ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ಪಾರಗಾಣಿಸಲು ಭಾರತಿ ರಮಣ ಸಮೀರನಲ್ಲದೆ ಬೇರೆ ಪ ವೀರ ಹನುಮ ರಘು ವೀರ ಭಕುತ ಬ್ರಹ್ಮ ಚಾರಿಯಾಗಿ ಜೀವ ಸಾರವೆನಿಸಿದೆ ಅ.ಪ ಶೇಷ ಗರುಡ ಶಿವ ಮುಖಸುರರೊಬ್ಬರೂ ದೋಷದೂರಲ್ಲವೊ ಪವಮಾನ ಈಶದಜ್ಞಾನ ಸಂಶಯ ಭ್ರಮೆ ಪೊಂದದೆ ಶ್ರೀಶನ ಪರಮ ಸಂತೋಷಕೆ ಪಾತ್ರನು 1 ವೀರರಧಿಕರೆಲ್ಲರು ನಿನ್ನೆದುರಲಿ ಸಾರಮೇಯದಂತಾದರೊ ಭೀಮ ನಾರಾಯಣನಿಗೊಬ್ಬನಿಗಲ್ಲದೆ ಶಿರಬಾಗದೆ ಮರೆದೆಯೊ ಧೀರ ಕಂಠೀರವ 2 ಶಾಂತನು ನೀ ಬಲುದಾಂತನು ನೀನೆ ಸ್ವಾಂತದಿ ಹರಿಯು ಪ್ರಸನ್ನನು ಸತತವು ಅಂತಿಮಭಾಷ್ಯಾದಿಗಳ ರಚಿಸಿ ವೇ ದಾಂತ ಸಾಮ್ರಾಜ್ಯದಿ ಸಾರ್ವಭೌಮ ಯತಿ3
--------------
ವಿದ್ಯಾಪ್ರಸನ್ನತೀರ್ಥರು
ಮದನ ಗೋಪಾಲಗೊ ಸುದತಿ ಯಶೋದೆ ನಂದ ಕಂದನಿಗೊ ಪ ಶ್ರೀಶ ಶ್ರೀ ಕೇಶವ ನಾರಾಯಣನಿಗೊ ಮಾಧವ ಗೋವಿಂದ ಹರಿಗೊ ಸಾಸಿರ ನಾಮದ ವಿಷ್ಣು ಮಧುಸೂದನಗೊ ಭೂಸುರ ಪಾಲ ತ್ರಿವಿಕ್ರಮ ವಾಮ£ಗೊ 1 ಮುದ್ದು ಮೂರುತಿ ಶ್ರೀಧರ ಹೃಷಿಕೇಶಗೊ ಪದ್ಮನಾಭ ದಾಮೋದರಗೊ ಶುದ್ಧಮನದಿ ಸಂಕರ್ಷಣ ವಾಸುದೇವಗೊ ಅನಿರುದ್ಧ ಮೂರುತಿಗೊ 2 ಹರುಷದಿ ನಾರಸಿಂಹ ಅಚ್ಚುತಗೊ ಸರಸಿಜನಯನ ಜನಾರ್ದನುಪೇಂದ್ರಗೊ ಸಿರಿ ಹರಿ ಕೃಷ್ಣಗೊ 3 ಶಂಖು ಚಕ್ರ ಗದಾ ಪದ್ಮವು ಧರಿಸಿದ ವೆಂಕಟರಮಣಗೊ ಶ್ರೀಹರಿಗೊ ಪಂಕಜನಯನ ಶ್ರೀರಂಗನಾಥನಿಗೊ ಬಿಂಕದಿ ಪಾಂಡುರಂಗ ವಿಠ್ಠಲಗೊ 4 ಘನಮಹಿಮ ಮನು ಕಂಚಿ ವರದರಾಜನಿಗೊ ಇನಕುಲ ತಿಲಕ ಶ್ರೀರಾಮಚಂದ್ರನಿಗೊ ವನಿತೆಯರೊಡಗೂಡಿ ಮೆರೆವ ಕೃಷ್ಣನಿಗೊ ವನಜಾಕ್ಷ ಪಶ್ಚಿಮ ರಂಗಧಾಮನಿಗೊ 5 ಬಗೆ ಬಗೆ ನಾಮಗಳಿಂದ ಪೂಜೆಯಗೊಂಬ ಅಗಣಿತ ಮಹಿಮಗೊ ಆಶ್ಚರ್ಯಗೊ ಖಗವಾಹನ ಕರಿರಾಜ ವರದಗೊ ನಿತ್ಯ ತೃಪ್ತನಿಗೊ 6 ಶ್ರದ್ಧೆಯಿಂದಲಿ ತನ್ನ ಭಜಿಪ ಭಕ್ತರ ಕಾಯ್ವ ರೌದ್ರಿನಾಮ ಸಂವತ್ಸರದಿ ಮುದ್ದು ಮೂರುತಿ ಕಮಲನಾಭ ವಿಠ್ಠಲನಿಗೆಪದ್ಮಾಕ್ಷಿ ವನಮಾಲೆ ಹಾಕಿದೆಯಾ 7
--------------
ನಿಡಗುರುಕಿ ಜೀವೂಬಾಯಿ
161ಆರಿಗೆ ವಧುವಾದೆ - ಅಂಬುಜಾಕ್ಷಿ |ಕ್ಷೀರಾಬ್ಧಿ ಕನ್ನಿಕೆ - ಶ್ರೀ ಮಹಾಲಕುಮೀ ಪಶರಧಿಬಂಧನ ರಾಮಚಂದ್ರ ಮೂರುತಿಗೊ |ಪರಮಾತ್ಮ ಸಿರಿಯನಂತ ಪದ್ಮನಾಭನಿಗೋ ||ಸರಸಿಜಭವ ಜನಾರ್ದನ ಮೂರುತಿಗೋ |ಎರಡು ಹೊಳೆಯ ರಂಗಪಟ್ಟಣವಾಸಗೊ 1ಚೆಲುವ ಬೇಲೂರು ಚೆನ್ನಿಗರಾಯನಿಗೊ |ಕೆಳದಿ ಹೇಳುಡುಪಿಯ ಕೃಷ್ಣರಾಯನಿಗೊ ||ಇಳೆಯೊಳು ಪಂಢರಪುರ ವಿಠಲೇಶಗೊ ||ನಳಿನಾಕ್ಷಿ ಹೇಳು ಬದರೀನಾರಾಯಣನಿಗೊ 2ಮಲಯಜಗಂಧಿ, ಬಿಂದುಮಾಧವರಾಯಗೊ |ಸುಲಭದೇವ ಪುರುಷೋತ್ತಮಗೊ ||ಫಲದಾಯಕನಿತ್ಯಮಂಗಳನಾಯಕಗೊ |ಚೆಲುವೆ ನಾಚದೆ ಪೇಳು ಶ್ರೀವೆಂಕಟೇಶಗೋ 3ವಾಸವಾರ್ಚಿತ ಕಂಚೀವರದರಾಜ ಮೂರುತಿಗೊ |ಆ ಸುರವಂದ್ಯ ಶ್ರೀಮುಷ್ಣದಾದಿ ವರಹನಿಗೊ ||ಶೇಷಶಾಯಿಯಾದ ಶ್ರೀ ರಂಗನಾಯಕಗೊ |ಸಾಸಿರ ನಾಮದೊಡೆಯ ಅಳಗಿರಿಯೀಶಗೋ 4ಶರಣಾಗತರನು ಪೊರೆವ ಶಾರ್ಙಪಾಣಿಗೊ |ವರಗಳನೀವ ಶ್ರೀನಿವಾಸ ಮೂರುತಿಗೋ |ಕುರುಕುಲಾಂತಕ ರಾಜಗೋಪಾಲ ಮೂರುತಿಗೊ |ಸ್ಥಿರವಾದ ಪುರಂದರವಿಠಲರಾಯನಿಗೊ 5
--------------
ಪುರಂದರದಾಸರು