ಒಟ್ಟು 3 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಸಾಧನದ ಚಿಂತೆ ಎನಗ್ಯಾಕೊ ಹರಿಯೇ ಪ. ಮಾಧವಾ ನೀಯನ್ನಾ ಮನಸಿಲಿದ್ದು ಮಾಡಿಸುವಿ ಧೊರಿಯೇ ಅ.ಪ. ಹಿಂದೇಸು ಜನ್ಮಗಳು ಬಂದು ಪೋದವು ಒಂದು ತೃಣವಾದರೂ ನಾ ಗಳಿಸಲಿಲ್ಲ ಮುಂದಿನ ಗತಿಯು ತಿಳಿಯದು ಬಿಂದು ಮಾಧವಾ ಯಾದವಾ 1 ನಿನ್ನ ಹೊರತು ಎನಗೆ ಮನ್ನಿಸುವರು ಯಾರೋ ಬೇರೆ ಗತಿ ಕಾಣೆ ಪುಸಿಯಲ್ಲಿ ಯನ್ನಾಣೆ ಪಾದಸ್ಮರಣೆ ಮಾಡಿಸುವ ಬಾರಾ ಉದಾರ ಭಕ್ತರಾಧಾರಾ 2 ಯೆಷ್ಟು ಪೊಗಳಿದರು ನಿನ್ನ ಕರುಣಕೆ ಇನ್ನು ಕೇಡು ಉಂಟೇ ಸ್ವಾಮಿ ದಯಾ ದೃಷ್ಟಿಯಿಂದಲಿ ನೋಡು ಪ್ರೇಮಿ ದುಷ್ಟ ಅಘರಾಶಿ ದೂರ ಮಾಡೋ ಕಣ್ತೆರೆದು ನೋಡೋ ಕಾಳಿಮರ್ಧನ ಕೃಷ್ಣನೆ ಮಧ್ವಮುನಿ ಪ್ರಿಯನೆ 3
--------------
ಕಳಸದ ಸುಂದರಮ್ಮ