ಒಟ್ಟು 39 ಕಡೆಗಳಲ್ಲಿ , 25 ದಾಸರು , 38 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಬಪ್ಪನಾಡ ದುರ್ಗಾಪರಮೇಶ್ವರಿ) ಬಪ್ಪನಾಡ ಭದ್ರಕಾಳಿ ತಪ್ಪು ಕ್ಷಮಿಸಿ ಸಲಹಮ್ಮ ನ- ಮ್ಮಪ್ಪ ಶ್ರೀನಿವಾಸ ದೇವನಪ್ಪುತಾನಂದಾಬ್ಧಿಗಿಳಿದ ಪ. ಸರಸಿಜಾಸನಾದಿ ದೇವ ವರರ ನೀನೆ ಸಲಹುವಿ ದುರುಳ ಜನರ ತರಿದು ಭೂಮಿ ಭರವನೆಲ್ಲ ಇಳುಹುವಿ ಚರಿಯ ತೋರ್ಪಮಾಯೆ ಅಲ್ಯ- ಲ್ಲಿರುವ ಶತ್ರು ಪುಂಜವ ಕತ್ತರಿಪದೇನಾಶ್ಚರ್ಯ ತಾಯೆ 1 ಶಂಬರಾರಿ ಪಿತನಪಾದ ನಂಬಿಕೊಂಡ ರಾತಿಯ ಅಂಬೆ ನಿನ್ನ ಕರುಣದಿಂದ ಸಂಭವಿಸಿದ ಖ್ಯಾತಿಯ ಡಂಬತನದ ಶುಂಭ ನೀಶುಂಭ ದಮನೆ ಶಕ್ತಿ ನಿನ- ಗೆಂಬುದೇನು ದಾಸದಾಸನೆಂಬದರಿತು ಸಲಹು ದೇವಿ 2 ಮೂಢಮತದಿ ಮುಂದೆ ಹೋಗಿ ಮಾಡಿದಂಥ ಕುಂದನು ಪ್ರ- ಹುಡೆ ಕ್ಷಮಿಸಬೇಕೆಂದಿಂದು ಓಡಿ ಬಂದು ನಿಂದೆನು ಮೂಡಲಾದ್ರಿವಾಸನಡಿಯ ಪಾಡುವನೆಂದೆನ್ನನು ಕಾ- ಪಾಡಿ ಕಡೆಹಾಯಿಸುವದೆಂದು ಬೇಡಿಕೊಂಬೆ ಭಯಹರಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಂಜ್ಯಾಕೆ ಎಲೆ ಮನುಜ ಭಯವಿಲ್ಲ ನಿನಗೆ ಕಂಜನಾಭನ ಧ್ಯಾನವಿರಲಿ ಮನದೊಳಗೆ ಪ ತಾಪತ್ರ ಬಂದೊದಗೆ ಪಾಂಡುಪ್ರಿಯನೆಂದೆನ್ನು ಶಾಪವೊದಗಲು ಅಂಬರೀಷನ್ವರದೆನಲೋ ಭೂಪತಿಗಳು ಮುನಿಯೆ ಪಾಂಚಾಲಿಪಾಲಕನೆನ್ನು ಆಪಾರ ಕಷ್ಟದಲಿ ಕರಿವರದೆನೆನಲೋ 1 ಮಾತೃ ವೈರ್ಯಾದರೆ ಧ್ರುವಪಾಲನೆನಲೋ ಭ್ರಾತೃವೈರ್ಯಾದರೆ ಸುಗ್ರೀವಸಖನೆನ್ನು ಖಾತ್ರಿಯಿಂ ಸತತದಿ ಸೂತ್ರಧಾರೆನಲೋ 2 ಸೆರೆಮನೆಯು ಒದಗಿರಲು ಪಿತಮಾತೆರ್ವರದೆನ್ನು ಧುರದೊಳಗೆ ಪೊಕ್ಕಿರಲು ನರಸಹಾಯನೆನಲೋ ಬರಿ ಮಳೆಯೊಳ್ಸಿಕ್ಕಿರಲು ಗಿರಿಯೆತ್ತಿದವನೆನ್ನು ದುರುಳರ್ಹಾವಳಿಯೊಳಗೆ ದನುಜಹರನೆನಲೋ 3 ಕವಿಯಲು ವೈರಿಗಳು ಕಂಸಮರ್ದನನೆನ್ನು ಶಿವನ ಕಾಯ್ದವನೆನ್ನು ಉರಿಹತ್ತಿಸುಡಲು ಭವಿಜನುಮ ಬಂದಿರಲು ಭವರೋಗಹರನೆನ್ನು ದಿವನಿಶೆಯು ಎಡೆಬಿಡದೆ ಭಯದೂರನೆನಲೋ 4 ಸ್ಥೂಲಭ್ರಷ್ಟನಾದರೆ ಬಲಿದ್ವಾರಪಾಲಕನೆನ್ನು ಕುಲಭ್ರಷ್ಟನಾದರಜಮಿಳನ್ವರದನೆನಲೋ ಇಳೆಮೂರು ಸಂರಕ್ಷ ಚೆಲುವ ಶ್ರೀರಾಮನಂ ಹಲವು ವಿಧದಲಿ ಭಜಿಸಿ ಫಲಗಳಿಸು ಬಿಡದೆ 5
--------------
ರಾಮದಾಸರು
ಅಯ್ಯಾಜಗದಯ್ಯಾ ಪ ಅಯ್ಯಾ ಜಗದಯ್ಯಾ ಜೀಯಾನಂದ ನಿಮ್ಮ ಮಹಿಮೆಯ ಅಜ ಭವಾದಿಗಳಿಗೆ ತಾಯಿಯ ಮರೆವ ಶಿಶುವಿನ ಪರಿದಣಿದೆನಾ ಪ್ರೀಯದಲಿ ಸಲಹವು ಅವಗುಣ ನೋಡದೇ 1 ಧರೆಯೊಳಗ ಸಕಲಪತಿತರನ್ನು ಉದ್ಧರಿಸಲ್ಕೆ ಪರಬೊಮ್ಮತಾನೊಂದು ರೂಪನಾಗಿ ಕರುಣದಿಂದಲಿ ಅವತರಿಸಿದನೆಂದೆನ್ನದೆ ನರನೆಂದು ಬಗೆವವನು ಗುರುತಲ್ಪಕಾ2 ಸಾಕಾರ ನಿಮೈಲನಾಗಿ ಕ್ರೀಡಿಸಿದರೆಯು ಏಕ ಮೇವಾದ್ವಿತಿಯು ಶೃತಿಯೆನುತಿರೇ ಕಾಕು ಬುದ್ದಿಯಲಿ ಪರತರ ವಸ್ತು ನಿಮಗೆಂದ ಧಿಕ ಉಂಟೆಂಬುವ ಸುರಾಪಾನಿಯು 3 ಗಗನದಂದಲಿ ಸಕಲಾತೀತನಾಗಿನೀ ಮಿಗಿಲೆನಿಸಿ ಸಂಸಾರ ಸ್ಥಿತಿಯಲಿರಲು ಅಗಣಿತತೆ ಗುಣಬಂದನವ ಕಲ್ಪಿಸುವ ಜಗದೊಳಗ ಬ್ರಹ್ಮತ್ಯಕಾರನವನು 4 ಎನಗ ತಾರಕ ವಸ್ತು ಇದೆಯೆಂದು ನಿಶ್ಚೈಸಿ ತನು ಮನರ್ಪಿಸಿ ನಿಮ್ಮ ಚರಣಾಬ್ಜಕೆ ಘನನಂಬಿ ಶರಣವನು ಪೊಕ್ಕುನೆಲೆಗೊಂಬುದಕೆ ಅನುಮಾನ ವಿಡಿವವನ ಸ್ವರ್ಣಸ್ತೇಯಾ5 ಇಂತು ಪರಿಯಾದಾ ನಾಲ್ವರ ಸಂಗಡದಲಿ ಅ ತ್ಯಂತ ಹರುಷದ ತಾವ ಬಾಳುತಿಹನು ಅಂತಿಜನ ಸಮನಾದ ಸರ್ವದ್ರೋಹಿಯವನು ಸಂತತ ಬುಧ ಜನರು ಯನುತಿರುವರು 6 ಎಂದೆಂದು ಈ ಪಂಚ ಮಹಾಪಾತಕಿಳಗಳ ಮುಖ ತಂದೆ ತೋರಿದಿರೆನ್ನ ನಯನಗಳಿಗೆ ಎಂದು ಬಿಡದೇ ಕಾಯೋ ಮಹಿಪತಿ ಸುತ ಪ್ರಾಣ ಛಂದದಲಿ ಮಂದಮತಿ ತನ ಹರಸಿಯನ್ನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದುಶೇಖರಾ ಮನ್ನಿಸೋ ದಯದಿಂದ ಶಂಕರಾ ಪಪಂಚವಕ್ತ್ರನೆ ಪಾಲಿಪುದು ತ್ರಿಪಂಚನೇತ್ರನೆಪಂಚಭೂತ ತನು'ದೆನಗೆ ಪಗೆಯಾಗಿದೆ ನೋಡಯ್ಯಾವಂಚಕನು ನೀನೆಂದೆನ್ನ ವಾರೆನೋಡಬೇಡಯ್ಯಾಸಂಚರಿಪ ಮನಕೆ ಮನುವ ತೋರಿ ನೋಡಬೇಡಯ್ಯಾಪಂಚಶಿರದ ನಾಮಾಧೀಶ ಪರಮ ಕೃಪೆಮಾಡಯ್ಯಾ 1ವ್ಯಾಳಭೂಷಣನೆ ಬಿನ್ನಪವನ್ನು ಕೇಳು ಈಶನೆಏಳು 'ಷಯ ವ್ಯಸನಾದಿಗಳಿಂದೇಳಿಗೆಯ ಘನವಾದಾಳಿವರಿದಾ ಕರಣಾತಡಿಗೆ ಧೈರ್ಯ ಕಲಿತನವಾತಾಳಲಾರೆನಯ್ಯಾ ಎನ್ನ ತನು'ನವಗುಣವಾಫಾಲನೇತ್ರ ಬಿಡಿಸೊ ನಿನ್ನ ನೆನ'ಗಿತ್ತಭಯವಾ 2ಕಾಮನಾಶನೆ ಕರುಣಿಸಯ್ಯಾ ವ್ಯೋಮಕೇಶನೆಹೇಮ ಭೂ'ು ಹೆಣ್ಣಿಗಾಗಿ ಹೇಳಲೇನ ನೊಂದೆನೈತಾಮಸಗುಣಂಗಳಿಂದ ತಾಪಹೆಚ್ಚಿ ಬೆಂದೆನೈಕಾ'ುನಿಯರೆಡೆಯೊಳೆನ್ನ ಕಾಡಬೇಡವೆಂದೆನೈನಾಮರೂಪಕ್ರಿಯಾರ'ತ ನೀನೆ ಗತಿಯೆಂದೆನೈ 3
--------------
ತಿಮ್ಮಪ್ಪದಾಸರು
ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5
--------------
ವೆಂಕಟದಾಸರು
ಏನೂ ಸಾರ್ಥಕವಿಲ್ಲವೋ ಪ ಏನೂ ಸಾರ್ಥಕವಿಲ್ಲ ಜ್ಞಾನಮಾರ್ಗಗಳಿಲ್ಲ ಮಾನಸ ಸ್ಥಿರವಿಲ್ಲ ಶ್ರೀನಾಥನಿದಬಲ್ಲ ಅ.ಪ ಎರಡುಕಂಬದ ಮೇಲೆ ಇರುವ ಪಂಜರವಿದು ಬರಿಯಡಂಭದ ಜಗವು ಸ್ಥಿರವೆಂಬ ತನುವಿನೊಳು 1 ತೈಲವಿಲ್ಲದ ದೀಪ ಮಲಿನವಾಗುವ ತೆರದಿ ಸುಲಭದೊಳಿಹ ಪ್ರಾಣ ತೊಲಗಿದ ಬಳಿಕಿನ್ನು 2 ಸಂತೆಗೈದಿದ ಜನದಂತೆ ಪಂಚೇಂದ್ರಿಯವ ನಾಂತ ದೇಹವು ವ್ಯರ್ಥ ಅಂತರಾತ್ಮನು ಹೋಗೆ 3 ರಸನೆ ತೊದಲುವ ಮೊದಲು ಅಸುವು ಪೋಗುವ ಮೊದಲು ಅಸುರಾರಿ ಎಂಬ ಮಧುವ ರಸನೆಯೊಳಿಡೋ ಮನುಜ4 ದಿನದಿನ ಹರಿಕೃಷ್ಣ ವನಮಾಲಿಯ ನುತಿಸೋ ತನುವ ಪ್ರಾಣವ ಬಿಡುವ ದಿನವನರಿಯೆ ನೀನು 5 ದೇವದೇವನೆ ನಿನ್ನ ಸೇವಕನೆಂದೆನ್ನ ಭಾವಿಸೋ ಮದನಾಂಗ ಮಾವಿನಕೆರೆರಂಗ6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಓಡ್ಯಾಡುತ ನೀ ಒಲಿದೊಲಿದು ಮನೆಗೆ ಬಾರೊ ಮುಕುಂದ ನೋಡೆನ್ನನು ದಯಮಾಡದಿರುವುದೇನು ಚೆಂದ ಪ ನೀಲವರ್ಣನೆ ನೀರಜಾಕ್ಷ ನಿನ್ನಪಾರ ಗುಣವ ನಾ ಏನುವರ್ಣಿಸಲ್ಹೇಳೊ ಸಾಕ್ಷ ಇಂದಿರಾಪತಿ ನಿನ್ನ ಆಕಾರ ನೋಡುವೆ- ನೆಂದ್ಹುಟ್ಟಿತೆನಗೆ ಮಹಾಪೇಕ್ಷ 1 ಹಸ್ತಿ ವರದ ಕೇಳು ನಿನ್ನ ಚರಣಾಬ್ಜಗಳಿಗೆ ನಾ ಮಸ್ತಕ ಬಾಗುವೆ ಮುನ್ನ ತಿಳಿ ಭೃತ್ಯನೆಂದೆನ್ನ ಚಿತ್ತಕೆ ತಂದು ನೀ- ನಾಗ ಬೇಕೆನಗೆ ಪ್ರಸನ್ನ 2 ಉಟ್ಟಾಂಬರನಿರಿಜರವು ಭೂಷಣ ಹೊಸ ಪರಿಯು ವಕ್ಷಸ್ಥಳದಿ ನೋಡೋ ಸಿರಿಯು ಇಟ್ಟಿರೋ ಬಾಪುರಿಯು ಶ್ರೇಷ್ಠ ಭೀಮೇಶ- ಕೃಷ್ಣನೆ ಲೋಕನಾಳುವ ದೊರೆಯು 3
--------------
ಹರಪನಹಳ್ಳಿಭೀಮವ್ವ
ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕನಿಕರವಿಲ್ಲವೆ | ವನರುಹಲೋಚನಾ ಪ ಘನಕೃಪಾಪೂರ್ಣ ನೀನೆನುವುದು ಜಗವೆಲ್ಲಾ ಎನಗದು ನಿಜವೆಂದು ಅರಿವಾಗಲಿಲ್ಲ ಅ.ಪ ವೇದ ಪುರಾಣವ ಓದಿ ತಿಳಿಯಲಿಲ್ಲ ಸಾಧುಸಂತರ ಸೇವೆ ಸಾಧಿಸಲಿಲ್ಲ ಭಾರ ನಾನಾದೆನಲ್ಲ ಆದಿಮೂರುತಿ ನಿನ್ನಾರಾಧನೆ ಮಾಡಲಿಲ್ಲ 1 ಜ್ಞಾನ ಸುಧಾರಸ ಪಾನವ ಮಾಡಲಿಲ್ಲ ದೀನತೆಯೊಳು ನಿನ್ನ ಧ್ಯಾನಿಸಲಿಲ್ಲ ದೀನರ ಸಂಗದಿ ಶ್ವಾನನಂತಾದೆನಲ್ಲ ನಾನು ನನ್ನದು ನಿನ್ನಾಧೀನವಾಗಲು ಇಲ್ಲ 2 ನಿನ್ನ ಬಿಟ್ಟನ್ಯರ ಇನ್ನು ಸೇವಿಪುದಿಲ್ಲ ಅನ್ನ ಪಾನಂಗಳೊಳಿನ್ನಾಸೆಯಿಲ್ಲ ನಿನ್ನ ನಾಮಾಮೃತವನು ಬಿಡುವವನಲ್ಲ ನಿನ್ನವನೆಂದೆನ್ನ ಮನ್ನಿಸೊ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕನ್ಯಾರತ್ನವನಿತ್ತನು ಹರಿಗೆ ಸತ್ರಾಜಿತರಾಯನು ಪ ಧನ್ಯನು ತಾನೆಂದೆನ್ನುತ ಯದುಕುಲರನ್ನ ಸುಗುಣ ಸಂಪನ್ನಗೆ ಹರುಷದಿ ಅ.ಪ. ಸನ್ನುತ ಚರಣನಿಗೆ ಕಮನೀಯ ಸ್ವರೂಪಗೆ ಕಮಲಾರಮಣಗೆ ಸ್ವರತನಿಗೆ ಕಾಮಿತ ಫಲದಾತಗೆ ಸುಮಬಾಣನ ಪಿತ ಸುಂದರಗೆ ಸುಮದಳನೇತ್ರನಿಗೆ ನಮಿಪ ಜನರ ಸುರದ್ರುಮನೆಂದೆನಿಸುವ ಅಮಿತ ಮಹಿಮಯುತಸಮವಿರಹಿತನಿಗೆ 1 ಬೃಂದಾರಕ ಬೃಂದ ಸುವಂದಿತಗೆ ಶ್ರೀ ಗೋವಿಂದಗೆ ಬೃಂದಾವನ ವಿಹರಣ ವಿಭವಗೆ ವಿಶ್ವಂಭರನಿಗೆ ಮಂದಾಕಿನಿ ಜನಕಗೆ ಮಾಧವಗೆ ಮರಕತಶ್ಯಾಮನಿಗೆ ಮಂದರಧರ ಮುಚುಕುಂದವರದ ಪೂ ರ್ಣೇಂದು ವದನಗುಣಸಾಂದ್ರ ಮುಕುಂದಗೆ 2 ವರಲೀಲಾ ಮಾನುಷ ವೇಷನಿಗೆ ವದನಾಂಬುಜದಲಿ ಸರಸಿಜ ಜಾಂಡವ ತೋರಿಪಗೆ ಸಾರಸನಾಭ ಪರಮಪಾವನ ಚರಿತಗೆ ಪುರುಷೋತ್ತಮನಿಗೆ ಗರುಡಗಮನ ಶ್ರೀ ಕರಿಗಿರೀಶ ಯದು ವರಕುಲಮಣಿ ಮುರಹರನಿಗೆ ಮುದದಲಿ 3
--------------
ವರಾವಾಣಿರಾಮರಾಯದಾಸರು
ಕರೆ ಕರೆ ಭವದೊಳು ಮುಳುಗಿರುವೆ ದುರಿತದೂರನೆ ದು:ಖ ತರ ತರ ವ್ಯಥೆಯಲಿ ಪ ಅಗಣಿತ ಮಹಿಮನೆ ಸುಗುಣಗಳನುದಿನ ಬಗೆ ಬಗೆ ಸ್ಮರಿಸುವ ಬಗೆ ಮರೆದು ಹಗಲಿರುಳೆನ್ನದೆ ನಿಗಮವೇದ್ಯನ ನಾಮ ಬಗೆ ಬಗೆ ಪೊಗಳಿ ಕೊಂಡಾಡಿ ಸ್ತುತಿಸದಲೆ 1 ಜನುಮ ಜನುಮದಲಿ ಜನಿಸಿ ಬರುವ ದು:ಖ ಕೊನೆಗಾಣದಾಗಿದೆ ಕರುಣಾನಿಧೆ ಅನಿಮಿಷರೊಡೆಯ ಶ್ರೀ ಘನ ಮಹಿಮನ ನಾಮ ಮನದಣಿ ಪೊಗಳಿ ಕೊಂಡಾಡಿ ಸ್ತುತಿಸದಲೆ2 ನಾನು ನನ್ನದು ಎಂಬ ಹೀನವೃತ್ತಿಗಳಿಂದ ಹಾನಿಯಾಯಿತು ಆಯು ಶ್ರೀನಿಧಿಯೆ ಜ್ಞಾನಿಗಳೊಡನಾಡಿ ಮೌನದಿಂದಿರದಲೆ ಶ್ವಾನಸೂಕರನಂತೆ ತಿರುಗಿ ಬಾಯ್ಬಿಡುತಲಿ 3 ರಂಗನ ಮೂರ್ತಿಯ ಕಂಗಳಿಂದಲಿ ನೋಡಿ ಭಂಗಗಳಳಿಯುವ ಹರಿದಾಸರ ಸಂಗದೊಳಿರಿಸು ಉತ್ತುಂಗ ಮಹಿಮಪಾಂಡು- ಭವ ಭಂಗ ಬಿಡಿಸೆನ್ನದೆ4 ಪಾದ ಪೊಂದಿ ಭವದಘ ವೃಂದವ ಕಳೆಯುವನೆಂದೆನ್ನುತ ಬಂಧಕ ಮೋಚಕನೆಂದರಿಯದೆ ಭವ ಬಂಧನದೊಳು ಸಿಕ್ಕಿ ಬಳಲಿ ಬಾಯ್ಬಿಡುತಲಿ5 ಪರಿ ಮೋಹ ಮಾತುಳಾಂತಕ ಕೃಷ್ಣ ಮಾತು ಮಾತಿಗೆ ಹರಿ ಹರಿ ಎನ್ನದೆ ಸೋತು ಬಂದೆನೊ ದೇವ ಮಾತರಿಶ್ವನಪ್ರಿಯ ಕೋತಿ ಬುದ್ಧಿಯ ಬಿಡಿಸೆಂದು ತುತಿಸದಲೆ 6 ಕಮಲ ಪತ್ರಾಕ್ಷ ಶ್ರೀ ಕಮಲಜಾತೆಯ ಪ್ರಿಯ ಕಮಲನಾಭ ವಿಠ್ಠಲ ವಿಠ್ಠಲ ಹರೇ ಸುಮನಸರೊಡೆಯ ಶ್ರೀ ಭ್ರಮರಕುಂತಳೆ ಪ್ರಿಯಶ್ರಮ ಪರಿಹರಿಸೆಂದು ನಮಿಸಿ ಸ್ತುತಿಸುವೆನು 7
--------------
ನಿಡಗುರುಕಿ ಜೀವೂಬಾಯಿ
ಜಯತೀರ್ಥ ಮುನಿವರ್ಯ ಪ ದಯತೋರಿ ಪೊರೆಯಯ್ಯ ವಿಜಯಸಾರಥಿಪ್ರಿಯ ಅ.ಪ ಶ್ರೀಶಶಯನಾವೇಶ ಮಹೇಶ ಪ್ರತಿಬಿಂಬ ಸು ರೇಶ ಯತಿಕುಲಾಧೀಶ ಪಾಲಿಸಯ್ಯ ಏಸು ನಿನ್ನಯ ಕರುಣರಾಶಿ ಎಂತಿಹುದಯ್ಯ ಆಸೆ ಸಲಿಸಲು ಮನೆಗೆ ಲೇಸಾಗಿ ನೀ ಬಂದೆ 1 ಪಶುಪತಿಯ ಮತ ದಹಿಸಿ ಅಸುಪತಿಯ ಮತ ಮೆರೆದೆ ವಸುಮತಿಯ ಸುರನಾಗಿ ಬಂದು ನಿಂದೆ ಪಶುಪ್ರಾಯನೆಂದೆನ್ನ ಉದ್ಧರಿಸಲೋಸುಗದಿ ಬಿಸಜತವಪಾದ ಪಾಂಸವನಿತ್ತೆ 2 ಜಯಗುರುವೆ ಶ್ರೀ ವಿಜಯದಾಸರಲ್ಲೆನ್ನ ಮನೋ ಜಯವು ಪುಟ್ಟಿಸಿದ ನಿನ್ನ ಕರುಣವೆಂತೊ ಸೃಜಿಸಿ ತೋರಿದ ಸ್ವಪ್ನ ನಿಜವು ಆಗಲಿ ಎಂದು ಬಿಜಯ ಮಾಡಿದೆ ನಿನ್ನ ನಿಜದಾಸರೊಡನೆ 3 ಜಯಗುರುವೆ ನಿಮ್ಮ ಹುದ್ಗುಹದಲಿ ನಲಿಯುತಿಹ ವಾಯುವಂತರ್ಗತ ಕೃಷ್ಣನ ತೋರೋ ಜಯತು ಶ್ರೀ ವೇಣುಗೋಪಾಲ ಮೂರ್ತೇ ಜಯತು ಶ್ರೀ ವೇಣುಗೋಪಾಲನೆಂದೆನಿಸಿಯ್ಯ 4 ಸೃಷ್ಟಿಗೆ ಬಂದು ನಾನೆಷ್ಟು ಜನ್ಮವ ಕಳೆದೆ ಪುಟ್ಟಿದೆನೋ ನಾನೀಗ ಈ ಜನ್ಮದಿ ಪುಟ್ಟಲಿಲ್ಲವೋ ಜ್ಞಾನ ಹರಿ ಗುರುಸ್ಮರಣೆಗೆ ಇಟ್ಟಕಡೆಗಣ್ಣÂನೋಳಿಷ್ಟು ನೋಡಯ್ಯ5 ವಾದಿಮಸ್ತಕ ಭೇದಿ ಮೋದತೀರ್ಥರ ತತ್ತ್ವ ಛೇದಿಸಿ ವಾಕ್ ಯುದ್ದ ಯೂಥಪಗಳನೆಲ್ಲ ಗೆದ್ದು ಸತ್ತತ್ತ್ವದಾ ಸಿಂಹನಾದವ ಮಾಡ್ದೆ 6 ಮಧ್ವರಾಯರಿಗೆ ನೀ ಮುದ್ದುಮೊಮ್ಮಗನಯ್ಯ ಸದ್ವಿದ್ವದ್ಗ್ರಂಥ ಭಾರವನೆ ವಹಿಸಿ ಮುದ್ದು ತೊತ್ತೆನಿಸಿ ಎತ್ತಾಗಿ ಸೇವಿಸಿ ಯತಿಯಾಗಿ ನಿಂದ ತತ್ತ್ವಮುತ್ತಿನ ಖಣಿಯೆ 7 ಇಳೆಯೊಳಗೆ ನಿನ್ನಂಥ ಕರುಣಾಳುಗಳ ಕಾಣೆ ಅಳವಲ್ಲ ವರ್ಣಿಸಲು ನಿನ್ನ ಗುಣಗಳನು ಮಳಖೇಡವಾಸ ಯತಿಕುಲಾಧೀಶಾ 8 ಗುರುವೆ ನಿನ್ನಯ ಕರುಣಕವಚ ತೊಟ್ಟವರ ಚರಣಕಮಲದೊಳಿಹ ಮಧುಪನೆಂದೆನಿಸೋ ನಿರುತ ದೃಢಭಕುತಿ ಶ್ರೀ ವೇಂಕಟೇಶನೊಳಿಟ್ಟುಪೊರೆಯೊ ಶ್ರೀ ಗುರುವರಾಗ್ರಣಿಯೆ ನಮೋ ಎಂಬೆ9
--------------
ಉರಗಾದ್ರಿವಾಸವಿಠಲದಾಸರು
ತನ್ನ ತಿಳಿದು ತಾನಾದಂಥ ಗುರುವಿನ ಪಾದವ ಹೊಂದುತನ್ನನರಿಯದ ಗುರುವ ಹೊಂದಬೇಡೆಂದೆಂದು ಪ ನಿನ್ನನು ದೇವನೆಂದೆನ್ನುವಗೆ ಈಗ ಶರಣು ಮಾಡೋಅನ್ಯ ದೇವರನೆಂದೆನ್ನುವನ ಹಾದಿ ಹೋಗಬೇಡೋ 1 ಕೋಟಿರವಿ ತೇಜವ ಕಣ್ಣಲಿ ನೋಡುಬೂಟಿಕ ಕಾಯಕಗಳ ದೂರಮಾಡು 2 ಸೋಹಂ ಮಂತ್ರವ ಹೇಳದವನ ಸೆರಗ ಬಿಟ್ಟು ನೀನುಊಹಿಸುವ ಬೇರೆ ಗುರುವನು ಉತ್ತಮ ಅವನು3 ವಾಸನೆ ಕಳೆದಾತಂಗೆ ಒಪ್ಪಿಸಯ್ಯ ತನುವಆಸೆ ಹಚ್ಚುವವನತ್ತ ಬಿಡಲಿ ಬೇಡ ಮನವ 4 ಚಿದಾನಂದ ಗುರುವ ಹೊಂದು ಚಿನ್ಮಾತ್ರನಹೆ ಮದಮುಖ ಗುರುವ ಹೊಂದದಿರು ತಿಳಿ ಮುಂದೆ ನೀನು ಕೆಡುವೆ 5
--------------
ಚಿದಾನಂದ ಅವಧೂತರು
ತಪ್ಪೇನು ಮಾಡಿದೆನೋ ಬ್ರಹ್ಮಣ್ಯ ಗುರು ಪ ಅಪ್ಪಾ ನಿನ್ನಯ ಮನಕೊಪ್ಪದೇ ಇಪ್ಪಂಥ ಅ.ಪ ತಂದೆ ತಾಯಿಯು ನೀನೇ ಬಂಧು ಬಳಗ ನೀನೆ ಸಂದೇಹವಿಲ್ಲವೋ ಕಂದನೆಂದೆನ್ನದಂಥ1 ಒಂದೂ ತಿಳಿಯದಂಥ ಮಂದಮತಿಯು ನಾನು ಛಂದದಿಂದಲಿ ಬುದ್ಧಿ ಮುಂದೆ ಹೇಳಾದಂಥ 2 ಸಂದೇಹ ಕಳೆದಿನ್ನ ಬಂಧವಾಗಹ ಅಘ ವೃಂದ ಕ್ಷಮಿಸಿ ಬೇಗ ಮುಂದೆ ಕರೆಯದಂಥ 3 ದುರುಳರೆಲ್ಲರು ಸೇರಿ ಮರುಳುಗೊಳಿಸಿ ಎನ್ನ ಕರುಣಸಾಗರ ನಿನ್ನ ಕರುಣ ಪಡೆಯದಂಥÀ 4 ಶಾಂತ ಶ್ರೀ ನರಹರಿ ಪಂಥಾದಿಚರಿಸದೇ ಭವ ಕಾಂತಾರ ದಾಟಿಸದಂಥ 5
--------------
ಪ್ರದ್ಯುಮ್ನತೀರ್ಥರು
ದತ್ತ ದತ್ತೆನ್ನಲು ಹತ್ತಿ ತಾಂ ಬಾಹನು ಚಿತ್ತದೊಳಾಗುವಾ ಮತ್ತ ಶಾಶ್ವತನು ದತ್ತ ಉಳ್ಳವನ ಹತ್ತಿಲೇ ಈಹನು ವೃತ್ತಿ ಒಂದಾದರೆ ಹಸ್ತಗುಡುವನು 1 ಎತ್ತ ನೋಡಿದರೆ ಮೊತ್ತವಾಗಿಹ ತಾಂ ಉತ್ತಮೊತ್ತಮತಾನೆತ್ತುತಾ ಈತಾ ಅತ್ತಲಿತ್ತಾಗದೆ ಹತ್ತಿಲೆ ಸೂಸುತ ಮುತ್ತಿನಂತಿಹ್ವನು ನೆಲಿಲೆ ಭಾಸುತಾ 2 ದತ್ತನೆಂದೆನ್ನಲು ಕತ್ತಲೆಣ್ಯೋಗುದು ಮೃತ್ಯು ಅಂಜುತಲಿ ಭೃತ್ಯನಾಗಿಹುದು ಉತ್ತಮರಿಗೆ ತಾ ಸತ್ಯ ಭಾಸುದು 3 ಒತ್ತಿ ಉನ್ಮನಿಯಾವಸ್ಥಿ ಯೊಳಾಡುವದು ಸ್ವಸ್ತಮನಾದರೆ ವಸ್ತು ಕೈಗೂಡುದು ಬಿತ್ತಿ ಮನ ಗುರುಭಕ್ತಿ ಮಾಡುವದು ದತ್ತ ತನ್ನೊಳು ತಾನೆವೆ ಭಾಸುವದು 4 ದತ್ತ ದತ್ತೆಂದು ತಾ ಅರ್ತ ಮಹಿಪತಿಯ ಬೆರ್ತ ನೋಡಿದ ಮನವು ಸುಮೂರ್ತಿಯು ಮರ್ತದೊಳಿದುವೆ ಸುಖವಿಶ್ರಾಂತಿಯು ಮರ್ತುಹೊಗುವದು ಮಾಯದ ಭ್ರಾಂತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು