ಒಟ್ಟು 41 ಕಡೆಗಳಲ್ಲಿ , 19 ದಾಸರು , 38 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನ ಪಡೆದಿದ್ದೆನೋ ಸುಕೃತವ ಮುಂ-ದೇನ ಪಡೆದಿದ್ದೆನೋ ಮಾನ ನಿಧಿಯು ಚಿದಾನಂದ ಗುರುವ ಕಂಡುತಾನೆ ತಾನಾಗಿ ತನ್ನನು ಮರೆದಿರ್ದುದ ಪ ಆನಂದ ಮೂರುತಿಯ ನಾನೀಗ ಅತಿ ವೇಗ ಧ್ಯಾನಿಸಲುಏನೇನು ತೋರದೆ ಯೋಚನೆಗಳು ಕುಂದಿನಾನು ನೀನೆಂಬ ನೀತಿಯ ಮರೆದಿರ್ದುದಾ 1 ಶತಕೋಟಿ ಶಶಿಸೂರ್ಯರ ಪ್ರಭೆಯ ತಾಳ್ದುಶತ ಪತ್ರಗಳ ಗೇಹನ ಅತಿಹರುಷದಿ ಕಂಡು ಆತನೇ ತಾನಾಗಿಮತಿಯನೆ ತೊರೆದೆ ಮರೆತು ನಾ ನಿರ್ದುದ 2 ನಿರುಪಮ ನಿರ್ಗುಣನ ನಿರ್ವಿಕಲ್ಪ ನಿರವಯ ನಿರೀಹನವರಚಿದಾನಂದ ಗುರುವ ವರದಾತನಚರಣ ನೆನೆದು ಮನ ಚಲಿಸದಂತಿರ್ದುದ 3
--------------
ಚಿದಾನಂದ ಅವಧೂತರು
* ಎಂಥಾದ್ದೊ ಶ್ರೀ ತಿರುಪತಿ | ಎಂಥಾದ್ದೊ ಪ. ಎಂಥಾದ್ದೊ ತಿರುಪತಿ ಕ್ಷೇತ್ರ | ಸ ತ್ಪಾಂಥರಿಗಿಲ್ಲಿ ಸುಗಾತ್ರ | ಆಹ ಕಂತುಪಿತನು ಇಲ್ಲಿ ನಿಂತು ಭಕ್ತರಿಗೆಲ್ಲ ಸಂತಸಪಡಿಸುವನಂತಾದ್ರಿನಿಲಯ ನಿನ್ನೆಂದಾದ್ದೊ ಅ.ಪ. ನಾಗಾದ್ರಿಗಿರಿಯ ಮೆಟ್ಟುಗಳು | ಅ ಯೊಗ್ಯರಿಗಿದು ದುರ್ಲಭಗಳು | ಅಲ್ಲಿ ಭಾಗವತರ ಸಮ್ಮೇಳಗಳು | ಶಿರ ಬಾಗಿ ವಂದಿಪರು ಜನರುಗಳು | ಆಹ ಪೋಗುತ ಗಾಳಿಗೋಪುರವ ಕಂಡೆರಗಿ ಮುಂ ದ್ಯಾಗುತ ಸಜ್ಜನ ನೀಗುವರು ದುಃಖ1 ಹರಿಮಂದಿರ ಮಹಾದ್ವಾರ | ಬಹು ಜ ನರು ಕೂಡಿಹರು ವಿಸ್ತಾರ | ಬೀದಿ ನಡೆದು ಪದ್ರಕ್ಷಿಣಾಕಾರ | ಭೂ ವರಹನ ಸ್ವಾಮಿ ಕಾಸಾರ | ಆಹ ಹರುಷದಿಂದಶ್ವತ್ಥ ತರುವ ಕಂಡೆರಗಿ ಹರಿ ದರುಶನಕಾಗಿ ಹಾರೈಸುವ ಜನತತಿ 2 ಸ್ವಾಮಿಪುಷ್ಕರಣಿಯ ಸ್ನಾನ | ಮನ ಕಾನಂದಪ್ರದ ಸುಜ್ಞಾನ | ಭಾನು ತಾನುದಿಸುವನು ಮುಂದಿನ | ಸುಖ ಕೇನೆಂಬೆ ಹರಿಯ ದರ್ಶನ | ಆಹ ನೀನೆ ಗತಿಯೆಂದು ನಂಬಿದವರ ಪೊರೆವ ಭಾನುಪ್ರಕಾಶ ಹಣ ಕಾಣೀಕೆ ಕೈಕೊಂಬ 3 ಗರುಡ ಸ್ಥಂಭವನೆ ಕಾಣುತ್ತ | ಬಾಗಿ ಕರಮುಗಿದು ಒಳದ್ವಾರ ಪೊಗುತ | ವಿಮಾನ ಗಿರಿ ಶ್ರೀನಿವಾಸಗೆರಗುತ್ತ | ಬಂದು ವರ ತೊಟ್ಟಿ ತೀರ್ಥ ಕೊಳ್ಳುತ್ತ | ಆಹಾ ತರತರದ ಕಾಣಿಕೆ ಕೊಪ್ಪರಿಗೆಗೆ ಸುರಿಯುತ್ತ ನಿರುತ ನೀ ಸಲಹೆಂದು ಮೊರೆಯಿಡೆ ಭಕ್ತರು 4 ಗರುಡನ ಎದುರೊಳು ನಿಂದು | ಸ್ವಾಮಿ ಗರುವ ರಹಿತ ತಾ ಬಂದು | ಬಂದ ವರಭಕ್ತರನೆ ಕಾಯ್ವ ಬಿರುದು | ಇಂಥ ಹರಿಗೆ ಅಮೃತೋದಕವೆರೆದು | ಆಹಾ ಜರಿಯ ಪೀತಾಂಬರ ಉಡಿಸಿ ಸರ್ವಾಭರಣ ಹರಿಗೆ ಶೃಂಗರಿಸಿಪ್ಪ ಪರಿಯ ವರ್ಣಿಸಲಳವೆ 5 ಶಿರದಲಿ ಪೊಳೆವ ಕಿರೀಟ | ಕ ಸ್ತೂರಿ ತಿಲಕವು ಸುಲಲಾಟ | ಸುರ ನರರ ಪಾಲಿಪ ವಾರೆ ನೋಟ | ಕರ್ಣದಿ ಕುಂಡಲ ಮಾಟ | ಆಹ ವರ ಸಂಪಿಗೆಯ ಪೋಲ್ವ ನಾಸಿಕದ ಕದಪುಗಳ್ ಮೆರೆಯೆ ಕನ್ನಡಿಯಂತೆ ಮುಗುಳು ನಗೆಯ ಚೆಲ್ವ 6 ಸಿರಿವತ್ಸ ಕೌಸ್ತುಭಹಾರ | ಕಂಠ ಕರಶಂಖ ಚಕ್ರವಪಾರ | ಸುರ ನರರಿಗಭಯ ತೋರ್ಪಧೀರ | ಕರ ದ್ವರವ ಕೊಡುವಂಥ ಉದಾರ | ಆಹ ತರತರದ ಪುಷ್ಪಗಳ್ ನವರತ್ನ ತುಳಸಿಯ ಮೆರೆವೊ ಹಾರಗಳನು ಧರಿಸಿರ್ಪ ಗಂಭೀರ 7 ವಕ್ಷಸ್ಥಳದಲ್ಲಿ ಲಕುಮಿ | ಹರಿ ಅವನಿ | ಜಗ ರಕ್ಷಿಪ ಮಮಕುಲಸ್ವಾಮಿ | ಸರ್ವ ಸಾಕ್ಷಿಯಾಗಿದ್ದು ತಾ ಪ್ರೇಮಿ | ಆಹ ಪಕ್ಷಿವಾಹನ ಸುರಾಧ್ಯಕ್ಷ ಖಳ ಶಿಕ್ಷ ಪಕ್ಷವಹಿಸಿ ಸುರರ ರಕ್ಷಿಪ ಸರ್ವದ 8 ನಡುವಿನ ನಾಭಿ ವಡ್ಯಾಣ | ಮೇಲೆ ಕುಂದಣ | ನೆರೆ ಪಿಡಿದುಟ್ಟ ಪೀತಾಂಬ್ರವರ್ಣ | ಕಾ ಲ್ಕಡಗ ರುಳಿಯು ಗೆಜ್ಜೆ ಪೂರ್ಣ | ಆಹ ಮಡದಿಯರುಭಯದಿ ಪರಿಶೋಭಿಸುತಿರೆ ಪಾದ ದೃಢಭಕ್ತರನೆ ಪೊರೆವ 9 ನೋಟಕತಿ ಚಲುವ ಗಂಭೀರ | ಭಕ್ತ ಕೂಟದಿ ಮೆರೆಯುತಪಾರ | ಉತ್ಸ ಸಾರ | ಭೋಕ್ತ ಸಾಟಿರಹಿತ ಬರುವ ಧೀರ | ಆಹ ಕೋಟಿದೇವತೆಗಳ ನೋಟದಿಂ ಪೊರೆಯುವ ದಾಟಿಸುವ ಭವನಾಟಕಧರದೇವ 10 ಮಚ್ಛಾದ್ಯನೇಕ ಅವತಾರ | ಬಹು ಇಚ್ಛೆಯಿಂದಲಿ ಭಜಿಸುವರ | ಕಾಯ್ವ ಮೆಚ್ಚುತ ಮನದಲಿ ನಾರ | ಸಿಂಹ ಸ್ವೇಚ್ಛೆÉ್ಛಯಿಂ ಮೆರೆವ ಜಗತ್ಸಾರ | ಆಹ ತುಚ್ಛಕರು ವಸನ ಬಿಚ್ಚಿ ಸೆಳೆಯುತಿರೆ ಇಚ್ಛೆಯರಿತು ಲಲನೆ ರಕ್ಷಿಸೆನಲು ಪೊರೆದ 11 ಎಲ್ಲೆಲ್ಲಿ ನೋಡಲು ಭಕ್ತ | ಜನ ರಲ್ಲಲ್ಲಿ ನೆರೆಯುತ ಮುಕ್ತಾ | ಧೀಶ ನಲ್ಲದಿನ್ನಿಲ್ಲೆಂದು ಸ್ತುತಿಸುತ್ತ | ಶ್ರೀಶ ಇಲ್ಲೆ ಬಾರೆಂದು ಕರೆಯುತ್ತ | ಆಹ ಸೊಲ್ಲು ಲಾಲಿಸೊ ಎನಲು ಬಲ್ಲಿದ ಭಕ್ತರ ಸೊಲ್ಲಿಗೆ ಒಲಿಯುವ 12 ಬುತ್ತಿ ಪೊಂಗಲು ಮಾರುವರು | ಜನ ರರ್ಥಿಯಿಂದದನು ಕೊಂಬುವರು | ಗೀತ ನೃತ್ಯ ವಾದ್ಯಗಳಿಂ ಕುಣಿಯುವರು | ಅನ್ನ ಅರ್ಥಿಯಿಂ ದಾನ ಮಾಡುವರು | ಆಹ ಎತ್ತ ನೋಡಲು ಮನಕತ್ಯಂತ ಆನಂದ ನಿತ್ಯ ಉತ್ಸವಗಳು ಸತ್ಯಾತ್ಮ ಕೈಗೊಂಬ 13 ಇಂತು ಮೆರೆವೊ ಕ್ಷೇತ್ರ ಘನವು | ನೋಡಿ ನಿಂತು ವರ್ಣಿಸಲಸದಲವು | ಜಗ ದಂತರಾತ್ಮಕನ ವೈಭವವು | ಗುರು ಅಂತರ್ಯಾಮಿ ಶ್ರೀನಿಧಿಯು | ಆಹ ಇಂತು ಬ್ರಹ್ಮೋತ್ಸವ ನಿಂತು ರಥದಿ ಬರುವ ಕಂತುಪಿತ ಶ್ರೀ ಭೂಮಿಕಾಂತೇರ ಒಡಗೂಡಿ14 ಶ್ರೀಪತಿ ಜಲದೊಳಾಡೀದ | ಕೂರ್ಮ ರೂಪದಿಂ ಗಿರಿಯನೆತ್ತಿದ | ಬಹು ಪಾಪಿ ಕನಕಾಕ್ಷನ ಕೊಂದ | ನೃಹರಿ ರೂಪ ವಾಮನ ಭೃಗುಜನಾದ | ಆಹ ಚಾಪಖಂಡನ ಕೃಷ್ಣಚರಿಸಿ ಬತ್ತಲೆ ಕಲ್ಕಿ ಗೋಪಾಲಕೃಷ್ಣವಿಠ್ಠಲನ ಮಹಾಕ್ಷೇತ್ರ15
--------------
ಅಂಬಾಬಾಯಿ
ಅಚ್ಚರಿಯೊಳಚ್ಚರಿಯು ಅಚ್ಯುತನ ನಾಮವಿದು ತುಚ್ಛ ಬುದ್ಧಿಯ ಬಿಟ್ಟು ಎಚ್ಚೆತ್ತು ನೋಡೊ ಪ ನಿಧಿಯು ತನ್ನೆದುರಿಗಿರೆ ವದರಿ ದುರ್ಯೋಧನನು ಮದಡನಾದನು ಬರಿದೆ ದಳವ ಕೊಂಡು ಸದಮಲಾತ್ಮನ ದಿವ್ಯ ಪದವನರ್ಜುನ ಪಿಡಿದು ಮುದದಿ ಭಾಗ್ಯವ ಪಡೆದನದ್ಭುತವ ನೋಡ 1 ಹರಿಯ ಯೋಗದ ಸಿರಿಯು ಇರುವ ನಿಜವರಿಯದೆ ಕುರುಡನಣುಗನು ಜರಿದು ಹಾಳಾದನು ಉರುತರದ ಭಕ್ತಿಯಿಂದೆರಗಿ ಕರಗಳ ಮುಗಿದು ನರ ತನ್ನ ಹೆಸರನ್ನು ಸಾರ್ಥಕವಗೈದ 2 ನೀಚಯುಕ್ತಿಗಳಿಂದ ಗೋಚರಕೆ ಬಹನಲ್ಲ ವಾಚಾಮಗೋಚರನು ಶ್ರೀಕಾಂತನು ಕೀಚಕಾರಿ ಪ್ರಿಯನ ಶ್ರೀ ಚರಣ ಭಕ್ತಿ ಭವ-ಮೋಚನಕೆ ಸೂಚನೆಯು ಆಚರಿಸಿ ನೋಡೋ 3
--------------
ಲಕ್ಷ್ಮೀನಾರಯಣರಾಯರು
ಆನಂದ ಆನಂದವು ಈ ಜಗದಿ ಗೋವಿಂದನ ದಯದಿ ಪ ಆನಂದವು ಗೋವಿಂದನ ನಾಮವು ಆನಂದದಿ ಸ್ಮರಿಸುವ ಸುಜನರಿಗೆಅ.ಪ ಬಂಧು ಬಾಂಧವರೆಲ್ಲರು ಕೂಡುತಲಿ ಒಂದೇ ಮನಸಿನಲಿ ಇಂದಿರೇಶನ ಸ್ಮರಣೆಯ ಮಾಡುತಲಿ ನಂದ ಯಶೋದೆಯ ಕಂದನೆ ಪರನೆಂದು ಚಂದದಿ ಕುಣಿದಾಡುತ ಸ್ತುತಿ ಮಾಡಲು ಭವ ಬಂಧನ ಬಿಡಿಸುವ- ನೆಂದು ಮನದಿ ಆನಂದ ಪಡುವರಿಗೆ 1 ಪಕ್ಷಿವಾಹನ ಪುರುಷೋತ್ತಮ ಹರಿಯು ಆನಂದ ವತ್ಸರದಿ ರಕ್ಷಿಸಿ ಪೊರೆವನು ಭಕುತರ ತ್ವರದಿ ಅಕ್ಷರೇಢ್ಯ ಕಮಲಾಕ್ಷನೆ ಪರನೆಂ- ದೀಕ್ಷಿಪ ಭಕುತರ ರಕ್ಷಿಸಿ ಪೊರೆವ ಪ- ರೀಕ್ಷಿತಗೊಲಿದಂದದಿ ಪರಮಾತ್ಮನು ರಕ್ಷ ಶಿಕ್ಷಕನೆಂದೆನುವ ಸುಜನರಿಗೆ2 ಕಮಲಾಪತಿ ಕಾಮನ ಪಿತ ಶ್ರೀಹರಿಯು ಕಾರುಣ್ಯ ನಿಧಿಯು ಕಮಲಾಕ್ಷನು ಕಾಪಾಡುವ ಸುಜನರನು ಕಮಲಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ಜಯ ಜಯ ಎಂದು ಸುಮನಸರೊಡೆಯ ಸುಂದರ ಶ್ರೀಹರಿ ತಾ ಶ್ರಮ ಪರಿಹರಿಸುವನೆನುವ ಸುಜನರಿಗೆ3
--------------
ನಿಡಗುರುಕಿ ಜೀವೂಬಾಯಿ
ಆನಮಿಸುವೆ ಗುರುವಾ ಮಂತ್ರಾಲಯ ಸ್ಥಾನ ಮಾಡಿದ ಯತಿಯಾ ಪ ದಾನವರೊಳವತರಿಸಿ ದೈನ್ಯರ ಮಾ£ನಿಧಿಯು ತಾನು ಜ್ಞಾನಿಗಳಿಗೆ ಕಾಮಧೇನುವೆನಿಸಿದೀ ಮಾನಿಯತೀಂದ್ರ ವಿಜ್ಞಾನಪೊಯ್ಯವನು ಅ.ಪ ಸದಯ ಸರ್ವದಾಯೆನಿಸಿ ಹೃದಯದಿ ಮುದವಾಂಕುರಿಸುವನು ಪರಿ ಸದಮಲ ಕೀರ್ತಿಯ ವಿದಿಶಮಾಗಿ ಭೂತಳದಿ ಉದಯಿಸಿದ 1 ದೋಷದೂರ ನೆನಿಸೀ ದಾಸರಿಗೀಶನಡಿಯ ತೋರ್ಪಾ ವಾಸುದೇವನಿಗೆ ನಿಜ ದಾಸನೆನಿಸಿ ಭವ- ವಾಸದೊಳಿಹ ಪರತೋವೀವನು 2 ಕರುಣಸಾಗರನೆನಿಸಿ ಶರಣಗೆ ವರಗಳ ತಾನೀವಾ ಗುರುವೆಂದೆಂಬ ಯಥಾರ್ಥ ಪದವಿ ತಾ ನರಸಿಂಹವಿಠಲನ ಕರುಣದೊಳಿಹನು 3
--------------
ನರಸಿಂಹವಿಠಲರು
ಆರ್ತನಾಭೀಷ್ಟವನು | ಪೂರ್ತಿಗೊಳಿಸೊ ಪ ಕಾರ್ತಸ್ವರ ಮೊದಲಾದ | ವಾರ್ತೆ ನಾನೊಲ್ಲೇ ಅ.ಪ. ಫಲ ಗಿಡೆಲೆ ಮರ ಬಳ್ಳಿ | ಜಲ ಬಿಂದು ನವ ನದಿಯುಜಲ ನಿಧಿಯು ವನಗಿರಿಯು | ಜಲ ಚರಾಚರಧೀ ||ಒಳ ಹೊರಗೆ ಸಂವ್ಯಾಪ್ತ | ಚಲಿಪೆ ನೆಲೆಯಿಲ್ಲದಲೆತಿಳಿಸೊ ತವ ಮಹಿಮೆಗಳ | ಅಲವ ಭೋದಾತ್ಮಾ 1 ಕಂಡ ನೀರೊಳು ಮುಳುಗಿ | ಅಂಡಲೆದು ಬೆಂಡಾದೆಪುಂಡರೀಕಾಕ್ಷ ಪದ | ಬಂಡುಣಿ ಎನಿಸದೇ ||ಹಿಂಡು ತೀರದ ಗತ | ಪಾಂಡುರಂಗನ ರೂಪಕಂಡು ಹಿಗ್ಗುವುದೆಂದೊ | ಕುಂಡಲಿಯ ಶಯನಾ 2 ಜ್ಞಾನಾಯು ರೂಪಕನೂ | ಪ್ರಾಣಾಂತರಾತ್ಮ ನಿನಜ್ಞಾನ ಕೊಟ್ಟು ಧರಿಸೊ | ಗಾನ ಪ್ರಿಯನೇ ||ಪ್ರಾಣನಿಗೆ ಪ್ರಾಣ ಗುರು | ಗೋವಿಂದ ವಿಠ್ಠಲನೆನೀನಾಗಿ ಒಲಿಯದಲೆ | ಅನ್ಯಗತಿ ಕಾಣೇ3
--------------
ಗುರುಗೋವಿಂದವಿಠಲರು
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಏನನಿತ್ತಪೆ ನಿನಗೆ ಶ್ರೀನಿವಾಸ ಶ್ರೀನಿಧಿಯು ನೀನಾಗಿರಲು ಸರ್ವೇಶ ಪ. ಅನುದಿನದಿ ನಿನ್ನ ಪದ ಅನುವಿನಲಿ ಸ್ತುತಿಪೆನೆನೆ ಅನುದಿನದಿ ನಿನ್ನಾದಿಶೇಷ ಸ್ತುತಿಪ ಘನಮಹಿಮ ನಿನ್ನನರ್ಚಿಪೆನೆಂದೊಡೆ ಆ ಘನ ಮಹಾ ಶ್ರೀದೇವಿ ನಿನ್ನರ್ಚಿಸಿ ಮೆಚ್ಚಿಸಿಹಳರಿಯೆ 1 ಭಕ್ತಿರಸವನು ಭಕ್ತ ಪ್ರಹ್ಲಾದ ನಿನಗಿಂತಧಿಕ ಭಕ್ತಿಯನು ಮಾಡಲರಿಯನೋ ದೇವ ದೇವ ಯುಕ್ತಿಯಲಿ ನಿನ್ನ ಸ್ತುತಿ ಮಾಳ್ಪೆನೆಂದರೆ ನಿನ್ನ ಭಕ್ತ ನಾರದ ಮಾಳ್ಪ ಸ್ತುತಿಗಧಿಕವೇ ಕೃಷ್ಣ 2 ನಿನ್ನ ಪದ ಸೇವಿಪೆನೆನೆ ನಿನ್ನ ಭಕ್ತ ಹನುಮ ಇನ್ನು ನಿನ್ನಡಿ ಬಿಡನೊ ನಿನ್ನರಿವತನಕ ಪನ್ನಗಾದ್ರಿನಿವಾಸ ಸಂಪನÀ್ನ ಶ್ರೀ ಶ್ರೀನಿವಾಸ ನಿನ್ನ ಕೃಪೆಯನೆ ತೋರೋ ಶ್ರೀ ರಮೇಶ 3
--------------
ಸರಸ್ವತಿ ಬಾಯಿ
ಕೋಪದೊಳು ಜಮದಗ್ನಿ ತಾಪದೊಳು ಮಾರ್ತಾಂಡ ಭೂಪರೊಳು ರಘುನಾಥನೆನ್ನ ನಾಥ ದ್ವೇಷದೊಳು ಭಾರ್ಗವನು ರೋಷದೊಳು ದೂರ್ವಾಸ ಮೋಸದೊಳ್ ಶ್ರೀಕೃಷ್ಣ ಮುದ್ದು ಕೃಷ್ಣ ಭೋಗದೊಳು ದೇವೇಶ ರಾಗದೊಳು ಗಿರಿಜೇಶ ತ್ಯಾಗದೊಳು ಶಿಬಿರಾಯ ಮದನಕಾಯ ಜ್ಞಾನದೊಳು ಜನಕನು ಧ್ಯಾನದಲಿ ದತ್ತರ್ಷಿ ಸೂನೃತದಿ ಹರಿಶ್ಚಂದ್ರ ಮಾನನಿಧಿಯು ಧನಿಕನೆಂದೆನಲಷ್ಟಸಿದ್ಧಿದಾತಂದೆ ಘನವಂತನೆನೆ ಪ್ರಣವಸ್ವರೂಪಗೆ ಧಣಿಯೆನಲು ಮೂಜಗಕ್ಕೊಡೆಯನಿವÀನೆ ಎಣೆಯುಂಟೆ ಶೇಷಾದ್ರಿವಾಸನಿವಗೆ
--------------
ನಂಜನಗೂಡು ತಿರುಮಲಾಂಬಾ
ಚಿಂತಾಮಣಿಗಮಿತ ಚಿಂತಾಮಣಿ ಚಿಂತಲವಾಡಿ ಶ್ರೀ ನೃಸಿಂಹಸ್ವಾಮಿ ಪ ಕಂತುಪಿತ ಕೊಟ್ಟರುವ ಸಾಮಥ್ರ್ಯದಿಂದಲೇ ಐಹಿಕ ವಸ್ತುವೀವುದು ಅನಂತ ಶ್ರೀಪತಿ ಚಿಂತಲವಾಡಿ ಕರುಣಿ ಸ್ವ - ತಂತ್ರನು ಇಹಪರದಿ ಐಶ್ವರ್ಯವ 1 ಕಾಕುಮನ ವಾಕ್ಕಾಯ ಶುದ್ಧ ಮಾಡುವ ದೇವಿ ಶ್ರೀ ಕಾವೇರಿ ತೀರದಲಿ ಕುಳಿತು ಸರ್ವ ಭಕುತರಿಗೆ ವರವೀವ ಶ್ರೀಕಾಂತ ನರಸಿಂಹ ಸುಖಜ್ಞಾನಮಯ ದೋಷದೂರ ಗುಣನಿಧಿಯು 2 ಮಮಕಾರ ಅಹಂಕಾರ ಡಂಭತನವನು ಬಿಟ್ಟು ಮಮಸ್ವಾಮಿ ಸರ್ವರಿಗೂ ಪರಮೈಕಸ್ವಾಮಿಯು ಸುಮನಸಾರ್ಚಿತ ಕುಸುಮಸಂಭವನ ತಾತನು ರಮಾಪತಿ ಪ್ರಸನ್ನ ಶ್ರೀನಿವಾಸ ನಮೋ ಎನ್ನಿ 3
--------------
ಪ್ರಸನ್ನ ಶ್ರೀನಿವಾಸದಾಸರು
ಥಳ ಗುಟ್ಟೊಳುತೊಬ್ಬಳೆವಾಗೆದ ತಾ ವಳಗುಟ್ಟಲೆ ದಟ್ಟದ ಬೆಳಗು ತಾಂ ತಿಳಿಗೊಟ್ಟರೆ ಸದ್ಗುರು ಭಾಸುದು ತಾ ಕಳೆಮುಟ್ಟಿದು ನೋಡಲು ಶಾಶ್ವತ 1 ಅರಿಯೊ ಸುರಿಯೊ ಪರಮಾಮೃತ ಬೆರಿಯೊ ಗುರುವೆಂದು ನೀ ಸುಗುರುತಾ ಜರಿಯೊ ಮರಿಯೊ ಮದಗರ್ವನೆ ತಾ ನೆರಿಯೊ ಗುರುಪಾದಕೆ ನೀ ತ್ವರಿತ 2 ತಿಳಿ ಸರ್ಕನೆ ನಿನ್ನೊಳು ಬ್ಯಾಗ ತಾ ಅಳಿ ತರ್ಕದ ಮಾತಿನ ಗರ್ವನೆ ತಾ ತೊಳಿ ನರ್ಕಕೆ ಬೀಳುವ ತಾಮಸ ತಾ ಸುಳಿ ಗರ್ಕನೆ ಸದ್ಗುರು ಪಾದÀದಿ ತಾ 3 ಬಿಡು ಮರ್ಕಟ ಬುದ್ಧಿಯ ಭಾವನೆ ತಾ ಕೂಡು ಸರ್ಕನೆ ಸುಮ್ಮನೆ ಗುರುವಿಗೆ ತಾ ಸುಡು ನರ್ಕಕೆ ಬೀಳುವ ಪಾಶÀವ ತಾ ತೊಡು ಮರ್ಕಟವಾದ ಸದ್ಗುಣ ತಾ 4 ಹಿಡಿಯೊ ಪಡಿಯೊ ದೃಢಭಾವನೆ ತಾ ಜಡಿಯೊ ಒಡನೆ ಗುರುಪಾದನಿ ತಾ ಕಡಿಯೊ ಬಿಡದೆ ಭವಬಂಧನ ತಾ ಅಮೃತ 5 ನಡಿಯೊ ನುಡಿದಂತೆನೆ ಸನ್ನಮತ ಹಿಡಿಯೊ ಪಡೆದಂತೆನೆ ಪಾದವ ತಾ ಇಡದಂತೆನೆ ತುಂಬೆದ ಸದ್ಘನ ತಾ ಕಡೆಗಾಂಬುದು ನೋಡಿದು ಶಾಶ್ವತಾ 6 ತಿಳಿಯೊ ಬಳಿಯೊ ಒಳಗುಟ್ಟನೆ ತಾ ಹೊಳಿಯೊ ಸುಳಿಯೊ ನೆಲಿಗೊಂಡಿದು ತಾ ಕಳಿಯೊ ಅಳಿಯೊ ಅನುಮಾನವ ತಾ ಕಳೆಕಾಂತಿಯ ನಿನ್ನೊಳು ತುಂಬ್ಯದ ತಾ 7 ಒಳಗುಟ್ಟನೆ ಸಾಧಿಸಿ ನೋಡುವು ದೆಲ್ಲಾ ಥಳಗುಟ್ಟುದು ಸಾಸಿರ ಪದ್ಮ ದಳ ನೆಲೆಗೊಂಡರೆ ವಾಗುವ ತಾ ಸಫಲಾ ತಿಳಕೊಂಬುದು ಸದ್ಗುರು ಸ್ವಾಮಿ ಬಲ 8 ಬಿಡಬಾರದು ಸಂಗತಿ ಸಜ್ಜನರ ಹಿಡಿಬೇಕಿದು ಒಂದೇ ನೋಡಿ ಸ್ಥರ ಅಡಿ ಇಟ್ಟನೆ ಬಾಹುದು ಪುಣ್ಣಿದರಾ ಪಡಕೊಂಡರೆ ಅಹುದು ಇಹಪರ 9 ತಡಮಾಡದೆ ನೋಡುವುದೀ ಸುಪಥ ಪಡಿಬೇಕಿದು ಒಂದೇ ಸುಸ್ವಹಿತ ಒಡಗೂಡದೆ ಬಾರದು ಕೈಗೂಡಿ ತಾ ಎಡಬಲಕೆ ತುಂಬಿದೆ ತುಳುಕುತ 10 ಜಾಗರ ತಾ ಎಡಿಎಡಿಗೆ ಸಂದಿಸಿ ತುಂಬಿದೆ ತಾ ಬಡಿಸಿಟ್ಟೆದ ಭಾಗ್ಯದ ನಿಧಿಯು ತಾ ಪಡಕೊಳ್ಳೆಲೊ ಮಹಿಪತಿ ಪೂರ್ಣಹಿತ11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನಿಧಿಯು ದೊರಕಿತು ಎನಗೆ ನಿಧಿಯು ದೊರಕಿತು. ವಿಧಿ ಭವಾದಿ ದೇವರೆಲ್ಲ ಒದಗಿ ಮಾನದಿಂದ ಕಾಯ್ವ ಪ. ನಿತ್ಯ ಮಂಗಳೆಯನು ತನ್ನುರ ಸ್ಥಳದಲಿ ಧರಿಸಿರುವದು ಎತ್ತ ನೋಡಲಲ್ಲಿ ನಲಿವ ಭೃತ್ಯಪೂರ್ಣಾರ್ಥ ಕೊಡುವ 1 ಕಷ್ಟ ಕಲುಷವೆಂಬ ದೊಡ್ಡ ಬೆಟ್ಟವೆಲ್ಲ ಭೇದಿಸುವುದು ಇಷ್ಟ ಲಾಭ ಪುಷ್ಪ ಜ್ಞಾನ ದೃಷ್ಟಿಸಹಿತ ಕೊಟ್ಟು ಕಾವ 2 ಹಲವು ಭವದ ತಾಪವನ್ನು ಕಳೆದು ಕೃಪಾರಸವ ಸೂಸಿ ಮಧ್ಯಪೊಳೆವಪೂರ್ವ 3 ಸೋತು ಸಕಲ ಜನರ ಮುಂದನಾಥನಾಗೆ ಕರುಣಿ ಜಗ- ನ್ನಾಥದಾಸರೊಲಿದು ಪರಮ ಪ್ರೀತಿಯಿಂದ ತೋರಿದಂಥ 4 ಇಹ ಪರತ್ರ ಸುಖವನೀವ ಮಹದುಪಾಸ್ಯ ಪಾದಪದ್ಮ ವಹಿಸಿದವರ ಸಕಲಭಾಗ್ಯ ನಿವಹಿ ವೆಂಕಟೇಶನೆಂಬ 5
--------------
ತುಪಾಕಿ ವೆಂಕಟರಮಣಾಚಾರ್ಯ
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು