ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡುವವನು ನೀನು ಕೊಂಬುವನು ನಾನು ಪ ಬಡಮನದ ಮನುಜನ ಬೇಡಿ ಫಲವೇನುಅ.ಪ ಹದಿನಾರು ಹಲ್ಲುಗಳ ಬಾಯ್ದೆರದು ಬೇಡಿದರೆ ಇದು ಸಮಯವಲ್ಲೆಂದು ಪೇಳಿ ತಾನು ಮದನ ಕೇಳಿಗೆ ನೂರನೊಂದಾಗಿ ನೋಡುವನು ಮದಡ ಮಾನವನೇನು ಕೊಡಬಲ್ಲ ಹರಿಯೆ 1 ಗತಿಯಲ್ಲವೆಂತೆಂದು ನಾನಾ ಪ್ರಕಾರದಲಿ ಮತಿಗೆಟ್ಟು ಪೊಗಳಿದರೆ ಅವನು ತನ್ನ ಸತಿಸುತರ ಕೇಳಬೇಕೆಂದು ಮೊಗ ತಿರುಹುವ ದುರುಳ ಮತ್ತೇನು ಕೊಡಬಲ್ಲ ಹರಿಯೆ 2 ಹೀನ ವೃತ್ತಿಯ ಜನರಿಗಾಸೆಯನು ಬಡುವದು ಗಾಣದೆತ್ತು ತಿರುಗಿ ಬಳಲಿದಂತೆ ಭಾನು ಕೋಟಿ ತೇಜ ವಿಜಯವಿಠ್ಠಲರೇಯ ನೀನಲ್ಲದನ್ಯತ್ರ ಕೊಡುಕೊಂಬುರಂಟೆ 3
--------------
ವಿಜಯದಾಸ
ನಂಬಿದೆನೊ ರಂಗ ಗೋವಿಂದ ರಂಗ ಪ. ಇಳೆಸೃಷ್ಟಿಗಾಧಾರನೆಂಬ ಬಿರುದುಳ್ಳಡೆ ಜಗನ್ಮಯನೆ ಚಿನ್ಮಯರೂಪ ರಂಗ ನೀನಾದ್ಯಯ್ಯ ರಂಗ 1 ಸುಜನಮಂದಾರ ಸರಸಿಜಭವಪಿತ ನಿನ್ನ ಪ್ರಜೆಗಳು ಪೊಗಳುತ್ತಿಹರೆ ರಂಗ ಮುರಹರನೆ ರಂಗ 2 ಸುಜನರೊಳಗೆನ್ನ ಕುಹಕವ ಮಾಡದೆ ನಿನ್ನ ಭಜಕನೆಂದಿರಲಾಗಿ ರಂಗ ಭುಜಗೇಂದ್ರಶಯನ ಶ್ರೀರಂಗ 3 ಧಾತ್ರಿಗಾಧಾರ ಅನಾಥರಕ್ಷಕನೆ ದಯವ್ಯಾತಕೆನ್ನೊಳಿಲ್ಲ ರಂಗ ಕಡೆಹಾಯಿಸೊ ರಂಗ 4 ನೋಡೆ ಶ್ರೀ ಹರಿಯೆ ನೀನಲ್ಲದನ್ಯತ್ರ ದಾತ್ರರಿಲ್ಲವೊ ರಂಗ ಮಹಿಮ ಶ್ರೀರಂಗ 5 ಕೋಪವನು ಬಿಡು ಎನ್ನ ಕುಂದನೆಣಿಸದಿರಯ್ಯ ಆಪತ್ಬಂಧು ಶ್ರೀರಂಗ ಸಲಹಯ್ಯ ರಂಗ 6
--------------
ಹೆಳವನಕಟ್ಟೆ ಗಿರಿಯಮ್ಮ
ನೀನೆಗತಿನೀನೆ ಮತಿ ನೀನೆ ಸ್ವಾಮಿನೀನಲ್ಲದನ್ಯತ್ರ ದೈವಗಳ ನಾನರಿಯೆ ಪನಿನ್ನ ಪಾದಾರವಿಂದದ ಸೇವೆಯನು ಮಾಡಿನಿನ್ನ ಧ್ಯಾನದಲಿರುವ ಹಾಗೆಮಾಡು||ನಿನ್ನ ದಾಸರ ಸಂಗದಿಂದ ದೂರಿಡದೆನಗೆಸನ್ಮಾರ್ಗವಿಡಿಸೊ ಜಗದೀಶ ಅಘನಾಶ 1ಕಮಲನಾಭಿಯೊಳು ಬೊಮ್ಮರ ಪುಟ್ಟಿಸಿದೆ ಹರಿಯೆಕಮಲಸಖಕೋಟಿ ಪ್ರಕಾಶ ಈಶಕಮಲಕರ ತಳದಿ ಅಭಯವನಿತ್ತು ಭಕುತರಿಗೆಕಮಲಾಕ್ಷನೆನಿಸಿದೆಯೊ ಕಮಲಾರಮಣನೆ 2ಶಿಶುಪಾಲ ದಂತವಕ್ತ್ರರ ಶಿರವ ಭೇದಿಸಿದೆಪಶುಪತಿಯ ಆಭರಣ ವೈರಿವಾಹನನೆ ||ಅಸುರಕುಲ ಸಂಹರಿಸಿ ಭಕ್ತಜನರನು ಪೊರೆದೆವಸುಧೇಶಸಿರಿಪುರಂದರವಿಠಲರಾಯಾ3
--------------
ಪುರಂದರದಾಸರು