ಒಟ್ಟು 14 ಕಡೆಗಳಲ್ಲಿ , 8 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಅಚಿಂತ್ಯಾದ್ಭುತ ಮಹಿಮ ಈ ಸಚರಾಚರದೊಳು ಪ್ರಚುರನಾಗಿಹೆ ದೇವಾ ಮುಚುಕುಂದವರದಾ ಪ ಅಚಲಭಕುತಿಯು ನಿನ್ನ ಚರಣದಿ ಕಿಂಚಿತಾದರೂ ಪ್ರಚುರಮಾಡಿಸು ಅತಿಚಂಚಲನು ಬಲು ವಂಚಕನು ನಾ ಅನು- ಚಿತೋಚಿತ ಕರ್ಮವರಿಯೆನೋ ಅ.ಪ ವಿಪಿನವಾಸದಿ ಎನಗೆ ವಿಪರೀತವನು ತೋರಿ ಅಪರಾಧವೆಣಿಸದೆ ಪಾಲಿಸಿದೇ ಕೃಪಣವತ್ಸಲ ನೀನೇ ಕೃಪೆಮಾಡಿ ಸ್ವಪನದಿ ಅಪರಿಮಿತದ ವಿಶ್ವರೂಪವ ನೀ ತೋರ್ದೆ ಅಪರಾಧಿ ನಾನಹುದೋ ಸ್ವಾಮಿ ಅಪವರ್ಗಪ್ರದನು ನೀನು ಸಫಲಗೊಳಿಸಿದೆ ಎನ್ನ ಮನದನು- ತಾಪವನು ಪರಿಹರಿಸಿ ಕಾಯ್ದೆ ನಿನ್ನಡಿದಾವರೆಯ ನಂಬಿದೆನೋ ಶ್ರೀ ಪರಮಹಂಸರಿಂದ ನುಡಿಸಿದ ರಹಸ್ಯಗಳು ಅದುಏನೋ ಶ್ರೀ ಪುರುಷೋತ್ತಮನೆ ನೀನೆನ್ನಭಯಹಸ್ತದಿ ಕರೆದ ಪರಿಯೇನೋ ಅದನೊಂದನರಿಯೆನೊ ಈಪರಿಯ ಕರಚರಣದಲಿ ಚರಿಸಿದ ಅನುಪಮ ಕ್ರಿಯೆಯ ನೋಡಿ ಮನದೊಳು ಸುಪುತಕಾಲದಿ ತೈಜಸನೆ ನೀನೆನ್ನ ಪುಳುಕಾಂಕಿತನ ಮಾಡಿದೇ 1 ಅಮಿತ ಕಾರ್ಯವನೆಸಗೀ ಬಲು ಯಾತನೆಗೊಂಡು ಇಳೆಯೊಳು ಬಾಳೀ ದು- ರ್ಬಲನಾಗಿದ್ದರು ಎನ್ನ ಛಲವು ತೊಲಗಲಿಲ್ಲ ಜಲಜನಾಭನೆ ನೀನೆ ಕರುಣಿಸಿ ಸಲಹದಿರ್ದೊಡೆ ಪ್ರ- ಬಲರೆನ್ನನು ಕವಿದು ಮನಚಂಚಲವ ಪುಟ್ಟಿಸೀ ವಲೀಮುಖನಂತಾಡಿಸುವರೋ ಕಲಿಮಲವನ್ನೆ ಪರಿಹರಿಸುವುದೋ ಮನದಿ ಎಡೆಯು ದುರ್ಲಭವೋ ಒಲುಮೆಯಿಂದಲಿ ಸಾಧಿಸಲು ಎಲ್ಲೆಡೆಯ ಸರ್ವತಂತ್ರ ಸ್ವಾತಂತ್ರ್ಯ ನಿನ್ನದೋ ಭೋ ಜಗತ್ಪತೇ ಕಾಲನಾಮಕ ನೀನೆ ಆಪತ್ಕಾಲಬಾಂಧವವೆಂದು ನಂಬಿದೆ ಜಾಲಮಾಡದೆ ಎನ್ನ ಜೀವಿತದಲ್ಪಕಾಲದಿ ಕರುಣೆ ತೋರೈ2 ತುಷ್ಟನೆಂತಾಗುವೆಯೊ ಭ್ರಷ್ಟಪಾತಕಿ ನಾನು ಕಷ್ಟವಲ್ಲವೋ ನಿನಗೆ ಶ್ರೇಷ್ಟಮೂರುತಿಯೆ ಇಷ್ಟಮೂರುತಿಯೆಂದು ಇಷ್ಟು ನುಡಿದೆನೊ ಸಾಷ್ಟಾಂಗ ನಿನ್ನೊಳು ಇರಲೋ ಇಷ್ಟೇ ಎನ್ನದೊ ದೇವಾ ಕಷ್ಟಕಷ್ಟವೊ ಬೆಟ್ಟದೊಡೆಯ ಕೊಟ್ಟುದಷ್ಟು ನಿನ್ನದಯ್ಯಾ ಇಷ್ಟೆಬೇಡುವೆ ಎನಗೆ ಎ- ಳ್ಳಷ್ಟು ಭಕುತಿಯ ಕೊಡದಿರುವೆಯಾ ಸೃಷ್ಟಿಸ್ಥಿತಿಲಯನಿಯಮನಾದ್ಯಷ್ಟ ಕತೃತ್ವವು ನಿನ್ನದೊ ಅಷ್ಟಾಂಗಯೋಗದಿ ತುಷ್ಟಪಡಿಸೆ ತನುಮನೋಧಿಷ್ಟಾನವು ನಿನ್ನದೊ ಶ್ರೇಷ್ಠಮೂರುತಿ ಸುಲಭದಲಿ ನೀ ದೃಷ್ಟಿಗೋಚರವಾಗುವುದು ಇನ್ನೆಂತೋ ಹಾ ಕಷ್ಟಕಷ್ಟವೋ ಸೃಷ್ಟಿಯೊಳು ನಾನೆಷ್ಟರವ ನಿನ್ನಿಷ್ಟಬಂದಂತಾಗಲಿ ಭವ- ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಇನ್ನುಪೇಕ್ಷೆಯ ಮಾಡೆ ಎನ್ನ ಕಾಯುವರಿಲ್ಲ ಮನ್ನಿಸಿ ಸಲಹೊ ದಯದಿ ಪ ಆಪನ್ನ ಪರಿಪಾಲ ಶ್ರೀನಿವಾಸ ಅಖಿಳಾಮರೇಶ | ಶ್ರೀಶಾ ಅ.ಪ ಕ್ರೂರತರ ಸಂಸಾರ ದಾವಾಗ್ನಿ ಮೇರೆಯಿಲ್ಲದೆ ಸುಟ್ಟು ಘೋರ ದುಃಖ ಬಿಡಿಸುತಿಹುದೊ ವಾರಿಜಾಕ್ಷ ನಿನ್ನ ನಾಮಾಮೃತವೆಂಬ ಮಳೆಗರೆದು ಹರಸಿ ಪೊರೆಯಯ್ಯ | ಜೀಯ 1 ಸತಿಸುತರ ಹಿತಕಾಗಿ ಅತಿ ನೀಚವೃತ್ತಿಲಿ ನಡೆದು ಪತಿತ ನಾನಾದೆನಯ್ಯ ಪತಿತಪಾವನ ನಿನ್ನ ಕಥೆಗಳನು ನುಡಿಸಿ ಸ- ದ್ಗತಿಯ ಪಾಲಿಸಯ್ಯ | ಪ್ರೀಯ 2 ಆರು ಮಂದಿಗಳೆಂಬ ವೈರಿಗಳೆನ್ನನು ಸೇರಿ ಗಾರು ಮಾಡುತಲಿಹರೊ ಕಂಸಾರಿ ಸೇರಿದೆ ಪರಿಹರಿಸೊ ಕಷ್ಟ | ನಿನ್ನಿಷ್ಟ 3 ಪಶುಪತಿ ಘುಡುಘುಡಿಸಿ ವ್ಯಸನದಿಂ ಕೊಲ್ಲುತಿಹುದೋÀ ಶ್ವಸನ ಅಂತರ್ಯಾಮಿ ನಿಶಾಚರ ವೈರಿ ವಶಮಾಡಿ ಎನ್ನ ಪೊರೆಯೊ | ಕಾಯೊ 4 ಅತಿತ್ತ ಪೋಗದಲೆ ಹಿತವಾದ ಚಿಂತೆಯೊಳು ರತನಾಗಿ ಖತಿಗೊಳ್ಳುತಿಹೆನೊ ಸ್ಮøತಿಯಿತ್ತು ಪಾಲಿಸೊ | ಸಲಿಸೊ 5 ಒಂದು ಕ್ಷಣವಾದರು ಕುಂದು ಮಾಳ್ಪಾಲೋಚನೆ ಯಿಂದ ಮನ ಹಿಂದಾಗದೊ ಆನಂದ ಮುನಿವಂದ್ಯ ದ್ವಂದ್ವತಪ ಪಾದದಿ ಮನ ಹೊಂದುವಂದದಿ ಮಾಡೊ | ಎನ್ನ ಕೂಡೊ 6 ಐಹಿಕ ಸುಖ ಬಯಸಿ ಲೋಕದ ವಿಹಿತಗಳೆಲ್ಲ ಮರೆದೆ ತಲ್ಪ ವಿಜಯರಾಮಚಂದ್ರವಿಠಲ ಪಾಹಿ ಸತತಯೆನ್ನ | ಮುನ್ನ 7
--------------
ವಿಜಯ ರಾಮಚಂದ್ರವಿಠಲ
ಇಷ್ಟೇ ದಯ ಮಾಡಬಾರದೇ ಸೃಷ್ಟಿಕರ್ತಾ ಜಗದ್ರಕ್ಷಾ ವಿಶ್ವನಾಥಾ ಇಷ್ಟೇ ದಯ ಮಾಡಬಾರದೇ ಪ ದುಷ್ಟ ವಿಷಯದೊಳಗೆ ಬೆರೆತೆ ಸೃಷ್ಟೀಶ ನಿನ್ನನೆ ಮರೆತೆ ಭ್ರಷ್ಟ ಮನವನಳಿದು ನಿನ್ನಿಷ್ಟ ಭಕ್ತರೊಳಗೆ ದುಡಿಸುನಿ 1 ನಿನ್ನದೆಂಬಿ ಮರುಳು ಹಿಡಿದು ಅನ್ನಿಗರನು ಕಾಡಿ ತರಿದು ಕುನ್ನಿಮನುಜನಂತೆ ಬಾಳ್ದೆ ಘನ್ನನೆ ರಕ್ಷಿಸು ನಾ ಬೇಡ್ವೆ 2 ಕಾಲ ಕಳೆದೆ ಪರರ ಬೇಡಿ ಹೊಟ್ಟೆ ಪೊರೆದೆ ನರಸಿಂಹವಿಠ್ಠಲನರಿಯದೆ ಕರುಣಾನಿಧಿ ಬೇಡದೆ ಪೋದೆ 3
--------------
ನರಸಿಂಹವಿಠಲರು
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಕರವ ಮುಗಿದು ಪ ಅಷ್ಟಸೌಭಾಗ್ಯ ಕೊಟ್ಟು ನೀ ಎನ್ನ ಕಟ್ಟುಬಿಡಿಸೆಂದು ಬೇಡೆನೊ ಕೃಷ್ಣರಾಯ 1 ಸೃಷ್ಟಿಗೊಡೆಯ ನಿನ್ನಿಷ್ಟವಿದ್ದಂತಾಗಲಿ ಶಿಷ್ಟಜನರ ಸಂಗ ಕೊಟ್ಟ ರಕ್ಷಿಸು ಎಂದು 2 ಜ್ಞಾನಿಗಳರಸ ಜಾಣ ಪ್ರಾಣನಾಥ ವಿಠಲರಾಯ ಮಾನಿಯೆಂದೆನಿಸೆಂದು 3
--------------
ಬಾಗೇಪಲ್ಲಿ ಶೇಷದಾಸರು
ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ನಿನ್ನೊರೆಗೆ ನಾ ತಿಳಿಯಲಾರೆ ಪ ಪನ್ನಗಾದ್ರಿವಾಸ ಶ್ರೀಹರೆ ಅ.ಪ. ಮಾನವ ನಾನು ಎನ್ನಿಂದ ಸಾಧ್ಯವಿರೆಇನ್ನೂ ಹೆಚ್ಚು ಹೆಚ್ಚು ಭಕುತಿಯನ್ನು ಬೇಡ ಬೇಡ 1 ಬೊಮ್ಮಾದಿ ದೇವತೆಗಳು ಅಮ್ಮ ಲಕುಮಿಯ ಸಹನಿಮ್ಮನ್ನು ತಿಳಿಯರಿನ್ನು ತಿಳಿವ ಹಮ್ಮು ನನಗೇಕೆ ಶೌರೇ 2 ಅನ್ಯಜೀವಿಯಂತರಂಗ ಎಂದೂ ತಿಳಿಯಲಾರೆ ನಾನುಇನ್ನು ಸರಸಿಜಾಮನೊಡಲ ನಿನ್ನ ತಿಳಿವುದೆಂತಹನೇ 3 ಇಷ್ಟೇ ಭಕುತಿಯಿಂದ ನೀನು ತುಷ್ಟನಾಗಿ ಸಲಹಬೇಕುಎಷ್ಟು ಕಷ್ಟಪಟ್ಟರೂ ನಿನ್ನಿಷ್ಟಕೆ ಸರಿ ಹೋಗುವದೆಷ್ಟು 4 ಭಕುತಿಯಲ್ಲಿ ಸತತವಿರಲು ಶಕುತಿಯನ್ನುನ್ನೀಯೊ ಎನಗೆಸಕಲ ಜಗದಿ ಮೆರೆವ ಗದುಗು ವೀರನಾರಾಯಣ5
--------------
ವೀರನಾರಾಯಣ
ಪರಿಪಾಹಿ ಪದ್ಮಸಂಭವ | ದೇವ ದೇವ ಪ ಕರುಣಾಂಬುನಿಧೆ ತವ ಚರಣವನ್ನು ನಂಬಿದವರ ಅ.ಪ ಸೃಷ್ಟಿಸ್ಥಿತಿಲಯವ ನಿನ್ನಿಷ್ಟದಂತೆ ಮಾಡಿ ಪರ- ಮೇಷ್ಟಿ ಪದದಲಿ ಬಹು ಶ್ರೇಷ್ಠನಾಗಿ ಶೋಭಿಸುವ 1 ಮೂರುಲೋಕಗಳಿಗೆ ಆಧಾರ ನೀನೆ ಎಂದು ನಿನ್ನ ಸಾರ ಸುಖವ ಕೊಡುವ ದೇವ 2 ಗುರುರಾಮವಿಠಲನ ಬಸುರೊಳು ಬಂದವನೆ3
--------------
ಗುರುರಾಮವಿಠಲ
ಪಾಹಿ ಶ್ರೀ ಉರಗಾದ್ರಿವಾಸವಿಠಲನೇ ಮದ್ಹøಯರಾಂತರಾತ್ಮ ವಿಠಲನೇ ಸಲಹೊ 1 ದೇಹದಲಿ ನಲಿವ ತಾಂಡವ ಕೃಷ್ಣವಿಠಲನೆ ನಿನ್ನಿಷ್ಟ ಭಕುತರ ಮನೋಭೀಘ್ಟವನೆ ಸಲಿಸಯ್ಯ 2 ವಂದಿಪೆ ತಂದೆ ವೇಂಕಟೇಶ ವಿಠಲ ಬಂದು ದಯವೀಯೋ ಜಯಾಪತಿವಿಠಲ ಬಂಧ ಮೋಚಕ ಶಾಂತೀಶ ವಿಠಲನೆ ನಿನ್ನ ಸಂದ ಭಕುತರ ಕಾಯ್ವ ಗಜವರದವಿಠಲ3 ಶೇಷ ಶಯನ ವಿಠಲ ದೋಷರಾಶಿಯ ಕಳೆದು ಮನದಾಶಯ ಸಲಿಸಯ್ಯ ಹರಿವಿಠಲ ಶೈಶವದಿ ಕಾಯ್ದಂತೆ ಧೃವತವರದವಿಠಲನೆ ಈಸಮಯದಲ್ಲೆ ಗುರುವಾಸುದೇವ ವಿಠಲ 4 ವರದ ಲಕ್ಷ್ಮೀ ರಮಣವಿಠಲನೆ ಎನ್ನ ಅವಿದ್ಯೆಯನೆ ಹರಿಸೊ ಪ್ರದ್ಯುಮ್ನವಿಠಲ ಪರಮಪುರುಷಾ ವರದ ವೇಂಕಟೇಶ ವಿಠಲನೆ ಪರಮ ಸಾಧನ ನೀಡೋ ಸುಜ್ಞಾನವಿಠಲ 5 ಶ್ರೀನಾಥವಿಠಲನು ತೈಜಸನು ನೀನೆ ದೀನರಕ್ಷಕ ಭಾರತೀಶಪ್ರಿಯ ವಿಠಲ ಪರಮಪಾವನ ಕಾಯೊ ವರಹವಿಠಲ ಮೂರ್ತೆ ವರಮತಿಯ ನೀಡೊ ಆನಂದಮಯವಿಠಲ 6 ವಿಜ್ಞಾನಮಯ ಮನದ ಅಜ್ಞಾನವನು ಹರಿಸೊ ಸ- ರ್ವಜ್ಞ ನೀನೇ ಶ್ರೀ ಪ್ರಾಜ್ಞವಿಠಲನೆ ಯಜ್ಞ ಭುಗ್ಯಜ್ಞ ಸಾಧಕನು ನೀ ಜಗದ್ಭರಿತ ವಿಠಲ ನೀನೆನ್ನ ಸಲಹೊ 7 ಶುಧ್ದ ಮೂರುತಿ ಶ್ರೀ ವಿಜ್ಞಾನಮಯ ವಿಠಲ ಸರ್ವಕಾರ್ಯದಿ ಮನಶುದ್ಧಿಯ ನೀಡೋ ಮಧ್ವಗುರು ಶ್ರೀಕೃಷ್ಣ ದ್ವೈಪಾಯನ ವಿಠಲ ಮದ್ಭಾರ ನಿಳುಹಿ ನೀ ಉದ್ಧ್ದಾರ ಮಾಡೊ8 ರಕ್ಷಿಸೊ ಲಕ್ಷ್ಮೀಶ ವಿಠಲನೆ ಎನ್ನ ಮನ ದಕ್ಷಿಯೊಳು ನೆಲೆಸೊ ಶ್ರೀ ವೇಂಕಟೇಶವಿಠಲ ಕುಕ್ಷಿಯೊಳು ಬ್ರಹ್ಮಾಂಡ ರಕ್ಷಿಪ ಶ್ರೀರಮಣ ವಿಠಲ ನಿನ್ನದಾಸದಾಸ್ಯವÀ ದೇಹಿ 9 ಶರಣ ಜನ ಪ್ರೀಯ ಶ್ರೀವರದ ವಿಠಲ ದೇವಾ ದುರಿತಾರಿ ಪನ್ನಂಗಶಯನ ವಿಠಲ ಗುರೋರ್ಗುರುಗೋವಿಂದವಿಠಲ ಪಾಹಿ 10 ವರ ತಂದೆ ಮುದ್ದು ಮೋಹನ ವಿಠಲಾತ್ಮಕ ಶ್ರೀ ಉರಗಾದ್ರಿ ವಾಸವಿಠಲ ಸ್ವಾಮಿ ಶರಣರಿಗೆ ಆಯುe್ಞರ್Áನ ಸಂಪತ್ ಭಕ್ತಿಸಾಧನೆಗಳಿತ್ತು ಸಲಹೊ11
--------------
ಉರಗಾದ್ರಿವಾಸವಿಠಲದಾಸರು
ಮಧುಹರನಿಗರ್ಪಿತವು ಸರ್ವಕರ್ಮ ಪ ಕರ್ಮ ಅನುಭವವು ಅ.ಪ ಸ್ಮøತಿ ವಿಸ್ಮøತಿಯಲ್ಲಿ ಕೃತ ಉತ್ತಮಾಧಮ ಕರ್ಮ ಮತ್ತೆ ಅನುಭವಿಸಿದ ಸುಖ ದುಃಖಗಳಿಗೆ ಚಿತ್ತ ನಿನ್ನದು ಮೂಲ ಸರ್ವ ಸ್ಥಿತಿಗತಿ ಧರ್ಮ ವೃತ್ತಿಗಳಿಗನವರತ ಸತ್ಯ ಸಂಕಲ್ಪನೆ 1 ನೀನಮ್ಮನಿಟ್ಟಪರಿ ನಿನ್ನಿಷ್ಟವಾಗಿರಲು ಎನ್ನಿಷ್ಟವೆನಲ್ಯಾಕೊ ಪ್ರೇಷ್ಠತಮನೆ ವಾಣೀಶ ಹರಸುರರು ನಿನ್ನ ಪ್ರೀತಿಗಾಗಿ ಏನು ಕೊಟ್ಟರು ಮುದದಿ ಉಂಡು ನಿನಗರ್ಪಿಪರೊ 2 ಅಧಿಕಾರಿ ನಾನಲ್ಲದದರಿಂದ ಬೆದರುವೆನು ಮದನನಯ್ಯನೆ ದಯದಿ ಮನ್ನಿಸೆನ್ನ ಉದಯಾಸ್ತ ಕೃತಕರ್ಮ ಜಯೇಶವಿಠಲ ಮುದಖೇದಗಳು ನಿನ್ನ ಪ್ರೀತಿಗೊದಗಲೋ ದೇವ 3
--------------
ಜಯೇಶವಿಠಲ
ಹೆಂಗಳೆಯರು ನಾವು ರಂಗೈಯ್ಯ ಮಾನಂಗಳ ಕಾಯಬೇಕೋ ಭಂಗ ಬಡುವೆವು ಮಂಗಚೇತನದಂಬಿಗನು ವಾಸಂಗಳನು ನೆರೆ ಸೆಳೆದಿಹಾನು ಪ ಗೋಪಿವೃಂದವು ಕೂಡಿ ಚಿತ್ತದ ಸಂತಾಪ ನೀಗಲು ಮಾಡಿ ತೋಷಗೊಳಿಸಲು ಪಾಪಿಯಂಬಿಗ 1 ಬಯಕೆಯಾ ಹಾರವನು ನಾವೆಲ್ಲರು ವಯನಾಗಿ ಕಟ್ಟಿದ್ದೆವೋ ಮಾಡ್ದೆವು ಮತಿಯು ಪೋದುದು ನಯನದಿಂದವುಗಳನೆ ನೋಡದೆ ಬಯಲುಮಾಡಿದೆವಿತ್ತೀಕಂಗೆ 2 ಎಷ್ಟು ಬಳಲುತಿಹೆವೊ ಶ್ರೀಕೃಷ್ಣ ನಿನ್ನಿಷ್ಟಕ್ಕೆ ಬಂದುದೇನೋ ಇಷ್ಟು ಪರಿಯಲ್ಪರಿವುದೇತಕೆ ಇಷ್ಟ ಮೂರುತಿ ಕೃಷ್ಣನೀಗಲೆ ದುಷ್ಟ ಅಂಬಿಗನಂಗ ತೊಲಗಿ ಶಿಷ್ಟ ನರಸಿಂಹ ವಿಠ್ಠಲಾದ 3
--------------
ನರಸಿಂಹವಿಠಲರು