ಬಂದು ನಿಲ್ಲೋ ದಯಾನಿಧೇ ಬಂದು ನಿಲ್ಲೋ ಪ
ಬಂದು ನಿಲ್ಲೋ ನಿನಗೊಂದಿಸುವೆನು ಗೋ
ವಿಂದ ಗೋವಳರಾಯ ಸಂದೇಹಗೊಳಿಸದೆ ಅ.ಪ
ಸದೋಷಕ ನಾನು ಸದಾ ನಿರ್ಮಲ ನೀನು
ಪದೆಪದೆಗೆ ಪೇಳುವುದುಚಿತವಲ್ಲ 1
ಮನದೊಳು ಪೊಳದು ಚಿಂತನೆಗೆ ನೆಲೆಯಾಗಿ
ಘನಮಹಿಮನೆ ಮಧ್ವಮುನಿ ಮನ ಮಂದಿರ 2
ಕಡೆಗೋಲು ನೇಣಪಿಡಿದ ಪರಮಾನಂದ
ಉಡುಪಿಯ ಶ್ರೀ ಕೃಷ್ಣ ವಿಜಯವಿಠ್ಠಲರೇಯ3