ಒಟ್ಟು 9 ಕಡೆಗಳಲ್ಲಿ , 8 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದೊಡನಾಡುವೆ ಎಂದರ್ಥಿಬಡುವೆ ಎಂದಿಗೆ ತಕ್ರ್ಕೈಸಿ ಸಂತೋಷಬಡುವೆ ಪ ಉತ್ಸವ ಮಂಟಪದೊಳಗೆ ಕುಳಿತು ಭಕ್ತ ವತ್ಸಲನೆಂದು ನುತಿಸಿಕೊಂಬನ ಕೂಡ 1 ಸಕಲ ಭೂಷಿತನಾಗಿ ಅಜಹರ ಸುರಮುನಿ ನಿಕರ ಕೈಯಿಂದ ಸ್ತುತಿಸಿಕೊಂಬನ ಕೂಡ 2 ಆಪೋಹಿಷ್ಠಾ ಮಯೋಭುವನೆಂಬೋ ಮಂತ್ರ ಆ ಪುರೋಹಿತರಿಂದ ಕಲಿತುಕೊಂಬನ ಕೂಡ 3 ನಾಲ್ವತ್ತುಮೂರು ಪದಂಗಳು ಮಾಡೆಂದು ಹೇಳಿದ ಹೇಮಾದ್ರಿ ಶಿಖರಾಕಾರನಕೂಡೆ 4 ದಂಡಿಗೆ ಕರೆದಲ್ಲಿ ಕೊಟ್ಟು ಅಮೃತದ ಕರ ಮಂಡೆಯಲ್ಲಿಟ್ಟ ಮಹಮಹಿಮನ ಕೂಡ 5 ಪಲ್ಲಕ್ಕಿ ಏರಿ ಪವಳಿಯ ಸುತ್ತಿ ಸರ್ರಗೆ ನಿಲ್ಲದೆ ಗುಡಿಪೊಕ್ಕ ನಿರ್ಮಳನ ಕೂಡ6 ವಾರಶನಿ ಚತುರ್ದಶಿ ಕೃಷ್ಣಪುಷ್ಯದಿ ಈ ರೀತಿಯಲಿ ಕೂಡ ಇಂದಿರೇಶನ ಕೂಡ 7 ರೌದ್ರಿ ಸಂವತ್ಸರ ಅರ್ಧರಾತ್ರಿಯಲಿ ಭದ್ರ ಮೂರುತಿಯಾದ ಭವಹರ ಕೂಡ 8 ಗುರುಪುರಂದರ ಉಪದೇಶನ ಬಲದಿಂದ ಸಿರಿ ವಿಜಯವಿಠ್ಠಲನ ಚರಣ ತಕ್ರ್ಕೈಸಿ 9
--------------
ವಿಜಯದಾಸ
ಎನಗೆ ಕಾರಣವೇನು ಪಾಪಕ್ಕೆ ುನ್ನುನಿನಗೆ ಕಾರಣವೆಂಬ ಮಾತಿನ್ನದೇಕೆ ಪಎನ್ನ ಸ್ಟೃಯ ಮಾಡ ಹೇಳಿದೆನೆ ಮತ್ತೆಅನ್ನವನಿತ್ತುಣ್ಣ ಕಲಿಸೆಂದೆನೆಮನ್ಮಥ ನೆಲೆಯಾಗಬೇಕೆಂದೆನೆ ಬೇಗಕನ್ನೆಯೊಬ್ಬಳ ಮುಂದೆ ನಿಲಿಸೆಂದೆನೆ ಸ್ವಾಮಿ 1ಜಾತಾದಿ ಷೋಡಶ ಕರ್ಮಗಳ ನಿತ್ಯಪ್ರೀತಿುಂದಲಿ ಮಾಡಿ ಸ್ವರ್ಗಗಳವೋತು ಪಾಪಗಳಿಂದ ನರಕಗಳ ಹೊಂದಿಯಾತನೆಗೊಳಿಪಂತಾಗೆಂದೆನೆ ವಿಧಿಗಳ 2ಮಡದಿ ಮಕ್ಕಳು ಮನೆವಾರ್ತೆಯೆಂಬ ಬಲುತೊಡಕಿನೊಳನ್ಯರೆನ್ನವರೆಂತೆಂಬಬಡಿಶಕ್ಕೆ ಸಿಲುಕಿಯೊದ್ದಾಡಿಕೊಂಬ ುಂಥಹೆಡಗುಡಿಯನು ಕಟ್ಟಿ ಕೊಲ್ಲೆಂದೆನೆ ಸ್ವಾಮಿ 3ಆಡಿಸಿದಂತೆ ನೀನಾಡುವೆನು ುೀಗನೋಡಿದರಿಲ್ಲ ಸ್ವತಂತ್ರವಿನ್ನೇನುಬೇಡಿಕೊಂಬೆನು ಪಾದಕ್ಕೆರಗೀಗ ನಾನು ನೀನುಕೂಡಿ ರಕ್ಷಿಸಬೇಕು ಕಪಟವಿನ್ನೇನು 4ಸೂತ್ರಧಾರಕ ನೀನು ಸಕಲಕ್ಕೆ ಮಾಯಾಮಾತ್ರವೀ ಜಗವಿದನಾಡಲಿನ್ನೇಕೆಪಾತ್ರ ಕೃಪೆಗೆ ನಾನು ಗುರು ನೀನಾಗಲ್ಕೆ ಸುಪವಿತ್ರ ಚರಿತ್ರ ವೆಂಕಟ ಮರೆಹೊಕ್ಕೆನು 5ಓಂ ಸತ್ಯಭಾಮಾಧವಾಯ ನಮಃ
--------------
ತಿಮ್ಮಪ್ಪದಾಸರು
ಛಲ ಮಾಡುವ ಲೀಲೆಗಳರಿನ್ನಾರನು ಕಾಣಿನೊ | ತ್ಸಲನೆಂಬೊ ನಾಮವನು ಧ್ವಜವೆತ್ತಿ ಮೆರವುವದೊ ಪ ಅತಿಶ್ರೇಷ್ಠನಾಗಿ ಕೀರ್ತಿ ಪಡೆÀದು ಪಸರಿಸಿ | ಪ್ರತಿಯಿಲ್ಲ ಎನಿಸಿಕೊಂಬೆ ನಾ | ಸತತವನು ಪರರಾಶೆ ಮಾಡದಲೆ | ಚತುರತನ ಚತುರೋಪಾಯದಿ ಬಾಳುವೆ | ಕ್ಷಿತಿಯೊಳಗೆ ಅಭಿಮಾನ ಕ್ಷಿತಿಯಾಗದಂತೆ ಸು | ಮತಿಗಳಿಂದಲಿ ಬದುಕುವೆ | ಸುತ ಸಹೋದರ ನಡುವೆ | ಅತುಳ ಬಲವಂತನೆನೆಸುವೆನೆಂದು ಇದ್ದೆನಲ್ಲನೆ 1 ಜಡದೇಹವನು ಮೆಚ್ಚಿ ಮುಪ್ಪು ದೂರೆಂತೆಂದು | ಕಡು ಸಾಹಸವ ತಾಳಿದೇ ಒಡಿಯರಾರೆನಗಿಲ್ಲ ಒಬ್ಬರಿಗೆ | ಒಡಿಯನೆಂದು ಎಡೆಎಡೆಗೆ ಪೇಳಿಕೊಂಬೆ | ಮಡಗಿ ಧನವನು ಧರ್ಮ ಕೊಡದತೀ ಕೃಪಣನಾಗಿ | ಪಡವೆ ಸಂಸಾರವೆಂಬೊ ಅಹಂಕಾರವನು ತಾಳಿ | ಎಡಹಿ ಮುಂಗಾಣದ ಅಧಮನಂತೆ ಇದ್ದೆನಲ್ಲದೆ 2 ಪುರುಷ ಪಟಾಂತ್ರದವನಾಗಿ ಎಲ್ಲ | ಧಿಕ್ಕರಿಸಿ ನಿರಾಕರಿಸುವೆ | ಜರೆದು ನಿಷ್ಕರುಣದಲಿ | ವರ ಅಭ್ಯಾಗತಿಗಳನು | ಹುರುಳಗೆಡಿಸಿ ನೋಡುವೆ | ಗುರು ಹಿರಿಯರನು ಮರುಗುವಂತೆ ಕೇಡು ನುಡಿದು ಉ | ತ್ತರ ಅನುತ್ತರನಾಡುವೆ | ಪರಿಪರಿಯ ಮಾಯದ ಶರಧಿಯೊಳು ಬಿದ್ದು ಲಜ್ಜಿ ಉರಿಯೊಳಗೆ ಪೊಕ್ಕಂತೆ ಮರುಗುತ್ತಿದ್ದನಲ್ಲವೆ 3 ಅಪರಾಧವೇನಯ್ಯಾ ವಿಪರೀತ ತೋರದೆ | ಅ | ಪರಿಮಿತ ಪರಮಹಿಮನೆ | ಉಪಕಾರಕ್ಕಪಕಾರವೊ | ನಿಪುಣತನವಿರಲಿಲ್ಲವೊ | ಸಪುತೆರಡು ಲೋಕದೊಳಗಾನೆಂದು ಇದ್ದೆನಿಲ್ಲವೊ | ವಿಪುಳ ವೈಕುಂಠ ತೊಲಗಿಸದೆ ಸುಮ್ಮನಿರಬಲ್ಲನೆ4 ಪರದೈವ ನಾನೆಂದು ಪೇಳುವರ ಗಂಡನೆ | ಸರಿಗಾಣೆ ಈ ಮಹಿಯೊಳು | ಪತಿ | ಕರಿಸಿ ನಿಜಕರವ ಪಿಡಿಯಾಡದೆ | ಪರಮೇಷ್ಠಿ ಹರಿದು ತಲ್ಲಣಿಸಿ ನೆರದು ಭೀಕರಗೊಂಬರು | ಪರಮಾಣು ರೂಪ ಭಕ್ತರ ಪರುಶ | ಸಿರಿ ವಿಜಯವಿಠ್ಠಲ ವರ ವೆಂಕಟನೆ | ಶರಣಜನ ಪರಿವಾರ5
--------------
ವಿಜಯದಾಸ
ನನಗೆ ಹೊತ್ತು ಹೋಗದೆ ನಾನೆಯೆ ಆಡುವೆನನಗೆ ಹೊತ್ತು ಹೋಗದೆ ಪ ಈಶನ ಅವತಾರವಾಗಿ ಜೀವನ ಅವತಾರವಾಗಿಈಶನಾಗಿ ಜೀವ ಬೊಂಬೆಯನಾಡುವೆ1 ಜೀವರ ಹುಟ್ಟಿಸಿಯೆ ಜೀವರ ಬೆಳೆಸಿಯೇಜೀವರಲಿ ಲಯಿಸುವೆ ತ್ರೈಮೂರ್ತಿಯಾಗುವೆ 2 ಎಚ್ಚರವನೆ ಕೊಟ್ಟು ಎಚ್ಚರವನೆ ಕೊಟ್ಟುಎಚ್ಚರವನೆ ತಿಳುಹಿ ನಿಚ್ಚಳ ಚಿದಾನಂದನನು ಮಾಡುವೆ3
--------------
ಚಿದಾನಂದ ಅವಧೂತರು
ನಿಲುನಿಲು ಘನಲೀಲಾ ನಲಿನಲಿ ಗೋಪಾಲ ಪ ಕಿಲಕಿಲನಗು ಬಾಲಾ ಒಲಿಒಲಿ ಶ್ರೀಲೋಲಾ ಅ.ಪ ಅಡಿಯಿಡು ಸಡಗರದಿ ನುಡಿನುಡಿ ಕಡುಮುದದಿ ಪಿಡಿಕೊಳಲನು ಕರದಿ ನುಡಿಸಿ ಮುದ್ದಾಡುವೆ ನಾನು 1 ತೊದಲುನುಡಿಗೆ ನಲಿವೆನು ಬಾ ಬಾ ಚದುರತನವ ನೀ ತೋರುತೆ ಬಾ ಬಾ ಮುದದಿ ಕುಣಿಯುತೆ ಮಣಿಯುತೆ ಬಾ ಬಾ ಇದೆಗೋ ಎತ್ತಿಕೊಂಡೊಯ್ವೆನು 2 ಜೋಗುಳಗಳ ಹಾಡಿ ರಾಗದಿ ಕೊಂಡಾಡಿ ಬಾಗಿ ಬಿಗಿದು ಕುಣಿದಾಡಿ ನಾಗಸಂಪಿಗೆ ಸೂಡಿ3 ಸಂತಸದಿಂದೋಡು ಅಂತರಿಕ್ಷವ ನೋಡು ಕಂತುಕವೆಸೆದಾಡು ಶಾಂತಿಯ ಮನಕೆ ಕೊಡು 4 ಚಂದಿರನಂದದ ಕಂದಾ ನೊಂದಿಹ ಮನಕಾನಂದಾ ಸುಂದರ ಮುಖಾರವಿಂದಾ ಅಂದದ ನಗು ಮಿಗಿಲಾನಂದಾ5 ಗೋಲಿಯನಾಡುವೆ ಬಾ ಗಾಲಿಯನೋಡಿಸು ಬಾ ಬಾಲಭಾಷೆಯ ಪೇಳುವ ಬಾ ಲೀಲೆಯನೀಕ್ಷಿಸಿ ದಣಿವೆ 6 ಕುಣಿ ಕುಣಿ ಅರಗಿಣಿಯೆ | ಅಣಕಿಸು ಮನದಣಿಯೆ ಮಣಿ ಕಣ್ಮಣಿಯೆ | ತಣಿಯುವ ಮನಕೆಣೆಯೆ7 ಬಣ್ಣದ ಹೂಮುಡಿವೆ ಹಣ್ಣನು ಮೆಲಗುಡುವೆ 8 ನೊರೆಹಾಲ್ಕುಡಿ ನೀಲಾಂಗ ಮರೆಹೊಕ್ಕರ ಪೊರೆ ರಂಗಾ ಕರುಣಿಸೊ ಶಿರಬಾಗುವೆನಾಂ ಮಾಂಗಿರಿಯ ರಂಗಾ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆ ನುಡಿಸಿದಂತೆ ನುಡಿಯುವೆನು ಮಿಕ್ಕ ಜ್ಞಾನವಿಲ್ಲ ಎನಗೇನೇನು ಪ ನೀನೆ ಜಗತ್ರಾಣ ಶ್ರೀಹರಿಯೆಂಬುದೊಂದೆ ಖೂನಮಾಡಿ ಕೊಂಡಾಡುವೆನು ಅ.ಪ ನೀ ನಡೆಸಲು ನಾ ನಡೆಯುವೆನು ಹರಿ ನೀನಾಡಿಸಲು ನಾನಾಡುವೆನು ನೀನೀಡದಿರೆ ಬಲು ಮಿಡುಕುತ ಬಳಲುವೆ ನೀ ನುಣಿಸಲು ಉಂಡು ನಲಿವೆ ಪುಂಡನಾಗಿ 1 ಕಡುಪ್ರೇಮದಿ ಚರಾಚರಗಳನು ಕಾಯ್ವಿ ಪೊಡವಿ ಈರೇಳುವ್ಯಾಪಕ ನೀನು ಕೊಡುವ ಕರ್ತ ನೀನೆ ಮೂಲೋಕಕೆಂಬ ನುಡಿ ದೃಢದಿ ನಂಬಿ ಗಟ್ಟಿಮಾಡಿಹೆನು 2 ಹೋಮ ಯಜ್ಞ ಯಾಗ ತಿಳಿಯೆ ನಾನು ಮತ್ತು ನೇಮನಿತ್ಯದ ಗುರುತರಿಯೆನು ಭೂಮಿಗಧಿಕ ಮಮಸ್ವಾಮಿ ಶ್ರೀ ರಾಮನ ಪೂರ್ಣನಂಬಿಕೊಂಡಿಹೆನು 3
--------------
ರಾಮದಾಸರು
ಬಾರಯ್ಯ ಕೃಷ್ಣ ಬಾರೈ ಬಾಹದಿದ್ದಡೆಕಾರುಣ್ಯನಿಧಿಯೆಂಬ ಕಥೆಯ ಅ-ದಾರು ಬಣ್ಣಿಪರು ವೇದಾಂತದೇವಿಯರೆಮ್ಮದೂರುವರೀಗೆ ಪ. ಕುಂಜರವರದ ನೀಲಾಂಜನವರ್ಣ ನೀಕಂಜನೇತ್ರನೆ ಕಾಮನಯ್ಯಮಂಜುಳಮೂರ್ತಿ ಮನೋಹರಕೀರ್ತಿ ಪ್ರ-ಭಂಜನನೊಡೆಯ ಬಾರೊ 1 ಮಂದರಗಂಧದ ಮಂದಮಾರುತ ಬಂದಚಂದಿರಮುಡಿದ ಚದುರಬಂದಕಂದರ್ಪನರವಿಂದನೆಂಬ ಕಣೆಯ ತೊಟ್ಟ ಮಂದರಧರನೆ ಬಾರೊ2 ನೋಡುವೆ ನುಡಿಸುವೆ ಪಾಡುವೆ ಬಯಕೆಯಬೇಡುವೆ ಹಯವದನನಮಾಡುವೆ ಪೂಜೆಯ ಕೂಡುವೆ ನಿನ್ನೊಡ-ನಾಡುವೆನೊ ಬೇಗನೆ ಕಾಡದೆ ಬೇಗ ಬಾರೊ 3
--------------
ವಾದಿರಾಜ
ಶ್ರೀಹರಿ ಸಂಕೀರ್ತನೆ ಪತಿತ ಪಾವನ ಗೋವಿಂದ ನಮ್ಮ ಪದುಮದಳಾಕ್ಷ ಸದಾನಂದ ಪ ಸತಿಪತಿ ನುತ ಸಾರ್ವಭೌಮ ಸು ವೃತಾ ಚರಣ ಘನ ರಾಜಿತ ಸುಂದರ ಅ.ಪ ಧೀರನಮೋ ಸುವಿಚಾರ ನಮೋ ಯದುವೀರ ನಮೋ ರಜದೂರ ನಮೊ ಮಾರನಮೋ ಗಂಭೀರ ನಮೊ ಭವಹಾರ ನಮೋ ದಧಿ ಚೋರ ನಮೊ 1 ಜನನ ಮರಣ ಜರ ರಹಿತ ನಮೋ ಪಾವನ ಪದ ಪಂಕೇರುಹ ನಯನ ನಮೋ ಮನ ವಚನಕೆ ಸಿಗದ ನಿಮಿಷ ಪತಿ ನಿನ್ನನೆ ಬೇಡುವೆ ಪೊರೆಯೆನುತ ಕರಮುಗಿದು 2 ಶೌರಿ ಶುಭ ನಾಮ ಭಕ್ತ ಜನ ಹಿತಕಾರಿ ಸುತ್ರಾಮ ಅನುಜ ನಿ ಸ್ಸೀಮ ಮಹಿಮ ಶಿರಿಧಾಮ ಅನಘ ನಮೊ 3 ಅನ್ಯನೆ ನಾ ನಿನ್ನಗೆ ದೇವ ಸಾಮಾನ್ಯನೆ ಅಭಿಮನ್ಯುನ ಮಾವಾ ಇನ್ನೆನೆನ್ನದೆ ನಿನ್ನಿಂ ಲಭಿಸಿದ ನುಣ್ಣುವ ಯನ್ನನು ಮನ್ನಿಸದಿರುವರೆ 4 ಹಿರಿಯರ ದಯವಿರುವುದು ಸರೆ ನೀ ಪೊರೆವಿ ಬಿಡದೆ ಯಂಬೋದು ಖರೆ ಸ್ವರಸ್ವರ ಘಸಿದಾಲ್ಪರಿದ ಮೇಲೆ ಸುಧೆ ಗರಿವರ ತೆರ ಚರಿಪುದು ಧರವೆ 5 ದಾಸರ ಪೊರೆಯಲು ದಾಶರಥೇ ಅಮಿತ ಮತೆ ಶ್ರೀಶಾನಿಮಿತ್ಯ ಬಂಧುಯೆನಿಸಿ ಉದಾಸಿಸೆ ಆಗಮ ರಾಶಿಗೆ ಶೋಭವೆ 6 ಘಾಸಿಗೊಳಿಸುವರೆ ಸೈಸೈಸೈ ನೀ ನೀಶನಾದದಕೆ ಫಲವೇನೈ ಪೋಷಕ ನೀನೆಂದಾಸಿಸಿದವರನು ನೀ ಸಲಹದೆ ಬರೆ ಸೋಸಿಲಿ ಮೆರೆವರೆ 7 ಧೃವನ ಪೊರೆದ ಬಲುವೇನಾಯ್ತೈ ಉದ್ಧವಗೆ ವಲಿದ ದಯ ಏಲ್ಹೊಯತೈ ಬವರದೊಳಗೆ ಪಾಂಡವರ ಕಾಯ್ದ ಮತಿ ಸವಿಯುತೆ ಪವನಪಸವಿದ ಸತತ ಸುಖ 8 ಘನ್ನ ಕರುಣಿ ನೀ ನಹುದೇನೊ ಆಪನ್ನ ರಾಪ್ತ ನೀ ನಿಜವೇನೋ ಸೊನ್ನೊಡಲಾಂಡಗ ನೀನಾದರೆ ಗತ ಮನ್ಯುನಾಗಿ ಜವ ನಿನ್ನನೆ ತೋರಿಸು 9 ತಂದಿನ ಪಾಲಿಸಿ ಮಗನನ್ನು ಬೇಕೆಂದು ಕೊಂದ ಕೃಷ್ಣನೆ ನೀನು ತಂದು ತೋರೊತವ ಸುಂದರ ಪದಯುಗ10 ಕಂದುಗೊರಳನುತ ಪೊರೆಯೆಂದು ಬಲು ವಂದಿಸಿದರು ತ್ವರ ನೀ ಬಂದು ಕಂದನ ಕರದ್ಯಾಕೆಂದು ಕೇಳ್ದದಕೆ ನೊಂದು ಬಿಡಿ ನುಡಿ ಗಳೆಂದೆನು ಕ್ಷಮಿಸೈ 11 ಬಲು ಮಂದಿನ ಸಲಹಿದಿ ನೀನು ಅವರೊಳಗೆ ಓರ್ವನಾನಲ್ಲೇನೊ ನೆಲೆಗಾಣದೆ ತವ ಜಲಜ ಪಾದ ಹಂಬಲಿಸುವರರ್ಥವ ಸಲಿಸದೆ ಬಿಡುವರೆ 12 ಬೇಡಿಕೊಂಬುವದೊಂದೆ ಬಲ್ಲೆ ಅದುಕೂಡಾ ತಿಳಿದು ನೋಡಲು ಸುಳ್ಳೆ ಬೇಡಿ ಬೇಡಿಸುವಿ ಮಾಡಿ ಮಾಡಿಸುವಿ ರೂಢಿಪತಿ ನೀನಾಡಿದ ನಾಡುವೆ 13 ನಾಗಶಯನ ನೀ ಬದುಕಿರಲು ಎನಗಾಗ ಬೇಕೆ ಕಲಬಾಧೆಗಳು ಸಾಗರಾಂಬರಪ ಸುತನಿಗೆ ಪುರ ಜನ ಬಾಗದೆ ಅಣಕಿಸಿಧಾಂಗಲ್ಲವೆ ಇದು 14 ಕರೆದರೆ ಬರುವೆನು ನಿನ್ನಡಿಗೆ ಧಿ ಕ್ಕರಿಸಲು ಮರುಗುವೆ ಮನದಾಗೆ ನಿರ್ವಿಣ್ಯನು ಪರತಂತ್ರನು ನಾನಿ ನ್ನೆರಳಲ್ಲವೆ ಮದ್ಗುರುವರ ವರದಾ 15 ಕಲ್ಲಿನ ರೂಪದಿ ಪೂಜಿಯನು ಗೊಳ್ಳುವ ಬಗೆ ನಾನೊಲ್ಲೆ ನಿನ್ನ ಶಿರಿ ನಲ್ಲೆ ಸಹಿತ ಬಂದು ನಿಲ್ಲೊ ಅರ್ಚಿಸುವೆ 16 ಕಣ್ಣಲಿ ತವದರ್ಶನ ಅಮೃತ ಭವ ತ್ರಾತಾ ಘನ ಕರುಣಿ ಬಾರೆನೆ ಬರುವೆನು ಎಂದೆನ್ನುವ ಬುಧ ನುಡಿ ನನ್ನಿಯೆನ್ನುವೆನು 17 ಭಿಡೆಯ ಬಾರದೆ ಬಲು ಘನ್ನಾ ನಾನುಡಿಯು ವಡ್ಡಿ ಬೇಡಿದರನ್ನ ಕೊಡಗೈಯವನಿಗೆ ಲೋಭವು ಎಲ್ಲಂದಡರಿತು ನುಡಿ ನುಡಿ ಕಡಲಜಳೊಡೆಯನೆ18 ನ್ಯಾಯಕೆ ಅಧಿಪ ನೀನೆ ಜೀಯಾ ಅನ್ಯಾಯಕೆ ಪೇಳುವರಾರೈಯ್ಯ ಮಾಯವೆಂಬೊ ಘನ ಘಾಯವುಎನ್ನನು ನೋಯಿಸುತಿದೆ ಜವಮಾಯಿ ಸುಭೀಷಿಜನೆ 19 ವರುಣಗೆ ವಾರಿಯು ನೀನಯ್ಯ ದಿನ ಕರನಿಗೆ ಮಿತ್ರನು ನೀನಯ್ಯ ಸುರಪಗೆ ಇಂದ್ರನು ಉರಗಕೆ ಶೇಷನು ಸರ್ವವು ನೀನೆಂದರಿತೆನು ಕರುಣಿಸು 20 ಹನುಮಗೆ ಪ್ರಾಣ ಮೂರೊಂದು ಆನನನಿಗೆ ವೇಧನು ನೀನಂದು ಮನಸಿಗೆ ನೀ ಮನ ಜೀವಕೆ ಜೀವನ ಎನುತ ಅರಿದು ನಮೊ ಎನ್ನುವೆ ಕರಮುಗಿದು 21 ಮೂಗಣ್ಣಗೆ ರುದ್ರನು ನೀನೆಧರೆ ಆಗಸ ಸಾಗರ ಧಾರಕನೆ ಶ್ರೀ ಗುರು ರಘುಪತಿ ರಾಗ ಪಾತ್ರ ಭವ ನೀಗದೆ ಬಿಡುವರೆ 22 ಪದುಮನಾಭ ನಿನ್ನನು ಕುರಿತು ನಾ ನೊದರುವ ನುಡಿಗಳು ಚಿತ್ರವತು ವಿಧಿಪತ್ರವನಾಂತು ನಿನ್ನ ಪಾದ ವದಗಿಸದಲೆ ಬರೆ ಪದವೆನಿಸಿದವೆ 23 ಸ್ತವನಕೆ ವಲಿಯದೆ ಇರೆ ನಮನ ಗೈಯುವೆ ಇಕೊ ನೋಡೆ ದಾಸ್ಯತನಾ ಅವನಿಪ ಸರ್ವಕೆ ವಲಿಯದೆ ಇರೆ ಬೈಯುವೆ ಬಡಿಯುವೆ ಸಿಕ್ಕರೆ ಸೆರೆ ಪಿಡಿಯುವೆ 24 ಚೋರನೆ ನೀ ನಡಗಿದೆಯಾಕೆ ಸ್ಮøತಿ ದೂರನೆ ಎನ್ನನು ಮರಿವದೇಕೆ ಆರು ನಿನಗೆ ವೈಯಾರವು ಈ ಪರಿ ಕಾರುಣ್ಯದಿ ಕಲಿಸಿದರೋ ಕರಿವರದಾ 25 ಮರೆದಿಯ ನೀ ಕನಿಕರ ಬಡುವ ಸ್ಥಿತಿ ನೀ ಜರದರೆ ನಮಗಿನ್ನೇನು ಗತಿ ಪರಿಪರಿ ವರಲು ವರಲಿ ದಯಮಾಡದೆ ಇರವದು ನಿನ್ನಗೆ ಮರಿಯಾದಿಯೆ ಹರಿ 26 ರೂಪ ತೋರಲೆನ್ನುವಿಯಾ ಆಹದೆ ಪೇಳಲೊ ಹೇ ವಿಗತಾಗಭಯ ಪಾಪಬಾರದೆ ಈ ಪರಿಯನ್ನನು ನೀ ಪಿಡಿಸೆ ಗತತಾಪ ಶ್ರೀಪ ಹರಿ 27 ಸುರತನು ಸಾಕದೆ ಬಿಟ್ಟವಗೆ ತನ್ನ ಸತಿಯಳ ಖತಿಯೊಳಗಿಟ್ಟವಗೆ ಕ್ಷಿತಿಯರು ಏನೆನ್ನುವರು ಮನದೊಳಗೆ ಪತಿ ಯೋಚಿಸಿ ಹಿತಗೈಯನ್ನೊಳು 28 ಶಿರಿಗೋವಿಂದ ವಿಠಲ ಪಾಹಿ ಗುರುವರ ರಘುಪತಿನುತ ಪದ ಪಾಹಿ ಬರೆ ಮಾತಲ್ಲವೊ ತ್ವರ ತವ ಪಾದ ಸಿರಿ ಸುರರಾಣೆ 29
--------------
ಅಸ್ಕಿಹಾಳ ಗೋವಿಂದ
ದಡ ಸೇರಿಸು ಭವದ ಕಡಲಿನದಡ ಸೇರಿಸು ಹರಿಯೆಕಡೆ ಮೊದಲಿಲ್ಲದ ಕ್ಲೇಶದ ವಾರಿಯಕಡು ಕಾಂಕ್ಷದ ಬಲುತೆರೆಯ ಪ.ಸಾಧು ಸಮಾಗಮ ಸಚ್ಛಾಸ್ತ್ರ ಶ್ರವಣಾದಿಗಳಿಲ್ಲದೆ ಕೆಡುವೆಮೇದಿನಿಯೊಳು ಮೂಢಾತ್ಮನು ನಾ ಶ್ರೀಪಾದವ ಹೊಂದಿಸು ಹರಿಯೆ 1ಸಾಸಿರ ನಾಮದಿ ತುಲಸೀ ಕುಸುಮವಶ್ರೀಶನಿಗರ್ಪಿಸಲಿಲ್ಲಹೇಸದೆ ಬಾರದುದನ್ನೆ ಬಯಸುತವಾಸುದೇವಕೆಟ್ಟೆನಲ್ಲ2ಮನ ವಶವಾಗದು ತನು ಮಡಿಯಾಗದುಕನಸಲಿ ಧರ್ಮವನರಿಯೆಒಣಮಾತಲಿ ದಿನ ಹೋದವು ಪರಗತಿಗನುಕೂಲಲ್ಲದು ದೊರೆಯೆ 3ದುವ್ರ್ಯಸನಕೆ ಬೇಸರೆನೆಂದಿಗೆಘನಗರ್ವಿಲಿ ವರ್ತಿಪೆನಲ್ಲಪರ್ವತ ನೆಗಹುವ ನುಡಿಯನ್ನಾಡುವೆನಿರ್ವಾಹಕಡ್ಡಿಯೊಳಿಲ್ಲ4ನನ್ನ ಗುಣದ ನಂಬಿಕೆ ನನಗಿಲ್ಲನಿನ್ನಯ ನಾಮವೆ ಗತಿಯುಇನ್ನಾದರು ಕಡೆಗಣ್ಣಲೆನೋಡುಪ್ರಸನ್ವೆಂಕಟ ಸಿರಿಪತಿಯೆ 5
--------------
ಪ್ರಸನ್ನವೆಂಕಟದಾಸರು