ಒಟ್ಟು 13 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿನ ಚರಣವ ನೆನೆವುತಲನುದಿನ ಪರದೊಳು ದೈವದ ನೆಲೆ ನೋಡು ಪ ಗುರುವಿನ ಕರುಣಕಟಾಕ್ಷವದಲ್ಲದೆ ನರರಿಗೆ ದೊರಕದು ಪರಸುಖವು ಹಿರಿಯರ ಅಭಿಮತವಿಲ್ಲದ ಗೃಹದೊಳು ಕರೆಕರೆಯಾಗಿದೆ ಕೌತುಕವು 1 ಸ್ಥಿರವಾಗಿ ನಿಲ್ಲದ ಮನವು ಭ್ರಮೆಯೊಳು ನೆರೆವುದು ತನ್ನೊಳು ಘಾತಕವು ಸೆರೆವಿಡಿಯಲು ಹರಿವಿಡಿದಿಹನಾತನ ತೊರೆವುದು ಭವಭಯ ಸೂತಕವು 2 ಯೋಗಿಯ ಹೃದಯದಿ ಸಕಲಾಗಮ ಸಮ ನಾಗಿಯೆ ತೋರ್ಪುದು ಧೃಢವಾಗಿ ಸಾಗರ ಸುತ್ತಿದ ಭೂಭಾಗದ ಸರಿ ಯೋಗಿಯ ದೃಷ್ಟಿಯೆ ಘನವಾಗಿ 3 ಬಾಗಿದ ಕಬ್ಬಿನ ಕೋಲೊಳು ರುಚಿಕರ ವಾಗಿಯೆ ತೋರುವ ಪರಿಯಾಗಿ ರಾಗಿಯ ಶಿಲೆ ತಾ ಬಳಲಿದೆನೆನುತಲೆ ಭಾಗೆಯ ಕೊಂಬುದೆ ಸಮವಾಗಿ 4 ನಂಬದಿರಂಬರ ವಾದಿಯ ಅಂಶಕ ತುಂಬಿದ ಕುಂಭ ದೃಢದಿಂದ ಅಂಬರದೊಳಗಣ ಮೇಘಕೆ ವಾಯುವು ಬೆಂಬಲವಾಗಿಹ ದಯದಿಂದ 5 ಸಂಭ್ರಮದಿಂದಲಿ ಗರ್ಜಿಸಿ ನಾಲ್ದೆಸೆ ಅಂಬಿಸಿ ಪೋಗುವ ಪರಿಯಿಂದ ಅಂಬುಜಭವ ಬರೆದಕ್ಷರ ಮಾಸಲು ಅಂಬರ ಬಯಲಹ ತೆರದಿಂದ 6 ಶುದ್ಧವಶುದ್ಧವು ಆಗಿಹ ಪೃಥಿವಿಯ ಬದ್ಧವಾಗಿಯೆ ತೊಳೆದವರಾರು ಅಬ್ಧಿಯ ಮಧ್ಯದಿ ಎದ್ದ ವಾರಿಗಳನು ತಿದ್ದಿಯೆ ಪಸರಿಸುವವರಾರು 7 ಇದ್ದರೆ ಸರ್ವರ ಭವನದೊಳಗ್ನಿಯ ಮೆದ್ದವ ಶುದ್ದವೆಂಬವರಾರು ಹೊದ್ದಿದ ಮೂರುತಿ ನಾಲ್ದೆಸೆಯೊಳಗಿರೆ ಬದ್ಧವಾಗಿಯೆ ಕಟ್ಟಿಕೊಳಲ್ಯಾರು 8 ಬಯಲೊಳಗಿರುತಿಹ ಬಹು ಝೇಂಕಾರವ ನಯದೊಳು ನೋಡಿದರೇನುಂಟು ಬಯಲೊಳು ಮೂರಕ್ಷರವನೆ ಬಿತ್ತಲು ಮೈಲಿಗೆ ತಳಿಸುವ ಬೆಳೆಯುಂಟು 9 ಸಿರಿ ಸೊಬಗನು ಜಯಿಸುವ ಹಯವನು ಏರುವ ಬಗೆಯುಂಟು ದಯದೊಳು ಶ್ರೀ ಗುರು ವಿರಚಿಸಿಯಿತ್ತರೆ ಕ್ರಮವಿಕ್ರಯದೊಳು ಫಲವುಂಟು 10 ಬೇಡನು ಸಲಹಿದ ಆಡು ತಾ ಯಾಗಕೆ ಬೇಡವೆಂಬವರಾರು ಶಾಸ್ತ್ರದಲಿ ಕಾಡಿನೊಳಿರುತಿಹ ಮೃಗವಾಲದ ಸಿರಿ ನೋಡು ನೀ ನಿತ್ಯದಿರಾಸ್ತ್ರದಲಿ 11 ಕೋಡಗನಾದರು ನೋಡಿಯೆ ಭಜಿಸಲು ಕೂಡುಗು ಹರಿಯ ಪರತ್ರದಲಿ ಕೂಡಿಕೊಂಡರೆ ಪರಬೊಮ್ಮನ ಮನದಲಿ ಆಡದು ಮಾಯದ ಸೂತ್ರದಲಿ 12 ಮೃಗ ಗೋರೋಚನ ಸಹ ಉತ್ತಮವಾಗಿಹ ಮುತ್ತುಗಳು ನಿತ್ಯದಿ ಕ್ರಯಗಟ್ಟಿ ಉಣ್ಣದೆ ಹುಲ್ಲನು ಕಿತ್ತು ಮೆದ್ದಾಡುವ ಅವಸ್ಥೆಗಳು13 ಮೃತ್ಯುವ ಕಾಣದೆ ಬೊಮ್ಮವನಡಗಿಸಿ ಎತ್ತಲಾದರು ಪೋದ ವಸ್ತುಗಳು ಭಕ್ತರಿಗಲ್ಲದೆ ಮನವಪರೋಕ್ಷದ ವಸ್ತುವ ಕಾಣದು ನಿತ್ಯದೊಳು 14 ಜ್ಯೋತಿರ್ಮಯವಾಗಿಹ ವಸ್ತುವಿನೊಳು ಸೂತಕ ಹೊದ್ದುವುದೇನುಂಟು ಜಾತಿವಿಜಾತಿಯೊಳೊಲಿದಿಹ ಶಿವನವ ದೂತರ ನಂ[ಬ]1ದರಾರುಂಟು 15 ಓತು ಆಶುದ್ದವನುಂಡರು ಕವಿಲೆಯೊ ಳ್ಮಾತಿನ ವಾಸಿಯದೇನುಂಟು ನೀತಿ ವಿಹೀನರೊಳುದಿಸಿದ ಲವಣದ ಧಾತು ಕೂಡದೆ ಸವಿಯೇನುಂಟು 16 ಧಾರುಣಿ ಭಾರವ ಮಿತಿಗಟ್ಟಿ ತಕ್ಕಡಿ ಗೇರಿಸಿ ತೂಗಲು ಬಹುದೀಗ ವಾರಿಧಿಯನು ಮುಕ್ಕುಳಿಸಿಯೆ ಬತ್ತಿಸಿ ತೋರಿಸಲಪ್ಪುದು ಬಹು ಬೇಗ 17 ಧಾರುಣಿಯೊಳು ಗುರುಕರುಣದ ಅಳತೆ ಮು ರಾರಿಗು ಸಿಲುಕದು ಅದು ಈಗ ತೋರಿತು ಅಲ್ಲಿ ವರಾಹತಿಮ್ಮಪ್ಪ ಕು ಮಾರರು ವಾಜಿಯ ತಡೆದಾಗ 18
--------------
ವರಹತಿಮ್ಮಪ್ಪ
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಶ್ರೀಶನ ಸತಿಯರ ಹಾಸ್ಯವ ಮಾಡುತ ಸೋಸಿಲೆ ಕೋಲಹೊಯ್ದೇವ ಕೋಲ ಪ. ಧಿಟ್ಟೆ ನಾನೆಂಬೋದು ಸೃಷ್ಟಿಕರ್ತನೆ ಬಲ್ಲಗಟ್ಯಾಗಿ ನಿನ್ನ ಗುಣಗಳಗಟ್ಯಾಗಿ ನಿನ್ನ ಗುಣಗಳ ವರ್ಣಿಸಲು ಸಿಟ್ಟು ಬಂದಿತು ಸಭೆಯೊಳು1 ಗಂಡನ ಬಳಗವ ಕಂಡರೆ ನಿನಗಾಗದುಲೆಂಡರ ಮನೆಗೆ ನಡೆದ್ಹೋಗಿಲೆಂಡರ ಮನೆಗೆ ನಡೆದ್ಹೋಗಿ ಸೇರಿದ್ದುಪಂಡಿತರು ಕಂಡು ನಗುತಾರೆ 2 ಘಟ್ಯದೆಗಾರಳು ಪೆಟ್ಟಿಗಂಜುವಳಲ್ಲಎಷ್ಟು ಧೈರ್ಯವೆ ಎಲೆನಾರಿಎಷ್ಟು ಧೈರ್ಯವೆ ಎಲೆನಾರಿ ನಿನ್ನ ಕೂಡಕೃಷ್ಣ ಕಡಿ ಬೀಳೋ ತೆರನಂತೆ 3 ಮುದದಿಂದಲೆ ದ್ವಾರಕಾಸದನದೊಳಗ್ಹೋಗಿಕದನವ ಹೂಡಿ ಕೆಡಿಸುವೆಕದನವ ಹೂಡಿ ಕೆಡಿಸುವೆ ನಿನ್ನಗುಣಕೆಮದನನಯ್ಯನೆಂತು ಮನಸೋತ4 ಹಲವು ರಾಯರ ಗೆದ್ದ ಬಲುಧೀರರೆಲ್ಲನಿನ್ನ ಬಲೆಯೊಳು ಬಿದ್ದು ಬಳಲೋರುಬಲೆಯೊಳು ಬಿದ್ದು ಬಳಲೋರು ಇದ ಕಂಡುಬಲರಾಮ ತಾನು ನಗುತಾನ5 ಸುರರು ಜರಿದು ನಾರಿಹರಿಯು ಗುಣಪೂರ್ಣ ನೆನುತಲೆಹರಿಯು ಗುಣಪೂರ್ಣ ನೆನುತಲೆ ಮಲ್ಲಿಗೆಸರವ ಹಾಕಿದಿಯೆ ಕೊರಳಿಗೆ 6 ಕೇಳೆ ರುಕ್ಮಿಣಿ ನಿನ್ನ ಭಾಳ ಚಾಪಲ್ಯ ನೋಡಿಹೇಳ ಕೇಳದಲೆ ಹಿರಿಯರಹೇಳ ಕೇಳದಲೆ ಹಿರಿಯರ ಕೃಷ್ಣಯ್ಯಭೋಳೆ ತನದಿಂದ ಮದುವ್ಯಾದ 7 ಗಂಡನ ಎದುರಿಗೆ ಗಂಡುಗಚ್ಚಿಯ ಕಟ್ಟಿಗಂಡಸಿನಂತೆ ಧನುವೆತ್ತಿಗಂಡಸಿನಂತೆ ಧನುವೆತ್ತಿ ಕಾದಿದಬಂಡುಗಾರತಿಯೆನಿನ ತಂಗಿ8 ಅಕ್ಕ ತಂಗಿಯರ ಶೌರ್ಯ ಶಕ್ಯವೆ ವರ್ಣಿಸಲುನಕ್ಕು ನಾರಿ ಸರಿಯವರುನಕ್ಕು ನಾರಿ ಸರಿಯವರು ರಾಮೇಶಗೆತಕ್ಕವರೇನೆ ಮಡದಿಯರು ಕೋಲ9
--------------
ಗಲಗಲಿಅವ್ವನವರು
ಹನುಮನ ಬಲಗೊಂಬೆ ಹರುಷದಲೆನಮ್ಮ ತನುಮನ ಧನ ಈತಗೊಪ್ಪಿಸುತಲೆ ಪ. ರಾಣಿಗೆ ಮುದ್ರೆಯನಿಟ್ಟ ಜಾಣನೆನುತಲೆಮುಖ್ಯ ಪ್ರಾಣ ಮುಯ್ಯಾ ಗೆಲೆಸೋ ಈ ಕ್ಷಣ ಎನುತಲೆ 1 ಕೋತಿಯ ಸ್ವರೂಪನಾದ ಈತನೆನುತಲೆ ದೈತ್ಯ ಜಾತಿಯ ಸಂಹರಿಸಿ ಬಂದ ಖ್ಯಾತನೆನುತಲೆ2 ಸೀತೆಯ ಮನೆಗೆ ತಂದ ಮಹಾತ್ಮನೆನುತಲೆಈತಗೆ ಜೋಡ್ಯಾರು ಮುಂದೆ ಖ್ಯಾತನೆನುತಲೆ 3 ಕೃಷ್ಣನ ಸೇವೆಗೆ ಅತಿ ನಿಷ್ಠ ನೆನುತಲೆದುಷ್ಟ ಕೌರವರ ಕೊಂದ ಶ್ರೇಷ್ಠ ನೆನುತಲೆ 4 ಶ್ರೀಶ ರಾಮೇಶಗೆ ಮುಖ್ಯದಾಸನೆನುತಲೆ ವಾಸವಾದ ಬದರಿಯಲಿ ಮಧ್ವೇಶನೆನುತಲೆ5
--------------
ಗಲಗಲಿಅವ್ವನವರು