ಒಟ್ಟು 7 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಜ್ಯಾಕೆ ಎಲೆ ಮನುಜ ಭಯವಿಲ್ಲ ನಿನಗೆ ಕಂಜನಾಭನ ಧ್ಯಾನವಿರಲಿ ಮನದೊಳಗೆ ಪ ತಾಪತ್ರ ಬಂದೊದಗೆ ಪಾಂಡುಪ್ರಿಯನೆಂದೆನ್ನು ಶಾಪವೊದಗಲು ಅಂಬರೀಷನ್ವರದೆನಲೋ ಭೂಪತಿಗಳು ಮುನಿಯೆ ಪಾಂಚಾಲಿಪಾಲಕನೆನ್ನು ಆಪಾರ ಕಷ್ಟದಲಿ ಕರಿವರದೆನೆನಲೋ 1 ಮಾತೃ ವೈರ್ಯಾದರೆ ಧ್ರುವಪಾಲನೆನಲೋ ಭ್ರಾತೃವೈರ್ಯಾದರೆ ಸುಗ್ರೀವಸಖನೆನ್ನು ಖಾತ್ರಿಯಿಂ ಸತತದಿ ಸೂತ್ರಧಾರೆನಲೋ 2 ಸೆರೆಮನೆಯು ಒದಗಿರಲು ಪಿತಮಾತೆರ್ವರದೆನ್ನು ಧುರದೊಳಗೆ ಪೊಕ್ಕಿರಲು ನರಸಹಾಯನೆನಲೋ ಬರಿ ಮಳೆಯೊಳ್ಸಿಕ್ಕಿರಲು ಗಿರಿಯೆತ್ತಿದವನೆನ್ನು ದುರುಳರ್ಹಾವಳಿಯೊಳಗೆ ದನುಜಹರನೆನಲೋ 3 ಕವಿಯಲು ವೈರಿಗಳು ಕಂಸಮರ್ದನನೆನ್ನು ಶಿವನ ಕಾಯ್ದವನೆನ್ನು ಉರಿಹತ್ತಿಸುಡಲು ಭವಿಜನುಮ ಬಂದಿರಲು ಭವರೋಗಹರನೆನ್ನು ದಿವನಿಶೆಯು ಎಡೆಬಿಡದೆ ಭಯದೂರನೆನಲೋ 4 ಸ್ಥೂಲಭ್ರಷ್ಟನಾದರೆ ಬಲಿದ್ವಾರಪಾಲಕನೆನ್ನು ಕುಲಭ್ರಷ್ಟನಾದರಜಮಿಳನ್ವರದನೆನಲೋ ಇಳೆಮೂರು ಸಂರಕ್ಷ ಚೆಲುವ ಶ್ರೀರಾಮನಂ ಹಲವು ವಿಧದಲಿ ಭಜಿಸಿ ಫಲಗಳಿಸು ಬಿಡದೆ 5
--------------
ರಾಮದಾಸರು
ಕನ್ಯಾರತ್ನವನಿತ್ತನು ಹರಿಗೆ ಸತ್ರಾಜಿತರಾಯನು ಪ ಧನ್ಯನು ತಾನೆಂದೆನ್ನುತ ಯದುಕುಲರನ್ನ ಸುಗುಣ ಸಂಪನ್ನಗೆ ಹರುಷದಿ ಅ.ಪ. ಸನ್ನುತ ಚರಣನಿಗೆ ಕಮನೀಯ ಸ್ವರೂಪಗೆ ಕಮಲಾರಮಣಗೆ ಸ್ವರತನಿಗೆ ಕಾಮಿತ ಫಲದಾತಗೆ ಸುಮಬಾಣನ ಪಿತ ಸುಂದರಗೆ ಸುಮದಳನೇತ್ರನಿಗೆ ನಮಿಪ ಜನರ ಸುರದ್ರುಮನೆಂದೆನಿಸುವ ಅಮಿತ ಮಹಿಮಯುತಸಮವಿರಹಿತನಿಗೆ 1 ಬೃಂದಾರಕ ಬೃಂದ ಸುವಂದಿತಗೆ ಶ್ರೀ ಗೋವಿಂದಗೆ ಬೃಂದಾವನ ವಿಹರಣ ವಿಭವಗೆ ವಿಶ್ವಂಭರನಿಗೆ ಮಂದಾಕಿನಿ ಜನಕಗೆ ಮಾಧವಗೆ ಮರಕತಶ್ಯಾಮನಿಗೆ ಮಂದರಧರ ಮುಚುಕುಂದವರದ ಪೂ ರ್ಣೇಂದು ವದನಗುಣಸಾಂದ್ರ ಮುಕುಂದಗೆ 2 ವರಲೀಲಾ ಮಾನುಷ ವೇಷನಿಗೆ ವದನಾಂಬುಜದಲಿ ಸರಸಿಜ ಜಾಂಡವ ತೋರಿಪಗೆ ಸಾರಸನಾಭ ಪರಮಪಾವನ ಚರಿತಗೆ ಪುರುಷೋತ್ತಮನಿಗೆ ಗರುಡಗಮನ ಶ್ರೀ ಕರಿಗಿರೀಶ ಯದು ವರಕುಲಮಣಿ ಮುರಹರನಿಗೆ ಮುದದಲಿ 3
--------------
ವರಾವಾಣಿರಾಮರಾಯದಾಸರು
ಕರೆ ಕರೆ ಭವದೊಳು ಮುಳುಗಿರುವೆ ದುರಿತದೂರನೆ ದು:ಖ ತರ ತರ ವ್ಯಥೆಯಲಿ ಪ ಅಗಣಿತ ಮಹಿಮನೆ ಸುಗುಣಗಳನುದಿನ ಬಗೆ ಬಗೆ ಸ್ಮರಿಸುವ ಬಗೆ ಮರೆದು ಹಗಲಿರುಳೆನ್ನದೆ ನಿಗಮವೇದ್ಯನ ನಾಮ ಬಗೆ ಬಗೆ ಪೊಗಳಿ ಕೊಂಡಾಡಿ ಸ್ತುತಿಸದಲೆ 1 ಜನುಮ ಜನುಮದಲಿ ಜನಿಸಿ ಬರುವ ದು:ಖ ಕೊನೆಗಾಣದಾಗಿದೆ ಕರುಣಾನಿಧೆ ಅನಿಮಿಷರೊಡೆಯ ಶ್ರೀ ಘನ ಮಹಿಮನ ನಾಮ ಮನದಣಿ ಪೊಗಳಿ ಕೊಂಡಾಡಿ ಸ್ತುತಿಸದಲೆ2 ನಾನು ನನ್ನದು ಎಂಬ ಹೀನವೃತ್ತಿಗಳಿಂದ ಹಾನಿಯಾಯಿತು ಆಯು ಶ್ರೀನಿಧಿಯೆ ಜ್ಞಾನಿಗಳೊಡನಾಡಿ ಮೌನದಿಂದಿರದಲೆ ಶ್ವಾನಸೂಕರನಂತೆ ತಿರುಗಿ ಬಾಯ್ಬಿಡುತಲಿ 3 ರಂಗನ ಮೂರ್ತಿಯ ಕಂಗಳಿಂದಲಿ ನೋಡಿ ಭಂಗಗಳಳಿಯುವ ಹರಿದಾಸರ ಸಂಗದೊಳಿರಿಸು ಉತ್ತುಂಗ ಮಹಿಮಪಾಂಡು- ಭವ ಭಂಗ ಬಿಡಿಸೆನ್ನದೆ4 ಪಾದ ಪೊಂದಿ ಭವದಘ ವೃಂದವ ಕಳೆಯುವನೆಂದೆನ್ನುತ ಬಂಧಕ ಮೋಚಕನೆಂದರಿಯದೆ ಭವ ಬಂಧನದೊಳು ಸಿಕ್ಕಿ ಬಳಲಿ ಬಾಯ್ಬಿಡುತಲಿ5 ಪರಿ ಮೋಹ ಮಾತುಳಾಂತಕ ಕೃಷ್ಣ ಮಾತು ಮಾತಿಗೆ ಹರಿ ಹರಿ ಎನ್ನದೆ ಸೋತು ಬಂದೆನೊ ದೇವ ಮಾತರಿಶ್ವನಪ್ರಿಯ ಕೋತಿ ಬುದ್ಧಿಯ ಬಿಡಿಸೆಂದು ತುತಿಸದಲೆ 6 ಕಮಲ ಪತ್ರಾಕ್ಷ ಶ್ರೀ ಕಮಲಜಾತೆಯ ಪ್ರಿಯ ಕಮಲನಾಭ ವಿಠ್ಠಲ ವಿಠ್ಠಲ ಹರೇ ಸುಮನಸರೊಡೆಯ ಶ್ರೀ ಭ್ರಮರಕುಂತಳೆ ಪ್ರಿಯಶ್ರಮ ಪರಿಹರಿಸೆಂದು ನಮಿಸಿ ಸ್ತುತಿಸುವೆನು 7
--------------
ನಿಡಗುರುಕಿ ಜೀವೂಬಾಯಿ
ತನ್ನ ತಿಳಿದು ತಾನಾದಂಥ ಗುರುವಿನ ಪಾದವ ಹೊಂದುತನ್ನನರಿಯದ ಗುರುವ ಹೊಂದಬೇಡೆಂದೆಂದು ಪ ನಿನ್ನನು ದೇವನೆಂದೆನ್ನುವಗೆ ಈಗ ಶರಣು ಮಾಡೋಅನ್ಯ ದೇವರನೆಂದೆನ್ನುವನ ಹಾದಿ ಹೋಗಬೇಡೋ 1 ಕೋಟಿರವಿ ತೇಜವ ಕಣ್ಣಲಿ ನೋಡುಬೂಟಿಕ ಕಾಯಕಗಳ ದೂರಮಾಡು 2 ಸೋಹಂ ಮಂತ್ರವ ಹೇಳದವನ ಸೆರಗ ಬಿಟ್ಟು ನೀನುಊಹಿಸುವ ಬೇರೆ ಗುರುವನು ಉತ್ತಮ ಅವನು3 ವಾಸನೆ ಕಳೆದಾತಂಗೆ ಒಪ್ಪಿಸಯ್ಯ ತನುವಆಸೆ ಹಚ್ಚುವವನತ್ತ ಬಿಡಲಿ ಬೇಡ ಮನವ 4 ಚಿದಾನಂದ ಗುರುವ ಹೊಂದು ಚಿನ್ಮಾತ್ರನಹೆ ಮದಮುಖ ಗುರುವ ಹೊಂದದಿರು ತಿಳಿ ಮುಂದೆ ನೀನು ಕೆಡುವೆ 5
--------------
ಚಿದಾನಂದ ಅವಧೂತರು
ನರರೇನು ಬಲ್ಲರು ಪ ಘೋರದುರಿತ ಸಂಹಾರ ಕೇಶವಧೀರಾ ಮಾರಜನಕ ಸುಂದರ ಹೇ ವೀರಾ ಸುರಾಸುರಪವಂದ್ಯ ಸುಗುಣ ಶ್ರೀಗೋವಿಂದ ವೀರಾ ಶ್ರೀರಾಮಾವತಾರ ಎತ್ತಿದ ಧೀರಾ 1 ಆದಿಮೂಲ ಕರ್ತನೆಂದು ಅರಿತು ಮನದಿ ಶೋಧಿಸೆ ಸಕಲ ಸಾರವನು ಭೇದಾನರಿತು ಯದಾಯುಗ ಭಟಗಾಳಾರು ಮೋದದಿ ನವಯುಗದ ಮರ್ಮವ ನರಿತು 2 ಸಕಲ ಪ್ರಪಂಚವೆಂಬ ಸುಖವನ್ನೆ ಅತಿಗಳೆದು ಮುಕುತಿ ದಾಯಕ 'ಹೊನ್ನ ವಿಠ್ಠಲ’ ನೆಂದೆನ್ನು ಭಕುತಿಯಿಂದಲಿ ಸದಾಭಾವನೆಯ ನೀ ಬಿಡದೆ ಅಕಳಂಕ ಮಹಿಮನ ಅರಿತು ಸ್ತುತಿಸುವರಿಗಲ್ಲದೆ 3
--------------
ಹೆನ್ನೆರಂಗದಾಸರು
ಹೊಲೆಯರಿಲ್ಲದ ಊರೊಳು ಇರಬಾರದು ಪ ಹೊಲೆಯರು ಬೆಳೆದರೆ ಉಣಲುಂಟು ಉಡಲುಂಟು ಅ.ಪ. ಶುಭ ಶೋಭನ ಉಂಟುಹೊಲೆಯರ ನಿಂದಕನು ನಿರ್ಭಾಗ್ಯನುಹೊಲೆಯರಿಗೆ ಉಣಲಿಕ್ಕಿದವನ ಫಲಕ್ಕೆನೆಲೆಗಾಣೆ ನೆಲೆಗಾಣೆ ಧರೆಯೊಳಗೆ ನಾನು 1 ಹೊಲೆಯರು ಮುನಿದರೆ ನೆಲೆಯಿಲ್ಲ ನಿಭ ಇಲ್ಲಹೊಲೆಯರು ಒಲಿದರೆ ಕಷ್ಟವಿಲ್ಲಹೊಲೆಯರೇ ನಮ್ಮ ಸಲಹಲಿ ಸಾಕಲಿ ಎಂದುಫಲ್ಗುಣನ ಸಾರಥಿಯ ಪ್ರಾರ್ಥಿಸಿಕೊಳ್ವರು 2 ಹೊಲೆಯರಿಂದಲಿ ಸಕಲ ದೇವತೆಗಳ ಪೂಜೆಹೊಲೆಯರಿಂದಲಿ ಸಕಲ ಬಂಧು ಬಳಗಹೊಲೆಯರಿಗೆ ಸ್ವಾಮಿ ಮೋಹನ್ನ ವಿಠ್ಠಲಧೊರಿಯೆ ಪಾಂಡವರ ಪ್ರಿಯನೆಂದೆನ್ನು 3
--------------
ಮೋಹನದಾಸರು