ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲನು ನಿನಗೆ ಕೂಡಿತಯ್ಯ ಹರಿ ಪುಲ್ಲನಾಭ ದಯ ಮಾಡಯ್ಯ ಪ ಖುಲ್ಲನು ನಾಬಲು ಎಲ್ಲಿಯುಸಲ್ಲದೆ ತಲ್ಲಣಿಸುತ ನಿನ್ನ ಬಲವಂದೆ ದೇವ ದೇವ ಅ.ಪ ಧೃಢಗುಣ ಎನ್ನೊಳಿಲ್ಲಯ್ಯ ಬಲು ನುಡಿ ಹೀನ ನಾಕಡು ಪಾಪ್ಯಯ್ಯ ನಡೆ ನುಡಿ ಇಲ್ಲದೆ ಕಡುನೊಂದೀಗ ನಿಮ್ಮ ನ್ಹುಡುಕುತ ತಿರುಗುವೆ ಜಡಜಾಕ್ಷನೆ ಪೊರೆ 1 ಪರರದ್ರವ್ಯವಪಹರಿಸಿದೆನೊ ನಾ ಪರಮನೀಚನಾಗಿ ಚರಿಸಿದೆನೊ ಅಗಣಿತ ದುರಿತವನುನಾ ಜರೆಯದೆ ಪರಿಪರಿ ಮಾಡಿದೆನೊ ಮರೆವೆಲಿ ಮಾಡಿದ ಪರಮ ಎನ್ನತಪ್ಪು ಕರುಣಾಕರನೆ ನೀಕರುಣದಿ ಕ್ಷಮಿಸಯ್ಯ 2 ಶರಣಾಗತ ವತ್ಸಲನೆಂದು ನಿನ್ನ ಮರೆಯಹೊಕ್ಕೆನೆಯ್ಯ ದಯಾಸಿಂಧು ಮೊರೆಕೇಳು ಭಕ್ತರ ಪ್ರಿಯಬಂಧು ಎನ್ನ ದುರಿತದಿ ಕಡೆ ಹಾಯ್ಸಯ್ ಇಂದು ಶಿರಬಾಗಿ ನಿಮಗೆ ಸೆರೆಗೊಡ್ಡಿ ಬೇಡುವೆ ಕರಪಿಡಿ ಬಿಡಬೇಡ ಸಿರಿವರ ಶ್ರೀರಾಮ 3
--------------
ರಾಮದಾಸರು
ನೀನೊಲಿದರೇನಾಹುದು - ಶ್ರೀಹರಿಯೆ - |ಮುನಿಯೆ ನೀನೆಂತಾಹುದು ಪವಾಲಿಬಲ್ಲಿದ ವಾನರರಿಗೆ - ಶ್ರೀಹರಿಯೆನೀ ಮುನಿದು ಎಚ್ಚವನ ಕೊಂದೆ |ಮೇಲೆ ಕಿಷ್ಕಿಂಧೆಯ ಪುರದ ಸುಗ್ರೀವನವಾಲಿಯ ಪದದಲ್ಲಿಟ್ಟೆ 1ಮೂರು ಲೋಕವನಾಳುವ - ರಾವಣನಊರ ಬೂದಿಯ ಮಾಡಿದೆ |ವಾರಿಧಿಯ ಒಳಗಿಪ್ಪ ಲಂಕೆಯ ವಿಭೀಷಣಗೆಸ್ಥಿರಪಟ್ಟವನು ಕಟ್ಟಿದೆ 2ಪನ್ನಗವನುದ್ಧರಿಸಿದೆ - ಕೌರವರ -ಹನ್ನೊಂದಕ್ಷೋಣಿ ಬಲವ |ಛಿನ್ನಛಿದ್ರವ ಮಾಡಿ ಅವರನ್ನು ಮಡುಹಿದೆಪಾಂಡವರ ಪದವಿಯಲಿಟ್ಟೆ 3ಹಿರಣ್ಯಕನು ಸುತನ ಕೊಲಲು - ಆಗ ನೀಕರುಣದಿಂದೋಡಿ ಬಂದೆ |ಮರಣವೈದಿಸಿ ಪಿತನತರಳ ಪ್ರಹ್ಲಾದನನುಶರಣರೊಳು ಸರಿಮಾಡಿದೆ 4ಭಾಷೆ ಪಾಲಿಪನೆನುತಲಿ - ನಾ ಬಹಳಆಸೆ ಮಾಡುತಲಿ ಬಂದೆ |ಶೇಷಗಿರಿವಾಸ ಪುರಂದರವಿಠಲ ದಾರಿದ್ರ್ಯನಾಶಮಾಡೆನ್ನ ಸಲಹೊ 5
--------------
ಪುರಂದರದಾಸರು