ಒಟ್ಟು 48 ಕಡೆಗಳಲ್ಲಿ , 23 ದಾಸರು , 46 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದಕುಮಾರ ಗೋವಿಂದಾ ನಮೋ ನಮೋ ಮಂದರಧರ ಸಾನಂದಾನವೇ ನಮೋ ನಮೋ ಪ ಮಂದಾಕಿನಿ ಪದದ್ವಂದ್ವಾ ನಮೋ ನಮೋ ಸಿಂಧುಶಯನ ಅರವಿಂದನಯನ ನಮೋ ನಮೋ ಅ.ಪ ವೇದೋದ್ಧರ ನಮೋ ಮಾಧವತೇ ನಮೋ ನಾದರೂಪಾ ನಮೋ ಭೂವರ ತೇ ನಮೋ ಯಾದವ ಮುರಳಿನಾದ ನಮೋ ಮೇದಿನಿಪಾಲ ಮಾಂಗಿರಿನಿಲಯಾ ನಮೋ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
4. ಗೊರೂರು ಹೇಮಾವತೀ ತೀರ ನಿಲಯಾ ನಮೋ ಶ್ರೀಮನೃಸಿಂಹ ಶರಣೆನ್ನು ಬಿಡದೆ ಮನವೇ ಪ ಅರಸು ಮುನಿವಾಗ ಆತ್ಮರು ಮೊಗವ ತೆಗೆವಾಗ ದುರುಳ ಮಾನವರಿಟ್ಟೆಡೆಯಲಿರುವೆಂಬಾಗ ಸುರರು ಮ ತ್ಸರಿಪಾಗ ನರಸಿಂಹ ಶರಣೆನ್ನು ಮನವೇ 1 ಮುಗಿಲಗಲದಾಪತ್ತು ಕವಿವಾಗ ಕ್ರೂರಗೃಹ ಪಗೆಗಳಿಟ್ಟುಣಿಪಾಗ ಅನಲ ಜಲಭಯದಿ ಮಿಗೆ ಮುಳುಗುವಾಗ ರೋಗಗಳು ಪೀಡಿಸುವಾಗ ಮೃಗರಾಜವದನ ಶರಣೆನ್ನು ಬಿಡದೆ ಮನವೇ 2 ಸುಖವ ಪಡುವಾಗ ದು:ಖಕ್ಕೆ ಮನವ ತೆಗೆವಾಗ ಅಖಿಲ ಪಾತಕದ ನೆರೆಕಾಲಲೊದೆವಾಗ ಮಖಮಥನ ಕಮಲಭವಮುಖ ದಿವಿಜವಂದ್ಯಪದ ನಖನೆ ಶ್ರೀ ವೈಕುಂಠಪತಿ ಚನ್ನರಾಯ[ನೆನುಮನವೆ] 3
--------------
ಬೇಲೂರು ವೈಕುಂಠದಾಸರು
--------------ಗುಡಿವಾಸಾ ಪ ------ತಾಪತ್ರಯಗಳಿಂದ ------ರದೆ ಬಂದೆ ಭೂಪಾ ನೀ ಕರುಣದಿ ಪೊರೆಯೆನ್ನ ಅ.ಪ ಸೂರ್ಯ ನೇತ್ರಾಗದಾಧರ----ಸುಂದರಗಾತ್ರಾ ಇಂದಿರಾ ಹೃದಯಾನಂದಾ ವಿಶ್ವೇಶ ಮು- ಮಾಧವ ಗೋವಿಂದಾ ಸಿಂಧು ಶಯನ ಆಶ್ರಿತ ಜನ ರಕ್ಷಕ ಮಂದರಧರ ಹರಿ ಮಂಗಳದಾಯಕ 1 ಸುರಮುನಿ ವಂದ್ಯ ದೇವ ದೇವಾದಿ ದೇವ ವರದಾ ಮಹಾನುಭಾವ ಕರುಣಸಾಗರನಿಲಯಾ ಕಮಲನಾಭ ಸ್ಥಿರಹರಿ ಪುರಿಗೀಯಾ ಪರಮಭಕ್ತನಾದ ಕರಿರಾಜನ ಕಾಯ್ದ ಇಂದು ಪಾದ 2 ಶಂಕರನುತ ಶಾಶ್ವತ ಜಗತ್ಕರ್ತ ಪಂಕಜೋದ್ಭವನ ಪಿತ ಶಂಕೆಯಿಲ್ಲದೆ ದೈತ್ಯರಾ ಭೇದಿಸಿ------ನೆನಿಸಿದ ಧೀರಾ ಕಿಂಕರನಾನು ನಿಮ್ಮ ಕೀರ್ತಿ ಕೊಂಡಾಡುವೆ ಪುಂಕಾಲದಿ (?) ಸಲಹೊ ಹೊನ್ನಪುರ 'ಹೊನ್ನವಿಠ್ಠಲಾ’ 3
--------------
ಹೆನ್ನೆರಂಗದಾಸರು
(32ನೇ ವರ್ಷದ ವರ್ಧಂತಿ) ಶ್ರೀಶ ಆಶಾಪಾಶದಿಂದಲಿ ಘಾಸಿಯಾದೆ ಬರಿದೆ ವಾಸವಾರ್ಜಿತ ಪಾದಪಂಕಜ ದಾಸಪೋಷಣ ಭೂಷಣಾಚ್ಯುತ ಪ. ಮತ್ತೆರಡು ಮೂವತ್ತು ವರುಷಗಳುತ್ತಮ ಕೃತ್ಯದಲಿ ಸತ್ಯ ಶೌಚಾಚಾರ ಭಕ್ತಿಗಳಿತ್ತು ಕೃಪಾರಸದಿ ಭೃತ್ಯನನು ಪೊರೆದಿತ್ತ ಮೋಹದ ಕತ್ತಲೆಯ ವಶಕಿತ್ತು ಬಿಡುವುದೇ ಶ್ರೀಶ 1 ನಿನ್ನ ಚರಣಾನನ್ಯ ಶರಣರ ಮುನ್ನ ಪೊರೆದ ತೆರದಿ ಇನ್ನು ಪೊರೆವುದಕೇನುಪೇಕ್ಷ ಪ್ರ- ಪನ್ನ ಪಾಲಯದಿ ಚಿನ್ಮಯಿನಂದೈಕ ಭರಿತ ಮ- ಭವ ಮಾಧವ 2 ಕೂರ್ಮ ವರಾಹ ನರಹರಿ ವಾಮನ ಭಾರ್ಗವನೆ ರಾಮಕೃಷ್ಣ ಜನಾದಿ ಮೋಹನೆ ಕಾಮಗಾಶ್ವ ಚರನೆ ರಾಮ ವಿಧುರಿತ ಪಾಪಚಯ ಕಮ- ಲಾ ಮನೋಹರ ಸುಂದರಾನನ 3 ಕಾಲ ಕರ್ಮವಿದೂರ ಯಮುನಾಕೂಲ ಕೇಳೀಲೋಲಾ ಮಂದ ಮರಾಳಗಮನ ಶೀಲಾ ನೀಲ ಮೇಘ ನಿಭಾಂಗ ಪಂಕಜ ಮಾಲಯದುಕುಲಬಾಲ ಪಾಲಯ 4 ನೀರಜಾಸನ ನಿಮ್ನನಾಭ ಸುರಾರಿವನ ಕುಠಾರಾ ಜಾರ ಚೋರ ವಾರಿಜಾಸನ ವಂದ್ಯ ಕರುಣಾ ಪೂರ ಸುರಪರಿವಾರ ಪಾಲಯ 5 ತಂದೆ ತಾಯಿ ಗುರು ಬಂಧು ಸೋದರನಂದನ ಸಖನೆಂದು ಮುಂದೆ ಭವಭಯದಿಂದ ನಿನ್ನನು ಹೊಂದಿದೆ ನಾ ಬಂದು ಹಿಂದೆ ಮಾಡಿದ ಕುಂದನೆಣಿಸದೆ ಇಂದು ಕರಪಿಡಿ ಎಂದು ಬಯಸುವೆ 6 ವಿನುತ ಚರಣಾ ಏಸು ಪೇಳುವುದಿನ್ನು ಎನ್ನನು ಪೋಷಿಸು ಬಹು ಕರುಣಾ ಶೇಷಗಿರಿ ನಿಲಯಾಕುವರದ ಕೃ- ಪಾಶ್ರಯನೆ ತವದಾಸ ಪಾಲಿಸು 7
--------------
ತುಪಾಕಿ ವೆಂಕಟರಮಣಾಚಾರ್ಯ
(4) ಚನ್ನಾಕೇಶವ ಶರಣು ಶರಣು ಚೆನ್ನಕೇಶವರಾಯ ಚರಣಗಳೇ ಗತಿ ನಂಬಿದೆ ಜೀಯಾ ಪ ತರಳಧ್ರುವನಿಗಿತ್ತೆಯೊ ಬಹುಶ್ರೇಯ ವರದ ವೇಂಕಟ ಶ್ರೀರಂಗ ಚೆಲ್ವರಾಯಾ ಶರಣ ಶ್ರಿತನಭಯಾ ಆನಂದನಿಲಯಾಅ.ಪ ಅಂದುಗೆ ಗೆಜ್ಜೆಯ ಘಲುಘಲು ತುಂದಿಲನಗೆಮೊಸ ಪೀತಾಂಬರದಿಂ ಧಿಂದಿಮಿಕಿಟ ಕುಣಿಗೋವಿಂದಾ ನಿತ್ಯ ಮುಕುಂದ 1 ಕವಿಕುಲಸ್ತುತ್ಯನೆ ದೇವವರೇಣ್ಯ ಭವಸಾಗರ ತಾರಣ ಪ್ರಾವೀಣ್ಯ ಭುವನಗಳೆಲ್ಲಕು ನೀನೇ ಗಣ್ಯ ಪವಿತ್ರಯೋಗಿಯ ಧ್ಯಾನ ಹಿರಣ್ಯ ಪಾವನ ಪುಣ್ಯ ಶ್ರುತಿ ಪ್ರಾಮಾಣ್ಯ 2 ವಿದುರೋದ್ಭವ ಅಕ್ರೂರ ತ್ರಾತ ಮಧುರ ಬಾಂಧವ ಬದರೀನಾಥ ವಿಧಿ ಪಿತನರನಾರಾಯಣ ಪೂತ ಮಧುಕೈಟಭಾರಿ ಬಹುಪ್ರಖ್ಯಾತ ಬುಧಪ್ರೀತ ಭಾಗ್ಯದಾತ 3 ಒಂದೇ ಅಳತೆಗೆ ಜಗವು ಮೂರಡಿ ಚಂದಿರ ಮುಖಿಮಣಿ ಕೊಟ್ಟನು ಕರಡಿ ನಿಂದೆಯಾ ಕಾಳಿಂಗನ ಮೇಲ್ಗಾರುಡಿ ತಂದೆ ಕರೆದನ ಕರುಣದಿ ಕರಪಿಡಿ ಇಂದೆ ಕಡೆಜನ್ಮಮಾಡಿ ಇಡು ನಿನ್ನಪದದಡಿ4 ಹೆಜ್ಜಾಜೀಶ್ವರ ಶಿವ ಶಂಕರನೆ ಸಜ್ಜನ ಮುನಿಗಣ ಹೃದ್ಭಾಸ್ಕರನೆ ದುರ್ಜನಶಿರಹರ ಶಂಖಚಕ್ರಧರ ವಜ್ರಿ ಅಜಹರಗಾಧಾರ ಧೀರ ಸುಜಯ ಭೂಮ್ಯೋದ್ಧಾರಿ ಜಂiು ಶ್ರೀಕರ 5
--------------
ಶಾಮಶರ್ಮರು
(ಕಾಣೂರು ಮಠದ ನರಸಿಂಹ) ನೋಡಿರಯ್ಯ ನರಸಿಂಹ ಮೂರ್ತಿಯ ಪಾಡಿರೋ ಕೀರ್ತಿಯನು ಪ. ಚಿಕ್ಕವನ ಗೋಳಿಕ್ಕಿಸುತಲತಿ ಸೊಕ್ಕಿದಸುರನನು ಧಿಕ್ಕರಿಸುತಿಹ ಕಕ್ಕುಲತೆಯಿಂದುಕ್ಕಿ ರೋಷವನು ಮಿಕ್ಕ ದೇವರ ಲೆಕ್ಕಿಸದವನ ತಿಕ್ಕಿ ತೊಡೆಯೊಳಗಿಕ್ಕಿ ನಖಗಳನಿಕ್ಕರಿಸಿ ಸಾಲಿಕ್ಕಿ ತರುವ ಕರುಳಕ್ಕರದಿ ತೆಗೆದ್ಹಕ್ಕಿಗಮನನ 1 ವೇದಮುಖ ಸುರರೆಲ್ಲ ದೂರದಿ ಕಾದುಕೊಂಡಿರಲು ಸಿರಿನಡು ಹಾದಿಯಲಿ ಚಿನ್ಮೋದನಿರಕಾಲ್ಹಾದ ಬಡುತಿರಲು ಪಾದಪದ್ಮಗಳನ್ನು ಭಕ್ತಿರಸಾರದರದಿ ಶಿರಕಿಕ್ಕಿರುವ ಪ್ರ- ಲ್ಹಾದನನು ಪಿಡಿದೆತ್ತಿ ಪರಮವಿನೋದಗೊಂಡ ಪರಾಪರೇಶನ 2 ಅರ್ಥಿಯಿಂದಲಿ ಬಂದಿರುವರು ಪೂರ್ಣಾರ್ಥದಾಯಕನಾ ವ್ಯರ್ಥವೈರದ ದ್ವ್ಯರ್ಧಿದೈತ್ಯರ ಮೂರ್ತಿದಹಿಸುವನಾ ಅರ್ತಿಹರ ಶೇಷಾದ್ರಿವರ ಪುರುಷಾರ್ಥ ಪಾಲಿಪೆನೆಂದು ವಾಮನ ತೀರ್ಥ ಕೃತ ಪೂಜಾರ್ಥವಿಲ್ಲಿಗೆ ಕೀರ್ತಿಕರ ನಿಲಯಾರ್ಥದಾತನ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಷದೇವರ ಪ್ರಾರ್ಥನೆ) ಸುಕೃತ ಭಾಗ್ಯವಂತನೋ ಗುರುಶೇಷ ಯಂತು ಬಣ್ಣಿಸುವುದಿನ್ನು ಮಾಂತರಂಗದಿ ಪ್ರೇಮ ಪಾತ್ರನಾಗಿರುವದೀ ಪ. ಶ್ರೀನಿವಾಸಗೆ ಮೂರು ಸ್ಥಾನದಿ ಸರಿಯಾಗಿ ತಾನೆ ಶಯನ ಪೀಠ ಛತ್ರನಾಗಿ ಜ್ಞಾನಾನಂದನ ಪರಮಾನುರಾಗದಿ ನೋಡಿ ಮಾನವ ಪಡೆದು 1 ರಾಮರೂಪದಿ ನಿಂದ ಸ್ವಾಮಿಗೆ ನಿರವಧಿ ಪ್ರೇಮದನುಜನಾಗಿ ಪರಿಚಿರಿಸಿ ಸೋಮವಂಶದಿ ಬಲರಾಮನೆನಿಸಿ ಸತ್ಯ- ಭಾಮಾವರನ ಜೇಷ್ಠ ನಾಮವ ಪಡೆದು 2 ಹಲವು ವಿಧದ ಪುಣ್ಯ ಫಲವ ನೀಡಲು ಲಕ್ಷ್ಮಿ ಲಲನೆ ಪದ್ಮಜೆಯರ ಬಲಗೊಳ್ಳುತಾ ಕಲಿಯುಗದಲಿ ಬಂದು ನೆಲೆಯಗೊಳ್ಳಲು ಶೇಷಾ- ಚಲನೆಂದು ಹರಿಗೆ ನಿಶ್ಚಲವಾದ ನಿಲಯಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಪ್ರಾಕೃತ ಕಾಯಾ ಪ ಶ್ರೀಕರಾರ್ಚಿತಪಾದ ಲೋಕೇಶ ವಂದಿತ ಅ- ವ್ಯಾಕೃತಾಕಾಶದೊಡೆಯನೆ ವಾಸುಕೀಶಯನ ಸರ್ವೇಶ ನೀನೆ ಪ್ರಾಕೃತ ಸಜ್ಜಮಜ್ಜನ ಕಾರ್ಯಕೆ ಕಾರಣನಯ್ಯ ಏಕೋ ನಾರಾಯಣ ಅ.ಪ ಪ್ರಳಯಕಾಲದಿ ಜೀವರ ನಿಲಯಾ ಕಲ್ಪಿಸಿ ತತ್ತ ನಾಲ್ಕುವಿಧಗಳ ರೂಪಗಳನು ಧರಿಸಿ ಪ್ರಳಯದೊಳಿಂಬಿಟ್ಟು ಎಳೆಸಿದ ಕಟಾಕ್ಷವೀಕ್ಷಣದಿಂದಲಿ 1 ಅಳವು ಇಲ್ಲದ ಸೃಷ್ಟಿಯನೆಸಗಿದೇ ಸಾಧುಜೀವರು ತಮ್ಮ ಸಾಧನ ಪೊರೈಸಿ ಸ್ವದೇಹದೊಳು ಬಂದ ಮೋದದಿಂದಲಿ ನೋಡಿ ಬಾಧಿಪ ಲಿಂಗಭಂಗವೈದಿಹ ಪ್ರಾರಬ್ಧನಾಶನವಿಹ ವಿ- ವಿಧ ಸುಜೀವರ ಮೋದಪಡಿಸಿ ನಿ- ಉದರದೊಳಿಟ್ಟ್ಯಯ್ಯ ಸದಮಲಮೂರುತಿ ಅದುಭುತಮಹಿಮ ಶ್ರೀ ವಾಸುದೇವನೆ2 ಸಂಚಿತ ನೀಗಿ ಪ್ರಾರಬ್ಧ ಶೇಷ ಭೋಗ ಉಳ್ಳವರೆಲ್ಲ ಆಗದೆ ಪೂರ್ಣ ಸಾಧನೆ ನೀಗದೆ ಲಿಂಗಭಂಗ ಆಗ ಬಿಂಬನ್ನ ನೋಳ್ಪರ ನಾಗಶಯನ ನಿನ್ನಂಗದೊಳಿಂಬಿಟ್ಟೆ ಜಾಗುಮಾಡದೆ ನೀನಾಗಲೆ ಜೀವರ ಭೋಗವ ತರಲು ಭಾಗವಗೈಸಿ ಭೂಭಾಗದ ಸಾಧನ ಮಾಳ್ಪ ಜೀವಗಣ ಭಾಗವ ಕಾಯ್ದೆ ಸಂಕರುಷಣ ಮೂರುತೆ 3 ನಿತ್ಯಸಂಸಾರಿಗಳಿಗೆ ಇತ್ತೆ ನಿನ್ನುದರದೊಳು ಮುಕ್ತರೊಡೆಯ ದೇವ ಶಕ್ತನಹುದೋ ನೀ ಮೊತ್ತ ಮೊದಲು ನೀನಿತ್ತು ಪೊರೆದೆ ಬರಲಿತ್ತ ಕಾರಣ ಪ್ರ- ಸುತ್ತಿ ಸುತ್ತಿರುವೆ ಬಿತ್ತರಿಸಲೇನನಿರುದ್ಧಮೂರುತೇ 4 ಅಣುವಿಗೆ ಅಣುವಾಗಿ ಘನತೆ ಘನತಮನಾಗಿ ತೃಣಜೀವರಾದಿ ಬ್ರಹ್ಮಗಣರೆಲ್ಲರೊಳು ಗಣನೆ ಇಲ್ಲದ ಕಾರ್ಯ ಕ್ಷಣಬಿಡದಲೆ ನಡೆಸಿ ಎಣೆಯಿಲ್ಲದಿಹ ಸುಗುಣ ಸಾಂದ್ರನೆ ಪ್ರಣವದೊಳು ಪ್ರತಿಪಾದ್ಯನಾಗಿಹೆ ತ್ರಿಗುಣರಹಿತ ಮುಖ್ಯ ಪ್ರಾಣಾಂತರ್ಗತ ಪ್ರಣತಕಾಮದ ಪೂರ್ಣ ಸಂಪೂರ್ಣ5 ಮುಕ್ತಾಮುಕ್ರಾಶ್ರಯ ಭಕ್ತಪರಾಧೀನ ಶಕ್ತಾನೆ ಸರ್ವವೇದೋಕ್ತ ಮಹಿಮಾತೀತ ಉಕ್ತನಾಗಿಹೆ ಪುರುಷಸೂಕ್ತಾದೊಳಪ್ರಮೇಯ ಶಕ್ತಿಯನರಿಯರು ಅಜಭವಾದ್ಯರು ಶಕ್ತನೆ ಜೀವನ್ಮುಕ್ತರೌಘ ಸಕ್ತರಾಗಿ ನಿನ್ನ ಸ್ತೋತ್ರವ ಮಾಳ್ಪರು 6 ಶ್ರೀಶಾ ಸರ್ವೋತ್ತಮ ವಾಸ ವೈಕುಂಠಾಧೀಶ ವಾಸವಾದಿ ವಂದಿತ ಭಾಸುರಾಂಗನೆ ವಿಶ್ವಾಸ ನಿನ್ನೊಳಿಟ್ಟ ದಾಸ ಜನರ ಕಾಯ್ವ ಈಶಾವ್ಯಾಸಮಿದಂಸರ್ವಂ ಎಂದೆಂದು ಎಂದು ಉಸುರುವ ವೇದಗಳ್ ಏಸುಕಾಲಕು ಸಾಕಲ್ಯದಿ ವರ್ಣಿಸ ಲೀಶ ಕೋಟಿ ಪ್ರವಿಷ್ಟೆಗೆ ಅಸದಳ 7 ಅಂಗಜಪಿತ ರಂಗ ಮಂಗಳಾಂಗನೆ ಮಾ- ತಂಗವರದ ದೇವ ಗಂಗಾಜನಕ ಕಾಳಿಂಗನಾ ಮದ ಮೆಟ್ಟಿ ಭಂಗಾಗೈಸಿದ ಭುಜಂಗಶಯನ ಎನ್ನಂತಾ- ರಂಗದಿ ನಿಲ್ಲೋ ಇಂಗಿತ ಬಲ್ಲೆ ಶ್ರೀರಂಗಶಾಯಿ ಸಾ- ರಂಗಪಾಣಿ ಕೃಪಾಂಗ ಎನ್ನಯ ಭವಭಂಗಗೈಸಿ ಸ- ತ್ಸಂಗವೀಯೋ ಯದುಪುಂಗವ ಮಂಗಳಮೂರುತಿ ಶೌರೇ8 ಕಾಲ ಜಾಲವ ತಂದೆ ಪಾಲಿಪ ಸಲಹಿಪ ಕರ್ತ ನೀನಲ್ಲದಿ- ನ್ನಿಲ್ಲವಯ್ಯ ಶ್ರೀ ವೇಂಕಟೇಶ ಪ್ರಭೋ 9
--------------
ಉರಗಾದ್ರಿವಾಸವಿಠಲದಾಸರು
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಈ ಸಮಯದಲಿ ಸುಮ್ಮನಿರುವರೆ ರಾಮಾದಾಸಾನುದಾಸರೊಳು ತೋರದೆ ಪ್ರೇಮಾ ಪಮರುಗಿ ಬೆದರದಿರೆಂಬ ಮಾತೃ ಮೊದಲೆುಲ್ಲಕರೆದು ನಾ ಬೇಡಿದುದ ಕೊಡುವ ಪಿತೃ'ಲ್ಲನೆರವಾಗಿಯನುಸರಿಸಿ ನಡೆವ ಭ್ರಾತೃಗಳಿಲ್ಲಮೊರೆುಡಲು ನಿನಗೆ ನೀ ಮುಖದೋರೆಯಲ್ಲಾ 1ಕಡ ಹುಟ್ಟಿದರೆ ಬಡವ ಕೆಡುವನೆಂಬೀಗಾದೆತೊಡರಿಕೊಂಡೆನ್ನೊಳಗೆ ತೋರಿದುದು ತಂದೆತಡವ ಮಾಡದೆ ಮುಂದೆ ತನಿದಯಾರಸದಿಂದೆಕಡೆಹಾುಸಬೇಕೆಂದೆ ಕರುಣಾಬ್ಧಿುಂದೆ 2ಶರಣು ಹೊಕ್ಕೆನು ಜೀಯ ಸೀತಾಮನಃಪ್ರೀಯನರಳಿಪರೆ ಋಣಿಯ ಚಿಕನಾಗಪುರ ನಿಲಯಾಮರೆದೆನ್ನ ದುರ್ನಡೆಯ ಮರುಗಿ ನೀ ಸಲಹಯ್ಯವರದ ವೆಂಕಟರಾಯ ವಾಸುದೇವಾರ್ಯ3
--------------
ವೆಂಕಟದಾಸರು
ಎಂತು ಬಿನ್ನೈಸಲೊ ಮುರಾರಿ ಸಾರಿಗೆ ಸಾರಿ | ಸಂತ ಜನರ ಆಧಾರಿ ಪ ಶ್ಲೋಕ - ಘನ ಅನವರತÀ ಕಾಯಾ | ಸ್ವಾಮಿ ಲಕ್ಷ್ಮೀ ಸಹಾಯ | ಅನಿಮಿಷ ಮುನಿಗೇಯಾ ಹೇಯ ಧರ್ಮ ವಿಹಾಯ | ನಗರ ನಿಲಯಾ | ಅಮಿತÀ ಆನಂದ ಕಾಯಾ | ನಾಗ ತಲ್ಪೋರು ಗಾಯಾ 1 ಪದ - ಶರಣು ಶರಣು ಶಾರಣ್ಯನೆ | ಗುಣ ಗುಣ್ಯನೆ | ನಮಗಾನನ್ಯನೆ | ನಿರುತರಂತರ ಕಾರುಣ್ಯನೆ ಪ್ರದದಾನ್ಯನೆ | ಅಪ್ರತಿ ಧನ್ಯನೆ | ಪರಮ ಪುರುಷ ಅಸಮಾನ್ಯನೆ | ಮಹ ಪುಣ್ಯನೆ | ಪ್ರಳಯ ಕನ್ಯೆನೆ | ಕರುಣ ಸಾಕ್ಷಿಗನೆ ಲಾವಣ್ಯನೆ | ಅನುಗಣ್ಯನೆ ಪ್ರಾಕೃತ ಶೂನ್ಯನೆ 1 ಶ್ಲೋಕ - ಪರಿಪರಿ ಹೇಯ ಗಾತ್ರಾ ತೆತ್ತನೊ ಇಷ್ಟ ಮಾತ್ರಾ | ಚರಿಸಿದೆ ವಿಷಯ ಯಾತ್ರಾ | ಪಾರಗಾಣೆನೋ ಮಿತ್ರಾ | ಕೊರಳಿಗೆ ಮಮತೆ ಸೂತ್ರಾ | ಉರುಲು ಬಿದ್ದಿದೆ ಚಿತ್ರಾ | ಸುರಕು ಬಡಿಪ ತನುತ್ತಾ | ಕಮಲ ನಿನೇತ್ರಾ | 2 ಪದ - ನರಕ ನರಕ ಉಂಡು ಬೆಂದೆನೊ | ಇಲ್ಲಿ ನಿಂದೆನೊ | ಗತಿಗೆ ಮುಂದೇನೊ | ಕುರುಡ ಕಿವುಡನಾಗಿ ನೊಂದೆನೊ | ಇನ್ನೊಂದೇನೊ | ಉಪಾಯವಂದೆನೊ | ಮರಹು ಸಾಗರದೊಳು ಸಂದೆನೊ | ಅಂದು ಹಿಂದೆನೊ | ಸುಜನರಿಗಂದೇನೊ 2 ಶ್ಲೋಕ - ಸುಲಲಿತ ರುಚಿರಪಾಂಗಾ | ಶುದ್ದ ಸ್ವಭಾವÀ ರಂಗಾ | ಪಲಿಪರಮಾಣು ಸಂಗಾ | ಪಾವನ ಕೋಮಲಾಂಗಾ | ವೊಲಿಸಿದವರ ಭಂಗಾ | ಪರಿಸುವ ಶಿಂಗ ಶಿಂಗಾ | ವರಬಲಗುಣ ತರಂಗಾ | ಸರಸಿಜ ಹೃತ್ಪುಂಗಾ3 ಪದ - ಚಿಂತಿಸುವೆನೊ ನಿನ್ನ ವಿಗ್ರಹಾ | ಮನೋನಿಗ್ರಹಾ | ವಾಗಲಿ ಅನುಗ್ರಹಾ | ಸಂತತ ಎನಗಿದೆ ಸಂಗ್ರಹಾ | ದೇಹವೈಗ್ರಹಾ | ದುರುಳರ ಪ್ರತಿ ಗ್ರಹಾ | ಮುಂತೆ ಕೈಕೊಂಬ ದುರಾಗ್ರಹಾ | ಯೈವ ವಿಗ್ರಹಾ | ಮಾಣಿಸು ಶಿರಿಗ್ರಹಾ | ಸಂತೈಸು ಕರುಣವಾರುಣಗ ಅನಿಗ್ರಹಾ 3 ನವನೀತ ಗೋಪಿ ವಸ್ತ್ರಾಪಹಾರಾ | ಕಾಲ ಧಾರಾ | ಕಂಸದಾನವ ಸಂಹಾರಾ | ಧ್ರುವ ಬಲಿಕರಿ ಉದ್ಧಾರಾ | ನಾನವತಾರ ಧೀರಾ | ಪವನ ಮನಮಂದಿರಾ ಪಾಲಿಸೊ ವಾರಂ ವಾರ4 ಪದ - ವಿಜಯನಗರಾಧೀಶ ಸರ್ವೇಶಾ | ಮಣಿಮಯ ಭೂಷಾ | ಸೂರ್ಯ ಕೋಟಿ ಪ್ರಕಾಶಾ | ತ್ರಿಜಗದೊಳಗೆ ನೀನೆ ನಿರ್ದೋಷಾ | ಶಕ್ತಿ ವಿಶೇಷಾ | ಐಶ್ವರ್ಯ ವಿಲಾಸಾ | ಋಜುಜ್ಞಾನ ಕೊಡುವದೊ ಮನೋತ್ತರಿಸಾ | ಮಂಜುಳ ಭಾಷಾ | ಭೂದಾ ರಜವಾಸಾ | ನಿರ್ಜರ ಕೋಶಾ | ಹೃದಯ ಕಾಶಾ | ನಾಮಕ ಮಹಿದಾಸಾ 4
--------------
ವಿಜಯದಾಸ
ಎಲ್ಲಿ ಸುವರಗಳು ಇಲ್ಲದಿದ್ದರೆ ಇವ | ನಲ್ಲದೆ ಮತ್ತಾರಾ | ವಲ್ಲಿ ಕಾಣದೆ ಪೋದೆ ಪ ಸಾರುವ ಶರೀರ ಧರಿಸಿ ಬಾಳಿದ ಮಹಾ | ಭಾರವಾಗಿದ್ದ ಪಾಷಾಣವ ಪೊತ್ತವ | ಗೊರುವ ನೆಲನಂದು ಕಾಷ್ಟದಿಂದಲಿ ಬಂದ | ಹಾರುವನಾಗಿ ತಿರದುಂಡು ಕುಲಧರ್ಮ | ಮೀರಿ ನಡೆದವ ಉಪವಾಸದವÀನಿಂದ | ಊರ ಎಂಜಲಿಗೆ ಹೇಸದೆ ಓಡಾಡಿದವ | ನಾರಿಯರ ವ್ರತ ಕೆಡಿಸಿ ರಾವುತನಾಗಿ | ಕಾಯ | ಆರಿಂದ ಜನಿತನಿವ ನೋಡಲಾಗಿ | ಧಾರುಣಿಯೊಳಗಿದ್ದವ ಸರ್ವರನ್ನ | ಮೀರಿ ನಡೆತÀಲಿದ್ದವ ಇವಗೆ ಮೆಚ್ಚಿ | ಧಾರಿ ಎಂದ ನಿನ್ನ ಮಗಳೆ ಬೇಕೆಂದವ 1 ಬಿರಿಗಣ್ಣೆನವನಿವ ಆವಾವ ಕಾಲಕ್ಕೆ | ಶಿರವಾಗಿ ಕೊಂಡಿಪ್ಪ ಶೀಲ ಸ್ವಭಾವದಿ | ಕೊರಳ ತಿರುಹಲಾರ ಕರುಳ ಮಾಲೆಯುವ | ಪರರ ಬಾಗಿಲ ಕಾವರಾಜ್ಯವಿಲ್ಲದವ | ಸುರರ ಕೋತಿಯ ಮಾಡಿ ಕುಣೆಸಾಡಿದವನಿವ | ದಿಗಂಬರನಾಗಿ ಚರಿಸಿದೆನೆಂದು ಕೋಪದಿಂದ | ಕರವಾಳ ಹಸ್ತದವ || ಪರಾಕ್ರಮ ಉರಗನ್ನ ಮೇಲಿದ್ದವ ಇವನ ಖೂನ | ಅರಿಯನು ದಾವದಾವ | ಭೇದವನಿಕ್ಕಿ | ತಿರುಗಿಸುವನು ಲೋಕವ ವಂಚಕನಿಗೆ | ಪರಮ ಪ್ರೀತಿಯಿಂದ ಕೊಟ್ಟದನೆಣಿಸುವ 2 ತನ್ನ ಜಾತಿಗಳನ್ನು ನುಂಗುವನವನಿವ | ಬೆನ್ನ ಮೇಲಿನ ಒಂದೆ ಬುಗುಟಿ ಪಲ್ಲಿನ ತುದಿ | ಮಣ್ಣು ತೋರುವನಿವ ವಿಕಾರ ಮೊಗದವ | ಕಣ್ಣು ಚುಚ್ಚಿದ ಒಬ್ಬ ಹಾರವನ್ನು ನೋಡಿ | ಹೆಣ್ಣಿಗಭಯವಿತ್ತು ಕಾದಿ ಸೋತವನಿವ | ರಣ್ಯ ವಾಗನಿವ ರಣದೊಳೋಡಿದನಿವ | ಅನ್ಯಾಯ ಪೇಳಿದ ನಂಬಿದವರಿಗೆ | ಮುನ್ನೆ ಕುದುರಿಯೇರಿದಾ ಇವನು ತಾನೆ | ಅನಂತ ಮಾಯಮೋದಾ ಎಂಥವರಲ್ಲಿ | ಪಾದ ಇಟ್ಟು ಇದ್ದು | ಕಣ್ಣಿಗೆ ಪೊಳಿಯೆ ಖೇಡ ಬಡಿಸವಂಥ | ಬಣ್ಣಾಣಿಗಾರನು ಬಂದೆಲ್ಲಿ ದೊರಕಿದಾ 3 ಮೀಸಿ ಕಟ್ಟಿಸಿಕೊಂಡಿವನೀವ ಪ್ರಳಯಾದಿ | ದ್ವೇಷವನಿಕ್ಕಿದ ದೇವದಾನವರಿಗೆ | ಏಸು ದಿವಸವಾಗೆ ಅದೋ ದೃಷ್ಠಾಯವನಿವ | ಭಿಕ್ಷೆ ಪಾತ್ರಿಯವ | ಬಿಗಿಯನೆ ಮುರದು ಬಿಟ್ಟವನಿವ | ಕೊಂಡ ಲಜ್ಜೆಗೇಡಿ | ಘಾಸೆತನಕೆ ಶೂರನು ಒಮ್ಮ್ಯಾದರು || ಮಾಡುತಲಿಪ್ಪನು ಇವನು ಹೆಣ್ಣು | ವೇಷ ಧರಿಸಿಕೊಂಬನು ಕೇವಲ ಅವ | ಕಾಶ ಯಿಲ್ಲದ ಸ್ಥಾನದಲ್ಲಿ ವೊಂದಿಪ್ಪನು 4 ದೃಷ್ಟಿ ಮುಚ್ಚದಿಪ್ಪನವನಿವ ಆವಾಗ | ಬೆಟ್ಟವೆ ಗತಿ ಎಂದು ಸೇರಿಕೊಂಡವನಿವ | ದಿಟ್ಟ ಕಠೀಣ ಕಾಯದವನಿವ ಎದುರಿಗೆ | ಎಷ್ಟಗಲ ಬಾಯದೆರೆದಿಪ್ಪ ಪಾದದ | ಬಟ್ಟಿನಿಂದಲಿ ನೀರು ಸುರಿಸುವ ಬಗೆ ಉಂಟು | ಕುಟ್ಟಿ ಮಾತೆಯ ಶಿರ ಕೆಡಹಿದನಿವ ಜಡೆ | ಗಟ್ಟಿಪ್ಪ ಚೋರನಾಯಕ ಮೌನಪ್ರಾಂತಕ್ಕೆ | ದುಷ್ಟನೆನಸಿ ಮೆರೆವ ಹತ್ತದೆಂದು || ಅಟ್ಟಿಬಿಟ್ಟರೆ ಬರುವ ತನ್ನೆಲ್ಲಿಗೆ | ಕೆಟ್ಟವರನ ಕರೆವ ಉತ್ತಮರನ್ನು | ಪಟ್ಟದ ರಾಣಿಗೆ ಪೇಳದೆ ಜವಾ | 5 ಜಲದೊಳಗಾಡುವನಿವ ಹೊರೆ ಹೊತ್ತು | ಕಲೆಪರಟಿಯಾಗಿ ತಿರುಗುವನಿವ ಮೂಗಿಲ್ಲಿ | ಳಿದು ಬಂದವನಿವ ಗೊಗ್ಗರÀ ಧ್ವನಿಯವ | ತಲುವರಿ ಇವ ತಾನೆ ಶಿಷ್ಯಗೆ ವಿದ್ಯವÀ | ಕಲಿಸಿ ಶ್ಯಾಪವ ಕೊಟ್ಟನವನಿವ ವೈರತ್ವ | ಬಳಸದವನ ಮೇಲೆ ಕಲ್ಲು ಹಾಕಿಸಿದವ | ಬಲು ಭಂಡುಗೋವಳ ಅನ ಬರದದು ಬಿಟ್ಟು | ಕಲಿಯಾಗಿ ಓಡಾಡಿದ | ಹೆರರಿಗಾಗಿ ಸ್ತಳ ದ್ರವ್ಯವ ಮಾಡಿದಾ ದಾನವರಿಂದ | ಬಲವಾವನು ಬೇಡಿದಾ ಬೊಮ್ಮಾಂಡದ | ಒಳಗೆ ಹೊರಗೆ ಕಾಡಿದಾ | ಬಹು ಠಕ್ಕನು | ತಿಳಿದು ತಿಳಿದು ಈರ್ವರಿಗೆಯಲ್ಲಿ ನೋಡಿದಾ 6 ಸವಿ ನೋಡದದರ ರೂಪನಾದವನಿವ | ಅವಯವಂಗಳೆಲ್ಲ ಮುದುರಿಕೊಂಡಿಪ್ಪಾನಿವ | ಅವನಿಗೋಡಿ ಪೋದನಿವ ಮೃಗವಲ್ಲ ಮಾ | ನವನಲ್ಲ ವದ್ಭೂತನಾಗಿ ತೋರುವನಿವ | ಬವರಿಗಾದವನಿವ ತನ್ನ ಕಾಲಕೆ ತಪ್ಪ | ಭವನವಿಲ್ಲದೆ ದಿನ ಕಳೆದವ ಯಾಗದ | ನ್ನವನುಂಡು ನಾನಾ ಶಸ್ತ್ರವನ್ನು ನುಂಗಿದವನಿವ || ಯುವತಿ ಧರಿಸಿದ ಸಂಗಾ ಹಾ | ರುವ ಪಕ್ಕಿ ದಿವಸ ದಿವಸ ತುರುಗಾನಾಗಿಪ್ಪದು | ಅವಧೂತ ಮಾರ್ಗ ತುಂಗಾ | ಪರ್ವತವನು | ಲವಕಾಲಬಿಡದೆ ಬಾಯಲಿ ಕಚ್ಚಿದ ರಂಗಾ 7 ಮಾರಧ್ವಜನನವತಾರ ತಾಳಿದನಿವ | ನೀರೋಳಗಡಿಗಿಪ್ಪ ಎರಡು ಭಾಗಗಲ್ಲಿ | ಕೋರೆಗಳದ್ದಿ ಮಸÀದು ಮತ್ಸರಿಸುತಿಪ್ಪ | ಚೀರಿ ಕೂಗುವ ಮಹಾ ಬೊಮ್ಮಾಂಡವಡದಂತೆ | ಮೂರಡಿಯೊಳಗೆ ತ್ರಿಲೋಕವÀನಿಟ್ಟವ | ಬೇರು ಕಡುವನಂತೆ ಕೊಡಲಿಕಾರನಿವ | ಆರೋಗಣಿಗೆ ಶಬರಿಯ ಹಣ್ಣು ಮೆದ್ದವ | ಬುದ್ಧ ಉದ್ದಂಡಾ ಏಕನು ಇವ || ಕೊಂಡ ಬಹು ಕಡೆ | ಬೀರಿದನ್ನವ ಕೈಕೊಂಡಾ ಒಂದು ತುತ್ತು | ಆರಗೀಯದಲೆ ಉಂಡಾ ಇವನನ್ನು | ಹಾರೈಸಿದವರಿಗೆ ಏನು ಲಕ್ಷ ಹೆಚ್ಚಳ ಕಂಡಾ 8 ಉದಕ ಬಿಟ್ಟರೆ ಬದುಕಲಾರದವನಿವ | ಎದೆಗಟ್ಟಿಯವನಲ್ಲಿ ಮುಟ್ಟಿ ನೋಡಿದರೆ | ಪೊದೆ ಪೊದರಿನೊಳು ಸೇರಿ ಕೊಂಡವನಿವ | ಎದುರಿಗೆ ಒಬ್ಬರ ಬರಗೊಡದವ ತನ್ನ | ಪದದ ಕೆಳಗೆ ಕೊಟ್ಟವನ ಇಟ್ಟವನಿವ | ಮದಕಾವ ಮಾಡಿ ತನ್ನೊಳು ತಾನೆ ಸೋತವ | ಸುದತಿಯುಳಟ್ಟಿದ ಪಾರ್ಥಗಾಳಾದ | ಚದುರ ಕ್ರೂರರಿಗೆ ಕ್ರೂರಾ ನಿರಂತರ | ಉದಧಿ ಎಂಬೊದೆ ಮಂದಿರಾ ಇವಗೆ ನೋಡು | ಬದರಿ ಗಿಡವೆ ಆಸರಾ ಏನೆಂಬೆನೊ | ಕದರು ಮೋರಿಯೆ ಶೃಂಗಾರ ತನ್ನಯ ಗುಣ | ಮೊದಲಿದೆ ಕಡೆ ಎಂದು ಆರಾರಿಗೆ ತೋರಾ 9 ಚಪಲಾಕ್ಷದವನಿವ ಚಲುವನೆಂತೆಂಬೆನೆ | ವಿಪರೀತ ನಿದ್ರೆ ಮಾಡುವನಿವ ಕರೆದರೆ | ಕುಪಿತವಾಗುವ ಕಿಡಿ ಉಗುಳುವನಿವ | ಕಪಟದಲ್ಲಿ ಗಟ್ಟಿ ತಲೆ ಹೊಡಕ ರಾಮ | ಕಪಿಯ ಮೋಸದಿಂದ ಕೆಡಹಿದ ಮಾವನ್ನ | ನಿಪತನ ಗೈಸಿದ | ದೋಷಕ್ಕೆ ಶಂಕಿಸಾ | ತ್ರಿಪುರವ ಕೆಡಸಿದ ಹರಗೆ ಸಾಯುಕವಾಗಿ | ಅಪಕಾರಿ ಝಗಳಗಂಟ ಒದಿಸಿಕೊಂಡ || ವಿಪುಳದೋಳೇನು ಒಂಟಾ ಉಚ್ಚರಿಸುವೆ | ಕೃಪಣ ಜನರಿಗೆ ನೆಂಟಾಸನಕ್ಯಾದರ | ಶಪತದಲ್ಲಿಗೆ ಪೊರವಂಟಾ ಉತ್ತಮರಿಂದ | ಉಪದೇಶವಿಲ್ಲದ ಬಾಳುವ ಮಹಾತುಂಟಾ 10 ಇವರೀರ್ವರಿಗೆ ಈಡೆ ತಪ್ಪಿಸಲು ಪದ್ಮ | ಭವಗಳವಲ್ಲವು ನಿನ್ನ ಕುವರಿಗೆ | ಸವಿಗಾರ ಇವನಲ್ಲದೆ ಮತ್ತಾವಾವಾ | ವಿವರಿಪೆ ಎಂಥವರಕೆ ಅಂಥ ಕನ್ನಿಕೆ | ಹವಣವಾಗಿದೆ ಸತ್ಯ ಸಂಕಲ್ಪವೆ ಸಿದ್ಧಾ | ಶ್ರವಣಾದಿ ಇಂದ್ರಿಂಗಳಿಗಗೋಚರಾ | ಸ್ಥವಿರ ಯೌವನ ಬಾಲ ಒಂದಾದರಿವನೆಲ್ಲಾ | ನವನವ ಬಗೆ ಸುಕಾಯಾ || ಮೋಹನ್ನ ಯಾ | ದವರಾಯಾ ಶಿರಿ ವಿಜಯವಿಠ್ಠಲ ಕೃಷ್ಣ | ಶಿವಕುಲ್ಲ್ಯ ಪುರಿ ನಿಲಯಾ ಭಕ್ತರ ಪ್ರೀಯಾ | ಮಾಯಾ ಜಗದ್ಗುರು | ಪವನವತಾರ ಶ್ರೀ ಆನಂದ ಮುನಿಗೇಯಾ11
--------------
ವಿಜಯದಾಸ
ಕರುಣಾಲವಾಲ ಜಿಷ್ಣುಪರಿಪಾಲ ವಿಷ್ಣು ವಿಶ್ವವ್ಯಾಪಿಸಕಲ ದೃಷ್ಟಾದೀಶ ಕೃಷ್ಣಲೋಲ ಪ. ಪೊಳೆವ ಗರುಡ ಸ್ಕಂಧವೇರಿ ಘಳಿರನೆ ಪೋಗಿ ಜಲಜವ ಹರಿಸೆ ದೈತ್ಯ ಬಲವಕೊಂಡು ಬಂದ ಮುರನ ಥಳಥಳಿಪ ಚಕ್ರದಿಂದ ತಲೆಯ ಭೂಮಿಗಿಳಿಸಿ ಮೆರೆದ 1 ಧುರದಿ ಮಂತ್ರಿ ಸುತರ ತರಿದು ಕರಿಯನೇರಿ ಖತಿಯ ತಾಳ್ದ ನರಕನನ್ನು ನಳಿನಾಂಬಕಿಯ ಕರದಿ ಭಂಗಿಸಿ ಸರಸಿಜ ಸಂಭವದತ್ತ ವರದಿ ಸಕಲ ಸುರರ ಗೆಲಿದ ಗರುವನನ್ನು ನಿಲಿಸಿ ಕ್ಷಣದಿ ಶಿರವ ಚಂಡನಾಡಿದವನೆ 2 ಧಾತ್ರಿದೇವಿ ಬಂದು ನಾನಾ ಸ್ತೋತ್ರ ಗೈಯೈ ಕರುಣದಿಂದ ಪಾತ್ರಗೊಲಿದು ಸತ್ರಾಜಿತನ ಪುತ್ರಿ ಒಡಗೊಂಡು ಸುತ್ರಾಮ ಮಂದಿರವನೈದಿ ಚಿತ್ರ ತಾಟಂಕಗಳ ದಿತಿಗೆ ಪುತ್ರ ತಾನೆಂದಿತ್ತ ಶ್ರೀಕಳತ್ರ ನಿನ್ನ ನಂಬಿರುವೆನು 3 ಸೌಂದರ್ಯಸಾರೈಕ ನಿಲಯಾ ನಂದಬೋಧಾಧಾರಮೂರ್ತಿ ಇಂದಿರಾವತಾರೆ ಭಾಮೆ ಎಂದ ನುಡಿ ಕೇಳಿ ಮಂದಹಾಸದಿಂದ ನಗುತ ಮಂದವಾಯು ಸುಳಿವ ಸುರರ ನಂದನದೊಳಿಂದುಕಿರಣ ಛಂದದೊಳಾನಂದಗೊಂಡ 4 ವಾರಿಜಾಕ್ಷಿಯೆಂದ ನುಡಿಗೆ ಧೀರತನವ ತೋರಿ ದೇವ ಪಾರಿಜಾತ ವೃಕ್ಷವ ಸರ್ಪಾರಿ ಮೇಲಿರಿಸಿ ಸಾರೆ ಸ್ವರ್ಗನಾಥ ಸ್ವಪರಿವಾರ ಸಹಿತ ತಡಿಯೆ ಗೆದ್ದು ದ್ವಾರಾವತಿಗೆ ಪೋಗಿ ಮೆರದ ನೀರಜಾಕ್ಷ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸೆನ್ನ ಗುರು ಮಂತ್ರಾಲಯ ನಿಲಯಾ ಶ್ರೀ ನರಹರಿ ಗತಿ ಪ್ರೀಯಾ ಪ. ಹರಿಶಯ ಮರುತರ ಆವೇಶಕೆ ನಿಲಯಾ ನಂಬಿದೆ ಶುಭಕಾಯಾ ಅ.ಪ. ತರಳತನದಿ ಶ್ರೀ ನೃಹರಿ ಶಾಂತನಾಗೇ ಸುರರೆಲ್ಲರು ನಿಮಗೇ ಎರದÀು ಕೀರ್ತಿ ಹಿರೆತನವಹಿಸಿದ ರಾಗೇ ಅದರಂದದಿ ಈಗೇ ವರ ಯತಿಗಳು ಹರಿದಾಸರು ವಂದಾಗೇ ಅಘ ನೀಗೇ ಧರೆ ಕಲ್ಪ ಧ್ರುಮವೆಂದು ನಿಮ್ಮ ಬಳಿಗೇ ವಪ್ಪಿಸುವರು ಅಡಿಗೇ 1 ಎಮ್ಮ ಗುರುಗಳಿಂದ್ಹೇಳಿದ ನುಡಿ ಮರೆದೇ ನಿಮ್ಮಡಿಗೆರವಾದೇ ಸಮ್ಮತದಲಿ ಮೃತ್ತಿಕೆಯನು ಸೇವಿಸದೇ ಹಮ್ಮಿನಲಿ ಮೈಮರೆದೇ ನಿಮ್ಮ ಸುಕೀರ್ತಿಯ ತಿಳಿಸು ತಿಳಿಯದಾದೇ ಅತಿ ಭಕ್ತಿಯ ಜರಿದೇ ನಿಮ್ಮ ಕರುಣವಿರಲದರಿಂದೀಗರಿದೇ ತನುಮನವಪ್ಪಿಸಿದೇ 2 ಕೃತಿ ದ್ವಿದಳಾತ್ಮಕದಪರಾಧ ಪಡಿಸಿತು ಬಹು ಬಾಧ ಸಂದಿತು ಕಾಲವು ಮುಂದರಿಯುವ ಮೋದ ಸಂದಿಸಿತುತ್ಸಹದಾ ನಂದಕೆ ಕಲಿ ಮಲ ತೊಳೆಯಲು ಮೌನದಾ ಪರಿ ಅರಿತೆ ಸುಭೋಧಾ ಕುಂದೆಣಿಸದೆ ಪೊರೆದೆನ್ನ ನಿಮ್ಮಗಾಧಾ ಕೃಪೆತೋರಲು ಬಹು ಮೋದಾ 3 ಎಲ್ಲಿ ನೋಡಲಲ್ಲಲ್ಲಿ ನಿಮ್ಮ ವಾಸಾ ಪುರಗಳು ಜನ ತೋಷಾ ಸೊಲ್ಲು ಸೊಲ್ಲಿಗೇ ನುತಿಪ ಗಾನ ಘೋಷಾ ಮಹಿಮೆಗಳ ಪ್ರಕಾಶ ವಲ್ಲದಾಯಿತ್ಯಾತಕೊ ಎನಗಭಿಲಾಷಾ ಬಲ್ಲವರೀಪರಿ ಮಾಡುವರೇ ಮೋಸಾ ಸದ್ಭಕ್ತರಲಾಭಾಸಾ 4 ಒಂದು ದಿನದ ಮೃತ್ತಿಕೆ ಜಲ ಸೇವಿಂದ ಪೊಂದಿದೆ ನಿಮ್ಮ ಪದಾ ಒಂದಾಗಲಿ ಗುರುವೆನಿಸಿದರೆಲ್ಲರದಾ ಮನವಮ್ಮನ ವಾದಾ ನಂದವು ಶ್ರೀ ನರಹರಿ ತಾ ಪರಿಕಿಸಿದಾ ನಂದವು ಬಹು ಮೋದಾ ಸಂದಲಿ ಗೋಪಾಲಕೃಷ್ಣವಿಠಲನಿಂದಾ ಎಣಿಸದೆ ಬಹು ಕುಂದಾ 5
--------------
ಅಂಬಾಬಾಯಿ
ಕೊಳಲನೂದೋ ಇನ್ನೊಮ್ಮೆ ರಂಗಯ್ಯಾ ಕೊಳಲನೂದೋ ಇನ್ನೊಮ್ಮೆ ಕೃಷ್ಣಯ್ಯಾ ಪ ಕೊಳಲನೂದೋ ದ್ವಾರಕಾ ಪುರನಿಲಯಾ ಅ.ಪ. ಎಡಹೆಗಲಲ್ಲೆಡಗಲ್ಲಂವ ನೀಡೀ ಕುಡಿ ಹುಬ್ಬುಗಳಲ್ಲಾಡಿಸುತ್ತ 1 ಮೃದುತರ ತುದಿ ಬೆರಳಿಂದೊತ್ತುತ ಮಧುರಾಧರದಲ್ಲಿಟ್ಟು ರಂಗಯ್ಯ2 ನಾದ ಮೂರುತಿ ಗೋಪೀಜನಲೋಲಾಶ್ರೀದವಿಠಲ ಗೋಪಾಲಬಾಲ3
--------------
ಶ್ರೀದವಿಠಲರು