ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾವಿನಕೆರೆ 6 ಮಾಧವನಿವನೋ ಉಮಾಧವನಿವನೋ ಮಧುಸೂದನನೋ ಗಂಗಾಧರನೋ ಪ ವೇದವನುಲಿದನೋ ನಾದಕೆ ಒಲಿದನೋ ಮೇದಿನಿಗೈದಿ ಮಾಂಗಿರಿಯ ಸೇರಿದನು ಅ.ಪ ಹಿರಿಯ ಕಲ್ಲ ಗುಡಾರದೊಳಿರುವ ಒರಳಲಿ ನಲಿವ ಹರನವೊಲೆಸೆವ ಕರಗಳಿಂದೆಳೆದರೂ ಬಾರನೆಂದೆನುವ ಸ್ಮರಿಸುವ ಮಾನವನೆದುರಲಿ ನಿಲುವ 1 ಎರೆದ ಹಾಲಾದರೂ ಸುರಿದ ನೀರಾದರೂ ದೊರಕದು ಕರಕೆ ತೊಟ್ಟೊಂದಾದರೂ ಹರಕೆ ಹೊತ್ತವರು ನೆರೆನಮಿಸುವರು ಹರುಷದಿ ಕುಣಿದು ಕೊಂಡಾಡುತಿಹರು 2 ಸಾವಿರ ನಾಮನು ದೇವನೀನೊಬ್ಬನು ಭಾವದೊಳಿರುವನು ಕಾವವನು ನೋವ ಬಿಡಿಸುವನು ಪಾವನಚರಣನು ಭಾವುಕಗೊಲಿವನು ಗಿರಿಯ ಮೇಲಿಹನು 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾರಲ್ಲಿ ಪೋದರು ನೀರಾದರೂ ಕೊಡರು ಪ ದೂರ ಹೋಗೆಂಬರು ಬದಿಸೇರಲೀಸರು ಅ.ಪ ಹಸಿವು ತೃಷೆಗಳಿಂದಲಿ ವ್ಯಸನವಪಡುತಲಿ ಉಸುರುಸುರೆನುತಲಿ ಬಸವಳಿದು ಭಯದಲಿ 1 ರೋಗದಲಿ ಬಳಲುತ ಹ್ಯಾಗಿನ್ನು ಎನ್ನುತ ಕೂಗುತ್ತ ಬಾಯ್ಬಿಡುತ ಎಲ್ಲರನು ಬೇಡುತ 2 ಗುರುರಾಮವಿಠಲನ ನೆರೆ ನಂಬದಿರುವನ ಪರಿಪರಿಯಲಿ ಜನ ಬಯ್ಯುವರನುದಿನ 3
--------------
ಗುರುರಾಮವಿಠಲ