ಒಟ್ಟು 11 ಕಡೆಗಳಲ್ಲಿ , 5 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರತಿಯೆತ್ತುವೆ ಆತ್ಮೇಶ್ವರಗೆ ಪ ಮಾರ ಕೋಟಿ ಲಾವಣ್ಯ ಮತ್ಪ್ರಿಯ ಸ್ವಾಮಿಗೆ ಅ.ಪ ಮನಕೊಡೆಯನೆನ್ನಿಸಿ ಮಮತೆಯ ವಿಸ್ತರಿಸಿ ಅನುದಿನ ಬೇಡಿದಿಷ್ಟಾರ್ಥವನೀವಗೆ 1 ಶುಭದಾಯಕನಾಗಿ ಶೋಭಿಸುತಿರ್ಪಗೆ2 ಗುರುರಾಮವಿಠ್ಠಲ ಕರುಣಾನಿಧಿಗೇ 3
--------------
ಗುರುರಾಮವಿಠಲ
ಎಷ್ಟೆಷ್ಟು ಜನ್ಮಗಳ ಕಷ್ಟಂಗಳನು ಸಹಿಸಿ ನಿಷ್ಠೆಯಿಂ ತಪಗೈಯ್ದ ಶ್ರೇಷ್ಠಫÀಲದಿ ಕರವ ಪಿಡಿದೆ ಪೇಳುವದೇನು ನಡೆದ ಕಾರ್ಯಕೆ ಮನದಿ ಮಿಡುಕಲೇನು ಬಟ್ಟೆಗೇ ಗತಿಯಿಲ್ಲ ಪುಟ್ಟಿದಂತಿಹನಲ್ಲ ಹುಟ್ಟು ನೆಲೆಯರಿತಿಲ್ಲ ದಿಟ್ಟನಲ್ಲ ಅಹಿಂಸೆಯೆ ಮತ್ರ್ಯರಿಗೆ ಸಹಜಧರ್ಮವದೆಂದು ಬಹುನೀತಿ ಪೇಳುವನು ಬುದ್ಧನಿವನು ಬೆತ್ತಲೆಯೆ ಮನೆಮನೆಗೆ ಸುತ್ತುತಿಹನೆ ಉತ್ತಮಾಂಗನೆಯರ ಚಿತ್ರ ಚಲಿಸಿ ಮತನೆನ್ನಿಸಿ ನಲಿವ ಉನ್ಮತ್ರನಿವನೆ
--------------
ನಂಜನಗೂಡು ತಿರುಮಲಾಂಬಾ
ನಿಜದಿ ಸುಖಪದ ಕೊಡುವೆಯೋ ಭಜಕರಿಗೆ ಶುಭದಾಯಿಯೋ ಪ ತ್ರಿಜನ ಪೂಜೆಯಗೊಂಬೆಯೋ ಅಂ- ಗಜಜನಕ ಗೋಕಾಯ್ದೆಯೋ ಅ.ಪ ಸುತನಕೊಂದೇ ಸತಿಯ ತೊರೆದೇ ಅತಿಯ ದುಃಖವ ನಟಿಸಿದೇ ಸತತ ಸರ್ವವ್ಯಾಪಿಯೆಂಬರು ಹಿತನೆ ಕಾಣಿಸೆಯೆಲ್ಲಿಹೇ 1 ನಾರಿಯರ ಸೆರೆ ನೀಗಿಸೀ ಹದಿ ನಾರು ಸಾವಿರ ಸೇರ್ದೆಯೋ ಚೋರನೆನ್ನಿಸಿ ಸೀರೆಕದ್ದು ಮಾರಕನೆ ತಾಮಮೃತನೇ 2 ಕೂರ್ಮ ವರಾಹನೇ ನರ ಕೇಸರೀ ವಾಮನನು ನೀ ಹಸ್ತಪರಶು ಶ್ರೀ ರಾಮಕೃಷ್ಣನೆ ವಿಶ್ವ ಬುದ್ಧನೆ ಕಲ್ಕಿಯೇ 3 ಘೋರ ದೈತ್ಯ ವಿದಾರಿಯೋ ಹರಿ ಸಾರಿ ಹಲವವತಾರದಿಂ ತೋರಿದವ ನೀನಾದರೂ ಜಾ ಮಾಧವ ನಂಬಿದೇ 4
--------------
ಶಾಮಶರ್ಮರು
ನಿನ್ನ ಭಕ್ತರು ಬಹಳ ಬಲವಂತರಹುದೈ ಜನ್ಮಜನ್ಮಕೂ ಚರಣಶರಣನ್ನ ಮಾಡೈ ಪ ಹಾರಿದನು ಹನುಮಂತ ಕಡಲ ಕಾಲುವೆಯಂತೆ ಸಾರಿ ಸೇತುವೆಯ ಕಟ್ಟಿ ನೀ ದಾಟಿದೇ ಮಾರುತಿಯು ಬಲ್ಲಿದನು ಎಂದು ನಾಂಪೇಳಲೇ ಸಾರಸಾಕ್ಷನೆ ಸಾಕ್ಷಿ ಯೇತಕೈ ಬೇರೆ 1 ಭೀಷ್ಮನನು ಬೆದರಿಸಲು ತೋರಚಾಪವ ತೊಟ್ಟ ಸೂಕ್ಷ್ಮದಿಂಹಾರಿಸಿದ ಸಂಗರದಲವನು ತೀಕ್ಷ್ಣಸಾಹಸಿಯಾತನೆಂದು ನೀಂತಿಳಿಯತೈ ಶ್ರೇಷ್ಠ ಮಾರುತಿಕೈಯ ಪರಶುವಂ ಕೇಳು 2 ಶಬರ ಶಂಕರನೊಡನೆ ಕಾದಿ ಕಡೆಯಲಿ ಗೆಲ್ದು ಪ್ರಬಲನೆನ್ನಿಸಿ ಪಾಶುಪತವನ್ನೆ ಪಡೆದಾ ಪ್ರಭುವೆ ನಿನ್ನು ಪದೇಶ ಪಡೆದ ಪಾರ್ಥನ ಕೇಳು ಸುಬಲರೈ ಜಾಜೀಶ ದಾಸರೀ ಜಗದಿ 3
--------------
ಶಾಮಶರ್ಮರು
ಭಜಿಸಿ ಬದುಕೆಲೋ ಮಾನವ ಶ್ರೀಹರಿನಾಮ ತಾರಕಮಂತ್ರವ ಪ. ದುರಿತಕೋಟಿಗಳಂ ಪರಿಹರಿಸಿ ನಿಜಪದ ಸರಸೀರುಹದೊಳಗಿರಿಸಿ ಪೊರೆವನ 1 ದುರ್ಜನ ನಿಂದೆಗೆ ಲಜ್ಜಿತನಾಗದೆ ದುರ್ಜನ ದಮನನ ಧ್ಯಾನದೇ ನೀಂ 2 ಪೊಗಳಲು ಹಿಗ್ಗದೆ ತೆಗಳಲು ತಗ್ಗದೆ ಬಗೆಕುಂದದೆ ಸಮ್ಮೋದದೇ ನೀಂ 3 ಅಷ್ಟಮದಂಗಳ ಕಟ್ಟುತೆ ದೃಢದಿ ದೃಷ್ಟಿನಿಲ್ಲಿಸಿ ನಿಷ್ಠೆಯೋಳ್ ನೀಂ4 ದೋಷರಹಿತ ಶ್ರೀಶೇಷಗಿರೀಶನ ದಾಸರವಾಸನೆನ್ನಿಸಿ ಸಂತತಂ 5
--------------
ನಂಜನಗೂಡು ತಿರುಮಲಾಂಬಾ
ಮಾರಪಿತನ ತೋರಿದಲ್ಲದೆ ನಾ ಬಿಡೆ ನಿನ್ನ ಪಾದವ ಪ ಧೀರ ಹನುಮ ಘೋರ ರೂಪವ ತೋರಿ ಪಾರಲು ದೂರ ನಾ ಸಾರೆನು ಅ.ಪ. ಭಾರ ಧರಿಸಿ ಕೋರೆ ತೋರುತ ಘೋರ ರೂಪದಿ ಪೋರನೆನ್ನಿಸಿ ನಾರಿ ಹತ್ಯದಿ ಚಾರುವನವ ಸೇರಿದವನ 1 ಜಾರನೆನ್ನಿಸಿ ನಾರಿ ಮಾನವ ಸೂರೆಗೊಳ್ಳುತ ಪಾರಿಪೋಗುವ ಶೂರ ತೇಜಿಯನೇರಿ ಮೆರೆದ ವಾರಿಜಾಕ್ಷನ ಧೀರ ಕಲ್ಕಿಯ 2 ದಾರಿ ತೋರದೆ ಸಾರಿ ನಿನ್ನನು ಕೋರಿ ಭಜಿಪೆನು ಬಾರಿ ಬಾರಿಗೆ ಭಾರತೀಶನೆ ತೋರು ಕರುಣದಿ ಸಾರಸಾಕ್ಷ ರಂಗೇಶವಿಠಲನ 3
--------------
ರಂಗೇಶವಿಠಲದಾಸರು
ಶ್ರೀಲೋಲ ಶ್ರೀನರಸಿಂಹ ಬಲಗೋಂಬೆನು ನಿನ್ನ ಪ. ಸಾರರಹಿತವಹ ಘೋರತರ ಸಂಸಾರದಿ ತೊಳಲುತ ಗಾರುಗೊಂಡಿಹೆನೈ ಶ್ರೀಲೋಲ ಅ.ಪ. ಚಿಣ್ಣನು ತಾ ಬಣ್ಣಿಸಿ ಕರೆಯೆ ಮನಕದ ತಂದು ಅನ್ಯದೈವಗಳ ಮರೆದು ತನ್ನನೆ ನೆನೆವ ಚಿಣ್ಣನಿಗಾಗಿ ಕಂಬದಿ ಬಂದು ಘನ್ನ ರೋಷದಿ ದೈತ್ಯನ ಸೆಳೆದು ಕುನ್ನಿಯ ಮುಡಿಯನು ಪಿಡಿದೆತ್ತಿ ಜಡಿದು ತನ್ನ ತೊಡೆಯೊಳಗಿರಿಸಿ ಖಳನುರ ವನ್ನು ಬಗೆದು ಕರುಳನು ಕೊರಳೊಳು ಧರಿಸಿದ 1 ಘೋರರೂಪಕೆ ನಡುಗುತಲಂದು ಸುರಗಣನಿಂದು ಶರಣೆಂದಾಕಂದನ ಕರೆದು ಪರಮಾದರದಿಂ ಶ್ರೀದೇವಿಯನೊಡಗೊಂಡು ಪರತರಾಭಯ ಹಸ್ತವ ನೀಡಿ ಸರಸದಿ ಕರೆದಾದರಗೂಡಿ ತರಳನೆ ಭಕ್ತಾಗ್ರೇ ಸರ ನೆನ್ನಿಸಿ ನೆರೆಸುಖಿಸೆಂದೊದವಿದ 2 ಚಾರು ಚರಿತ ಪ್ರಹ್ಲಾದನ ಆಲಿಸಿ ನಲವಿಂ ಸಾರಿತನ್ನನೇ ನೆನೆವರನೆಂದೆಂದು ಕೋರಿಕೆಗಳ ಸಲ್ಲಿಸಿ ಸಲಹುವನೆಂದು ಸಾರೆಬಂದಿಹೆ ನಿನ್ನೆಡೆಗಿಂದು ಸಾರಸಾಕ್ಷನೆ ನೀ ಕೃಪೆದೋರೆಂದು ಕೋರಿಭಜಿಪೆ ಶ್ರೀಶೇಷಗಿರಿವರ ದಯಾಸಿಂಧು 3
--------------
ನಂಜನಗೂಡು ತಿರುಮಲಾಂಬಾ
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ನಿನ್ನನು ನಂಬಿದೆನು ನಾ ಸುಂದರ ಗೋವಿಂದನೇ | ಪನ್ನಗಾಶಯನಗೋಪಿಕಂದನೇ | ಮುಕುಂದನೆದುಷ್ಟರ ಶಿಕ್ಷಿಪಘೋರಕಾಲನೆ | ರಣಶೂರನೆ |ಶಿಷ್ಟರ ರಕ್ಷಿಪ ಭಕ್ತಪಾಲನೆ ಗುಣಶೀಲನೇ ಪಹೊಳೆವ ಮತ್ಸ್ಯಾವತಾರನೆನ್ನಿಸಿಇಳೆಯ ಭಾರವ ಕಳೆದನೆ ||ಜಲದಿವಾಸವಮಾಡಿಕೊಂಡು |ಜಲದಿನಾಲ್ದೆಸೆ ನಲಿದನೆ 1ಧರೆಯ ಬೆನ್ನಲಿ ಪೊತ್ತು ನೆಲಸಿದಕೂರ್ಮನೆ |ಸ್ಮøತಿಧರ್ಮನೇ ||ಶರದ ಸೇತುವೆ ಧರಿಸಿ ನಿಂದಾ |ಮರ್ಮವರಿತೇ | ಸುಶರ್ಮನೆ 2ರಸತಳದಿ ಕೆಸರೊಳಗೆ ಹೊರಳುವಹಂದಿಯೇ | ಭೂಮಿ ತಂದಿಯೇ ||ಬಸುರ ಬಗಿದಾ ಹೇಮನೇತ್ರನಕೊಂದೆಯೇ ಮಮ ತಂದೆಯೇ 3ಕಂಬದಲಿ ಮೈದೋರಿ ತರಳನ |ಪೊರೆದನೇ ನರಸಿಂಹನೇಕುಂಭಿನಿಯ ಬಾಧಿಸಲು ದುರುಳನ |ಕರುಳನೇ ಹರಿದೆಳದನೇ 4ಭೂಮಿಯಲಿ ಮೂರಡಿಯದಾನವ ಕೊಟ್ಟಾನೇಬಲಿಕೆಟ್ಟಾನೇವಾಮನನು ಎರಡಡಿಯ ತೀರಿಸಿ |ಮೆಟ್ಟುತಲಿವರಕೊಟ್ಟನೇ 5ಕೊರಳ ಕುತ್ತಿಯೆ ಮಾಲೆಮಾಡುತ್ತಾಹೆತ್ತವಳ ಕತ್ತರಿಸಿದೆ ||ಧರಣಿಪರ ಶಿರವದೆಭಾರ್ಗವ|ಸತ್ಯ ಭೂಮಿಯ ಸುತ್ತಿದೆ6ವನದಿ ರಾಮನ ಸತಿಯರಾವಣ ಕದ್ದನೇ ವಿಷ ಮೆದ್ದನೇ ||ವನದಿ ಕಪಿಗಳ ಕೂಡಿ ದೈತ್ಯರಕೊಂದನೆ ಸೀತೆಯ ತಂದನೇ 7ಸರಸಿಯಲಿ ಮೊರೆಯಿಡುವ ಗಜವ |ಕಾಯ್ದನೇ ಯಾದವನೇ ||ಧುರದಿ ಕಾಳಿಯ ಶಿರದಿ ನಲಿದ |ದೇವನೇ ಮಾಧವನೇ 8ಬತ್ತಲೆಯ ಬೌದ್ಧಾವತಾರನೆ |ಮೃತ್ಯು ತೆಕ್ಕಲ ಹೊಕ್ಕನೇ ||ಸತ್ಯ ಧರ್ಮವನರಿಯದಧರ್ಮರ |ಸೊಕ್ಕ ಮುರಿವನೆ ಪಕ್ಕನೆ 9, 10ಕಲಿಯುಗದ ಕಡುಪಾಪಿ ನರರನು |ಕಡುಗದಿಂದಲಿ ಕಡಿದನೇ ||ಕಾಲಭೈರವನಂತೆ ಕಲ್ಕ್ಯನು |ಕಿಡಿಯನುಗುಳುತ ಸುಡುವನೇ 11ದಾಸಜನರನು ಪೊರೆವಶ್ರೀನಿವಾಸನೇ | ಜಗದೀಶನೇ |ಶೇಷಶಯನನೆಂದೆನಿಪ |ಗೋವಿಂದನೇ | ಗುಣವೃಂದನೇ 12
--------------
ಗೋವಿಂದದಾಸ
ಹಲವು ಬ್ರಾಹ್ಮಣ ಮಂದಿಗಳಿಗಶನವನಿಕ್ಕಿಸಲಹುವೆಯನುದಿನ ತಳೆದು ಖ್ಯಾತಿಯನು1ನಳಿನನೇತ್ರನೆ ನಿನ್ನ ಪಾದದರ್ಶನದಿಂದಹಲವು ಜನ್ಮದ ದೋಷ ನಾಶವಾಯ್ತದೆಂದು2ಅನ್ನಬ್ರಹ್ಮನುಉಡುಪಿಕೃಷ್ಣನೆಂದೆನಿಸಿದೆಸ್ವರ್ಣಬ್ರಹ್ಮನು ತಿರುಪತಿ ಶ್ರೀನಿವಾಸ3ನಾದಬ್ರಹ್ಮನು ಪಂಢರೇಶ ವಿಠಲರಾಯ-ನೆನ್ನಿಸಿ ಮೆರೆªÀಗೋವಿಂದದಾಸರ ಪ್ರೀತ್ಯ4xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ