ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

2. ಕವಿ ಲಕ್ಷ್ಮೀಶನ ವಸಂತ ವರ್ಣನೆಯ ಹಾಡುಗಳು ಇಂದು ಮುಖಿಯರು ಬಂದು ನೆರದು ಕಂದರ್ಪನಯ್ಯಗೋವಿಂದ ಮುಕುಂದನೊಳು ದ್ವಂದ್ವದಿಂದೊಲಿದು ವಸಂತವಾಡಿದರೂ ಪ ನವರತ್ನ ಖಚಿತ ಮೋಹನದ ಮಂಟಪದಲ್ಲಿ ನವಕುಸುಮ ಫಲಗಳನು ಕಟ್ಟಿದರು ನಲವಿನಲಿ ನವಮೋಹನಾಂಗಿಯರು ನವರಸ ಪ್ರೌಢೆಯರು ನವನೀತ ಚೋರನನು ನಿಲಿಸಿ ತವ ತವಕದಿಂದ ತರುಣಿಯರೆಲ್ಲ ವೊಲವಿನಲಿ ಕವಕವಿಸಿ ಹೊಳೆವ ಹೊನ್ನಂದುಗೆ ಘಲಿರೆನಲು ಭವ ಭವಕೆ ಕಾಣೆ ಯೆಂದತಿ ಮನೋಪ್ರೀತಿಯಲಿ ಪವಣರಿತು ಕುಂಕುಮವ ತಳಿದರು ಶ್ರೀಹರಿಗೆ 1 ಕಳಹಂಸ ಗಮನೆಯರು ತಳಿರಡಿಯ ನೀರೆಯರು ಸೆಳೆನಡುವಿನಬಲೆಯರು ಹೊಳೆವ ನಳಿದೋಳವನು ಥಳಥಳಿಪ ಕುಚದ ಕಾಂತೆಯರು ನಳನಳಿಪ ವದನೆಯರು ಎಳೆನಗೆಯ ಭಾವೆಯರು ಸುಳಿಗುರುಳ ನಾರಿಯರು ಅಳವಟ್ಟ ಚಲುವೆಯರು ನಳಿನನೇತ್ರನಿಗೆ ಕಮ್ಮಲರ ಸೂಸಿದರೂ 2 ಪುಣುಗು ಜವ್ವಾಜಿ ಪಚ್ಚೆ ಪರಿಮಳವನೆ ತೆಯಿದು ಘಣಿರಾಜಶಯನ ಬಾಬಾಯೆಂದು ಪ್ರೇಮದಿ ಕುಣಿವ ಸೋಗೆಗಳ ಮುಡಿಯಂದದಬಲೆ ಬಲೆಯರೆಯಡಿ ಗುಣನಿಧಿಯ ಹಿಡಿಯ ಬೇಕೆನುತಾ ಕ್ಷಣ ಬೇಗದಲಿ ಹಾಯ್ದು ಗಿಣಿವಾಕಿನಲಿ ನುಡಿದು ಕ್ಷಣ ಬೇಗದಲಿ ಹಾಯಿದು ಗಿಣಿವಾಕಿನಲಿ ನುಡಿದು ಯೆಣೆಯಿಲ್ಲ ನಿನಗೆಂದು ಪ್ರಣವಗೋಚರಗೆ ಚಂದನವ ಮಾಡಿದರೂ 3 ಮತ್ತಗಜಗಾಮಿನಿಯರೊತ್ತಾಗಿ ಒಡಂಬಟ್ಟು ಹತ್ತಬಿಗಿದಂಬರವನುಟ್ಟೂ ಒತ್ತರಿಸಿ ಸು ತ್ತುವರಿಯುತ್ತ ಹಾಹಾಯೆಂದು ಚಿತ್ತಿನಿ ಪದ್ಮಿನಿ ಶಂಖಿನಿಯರೊಂದಾಗಿ ಚಿತ್ತಜನ ಪಿತಗೆ ಕತ್ತುರಿಯ ರಚಿಸಿದರೂ 4 ಅಂಬುಜಾಕ್ಷಿಯರೆಲ್ಲ ಹರುಷದಿಂದನೆರದು ಚೆಂಬೊನ್ನ[ಕಳಸ]ಗಳ ಪಿಡಿದು ಪುಳಕವ ಜಡಿದು ಸುರರು ಪೂಮಳೆಗರೆದು ಹಾಯೆಂದು ಕಂಬುಧರ ನಿಲ್ಲು ನಿಲ್ಲೆಸುತಾ ಕುಂಭಿನಿಯೊಳಧಿಕ ಸುರಪುರದ ಲಕ್ಷ್ಮೀಪತಿಯ ಬೆಂಬಿಡದೆ ಪೊಂಬಟ್ಟೆಯಂ ಪಿಡಿದು ಸರಸದಿ ಕುಂಭಕುಚದಿಂದಪ್ಪಿ ತಕ್ಕೈಸಿ ಮನ ಬಂದು ಸಂಭ್ರಮದಲೋಕುಳಿಯನಾಡಿದರು 5
--------------
ಕವಿ ಲಕ್ಷ್ಮೀಶ
ನೀರೆಯರು ಸಾರುತ್ತ ಮುದದಿ ನೀರಜದಾರತಿ ಬೆಳಗಿದರು ಪ ಸೇರಿ ಸೀತಾ ನಾರೀಮಣಿಯಿಂ ರಾರಾಜಿಪ ಶ್ರೀರಾಮಗೆ ಅ.ಪ. ಕಂದರ್ಪಸತಿ ಸುಂದರಾಂಗಿಗೆ ಇಂದುವಂಶ ನಂದಿನಿ ಸೀತೆಗೆ 1 ಕರಾಂಬಕಿ ಲೋಕ ವಂದ್ಯೆಗೆ ಮಾತೃ ಮಾತೆಗೆ ಸೀತೆಗೆ 2 ಚಿತ್ತ ಮಿತ್ರೆ ಮೀನನೇತ್ರೆಗೆ ಧೇನುನಗರ ನಾಥೆಗೆ ಸೀತೆಗೆ 3
--------------
ಬೇಟೆರಾಯ ದೀಕ್ಷಿತರು
ಬಾಲಗೋಪಾಲ ಹಸೆಗೆ ಲೀಲೆಯಿಂದ ಬರ್ಪುದೈ ಪ ನೀಲಮೇಘನಿಭ ಸುರೂಪ ಕಾಲಕಾಲವಂದ್ಯ ಬೇಗ ಅ.ಪ ಸಾರಸಾಕ್ಷ ಸರ್ವರಕ್ಷ ಘೋರದೈತ್ಯಸಂಹಾರ ನಾರದಾದಿವಂದ್ಯ ನಮಿಸಿ ನೀರೆಯರು ಕರೆಯುವರು 1 ಸಾಮಜ ಧ್ರುವ ಭಕ್ತ ವರದ ಸಾಮಗಾನ ಲೋಲನೇ ಕಾಮಜನಕ ಕರುಣಪೂರ ಸ್ವಾಮಿಪ್ರೇಮ ತೋರುತ 2 ಅಜಸುಪೂಜ್ಯ ತ್ರಿಜನರಾಜ್ಯ ಭಜಕಜನ ಮನೋಹರ ರಜತಹೇಮಪೀಠಕೀಗ [ಬೇಗ] ಜಾಜಿ ಕೇಶವನೇ 3
--------------
ಶಾಮಶರ್ಮರು
ಮೂರನೆಯ ಸಂಧಿ ಪತ್ರವನೋದಿಕೊಂಡು ಪದ್ಮನಾಭನ ಕಿಂಕರಗೆ ವಿಷಯೆ ವಿಶಾಲದಿ ಸಖಿಯರು ಕೂಡಿ ಆಲಯದಿಂದಲಿ ಹೊರಟರು ವಸಂತಕಾಲ ಬಂದಿರೆ ನಂದನಕೆ 1 ವಚ್ಚೇರೆಗಂಗಳ ವಾರಿಜಮುಖಿಯರು ನಿಚ್ಚಳಾಂಗದ ನೀರೆಯರು ಹೆಚ್ಚ ಹಿರಿಯ ಹೆಂಗಳ ರನ್ನೇರು ಬೆಚ್ಚದೆ ಬೆರೆದು ನಡೆದರು 2 ಚೆಲ್ಲೆಗಂಗಳ ಚೆಲ್ವೆಯರು ಎಲ್ಲರೈದಿದರು ನಂದನಕೆ 3 ಕಳಸಕುಚದೋರು ಕಂಬುಕಂಧರೆಯರು ಕುಂತಳಕಾಗಿ ನಡೆದರು4 ಚೆಂದುಟಿ ಚೆಲುವಿನ ಬಾಲೆಯರು ನಟನೆಯಿಂದೆಲ್ಲ ನಡೆದರು 5 ತಬ್ಬುತ ತಾಗೊಲವುತಲಿ ಕಬ್ಬುವಿಲ್ಲನ ಕೋಲಾಹಲ ಉಲ್ಲಸದಿ ತಬ್ಬಿ ನಡೆದರು ನಂದನಕೆ 6 ಕಕ್ಕಸ ನಕ್ಕುನಲಿದು ನಾನಾ ಚೇಷ್ಟೆಗಳಿಂದ ಹೊಕ್ಕರು ನಂದನವನವ7 ಸರೋವರವಿಳಿದು ಮಾಡಿದರ್ ಕೈಚಳಕವ ಜಲಕ್ರೀಡೆಯನಾಡಿದರತಿ ಹರುಷದಲಿ 8 ಕೆಂದಾವರೆ ಮೊಗ್ಗು ಕಂಡು ಹರುಷದಿ9 ಕೋಮಲೆಯರ ನೀರಾಟದ ರಭಸಕ್ಕೆ ತಾವರೆಗಳು ಬೆರಗಾಗೆ ಹೇವದಿ ತಲೆಯ ತಗ್ಗಿದವು10 ಸಮನಾಗಿ ತೋರುತಲಿಹವು 11 ದಿವ್ಯಾಂಗ ತೋರುತಲಿ ಹೆರೆಯ ಕೂರಂಬಿನಂದದಲಿ12 ಸಡಿಲಿದಾಭರಣವನಿಟ್ಟು ಮುಡಿದರು ತುದಿವೆಣ್ಣೆಗಂಟು 13 ಕಣ್ಣಿಗೆ ಅಂಜನ ಹಚ್ಚಿ ಸಂಪಿಗೆ ಮಕರಂದ ಪತ್ರಿಕೆಯನಿಟ್ಟು ಲಲನೆಯರೆಲ್ಲ ಶೃಂಗಾರದಿ 14 ಮಾನಿನಿಯರು ತೆರಳಿದರು 15 ಕಂದರ್ಪನ ಮದದಾನೆಯಂತೆ ಕರ್ಪುರ ವೀಳ್ಯವ ಕರದಲ್ಲಿ ಪಿಡಿದು ಗುಪ್ಪವಡೆದರು ನಾರಿಯರು 16 ಘನರಾಗದಿಂದ ಪಾಡುತಲಿ ತಮ್ಮ ಮನಬಂದ ಫಲ ಪುಷ್ಪಂಗಳ 17 ಉದ್ದಂಡತನದಲಾಡುತಿಹರು 18 ಬೆರಸಿಕೊಂಡಾಡುತಲಿಹರು ಹರುಷದಿಂದಲಿ ಮಂತ್ರಿ ತನುಜೆ 19 ಚಿಕ್ಕ ಪ್ರಾಯದ ಕೋಮಲಾಂಗಿಯು ಹೆಮ್ಮಕ್ಕಳನಗಲಿ ತಾ ಚೂತ ಬೆಕ್ಕಸ ಬೆರಗಾಗಿ ನಿಂದಳ್ 20 ಮತಿಭ್ರಮೆಯಿಂದ ನೋಡಿದಳು 21 ಪಾರ್ವತಿಪತಿಯೆಂಬೆನೆ ಪಣೆಗಣ್ಣಿಲ್ಲ ವಾರಿಜೋದ್ಭವನಿವನಲ್ಲ ನಾರಾಯಣನೆಂಬೆನೆ ಶಂಖಚಕ್ರವು ತೋರುವುದಿಲ್ಲ ಕೈಯೊಳಗೆ 22 ಇಂದ್ರನೆಂಬೆನೆ ಬಿಳಿಯಾನೆ ಕೆಲದಲಿಲ್ಲ ಚಂದ್ರನೆಂಬೆನೆ ಮೃಗವಿಲ್ಲ ಬಂದಿಳಿದನೊ ಭೂತಳಕೆ 23 ಕುಸುಮ ಬಾಣವು ಕೈಯೊಳಿಲ್ಲ ವಿಷಯೆ 24 ಹತ್ತಿರೆ ಬಂದು ನಿಲ್ಲುವಳು ಹೊತ್ತಲ್ಲವೆಂದು ಸಾರುವಳು 25 ಮುಟ್ಟುವೆನೆಂದು ನಿಲ್ಲುವಳು ಥಟ್ಟನೆ ಕಡೆಗೆ ಸಾರುವಳು 26 ಲಜ್ಜೆಹೋದರು ಹೋಗಲಿ ಎನುತ ಭೇದಿಸಿ ನೋಡಿದಳವನ 27 ಚೊಗೆಯ ಕುಪ್ಪಸದ ಕೊನೆಯಲ್ಲಿ ಮಂತ್ರಿ ತನುಜೆ 28 ಹೊದ್ದಿದ್ದ ಲಜ್ಜೆ ಭಾವದಲಿ ಸಾರ್ದುಮುದ್ರೆಯೊಡೆದಳಂಬುಜಾಕ್ಷಿ 29 ಮೋಡಿಯ ಬರೆದ ಬರಹನು ಮಾಡಿದ ಸುಕೃತದ ಫಲದಿ 30 ನೇಮಿಸಿ ಕಳುಹಿದ ಕಾರ್ಯ ವಿಷವ ಕೊಡುವುದುತ್ತಮವು 31 ಭಾವಿಸಿ ನಿನ್ನ ಮನದಿ ಮುಂದಕ್ಕೆ ಲೇಸುಂಟು ನಮಗೆ 32 ಕೈತಪ್ಪೆಂದು ಮನದಲ್ಲಿ ತಿಳಿದು 33 ವಾಕಾರವನೆ ಚೆಳ್ಳುಗುರಿಂದಲಿ ತಿದ್ದಿ ಯೇಕಾರವನೆ ಮಾಡಿದಳು ಮರುಗಿದಳು 34 ಕಟ್ಟಿದ ಭರದಿಂದ ತಲೆಯನು ಎತ್ತಿ 35 ನಿಂದೊಮ್ಮೆ ನೋಡುವಳು ಕಂದಿ ಕಾತರಿಸುತಲಿಹಳು 36 ಬೆದರಿದ ಹುಲ್ಲೆಯಂದದಲಿ ಹೃದಯ ಸಂಚಲಿಸುತಲಿಹಳು 37 ಹುಸಿ ನುಡಿಗಳನು ಉಟ್ಟ ದೇವಾಂಗ 38 ಪರಿಮಳ ಮಾಜುವುದೆ
--------------
ಹೆಳವನಕಟ್ಟೆ ಗಿರಿಯಮ್ಮ