊಳು ಜನ ಪೊಗಳುವರಮ್ಮ-ಇದು ನಿಜವಮ್ಮನಾಲಿಗೆ ಸಾಸಿರ ಫಣಿಭೂಷಣ ನಮ್ಮರಮೆಯರಸಗೆ ಇವ ಮೊಮ್ಮಗನಮ್ಮ 1 ಪತಿ ಇವನಮ್ಮ-ಮಾವನ ಯಾಗದಲಿಬ್ಹಾಳ ಕೃತ್ಯಗಳನು ನಡೆಸಿದನಮ್ಮ-ಸಾಗರದಲಿ ಹುಟ್ಟಿದಕಾಳಕೂಟವ ಭಕ್ಷಿಸಿದನಮ್ಮ-ರಾಮನ ದಯವಮ್ಮಮೇಲೆ ಉಳಿಯಲು ಶೇಷಗರಳವುನೀಲಕಂಠನೆಂದೆನಿಸಿದನಮ್ಮ2 ಹರನೊಂದಿಗೆ ವೈಕುಂಠಕೆ ಬರಲು-ತಾತಗೆ ವಂದಿಸುತತರುಣೀರೂಪವ ನೋಡ್ವೆನೆನಲು-ಹರಿ ತಾ ನಸುನಗುತಕರೆದು ಸೈರಿಸಲಾರೆ ನೀ ಎನಲು-ಹಠದಿ ಕುಳ್ಳಿರಲುಕರುಣೆಗಳರಸನು ಹರನ ಮೊಗವ ನೋಡಿಅರುಣೋದಯಕೆ ಬಾರೆಂದು ಕಳುಹಿದ 3 ಅರುಣೋದಯಕೆ ಗಂಗಾಧರ ಬರಲು-ಹದಿನಾರು ವರುಷದ ತರುಣೀರೂಪದಿ ಹರಿ ವನದೊಳಗಿರಲು-ಚರಣನಖಾಗ್ರದಿಧರಣೀ ಬರೆಯುತ್ತ ನಿಂತಿರಲು-ಸೆರಗ ಪಿಡಿಯೆ ಬರಲುಕರದಿ ಶಂಖ ಗದೆ ಚಕ್ರವ ತೋರಲುಹರನು ನಾಚಿ ತಲೆತಗ್ಗಿಸಿ ನಿಂತ4 ಮಂಗಳಾಂಗನೆ ಮಾರಜನಕ-ನಾ ಮಾಡಿದ ತಪ್ಪಹಿಂಗದೆ ಕ್ಷಮಿಸೊ ಯದುಕುಲ ತಿಲಕ-ವಕ್ಷದಲೊಪ್ಪುವ ನಿನ್ನಂಗನೆ ಅರಿಯಳು ನಖಮಹಿಮಾಂಕ-ಹೀಗೆನುತಲಿ ತವಕರಂಗವಿಠಲನ ಪದಂಗಳ ಪಿಡಿದು ಸಾಷ್ಟಾಂಗವೆರಗಿ ಕೈಲಾಸಕೆ ನಡೆದ 5
--------------
ಶ್ರೀಪಾದರಾಜರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಕರುಣಿಸೈ ಶ್ರೀ ರಾಮ ಕೌಸಲ್ಯ ಪ್ರೇಮ ಶರಣ ಜನಕನು ಪೊರೆವ ಕಾರುಣ್ಯಧಾಮ ಪ. ದಶರಥಾತ್ಮಜ ಯಜ್ಞ ಕಾಯ್ದು ಸೀತೆಯ ವರಿಸಿ ಕುಶಲದಿಂದಲಿ ಬಂದು ನಗರದಲ್ಲಿರಲೂ ಸತಿ ಅನುಜಸಹ ವನದಿ ನಸುನಗುತ ಚರಿಸಿ ರಕ್ಕಸರ ಸದೆಬಡಿದೆ 1 ಸತಿಯೆ ಕಳೆದಿರೆ ಹನುಮ ಹಿತವಾರ್ತೆ ಬಿನೈಸೆ ಹತಗೈದು ರಾವಣಾದಿಗಳನೆಲ್ಲ ಹಿತದ ರಾಜ್ಯದ ವಿಭೀಷಣ ರವಿಜರಿಗೆ ಇತ್ತು ವ್ರತ ಬಿಡಿಸಿ ಭರತನಿಗೆ ಧರಣಿಯಾಳಿದನೇ 2 ಪಟ್ಟಾಭಿರಾಮ ಮಂಗಳ ನಾಮ ಕೃಪೆಯಿಂದ ಇಷ್ಟಾರ್ಥವೀಯೊ ಸನ್ಮಂಗಳವನೂ ದಿಟ್ಟ ಶ್ರೀ ಹನುಮ ವಂದಿತ ಚರಣ ನಮಿಸುವೆನು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೇ 3
--------------
ಅಂಬಾಬಾಯಿ
ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ ಕೊಳಲನೂದುವ ಬಗೆಯ ನಳಿನಜಾಂಡವು ತಾನೆ ತಲೆದೂಗುತಲಿದೆ ಕುಳಿತಿರೆ ವಶವಲ್ಲವೆ ಪ ಸರಸಿಜ ನಯನಾಳೆ ಧರೆಯ ಭಾಗ್ಯವ ನೋಡೆ ತರುಗುಲ್ಮಾಲತೆ ನೆವದಿ ಭರದಿ ಪುಲಕಿತಳಾಗೆ ಪರಿಪರಿ ಸುಮದಿಂದ ನೆರೆ ನಸುನಗುತಿಪ್ಪ ಮರುಳೆ ಕಣ್ಣಿಲಿ ನೋಡೆ ವರ ವಿಮಾನಗಳು ಸಂ- ಚರಿಸಿ ಮೆರೆವ ವೈಭವ ಧರೆಯೆಲ್ಲಾ ತಿಳಿಯದು ಲೋಲ್ಯಾಡದೆ ಬಿಡರು 1 ವಾಮಾಲೋಚನೆ ಸುರರ ಧಾಮಾವೆಂಬಿಯಾ ಇದು ಕಾಮತನಯ ಕಾಮದೇವ ಸೋಮಶೇಖರ ತಾನು ತಾಮರಸಾಸನ ಪ್ರೇಮಾದಿ ನಲಿಯುವ ಆ ಮಹರಾದಿ ಲೋಕವೆ ಸಾಮಜಗಮನೆ ಕೇಳೆ ನೀ ಮರುಳಾಗ ಬ್ಯಾಡಾ ಆ ಮುಕುತಿ ಸ್ಥಾನವೆ ಸೇವೆ ಮಾಡುವರು 2 ದೂರ ಜನರಿಗೆ ಸಾಲೋಕ್ಯ ಊರಲಿಪ್ಪರಿಗೆ ಸಾಮೀಪ್ಯ ಗೋರಕ್ಷಕರಿಗೆ ಸಾರೂಪ್ಯ ಸೇರಿದ ಯುವತಿಗೆ ಭರದಿ ಸಾಯುಜ್ಯವೆ ಮೀರಿದೆ ಮುಕುತಿಗಿದು ಭಾರಿ ಭಾರಿಗೆ ಸಾಮಾ ಪೂರೈಸಿ ಮುಕುತರು ತೋರುವರಿಲ್ಲಿ ಆನಂದ ಈ ರಭಸದಿ ವೇಣು ಪೂರೈಸಿ ಸುಖವೀವ ಧೀರ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಜಯ ಜಯ ಭೀಮಶ್ಯಾಮಾ ಜಯ ಸತ್ಯಾವರ ಪ್ರೇಮಾ ಜಯ ಕೃಷ್ಣಾಗತ ಕಾಮಾ ಜಯ ಪುಣ್ಯನಾಮಾ ಪ. ಪಂಚಬಾಣನ ಜನಕ ಪಾಂಚಾಲೆಯನು ಕರೆದು ಪಂಚ ಮೂರುತಿಗರಿಸಿನವ ಹಚ್ಚೆನಲೂ ಪಂಚರತ್ನಗಳಿಂದ ಮಿಂಚುತ ಭಾವಿ ವಿ- ರಿಂಚಿಯ ಕಡೆಗಾಗಿ ನಡೆತಂದಳಾಗ 1 ಅಣಿಮಾದಿ ಗುಣ ಚಿಂತಾಮಣಿಯ ಹತ್ತಿರೆ ಬಂದು ಮಣಿದು ಪಾದಕೆ ನಾರಿಮಣಿ ನಸುನಗುತಾ ಝಣಝಣವೆನಿಪ ಕಂಕಣ ಶೋಭಿತದಿಂದ ಪುನುಗಿನೆಣ್ಣೆಯ ಕೂಡಿದರಿಶಿಣ ಹಚ್ಚಿದಳು 2 ಕ್ಷತ್ರಿಯ ಗಣ ಶಿರೋರತ್ನನಾಗಿರುವಿ ಸ- ರ್ವತ್ರ ವ್ಯಾಪಕ ಫಾಲನೇತ್ರ ವಂದಿತನೆ ಕೃತ್ರಿಮ ದ್ವಿಜ ಭಿಕ್ಷಾ ಪಾತ್ರ ಸಲ್ಲದು ಕಂಜ ಪತ್ರ ತೋರಿದರೆ ನಾನರಿಶಿಣ ಹಚ್ಚುವೆನು 3 ಖುಲ್ಲ ಬಕಗೆ ಭಂಡಿಯಲ್ಲಿ ತುಂಬಿದ ನಾನಾ ಪಲ್ಯ ಭಕ್ಷಗಳ ಮೇಲೆ ಚೆಲ್ಲಿದನ್ನವನು ಎಲ್ಲ ಉಂಡಸುರನ ನಿಲ್ಲದಂತೊರಸಿದ ಮಲ್ಲ ನಿನ್ನಯ ದಿವ್ಯ ಗಲ್ಲವ ತೋರೊ 4 ಅಂಗಸಂಗದಿ ಶತಶೃಂಗಗಿರಿಯನೊಡದ ಮಂಗಳಮೂರ್ತಿ ಮಾತಂಗ ವೈರಿಗಳ ಭಂಗಿಸಿ ಬಲುಹಿಂದ ರಂಗನರ್ತನ ಗೈವ ಶೃಂಗಾರ ಕರಗಳಿಗರಸಿನ ಹಚ್ಚುವೆನು 5 ಮುಂದೆ ಕೀಚಕಬಾಧೆಯಿಂದ ರಕ್ಷಿಸುವಿ ಸೌ ಗಂಧಿ ಕುಸುಮವನ್ನು ತಂದು ಮುಡಿಸುವಿ ಮಂದಮತಿಯ ಕುರುನಂದ ನರನು ಬೇಗ ಕೊಂದು ಮನ್ಮನಸಿಗಾನಂದ ಪಾಲಿಸುವಿ 6 ಕುಂಡಲೀ ಗಿರೀಶ ಬ್ರಹ್ಮಾಂಡ ನಾಯಕ ಹೃ- ನ್ಮಂಡಲದೊಳಗಿಟ್ಟುಕೊಂಡು ಸಂತಸದಿ ಚಂಡ ವೈರಿಗಳನ್ನು ಖಂಡಿಸಿ ಸುಖದಿಂದ ಶುಂಡಾಲ ಪುರವಾಳಿಕೊಂಡು ನೀನಿರುವಿ7
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯ ರಮಾಕಾಂತ - ಜಯತು ದೈತ್ಯ ಕೃತಾಂತ ಜಯ ಸರ್ವ ವೇದಾಂತ - ಜಯತು ನಿಶ್ಚಿಂತ ಪ ಬೇಡ ವೇಷವ ತಾಳಿ- ಓಡಿಸುತೆ ತುರಗವನು ಪ್ರೌಢೆ ಪದ್ಮಾವತಿಯ - ನೋಡಿ ನಸುನಗುತ ಜೋಡಾಗು ತನಗೆಂದು - ಗಾಡಿಕಾರರ ಮಾತ ನಾಡಿ ಕ್ರೋಢಾಲಯಕೆ - ಓಡಿಬಂದವನೆ 1 ತಾಯೆ ಬಕುಳೆಯ ಕಳುಹಿ ಮಾಯಕದ ಕೊರವಂಜಿ ಕಾಯದಿಂದಾಕಾಶರಾಯನರಮನೆಗೆ ಜೋಯೆಂದು ಪೋಗಿ - ಸದುಪಾಯಗಳ ನಡೆಸಿ ತ ನ್ನಾಯ ಕೈತಂದ ಕಮನೀಯ ಮೂರುತಿಯೆ 2 ಶುಕಮುನಿಯ ಮುಖದಿಂದ ಸುಖವಾರ್ತೆಯನು ಕೇಳಿ ಸಕಲ ದೇವೋತ್ತಮರ - ನಿಕರವನು ನೆರಹಿ ಅಕಳಂಕ ಲಗ್ನದಲಿ ಸುಕಪೋಲೆಗೊಲಿದುರಗ ಶಿಖರಿಯಲಿ ನೆಲೆಯಾದ ಲಕುಮಿವಲ್ಲಭನೆ 3
--------------
ಲಕ್ಷ್ಮೀನಾರಯಣರಾಯರು
ತಾಯೆ ಕೇಳೆನ್ನ ಬಿನ್ನಪವ ಬಲು ಮಾಯ ಕಾರನು ಕೃಷ್ಣ ಮಾಡಿದೊಳಿಗವ ಪ ಮಕ್ಕಳೂಳಿಗವ ತಾಯ್ಗಳಿಗೆ ಹೇಳ ತಕ್ಕುದು ನೀತಿ ಕೇಳವ್ವ ನಿಮ್ಮಡಿಗೆ ಠಕ್ಕನ ದೆಸೆಯಿಂದ ದಣುಕೊಂಬುದೆಮಗೆ 1 ಬೆಳಗು ದೋರದ ಮುನ್ನ ಬರುವ ಕೃಷ್ಣ ನೆಲುವಿನ ಪಾಲ್ಬೆಣ್ಣೆಗಳ ಕದ್ದು ಮೆಲುವ ನಿಲುಕದಿದ್ದರೆ ಕಲ್ಲಲಿಡುವ ಒಳ ಹೊರಗೆಲ್ಲ ಕ್ಷೀರ ಸಮುದ್ರವ ಕರೆವ 2 ಉಂಡುದ ಕಳಲುವರಲ್ಲ ನೆಲನುಂಡು ಕೆಟುದು ಪಾಲು ಬೆಣ್ಣೆಗಳೆಲ್ಲ ಮೊಸರ ಬಾಂಢವೆಂದರೆ ಬರಲೊಲ್ಲ ಇವನ ಕಂಡೆನೆಂದರೆ ಸುಳುಹನೆ ಕಾಣಲಿಲ್ಲ 3 ಹೆಣ್ಣ ಮಕ್ಕಳನಿರಗೊಡನು ಬಲು ಬಣ್ಣಿಸಿ ಕರೆದು ಮುದ್ದಿಸಿ ಆಡುತಿಹನು ಚಿಣ್ಣರಂದದಿ ಕಾಣುತಿಹನು ತೊಂಡೆ ವೆಣ್ದಟಿಯ ನಗಲಿಸಿ ನೋಡಿ ನಸುನಗುತಿಹನು 4 ಆಸೆ ನಮಗೆ ಊರೊಳಿಲ್ಲ ಪರ ದೇಶಕ್ಕಾದರೂ ಹೋಗಿ ಜೀವಿಪೆವೆಲ್ಲ ಬೇಸರಾಯಿತು ನಿಮಗೆಲ್ಲ ನಮ್ಮ ಪೋಕ್ಷಿಸುತಿಹ ಲಕ್ಷ್ಮೀರಮಣನೆ ಬಲ್ಲ 5
--------------
ಕವಿ ಪರಮದೇವದಾಸರು
ದಾಸರ ಮೊರೆ ಲಾಲಿಸೋ ವೆಂಕಟಾಚಲ ವಾಸ ಬಿನ್ನಪ ಲಾಲಿಸೊ ಪ ಲೇಸು ಭಕುತಿಯು ಮಾಡದಲೆ ಬಲು ಘಾಸಿಯಾಗುತ ಮನದಿ ನೊಂದು ದಾಸನಾಗದೆ ಕ್ಲೇಶಪಟ್ಟೆನೊ ಈಸುದಿನಗಳ ಕಳೆದೆನೊ ವೃಥಾ1 ತಳಿರು ಪೋಲುವ ನಿನ್ನಯ ಪಾದ- ಕ್ಕೆರಗದೆನ್ನಯ ಸಿರವು ದಣಿಯನೋಡದೆ ನಿನ್ನನು ಮಹಾಪಾಪ ಗಳನೆ ಮಾಡುತ ನೊಂದೆನು 2 ಅನಿಮಿಷೇಶನೆ ನಿನ್ನ ಮಹಿಮೆಯ ಕ್ಷಣಬಿಡದೆ ಧ್ಯಾನವನೆ ಮಾಡುವ ಅನಲಸಖತನಯನಿಗೆ ನಮಿಸುವೆ ಕ್ಷಣ ಬಿಡದೆ ಎನ್ನ ಪೊರೆವ ಕರುಣಿ3 ಕಟಿಯ ಕಾಂಜಿಯ ದಾಮವು ನವರತ್ನದ ಸ್ಫ್ಪಟಿಕ ಮುತ್ತಿನ ಹಾರವು ಲಕುಮಿ ಧರಿಸಿದ ವಕ್ಷ ಕೌಸ್ತುಭಹಾರ ಸ್ಫುಟದಿ ಶೋಭಿಪ ಉರವು 4 ವಟುವಿನಂದದಿ ಪ್ರಕಟನಾಗುತ ಕುಟಿಲ ದಿತಿಜರಿಗಖಿಳ ವಿಧ ಸಂ- ಕಟಗಳನೆ ಸಂಘಟನೆ ಮಾಡುವ ನಟನ ತೆರ ವಟಪತ್ರಶಾಯಿ 5 ನೊಸಲ ಕಸ್ತೂರಿ ತಿಲಕ ರಂಜಿಸುವ ಚಂ- ಪಕವ ಪೋಲುವ ನಾಸಿಕ ಎಸೆದು ಶೋಭಿಪ ಮೌಕ್ತಿಕ ಪೋಲುವ ದಂತ ನಸುನಗುತಿಹ ಹಸನ್ಮುಖ6 ಶಶಿಯ ಧರಿಸಿದ ಅಸಮ ಭಕುತನು ನಿಶಿಹಗಲು ತನ್ನ ಸತಿಗೆ ಬೆಸಸಿದ ಅತಿಶಯದ ಮಹಿಮೆಯನೆ ಕೇಳುವ ಮತಿಯ ಕೊಡು ಮನ್ಮಥನ ಪಿತನೆ 7 ಚಿತ್ತದೊಳಗೆ ನಿನ್ನಯ ಪಾದಾಂಬುಜ ಭಕ್ತಿಯಿಂದಲಿ ಕಾಂಬುವ ಭಕ್ತಜನರ ವೃಂದವ ಕರುಣದಿ ಕಾಯ್ವ ವಿಷ್ಣು ಮೂರುತಿ ಕೇಶವ 8 ಎತ್ತನೋಡಿದರಿಲ್ಲ ನಿನ್ನ ಸಮ ಉತ್ತಮರ ಕಾಣುವುದೆ ಮಿಥ್ಯವೊ ಸತ್ಯವಿದು ಪುರುಷೋತ್ತಮನೆ ಎನ್ನ ಚಿತ್ತದಲಿ ನಲಿನಲಿದು ಶ್ರೀಶ 9 ಕಮಲಸಂಭವ ಪಿತನೆ ಪ್ರಾರ್ಥಿಸುವೆ ಶ್ರೀ- ರಮೆಧರೆಯರಿಂ ಸೇವ್ಯನೆ ಕ್ಷಣಬಿಡದಲೆ ನಿನ್ನನೆ ಚಿಂತನೆ ಮಾಳ್ಪ ಸುಜನರಿಗೊಲಿಯುವನೆ 10 ಶ್ರವಣ ಮನನಕೆ ಒಲಿವ ದೇವನೆ ದಿನದಿನದಿ ನಿನ್ನ ಮಹಿಮೆ ತೋರು ಶ್ರೀ- ಕಮಲನಾಭ ವಿಠ್ಠಲನೆ ಕರುಣದಿ ಶ್ರಮವ ಹರಿಸುಸುಧಾಮ ಸಖನೆ11
--------------
ನಿಡಗುರುಕಿ ಜೀವೂಬಾಯಿ
ದೇವ ಫಣಿಭೂಷಣನೆ ಬಾ ಸಕಲ ಜನ ಜೀವಚೈತನ್ಯ ಬಾರೈ ದೇವತೆಗಳುಯ್ಯಲೆಯನು ಭಯಭಕ್ತಿ ಭಾವದಿಂ ತೂಗತಿಹರು ಪ ಅವನಿಯೊಳಗಯನವೆರಡು ಸರಪಣಿಗೆ ಭುವನವೇಳರ ಪೀಠವು ಶಿವನೆ ತೊಡಿಸಿರಲು ಮೇಲೆ ಕುಣಿಕೆ ತಾ ಧ್ರುವನ ಕೈಲಿಹುದುಯ್ಯಲೆ 1 ಧರಣಿಯಿದು ಮೇಲುಮಣೆಯು ಗಗನದಿ ಸ್ಫುರಿಸುತಿಹ ಶಶಿಸೂರ್ಯರು ದೀಪವಾ ಗಿರಲೊಪ್ಪುತಿಹದುಯ್ಯಲೆ 2 ಇಂದ್ರಾದಿ ದಿಕ್ಪಾಲಕರು ಮಿಕ್ಕಾದ ಗಂಧರ್ವ ಸುರ ಸಿದ್ಧರು ವಂದಿಸುತ ಸ್ತುತಿಗೈಯುತ ಸಂದಣಿಸಿ ಮುಂದೆ ನಿಂದಿಹರು ಮುದದಿ 3 ಕುಸುಮಮಾಲೆಗಳಾಗಿವೆ ನಕ್ಷತ್ರ ವೆಸೆದು ಗಗನದಲೊಪ್ಪುತ ಅಸಮತೇಜೋರಾಶಿಯೆ ಮದನಹರ ನಸುನಗುತ ಬಂದು ನೆಲೆಸು 4 ಮಂಗಳ ಮಹಾಮಹಿಮನೆ ಶಿವಗಂಗೆ ಗಂಗಾಧರೇಶ ನೀನೆ ಲಿಂಗವೆಂದೆನಿಸುತಿಲ್ಲಿ ತಿರುಪತಿಯ ರಂಗ ವೆಂಕಟನೆನಿಸುವೆ 5
--------------
ತಿಮ್ಮಪ್ಪದಾಸರು
ದ್ವಾರಪಾಲಕರಿಗಾನಮಿಪೆ ನಿತ್ಯ ಶ್ರೀ ರಮಣ ನಾರಯಣನ ಪುರತ್ರಯದೊಳಿಹ ಪ ಜಯ ವಿಜಯ ಬಲಪ್ರಬಲ ಚಂಡ ಪ್ರಚಂಡ ನಿ ರ್ಭಯ ನಂದ ಸುನಂದ ಕುಮುದ ಕುಮುದಾ ಧಾಮ ಸುಧಾಮ ಸಂ ಪ್ರಿಯ ತಮನ ಆಜ್ಞಾಧಾರಕರೆಂದೆನಿಸುವ 1 ಲಸದೂಧ್ರ್ವಪುಂಡ್ರ ದ್ವಾದಶನಾಮ ಶಂಖ ಸುದ ರುಶನ ಸುಗದಾ ಪದ್ಮ ನಾಮ ಮುದ್ರಾ ಕುಸುಮ ಮಾಲಿಕೆ ಧರಿಸಿ ನಸುನಗುತಹರ್ನಿಶಿಗಳಲಿ ಹರಿಯ ತುತಿಪಾ 2 ಕುಂಡಲ ಹಾರ ಪದಕ ಕಂ ಕಣ ನಡುವಿನೊಡ್ಯಾಣ ಪೀತಾಂಬರ ಕ್ವಣಿತನೂಪುರ ಗೆಜ್ಜೆ ಚರಣಾಭರಣ ಸುಲ ಕ್ಷಣರಾದ ಸರ್ವಾಂಗ ಸುಂದರರೆನಿಸುವಾ 3 ಕರದೊಳೊಪ್ಪುವ ಗದಾಯುಧ ಕುಂದರದನ ಕ ಸ್ತುರಿನಾಮ ಮಾಣಿಕಕ್ಷತೆಯ ಧರಿಸಿ ಕುಸುಮ ಕೇಸರಿ ಗಂಧದಿಂ ಭಯಂ ನಿತ್ಯ 4 ಮೂರು ಬಾಗಿಲಲಿ ಶ್ರೀ ದೇವಿಯಿಪ್ಪಳು ವಾಯು ಭಾರತಿ ಆಜ್ಞದಿಂದೀ ದೇವರು ವೀರಜಯ ವಿಜಯಾದಿಗಳಿಗೆ ವಿಷ್ವಕ್ಸೇನ ಪ್ರೇರಕನು ತಾನಾಗಿ ಶ್ರೀಶನರ್ಚಿಪನೆಂದು 5 ಹೃದಯ ಶ್ರೋತ್ರ ಚಕ್ಷುವದನಾದಿ ಕರಣದೊಳು ನದನದಿಗಳೊಳು ಮಹೋದಧಿಗಳೊಳಗೆ ಉದಿತ ಭಾಸ್ಕರ ಮಂಡಲದಿ ದೇವಗೃಹದಿ ಸದಸದ್ವಿಲಕ್ಷಣ ಸುದತಿಸಹ ಪೂಜಿಸುವ 6 ದ್ರುಹಿಣ ಮೊದಲಾದ ಸುಮನಸ ಪೂಜ್ಯ ಚರಣಾಬ್ಜ ಮಹಿಮ ಮಂಗಳಚರಿತ ಸುಗುಣ ಭರಿತ ಅಹಿರಾಜ ಶಯನ ಜಗನ್ನಾಥವಿಠಲನ ಸ ನ್ಮಹಿಮೆಗಳ ತಿಳಿಸಿ ತೋರಿಸಲಿ ಮನ್ಮನದೀ 7 ತೀರ್ಥಕ್ಷೇತ್ರ
--------------
ಜಗನ್ನಾಥದಾಸರು
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನಿನ್ನ ನಂಬಿದವರಿಗೆ ಇನ್ನು ಕೊರತೆಗಳುಂಟೆ ಪನ್ನಗಾದ್ರಿನಿವಾಸ ಶ್ರೀ ವೆಂಕಟೇಶ ಪ. ಬನ್ನ ಬಡಿಸದೆ ಎನ್ನ ಧ್ಯಾನವನ್ನು ಮರೆವರು ಭಕ್ತರಂದು ಬನ್ನ ಬಿಡಿಸಿ ಪೊರೆವೆ ಕರುಣದಿ ಅ.ಪ. ಅಧಿಕ ಸಂಸಾರದಿ ಪದೆಪದೆಗೆ ತೊಡರುಗಳ ಬದಿಗನಾಗಿದ್ದವರಿಗೆ ಕೊಟ್ಟು ಸದಮಲಾನಂದ ಪರೀಕ್ಷಿಸುವೆ ತವಕದಿ ಚದುರಿಸುತ ಮನವನ್ನು ಅದುಭುತನೆ ನಸುನಗುತ ನೀನೋಡುತ್ತ ಹೆದರಿ ಬೆದರಿ ನಿನ್ನ ಧ್ಯಾನಕ್ಕೊದಗಲಿ ಮನವೆಂಬೆಯಲ್ಲದೆ ಮಧುರವಾಣಿಯ ತೋರಿ ಸಲಹಲು ವದಗಿ ಕಾಯುವೆ ಭಕ್ತರನ್ನು (ಚದುರ ನಿನಗೆಣೆಗಾಣೆ ಜಗದೊಳು) 1 ಜಾಣರೊಳತಿ ಜಾಣತನ ತೋರುತ್ತ ಕಾಣಿಸಿ ಕಾಣದಂತಿರುತ ಭಕ್ತರೊಳು ಗಾಣಕೆ ಸಿಲ್ಕಿದ ಎಳ್ಳು ಸಚ್ಛದೆಣ್ಣೆ ಮಾಣದೆ ಬರುವ ತೆರ ತೋರುವೆ ಜನಕೆ ಕಾಣದಿಹ ಕಾಮಕ್ರೋಧದ್ಹಿಂಡಿಯ ಮಾಣದೆ ಬೇರ್ಪಡಿಪೆಯಲ್ಲದೆ ಇದು ಕಾಣ್ವರು ನಿನ್ನ ಚರಣದಂಘ್ರಿಯ ಕಾಣುತಲೆ ಸ್ತುತಿಮಾಡಿ ಹಿಗ್ಗುತಲಿಹರು 2 ದಿಟ್ಟಮೂರುತಿ ಕೇಳೊ ಕೊಟ್ಟರೊಳ್ಳಿತು ಕಷ್ಟ ಉತ್ಕøಷ್ಟವಾಗಲಿ ಹರಿಯೆ ಎನ್ನ ದೊರೆಯೆ ಕಟ್ಟಕಡೆ ನಿನ ಧ್ಯಾನ ಕೊಟ್ಟು ಕಾಯುವ ಭಾರ ಘಟ್ಟಿ ಕಂಕಣ ಕಟ್ಟಿ ನಿಂತಿಹೆ ಶ್ರೀ ಶ್ರೀನಿವಾಸ ಎನ್ನ ದುಷ್ಟತನವೆಲ್ಲ ಕುಟ್ಟಿ ಕೆಡಹುವೆ ಕಟ್ಟಕಡೆಗೆ ನಿನ್ನ ಪಾದಾಂಗುಷ್ಠ ಸೇರಲಿಯೆಂದಾ ಭಕ್ತರ ಬೆಟ್ಟದೊಡೆಯನೆ ಸಲಹುತಿರುವೆ ಉತ್ಕøಷ್ಟ ಮೂರುತಿ ಭಕ್ತರಿಷ್ಟದಾಯಕ 3
--------------
ಸರಸ್ವತಿ ಬಾಯಿ
ನಿನ್ನ ಪಾದವ ನಂಬಿ ಅನ್ಯರಾಶ್ರಯವ್ಯಾಕೆಚನ್ನ ಗುರು ವಿಜಯರಾಯ ಪ ಇನ್ನೇನು ಯಿನ್ನೇನು ಯೆನ್ನ ಕುಲಕೋಟಿ ಪಾ-ವನ್ನವಾದುದು ನಿಶ್ಚಯಾ ಜೀಯ ಅ.ಪ. ಪಂಚ ಮಹ ಪಾತಕರೊಳಗೆ ಮೂರನೆ ಕಕ್ಷಿಕಾಂಚನ ದ್ರೋಹಿ ನಾನು ಯೆನ-ಮುಂಚೆ ಬಂದಾಗ ಕೈ ಬಿಡದೆ ಪ್ರಾ-ಪಂಚವನೆ ಬಿಡುಯೆಂದು ನುಡಿದೆ ಯೆನ್ನಸಂಚಿತಾಗಮವೆಲ್ಲ ತೊಡದೆ ಯೆನ್ನ ||ಕಂಚು ಕಟ್ಬುಳಿ ಕಲ್ಲೊತ್ತಿನ ಮೇಣ್ ಕಾಶಿಗೆ ||ಪಂಛೇರು ಮಾಡಿ ನಡದೆ ಬಿಡದೆ 1 ವ್ಯಾಸರಾಯರ ಗುಹೆಯೊಳಗೆ ನವ ಸಂ-ನ್ಯಾಸಿಗಳ ಸಮಕ್ಷಮದಲಿ ಯೆನ್ನದಾಸನಾಗೆನುತ ನೀ ಪೇಳ್ದೆ ಯೆನ್ನವಾಸಿ ಪಂಥಗಳೆಲ್ಲ ತಾಳ್ದೆವೊಲಿದುದೋಷಾಂಕುರಗಳೆಲ್ಲ ಸೀಳ್ದೆ ಸ್ವಾಮಿ ||ಶ್ರೀಶ ಸರ್ವೋತ್ತಮನೆಂದು ನೀ ಪೇಳಿ ಸಂ-ತೋಷದಿಂದೆನ್ನ ಪೊರದೆ ಬಿಡದೆ 2 ನಿತ್ಯ ಮೆರೆವೆ ಯೆನ್ನ ||ಪೂಜಾ ಫಲವೆಂದು ಆವಾಗೆ ನಿನ್ನ ಪದರಾಜೀವ ಧ್ಯಾನಿಸುವೆ ಸ್ವಾಮಿ 3 ಪುಶಿಯು ಜಗವೆಲ್ಲ ದೈವವು ತಾನೆನುತಅಸಮ ವೇದ ಪೌರುಷ ಯೆಂಬಂಥಭಸುಮಧಾರಿಯನೆ ಕರದೆ ಅವನಅಸುರ ಭಾವವನೆಲ್ಲ ಮುರಿದೆ ನಮ್ಮಬಿಸಜಾಕ್ಷ ಪರನೆಂದು ಪೊರೆದೆ ಸ್ವಾಮಿ ||ಎಸೆವ ದ್ವಾದಶನಾಮ ಪಂಚಮುದ್ರಿಯನಿಡಿಸಿನಸುನಗುತಲವನ ಪೊರದೆ ಬಿಡದೆ 4 ವಾಕು |ಅನ್ಯಥಾ ಮಾಡುವುದು ಸಲ್ಲ ಮೋ-ಹನ್ನ ವಿಠ್ಠಲ ಯಿದನು ಬಲ್ಲ ಮುನ್ನಾಪನ್ನಗಶಯನ ಪ್ರಸನ್ನನಾದದಕೆ ಯಿದುಎನ್ನ ಮನೋರಥ ಸಿದ್ಧಿಯೊ ಸ್ವಾಮಿ 5
--------------
ಮೋಹನದಾಸರು