ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಣಲಿಲ್ಲವೆಂದೆನಬೇಡಿ ಪ ಜಾಣನವನು ನಿಮ್ಮ ಕೋಣೆಯೊಳಗಿರುವಾ ಗು ಡಾಣವ ತುಡುಕುವ ನೆರೆನೋಡಿ ಅ.ಪ ಸುಲಭನು ನಿಮಗವನೊಲಿವನು ನಿಮ್ಮೆಡೆ ನಿಲುವನು ನಲಿವನು ಕೈನೀಡೀ ಸಲಿಸಿರಿ ಬೆಣ್ಣೆಯ ಮೆಲುವನು ಕಿಲಕಿಲ ನುಲಿವನು ಚಲಿಸಲು ಬಿಡಬೇಡಿ 1 ಅಳುಕುತ ಬಳುಕತ ಬಳಲುತ ಸುಳಿಯುತೆ ಘಳಿಲನೆ ಪೋಪನೆಚ್ಚರವಿರಲಿ ಎಳನಗೆಯಿಂದ ಪಾಲೆರೆಯಿರಿ ಮನ ದೊಳಚ್ಚಳಿಯದ ಮೋದವು ನೆಲೆಸಿರಲಿ 2 ಮನವೆಂಬುವುದೇ ವನರುಹವಮ್ಮಾ ಕನಸುನೆನಸಿನೊಳಾ ವನಜವನರ್ಪಿಸೆ ನೀನೆಂಬುದನೇ ಮರೆಯುವಿರಮ್ಮಾ [ತನುಮನ ಅವನಡಿ ಸೇರುವುದಮ್ಮಾ] 3 ಪಡಸಾಲೆಯೊಳಿವ ನಿಲ್ಲುವನಲ್ಲಾ ಅಡಿಗೆಯ ಕೋಣೆಯ ಬಿಡುವನಲ್ಲ ಒಡೆಯ ಶ್ರೀಮಾಂಗಿರಿಪತಿಯನು ನೋಡದ ಮಡದಿಯಿಲ್ಲವೆಂಬುದು ಸಟೆಯಲ್ಲ 4 ನೀವಿರುವಾಯೆಡೆ ಪಾಲ್ಗಡಲಮ್ಮಾ ನೀವಡಿಯಿಡುವುದೇ ಕಡೆಗೋಲಮ್ಮಾ ದಧಿ ನವನೀತವು ನೀವಿರೆ ಮಾಂಗಿರಿರಂಗನುಂಟಮ್ಮಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೈಪಿಡಿದೆನ್ನನು ಕಾಪಿಡು ನಲವಿಂ ಕನ್ನಡ ನುಡಿವೆಣ್ಣೆ ಪ. ಈ ಪಸುಳೆಗೈದಾ ಪಾಪವದಾವುದು ಕೋಪಿಸದಿರೆನ್ನಾಣೆ ಅ.ಪ ಮುಳಿವಿಂತೇತಕೆ ನಳಿನದಳಾಂಬಕೆ ಎಳೆಗೂಸಿನ ಮನಕೆ ಕಳವಳದಿಂದತಿ ಬಳಲಿಕೆಯಾದರು ತಳುವುದಿದೇನಿದು ಸಾಕೇ 1 ಮಾತೆಯ ಮಮತೆಗೆ ಸೋತು ಭಜಿಸುವೀ ಪೋತನ ನೆರೆನೋಡಿ ಪ್ರೀತಿಯಿಂ ಕರೆದಾತುಕೋ ನಲ್ವಾತಿನಿಂ ಕೈನೀಡಿ 2 ಪರಿಪರಿಯೆಡರಿನ ಗಿರಿದುರ್ಗಂಗಳಾವರಿಸಿರುತಿಹುದೆ ಪರಿಯಿಂದದನುತ್ತರಿಸಿ ಬಂದಪೆ ಕರುಣಿಸು ಭರದೆ 3 ಕಾರ್ಯ ಕಾರಣ ಕರ್ತೃ ನೀನಹುದಾರ್ಯೆ ಸದಾ ಪೊರೆಯೇ ಕೋರಿಕೆಗಳನೀಡೇರಿಸಿಯಣುಗರ ನಿರಪಾಯದೆ ಕಾಯೇ 4 ಭಾಷೆಗೆ ತಪ್ಪಿದ ದೋಷಿಯೆನ್ನುತುಪೇಕ್ಷಿಸಬೇಡೆನ್ನ ಶೇಷಗಿರೀಶನೆ ಪೋಷಕನಾಗಿರೆ ನಿರ್ದೋಷಿಯೆನಿಸುವೆ ನೀಂ5
--------------
ನಂಜನಗೂಡು ತಿರುಮಲಾಂಬಾ