ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೈ ಮುಗಿವೆ ಕೈ ಮುಗಿವೆ ಕೈಮುಗಿವೆನುಸಖಿ ವೈಭವದ ಗುರುಗಳು ಕೈವಲ್ಯನೀವನಮ್ಮ ಕವಿಗಳ ಚರಣಕ್ಕೆ ಪ. ಪದ್ಮನಾಭ ಮಾಧವ ಮಾಧವ ಅಕ್ಷೋಭ್ಯರ ಚರಣವವಿದ್ಯುಕ್ತದಿಂದ ಬಲಗೊಂಬೆ ಸಖಿಯೆ 1 ಪ್ರಶಿದ್ದ ಜಯತೀರ್ಥ ವಿದ್ಯಾಧಿರಾಜಕವೀಂದ್ರ ವಾಗೇಶ ರಾಮಚಂದ್ರರೆ ಸಖಿಯೆ ವಾಗೇಶ ರಾಮಚಂದ್ರ ವಿದ್ಯಾನಿಧಿಗಳಪಾದಪದ್ಮವ ಮೊದಲೆ ಬಲಗೊಂಬೆ ಸಖಿಯೆ 2 ರಘುನಾಥ, ರಘುವರ್ಯ, ರಫೂತ್ತಮ ತೀರ್ಥರವೇದವ್ಯಾಸ ವಿದ್ಯಾಧೀಶರೆ ಗೆಲಿಸಲಿವೇದವ್ಯಾಸ ವಿದ್ಯಾಧೀಶರ ಚರಣವಭಕ್ತಿಯಿಂದಮೊದಲೆ ಬಲಗೊಂಬೆ ಸಖಿಯೆ3 ಅಗಣಿತ ವೇದನಿಧಿ ಸತ್ಯವೃತ ತೀರ್ಥರ ಸತ್ಯನಿಧಿ ಸತ್ಯನಾಥರೆ ಸಖಿಯೆಸತ್ಯನಿಧಿ ಸತ್ಯನಾಥರ ಚರಣವ ಅತ್ಯಂತವಾಗಿ ಬಲಗೊಂಬೆ ಸಖಿಯೆ4 ಸತ್ಯಾಭಿನವತೀರ್ಥ ಸತ್ಯಪೂರ್ಣತೀರ್ಥರಸತ್ಯ ವಿಜಯ ಸತ್ಯಪ್ರಿಯರ ಸಖಿಯೆಸತ್ಯ ವಿಜಯ ಸತ್ಯಪ್ರಿಯತೀರ್ಥರಚರಣವ ಅತ್ಯಂತವಾಗಿ ಬಲಗೊಂಬೆ ಸಖಿಯೆ 5 ಸತ್ಯಬೋಧ ಸತ್ಯಸಂಧ ಸತ್ಯವರರಚಿತ್ತಶುದ್ಧಿಯಲಿ ಬಲಗೊಂಬೆಚಿತ್ತಶುದ್ದಿಯಲಿ ಬಲಗೊಂಬೆ ಸಭೆಯೊಳುಸತ್ಯವಾಕ್ಯಗಳ ನುಡಿಸಲಿ ಸಖಿಯೆ 6 ಯತಿಮುನಿರಾಯರ ಅತಿಭಕ್ತರಾಗಿದ್ದಗತಿಪ್ರದರಾದ ಗುರುಗಳ ಸಖಿಯೆಗತಿ ಪ್ರದರಾದ ಗುರುಗಳುರಾಮೇಶನ ಅತಿಭಕ್ತರ ಮೊದಲೆ ಬಲಗೊಂಬೆ 7
--------------
ಗಲಗಲಿಅವ್ವನವರು