ಒಟ್ಟು 7 ಕಡೆಗಳಲ್ಲಿ , 6 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಕೌಸಲ್ಯಾಗರ್ಭಾಬ್ಧಿಸೋಮಾ ಸ್ವಾ'ು ಕೌಶಿಕ ಮಖಪಾಲ ರಾಮ ಪಆಶಯೇಶಯ ಜನಕ ಪಾಪ'ನಾಶ ತಾಪಸಹೃದಯ ಕಮಲಾವಾಸ ಭದ್ರ ಗರೀಶ ರಘುಕುಲಭೂಷ ದಶ'ಧ ವೇಷಧಾರಿ 1ತೃತಿಯರಾಮಕೋಟಿ ಕೂಡು ಭಕ್ತತತಿಗೆ ಲಭಿಸುವಂತೆಮಾಡುಪತಿತಪಾವನ ಪದ್ಮನಯನ ಶತಧೃತಿ ಶಿವಸೇವ್ಯಚರಣಾಸತತವೂ ತವಸೇವೆಗೆ ಮನ 'ತವತೋರಿಸಿ ಸಲಹೋ ಶೌರಿ 2ಭರತಪೂರ್ವಜ ದೀನಪ್ರೇಮಾ ದನುಜಹರಣಧುರೀಣ ನಿಸ್ಸೀಮಕರಿಧ್ರುವ ಪ್ರಹ್ಲಾದ ಶಬರೀ ನರಸತಿಪರಮಾರ್ಥದಾಯಕನಿರುಪಮಾನದ ರಾಮಕೋಟಿಯಾಚರಣ ಕೀರ್ತಿಯ ನಿಲಿಸು ಧೊರೆಯೆ 3ಧಾರುಣೀ ಚನ್ನಪಟ್ಣೇಶಾ ಲಕ್ಷ್ಮೀನಾರಾಯಣ ಕಾಯೊ ಶ್ರೀಶಾಮಾರಸುಂದರ ರಾಮನಾಮವ ಹಾರವಾಯಾಗಿ ಸಮರ್ಪಿಸಿದೆವುಕೋರಿಕೆ ಸಪ್ತೋತ್ಸವಂಗಳು ಪೂರ್ತಿಮಾಡುವರೆಂದು ನಂಬಿದೆ 4ಗುರುತುಲಸೀರಾಮಸ್ವರೂಪ ನಿಮ್ಮಕರುಣದಿಂದಲಿಸಾರಿಭೂಪಾಜರುಗಿಸಿದಿರೀ ಜಪಾಧ್ವರವನು ಮುರಹರೀಮದ್ದುರಿತ ಹರಣನೆನಿರತಭಕ್ತಿಯ ಕೊಟ್ಟು ಪ್ರಜಗಳುನುದ್ಧರಿಸುವ ಕರ್ತವ್ಯ ನಿನದೇ 5ಭೂ'ುಜನರ ಗರುಡುತುರಗಾ ರಂಗಸ್ವಾ'ುದಾಸೊಲ್ಲಾಸಾ ಈಗಪ್ರೇಮ ತೋರಿಸಬೇಕು ಬೇಡುವೆ ಕಾ'ುತಾರ್ಥದ ಕಲ್ಪಭೂಜಸೋಮಜಿತಮುಖ ಸಕಲ ಸುಗುಣಸ್ತೋಮ ತುಲಸೀದಾಮ ಧರಣಾ * 6* 20-8-1933 ಎಂದು ದಿನಾಂಕ ಇದೆ.(ಈ) ರಂಗಸ್ವಾ'ುದಾಸರನ್ನು ಕುರಿತ ಕೆಲವು ಕೃತಿಗಳು
--------------
ಮಳಿಗೆ ರಂಗಸ್ವಾಮಿದಾಸರು
ಚೋದ್ಯ ಚೋದ್ಯ ಸರ್ವದ ವೇದ ವೇದ್ಯ ನಂಬಿದ ಭಕ್ತ ಜನರಿಗಾಗುವ ಸುಖಸಾಧ್ಯ ಪ. ಶ್ರೀ ಮಹೀಶ ಸತ್ಯಭಾಮೆಯರರಸ ಸು- ಧಾಮ ತಂದವಲಕ್ಕಿ ಪ್ರೇಮದಿಂದಲಿ ಮೆದ್ದ 1 ಅಂಡಜವಾಹ ಬ್ರಹ್ಮಾಂಡಗಣಾತತ ಪಾಂಡುಕುವರನಿಗಾದನು ಭಂಡಿಸೂತ 2 ಆದರೀ ಕೃತಮಾಯ ಕೃತ್ಯಕದಂಡ ಸ- ನ್ಮುದದಿಂದ ವಿದುರನ ಮನೆಯ ಪಾಲುಂಡ 3 ಶ್ರೀವರೀವರಿಯಿಂದ ಸರಸಮಾಡುತಲಿರೆ ಗೋಪಿಯರಿಗೆ ಮೆಚ್ಚಿ ಗೋವುಗಳ ಕಾಯ್ದ 4 ಗೊಲ್ಲರ ಹುಡುಗರ ಪೆಗಲೇರಿ ಮೆರೆದ 5 ಘೋರ ಸಂಸಾರಪಹಾರಿ ನಾರದ ವಂದ್ಯ ಜಾರ ಚೋರ ಕೃತ್ಯ ತೋರಿದ ವರದ 6 ಮಾನವ ದೈತ್ಯ ಗಣರಿಗಾಧಾರ ಮ- ತ್ತಾವ ಕಾಲಕು ಭೇದಭೇದವ ಸೇರಾ 7 ತೇಜಸ್ತಿಮಿರಾದಿ ಸೋಜಿಗ ಶಕ್ತಿಮ- ಹೋಜಸನೀತ ಪರಾಜಯ ರಹಿತಾ 8 ಪರದೇಶಿಯ ಮೇಲೆ ಕರುಣ ಕಟಾಕ್ಷದಿ ಸಿರಿಯೊಡಗೂಡಿ ಬಂದಿರುವ ಶೃಂಗಾರ 9 ಸರ್ವಕಾಲದಿ ತನ್ನ ನೆನವಿತ್ತು ದುಷ್ಕøತ ಪರ್ವತಗಳ ಪುಡಿ ಮಾಡುವ ಧೀರ 10 ತನಯನ ಕಲಭಾಷೆ ಜನನಿ ಲಾಲಿಸುವಂತೆ ಸಾರ 11 ಪೋರಭಾವವ ಶುಭವೇರಿಸುವನು ತುಷ ವಾರಿಯು ಗಂಗೆಯ ಸೇರುವಾಕಾರ 12 ವಿದ್ಯ ಬುದ್ಧಿಗಳಿಲ್ಲದಿದ್ದರು ದಾಸರ ನಿರವದ್ಯ ಬೇಗದಲಿ 13 ಸನ್ನುತ ಕರ್ಮವ ಮನ್ನಿಸನೆಂದಿಗು ಮುರನರಕಾರಿ 14 ಚಿಂತಾಕ್ರಾಂತಿಗಳಿರದಂತೆ ಸರ್ವದ ನಿ- ರಂತರ ಪೂಜೆಗೊಂಬರ ಚಕ್ರಧಾರಿ 15 ನಿರುಪಮಾನಂದ ನಿರ್ಭರ ಪುಣ್ಯಮೂರ್ತಿ ಶ್ರೀವರ ಶೇಷ ಭೂಧರವರನ ಸತ್ಕೀರ್ತಿ 16
--------------
ತುಪಾಕಿ ವೆಂಕಟರಮಣಾಚಾರ್ಯ
ದೇವಾದಿ ದೇವ ನೀನವಧರಿಸು ಭಿನ್ನಪವ ಪ ಈ ವಿವಿಧ ಸುರರೊಳಗೆ ಸರಿಯಲ್ಲ ನಿನಗೆ ಅ.ಪ. ಸರಸಿಜಾಸನ ಶಂಭು ಮೊದಲಾದ ಸುರರೆಲ್ಲಾ ಪರತಂತ್ರರವರಲಿ ಕೊರತೆಯುಂಟು ನಿರ್ದೋಷ ನಿರವಧಿಕ ಕಲ್ಯಾಣಗುಣಪೂರ್ಣ ನಿರ್ದುಃಖ ನಿರತಿಶಯ ನಿರುಪಮಾನಂದಾತ್ಮ ಸರ್ವಜ್ಞ ಸರ್ವೇಶ ಸರ್ವತಂತ್ರ ಸ್ವತಂತ್ರ ಸರ್ವವಸ್ತುಗಳಲಿ ಸರ್ವದಾ ಪರಿಪೂರ್ಣ ಪರಿಪೂರ್ಣಕಾಮ ನಿನ್ನುರದಲೆನಗೆ ಸ್ಥಿರವಾಸಕೆಡೆಯ ನೀ ಕರುಣದಿಂದಿತ್ತು ಹರುಷಪಡಿಸುವುದೆನ್ನ ಶರಧಿಮಂದಿರನೆ ಗಿರಿಯ ಧರಿಸಿದೆ ಕರಿಗಿರೀಶನೆ
--------------
ವರಾವಾಣಿರಾಮರಾಯದಾಸರು
ಶ್ರೀ ಸತ್ಯಪರಾಯಣರು ನೋಡು ಮನವೆ ಸತ್ಯಪರಾಯಣರ ಪದಗಳ ಬೇಡು ಬೇಡು ಬೇಡಿದಿಷ್ಟವೀವ ಯತಿಗಳ ಪ ಮಾರುತಿಯ ಬಲದಿ ದಕ್ಷಿಣ ದೇಶವ ಜೈಸಿದಾ ಸಾರಸಚ್ಛಾಸ್ತ್ರವನ್ನು ಸ್ಥಿರವಗೊಳಿಸಿದಾ ನಾರಾಯಣನ ಜಗತ್ಕಾರಣನೆನಿಸಿದಾ ಧೀರ ಸತ್ಯಸಂತುಷ್ಟ ಕುವರನೆನಿಸಿದಾ 1 ಭೀಮಸೇನ ಸನ್ಮತ ಸರಿಯಾಗಿ ನಡಿಸಿದಾ ಪ್ರೇಮದಿಂದ ರಘುಜಿಗೆ ವನಮಾಲೆ ಮುಡಿಸಿದಾ ತಾಮಸ ಮತದವರ ಮತವ ಮುರಿದು ಹಾಕಿದಾ ರಾಮನ್ನಾಮ ನುಡಿಸಿ ನುಡಿಸಿ ಹರುಷಬಡಿಸಿದಾ2 ವರ ಕದರುಂಡಲಗೀಶನ್ನೊಡೆಯ ರಾಮನ್ನ ನಿರುಪಮಾನಂದ ತೀರ್ಥ ಸುಪ್ರೇಮನ್ನ ಕರುಣದಿಂದ ಶಿಷ್ಯನಾಗಿ ಸಂದೋಹಪಾಲನ್ನ ಸ್ಮರನ ಜನಕಾ ಪಾಂಡುರಂಗನ ಸ್ಮರಿಪ ಲೋಲನ್ನ 3
--------------
ಕದರುಂಡಲಗೀಶರು
ಶ್ರೀರಾಮ ಜಯರಾಮ ಶ್ರೀರಾಮರಾಮ ಕಾರುಣ್ಯ ನಿಧಿರಾಮ ಕೌಸಲ್ಯ ರಾಮ ಪ ಜಾನಕೀ ಪತಿರಾಮ ಜಯರಘುರಾಮ ಜಾನ್ಹವೀ ಪಿತರಾಮ ಸರ್ವೇಶರಾಮ 1 ಭಯ ನಿವಾರಣರಾಮ ಪಾವನರಾಮ ನಯಗುಣ ಶ್ರೀರಾಮ ನರಹರೇ ರಾಮ 2 ತ್ರಿಜಗ ಮೋಹನ ರಾಮ ದಿವಿಜೇಶರಾಮ ಅಜಭವನುತರಾಮ ಆನಂದರಾಮ 3 ಭುವನ ಪಾಲಕರಾಮ ಭೂಪತೆ ರಾಮ ಸವನ ರಕ್ಷಕರಾಮ ಶತ್ರುಘ್ನ ರಾಮ 4 ಭವ ವಿಮೋಚನ ರಾಮ ಪದ್ಮಾಕ್ಷರಾಮ 5 ವೈದೇಹಿ ಪತಿರಾಮ ವೈಕುಂಠರಾಮ ವೇದಗೋಚರ ರಾಮ ವೆಂಕಟೇಶರಾಮ 6 ಮಂಗಳಾತ್ಮಕರಾಮ ಮಾಧವರಾಮ ಶೃಂಗಾರ ಶೇಖರರಾಮ ಶ್ರೀರಾಮ ರಾಮ7 ದಶರಥಸುತರಾಮ ದನುಜಾರಿರಾಮ ಕುಶಲವ ಪಿತರಾಮ ಕೋದಂಡರಾಮ 8 ಕರುಣಸಾಗರ ರಾಮ ಕಾಕುಸ್ಥರಾಮ ಶರಧಿಶಯನ ರಾಮ ಶಾಶ್ವತರಾಮ9 ಶ್ರೀಕರಾವ್ಹಯರಾಮ ಶ್ರೀಧರರಾಮ ಪಾಕಾರಿಸುತ ರಾಮ ಪರಮೇಶರಾವÀು 10 ಮಧುರ ಭಾಷಣರಾಮ ಮಧುವೈರಿರಾಮ ಮದನಾರಿನುತರಾಮ ಮೌನೀಶರಾಮ 11 ಸತಿ ಶಾಪ ಖಂಡನ ರಾಮ ಪಾತಕ ಹರ ರಾಮ ಪ್ರಖ್ಯಾತ ರಾಮ12 ರಾಮ ಗರ್ವವಿರಾಮ ರಾಮಾಭಿರಾಮ ಸೌಮಿತ್ರಿವರರಾಮ ಸೌಂದರ್ಯರಾಮ 13 ಸುಗ್ರೀವಸಖರಾಮ ಶುಭಕರ ರಾಮ ಅಗ್ರಜಾಧಿಪ ರಾಮ ಅಮಿತಬಲರಾಮ 14 ಅನ್ಯಮಾನಸರಾಮ ರಘುರಾಮ ಇನಕುಲೇಶ್ವರ ರಾಮ ವಿಭುದೇಂದ್ರರಾಮ 15 ಚಾರು ಚರಿತ ರಾಮ ಜಯಜಯ ರಾಮ ಮಾರುತಾತ್ಮಜ ವಂದ್ಯ ಮಾನಿತರಾಮ 16 ವಾಲಿ ಮರ್ದನರಾಮ ವರದಶ್ರೀರಾಮ ಫಾಲಾಕ್ಷ ಸಖರಾಮ ಭದ್ರಶ್ರೀರಾಮ 17 ಸೇತುಬಂಧನ ರಾಮ ಚಿನ್ಮಯರಾಮ ಸೀತಾಪತೆ ರಾಮ ಜಿತದೈತ್ಯ ರಾಮ 18 ನತವಿಭೀಷಣರಾಮ ನಗಧರ ರಾಮ ಚತುರಾಶ್ಯಪಿತ ರಾಮ ಚಂದ್ರಶ್ರೀರಾಮ 19 ಮಾರೀಚ ಮದಭಂಗ ಮಹಾದೇವರಾಮ ವೀರಾಗ್ರಣೀರಾಮ ವಿಶ್ವೇಶರಾಮ 20 ರಾಮರಾಮ ರಾಮರಾಮ ಶ್ರೀರಾಮ ಕಾಮಿತಾರ್ಥಪ್ರದ ಕಲ್ಯಾಣರಾಮ 21 ಅಗಣಿತ ಮಹಿಮ ವಿಲಾಸ ಶ್ರೀರಾಮ ನಿತ್ಯ ಶ್ರೀರಾಮ 22 ಕಂಬುಕಂಧರ ರಾಮ ಘನತರರಾಮ ಕುಂಭಕರ್ಣಾಂತರ ಗೋವಿಂದರಾಮ 23 ಸುಜನ ಹೃತ್ಕಮಲ ಭಾಸುರ ಸೂರ್ಯರಾಮ ನೃಪತಿ ಶ್ರೀರಾಮ 24 ಲೀಲಾ ಮನುಜ ವೇಷ ರಿಪು ಜೈತ್ರರಾಮ ಪ್ರಕಟ ಪರಾಕ್ರಮ ರಾಮರಾಮ ಶ್ರೀರಾಮ 25 ಅಕಲಂಕ ನಿರುಪಮಾನ ಸಹಾಯ ರಾಮ ಭಕ್ತವತ್ಸಲ ದೀನ ಬಂಧು ಶ್ರೀರಾಮ 26 ಮುಕ್ತಿದಾಯಕ ರಾಮ ಪೂಜಿತರಾಮ ದಶಕಂಠ ಮರ್ದನ ತಾರಕನಾಮ 27 ಶಶಿಬಿಂಬ ವದನ ದಾಶರಥಿ ಶ್ರೀರಾಮ ನಾರಾಯಣಾಚ್ಯುತಾನಂತ ಶ್ರೀರಾಮ 28 ವಾರಿಜೋದರ ಶ್ರೀನಿವಾಸ ಶ್ರೀರಾಮ ಹರಧನುರ್ಭಂಗ ದಯಾನಿಧೆ ರಾಮ 29 ಪುರುಷೋತ್ತಮ ಪುರಾಣ ಪುರುಷ ಶ್ರೀರಾಮ ಸರ್ವಲೋಕ ಶರಣ್ಯ ಸೌಭಾಗ್ಯರಾಮ 30 ಶರ್ವರೀಚರ ಹರಕ್ಷ್ಮಾಪತೇರಾಮ ಸರಶಿಜನಾಭ ದಾಶಾರ್ಹ ಶ್ರೀರಾಮ 31 ಶರಣಾಗತ ತ್ರಾಣ ಶರಣು ಶ್ರೀರಾಮ ಮೂರ್ತಿ ಶ್ರೀರಾಮ 32 ಬುಧ ಜನಾಧಾರ ಸರ್ವೋತ್ತಮರಾಮ ವರ ಹೆನ್ನೆಪುರನಿವಾಸ ಶ್ರೀರಾಮ 33 ನರಸಿಂಹ ಭಕ್ತ ಚಿಂತಾಮಣಿ ರಾಮ ಇಷ್ಟದಾಯಕ ಹೆನ್ನೆ ವಿಠಲರಾಮ 34 ಕಷ್ಟ ರಕ್ಷಿಸುಯನ್ನ ಶ್ರೀರಾಮರಾಮ ಕುಜನವನ ಕುಠಾರ ಕೋವಿದ ರಾಮ 35
--------------
ಹೆನ್ನೆರಂಗದಾಸರು
ಮಂಗಲಂತ್ರಿಪುರಸುಂದರಿ ಬನ ಶಂಕರಿಗೆ |ಮಂಗಲಂ ಸನ್ನಿಧಿಯ ಕೌಮಾರಿಗೆ |ಮಂಗಲಂ ಭ್ರಮರಾಂಬದೇವಿ ಚೌಡೇಶ್ವರಿಗೆ |ಮಂಗಲಂ ಶ್ರೀ ಲಕ್ಷ್ಮೀ ಮಹಾ ಮಾಯಿಗೆ | ಮಂಗಲಂ ಜಯಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಕಮಲದಳ ನಯನಿಗೆ ಕಮಠಾವಲೋಚನೆಗೆ ವಿಮಳವರವೀವ ಚೂಡಿದರಕೊರಳಿಗೆ |ದ್ಯುಮಣಿಶಶಿಕಿರಣದ ಶ್ರವಣ ಭೂಷಣಿಗೆ ಭ್ರಮರಾರಿ ನಾಸಿಕದಮಣಿಮೌಕ್ತಿಗೆ ಮಂಗಲಂ ಜಯಶುಭಮಂಗಲಂ1ಓಂಕಾರ ವದನಿಗೆ ವೇದಾಂತ ರದನಿಗೆ |ಪಂಕವಿರಹಿತದ ಚಿದ್ರಸ ಜಿವ್ಹೆಗೆ |ಅಂಕದಲಿ ಬ್ರಹ್ಮಪೀಯೂಷರಸ ಸುರಿವ ರುಣದಂಕುರಿಪಪವಳಮಣಿರುಚಿಯ ಧರಿಗೆ ಮಂಗಳ2ಕನಕಕಲಶ ತೋಳಿಗೆ ಕಲಶ ಕುಚಯುಗಳಿಗೆ |ಚಿನಕ ಪೂರ್ವಣ್ಯ ಕಂಚುಕದ ರುಚಿಗೆ ಸನಕಾದಿಗಳತಲೆಯ ಮೇಲಿಡುವ ಹಸ್ತಯುಗ ವನಜೆಶ್ರೀದೇವಿಯಂಗುಲಿಯ ನಖಕೆ ಮಂಗಳ3ಹಸ್ತದಾಭರಣಿಗೆ ಕೊರಳ ಭೂಷಣಿಗೆನಿಜನಿತ್ಯಮಂಗಳಿಗೆಹಾಟಕವರ್ಣಿಗೆ |ರತ್ನ ಬೈತಲಿಗೆ ವಜ್ರಾಣಿ ಪಾರಂಗಣಿಗೆ ನಿಜ |ಮುತ್ತಿನ ಬೊಟ್ಟು ಕುಂಕುಮದ ಫಣಿಗೆ ಮಂಗಳ4ಮರಗು ಮಲ್ಲಿಗೆ ಮುಡಿಗೆ ದುಂಡ ದಂಡಿಯತಲೆಗೆ ಕೊರಳ ಹಾರವ ತುದಿಯ ಕಾಲಿಂದಿಗೆ |ಪರಿಕ್ರಮದ ತಾಂಬೂಲವದನನಸು ನಗೆ ಮೊಗದಪರಿಮಳದ ಘನಸಾರತನುಲೇಪಿಗೆ | ಮಂಗಳ5ಪರಬ್ರಹ್ಮರೂಪಿಗೆ ಪರಾತ್‍ಪರ ಶಂಕರಿಗೆ ನಿರುಪಮಾನಂದಶ್ರೀ ಮಹಾಲಕ್ಷ್ಮಿಗೆ | ಶಿರಸ ಪೂಜೆಯ ಅರಳು ಮಲ್ಲಿಗೆಯುಕೃಪೆಯಿಂದಜರಿದುಉದರಿದವು ಗಿರಿದ್ವಾರದಲ್ಲಿ ||ಮಂಗಳ6
--------------
ಜಕ್ಕಪ್ಪಯ್ಯನವರು