ಒಟ್ಟು 145 ಕಡೆಗಳಲ್ಲಿ , 50 ದಾಸರು , 133 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಹಿ ಕೃಷ್ಣ ಮಹಿಪತಿ ಮಧುರೆಗೆ ಪೋಗೋದೇನೊ ಕಾರಣ ಯದುಕುಲನಾಥ ಪಾಹಿ ಕೃಷ್ಣ ಮಹಿಪತಿ ಪ ಮಧುವೈರಿ ತಾ ಬ್ಯಾಗ ಮಧುರಾಪಟ್ಟಣದಾರಿ ಹಿಡಿದಿರೆ1 ದಧಿ ಮಥನವ ಮಾಡಿ ಕದವ ತೆಗೆದು ಕಂಡರು ಬ್ಯಾಗ 2 ಮಿಂಚಿನಂತ್ಹೊಳೆವೊ ವಿರಿಂಚನಯ್ಯನ ರಥ ಚಂಚಲಾಕ್ಷಿಯರು ನೋಡುತಲಾಗ 3 ಬನ್ನಿರೆ ಬನ್ನಿರೇ ಪನ್ನಂಗಶಯನನ ಬೆನ್ನ್ಹತ್ತಿ ನಾವು ಹೋಗುವೊಣೀಗ 4 ಫುಲ್ಲನಾಭನೆ ಮತ್ತೆಲ್ಲಿಗೆ ಪಯಣವೊ ಎಲ್ಲ ವಾರ್ತೆಗಳ್ಹೇಳೊ ನಮಮುಂದೆ 5 ನಂದಗೋಪನ ಬುದ್ಧಿ ಮಂದವಾಯಿತೇನೊ ವೃಂದಾವನವ ಬಿಟ್ಟು ಕಳಿಸುವ 6 ಕೂಸೆಂದು ನಿನ್ನ ಮುದ್ದಿಸುವೊ ಮೋಹಗಳೆಲ್ಲ ಬ್ಯಾಸರಿಕ್ಯಾಯ್ತೇನೆಶೋದೆಗೆ 7 ಸಾಧುಗೋವ್ಗಳನೆಲ್ಲ ಕಾದುಕೊಂಡಿರುವೋದು ಶ್ರೀಧರ ನೀದಾರಿಗ್ಹೇಳಿದ್ಯೊ 8 ವತ್ಸಕಾಯ್ದುದು ಮನಕಿಚ್ಛಿಲ್ಲದಿರಲು ಶ್ರೀ- ವತ್ಸಧರನೆ ಸುಮ್ಮನಿರೊ ನೀನು 9 ನಮ್ಮನೆಯಲಿ ಪಾಲ್ ಬೆಣ್ಣೆ ಕದ್ದನೆಂದು ನಿಮ್ಮಮ್ಮನಲ್ಲಿ ದೂರಿದೆವೇನೊ 10 ಕ್ಷೀರಗಡಿಗೆ ಒಡೆದೋಡಿ ಪೋದನೆಂದು ದೂರಿಕೊಂಡವರಲ್ಲೋ ನಿನ್ನನು 11 ಊರೊಳಗೊಬ್ಬಳು ದೂರಿಕೊಂಡರೆ ನಾವು ಭಾರಿ ಶಿಕ್ಷೆಯ ಮಾಡಿ ಬಂದೆವೊ 12 ಎಂದಾದರೊಂ(ದು) ದಿನ ಅಂದ ಮಾತುಗಳೆಲ್ಲ ಇಂದೆ ತಪ್ಪಿ ್ಹಡಿಯದೆ ಕ್ಷಮಿಸಯ್ಯ 13 ಕದವ ತೆಗೆಯದ ಮುಂಚೆ ಸದನದ್ವಾರದಿ ಬಂದು ಯದುನಾಥ ಎದುರೆ ನಿಂತಿರುವ್ಯಲ್ಲೊ 14 ಕಂಗಳಿಂದಲಿ ನೋಡ್ಯಾಲಿಂಗನೆ ಮಾಡುತ ಸಂಗಸುಖದಿ ಬೆಳೆದಿದ್ದೇವೊ 15 ನಿನ್ನ ನೋಡದ ಕಂಗಳಿನ್ನ್ಯಾತಕಿರಲು ಕೇ(ಗೇ?) ರೆಣ್ಣೆಯ ತೀಡಿಕೊಂಬುವೋಣೇನೊ 16 ಮಾರನಾಟಕೆ ಮನಸೋತು ನಿನ್ನನೆ ನಾವು ಜಾರಪುರುಷನೆಂದು ತಿಳಿಯದೆ 17 ಇರುಳೇಯೆ ಮನೆಯಲ್ಲಿ ಕೊಳಲೂದೋ ಕಾಲಕ್ಕೆ ನಳಿನಾಕ್ಷ ನಾವ್ಹ್ಯಾಗೆ ಬಂದೆವೊ 18 ಕಾಲಿಗಿಡುವ ವಸ್ತು ಕರದಲಿಟ್ಟುಕೊಂಡು ವಾಲೆ ಮೂಗುತಿ ಹೆರಳಿಗೆ ಚುಚ್ಚಿ 19 ಹರಡಿ ಕಂಕಣ ಪಾದದ್ಹರಡಿನ ಮ್ಯಾಲಿಟ್ಟು ಮುಡಿವ ಮಲ್ಲಿಗೆ ಕಿವಿಯಲಿ ಸುತ್ತಿ 20 ಹಾರ ಪದಕವ ಟೊಂಕಕೆ ಕಟ್ಟಿ ನಾವು ಉಟ್ಟ ಸೀರೆ ಕುಪ್ಪುಸ ಪಾರವಿ(ಪರಿವೆಯಿ?)ಲ್ಲದೆ 21 ಗಂಡಮಕ್ಕಳಿಗುಣಬಡಿಸಿ ಮಂಡಿಯ ಮ್ಯಾಲೆ ಸಂಡಿಗ್ಹುಳಿಯನ್ಹಾಕಿ ಬಂದೆವೊ 22 ಎಲೆಯ ಮ್ಯಾಲ್ಹಾಕೋ ಪದಾರ್ಥವೆಚ್ಚರವಿಲ್ಲ ತಲೆಯ ಮ್ಯಾಲ್ಹಾಕಿ ಬಂದೆವು ನೋಡೊ 23 ಬೆಣ್ಣೆ ಚೆಟ್ಟಿಗೆಯ ಬೆಕ್ಕಿನ ಮುಂದೆ ಸರಿಸೇವೊ ಸಣ್ಣ ಕೂಸಿನ ನೆಲವಿನೊಳಿಟ್ಟು 24 ಅಳುವೊ ಮಕ್ಕಳನೆ ಆಕಳ ಕಣ್ಣಿಗೆ ಕಟ್ಟಿ ಕರು- ಗಳ ತೊಟ್ಟಿಲೊಳಗೆ ಇಟ್ಟು 25 ಬಂಗಾರದ್ಹಾರ ಪದಕನ್ಹಾಕಿ 26 ಅಚ್ಛದಿಂದೆತ್ತಿ ಮುದ್ದಿಡುತಿರೆ ನಮ ಗಲ್ಲ ಕಿ- ತ್ತಿ ಚಿವರಿಕೊಂಡ್ಹೋಯಿತು 27 ಬಂಗಾರ ಕಳಕೊಂಡು ಮಂಗನಂತಾದೆವೊ ಮಂಗಳಾಂಗನೆ ಇಷ್ಟು ಮರುಳಾಗಿ 28 ವ್ಯತ್ಯಾಸದಿಂದ್ವಸ್ತ್ರ ಇಟ್ಟು ಬಂದೆವೊ ನಾವು ಬಿಟ್ಟೊ ್ಹೀದನೆಂಬೊ ಸಿಟ್ಟಿಲ್ಲವೊ 29 ಅಡಅಡವಿಲಿ ನಿನ್ನ ಹುಡುಕುತ ತಿರುಗೇವೊ ಕಡಲಶಯನ ಕರುಣದಿ ಬಂದ್ಯೊ 30 ರಾಸಕ್ರೀಡೆ ಜಲಕ್ರೀಡೆನಾಡಿದ ವಾರ್ತೆ ರಾ(ರಹ?)ಸ್ಯ ಒಬ್ಬರಿಗೆ ನಾವ್ ತಿಳಿಸದೆ31 ಅತ್ತೆಮಾವಂದಿರೀ ವರ್ತಮಾನವ ಕೇಳಿ ನೆತ್ತಿಮ್ಯಾಲ್ಹೊಡದ್ಹೊರಗ್ಹಾಕೋರೊ 32 ಪತಿಗಳು ನಮ್ಮನ್ನು ಬಿಟ್ಟರೂ ಬಿಡಲೊ ಶ್ರೀ- ಪತಿ ನಿನ್ನ ಬಿಟ್ಟು ಪೋಗುವರಲ್ಲ 33 ಮನೆ ಧನ ಧಾನ್ಯ ಮಕ್ಕಳು ಪತಿಗಳು ಬ್ಯಾ- ಡ ನಮಗೊಂದು ಸ್ಥಾನ ತೋರಿಸೊ ನೀನು 34 ಕುಸುಮ ಮಲ್ಲಿಗೆ ಒಣಗಿದ ದಾರ ಮತ್ಯಾವ ಕೆಲಸಕ್ಕೆ ಬರುವುದೊ 35 ಎಲ್ಲಿ ಬಿಲ್ಲ ್ಹಬ್ಬ ಮತ್ತೆಲ್ಲಿ ಸೋದರಮಾವ ಎಲ್ಲಿಂದ ಕರೆಯ ಬಂದನು ಈತ 36 ಕ್ರೂರನೆನ್ನದಲೆ ಅಕ್ರೂರನೆಂಬುವೋ ಹೆ- ಸರ್ಯಾರಿಟ್ಟರ್ಹೇಳೊ ಈ ಪುರುಷಗೆ 37 ನಮ್ಮ ನಿಮ್ಮನು ಅಗಲಿಸುವೋನು ನಮ್ಮಂಥ ಹೆ- ಣ್ಣು ಮಕ್ಕುಳು ಇವಗಿಲ್ಲವೆ 38 ಇಳಿಯಿಳಿ ಇಳೆಯಲ್ಲೀಳಿಗೆಯ ಕೊಟ್ಟೇವೊ ನಮ್ಮ ಕೊ- ರಳ ಕೊಯ್ದು ಮುಂದಕ್ಹೋಗೋ ನೀ 39 ವಾಸುದೇವನೆ ನಿನ್ನ ರಥದ ಗಾಲಿಗೆ ನಾವು ಹಾಸಿಕ್ಯಾಗಿ ಅಡ್ಡಬಿದ್ದೆವೊ 40 ಮಧುರಾಪಟ್ಟಣದಲ್ಲಿ ಇದ್ದ ಸತಿಯರೆಲ್ಲ ಮದನಮೋಹನ ನಿನ್ನ ಬಿಡುವೋರೆ 41
--------------
ಹರಪನಹಳ್ಳಿಭೀಮವ್ವ
* ಎಂಥಾದ್ದೊ ಶ್ರೀ ತಿರುಪತಿ | ಎಂಥಾದ್ದೊ ಪ. ಎಂಥಾದ್ದೊ ತಿರುಪತಿ ಕ್ಷೇತ್ರ | ಸ ತ್ಪಾಂಥರಿಗಿಲ್ಲಿ ಸುಗಾತ್ರ | ಆಹ ಕಂತುಪಿತನು ಇಲ್ಲಿ ನಿಂತು ಭಕ್ತರಿಗೆಲ್ಲ ಸಂತಸಪಡಿಸುವನಂತಾದ್ರಿನಿಲಯ ನಿನ್ನೆಂದಾದ್ದೊ ಅ.ಪ. ನಾಗಾದ್ರಿಗಿರಿಯ ಮೆಟ್ಟುಗಳು | ಅ ಯೊಗ್ಯರಿಗಿದು ದುರ್ಲಭಗಳು | ಅಲ್ಲಿ ಭಾಗವತರ ಸಮ್ಮೇಳಗಳು | ಶಿರ ಬಾಗಿ ವಂದಿಪರು ಜನರುಗಳು | ಆಹ ಪೋಗುತ ಗಾಳಿಗೋಪುರವ ಕಂಡೆರಗಿ ಮುಂ ದ್ಯಾಗುತ ಸಜ್ಜನ ನೀಗುವರು ದುಃಖ1 ಹರಿಮಂದಿರ ಮಹಾದ್ವಾರ | ಬಹು ಜ ನರು ಕೂಡಿಹರು ವಿಸ್ತಾರ | ಬೀದಿ ನಡೆದು ಪದ್ರಕ್ಷಿಣಾಕಾರ | ಭೂ ವರಹನ ಸ್ವಾಮಿ ಕಾಸಾರ | ಆಹ ಹರುಷದಿಂದಶ್ವತ್ಥ ತರುವ ಕಂಡೆರಗಿ ಹರಿ ದರುಶನಕಾಗಿ ಹಾರೈಸುವ ಜನತತಿ 2 ಸ್ವಾಮಿಪುಷ್ಕರಣಿಯ ಸ್ನಾನ | ಮನ ಕಾನಂದಪ್ರದ ಸುಜ್ಞಾನ | ಭಾನು ತಾನುದಿಸುವನು ಮುಂದಿನ | ಸುಖ ಕೇನೆಂಬೆ ಹರಿಯ ದರ್ಶನ | ಆಹ ನೀನೆ ಗತಿಯೆಂದು ನಂಬಿದವರ ಪೊರೆವ ಭಾನುಪ್ರಕಾಶ ಹಣ ಕಾಣೀಕೆ ಕೈಕೊಂಬ 3 ಗರುಡ ಸ್ಥಂಭವನೆ ಕಾಣುತ್ತ | ಬಾಗಿ ಕರಮುಗಿದು ಒಳದ್ವಾರ ಪೊಗುತ | ವಿಮಾನ ಗಿರಿ ಶ್ರೀನಿವಾಸಗೆರಗುತ್ತ | ಬಂದು ವರ ತೊಟ್ಟಿ ತೀರ್ಥ ಕೊಳ್ಳುತ್ತ | ಆಹಾ ತರತರದ ಕಾಣಿಕೆ ಕೊಪ್ಪರಿಗೆಗೆ ಸುರಿಯುತ್ತ ನಿರುತ ನೀ ಸಲಹೆಂದು ಮೊರೆಯಿಡೆ ಭಕ್ತರು 4 ಗರುಡನ ಎದುರೊಳು ನಿಂದು | ಸ್ವಾಮಿ ಗರುವ ರಹಿತ ತಾ ಬಂದು | ಬಂದ ವರಭಕ್ತರನೆ ಕಾಯ್ವ ಬಿರುದು | ಇಂಥ ಹರಿಗೆ ಅಮೃತೋದಕವೆರೆದು | ಆಹಾ ಜರಿಯ ಪೀತಾಂಬರ ಉಡಿಸಿ ಸರ್ವಾಭರಣ ಹರಿಗೆ ಶೃಂಗರಿಸಿಪ್ಪ ಪರಿಯ ವರ್ಣಿಸಲಳವೆ 5 ಶಿರದಲಿ ಪೊಳೆವ ಕಿರೀಟ | ಕ ಸ್ತೂರಿ ತಿಲಕವು ಸುಲಲಾಟ | ಸುರ ನರರ ಪಾಲಿಪ ವಾರೆ ನೋಟ | ಕರ್ಣದಿ ಕುಂಡಲ ಮಾಟ | ಆಹ ವರ ಸಂಪಿಗೆಯ ಪೋಲ್ವ ನಾಸಿಕದ ಕದಪುಗಳ್ ಮೆರೆಯೆ ಕನ್ನಡಿಯಂತೆ ಮುಗುಳು ನಗೆಯ ಚೆಲ್ವ 6 ಸಿರಿವತ್ಸ ಕೌಸ್ತುಭಹಾರ | ಕಂಠ ಕರಶಂಖ ಚಕ್ರವಪಾರ | ಸುರ ನರರಿಗಭಯ ತೋರ್ಪಧೀರ | ಕರ ದ್ವರವ ಕೊಡುವಂಥ ಉದಾರ | ಆಹ ತರತರದ ಪುಷ್ಪಗಳ್ ನವರತ್ನ ತುಳಸಿಯ ಮೆರೆವೊ ಹಾರಗಳನು ಧರಿಸಿರ್ಪ ಗಂಭೀರ 7 ವಕ್ಷಸ್ಥಳದಲ್ಲಿ ಲಕುಮಿ | ಹರಿ ಅವನಿ | ಜಗ ರಕ್ಷಿಪ ಮಮಕುಲಸ್ವಾಮಿ | ಸರ್ವ ಸಾಕ್ಷಿಯಾಗಿದ್ದು ತಾ ಪ್ರೇಮಿ | ಆಹ ಪಕ್ಷಿವಾಹನ ಸುರಾಧ್ಯಕ್ಷ ಖಳ ಶಿಕ್ಷ ಪಕ್ಷವಹಿಸಿ ಸುರರ ರಕ್ಷಿಪ ಸರ್ವದ 8 ನಡುವಿನ ನಾಭಿ ವಡ್ಯಾಣ | ಮೇಲೆ ಕುಂದಣ | ನೆರೆ ಪಿಡಿದುಟ್ಟ ಪೀತಾಂಬ್ರವರ್ಣ | ಕಾ ಲ್ಕಡಗ ರುಳಿಯು ಗೆಜ್ಜೆ ಪೂರ್ಣ | ಆಹ ಮಡದಿಯರುಭಯದಿ ಪರಿಶೋಭಿಸುತಿರೆ ಪಾದ ದೃಢಭಕ್ತರನೆ ಪೊರೆವ 9 ನೋಟಕತಿ ಚಲುವ ಗಂಭೀರ | ಭಕ್ತ ಕೂಟದಿ ಮೆರೆಯುತಪಾರ | ಉತ್ಸ ಸಾರ | ಭೋಕ್ತ ಸಾಟಿರಹಿತ ಬರುವ ಧೀರ | ಆಹ ಕೋಟಿದೇವತೆಗಳ ನೋಟದಿಂ ಪೊರೆಯುವ ದಾಟಿಸುವ ಭವನಾಟಕಧರದೇವ 10 ಮಚ್ಛಾದ್ಯನೇಕ ಅವತಾರ | ಬಹು ಇಚ್ಛೆಯಿಂದಲಿ ಭಜಿಸುವರ | ಕಾಯ್ವ ಮೆಚ್ಚುತ ಮನದಲಿ ನಾರ | ಸಿಂಹ ಸ್ವೇಚ್ಛೆÉ್ಛಯಿಂ ಮೆರೆವ ಜಗತ್ಸಾರ | ಆಹ ತುಚ್ಛಕರು ವಸನ ಬಿಚ್ಚಿ ಸೆಳೆಯುತಿರೆ ಇಚ್ಛೆಯರಿತು ಲಲನೆ ರಕ್ಷಿಸೆನಲು ಪೊರೆದ 11 ಎಲ್ಲೆಲ್ಲಿ ನೋಡಲು ಭಕ್ತ | ಜನ ರಲ್ಲಲ್ಲಿ ನೆರೆಯುತ ಮುಕ್ತಾ | ಧೀಶ ನಲ್ಲದಿನ್ನಿಲ್ಲೆಂದು ಸ್ತುತಿಸುತ್ತ | ಶ್ರೀಶ ಇಲ್ಲೆ ಬಾರೆಂದು ಕರೆಯುತ್ತ | ಆಹ ಸೊಲ್ಲು ಲಾಲಿಸೊ ಎನಲು ಬಲ್ಲಿದ ಭಕ್ತರ ಸೊಲ್ಲಿಗೆ ಒಲಿಯುವ 12 ಬುತ್ತಿ ಪೊಂಗಲು ಮಾರುವರು | ಜನ ರರ್ಥಿಯಿಂದದನು ಕೊಂಬುವರು | ಗೀತ ನೃತ್ಯ ವಾದ್ಯಗಳಿಂ ಕುಣಿಯುವರು | ಅನ್ನ ಅರ್ಥಿಯಿಂ ದಾನ ಮಾಡುವರು | ಆಹ ಎತ್ತ ನೋಡಲು ಮನಕತ್ಯಂತ ಆನಂದ ನಿತ್ಯ ಉತ್ಸವಗಳು ಸತ್ಯಾತ್ಮ ಕೈಗೊಂಬ 13 ಇಂತು ಮೆರೆವೊ ಕ್ಷೇತ್ರ ಘನವು | ನೋಡಿ ನಿಂತು ವರ್ಣಿಸಲಸದಲವು | ಜಗ ದಂತರಾತ್ಮಕನ ವೈಭವವು | ಗುರು ಅಂತರ್ಯಾಮಿ ಶ್ರೀನಿಧಿಯು | ಆಹ ಇಂತು ಬ್ರಹ್ಮೋತ್ಸವ ನಿಂತು ರಥದಿ ಬರುವ ಕಂತುಪಿತ ಶ್ರೀ ಭೂಮಿಕಾಂತೇರ ಒಡಗೂಡಿ14 ಶ್ರೀಪತಿ ಜಲದೊಳಾಡೀದ | ಕೂರ್ಮ ರೂಪದಿಂ ಗಿರಿಯನೆತ್ತಿದ | ಬಹು ಪಾಪಿ ಕನಕಾಕ್ಷನ ಕೊಂದ | ನೃಹರಿ ರೂಪ ವಾಮನ ಭೃಗುಜನಾದ | ಆಹ ಚಾಪಖಂಡನ ಕೃಷ್ಣಚರಿಸಿ ಬತ್ತಲೆ ಕಲ್ಕಿ ಗೋಪಾಲಕೃಷ್ಣವಿಠ್ಠಲನ ಮಹಾಕ್ಷೇತ್ರ15
--------------
ಅಂಬಾಬಾಯಿ
ಅ ಕೇಳ್ ಕೇಳೆಲೊ ತತ್ವಜ್ಞಾನ ನಿನಗೆ ಬೋಧಿಸುವೆ ನಾ ಪ ವಾಹನ ನಾಟಕ ದರುಶನ ಹೋಟಲೊಳಗೆ ಸುಭೋಜನ ಇದೇ ಪೀಯೂಷಪಾನ 1 ವೇಶ್ಯಾಲಯ ಪ್ರವೇಶಿಸುವದೆ ಘುನ ಭಂಜನ 2 ಹರಿದಿನ ಮರುದಿನ ಇರುಳು ಹಗಲು ಉಂಬನ ನರನ ಜನ್ಮವೆ ಬಲು ಪಾವನ ಮಹಾಪಾಪನಾಶನ 3 ಸೋಪುಲೇಪನ ಕ್ರಾಫು ಬಿಡೋಣ ನಾಪಿತ ಕಾರ್ಯ ಕೈಗೊಳ್ಳೋಣ | ಇದೆ ವೇದಾಧ್ಯಯನ 4 ಸೋಡಾ ಪಾನ ಬೀಡಿ ಸೇದೋಣ ಭಂಜನ 5 ಕುಲದಭಿಮಾನ ಕಳೆದನುದಿನ ನಳದೊಳಗಿನ ಜಲಸ್ನಾನ ಮಹಕಲುಷ ನಾಶನ 6 ಈ ಕಲಿ ಬೋಧೆ ನಿರಾಕರಿಸುವವರಿಗೆ ಶ್ರೀಕರಶ್ಯಾಮಸುಂದರನ ದಿವ್ಯಾನಂದ ಭವನ 7
--------------
ಶಾಮಸುಂದರ ವಿಠಲ
(ಅನಂತೇಶ್ವರ ದೇವರನ್ನು ನೆನೆದು) ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇ ಲೋಕೋತ್ತಮಾನಂತೇಶ್ವರ ದೇವಾಲಯದಿ ಪ. ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆ ಝಡಿದು ಬರುತಿಹುದು ಭೋರ್ಗುಡಿಪ ತೆರೆಯ ಝಡಿವ ನಾದಕೆ ಒಡಂಬಡದೇಕಾಂತದಿ ಬಂದು ಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1 ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳು ಭಾರವನು ಪೊತ್ತು ಬಹಳಾಲಸ್ಯವೋ ಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದ ಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2 ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ- ಬೇಡಿದೆನು ಎಂಬ ನಾಚಿಕೆಯ ಮನವೋ ಖೋಡಿ ನೃಪತಿಯರ ಹೋಗಾಡಿಸುತ ಕಾಡಿನೊಳು ಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3 ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯ ಕಾಲದೊಳು ಗೈವಂತಮೇಲುಕಾರಿಯದ ಕಾಲೋಚಿತವ ಮನದೊಳಾಲೋಚಿಸುತ್ತಹಿಯ ಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4 ಯುಗಯುಗದೊಳವತಿರಿಸ ಜಗದ ಭಾರವನಿಳುಹಿ ಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವ ತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀ ಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5 ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ- ಗಲಭೆಯುಂಟೆಂದಲ್ಲಿ ನಿ¯ದೆ ಈಗ ಲಲನೆಯಳ ಕೂಡೆ ಸರಸಗಳನಾಡಲು ತನಗೆ ಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6 ಸೇರಿರ್ದ ಶರಣ ಸಂಸಾರಿ ನೀನೆಂದು ಶ್ರುತಿ ಸಾರುವುದು ಕರುಣವನು ತೋರೆನ್ನ ದೊರೆಯೇ ದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ- ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ತುಪಾಕಿ ವೆಂಕಟರಮಣಾಚಾರ್ಯ
ಅಧ್ಯಾಯ ಏಳು ಜ್ಞಾಪಿತೋ ಬಕುಲಾವಾಕ್ಯಾಚ್ಛುಕ ಜೀವಾನು ಮೋದಿತಃ ಭೂಪೇನ ನಿಶ್ಚಿತೋ ಮಾಯಾದ್ವಿಪಹಾ ಯೋವರೋ ಹರಿಃ ವಚನ ಅರಸಿ ತನ್ನ ತೊಡೆಯಲಿರುವ ಪರಿಯು ಮಾತಾಡಿದಳು ಕೊರವಿ ಮಾತಿನರಗಿಳಿಯೆ ನೀನು ಅರಸಿ ಮಾತಿಗೆ ಬಾಯ ತೆರೆದು ಮಾತಾಡದಲೆ ಪರಮಗಂಭೀರ ಳಾಗಿರುವ ಪದ್ಮಾವತಿಯ ಕರಪಿಡಿದು ಏಕಾಂತ ದಲಿ ಕೇಳಿದಾಗ ಪರಮ ಅಂತ:ಕರಣೆ ಪರವಶದಿ ಆಗ 1 ರಾಗ:ಭೈರವಿ ಅಟತಾಳ ನಾ ಕೊಡಲೋಪ ಪ್ರೀತಿಯ ಮಗಳೆ ನಿನ್ನ ಮಾತಿಗೆ ಹೊರ್ತಿಲ್ಲ ಖ್ಯಾತೀಲೆ ವೇಂಕಟನಾಥ ನೆಂತೆನಿಪಗೆ ಅ.ಪ ಅರಸಗೆ ಪೇಳಲ್ಯೊ ನಾ ಬಲ್ಲಂಥ ಹಿರಿಯರ ಕೇಳಲ್ಯೊ ಸರಿ ಬಂದವರ ನೋಡಿಕಳಹಲ್ಯೊ 1 ಮಂದಿಯ ಕೇಳಲ್ಯೋ ನಾ ಕೊಡಲಾರದೆ ಜರಿಯಲÉ್ಯೂೀ 2 ಮಿತ್ರೇರ ಸಂಗತಿಯೋ ಅದು ಮಿಥ್ಯವೋ 3 ವಚನ ಕಾಮಜನಕರ ಸ್ಮರಿಸುತಲೆ ಜನರಮುಂದ್ಹೇಳುವದಕನು ಬಂದದÀು ತಾನೆ ಅನು ಅಪಹಾಸ್ಯವನು ಒಬ್ಬರನೋವು ತನಗೆಂಬುವದÀು ಹೇಳುವದಕನುಮಾನವ್ಯಾಕೆ 1 ರಾಗ:ನೀಲಾಂಬರಿ ಭಿಲಂದಿತಾಳ ಪತಿ ಅವನ ಸರಿಯಿಲ್ಲವನಿಯೊಳಗ ಅವನೇ ಜಗಜ್ಜೀವನನೆ ಪ ಮಂಜುಳಮಾತಿಗೆ ರಂಜ ಪಾದ ಕಂಜಕೆ ಅರ್ಪಿಸು ಅಂಜುವದ್ಯಾಕಮ್ಮ ಅಂಜನಾದ್ರೀಶಗೆ ಅಂಜಲುಬೇಡ ನಿರಂಜನೆ ಭಯಭಂಜನೆ 1 ಹೂವಿನ ತೋಟಕೆ ಪೋಗಲು ಚಿತ್ತಪಲ್ಲಟವಾಗಿ ನೀಟಾಗಿ ನಿರ್ಮಿಸಿ ಆಟವಮಾಡುವ ಕಪಟ ನಾಟಕನೆ 2 ಭೂಷಣ ಉರದಲ್ಲಿ ಶ್ರೀವತ್ಸವು ಚಲ್ವಿಕೆ ನೋಡಲು ಎಲ್ಲ ಜ್ಯೋತಿಗಳವನಲ್ಲಿ ನಿವಾಳಿಸಿ ಚಲ್ಲವುದು ಅಲ್ಲೇನಿಲ್ಲೆಂದು ಮತ್ತೆಲ್ಲಿ ಹಂಬಲಿಸದೆ ಅಲ್ಯವಗರ್ಪಿಸು ಆಹ್ಲಾದದಿಂದಲ್ಲೇ ಬಲ್ಲಿದನಾಂತಾದ್ರಿಯಲ್ಲಿರುವ ಎನ್ನೊಲ್ಲಭನೆ ಪ್ರಾಣದೊಲ್ಲಭನೆ 3 ವಚನ ಮಗಳಿಗÉಂದಳು ನಾ ನಿನ್ನ ಜಗ ಗಗನ ರಾಜನ ರಾಣಿ ಸುಗುಣ ಬಕುಲಾ ಬರುವರ ಕೂಡಿ ಬರುವಳಾ ಅಗಸಿಯೊಳಗೆ 1 ಹೊರಳಿ ನೋಡಿದ ಬರುವಳಿವಳ್ಯಾರೆಂದು ಕೊರವಿ ಕರೆಸಿದಳು ಬೇಗ ಸರಸಿ- ಎಂದು ಸುರಿಸಿ ಅಮೃತದ ವಾಣಿ ಬೆರೆಸಿ ಸ್ನೇಹವ ಮತ್ತೆ ತರಿಸಿ ರತ್ನದಪೀಠ ಇರಿಸಿ ಕೂಡೆಂದು ಕುಳ್ಳಿರಿಸಿ ಕೇಳಿದಳಾಗ ಹರುಷದಿಂದಾ2 ರಾಗ:ಗೌರಿ ಆಟತಾಳ ಲಲನೆ ನೀ ದಾರಮ್ಮ ಹೆಸರೇನು? ಶೇಷಾ ಚಲವಾಸಿ ಬಕುಲಾವತಿ ನಾನು 1 ಎಲ್ಲಿಗ್ಹೋಗುವೆ ಮುಂದೆ ನೀನು? ತಿಳಿ ಇಲ್ಲಿಗೆ ಬಂದೆ ನೇಮಿಸಿ ನಾನು 2 ನಿನ್ನ ಮನದ ಕಾರ್ಯಗಳೇನು? ಮುಖ್ಯ ಕನ್ಯಾರ್ಥಿಯಾಗಿ ಬಂದೆನು ನಾನು 3 ದಾವಾತ ವರನಾಗಿರುವನು?ದಿವ್ಯ ದೇವ ನೆಂದೆನಿಸುವ ತಿಳಿ ನೀನು4 ಕೃಷ್ಣವೇಣಿಯೆ ಅವನ್ಹೆಸರೇನು? ಶ್ರೀ ಕೃಷ್ಣನೆಂದೆನಿಸುವ ತಿಳಿ ನೀನು5 ತಾಯಿ ತಂದೆಗಳೆಂಬುವರಾರು?ತಿಳಿ ದೇವಕಿ ವಸುದೇವರು ಅವರು 6 ಚಂದಾಗಿ ಕುಲದಾವದ್ಹೇಳಮ್ಮ ಶುಭ ಚಂದ್ರಮನ ಕುಲಕೇಳಮ್ಮ 7 ಶ್ರೇಷ್ಠವಾಗಿಹ ಗೋತ್ರದಾವದು?ವಾ ಶಿಷ್ಠ ನಾಮಕವಾಗಿರುತಿಹುದು 8 ನಕ್ಷತ್ರ ಪೇಳು ಪನ್ನಗವೇಣಿ ಶ್ರವಣ ನಕ್ಷತ್ರ ತಿಳಿ ರಾಜನ ರಾಣಿ 9 ವಿದ್ಯೆಯಿಂದ ಹ್ಯಾಂಗಿರುವ? ಬ್ರಹ್ಮ ವಿದ್ಯೆಯಿಂದಲಿ ಗಮ್ಯ ಎನಿಸುವ 10 ಧನವಂತನೇನಮ್ಮ ಗುಣನಿಧಿಯೇ? ಬಹು ಧನವಂತರಾಗುವರವನಿಂದೆ 11 ಕಣ್ಣುಮೂಗಿಲೆ ಹ್ಯಾಗಿರುವವ?ಕೋಟಿ ಮನ್ಮಥ ಲಾವಣ್ಯ ಎನಿಸುವ 12 ಹೆಣ್ಣಿನ ಮನಸೀಗೆ ಬಂದೀತೇ? ಅವನ ಕಣ್ಣಿಲಿ ಕಂಡರೆ ತಿಳಿದೀತೆ 13 ಅದಾವು ದಿವಸೆಷ್ಟು ಪೇಳಮ್ಮಾ?ಇಪ್ಪ- ತ್ತೈದರ ಮೇಲಿಲ್ಲ ತಿಳಿಯಮ್ಮ 14 ಚಿಕ್ಕಂದು ಮದುವೆ ಇಲ್ಯಾಕಮ್ಮ?ಅವನ ತಕ್ಕ ಹೆಂಡತಿ ಇರುತಿಹಳಮ್ಮ 15 ಮುಖ್ಯಳಿರಲು ಮದುವ್ಯಾಕಮ್ಮ?ತಿಳಿ ಮಕ್ಕಳಿಲ್ಲದ ಕಾರಣವಮ್ಮ 16 ನೇಮದಿಂದಿರುತಿಹ ತಾನೆಲ್ಲಿ ತಿಳಿ ಶ್ರೀಮದನಂತಾದ್ರಿಯಲಿ 17 ರಾಗ:ಯರಕಾಲ ಕಾಂಬೋದಿ ಭಿಲಂದಿತಾಳ ಕಾಂತನ ಮುಂದ್ಹೇಳಿದಳೇ ಅಂತರಂಗದೊಳು ಚಿಂತೆ ಮಾಡಲು ಬೇಡ ಕೇಳು ಸಂತೋಷದ ಸುದ್ದಿ 1 ಕೊರವಿ ಬಂದಿದ್ದಳು ಮರಗುತ ಮಲಗಿದ ಕೊರವಿ ಕಾಲ್ಗುಣದಿ 2 ಪರಿ ಕೊರವಿ ನಾಡ ಸಖಿಯರ ಕೂಡಿ ಪ್ರೌಢ ಪುರುಷನ 3 ಪ್ರಾಕೃತ ಪುರುಷನಲ್ಲ ಜ್ವರಮಗಳಿಗೆ ಬಂತೆಂದು ಕಾಮಜ್ವರವಂತೆ ಕೇಳು 4 ನಾಶಾವಾಯಿತು ಇನ್ನು ನಿತ್ಯನಿವಾಸಿಯೆನಿಸುವ ಅವಗೆ ತೋಷದಿ ಕೊಟ್ಟರೆ ಜ್ವರ ನಿಶ್ಯೇಷ ಹೋಗುವದು 5 ಎನ್ನ ಮನೆಯಲಿ ಚೆನ್ನಾಗಿ ಪೇಳುವಳು ಚೆನ್ನಿಗವನನ್ಯಾರೆಂದು 6 ಪೇಳುವಳು ಇನ್ಯಾತಕೆ ಸಂಶಯ ಮಾಡಿನ್ನು ಶುಭಶೀಘ್ರಾ 7 ವಚನ ಸಂಭ್ರಮದಿ ಆನಂದವೆಂಬ ತುಂಬ ರೋಮಗಳುಬ್ಬಿ ರಂಭೆ ಪೂರ್ವದ ಪುಣ್ಯ ಎಂಬುವರು ಮುಕ್ತ ಬಹಳ ಗಂಭೀರ ಅಂಬುಜೋದ್ಬವ ಪಿತನ ತುಂಬಿ ಕುಳಿತದ್ದು ಕಣ್ಣುತುಂಬ ನೋಡೇನು ಎಂದು ಅಂಬುಜಾಕ್ಷಿ 1 ಆಕಾಶಪರಿವೃಡನು ಕ್ಲೇಶದ ಮಗಳಿದ್ದಲ್ಲೆ ನಡೆದು ಒಡೆದು ಆಡಿದನು ಹರುಷ ಹಿಡಿಯಲಾಗದು ನಿನ್ನೊಳು ನೀನೆ ಮಿಡುಕಿ ಬೇಡ ಎನ್ಹಡೆದವ್ವನೆ ನೀನು ಮೂಡಲಗಿರಿ ಒಡೆಯ ವೇಂಕಟಪತಿಗೆ ಕೊಡುವೆ ನಿನ್ನ 2 ಶುಭ ಪತ್ರವನು ಕೊಟ್ಟು ಬೃಹಸ್ಪತಿಯು ವೃತ್ರಾರಿ ಧರಿತ್ರೀಯಲ್ಲೀ ಪೃಥ್ವೀಶ ತಾನು ನತಿಸಿ ವಿಧಿಯುಕ್ತ ಪೂಜೆ ಉತ್ತಮನೆ ನೀ ಕೇಳು ಸತ್ಯ ನಿತ್ಯ ನೀನೆ 3 ಪನ್ನಗಾಚಲದಲ್ಲಿ ನಿನ್ನ ಅನುಮತಿಯಿಂದ ಬಿನ್ನಹದ ನುಡಿ ಕೇಳಿ ಮನಸಿಗೆ ಹರುಷ ಪೇಳುವೆ ಕೇಳು ಚನ್ನಾಗಿ 4 ನಿತ್ಯ ಅವನ ಆ ವಿಸ್ತಾರವೆಲ್ಲ ಪಂಚಕೋಶದಲಿ ಇಲ್ಲಿರುವ ಅವನೇ ಶ್ರೀ ಶುಕಾಚಾರ್ಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಆಡಿದ ನಾಟಕವ ಕಿರಾತ ಮದನಗೂಢ ಚಿದಾನಂದನನರಿಯದ ನರ ಮೃಗವ ಪ ಸ್ತ್ರೀಯ ದೇಹವು ಎಂಬ ಅಡವಿಯೊಳಗೆಸ್ತ್ರೀಯ ಹುಬ್ಬೆಂಬ ಸಿಂಗಾಡಿ ತೆಗೆದುಮುಂಗುರುಳುಗಳು ಎಂಬ ಸಿಂಜನಿಯನೆ ಬಿಗಿದುಸ್ತ್ರೀ ದೃಷ್ಟಿಯೆಂದೆಂಬ ಸಿಳೀ ಮುಖವನೆ ಪಿಡಿದು 1 ಸಿರಿತುಳುಕುವ ಅವಯವದ ಸಿಡಿಬಲೆಯನೊಡ್ಡಿಪರಿಯ ತಿಳಿಯದೆ ಬರುವ ಪುರುಷ ಮೃಗವಕರುಣವಿಲ್ಲದೆ ಮಹಾ ಕೋಪದಿಂದಲಿಎರಡು ಗಿರಿಯ ಸಂದಿಯಲಿರಿದು ಇರಿದು ಕೆಡುತಿಹ 2 ಇಂತು ಬೇಟೆಯನಾಡಿ ಎಲ್ಲ ಲೋಕವ ಕೆಡಹಿಚಿಂತೆ ಮಾಡುವ ಚಿದಾನಂದ ಭಕ್ತರ ಮುಂದೆ ಸುಳಿಯಲಿಕಂಜಿಮರೆಯದೆ ಶಿವನ ಗುರುತ ಅಂತಹುದುಇವರನೀಗ ಮುಟ್ಟಬಾರದು ಎಂದು 3
--------------
ಚಿದಾನಂದ ಅವಧೂತರು
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಎಂದ ಮಾತು ಚಂದವಾಯಿತಿಂದು ಗೋಪಿ-ಮುನಿ-ಸಿಂದ ನಮ್ಮನಾಡಲೇಕೆ ನಂದಗೋಪಿ ಪ ಗೋಪಿ 1 ಕರಿಯ ಭಂಟ ಕಳ್ಳ ಕೃಷ್ಣ ಕಾಣೆ ಗೋಪಿ- ಹತ್ತಿಲಿರುವ ಹರಿಯು ಬಲು ತುಂಟ ಕಾಣೆ ಗೋಪಿ2 ಗೋಪಿ 3 ಅಪರಿಮಿತದಾಟಗಾರನಿವ ಗೋಪಿ-ಕೃಷ್ಣಕಪಟನಾಟಕ ಸೂತ್ರಧಾರ ಗೋಪಿ4 ಗೋಪಿ 5 ದಾತ ಗೋಪಿ 6 ಗೋಪಿ 7
--------------
ವ್ಯಾಸರಾಯರು
ಎಲ್ಲಿರುವೆಯೊ ಎಂದು | ತಲ್ಲಣಗೊಳುತ್ತಿದ್ದೆ ಇಲ್ಲೆ ಬಂದೆಯೊ ದೇವನೆ ಪ. ಪುಲ್ಲಲೋಚನ ಎನ್ನ ಉಲ್ಲಾಸಗೊಳಿಸುತ ನಿಲ್ಲೊ ಹೃತ್ಕಮಲದಿ ನೀ ಬಹು ಮುದದಿ ಅ.ಪ. ಕಪಟನಾಟಕ ದೇವ | ಅಪರಿಮಿತ ಮಹಿಮ ಗುಪಿತರೂಪನೆ ನಿನ್ನನು ವಿಪುಲಮತಿಯಿಂದ ವರ್ಣಿಸಲಾಪೆನೆ ಸಪುತ ಸಪುತ ಭುವನೇಶ ಕೃಪೆಮಾಡೊ ಕೃಪಣವತ್ಸಲ ನಿನ್ನ ಕಾಣದೆ ಅಪರಿಮಿತವಾಗಿ ನೊಂದೆನಯ್ಯ ತಪಿಸುವುದು ನಿನಗುಚಿತವೆ ಹರಿ ಕೃಪೆ ಮಾಡೊ ಬೇಗ ಶ್ರೀನಿವಾಸ 1 ಹರಿ ನಿನ್ನ ಪಾದವ | ನಿರುತದಿ ಧ್ಯಾನಿಪ ವರಮತಿ ಎನಗೆ ನೀಡೊ ಗರುವಿಕೆಯನೆ ಬಿಡಿಸು ಶರಣಳ ಪೋಷಿಸು ಸುರವರ ನಿನ್ನಂಘ್ರಿಗೆರಗಿ ಬಿನ್ನೈಸುವೆ ಕರೆಕರೆಗೊಳಿಸುವುದುಚಿತವೆ ತೊರೆದರೆ ಎನ್ನ ಪೊರೆವರ್ಯಾರೊ ಥರವಲ್ಲ ನಿನಗಿನ್ನು ಕೇಳಿದು ಪೊರೆಯದಿದ್ದರೆ ನಗರೆ ಭಕ್ತರು 2 ಮಂದಮತಿಯಿವಳೆಂದು | ಹಿಂದು ಮಾಡಿದರÉನ್ನ ಕುಂದು ನಿನಗೆ ತಪ್ಪದೊ ಬಂಧನ ಬಿಡಿಸು ನೀ ಬಂಧನದೊಳಗಿಡು ಮಂದಿರ ಹೃದಯದಿ ಎಂದೆಂದಿಗಗಲದೆ ಮಂದಭಾಗ್ಯೆಯ ಮಾತು ಕಿವಿಗೆ ಮಂದಗಮನೆಯ ಮಧ್ಯೆ ಇರುವಗೆ ಮಂದಹಾಸ ಮುಖೇಂದು ವದನನೆ 3 ಅಜಸುರ ವಂದ್ಯನೆ | ಭಜಿಸಲಾಪೆನೆ ನಿನ್ನ ತ್ರಿಜಗದೊಡೆಯ ಹರಿಯೆ ವಿಜಯಸಾರಥಿ ಎನ್ನ ರಜತಮವನೆ ಕಳೆದು ಕುಜನರೊಳಿಡದಲೆ ನಿಜಗತಿ ಪಾಲಿಸೊ ಗಜವರದ ಗಂಭೀರ ದೇವನೆ ಧ್ವಜವಜ್ರೌಕುಶ ಪಾದಕಮಲನೆ ಭಜಿಸಿದವರಿಗೊಲಿವ ದೇವನೆ ಭುಜಗಭೂಷಣನಿಂದ ವಂದ್ಯನೆ 4 ಸೃಷ್ಟ್ಯಾದಿ ಕರ್ತನೆ | ಎಷ್ಟು ಬೇಡಲೊ ನಾನು ಇಷ್ಟ ದೈವÀವೆ ಕೇಳಲೊ ಭ್ರಷ್ಟತನವನೆಣಿಸದೆ ದೃಷ್ಟಿಯಿಂದಲಿ ನೋಡಿ ಕಷ್ಟಬಿಡಿಸಿದರೆ ಮುಟ್ಟಿಪೂಜಿಸುವೆನೊ ದಿಟ್ಟ ಗೋಪಾಲಕೃಷ್ಣವಿಠ್ಠಲ ಇಷ್ಟು ಬಿನ್ನಪ ನಷ್ಟ ಮಾಡದೆ ಕೊಟ್ಟು ಧೈರ್ಯವ ಮೆಟ್ಟಿ ಪಾಪವ ಸುಟ್ಟು ಕರ್ಮವ ಕೃಷ್ಣ ಸಲಹೊ 5
--------------
ಅಂಬಾಬಾಯಿ
ಏನ ಹೇಳಲಿ ಕೃಷ್ಣನಗುಣವ ನೋಡೆ ಸಖಿಯೆ ಪ. ಜಾರತನದಿ ಶೀರೆಯ ಶಳಕೊಂಡು ಮಾರನಾಟಕೆ ಎನ್ನ ಮರುಳು ಮಾಡಿದನಮ್ಮ 1 ಚಂಡು ತಾರೆನುತಲಿ ದುಂಡು ಕುಚವಪಿಡಿದು ಕಂಡು ಕಂಡಲ್ಲಿ ಎನ್ನ ಬಹು ಭಂಡು ಮಾಡುತಲಿಹನಮ್ಮ 2 ತಂದೆ ಹೆಳವನಕಟ್ಟೆ ರಂಗನ ಕೃಪೆಯಿರಲು ಬಂದ ದುರಿತಗಳು ನಂದಿ ಪೋಗುವವು 3
--------------
ಹೆಳವನಕಟ್ಟೆ ಗಿರಿಯಮ್ಮ
ಏನೆಂದೆ ಏನೆಂದೆ ಪ ನಾನೇನೆಂದೆನೆ ಗಾನಲೋಲಗವ ಮಾನದ ಮಾತಿಂಥ ಜೀನನ ಕಾಣೆನೆಂದೆ ಅ.ಪ ಕಾಲು ಇಲ್ಲದ ಹೆಳವನೆಂದೆ ತಲೆಯ ಕಾಣದ ಕುರೂಪಿಯೆಂದೆ ಚೆಲುವಿಕಿಲ್ಲದ ಕಾಡು ಹೀನಮೃಗವೆಂದೆ ಬಲಿಯ ಬಾಗಿಲ ಕಾಯ್ವ ಕೂಲಿಕಾರನೆಂದೆ1 ನಾಲಗೆ ಚಾಚಿ ರಕ್ತ ಕುಡಿದನೆಂದೆ ತಿಳಿದು ಜನನಿತಲೆ ಕಡಿದವನೆಂದೆ ಲಲನೆಯೊಡನೆ ವನವಾಸಕೆ ಪೋಗಿ ಬಳಲಿ ಬಳಲಿ ಬಾಯಾರಿದನೆಂದೆ 2 ಗೊಲ್ಲರ ಕುಲದಲಿ ಹುಟ್ಟಿದನೆಂದೆ ಗುಳ್ಳೆ ಗುಳ್ಳೆ ಬೆಣ್ಣೆ ಕದ್ದವನೆಂದೆ ಗೊಲ್ಲರ ಅಕಳ ಕಾಯುವ ಚರನೆಂದೆ ಫುಲ್ಲನಲನೆಯರ ವಸ್ತ್ರಗಳ್ಳನೆಂದೆ 3 ಬತ್ತಲೆ ಕುಣಿಕುಣಿದಾಡಿದನೆಂದೆ ಸತ್ಯಭ್ರಷ್ಟ ಮಹಕಲಿಯು ಈತನೆಂದೆ ಮತ್ತೆ ವೈಕುಂಠದಿ ಒದೆಸಿಕೊಂಡು ಇವ ವಿತ್ತದಾಸೆಗೆ ಮತ್ರ್ಯಲೋಕಕಿಳಿದವನೆಂದೆ 4 ಕುದುರೆ ನಡೆಸಿ ಒಬ್ಬನುಳಿಸಿದನೆಂದೆ ಕದನದ್ವೊಂಚಿಸಿ ಒಬ್ಬನಳಿದವನೆಂದೆ ಕುದುರೆ ಕಟ್ಟಿದ ವೀರ ತಾಮ್ರಧ್ವಜಗೆ ಸೋತು ಮುದುಕನಾಗಿ ಭಿಕ್ಷದಶ್ವ ತಂದವನೆಂದೆ 5 ಸೋದರಮಾವನ ಕೊಂದವನೆಂದೆ ಸೋದರಳಿಯರ ಜೀವ ಹೊಡೆಸಿದನೆಂದೆ ಭೇದದಿಂದ ಸಾಧು ಹನುಮನ ಸೋಲಿಸಿ ಸಾಧಿಸ್ವರೂಪಕ್ಕೆ ಪತಾಕೆನಿಸಿದನೆಂದೆ 6 ಜಾರ ಸಿರಿ ಸೊರೆಗೊಂಡವನೆಂದೆ ಮೀರಿದಂಥ ಮಹಮಾಯದ ಹೆಣ್ಣೆಂದೆ ಈರೇಳುಲೋಕದ ಕಪಟನಾಟಕನೆಂದೆ 7 ಮೊಚ್ಚೆಗಾರ ಕೈಯೊಳುಂಡವನೆಂದೆ ಉಚ್ಚಿಷ್ಟನಾಗಿ ಬಹಿಷ್ಕಾರ್ಹೊಂದಿದನೆಂದೆ ವೆಚ್ಚಮಾಡಿ ಮತ್ತು ಕುಲದಿ ಬಿದ್ದವನೆಂದೆ ನಿಶ್ಚಲ ಭಕ್ತರಿಗ್ಹುಚ್ಚ್ಹಿಡಿಸಿದನೆಂದೆ 8 ಪುಲ್ಲನಯನ ಸಿರಿರಾಮನ ಮುಂದೆ ಅಲ್ಲದ ಮಾತುಗಳ್ನಾನೇನೆಂದೆ ಬಲ್ಲಿದ ಹದಿನಾಲ್ಕು ಲೋಕ ಪೊತ್ತವನೆಂದೆ ಉಲ್ಲಾಸದಿ ನಿಮ್ಮ ಬಿರುದು ಸಾರುತ ಬಂದೆ 9
--------------
ರಾಮದಾಸರು
ಕಂಡು ಹಿಗ್ಗಿದಳೆ ಕಮಲಾಕ್ಷನ್ನ ಯಶೋದ ಎತ್ತಿ ಕೊಂಡು ಮುದ್ದಿಸಿದಳೆ ಯದುನಾಥನ್ನ ಪ ಪಾಲವಾರಿಧಿ ಮಧ್ಯದಲ್ಲಿ ಶ್ರೀದೇವಿ ಸಹಿತ್ವೊಂ ದಾಲದೆಲೆಯ ಮ್ಯಾಲಾಡುತಲಿ ಕಾಲಬೆರಳು ಕಟಬಾಯಲಿ ಚೀಪುವ ನೀಲವರ್ಣದಲಿ ತನ್ನ ಬಾಲನೆಂದೆನುತ 1 ಕೋಟಿ ಸೂರ್ಯದ ಕಾಂತಿ ಹರಣಮಾಡುವ ಮುಖ ಕಿ- ರೀಟ ಕೌಂಸ್ತುಭ ಮಣಿಯಾಭರಣ ಹಾಟಕಾಂಬರನುಟ್ಟ ನಾಟಕಧಾರಿ ಕಿ ಸಾರಥಿ ಪಕ್ಷಿರಾಟವಾಹನನ 2 ಚೆನ್ನವಾಗೀರೇಳು ಲೋಕವನು ತನ್ನುದರದೊಳಡಗಿಸಿ ಪನ್ನಂಗಶಾಯಿ ಪರಮಾತ್ಮನ್ನ ಚಿನ್ನ ಮಾಣಿಕ್ಯದ ತೊಟ್ಟಿಲೊಳಿಟ್ಟು ತೂಗುತ ಎನ್ನ ಕಂದ ನೀ ತೋಳನ್ನಾಡೆಂದೆನುತ 3 ಕಡಗ ಕಿರುಗೆಜ್ಜೆ ಚರಣದಿಂದಲಿ ನಡೆಯುತಲಿ ಬಂದು ದಧಿ- ಗಡಿಗೆ ತಾ ಒಡೆದನೆ ಕಡಗೋಲಿಂದ ಹಿಡಿದು ಕಟ್ಟಲು ಒರಳೆಳೆದ್ವಿಮಳಾರ್ಜುನ ಗಿಡವ ಕೆÀಡಹಿ ಮುಕ್ತಿಕೊಡುವ ಶ್ರೀ ಕೃಷ್ಣನ 4 ಭವ ಭಯ ನಾಶ ಮಾಡುವಾತ ಭುವ- ನೇಶ ಹದಿನಾಲ್ಕು ಲೋಕದ ವಾಸ ರಾಸಕ್ರೀಡೆಲಿ ವ್ರಜದ್ವನಿತೆಯರ ಸಂತೋಷಬಡಿಸಿದ ಭೀ- ಮೇಶ ಕೃಷ್ಣನ ಮುಖ5
--------------
ಹರಪನಹಳ್ಳಿಭೀಮವ್ವ
ಕಪಟನಾಟಕನೀತ ಕೃಪಾಸಿಂಧು ಸಾಕ್ಷಾತ ಧ್ರುವ ಸಗುಣ ಸುಪಥ ದೋರಿ ನಿರ್ಗುಣನಾಗಿಹ ಶ್ರೀಹರಿ ಅಗಣಿತ ಗುಣದೋರುವ ಅನೇಕಾಪರಿ ಜಗದೊಳು ಮುರಾರಿ 1 ಹಿಡಿದೇನೆಂದರೆ ಸಿಲುಕ ಗೂಡಿನೊಳಗೆ ಮಾಡಿಹ್ಯ ಮಲಕ ನೋಡೇನೆಂದರೆ ಭಕ್ತಿಗೆ ನಿಲುಕ ಒಡಿಯ ಗೋಪಾಲಕ 2 ಕುಲಗಳ್ಳಗೆ ಕೊಡುವ ಮ್ಯಾಲೆ ಹುಯಲು ತಾ ಮಾಡುವ ಬಲುಖಳ ದೈವ 3 ಭಾಷೆ ಕೊಟ್ಟರೆ ತಪ್ಪ ಋಷಿ ಮುನಿಗಳ ಪಾಲಿಪ ಭಾಸುತ ಭಕ್ತರ ಹೃದಯದೊಳಗಿಪ್ಪ ಭಾಸ್ಕರ ಸ್ವರೂಪ 4 ಗುಹ್ಯ ಆಗೋಚರ ಸೋಹ್ಯ ತಿಳಿಯಲು ಸಾಕ್ಷಾತ್ಕಾರ ಇಹಪರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸಯ್ಯಾ ಕಂಜಜನಯ್ಯಾ | ಕರ್ಣರಹಿತ ಶಯ್ಯಾ ಕನಕಾದ್ರಿರಾಯಾ ಪ ಕರಿವರದನೆ ನಿನ್ನ ಚರಣ ನಂಬಿದೆ ಎನ್ನಪರಿಪಾಲಿಸುವದು ಪರಮ ಕೃಪಾಳೊ ಅ.ಪ. ಕೋಟಲೆ ಸಂಸಾರವೆಂಬೊ | ನೀಟು ಶರಧಿಯನ್ನುದಾಟಲಾರೆನೊ ನಾನೂ | ಇದೇನೊ ||ನಾಟಕಾಧಾರ ನಿನ್ನ | ನಂಬಿದಾ ಮೇಲೆ ಎನ್ನಬೂಟಕನೆನಸುವರೇ | ಮುರಾರೇ ||ಹಾಟಕಾಂಬರ ಧರ ಹರಿಯೇ ಕೇಳ್ವುದಿನ್ನು | ಕೋಟಿ ವ್ಯಾಳೆಗೆ ಭಕ್ತ ಕೋಟಿಯೊಳಗಿಟ್ಟು ಎನ್ನ | ನೀಟು ಮಾರ್ಗವ ತೋರಿ ಪಾಟುಪಡಿಪ ಯಮಕಾಟ ಕಳೆದು ದಿವ್ಯ ನೋಟದಿ ನೋಡು 1 ಕಂಸಾರಿ ಮುರಾರಿ2 ಇಂದಿರೆ ಜನನಿ ಗೋ-ವಿಂದ ಇನ್ನೊಬ್ಬರಿಲ್ಲ | ನೀ ಬಲ್ಲೆಲ್ಲಾ ||ಸುಂದರ ವಿಗ್ರಹನೆ | ಸುಗುಣ ಸಾಕಾರ ಶುಭಸಾಂದ್ರಾ ಭಕುತ ವತ್ಸಲ | ಗೋಪಾಲಾ ||ಎಂದೆಂದಿಗೆ ಎನ್ನಿಂದ ಅಗಲದೆ ಮುಕುಂದ ಮುನಿ ವೃಂದವಂದಿತ ಚರಣನೇ | ಸಿಂಧುಶಯನ ಶಿರಿ ಮೋಹನ ವಿಠಲ ಬಾ ಲೇಂದು ವದನ ಸುಗುಣ ಸಾಂದ್ರಾ ಉಪೇಂದ್ರಾ 3
--------------
ಮೋಹನದಾಸರು
ಕಾಯೋ ಪರಮಾನಂದಾ ನಾರಾಯಣಾ | ತೋಯಜಾದಳ ನಯನ ಗರುಡ ಗಮನಾ ಪ ಕರವರಗ ದುಷ್ಟ ಜಲಚರ ಬಂದು ಪಿಡಿಯಲ್ಕೆ | ಭರದಿಂದ ನಿನ್ನ ಸ್ಮರಣೆಯಾ ಮಾಡಲು | ತ್ವರಿತದಿಂದಲಿ ದೇವ ಬಂದು ಆತನ ಮಹಾ | ದುರಿತವನು ಪರಿಹರಿಸಿ ಕಾಯಿದೆ ಹರಿಯೇ1 ಅರಗಿನಾ ಮನಿಯೊಳುಪಾಂಡವರುಸಿಲುಕಿರಲು | ಹರಿ ನೀನೇ ಗತಿಯೆಂದು ಸುಮ್ಮನಿರಲು | ಸಿರಿಲೋಲ ಅದುಕೊಂದು ಪಾಯವನು ರಚಿಸಿದಾ | ವರಕಡಿಗೆ ಪೊರಮಡಿಸಿಕಾಯಿದೆ ಹರಿಯೇ2 ಶರಣ ಪ್ರಲ್ಹಾದಂಗ ದನುಜ ಪೀಡಿಸುತಿರಲು | ಕರುಣ ಸಾಗರ ನಿಮ್ಮ ಧ್ಯಾನಿಸಲ್ಕೆ | ಕರುಳ ಬಗೆದುಕಾಯಿದೆ ಹರಿಯೇ | ನರಹರಿಯ ರೂಪದಿಂದ ಸ್ಥಂಬದೊಳಗುದ್ಭವಿಸಿ3 ದ್ರುಪದ ತನು ಸಂಭವಿಯ ಸೀರೆಯನ್ನು ಸೆಳೆಯಲ್ಕೆ | ತ್ರಿಪುರಾರಿ ಸಖ ನಿಮಗೆ ಮೊರೆಯಿಡಲು | ಕಪಟನಾಟಕ ದಯಾನಂದ ಹರಿಯೆ 4 ಈ ರೀತಿಯಲ್ಲಿ ಬಹು ಭಕ್ತರನು ಕಾಯಿದೆ | ಮುರಹರಿ ಧ್ಯಾನ ಸ್ಮರಣೆ ಯಂಬನದನು | ದಾರಿಯನು ಅರಿಯದ ಅಜ್ಞಾನಿಯ ಪರಾಧವನು ಸೈ ರಿಸುದು ಮಹಿಪತಿ ಸುತ ಪ್ರಿಯನೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು