ಒಟ್ಟು 8 ಕಡೆಗಳಲ್ಲಿ , 7 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯಾ ಬಲಗೊಂಬೆ ಕೋಲೆ ಪ ಮೊದಲು ನಮ್ಮ ಗುರು ರಘುಪತಿಯ ಪಾದಕ್ಕೆ ಮುದದಿಂದ ಎರಗಿ ಬಿನ್ನೈಪೆ ಕೋಲೆ ಮುದದಿಂದ ಎರಗಿ ಬಿನ್ನೈಪೆ ಮನದಲ್ಲಿ ಪದಮನಾಭನ್ನ ತೋರೆಂದು ಕೋಲೆ1 ಜನುಮ ಜನುಮದಲ್ಲಿ ಅನಿಮಿತ್ಯ ಬಂಧು ನೀಯನಗೀಯೋ ನಮ್ಮ ಸೇವೆಯ ಕೋಲೆ ಎನಾಗಿಯೋ ನಿಮ್ಮ ಸೇವೆಯ ತವ ಪಾದವನು ಧ್ಯಾನ ಮರಿಯಾದೆ ಕೋಲೆ2 ಮೂಢನಾದ ಎನ್ನನೋಡಿ ಕರುಣವನು ಮಾಡಿ ಹರಿಚರಣ ತೋರಿದ ಕೋಲೆ ಮಾಡಿ ಹರಿಚರಣ ತೋರಿದ ನಿಮ್ಮ ದಯ ಕೀಡುಂಟೆ ಜಗದಿ ಗುರುವರ್ಯ ಕೋಲೆ3 ಪತಿಪಾದ ಮಹಿಮೆ ತೋರಿಸಿ ಕೋಲೆ ಪತಿಪಾದ ಮಹಿಮಾ ತೋರಿಸಿ ಸ ದ್ಗತಿ ಪಥsÀವನ್ನು ವಿಡಿಸಿದ ಕರುಣಿಯೆ ಕೋಲೆ 4 ಅನಾಥ ರಕ್ಷಕ ಆಪತ್ತು ಬಾಂಧವ ಶ್ರೀನಿವಾಸನ್ನ ನಿಜದಾಸ ಕೋಲೆ ಶ್ರೀನಿವಾಸನ್ನ ನಿಜದಾಸ ಮಮಕುಲ ಸ್ವಾಮಿಗೆ ನಮಿಪೆ ಮನದಲ್ಲಿ ಕೋಲೆ 5 ಲಕುಮೀಶ ಹರಿ ದೇವಕಿ ತನಯಗೆ ಸಕಲಾ ಕರ್ಮಗಳಾ ಅರ್ಪಿಸೆ ಕೋಲೆ ಸಕಲಾ ಕರ್ಮಗಳಾ ಅರ್ಪಿಪೆ ನಮ್ಮಗುರು ಸುಖನಿಧಿಗಳಿಗೆ ನಮಿಸುವೆ ಕೋಲೆ 6 ಆನಮಿಸುವೆ ಮಹಾನುಭಾವ ಗುರು ನೇಮಕಲ್ಲಾರ್ಯರ ಚರಣಕ್ಕೆ ಕೋಲೆ ನೇಮಕಲ್ಲಾರ್ಯರ ಚರಣಕ್ಕೆ ಕೋಸಗಿ ಸ್ವಾಮಿರಾಚಾರ್ಯರ ಪಾದಕ್ಕೆ ಕೋಲೆ 7 ಪುರಂದರಾದಿ ದಾಸವರ್ಯರ ಸುಂದರ ಚರಣಕ್ಕೆ ಎರುಗುವೆ ಭರದಿಂದ ಕೋಲೆ ಭರದಿಂದ ಮುದಮುನಿ ಇವರನ್ನು ತೋರಿ ಪೊರೆಯಂದು ಕೋಲೆ 8 ಅಂದದಿಂದ ಆನಂದತೀರ್ಥ ರಾಘ ವೇಂದ್ರಾದಿ ಸಕಲ ವಿಭುದಾದಿ ಕೋಲೆ ರಾಘವೇಂದ್ರಾದಿ ಸಕಲ ವಿಭುದ ಆ ಕರ್ಮಂ ದೀಗಳಿಗೆ ನಮಿಸುವೆ ಕೋಲೆ 9 ವಾದಿರಾಜರ ದಿವ್ಯ ಪಾದಕ್ಕೆ ನಮಿಸುವೆ ಸಾಧಿಸಿ ಕೊಡಲಿ ಸತತಾದಿ ಕೋಲೆ ಸಾಧಿಸಿ ಕೊಡಲಿ ಸತತಾದಿ ಹರಿದಾಸ ರಾದವರ ಸೇವೆಯನಗೆಂದು ಕೋಲೆ 10 ಗಣಪಾದಿಗಳು ಸುರಮುನಿ ಪಾದಗಳಿಗಾ ನಮಿಸುವೆ ಮನಸಿಜ ಸುರಪಾಗ ಕೋಲೆ ನಮಿಸುವೆ ಮನಸಿಜ ಸುರಪಾಗ ಭೂತ ಗಣಪತಿ ಶೇಷರಪಾದ ಕಮಲಕ್ಕೆ ಕೋಲೆ 11 ಭಾರತೀವಾಣಿ ಗುರು ಮಾರುತಿ ಪಾದಕೆ ಪರಿ ಮಣಿಯುವೆ ಕೋಲೆ ಪರಿ ಮಣಿಯುತ ಹರಿಪಾದ ತೋರುತ ಮನದಲ್ಲಿ ನಿಲಿಸೆಂದು ಕೋಲೆ 12 ಲಕ್ಷ್ಮೀದೇವಿಯೆ ಲಕ್ಷಣವಂತಿಯೆ ಪಕ್ಷಿವಾಹನನ ಅರ್ಧಾಂಗಿ ಕೋಲೆ ಪಕ್ಷಿವಾಹನನ ಅರ್ಧಾಂಗಿ ಭವದಿಂದ ರಕ್ಷಿಸಲೆನ್ನ ತವಕಾದಿ ಕೋಲೆ 13 ಶಿರಿಗೋವಿಂದವಿಠಲ ವಿಶ್ವವ್ಯಾಪಕ ಮರುತಾಂತರ್ಗತನೆ ಮುರರಿಪು ನಮ್ಮ ಗುರುವರ್ಯರ ಪ್ರೀಯ ಸಲಹಯ್ಯ ಕೋಲೆ14
--------------
ಅಸ್ಕಿಹಾಳ ಗೋವಿಂದ
ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಯಾಕೆ ನಡುಗುವೆ ತಾಯಿ ಭೂಕಾಂತೆಯೆ ಪ ಲೋಕನಾಥನ ರಾಣಿ ಪರಮ ಕಲ್ಯಾಣಿ ಅ.ಪ. ಬುಧರು ಸನ್ಮಾರ್ಗವನು ಒದರಿ ಬಿಟ್ಟರೆ ತಾಯಿ ಅದಟರಾದವರು ಗರ್ವದಿ ಮೆರೆವರೆ ಮದದ ಸಂಪದವು ವೆಗ್ಗಳಿಸಿತೆ ವಣಿಜರಿಗೆ ಕದನಕೆ ಕಾಲ್ಕೆರೆಯುತಿಹರೆ ಮಿಕ್ಕವರೆಲ್ಲ 1 ಕುಲಶೀಲಗಳನೆಲ್ಲ ಕೆಡಿಸಿ ನೆಲಗೆಡಿಸಿದರೆ ಕಳುವು ಹಾದರ ನುಸುಳು ಬಲವಾಯಿತೆ ಲಲನೆÀಯರ ವ್ರತನೇಮಕಳಿವು ಬಂದಿತೆ ತಾಯಿ ಹೊಲಬು ತಪ್ಪಿದೆ ಭಕ್ತಿ ಜಲಜಾಕ್ಷ ಪಥದಿ 2 ಆವ ಕಾರಣದಿಂದುದಯಿಸಿತು ಈ ಚಿಂತೆ ಆವನಿಂದಾಯ್ತಮ್ಮ ಈ ಉಬ್ಬಸ ದೇವಿ ನೀ ದುಃಖಿಸುವ ಬಗೆ ನೋಡಿ ಮನ್ಮನವು ಬೇವುದಿಗೊಳುತಿಹುದು ಶ್ರೀ ಕಾಂತನಾಣೆ 3
--------------
ಲಕ್ಷ್ಮೀನಾರಯಣರಾಯರು
ರಂಗನ್ಯಾಕೆ ಮಮತೆಕೊಟ್ಟು ದಣಿಸುವಿಕೃಷ್ಣ ನೀ ಕರುಣದಿ ಪಾಲಿಸೊ ಪ. ತನುವು ತನ್ನದು ಅಲ್ಲ ....ತನುವಿನ ಸಂಬಂಧಿಗಳೆಂಬೊ ಅವರ್ಯಾರೊನಾನ್ಯಾರೊ ಅವರಿಗೆ ಧನ ಮೊದಲಾದ ವಿಷಯಂಗಳಅನುಭವ ಹಿಂದಿನ ದೇಹದಂತರ ಅರಿಯೆವೊ 1 ನಿನ್ನ ಹಂಬಲಿಸದೆ ಅನ್ಯ ವಿಷಯಗಳಿಗೆನ್ನನೊಪ್ಪಿಸುವದು ನೀತವೆಮನ್ನಿಸಿ ದಯದಿ ನೀ ಯನ್ನ ಪಾಲಿಸಲು ನಾನಿನ್ನ ನೇಮಕೆ ಪ್ರತಿಕೂಲನೆ 2 ಇಂದ್ರಿಯಂಗಳು ವಿಷಯಂಗಳಿಗೆಳೆಯೆ ಗೋ-ವಿಂದಯೆನ್ನ ವಶಕೆ ಬಾರದುಇಂದಿರೆಯರಸ ಬ್ರಹ್ಮೇಂದ್ರವಂದಿತ ಸುಖಸಾಂದ್ರ ಭವಮೋಚಕ ನಮೋ ನಮೋ 3 ಅರಿತು ಅರಿತು ಯನಗರೆಲವವಾದರುವಿರಕುತಿ ವಿಷಯದಿ ಬಾರದುಕರುಣಾಸಾಗರ ನಿಮ್ಮ ದರುಶನವಲ್ಲದೆಮರಳು ನೀಗುವ ಬಗೆ ಕಾಣೆನೊ 4 ಭವ ಮೋಚಕ ನಮೋ ನಮೋ 5
--------------
ಗೋಪಾಲದಾಸರು
ಮನವೆ ಮಾಧವನ ಮರೆಯದಿರೆಂದೆ ದಣುವಾಯಿತು ಹಿಂದೆಕ್ಷಣವೊಂದು ಬಿಡದಿರು ಕೃಷ್ಣನ ಮುಂದೆ ಪ.ಘನವಿಷಯಂಗಳ ನೆನವಿಲಿ ಪುನ:ಪುನ:ತನುವ ವಹಿಸಿಭವವನವನ ಚರಿಸದೆಅ.ಪ.ಹರಿವಾರ್ತೆಯನು ಕೇಳು ಕೇಳಿದ್ದೆ ಕೇಳು ಅರಿಅರುವರನಾಳುಅರಿವಿಂದ ಗರುವದ ಮೂಲವ ಕೀಳುಹೆರವರ ಹರಟೆಗೆ ಪರವಶನಾಗದೆಕರಿವರವರದನ ವರವನೆ ಬಯಸು 1ಹರಿಗುರುವಿಗೆರಗು ಅರಿತರಿತೆರಗು ತಪವೆರಡಲಿ ಸೊರಗುಸೊರಗಿದವರ ಕಂಡು ಕರಗು ಮರುಗುತಿರುಗ್ಯೊಡಲುರಿಗೆ ಮುಳ್ಳ್ಹೊರೆಗೆ ಸ್ಮರಾಸ್ತ್ತ್ರಕೆಗುರಿಯಾಗದೆ ಹರಿಸೆರಗ ಬಿಡದಿರು 2ಹರಿವಿಗ್ರಹನೋಡುನೋಡಿದ್ದೆನೋಡುಮಮಕಾರವೀಡಾಡುಸ್ಥಿರವೊಂದನೆ ಬೇಡಸ್ಥಿರವ ಬಿಸಾಡುಸಿರಿವಂತರಸಿರಿಪರವಧುಗಳ ಸಿಂಗರವೆಣಿಸದೆ ಸಿರಿವರನ್ನೆನೋಡು3ಹರಿಪ್ರಸಾದವನುಣ್ಣು ನೆನೆನೆನೆದುಣ್ಣು ಶ್ರೀಹರಿ ಪ್ರೀತ್ಯೆನ್ನುಹರಿಪ್ರೇರಕ ನೇಮಕ ಸಾಕ್ಷಿಕನೆನ್ನುಹರಿಪ್ರಿಯವಲ್ಲದನರುಪಿತ ಪರಿಪರಿಚರುಪವ ಚರಿಸದೆ ಹರಿಯಚರಿಸು4ಹರಿಯಂಘ್ರಿ ಪರಾಗವ ಗ್ರ್ರಹಿಸಾಘ್ರಾಣಿಸು ಹರಿಯವರಿಗೆ ಉಣಿಸುಹರಿಭಕ್ತಿ ಜ್ಞಾನ ವೈರಾಗ್ಯವ ಗಳಿಸುಹರಿಪ್ರಿಯ ಪ್ರಭು ಮಧ್ವಾಚಾರ್ಯರ ಪ್ರಿಯ ಮೇಲ್ಗಿರಿ ಪ್ರಸನ್ವೆಂಕಟ ದೊರೆಯನೆ ನಂಬು 5
--------------
ಪ್ರಸನ್ನವೆಂಕಟದಾಸರು