ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟಗಳ ಪರಿಹರಿಸೊ ಶ್ರೇಷ್ಠ ಮಾರುತಿಯೇ ಭ್ರಷ್ಟನಾದೆನು ಭಂಡ ಸಂಸಾರದಲ್ಲೀ ಪ ಸ್ವಾರ್ಥವೆನ್ನುವ ದುಃಖ ಸಾಗರದಿ ಮುಳುಗಿದ್ದು ಸ್ವಾರ್ಥಕೋಸುಗ ಹೀನ ಕೃತ್ಯಗಳ ಗÉೈದೂ ಅರ್ಥವನು ಗಳಿಸುತ್ತ ತುಂಬಿದೆನು ಈ ವಡಲ ವ್ಯರ್ಥವಾಯಿತು ಜನ್ಮ ಸಾರ್ಥವನು ಮಾಡೋ1 ನಿರುತದೀ ಧರ್ಮ ಕರ್ಮಗಳ ತೊಲಗಿದೆನು ಭವದಿ ಸುಖವೆಲ್ಲವೂ ಮಾಯವಾಯಿತು ದೇವಾ ಶರಣರಿಗೆ ತಂದೆ ನೀನೆಂದು ಮೊರೆಹೊಕ್ಕೇ 2 ಪರಹಿತವ ಬಯಸದಲೆ ಕೇಡು ಬಗೆದೆನು ನಿತ್ಯ ಪರಸತಿಯಪೇಕ್ಷಿಯಲಿ ನಿರುತನಾಗಿದ್ದೇ ಅರಿತೆನೀಗಲೆ ನಾನು ಸರ್ವ ನಶ್ವರವೆಂದು ನರಹರಿಯ ನೀರೆರೆಯೊ ಈ ಬಾಡು ಶಶಿಗೇ 3 ಭಕ್ತವತ್ಸಲನೆಂಬ ಬಿರುದ ಪೊತ್ತಿಹೆ ನೀನು ಭಕ್ತಿಯಲಿ ನಾ ನಿಂನ ಸೇವೆ ಮಾಡುವೆನು ಭಕ್ತದಾಯಕಯಂನ ಹಸಿವೆ ತೃಷೆಗಳ ನೀಗಿ ಮುಕ್ತಿಯನು ನೀಡೆನಗೆ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ವನಜನಾಭನ ಅಡಿಯು ಮನುಜಾನೀಪತಿಯು ಪ ಅನುದಿನದೊಳೈತಂದು ಘನಸಿಂಧುಶಯನನು ಮಿಂದು ದ್ವಾದಶಿಯೊಳಿಂದು ಸನುಮತದಿಯರ್ಪಿಸಿದ ಎಡೆಯನು ಘನತರದ ಸಂಭ್ರಮದಿ ಭುಂಜಿಸಿ ಜನಿಸಿ ಭಕುತಿಯನೆನ್ನ ಮನದಿ ಪ್ರ- ಸನ್ನನಾದನು ಎನಿತು ಪೇಳಲಿ 1 ರಕ್ಕಸರಿಗತಿ ವೈರಿ ಮಿಕ್ಕಾನತರ ಸಹಕಾರಿ ಶ್ರೀಹರಿ ಮುರಾರಿ ತಕ್ಕ ವಿಜಯಗೆ ಸಾರಥ್ಯಾಗಿ ಇಕ್ಕರಿಸಿ ಕುರುಪತೀಯನನ್ವಯ ಅಕ್ಕರದಿ ದ್ರುಪದಸುತೆಯ ಸಲಹಿ ರುಕ್ಮಿಣೀಶನು ರಕ್ಷಿಪನು ಸಲೆ 2 ಕರಿವರದ ಶಿರಿಲೋಲಾ ಪರಮಾತ್ಮ ಶ್ರೀಘನಲೀಲಾ ಜರರಹಿತ ವಿಮಲಾ ನಿರುತದೀಪರಿ ಸ್ಮರಿಪ ನರನಿಗೆ ಕರುಣಸಾಗರನಾಗಿ ಸುರವರ ತ್ವರಿತದೀವನು ಹರಸಿ ವರಗಳ ಹರಗೊಲಿದ ನರಸಿಂಹವಿಠಲಾ 3
--------------
ನರಸಿಂಹವಿಠಲರು