ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆ ಇಂದುವದನೇ ಸರಸಿಜಸದನೇ ನಿಂದಿತ ಜನಸೂದನೆ ಪ ವಂದಿಸುವೆನೆ ಅರವಿಂದಗಂಧಿನಿ ಮಂದಿರದಲಿ ಗೋವಿಂದನ ತೋರಿಸೆ ಅ.ಪ. ಮೂಲೋಕಮಾತೆ ವಿಖ್ಯಾತೆ ಕೈವಲ್ಯದಾತೆ ಕಾಲ ದೇಶದಿ ವ್ಯಾಪಿತೆ ಭಜಕರಪ್ರೀತೆ ಶೀಲೆ ಸಂಪೂರ್ಣ ಗುಣವ್ರಾತೇ ಫಾಲನಯನ ತ್ರಿದಶಾಲಯ ಪ್ರಮುಖರ ಪಾಲಿಸುತಿಹೆ ಮಂದಜಾಲಜನಕೆ ರಮೇ ಶ್ರೀಲತಾಂಗಿ ನಿನ್ನಾಳುಗಳೊಳು ಹರಿ ಲೀಲೆಯ ಮನದಲಿ ಅಲೋಚನೆ ಕೊಡೆ 1 ಲೋಕನಾಯಕಿ ಲಕುಮಿ ಶ್ರೀ ಸಾರ್ವ ಭೌಮೆ ಶೋಕರಹಿತ ಸುನಾಮೆ ನಾಕಜವನಧಿ ಸೋಮೆ ದೇವಲಲಾಮೆ ಸಾಕಾರವಂತೆ ಗುಣ ಸÉ್ತೂೀಮೆ ನೀ ಕರುಣಿಸಿ ಅವಲೋಕಿಸಿ ಎನ್ನಯ ಕಾಕುಮತಿಯ ಕಳೆದೇಕಾಂತದಿ ನಿತ್ಯ ಏಕ ಮನದಿ ಹರಿ ಶ್ರೀ ಕರಪದಧ್ಯಾನ ನೀ ಕರುಣಿಸು ನಿರಾಕರಿಸದಲೆ 2 ಜಾತರಹಿತ ಜಯವಂತೆ ದೈತ್ಯಕೃತಾಂತೆ ಸೀತಾಂಶುಕೋಟಿ ಮಿಗೆಕಾಂತೆ ಪಾತಕದೂರೆ ನಿಜಪಂಥೆ ನಿತ್ಯಾ ನಿಶ್ಚಿಂತೆ ನೀತದೂರಾದಿ ಮಧ್ಯಾಂತೆ ಪುರುಹೂತ ಮುಖಾವರ ವ್ರಾತ ವಿನುತೆ ಅತಿಪ್ರೀತಿಯಿಂದಲಿ ನಮ್ಮ ವಾತಜನಕ ಜಗನ್ನಾಥ ವಿಠಲನ ಮಾತು ಮಾತಿಗೆ ನೆನೆವಾತುರ ಮನ ಕೊಡೇ 3
--------------
ಜಗನ್ನಾಥದಾಸರು
ಕೇಳು ಪೊರೆ ಶಾಂತ ತಾಳು ರಂಗಾ ನಿನ್ನಾಳು ನಾನಿರುವೆ ಕೃಷ್ಣಾ ಪ ಆಳೋ ಅರಸನೇ ಅ.ಪ. ಗಾಣ ಎಳೆಯುವ ಕ್ವಾಣನಾದೆನೋ ಕಾಣವೋ ನಯನಾ ಕಾಣಿ ವೇಣುಗೋಪಾಲ 1 ಮಾಯಾ ಮಗನಿಗೆ ನಾಯನಾಗಿರುವೆ ಮಾಯಾ ಕಾಯೋ ನರಹರಿ 2 ಬೇಡುವರು ಧನ ಕಾಡಿ ಎನ್ನನು ನೋಡು ಫಣಿಶಯನಾ ನಾಡಿಗೊಡೆಯಾ ಕೈ ಜೋಡಿಸುವೆನಯ್ಯಾ 3 ಬೇಗ ತವದಾಸನಾಗಿ ಮಾಡಿಕೋ ಸಾಗರಶಯನಾ ಈಗ ಭವಭಯ ನೀಗಿಸೈಯ್ಯ ಕೈ ಸಾಗದಾಯಿತು ಭಾಗವತಪ್ರಿಯಾ 4 ಆಶಾ ಬಿಡಿಸಿ ನೀ ಲೇಸು ಕೊಡು ಹನುಮೇಶವಿಠಲನೇ ಘಾಸಿಯಾದೆನು ಪೋಷಿಸಯ್ಯ ರಮೃಶ ಪಂಢರಿವಾಸ ವಿಠಲ 5
--------------
ಹನುಮೇಶವಿಠಲ
ಚದುರೇ ವೃಂದಾವನದೊಳು ನಿಂತಿಹನ್ಯಾರೇ ಪೇಳಮ್ಮಯ್ಯಾ ಪ ಸತ್ ಸಖಿಯರಿಗುಣಿಸುವ ಜಾರಚೋರ ಶ್ರೀಕೃಷ್ಣ ಕಾಣಮ್ಮಾ ಅ.ಪ. ನೀರೇ ನೋಡೋಣು ಬನ್ನಿರಿ ಎಂದುಈ ಬಾಲೇರು ಗೋಪಾಲನ ಗಾನಕೆ ಬಂದು ಬೆದರುತ ಮನದೊಳು ಮದನಾಟಕೆ ನಿಂದೂಮೋರೆಯ ತಿರುವುತ ಅಂದು ಮಾರನಯ್ಯ ತವ ಚಾರುಧರಾಮೃತ ಸೂರೆಗೈಯ್ಯೋ ಸದ್ಧೀರಿಯರೊ ನಾವು 1 ಬಾಲೆ ನಿನ್ನಾಳುವ ದಾರಿ ಬ್ಯಾರಿಲ್ಲಾ ಕಾಲಬಂದೊದಗದು ಕೇಳೆನ್ನ ಸೊಲ್ಲ ಮತ್ತಾವದೊ ತಂಗಾಳಿ ಬೀಸುವ ವ್ಯಾಳೆ ಬಂತಲ್ಲಾ ಮೋಹಿಸಿ ಬಂದೆವೊ ನಲ್ಲಾ ಫುಲ್ಲಲೋಚನ ಮೃದು ಮಲ್ಲಿಗೆ ಮುಡಿಸಿ ಮೆಲ್ಲಗೆ ಮರ್ದಿಸು ಮೃದು ಚಲ್ವಯರುಹರೆ 2 ಸಿಂಧೂ ರಾಜಕುಮಾರಿಯ ರಮಣ ಶರದಿಂದೂ ಮಂಡಲ ಮುಟ್ಟುತಲಿದೆ ಧ್ವನಿ ಹಸನಾ ಶಂಭೂರ ಶತ್ರಾದಿಗಳುಗರೆವರು ಪೂಮಳಿ ನಾನಾ ಗಣಶಿರಿಸುತ ಮರುಳಾಗಿ ಪೂ ಬಾಣಾನಾಟವನೋಡುತ ನಾರಿಯ ತ್ಯಜಿಸದೆ ಪರನಾರಿಯ ರೂಪದಿಂದ್ರಮಿಪ ಮುರಾರೇ 3 ಸುರನದಿ ಸ್ಮರಸುತ ರಾಣಿ ನಾಟ್ಯವನಾಡುತ ನವನವ ಪಾಡುತ ದಿದ್ಧಿದ್ಧಿಮಿಕಿಟ ತಾಂ ತಾಳದಿ ನಲಿಯುತ 4 ಶಶಿಸೂರ್ಯನೆಳಸನ್ನಿಭ ಪ್ರಖನಕರಾ ಸರಸೀಜಾದಳ ನುತ ಭಾವಿ ಸಮೀರಾ ಷಟ್ ಶತ ಬಂದು ವಿಂಶತಿಹಂ ಸಾಖ್ಯ ಮಂತ್ರ ಸಹಸ್ತಾದಿಂದ ಸೇವಿಪ ಮಧ್ವಮಧೀಶನ ಲೀಲೆಯನೆನಿಪರ ಬಂದು ತೋರುವಾತ ತಂದೆವರದಗೋಪಾಲವಿಠಲನು 5
--------------
ತಂದೆವರದಗೋಪಾಲವಿಠಲರು
ತಾಳು ತಾಳೆಲೆ ಮನವೆ ತಾಳ್ಮೆಯ ತಾಳು ತಾಳೆಲೆ ಮನವೆ ಪ. ತಾಳು ತಾಳು ನಿನ್ನಾಳುವ ದೊರೆಯಿಹ ಅವ ಗಾಳಾಗಿ ನೀ ಬಾಳಲು ಕಾಳು ಮಾಡನು ಹರಿ ಅ.ಪ. ದುರ್ಜನರಾಡಿದ ನುಡಿ ಮನಕದ ಸಜ್ಜುಗೊಳಿಸಬೇಡ ಅರ್ಜುನ ಸಖನೇ ನಿನ್ನ ಪರೀಕ್ಷಿಸೆ ನಿರ್ಜರೇಶನೀಪರಿ ಮಾಡಿಹನೆಂದ 1 ಅಳಕು ಮನವ ಬಿಡು ನಿ ನ್ನಳದು ನೋಡುವ ಹರಿಯು ಅಳವಲ್ಲವನ ಲೀಲೆ ಕಂಡ್ಯ ಝಳ ಝಳ ಮನದಲಿ ಕಳೆ ಕಲೆ ಹರಿರೂಪ ಪೊಳೆದು ನಿನ್ನ ಮನದಳಕನೆ ದೂಡುವ 2 ಅಂಜದಿರಭಯವ ಅಂಜನಾಸುತ ಸೇವ್ಯ ಶ್ರೀ ಶ್ರೀನಿವಾಸ ಶ್ರೀರಾಮ ನಿ ನ್ನಂಜಿಸುವರನು ಅಂಜಿಸೆ ಕಾದಿಹ ಸಂಜಯ ಪ್ರಿಯ ಕಂಜನಾಭ ಹರಿ 3
--------------
ಸರಸ್ವತಿ ಬಾಯಿ
ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಾಲೆಯಾದಾನು ಬಲಭೀಮ ಪ ಬಾಲೇಂದು ಮುಖ ಸೋಲಿಪ ವದನದಿಂದೊಪ್ಪುತಅ.ಪ. ಸೊಲ್ಲು ಸೊಲ್ಲಿಗೆ ಬಲು ಕಳವಳಿಸುವನಾ ತರುಣಿ ದ್ರೌಪದಿ ತಾ ತಾಳದೆ ತನ್ನೊಳು ತಿಳುಪಿದಳು ಪತಿಯೊಡನೆಕೇಳಿದ ಮಾತ್ರದಿ ಸೀಳುವೆನೆನುತಲಿ ಕೋಪದಿಂದೊಮ್ಮೆಗೆ 1 ಸನ್ನುತ ಶಶಿಮುಖಯೆಂಬೋದು ಸರಿಯಾ-ಶ್ವಾಸನ ಸತಿಯಳ ಸರಸಾಟ ಸಹಿಸದೆ ಮೀಸೆಯ ತಿರುವುತ ಸಾರಿ ಸರಿ ಯಾರೆನ್ನುತ ಸತಿಯಾಗಿರು ಸುಖಸತಿಯಳ ಮಾಡಿ ನಿನ್ನಾಳುವೆನೆಂಬೋದು ಕೇಳಿ ಭರದಿ 2 ಸುಮಶರ ಶೋಷಕೆ ಹಿಮಕರ ವ್ಯಾಪಿಸಿ ಹರುಷವಗೊಳುತಾ ಸರಸಿಜಮುಖಿಯೆಂದು ಸರಸರ ಸಾಗಲು ಶಿರದೊಳು ಚರಣವ ಸೇರಿಸಿದಾ ಶಾಮರೂಪ ತಂದೆವರದಗೋಪಾಲವಿಠ್ಠಲನ ಸ್ಮರಿಸುತ 3
--------------
ತಂದೆವರದಗೋಪಾಲವಿಠಲರು