ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣ ಕಲಿಯ ಕಾಯ್ದ ಕರುಣಿ ಜಿಷ್ಣುಸಖನೆ ಕೃಷ್ಣನೆ ಪ. ಕೃಷ್ಣ ಪೊರೆಯೊ ಎನ್ನ ವಿಷಯತೃಷ್ಣೆಯಿಂ ಸಾಯಲೆ ದಮ್ಮಯ್ಯ ಅ.ಪ. ಹಿಂದೆ ಮಾಡಿದ ಕರ್ಮದಡವಿಯೊಂದಿಗೆ ಸವರುವೆನೊ ಗೋ-ವಿಂದ ನಿನ್ನ ಕರುಣಸುಧೆ ಇನ್ನೆಂದು ಪಡೆದು ಸುಖಿಪೆನೊಇಂದು ಮಾಡಿದ ಅಘಗಳು ಬಲು ದಂದುಗಕೊಳಗಾದೆ ನೀನುಕುಂದು ಕುಜನದೂರ ನಿನ್ನ ಕಂದನೆಂದು ಸಲಹೊ ತಂದೆ1 ಕಾಮವೆನ್ನ ಕಮಲನಾಭ ಸೀಮೆಗಾಣಲಿಯ್ಯದೊ ನಿ-ಸ್ಸೀಮಮಹಿಮ ಕ್ರೋಧ ಎನ್ನ ಸಾಮವ ನಡುಗಿಸುತಿದೆಭ್ರಮಿತನಾದೆ ಬಲುಪ್ರೇಮವ ತಪ್ಪಿಸಿ ಸುರಕ್ತಾನು ಹೆ ದೈವ ಎನ್ನಆ ಮಹಾಭಯವ ನಿವಾರಿಸೊ2 ಅನುದಿನ 3
--------------
ವಾದಿರಾಜ
ಮಂದಮತಿಯೈ ನಾನುಮದನಜನಕನು ನೀನುಕುಂದುಗಳನೆಣಿಸದಲೆ ದಯೆ ಮಾಡಿ ಸಲಹೋ ಪಪಾಪಕರ್ತನು ನಾನು ಪಾಪನಾಶಕ ನೀನುಕೋಪ ಮದ ಮತ್ಸರದಿ ಸುಳಿವೆ ನಾನು ||ತಾಪವನು ತರೆದು ನಿರ್ಭಯವ ಮಾಡುವೆ ನೀನುರೂಪಛಾಯಕೆ ಮರುಳುಗೊಂಬೆನೈ ನಾನು 1ಶರಣ ಶಿಕ್ಷಕ ನೀನುಪರಮಪಾತಕಿನಾನುದುರಿತಪರ್ವತವ ಪರಿಹರಿಪೆ ನೀನು ||ಮರುಳುಗೊಂಬನು ನಾನು ಅರಿತು ರಕ್ಷಿಪೆ ನೀನುಗರುವಮತಿಯೈ ನಾನಗಮ್ಯ ನೀನು 2ಮಂದಭಾಗ್ಯನು ನಾನು ಇಂದಿರಾಪತಿ ನೀನುಹಿಂದು ಮುಂದಿನ ಸುದ್ದಿ ಅರಿಯದವ ನಾನು ||ತಂದೆ ಶ್ರೀ ಪುರಂದರವಿಠಲ ರಾಯನೆ ದೇವಎಂದೆಂದು ಭಕ್ತರನು ಸಲಹುವೆಯೋ ನೀನು 3
--------------
ಪುರಂದರದಾಸರು