ಒಟ್ಟು 4 ಕಡೆಗಳಲ್ಲಿ , 1 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ನಮ್ಮ ಶ್ರೀ ಹರಿ ಕೀರ್ತನಿ ಸಾಧು ಸಜ್ಜನರ ಮೃತಸಂಜೀವನಿ ಸದ್ಗೈಸುವ ದಿವ್ಯ ಸುಸಾಧನಿ ಸದ್ಗುರು ಸುಮೂರ್ತಿ ಪ್ರಾರ್ಥನಿ ಧ್ರುವ ಶಮದಮವೆಂಬೆರಡು ತಾಳಗೂಡಿ ಪ್ರೇಮ ಭಾವನೆ ಧ್ರುಪÀದಿಗಳ ಮಾಡಿ ಸಮರಸವೆ ಮೃದಂಗವಿದು ನೋಡಿ ಸಮದೃಷ್ಟಿಲಿವೆ ನಾಮ ಕೊಂಡಾಡಿ 1 ಸಾವಧಾನವೆಂಬ ನಿರೋಪಣಿ ನಿವಾಂತ ಕೇಳು ವಿಚಾರಣಿ ಈ ವಾಕ್ಯಬಲ್ಲ ಲಕ್ಷಕೊಬ್ಬ ಙÁ್ಞನಿ ಭಾವ ಬಲ್ಲುದೆ ಮುಖ್ಯ ಸಾಧನಿ 2 ಮನಸ್ವಸ್ತ ಮಾಡಿ ನೀವಿನ್ನು ಕೇಳಿ ಅನುಮಾನ ಬಿಟ್ಟಿ ಇಕ್ಕಿ ಚಪ್ಪಾಳಿ ಗನಗುರು ಪಾದದಲ್ಯೊಮ್ಮೆ ಹೊರಳಿ ಹಣಿಗ್ಹಚ್ಚಿಕೊಂಬಾ ಗುರುಪಾದಧೂಳಿ 3 ಚಿತ್ತ ಚಂಚಲಾಗ ಬಾರದು ನೋಡಿ ವಸ್ತು ಬಾಹುದು ಬ್ಯಾಗೆ ಕೈಗೂಡಿ ಮಿಥ್ಯಾ ಪ್ರಪಂಚ ಈಡ್ಯಾಡಿ ನಿತ್ಯ ನಿರ್ಗುಣಾನಂದ ಸ್ತುತಿಪಾಡಿ 4 ಪುಣ್ಯಕೀರ್ತನೆ ಕೇಳಿ ಸಂಭ್ರಮ ಧನ್ಯ ಧನ್ಯ ಕೇಳಿದವರ ಜನ್ಮ ಕಣ್ಣಾರೆ ಕಾಂಬುವ ನಿಜವರ್ಮ ಚಿಣ್ಣ ಮಹಿಪತಿಗಾನಂದೋ ಬ್ರಹ್ಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭ್ರಮಮೂಲಮಿದಂ ಜಗತು ನೇಮದ ನಿಜಮಾತು ಧ್ರುವ ಭ್ರಮೆಯಿಂದಲಿ ಭ್ರಮಣ್ಹತ್ಯದ ನೋಡಿ ಭ್ರಮೆ ನೆಲೆಗೊಳಿಸದು ಮನ ಸ್ಥಿರಮಾಡಿ ಭ್ರಮಿಸೇದನೇಕ ಜನ್ಮ ತಿರುಗಾಡಿ ಭ್ರಮಿಯಲಿ ಬಾರದು ನಿಜ ಕೈಗೊಡಿ 1 ಭ್ರಮೆಯಕ ಭ್ರಮೆ ಹತ್ತೇದ ಬಲು ಬಹಳ ಭ್ರಮಯು ಮಾಡೇದ ಸಂಸಾರದ ಮೇಳ ಭ್ರಮೆ ಇಲ್ಲದ್ಯಾತಕೆ ಏನ್ಹೇಳ ನೇಮದಿ ಹೊಳೆವುದು ವಸ್ತು ಅಚಲ 2 ನಾ ನೀನೆಂಬುದು ಭ್ರಮೆಯದ ಮೂಲ ಅನುದಿನ ಬೆನ್ನಟ್ಟಿದೆ ಬಹುಕಾಲ ಖೂನಕೆ ಬಾರದೆ ಆತ್ಮಾನುಕೂಲ ತಾನೆ ಮುಸುಕ್ಯದೆ ಭ್ರಮಿ ಸಕಲ 3 ನಿಶ್ಚಲವಾಗದೆ ಜ್ಞಾನದ ಉಗಮವು ಹೆಚ್ಚು ಕುಂದಿಗೆ ಹೊಡೆದಾಡುದು ಭ್ರಮೆಯು ಹುಚ್ಚುಮಾಡೇದ ವಿಷಯ ಭ್ರಮೆಯು ಎಚ್ಚರಿಸುವ ಸದ್ಗುರು ದಯಕ್ರಮವು 4 ನಾ ಮವನಿಷ್ಟರೊಳಾಡಿದ ಮಾತು ನಿಮಿಷಾರ್ಧದಲಿ ಭ್ರಮೆಯಗಳೆಯಿತು ಸ್ವಾಮಿಸದ್ಗುರು ಕೃಪೆಯಲಿ ತಿಳದೀತು ನೇಮಿಸಿ ತಿಳಿಕೊ ಮಹಿಪತಿನಿವಾಂತು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಧಾನವೆಂದು ಶ್ರುತಿಸಾರುತಿದೆಕೋ ಭಾವದಿಂದಲಿ ಮನವೆ ನೀ ಎಚ್ಚತ್ತುಕೋ ಧ್ರುವ ಭವದ ನಿದ್ರಿಗಳೆದು ಸಾವದಾನವಾಗೋ ನಿವಾಂತ ಕೂಡಲಿಕ್ಯದ ಬಲು ಬೆಳಗೋ ವಿವೇಕವೆಂಬ ಸ್ಮರಣೆ ಇದೆ ನಿನಗೋ ಭವಹರ ಗುರುವಿಗೆ ಶರಣಯುಗೋ 1 ಮುಚ್ಚಿದ ಮಾಯದ ಮುಸಕ್ಹಾರಿಸುವದೆ ಙÁ್ಞನ ಎಚ್ಚತ್ತಮ್ಯಾಲಿದೆ ಖೂನ ಸುವಸ್ತು ಧ್ಯಾನ ಅಚ್ಯುತಾನಂತನ ಕಾಂಬುದನುಸಂಧಾನ ಅಚಲವೆಲ್ಲಕ್ಕಿದೆ ಸುಪಥಸಾಧನ 2 ಬೆಳಗಿನ ಬೆಳಗಿದೆ ಬಲು ನಿಶ್ಚಲ ಒಳಗೆ ಹೊರಗೆ ತೋರುವ ಆನಂದ ಕಲ್ಲೋಳ ಹೊಳೆವ ಮಹಿಪತಿಸ್ವಾಮಿ ಪ್ರಭೆಯು ಬಹಳ ಬೆಳಗಾಯಿತು ಗುರುದಯ ಪ್ರಬಳ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಸ್ತ ಮಾಡಿಕೊಳ್ಳಬೇಕು ವಸ್ತು ತನ್ನೊಳಾಗದ ಹಸ್ತ ನೀಡಲಿಕ್ಕೆ ಸ್ವಾಮಿ ವಿಸ್ತರಿಸಿ ತೋರುತದೆ ಧ್ರುವ ಸಾವಧಾನವಾಗಲಿಕ್ಕೆ ಸಾಧಿಸಿ ಬರುತದೆ ಭಾವ ಬಲಿದು ನೋಡಲಿಕ್ಕೆ ಕಣ್ಣಮುಂದೆ ಭಾಸುತದೆ ನಿವಾತ ಕೂಡಲಿಕ್ಕೆ ತಾನೆ ತಾನಾಗ್ಯದೆ ಆವಾಗ ನೋಡಿ ನಿಜ ಠವಠವಿಸುತದೆ 1 ಆರೇರಿವೆರದು ನೋಡಿ ಗುರುವಾಕ್ಯ ಮಿರಬ್ಯಾಡಿ ಸಾರವೆ ಆದೆ ನೋಡಿ ಗುರುಸೇವೆ ಪೂರ್ಣಮಾಡಿ ದೂರ ಹೋಗಿ ನೋಡಬ್ಯಾಡಿ ತಿರುಗಿ ನಿಮ್ಮೊಳು ನೋಡಿ2 ಇದ್ದಲ್ಲೆ ಅದ ಪೂರ್ಣ ಸದ್ಗುರು ಕರುಣ ಬಿದ್ದಲ್ಲೆ ಬಿದ್ದು ಘನ ಸತ್ಯವಾದ ನಿಜಘನ ಬುದ್ಧಿವಂತರ ಮನ ಗೆದ್ದು ಅಯಿತುನ್ಮನ ಸಿದ್ಧರ ನಿಜಸ್ಥಾನ ಶುದ್ಧ ಮಹಿಪತಿ ಸುಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು