ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಇ) ಆತ್ಮನಿವೇದನೆ ಏನು ಮಾಡಲಿ ವೆಂಕಟೇಶ ಈ ಬೆಳೆಯು ಸೋನೆಯಿಲ್ಲದೆ ಉರಿದುದು ಪ ನಾನಾ ಪ್ರಕಾರದೊಳು ಹಾನಿಯಾಯಿತು ಇರವು ಹೀನರಾದೆವು ನಾವು ಶ್ರೀನಿವಾಸನೆ ಕೇಳು ಅ.ಪ ಮೂಡದೆಸೆಯಳು ಬಂದುದು, ಆ ಮಳೆಯು ಬಡಗದೆಸೆಯಳು ಸುರಿದುದು ಎಡಬಿಡದೆ ತೆಂಕ ಕಡೆಯಲಿ ಹೊಡೆದ ಮಳೆಯು ತಾ ನಡುವೆ ಬಿಡುವುದು ಯಾತಕೆ 1 ಕಟ್ಟುಕಡು ಮದಗ ಸಹಿತ, ಈ ಊರ ತಲೆ ಗಟ್ಟಿನೊಳು ನಾ ಕಾಣೆನು ಕೆಟ್ಟು ಹೋಯಿತು ಮಳೆಯು ಹೊಟ್ಟೆಯನು ಉರಿಸುತ್ತ ದೃಷ್ಟಿಯಲಿ ನೋಡು ನೀನು 2 ಮಳೆಯಿಲ್ಲದಿಳೆಯಾರಿತು, ನಟ್ಟಿರ್ದ ಫಲವೆಲ್ಲ ಬೆಳೆ ಕೆಟ್ಟಿತು ಸ್ಥಳದ ತೆರಿಗೆಯ ಬಿಟ್ಟು ಕಳುಹುವನೆ ದೊರೆ ತಾನು ಎಳೆದೆಳೆದು ಕೊಲುವನಲ್ಲ 3 ಕಷ್ಟ ಬಂದುದು ನಮ್ಮ ಕಡೆಗೆ, ಈ ವೃಷ್ಟಿ ಬಿಟ್ಟು ಪೋದುದು ಇಳೆಯನು ಸುಟ್ಟ ಊರೆಲ್ಲವನು ತಟ್ಟಿನಾರಿದ ಮೇಲೆ ಮುಟ್ಟಿ ನೋಡುವರಿಲ್ಲವೊ 4 ಹದಿನಾಲ್ಕು ಲೋಕವನು ನೀ ನಿನ್ನ ಉದರದೊಳಗಳವಟ್ಟಿಹೆ ಬೆದರುತಿದೆ ಈ ಲೋಕ ಒದರುವುದು ಜನರೆಲ್ಲ ಉದುರದೇತಕೆ ಇಳೆಗೆ ಮಳೆಯು 5 ಎಲ್ಲ ಬೇಡಿಯೆ ಕೊಂಬರು, ಈ ಹರಕೆ ಯಲ್ಲಿ ಅಂತರಬಾರದು ಹಲ್ಲು ಬಾಯಾರಿರ್ದ ಮಕ್ಕಳಿಗೆ ಎಳೆನೀರು ಬೆಲ್ಲವಾಗಿಹ ಮಳೆಯನೆರೆಯೊ 6 ನೀಲಮೇಘಶಾಮ ವರ್ಣ, ಕಾಣಲಾ ಮೂಲೋಕದೊಡೆಯಾ ನಿನ್ನ ಕಾಲಮೇಘವು ನಿನಗೆ ದೂರವಾಗುವುದುಂಟೆ ಆಲಸ್ಯ ಮಾಡಬೇಡ 7 ಬಡವರೆಲ್ಲರು ಕೂಡಿಯೇ, ಒಪ್ಪು ಕೈ ವಿಡಿದು ಬೇಡಿಯೇ ಕೊಂಡೆವು ಸಿಡಿಲು ಮಳೆ ಮಿಂಚುಗಳು ಹೊಡಕರಿಸಿ ಬರುವಂತೆ ಒಡೆಯ ದಯದೋರೊ ನೀನು 8 ಸ್ವಾಮಿ ನಿನ್ನಯ ನಾಮವು, ಜನರಿಂಗೆ ಕಾಮಿತಾರ್ಥವನೀವುದು ಪ್ರೇಮವಾಗಿಹ ಮಳೆಯ ಭೂಮಿಯಲಿ ಇಳಿಬಿಟ್ಟು ನಾಮವಾಗೆವು ಸ್ವಾಮಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ಒಡಲೆರಡಂತೆ ಅಸುವೊಂದಂತೆ ನುಡಿಯಿದು ನಿಜವೇ ಪೇಳೇ ಗೋಪಮ್ಮ ಪ ನಡೆ ನುಡಿ ಭಾವಗಳೊಂದೇಯಂತೆ ಹುಡುಗನೇನೇ ಕೃಷ್ಣ ಪೇಳೇ ಗೋಪಮ್ಮ ಅ.ಪ ಸೋದರಿಯರು ಇದ ಹೇಳುವರಮ್ಮ ನಾದ ನರ್ತನ ದೇಹಕಾಂತಿಗಳಲ್ಲಿ ಭೇದವಿಲ್ಲೆಂಬರು ನಿಜವೇನಮ್ಮಾ 1 ಬಾಲೆಯು ತಾನೆ ಗೋಪಾಲನೆನುವಳಂತೆ ಬಾಲಕೃಷ್ಣನು ರಾಧೆ ತಾನೆಂಬನಂತೆ ಬಾಲನಾರಿದರಲ್ಲಿ ಬಾಲೆಯಾರಿವರಲ್ಲಿ ಮೂಲತತ್ವವ ನೀನೆ ಹೇಳೇ ಗೋಪಮ್ಮ 2 ಯುಗ ಯುಗದಲ್ಲಿ ತಾನವತರಿಸುವ ಕೃಷ್ಣ ಜಗದೀಶ್ವರನೆ ತಾದಿಟವಮ್ಮ [ಮಿಗೆ] ಭಾಗ್ಯವೆ ನಿನ್ನದಾಗಿಹುದಮ್ಮ 3 ನಿರುಪಮ ಭಕ್ತಿಯಮೂರ್ತಿಯು ರಾಧೆ ಮುರಳೀಧರನಲಿ ಒಂದಾಗಿಹಳು ಅರಿತುದ ಪೇಳ್ವೆನು ಮಾಂಗಿರಿರಂಗನ ಶರಣರಿಗೀತತ್ವ ಕರಗತವಮ್ಮಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾಯಿ ನಾರಿದ ಮೇಲೆ ಏಕಾಂತವೆತಾಯಿ ತೀರಿದ ಮೇಲೆ ತೌರಾಸೆಯೆ ಪ ಕಣ್ಣು ಕೆಟ್ಟ ಮೇಲೆ ಕಡುರೂಪು ಚೆಲ್ವಿಕೆಯೆಬಣ್ಣಗುಂದಿದ ಮೇಲೆ ಬಹುಮಾನವೆಪುಣ್ಯ ತೀರಿದ ಮೇಲೆ ಪರಲೋಕ ಸಾಧನವೆಸುಣ್ಣವಿಲ್ಲದ ವೀಳ್ಯವದು ಸ್ವಾದುಮಯವೆ 1 ಕಿಲುಬಿನಾ ಬಟ್ಟಲೊಳು ಹುಳಿ ಕಲಸಿ ಉಣಬಹುದೆಚಳಿಜ್ವರಕೆ ಚಂದನದ ಲೇಪ ಹಿತವೆಮೊಲೆಬಿದ್ದ ಹೆಣ್ಣಿನೊಳು ಮೋಹಕ್ಕೆ ಸೊಗಸಹುದೆಬೆಲೆಬಿದ್ದ ಸರಕಿನೊಳು ಲಾಭ ಉಂಟೆ 2 ನಿತ್ಯ ಸುಖವೆನಬಹುದೆಸತ್ತ್ವ ತಗ್ಗಿದ ಮೇಲೆ ಸಾಮಥ್ರ್ಯವೆಪೃಥ್ವಿಯೊಳು ಕಾಗಿನೆಲೆಯಾದಿಕೇಶವ ನಿನ್ನಸತ್ಯವಾದ ಭಕ್ತಿ ಇರದವಗೆ ಮುಕ್ತಿಯುಂಟೆ 3
--------------
ಕನಕದಾಸ
ಬೇಡವೀಗ ಬಾಲೆ ಸಂಗ ಕೆಟ್ಟುಹೋಗುವೆ ಇದುಪಾಡಲ್ಲ ಭಂಗವನು ಅನುಭವಿಸುತಕಾಡ ಹಿಡಿಯುವೇ ಹುಟ್ಟುಗೆಡುವೆಯಲ್ಲೊ ಪ ಸತ್ಯವದು ನಾರಿದೋಷ ಮೃತ್ಯುವಲ್ಲೋ ಯಮನಿತ್ಯದಲಿ ಎತ್ತಿರುವ ಕತ್ತಿಯಲ್ಲೋ ಆತ್ಮ-ಹತ್ಯವಲ್ಲೋ ಅಪಥ್ಯವಲ್ಲೋ 1 ಸರಕು ಎಲ್ಲೋ 2 ಶಿಷ್ಟಾಶಿಷ್ಟರೆಂಬವರು ಕೆಟ್ಟರಲ್ಲೋ ಬಲುಗಟ್ಟಿ ತವಸಿಗಳು ಮತಿಗೆಟ್ಟರಲ್ಲೊ ಕಂ-ಗೆಟ್ಟರಲ್ಲೋ ಘಾಸಿಪಟ್ಟರಲ್ಲೋ 3 ಧಾರಣೆಯು ಧ್ಯಾನಮೌನ ಹಾರಿತೆಲ್ಲೋ ಕಾಮಕೂರ್ಗಣೆಗಳು ಮೊನೆದೋರಿತಲ್ಲೋ ಮನೆಹಾರಿತಲ್ಲೋ ಧೈರ್ಯತೂರಿತೆಲ್ಲೋ 4 ನಾರಿಯವಳು ನಿನ್ನ ಗತಿಗೆ ಮಾರಿಯಲ್ಲೋ ಗುರುವೀರ ಚಿದಾನಂದನನ್ನು ಸೇರು ಎಲ್ಲೋಪರಿಹಾರವೆಲ್ಲೊಲ್ಲೋ ಮುಕ್ತಿ ಸಾರೆ ಎಲ್ಲೋ 5
--------------
ಚಿದಾನಂದ ಅವಧೂತರು