ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆದಿಕೇಶÀವನ ಪಾಡಿ ಸುಜನರು ಮೋದದಿಂದಲಿ ಕೂಡಿ ಭವ ಬೇಡಿ ಪ ಅಸ್ಥಿರ ಸಂಸಾರ ಮೇಲು ದುಃಖಪಾರವಾರ ಇಲ್ಲಿ ವಸ್ತಿ ತ್ರಿವಾಸರಾ ಸ್ವಸ್ಥ ಚಿತ್ತದಿಂದ ಹರಿಯ ನೆನೆಯದಾಗ ಬ್ಯಾಡಿರಿ ಭೂಭಾರ 1 ಪರಿ ಜಾರಿ ಬೀಳುವುದಕ್ಕೆ ನೀರೊಳು ತೊಳೆದು ಪರಿಮಳತೊಡೆ ಮಲಸೋರದೆ ಪೇಳಿದರೆ 2 ಮಡದಿ ಮಕ್ಕಳು ಬಂದು ನಿನ್ನ ಕಡೆ ಹಾಸೋಕೆ ಬಂದು ನಿಮಗೆ ಕೆಡಬ್ಯಾಡಿರಿ ಹರಿಪರಮ ದಯಾಸಿಂಧು 3 ಸಂಗಡ ಬಂದು ರಕ್ಷಿಪರೇನು ಕಷ್ಟಬಟ್ಟು ನೀವು ಘಳಿಸಿ ಹೂಳಿದರೆ ಹುಟ್ಟಿದ್ದಾಯಿತೇನು 4 ನಗೆಗೇಡು ನಿಮ್ಮ ಬಟ್ಟಿ ಮೂರಾಬಟ್ಟಿ 5 ಅರಮಾಯಾ ಇನ್ನು ಪರಿ ಆದೀತು ನಿಮ್ಮ ಕಾಯಾ 6 ಇದು ಘಟ್ಟಿಯೆ ಸಂಸ್ಕøತಿಯು ಬಿಟ್ಟಿಗಾರರು ನಿಮ್ಮ ಕಟ್ಟುವನಿತರೊಳು ಮುಟ್ಟಿ ಭಜಿಸೆ ಹರಿಯಾ 7 ಮೇಲು ಸರಿಪರಿವಾರಗಳಾ ನರಸಿಂಹವಿಠಲಗರ್ಪಿಸಿ ಸುಖಿಸುವ ನರವರ ಜನ್ನವೇ ಸಫಲಾ 8
--------------
ನರಸಿಂಹವಿಠಲರು
ದೀನರಕ್ಷಕ ದೈತ್ಯ ಶಿಕ್ಷಕ ಏನ ಪೇಳಲಿ ಎಂತು ತಾಳಲಿ ಪ. ಹಗಲು ರಾತ್ರೆಯು ಹಲವು ಚಿಂತೆಯು ದ್ವಿಗುಣವಾಯಿತು ಧೈರ್ಯ ಕುಂದಿತು ನಗುವ ವಿಧಿಯನು ನೆನೆಯದಾಸೆಯ ಬಿಗುವಿನಿಂದ ಬೆಂಡಾದೆ ಕೇಶವ 1 ಸಂದ ಕಾಲವು ಸುಮ್ಮಗ್ಹೋಯಿತು ಮುಂದಿನವಧಿಯ ಮರವು ಮುಸುಕಿತು ಸುಂದರ ಸ್ಮಿತಾನಂದ ಮೂರುತಿ ಇಂದಿರೇಶ ನೀ ಎಂದು ತೋರುತಿ 2 ಗಣನೆಯಿಲ್ಲದಗಾಧ ತಪ್ಪನು ಎಣಿಸಲಾರೆನು ಎಂತು ನುಡಿವೆನು ವನಜನಾಭ ನೀನಾವ ಯುಕ್ತಿಯ ನೆನಸಿ ಸಲಹುವೆ ಎಂಬುದರಿಯೆನು 3 ಅಂತವಿಲ್ಲದಾ ಚಿಂತೆ ಎನ್ನನು ಭ್ರಾಂತಿಗೊಳಿಪುದು ಭಂಡು ಮಾಳ್ಪುದು ಕಂತುಜನಕ ಭೂಕಾಂತ ಕರುಣಿಸು ಸ್ವಾಂತರಂಗದಿ ನಿಂತು ನಿಯಮಿಸು 4 ನಿತ್ಯ ಸಲಹುವ- ನೆಂಬ ಬಿರುದ ನಾನರಿತು ನುಡಿದೆನು ಶಂಭುವಂದ್ಯ ಶೇಷಾದ್ರಿನಾಥ ಪಾ- ದಾಂಬುಜಾಶ್ರಿತನೆನಿಸು ಎನ್ನನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಪರಿಪರಿಯಲಿ ನೀ ಪಾಲಿಸೋ ನರಹರಿಯೆ ನಾನಾಪರಾಧಿ ಶ್ರೀ ನರಹರಿಯೇ ನಾನಪರಾಧಿ ಪ ಸತಿಸುತರು ಹಿತದವರೆಂದರಿತು ನಾ ಮತಿಯಗೆಟ್ಟು ಕ್ಷಿತಿಪತಿಯೇ ನಿನ್ನನು ಸ್ತುತಿಸದಾ ಅಪರಾಧಿ 1 ಪರ ನಿಂದೆಯಲ್ಲಿ ಗೋ- ವಿಂದ ನಿನ್ನನು ವಂದಿಸದಾ ಅಪರಾಧಿ 2 ತನುಮನಧನ ಕೊಟ್ಟಿರುವ ಶ್ರೀವರ ಹನುಮೇಶ ವಿಠಲನೆ ನಿನ್ನನು ನೆನೆಯದಾ ಅಪರಾಧಿ 3
--------------
ಹನುಮೇಶವಿಠಲ