ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಮೂರು ವಚನ ಪ್ರಹ್ಲಾದ ಹೀಗೆ ಬಾಲಕರಿಗ್ಹೇ ಳುವಾಗ ಕೇಳುತಲದನು ಬೇಗಶಂಡಾಮರ್ಕ- ರ್ಹೋಳಗಿ ಹೇಳಿದರು ಚಂದಾಗಿ ದೈತ್ಯನಾಗಲಾಕ್ಷಣದಲ್ಲಿ ಬೇ ಆಗ ಪ್ರಹ್ಲಾದನಾ ಬೇಗ ಕರೆ ಕಳಿಸುತಲೆ ಹೀಗೆಂದ ಕ್ರೋಧ ಭರಿತನಾಗಿ ತಾನು 1 ರಾಗ ಆವಾತ ಬಲನಿನಗೆ ಪ ನಾನೊಬ್ಬನೆ ಬಲ ಅ.ಪ ಕುಲಭೇದ ಮಾಡುವಿಯೋ ಹುಟ್ಟಿ ನೀಕುಲಕಂಟನಾದ್ಯೋ1 ಕೆಟ್ಟರಲ್ಲಾ ಕಡುದೈತ್ಯ ಜಾಲಿಗಿಡನಾಗಿ ಹುಟ್ಟಿದ್ಯೋ 2 ಇದ್ದರೇನು ಬಿಡದೆ ಆ ಕೊಡಲಿಗೆ ಕಾವಾದ್ಯೋ 3 ವಚನ ನಾ ಮಾತುಗಳು ವಿರಸಾದ ಸರಿಸಿ ಅವನಲಿ ಸ್ನೇಹ ಸ್ಮರಿಸಿ ಅವನಲಿ ಭಕ್ತಿಸುರ ಹರುಷದಿಂದಲಿ ನುಡಿದ ಹರಿ ಹಿರಣ್ಯ ಕಶಿಪುವಿಗೆ ರಾಗ ಅವನೆ ಎನಗೆ ಬಲವು ಪ ಶ್ರೀ ವೈಕುಂಠ ಭುವನಕ್ಕೆ ಒಡೆಯಾ ಅ.ಪ ಕುಲಗಳಿಗೊಡೆಯ 1 ಅವನೆ ಪಾಲಿಸಿ ನಾಶವನು ಅವನೆ ಸರ್ವೋತ್ತಮನವನೆ ಎನ್ನೊಡೆಯಾ 2 ಸರ್ವರಲ್ಲಿ ಇಡು ಸ್ನೇಹವ ಪಾದ ಅನಂತಾದ್ರಿಗೊಡೆಯ ನಾಗಿರುವಾ 3 ರಾಗ ಮಗನಮೇಲೆ ಖಡ್ಗ ಹಿಡಿದನು 1 ಮಾತಾಡಿದ್ಹೇಳೆಲೊ ನೀನು 2 ಹರಿಯನ್ನೇ ಕೊಂಡಾಡುವೆಯಲ್ಲಾ ಆಹರಿಯ ಹೊರತು ಗತಿಯೆನಗಿಲ್ಲಾ 3 ಕಡಿದು ಬಿಡುವೆ ನಿನ್ನನ್ನು ನಾನು ಹಿಂದೆ ಕಡಿದೇನು ಮಾಡಿದಿ ಎಲೋ ನೀನು 4 ಕಂಡಂಜುವನಲ್ಲವೆಲೊ ನಾನು 5 ಸ್ಥಿರವೆಂಬುದನರಿಯೆಯೋ 6 ಶ್ರೀಹರಿವಶವಾಗಿಹುದು 7 ಅವನಿದಿರುವಾ ಸ್ಥಳವಾವುದು 8 ಕೊಡುವ ನೆನಗವತಾನು 9 ಮೂರ್ಖ ತಿಳಿ ನೀನು 10 ಪ್ರಕಟನಾಗುವ ಅನಂತಾದ್ರೀಶಾ 11 ವಚನ ದೃಢವಾದ ಕಂಬವನು ದೃಢಮುಷ್ಠಿ ಕಡುಶಬ್ಧ ತಡವಿಲ್ಲ ಹೋಯಿತು ಒಳಗೆಹಿಡಿ ಬ್ರಹ್ಮಾದಿಗಳು ಪೊಡ ನಡುವೆ ಬಂದಿತು ಎಂದು ಸಿಕ್ಕಲ್ಲೇ ಅಡಗಿದರು ಆಗ ಪಟುತರ ಶ್ರೀಹರಿಯುಕುಟಿ ಮಹಾಕಠಿನ ನರಮೃಗನಾಗಿ ಭಟರು ಇರುವಲ್ಲೆ ಆರ್ಭ ಸಂಹನನ ನರನುನರ ಸಿಂಹ ಜಿಹ್ವೆನಲಿದಾಡುವದು ದೈತ್ಯಸಿಂಹ ನಡುಗಿದನು ರಾಗ ಶೌರ್ಯದಿಂದ ಯುದ್ಧವೆಂಬೋ ಕಾರ್ಯ ಮಾಡಿದಾ 1 ಗದೆಯ ಸಹಿತ ಕೈಯ ಹರಿಯು ವದಗಿ ಹಿಡಿದನು 2 ಖಡಗಚರ್ಮ ಹಿಡಿದು ಬಂದ ನಡೆದು ಮುಂದಕ್ಕೆ 3 ತಕ್ಕವಾಗಿರುವ ಹೊಸ್ತಿಲಕ್ಕೆ ನಡೆದನು 4 ಹೃದಯದಲ್ಲಿ ಸೀಳಿದಾ 5 ಕೊಂದು ಎಲ್ಲ ಸರಳ ಮಾಡಿದಾ 6 ಸ್ತುತಿಸಿ ಪುಷ್ಟವೃಷ್ಟಿಕರೆದುರು7 ಭಯನಿವಾರಣನ ದಯದಿ ಭಯವ ಕಳೆದರು 8 ನುಡಿದವಾಗ ತೀವ್ರದಿಂದಲಿ 9 ಗಾಯನವ ಮಾಳ್ಪರು 10 ಸಾಹಿತ್ಯದಿಂದಲಿ11 ಮೂರ್ತಿ ಕಂಡು ದೂರ ನಿಂತರು 12 ಸಂತತಾನಂತದ್ರೀಶನಂತ ತಿಳಿಯರು 13 ವಚನ ಸಂಪೂರ್ಣ ಕೇಳ್ವರೂ ಅವರು ದುರಿತ ತೋರುವನು ಪ್ರತ್ಯಕ್ಷ ಚಾರ್ವನಂತಾದ್ರೀಶ ನಾರಸಿಂಹನು ಮಾಡಿರುವಲ್ಲಿ ಪೂರ್ಣವಾಯಿ ದಯದಿಂದ ಮೂರು ಅಧ್ಯಾಯ 1
--------------
ಅನಂತಾದ್ರೀಶ - ಕಥನಕಾವ್ಯಗಳು
ತಂದೆ ಮುದ್ದು ಮೋಹನಾ | ನಿನ್ | ಅಂದ ಪಾದವ ಭಜಿಸುವೆ ಪ ನಂದ ಕಂದನ ತಂದು ತೋರಿಸಿ | ಬಂಧನವ ಪರಿಹರಿಸು ನೀ ಅ.ಪ. ವತ್ಸರ | ತರಳನಾಗಿರುವಾಗಲೇ 1 ಹರಿಯ ವ್ಯಾಪ್ತಿಯ ಕಂಡು ನೀ | ಗಿರಿ ಗುಹೇಯಲಿ ಚರಿಸುತಾತೊರೆದು ಮಮತೆಯ ಚರಿಸಿದೇ | ಕರೆಕರೆಯ ಸಂಸಾರದೀ 2 ತಪವನಾಚರಿಸುತ್ತಲೀ | ವಿಪಿನವಸಿ ಸಂಚರಿಸುತಾವಿಪವರಸ ಪೆಗಲೇರಿದವನ್ನ | ಅಪರೋಕ್ಷದಿ ಕಾಣುತಾ 3 ನಡುನಡುವೆ ಮನೆಗೈದುತಾ | ಮಡದಿಯನೆ ತಕ್ಕೈಸುತಾ ಎಡ ಬಲದ ಒಡನಾಡಿ ಜನ ಕಡು | ಮೋಹಬಡುವಂತಾಡುತಾ 4 ಇಭಗಿರೀ ರಥೋತ್ಸವಕ್ಕೇ | ಪ್ರಭು ಮುದ್ದು ಮೋಹನ ದಾಸರುವಿಭವದಿಂದಲಿ ಬಂದು ನಿಮಗೆ | ಶುಭದ ಅಂಕಿತವಿತ್ತರು 5 ಶಾಂತ ಚಿತ್ತದಿ ಜಪಿಸುತಾ | ಮಂತ್ರ ಸಿದ್ಧಿಯ ಪಡೆಯುತಾ ಭ್ರಾಂತ ಜನರನು ಭಕ್ತಿ ಪಂಥದಿ | ನಿಂತು ನಲಿವಂತೆ ಮಾಡುತಾ6 ಸಾಹಸ್ರಾರಂಕಿತವನಿತ್ತೂ | ಮಾಹಿತಾಂಘ್ರಿಯ ಭಜಿಸಿದಾ ಸಾಹಸಿಗ ಶೇಷಾಂಶ ಭಕ್ತರ | ಮೋಹ ಕಳೆದುದ್ಧರಿಸಿದಾ 7 ನಕ್ರಹರಗತಿ ಪ್ರೀತನಾ | ವಿಕ್ರಮದಿ ಸಂಸ್ಥಾಪಿಸೀಚಕ್ರಿಪುರಿಗಾ ರಾಮನವಮಿಲಿ | ವಿಕ್ರಮದಿ ನೀ ಹೊರಡುತಾ 8 ಅಹಿ ಭವ ವಂದ್ಯನಾ | ಗುರುಗೋವಿಂದ ವಿಠಲನನಿರುತ ಭಜಿಸುವ ಜ್ಞಾನವಾ | ಕರುಣಿಸೀ ಸಲಹೆನ್ನನು 9
--------------
ಗುರುಗೋವಿಂದವಿಠಲರು
ಯತಿಸಾರ್ವಭೌಮಾ ಸದ್ಗುರು ಸ್ವಾಮಿ ಪ ಮತಿಗೆ ಮಂಗಳವಾದ ಗೋಪ್ಯ ಸ್ಥಿತಿಯು ನಿನಗರುಹುಲದರಿಂ ನುತಿಪೆನಾನಿಮ್ಮಡಿಗಳನು ಕೇಳ್ ಪ್ರತಿವಾದಿಭಯಂಕರನೆ ಶ್ರೀ 1 ಅಂತರಾಪುರಿಯೊಳಗೆ ತಾನೆ ಅ ನಂತ ರೂಪಗಳನ್ನು ತೋರಲೂ ನಿಂತು ನೋಡಿದೆನಹುದೊ ಮುಕ್ತಿ ಕಾಂತೆಯೆಂಬೊ ರಮಾಂಶಳನು ಶ್ರೀ 2 ಉಭಯ ವೇದಾಂತಾರ್ಯನಾಗಿಯು ಅಭಯ ದಾನವನಿತ್ತ ಸೋಹಂ ಪ್ರಭುವೆ ತಾನಾಗಿರುವಾ ನಿಜಕಳೆ ವಿಭುವೆ ಜಯ ಜಯ ಶುಭಕರನೆ ಶ್ರೀ 3
--------------
ಚನ್ನಪಟ್ಟಣದ ಅಹೋಬಲದಾಸರು
ಲಕ್ಷ್ಮೀ ದೇವಿಯ ಗಂಡ ಹರಧನುರ್ಭಂಗಾ ರುಕ್ಮಾಂಗ ಧನಪಾಲಾ ಕರುಣಾಂತರಂಗಾ ಪ ಪೂಜಿಸಿದವರಿಗಭೀಷ್ಟವ ಕೊಡುವಾ ಪೂಜಿಪ ದಾಸರ ಕಷ್ಟವ ತರಿವಾ ಸಜ್ಜನರಿರುವಲ್ಲಿ ನಿರುತನಾಗಿರುವಾ 1 ಸ್ಮಾರನನ್ನು ಪಡೆದ ಮನೋಹರ ಮೂರ್ತಿ ಶರಣು ಬಂದವರಿಗೆ ವರ ಚಕ್ರವರ್ತಿ ಧರೆಯಲ್ಲಿ ಪೊಗಳುವೆ ಶ್ರೀಹರಿ ಕೀರ್ತಿ ಅರಿಯದ ದಾಸಗೆ ಸುಖಗಳ ಭರತೀ 2 ಪನ್ನಗಶಯನ ಶ್ರೀದಾಸರ ಪೋಷಾ ಸನ್ನುತ ಕಾವ ಶ್ರೀ ದೂರ್ವಾಪೂರೇಶಾ ಮನ್ನಿಸಿ ರಕ್ಷಿಸೊ ಭಜಕರ ಪೋಷಾ ಚನ್ನಿಗ ಕೇಶವದಾಸನಧೀಶಾ3
--------------
ಕರ್ಕಿ ಕೇಶವದಾಸ
ಸಾವಧಾನಾಗಿ ಮಾಡೆಲೋ ಗುರುಭಕ್ತಿ | ಕಾವಕರುಣಾಳುದೋರಿ ನಿಜ ಮುಕ್ತಿ ಪ ಗುರುನಾಮ ಸ್ಮರಣೆ ಅನುದಿನಾ | ಗುರುಮೂರ್ತಿಯ ಮಾಡಿ ನಿಜಧ್ಯಾನಾ | ಗುರುಚರಣವ ಪೂಜಿಸು ನಿಧಾನಾ | ಗುರು ನಮನದಿ ಹಾಕಿ ಲೋಟಾಂಗಣಾ 1 ಗುರುಭಕ್ತರ ಸಂಗವನು ಮಾಡಿ | ಗುರು ಕರುಣದ ಮಹಿಮೆಯ ಪಾಡಿ | ಗುರುವಾಕ್ಯ ಪ್ರಸಾದವನು ಬೇಡಿ | ಗುರು ಅಭಯವ ಕೊಂಡು ನಲಿದಾಡಿ 2 ಗುರುವಿನಲ್ಲಿ ಹಿಡಿಯದೆ ನರಭಾವಾ | ಗುರುವಿಗರ್ಪಿಸಿ ತನುಧನ ಮನ ಜೀವಾ | ಭವ ಬಂಧನವಾ | ಗುರುಮಹಿಪತಿ ಬಾಲನಾಗಿರುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಕೆಯ ಮಾಡಿಕೊಳ್ಳೀ ಕೇಶವನಿಗೆ ಹರಕೆಯ ಕಟ್ಟಿಕೊಳ್ಳೀ ಪ ಹರಕೆಯ ತೀರಿಸಿಷ್ಟಾರ್ಥವ ಪಡಕೊಳ್ಳೀ ಹರುಷದಿ ಹರಿಗಾತ್ಮವರ್ಪಿಸಿಕೊಳ್ಳೀ ಅ.ಪ. ಭಜನೆಯ ಮಾಳ್ಪೆನೆಂದೂ ಕೇಶವನಿಗೆ ಭಜನೆಯರ್ಪಿಸುವೆನೆಂದೂ ಅಜಪಿತ ಶ್ರೀಹರಿದಾತನಾಗಿರುವಾಗ ಭಜಕರು ಕೊಡುವ ಭೋಜನ ಭಕ್ಷವ್ಯಾಕೇ 1 ಸ್ಮರಣೆಯ ಮಾಳ್ಪೆನೆಂದು ಕೇಶವನಿಗೆ ಸ್ಮರಣೆಯರ್ಪಿಸುವೆನೆಂದೂ ನಿತ್ಯ ತೃಪ್ತನುಯಿರೆ ಬರಿದೆ ನೈವೇದ್ಯವ ಸಲಿಸುವುದ್ಯಾಕೇ 2 ಸೇವೆಯ ಮಾಳ್ಪೆನೆಂದು ಕೇಶವನಿಗೆ ಸೇವೆಯರ್ಪಿಸುವೆನೆಂದೂ ಭಾವಜನಯ್ಯನೆ ತ್ರಿಜಗಪಾಲಕನಾಗಿ ದೇವತಾನಿರುತಿರೆ ಭವಭಯವ್ಯಾಕೇ 3 ವಂದನೆ ಮಾಳ್ಪೆನೆಂದು ಕೇಶವನಿಗೆ ವಂದನೆ ಕೊಡುವೆನೆಂದೂ ಚಂದದಿ ಹರಿತಾನೇ ಸೃಷ್ಟಿಗೀಶನುಯಿರೆ ಅಂದದಿ ಕೊಡುವ ದಾನಗಳವಾಗ್ಯಾಕೇ 4 ಆತ್ಮವ ಕೊಡುವೆನೆಂದೂ ಕೇಶವನಿಗೆ ಅತ್ಮವರ್ಪಿಸುವೆನೆಂದೂ ಸಾತ್ವಿಕ ಜನವಂದ್ಯ ದೂರ್ವಾಪುರದೊಳಿರೆ ಮತ್ಯಾಕೆ ಯೋಚನೆ ಭಕ್ತಿಯುಳ್ಳವಗೇ 5
--------------
ಕರ್ಕಿ ಕೇಶವದಾಸ