ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಮೋಹನ ತುಪಾಕಿಯನು ಪಿಡಿದು ಹಸ್ತದಲಿ ಚೆನ್ನಾಗಿ ಶೃಂಗರಿಸುವೆ ಪ ಭಿನ್ನಭಾವನೆಯ ಕಳಿದುಳಿದು ಕೋವಿಗೆ ಮತ್ತೆ ಇನ್ನು ಜೋಡಿಲ್ಲವೆಂದು ಇಂದುಅ.ಪ. ಪ್ರೇಮರಸವೆಂಬ ಜಲದಲಿ ತೊಳೆದು ಶುಚಿಮಾಡಿ ನೇಮವೆಂದೆಂಬ ನಿರ್ಮಲವಾಗಿಹ ಆಮಹಾಕನಕ ರಜತದ ಭೂಷಣವ ತೊಡಿಸಿ ಕಾಮವನು ಸುಟ್ಟು ಮಸಿಮಾಡಿ ತುಂಬುವೆನದಕೆ ಎನ್ನೆ 1 ಹಮ್ಮಮತೆಯೆಂಬ ಗುಂಡನು ಅದರಮೇಲಿರಿಸಿ ಒಮ್ಮನಸು ಎಂಬ ಗಜದಿಂದ ಜಡಿದು ಒಮ್ಮೆ ಗುರುವಾಕ್ಯರಂಜಿಕೆಯ ಕಿವಿಯೊಳಗರದು ಬಿಮ್ಮನೇ ಬಿಗಿದು ಈಕ್ಷಿಸಿ ನೋಡುವೆ ಎನ್ನ 2 ಮೆರೆವ ಸುಜ್ಞಾನ ಜ್ಯೋತಿಯ ಬತ್ತಿಯನು ಕೊಳಿಸಿ ಭರದಿ ಬರುತಿಹ ಅಷ್ಟಮದ ಕರಿಗಳಾ ತರಿದಾರು ವೈರಿವರ್ಗಕೆ ಕೆಡಹಿ ಗುರಿಯಿಂದ ಗುರುವಿಮಲಾನಂದ ರಸಭರಿತನಾಗಿರುವಂಥ 3
--------------
ಭಟಕಳ ಅಪ್ಪಯ್ಯ
ಮಂತ್ರಪುಷ್ಪವ ಸಮರ್ಪಿಸುವೆನೊಲವಿನಲಿಯಂತ್ರವಾಹಕ ನಿನ್ನ ದಿವ್ಯಚರಣದಲಿ ಪಮಂತ್ರಂಗಳುದಿಸಿದವು ಮುಖಕಮಲದಲಿ ನಿನ್ನಮಂತ್ರಗಳ ಬ್ರಹ್ಮನಿಗೆ ಕೊಟ್ಟೆ ನೀ ಮುನ್ನಮಂತ್ರಂಗಳನು ಜಪಿಸಿ ನವಬ್ರಹ್ಮರಾದಿಯಲಿಮಂತ್ರಮೂರ್ತಿಗಳಾದರದರಿಂದಲೀ ವಿಧದ 1ಮಂತ್ರಹೃದಯದಿ ನಿಂದು ಮಂತ್ರಿಸಿದ ಜೀವನನುಮಂತ್ರಾರ್ಥವಸ್ತು ಪರಬ್ರಹ್ಮವನೆ ಮಾಡಿಯಂತ್ರತ್ವವನು ಬಿಡಿಸಿ ಯಂತ್ರಿ ತಾನೆಂದೆನಿಸಿಸಂತತಾನಂದಸಾಗರವ ಸೇರಿಸುವ 2ಹಿಂಸಾದಿ ದೋಷಗಳನುಳಿದು ನಿರ್ಮಲವಾಗಿಹಂಸನೊಳು ಬೆರಸಿ ಗುಣಕರಣ ಪುಷ್ಪಗಳಹಂಸಮಂಡಲರೂಪ ತಿರುಪತಿಯಲಿಹ ಪರಮಹಂಸ ವೆಂಕಟರಮಣ ನೀನೆ ನಾನೆಂಬ 3ಓಂ ಗೋವಿಂದಾಯ ನಮಃ
--------------
ತಿಮ್ಮಪ್ಪದಾಸರು
ವೈದ್ಯ ಬಂದ ನೋಡಿ - ವೆಂಕಟನೆಂಬ |ವೈದ್ಯ ಬಂದ ನೋಡಿ ಪ.ವೈದ್ಯ ಬಂದನು ವೇದವೇದ್ಯ ನೋಡೀಗಲೇಶ್ರೀದೇವಿರಮಣನು ಶ್ರೀನಿವಾಸನೆಂಬ ಅಪಎಷ್ಟು ದಿನದ ರೋಗಗಳೆಂಬುದ ಬಲ್ಲ |ಗಟ್ಟಿಯಾಗಿ ಧಾತುರಸಗಳನು ಬಲ್ಲ ||ಕಷ್ಟ ಬಡಿಸದಲೆನ್ನ ಭವರೋಗ ಬಿಡಿಸುವ |ಶಿಷ್ಟವಾದ ದೇಹ ಕೊಟ್ಟು ಕಾಯುವನಿವ 1ಹೊನ್ನು - ಹಣಂಗಳ ಅನ್ನವ ಅನುಸರಿಸಿ |ತನ್ನ ದಾಸನೆಂಬ ನಿಜವ ನೋಡಿ ||ಚೆನ್ನಾಗಿ ಜಿಹ್ವೆಗೆ ಸ್ವಾದವಾಗಿರುವಂಥ |ತನ್ನ ನಾಮಾಮೃತ ದಿವ್ಯ ಔಷಧವೀವ 2ಈತ ದಿಟ್ಟಿಸಿ ನೋಡೆ ಎಳ್ಳಷ್ಟು ರೋಗವಿಲ್ಲ |ಈ ತನುವಿಗೆಂದೆಂದು ರೋಗಬರಲರಿಯದು ||ಈತ ಅನಂತರೂಪದಿ ಜೀವರಿಗೆ ಮುನ್ನ |ಪ್ರೀತಿಯಿಂದಲಿ ಭವರೋಗ ಬಿಡಿಸುವ 3ಧರ್ಮವೈದ್ಯನಿವ ಜಗಕ್ಕೆಲ್ಲ ಒಬ್ಬನೆ |ಮರ್ಮಬಲ್ಲ ರೋಗಜೀವಂಗಳ ||ನಿರ್ಮಲವಾಗಿಹ ತನ್ನ ನಾಮಸ್ಮರಣೆ |ಒಮ್ಮೆ ಮಾಡಲು ಭವರೋಗ ಬಿಡಿಸುವ 4ಅನ್ಯ ವೈದ್ಯನೇಕೆ ಅನ್ಯ ಔಷಧವೇಕೆ ? |ಅನ್ನ ಮಂತ್ರ - ತಂತ್ರ - ಜಪವೇತಕೆ ? ||ಚೆನ್ನ ಪುರಂದರವಿಠಲನ್ನ ನೆನೆದರೆ |ಮನ್ನಿಸಿ ಸಲಹುವ ವೈದ್ಯ ಶಿರೋಮಣಿ 5
--------------
ಪುರಂದರದಾಸರು