ಒಟ್ಟು 10 ಕಡೆಗಳಲ್ಲಿ , 10 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಘ್ರ್ಯವರ್ಘವಿದುವೆ ನಿನ್ನ ಅಭಯ ಹಸ್ತಕೆ ಪ ಭಾರ್ಗವೀ ಮನೋಹರಾಪ ವರ್ಗದಾಯಕ ಅ.ಪ ಅರುಣಜನ ನೇವರಿಸಿದ ಹಸ್ತಕೆ ಪರಮ ಕೋದಂಡ ಪಿಡಿದ ಹಸ್ತಕೆ 1 ವರಕುಚೇಲನವಲನು ಬಹು- ತರುಣಿದೃಪದ ತನಯಳ ಶಾ- ಕಾನ್ನವಾಂತ ದಿವ್ಯ ಹಸ್ತಕೆ 2 ಅದುಭುತ ಗುರುರಾಮವಿಠಲಅಪ್ರಮೇಯ ನಿನ್ನ ಹಸ್ತಕೆ 3
--------------
ಗುರುರಾಮವಿಠಲ
ಅಧ್ಯಾಯ ಎರಡು ಮೃಗ ಬ್ಯಾಟಯಲಿ ಹೊರಟ್ಹೋಗುವಾ ಯಕ್ಷಾನುಗರಿಂದ ತಾ ಮೃತನಾಗುವಾ ಮಗ ಬಾರಾನೆಂದು ತಾಯಿ ಮಿಡುಕುತಾ ರಾಜ್ಯ ಅಗಲಿ ಹೋಗ್ವಳು ತಾ ಹುಡುಕುತಾ 7 ಅಂತ:ಕರುಣ ತಾಪದಲಿ ಕಾಡಾಕಿಚ್ಚಿ ನಂತದೊಳಗೆ ಬೀಳೋಳು ಗಾಡಾ ಚಿಂತೆಯಾಕೆ ನೃಪಹೋಗಿನ್ನ ನಿ ಶ್ಚಿಂತೆಯಿಂದಲಿ ರಾಜ್ಯ ಮಾಡಿನ್ನ 8 ಎಂದು ಹಸ್ತವ ಶಿರದಲ್ಲಿಟ್ಟು ಆ ನಂದದಿಂದಲಿ ವರಗಳನು ಕೊಟ್ಟು ಮುಂದನಡೆದ ಪಕ್ಷಿವಾಹನನು ಜಗ ದ್ವಂದ್ಯ 'ಶ್ರೀ ಅನಂತದ್ರೀಶ' ನು 9 ಪದ ಆದಿ ಮೂರುತಿ ಶ್ರೀರಮೇಶಾ ತನ್ನ ಧಾಮಕ್ಕ್ಹೋದನು ಮೋದರಹಿತನಾಗಿ ಬಾಲದೀರ್ಘ ಉಸುರಗಳದನು ಪೋದನೆಂದು ದು:ಖದಿಂದ ತಿರುಗಿ ಪುರಕ ನಡದನು ಯಾದವೇಶ ಹಾ ಮುರಾರಿ ಎಂದು ಆಗ ನುಡದನು 1 ಪೂರ್ವ ಪುಣ್ಯದಿಂದ ನಿನ್ನ ರೂಪ ಯನಗ ತೋರಿದಿ ಶರ್ವಮಿತ್ರಯೆನ್ನಾ ವಿಷಯ ಮಡುವಿನೊಳಗ ಹಾಕಿದಿ ಸರ್ವಕಾರ್ಯ ಬಿಟ್ಟು ಕರುಣಾದಿಂದ ಆಗ ನೋಡಿದಿ ಗರ್ವಯುಕ್ತನಾಗಿ ಯನ್ನಬಿಟ್ಟು ಈಗವೋಡಿದಿ 2 ಸಿಕ್ಕಿದಂಥ ದಿವ್ಯಮಾಣಿಕ್ಯ ಕಳದಂತಾಯಿತು ಫಕ್ಕನೆದ್ದು ಕುಳಿತು ಕಂಡಾಕನಸಿನಂತಾಯಿತು ಮಿಕ್ಕ ವಿಷಯ ಭೋಗ ಬೇಡಿ ಜನ್ಮ ವ್ಯರ್ಥವಾಯಿತು ತಕ್ಕ ಮುಕ್ತಿ ಬೇಡಲಿಲ್ಲಾ ಯನ್ನ ಬುದ್ಧಿ ಹೋಯಿತು 3 ಕ್ಲೇಶ ಬಿಟ್ಟು ಈಗ ಬಹಳ ವಿಷ್ಯ ಸೌಖತು” ಏಸು ಜನ್ಮ ಪೂಜೆ ಮಾಡಿದಾರು ದೇವ ದೊರಕನು ಮಾಸ ಪಂಚದಿಂದ ಯನ್ನ ದೃಷ್ಟಿ ವಿಷಯ ನಾದನು 4 ಆಶಿಇಂದ ಆಗ ವಿಷಯ ಸËಖ್ಯವನು ದೈವಕೆ ಮಾಡಿಕೊಂಡು ಹೀಂಗ ಮನಸ್ಸಿನಲ್ಲಿ ಬಂದ ಪಟ್ಟಣಕೆ ಕೊಂಡ ಪುರಸಮೀಪಕೆ 5 ಶ್ಲೋಕ ಆಗ ನೋಡಿದ ಒಬ್ಬ ಧ್ರುವನ್ನಾ ವೇಗ ಪುಟ್ಟಿತು ಮನಸಿಗೆ ತನ್ನ ಬ್ಯಾಗ ಪೇಳಿದ ಅರಿಸಿನ ಮುಂದಾ ಬಾಗಿ ಬಿನ್ನಯಿಸಿ ತಾನಯ ದಿಂದಾ 1 ಪದ ರಾಜಭೂಪಾನೆ ನಿನ ಕಂದ ಬಂದಾ|| ಪೂಜಿಸಿ ದೇವೇಶನ ಛಂದದಿಂದ || ಪರಿಪರಿಯಿಂದಾ ಗುರುಕೃಪೆಯಿಂದಾ | ತಿರುಗಿ ಇಲ್ಲಿಗೆ ಕ್ಷೇಮದಿಂದಲಿಂದಾ 1 ಪುಣ್ಯಗಳಿಂದಾರಣ್ಯದಲಿಂದಾ ಸಣ್ಣಬಾಲನು ಭಾಳನಂದದಿಂದಾ 2 ಅನಂತರದಿಂದಾ ಅನಂತ ಸÉೀವಿಂದಾ 'ನಂತ್ರಾದೀಶನಾ’ ದಯದಿಂದ ಲಿಂದಾ 3 ಆರ್ಯಾ ಕಾಂಬೆನು ಯಂದಾ ಹುಟ್ಟಿತು ಆನಂದಾ1 ಪದ ರಾಗ :ಶಂಕರಾಭರಣ ಆದಿತಾಳ ಸುದ್ದಿ ಹೇಳಿದಾತಾಗೆ ಬೇಕಾದ್ದು ಕೊಟ್ಟು ಹರುಷದಿಂದ ಯದ್ದು ರಥವಾನೇರಿ ತಾ ಸನ್ನದ್ಧ ನಾದನು 1 ಇಬ್ಬರ ಹೆಂಡಿರ ಕೂಡಿ ಒಬ್ಬ ಪುತ್ರನಿಂದ ಕೂಡಿ ಅಬ್ಬರದಿಂದಲಿ ತಾ ಉಬ್ಬುಬ್ಬಿ ನಡದಾನು 2 ಮಂತ್ರಿಗಳು ವಿಪ್ರಾರು(ಗಳು) ಮಂತ್ರಜ್ಞಾರು ಮಾನವಾರು ಸಂತ್ರೋಧಾರ ನಡದಾರು ಬಜಂತ್ರಿ ಘೋಷಾದಿ 3 ಮೃದಂಗ ಘೋಷ ಸಾರಿಸಾರಿ ನುಡದಾವು ಅಬ್ಬಾರದಿಂದಲಿ 4 ತಂಬೂರಿಘೋಷಾ ಜಾಣೆ ರಾಮಂಜುಳಗೀತಾವಾಣಿ ಘೋಷಾವು 5 ಅಂಗಾನೇರು ಕುಂಕುಮಾದಿ ಮಂಗಲ ಭೂಷಾದಿಂದ ಶೃಂಗಾರಿಸಿ ಕೊಂಡಾರು ಕುರಂಗ ನೇತೆÀ್ರರು 6 ಧಟ್ಟಿ ಪೀತಾಂಬರನುಟ್ಟ ಬಟ್ಟಾ ಕುಚದಲ್ಯೊಪ್ಪುವಾ ಕಠ್ಠಾಣಿ ಮೋಹನ ಮಾಲೆನಿಟ್ಟು ಕೊರಳಿಗೆ 7 ರಂಬೇರು ವೀಳ್ಯವ ಮೆದ್ದು ತಾಂಬೂಲಗಲ್ಲಾದಲ್ಯೊತ್ತಿ ತುಂಬಿ ಹರುಷದಿಂದ ಚಂದ್ರ ಬಿಂಬ ಮುಖಿಯರು 8 ಮೀರಿದಾ ಸಂಭ್ರಮದಿ ಶೃಂಗಾರವನು ಮಾಡಿಕೊಂಡು ಥೋರಾಗನ್ನಡಿಲಿ ತಮ್ಮ ಮಾರಿ ನೋಡೋರು 9 ಕುಡಿಗಣ್ಣ ನೋಟಾದವರು ನಡಸಣ್ಣಾದಿ ಬಳಕುವರು ಮಂದ ನಡಗಿ ವಂತರು 10 ಪಟ್ಟಾಣದಿಂದಲಿ ವಳ್ಳೇ ಧಿಟ್ಟನಾರಿಯರು ಕಾಲಾ ಬಟ್ಟಿನಲಿ ಕಾಲುಂಗುರ ಮೆಟ್ಟಿ ನಡದಾರು11 ಪರಿಪರಿ ವಿಲಾಸದಿಂದ ಕರದಲ್ಲಿ ಕರತಳಾನಿಕ್ಕಿ ಕಿರಿನಗಿಯಿಂದಲ್ಲೆ ನಗುತಾ ಬರುವುತೀಹರು 12 ಹಿಂಡುಜನರಾಗಳ ಕೂಡಿಕೊಡು ರಾಜಾಬಂದು ಮಗನಾರಥವಾನಿಳುದು ಅಪ್ಪಿಕೊಂಡಾ ಹರುಷದಿ 13 ಮೂಸಿ ನೋಡಿತನ್ನ ಜಲಜಾ ಲೋಚನಗಳಿಂದ ಜಲವಾಧರಿಸಿದ 14 ಛಂದಾದಿ ಬಾಲಾನು ತನ್ನ ತಂದಿ ಪಾದಾದೊಳು ಯರಗಿ ಪಾದ ಬಂದು ಯರಗಿದ 15 (ತಾಯಿಯರ ಪಾದಗಳಿಗೆ ಪೋರ ಬಂದು ಯರಗಿದ) ಸಾಧುತಂದಿತಾಯಿ ಆಶೀರ್ವಾದ ಯುಕ್ತನಾಗಿ ತನ್ನ ಮೋದ ಬಟ್ಟಾಳು 16 ಏಳಯ್ಯಾ ಎಳಯ್ಯಾಯೆಂದು ಭಾಳಾನಂದಾದಿಂದ ಲ್ಯಪ್ಪಿ ಭಾಳಾಯುಷ್ಯಾವಂತನಾಗೊ ಬಾಲಾಯೆಂದಾಳು 17 ಉತ್ತಮ ಧ್ರುವನು ತಾತಾ ಗುಣೋತ್ತಮ ಇಬ್ಬರು ಕೂಡಿ ಅತ್ಯಂತ ಹರುಷಗೊಂಡಾರಂತ:ಕರುಣದಿ 18 ಇಂದಿಗೆ 'ಅನಂತಾದ್ರೀಶಾ’ ಹೊಂದಿಸಿದಾ ನಮ್ಮಿಬ್ಬರಾ ನೆಂದು ಮಾತನಾಡಿದರು ಕಂದರಿಬ್ಬಾರು 19 ಛಂದ ಹೆತ್ತ ತಾಯಿಗೆ ಚಿತ್ತಸಂಭ್ರಮಾ ಮತ್ತ ಜನರಿಗೆ ಚಿತ್ತ ವಿಭ್ರಮಾ ಪುತ್ರನಷ್ಟಿ ತಾ ಯೆತ್ತಿಕೊಂಡಳು ಸುತ್ತ ಚಿಂತಿಯಾ ಮರ್ತುಬಿಟ್ಟಳು 1 ಸುಂದರಾಂಗಿಯ ಆನಂದ ಬಾಷ್ಪದಾ ಬಿಂದು ಸ್ನಾನವು ಕಂದ ಮಾಡಿದಾ ಮುಂದ ರಥದಲ್ಲಿ ಬಂದು ಕುಳಿತನು ಮುಂದಿರುವ ಬಾಲನ ಒಲಿದು ನೋಡುತಾ ಮೊಲಿಯ ಪಾಲು ಚೆಮ್ಮಿ ತಲಿಯಲಿ ಹರುತಾ ಹಲವು ರಾಜ್ಯಕೆ ಮುಂದ ಸೂಚನಾ2 ಕುದರಿಸೈನ್ಯದಿಂದ ನಡದನು ಭಾಳ ಬಿರುದಿನಾ ಕಾಳಿ ಊದುತಾ ತಾಳ ವಾದ್ಯವು ಭಾಳ ನುಡುವುತಾ ಕೇಳಿಪುರದಲ್ಲಿ ಬಾಲಪುರುಷರು ಮಾಳಿಗಿಯಲಿ ಭಾಳ ನಿಂತರು 3 ಉತ್ತಮಾರ್ಯರು ಮತ್ತ ಸ್ತ್ರೀಯರು ಹತ್ತಿ ಮಾಳಿಗಿ ಸುತ್ತ ನಿಂತರು ಯೆತ್ತ ನೋಡಲು ರತ್ನ ಭೂಷಿತಾ ಉತ್ತುಮಾ ಪುರಿ ಭರ್ತ ಪಾಲಿತಾ 4 ಸಾಲು ಸಾಲಕೆ ವಿಶಾಲ ಮಂಟಪಾ ಸಾಲ ದೀಪದಿ ಭಾಳ ಶೋಭಿಪಾ ಸೆಲ (ಚೆಲ್ವ?) ಮುತ್ತಿನ ಸಾಲಯಳಿಗಳು ಮ್ಯಾಲ ಮಲ್ಲಗಿ ಮಾಲಕಿಗಳು 5 ಆರ್ಯಾ ಮಂದ ಮಾರುತಾನಿಂದ ಭಾಳಮಕರಂದ ಪುಷ್ಟದಾ ವಾಸನವು ಮುಂದ ಪತಾಕಿಗಳಿಂದ ಕಣ್ಣಿಗೆ ಛಂತ ತೋರಿಪಾ ಪಟ್ಟಣ್ಣವು 1 ವೇಗದಿಂದ ರಥ ಸಾಗಿಸಿ ಧ್ರುವ ಛಂ ದಾಗಿ ನಡೆದನು ಪುರದೊಳಗೆ ಬ್ಯಾಗ ಗೋಪುರದ ಬಾಗಿಲದಾಟಿ ಪೋಗಿ ಕುಳಿತನು ಸಭಿಯೊಳಗೆ 2 ಬಾಲನ ಕಂಡು ಭೂಪಾಲನು ಹಿಗ್ಗುತಾ ಭಾಳಪುಟ್ಟಿ ಮನದುದ್ರೇಕಾ ಕಾಲ ಮೂಹೂರ್ತದ ವ್ಯಾಳಯವು ಸಾಧಿಸಿ ಬಾಲಗ ಮಾಡಿದ ನಭಿಷೇಕಾ3 ಕೊಟ್ಟರಾಜ್ಯವನು ಪಟ್ಟಗಟ್ಟಿ ಮುಂ ದಿಟ್ಟ ಶಿಖಾ ಮುದ್ರಿಕಿಯನ್ನು ಅಷ್ಟ ವಿಭೂತಿಗ¼ಷ್ಟು ಕೊಟ್ಟು ಸಂ ತುಷ್ಟನಾದ ಭೂಪತಿ ತಾನು 4 ಛಂದದಿ ದೇವರಿಗೊಂದಿಸಿ ಧ್ರುವ ಆ ನಂದದಿ ಬ್ರಾಹ್ಮರಿಗೆರಗಿದನು ತಂದಿ ತಾಯಿಗಳಿಗೊಂದಿಸಿ ಬಹುತ್ವರ ದಿಂದ ಏರಿದಾ ಪೀಠವನು 5 ಸುಂದರ ಸಭಿಯಲಿ ಬಂದು ಕೂಡಲು ದೇ ವೇಂದ್ರನಂತೆ ಬಹು ಶೋಭಿಸಿದಾ ಬಂಧು ಜನರಿಗ್ಯಾನಂದವ ತೋರುತ ಚಂದ್ರಮನಂತೆ ಶೋಭಿಸಿದ 6 ಝಗಿಝಗಿ ತೋರುವ ಬಗಿಬಗಿ ಕುಪ್ಪುಸ ಬಿಗಿಬಿಗಿ ಇಂದಲಿ ತೊಟ್ಟವರು ಲಗು ಬಗೆಯಿಂದಲಿ ನಗಿನಗಿ ಮಾತಿನ ಸೊಗಸು ಗಾರಿಕೆ ಬಲ್ಲವರು 7 ಥೊರಮುತ್ತು ಜರತಾರ ಮಯದ ಉಡ ಗೊರಿ ತಂದರು ಆ ಜನರು ಸಾರ ಸಿಂಹಾಸನಯೇರಿದ ಧ್ರುವನಿಗೆ ಆರುತಿ ತಂದರು ನಾರಿಯರು 8 ಮುತ್ಹಚ್ಚಿದ ಹೊಸ ನತ್ತುಗಳಿಂದಲಿ ಮತ್ತಿಷ್ಟೊಪ್ಪುವ ಮುಖದವರು ಪುತ್ಥಳಿ ಸರಘುನ ಮುತ್ತಿನ ಸರಗಳು ಉಳ್ಳವರು9 ಹತ್ಹೊರಷುದ ಮ್ಯಾಲ್ಮತ್ತೆರಡೊರ್ಷದ ಉತ್ತಮ ಪ್ರಾಯದ ಬಾಲಿಯರು ಮತ್ತ ಕಾಲುಂಗರ ವತ್ತೊತ್ತಿ ನಡುವುತ ಗತ್ತಿನಿಂದಲೆ ನಡುವುವರು 10 ಪದ ತಂದ್ರು ಆರುತಿ ಚಂದ್ರ ಮುಖಿಯಾರು ತಂದ್ರು ಆರುತಿ ಬಹು ಸುಂದರ ಸುಗುಣೇರು ಪ ಚಂದುಟಿ ಕಚ್ಚುತ ನಿಂದ್ರದ ಮದದ ಗ ಜೇಂದ್ರ ಗಮನಿಯರು ಬಂದ್ರಾಗಲೇ ದೇ ವೇಂದ್ರನ ಸಮರಾಜೇಂದ್ರನÀ ಸುತಗೆ ಅ.ಪ ಬಣ್ಣಗಾರಿಕೆಯಲಿ ಸಣ್ಣಕುಂಕುಮನಿಟ್ಟ ಕಣ್ಣಕುಡಿ ಹುಬ್ಬು ಕುಣಿಕುಣಿಸ್ಯಾಡುತ ಹೆಣ್ಕೋಕಿಲ ಸ್ವರ ಸಣ್ಕಂಠದಿ ನುಡಿ ಸಣ್ಕದಿ ಪಾಡುತ 1 ಕೈ ಬೆರಳಿಗೊಪ್ಪುವ ಹರುಳಿನುಂಗುರ ಇಟ್ಟವರು ಯರಳಿಯಂತೆ ಹೊರಹೊರಳಿ ನೋಡಿ ಮುಂ ಗುರುಳ ಗೂದಲಾ ತೀಡುವರು ಜಾಣಕಾಂತಿಯರು 2 ಮೇಲ್ಮಾಟದ ಬಗಿಯುಲ್ಮಾತಾಡುತ ಬಲ್ಮೋಹದಿ ಬಹು ಮೆಲ್ಲಮೆಲ್ಲನೆ ಹೆಜ್ಜೆ ನೆಲ್ಲ ಮ್ಯಾಲಿಕ್ಕುತ ಸೊಲ್ಮುಡಿನೇವರಿಸಿ ಮ್ಯಾಲ್ಮಲ್ಲಿಗಿ ಸರಗಳ ಮುಡಿಯವರು 3 ಸದ್ರಸ ಕುಂಕುಮ ಮುದ್ರಾಂಕಿತ ಕುಚ ಘದ್ರಿಸುತಲಿ ಬಹು ಉದ್ರೇಕದಿ `ಅನಂತಾದ್ರೀಶನ ' ಮುದ್ರಿಕಿ ಪದಗಳು ಘದ್ರಿಸಿ ನುಡಿವುತಾ ಭದ್ರಾಂಗಿಯರು 4 ಪದ ಮಂಗಳ ಮೂರುತಿ ಬಾಲಾಗೆ ಶ್ರೀ ನೃಪಾಲಾಗೆ ಮಂಗಳ ಗುಣಶೀಲಾಗೆ ಮಂಗಳಮೂರುತಿ ಛಂದಾ ಬಗಿಯಿಂದಾ ಪ ಶುಭದಿಂದಾ ಆನಂದದಿಂದಾ ಅಂಬೂಧಿಯೊಳಗಾಡಿ ಗಂಭೀರಾಗಿರಿಪೊತ್ತಾ ಜಾಂಬುನದಾಕ್ಷಾರಿ ವರ ಪ್ರಿಯಾಗೆ ಗಂಭೀರಾ ನೃಸಿಂಹಾನ ನೆಂಬಿ ರಕ್ಷಿತ ನೀಗೆ ರಂಭೇರು ಕರುಣಾದಿ ನೋಡಿ ಒಡಗೂಡಿ ಕೊಂಡಾಡಿ ತ್ವರಗೂಡಿ ಪಾಡಿ 1
--------------
ಅನಂತಾದ್ರೀಶ - ಕಥನಕಾವ್ಯಗಳು
ದಾತ ನೀನಿರಲಾತರ ಬಡತನವೊ ದಾತ ನೀನಿರಲಾತರ ಬಡತನವೊ ಪ ಸೋತು ಮನವನು ವಿಷಯಗಳಲಿ ಬಲು ವಾತ ಕುಮಾರರ ನೀತಿಗಳರಿಯುತ ಧಾತಪಿತನ ಗುಣ ಜಾತಗಳಲಿ ಅತಿ ಪ್ರೀತಿ ಪಡೆಯುವರ ಅ.ಪ ತಾನು ತನ್ನವರೆನ್ನುವ ಮೋಹದಲಿ ಅನುದಿನದಲಿ ಮುಳುಗಿಹ ಮಾನವರಿಗೆ ಧನಾರ್ಜನೆಯು ಕ್ಲೇಶ ಜಾನಕೀಶನೆ ನೀನಲ್ಲದೆ ಎನ ಗೇನು ರುಚಿಸದು ಎಂದರಿಯುತ ನಿನ್ನ ಜ್ಞಾನ ಪಡೆಯಲು ಸತತ ಶ್ರವಣ ಮನನಾದಿಗಳ ಸುಖವರಿತ ಸುಜನರಿಗೆ 1 ಪಾಡುಪಡುತಲಿ ಧನವ ಬಹಳ ಗಳಿಸಿ ನೋಡುತಲದ ಹಿಗ್ಗುತ ಗೂಢತನದಲಿ ದಿನದಿನ ನೇವರಿಸಿ ಕಾಡುವಾ ನರನಂತೆ ಜೀವನ ಮಾಡುವುದು ಕಡು ಬಡತನವಲ್ಲವೆ ತೋಡಿ ಗಿರಿಯನು ಇಲಿಮರಿಗಳ ಹಿಡಿ ದಾಡುವಂತಹ ಮೂಢ ನಾನಲ್ಲವೊ 2 ನಿನ್ನ ಗಾನವೆ ವಿವಿಧ ಸುರಸ ಪಾನ ಅವಿಚಾಲಿತ ಮನದಲಿ ನಿನ್ನ ಧ್ಯಾನವೆ ನವಮಣಿ ಸೋಪಾನ ನಿನ್ನ ಪೂಜೆಯ ಮಂದಿರವೆ ಎನ ಗುನ್ನತದ ಉಪ್ಪರಿಗೆಯ ವಾಸವು ನಿನ್ನ ಸೇವೆಯ ಸುಖತಮ ಭೋಗಗ ಳೆನ್ನುವರಿಗೆ ಪ್ರಸನ್ನನಾಗುವ 3
--------------
ವಿದ್ಯಾಪ್ರಸನ್ನತೀರ್ಥರು
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿನ್ನವಳ ಬಗೆಯ ಪೇಳುವೆನು ಕೇಳೋಮನ್ನಿಸೋ ಮಾನಿನೀಮಣಿಯನು ಕೃಪಾಳೋ ಪ ಕನ್ನಡಿಯ ನೋಡಿದಳೋ ಕರುಳ ನೇವರಿಸಿದಳೋಚಿನ್ನದುಂಗುರವ ಬೆರಳೊಳಗಿಟ್ಟಳೋಕಣ್ಣಕಪ್ಪಿಟ್ಟು ತಿಲಕವ ತಿದ್ದಿಕೊಂಡಳೋರನ್ನದೊಡವುಗಳ ಸಖಿಯರಿಗೆ ಕರದಿತ್ತಳೋ 1 ಜಾತಿಮುತ್ತಿನ ಸರವ ಹಾಕಿಕೊಂಡಳೋ ಕೊರಳ್ಗೆಜಾತಿಮಲ್ಲಿಗೆಯ ಮಾಲೆಯ ಮುಡಿದಳೋಪ್ರೀತಿಯಿಂ ಸಾಕಿದ ಗಿಣಿಯ ತರಿಸಿ ನೋಡಿದಳೋನೂತನದ ಚಂಗಾವಿ ಸೀರೆಯನೆ ನೆರಿದುಟ್ಟಳೋ 2 ಚಿತ್ತಾರದ ಪಟದಲ್ಲಿ ನಿನ್ನ ರೂಪನೆ ಬರೆದುಅರ್ತಿಯಿಂ ಕೈಮುಗಿದು ನೋಡುತಿಹಳೋಹೊತ್ತುಗಳೆವುದಕೆ ಹರಣಲ್ಲಿ ಬಂದುನೆರದುಳುಹೊಚಿತ್ತಜನಮದಭಂಗ ಕೆಳದಿ ರಾಮೇಶಲಿಂಗ 3
--------------
ಕೆಳದಿ ವೆಂಕಣ್ಣ ಕವಿ
ಮಂಗಳಂ ಶ್ರೀ ಪಾರ್ಥಸಾರಥಿಗೆ ಮಂಗಳಂ ಸಂಕರ್ಷಣನಿಗೆ ಅನಿರುದ್ಧ ಸಾತ್ಯಕೀಸಹ ಬಂದು ನಿಂದವಗೆ ಪ ವಸುಧೆ ಭಾರವನಿಳುಹಲೆಂದು ದೇವಕೀ ವಸುದೇವರುದರದಿ ಶಿಶುವಾಗಿ ಅಸುರ ಪೂತನಿಯಸುವ ನೀಗಿದ ಕುಸುಮನಾಭಗೆ 1 ವಾತಾಸುರನಕೊಂದು ಬಾಯೊಳುಮಾತೆಗೆ ಬ್ರಹ್ಮಾಂಡತೋರ್ದಗೆ 2 ಒತ್ತಿ ಕಾಳಿಯ ಶಿರವನಾಗ ಸುತ್ತಿದಾ ಕಿಚ್ಚನ್ನು ನುಂಗಿ ಎತ್ತಿ ಗೋವರ್ಧನಗಿರಿಯ ಹತ್ತಿ ಗೋಮಂತವನು ಹಾರ್ದಗೆ 3 ಕೇಶಿಯನು ಸಂಹರಿಸಿ ದುಷ್ಟದ್ವೇಷಿಯಾದ ವೃಷಭನನು ಕೊಂದು ದಾಸಿ ತಂದ ಗಂಧವನು ಪೂಸಿ ಮೆರೆದ ಕ್ಲೇಶನಾಶಗೆ 4 ಬಿಲ್ಲು ಮುರಿದು ಬೀದಯಲ್ಲಿ ಎಲ್ಲರಿಗೆ ತಕ್ಕ ರೂಪ ತೋರಿ ಮಲ್ಲರನು ಮರ್ಧಿಸುತ ಮಾವನ ಸೊಲ್ಲನಡಗಿಸಿದ ಪುಲ್ಲನಾಭಗೆ 5 ರುಕ್ಮಿಣೀ ಸತ್ಯಭಾಮೆ ಕಾಳಂದಿ ಜಾಂಬವತಿಯು ಮೊದಲಾದ ಲಕ್ಷ್ಮಣೆ ಸತ್ಯಭದ್ರೆ ಮಿತ್ರವಿಂದೆಯು ತಂದ ಲಕ್ಷ್ಮೀರಮಣಗೆ 6 ಕೊಂದು ನರಕನ ಹದಿನಾರುಸಾವಿರ ಸ್ತ್ರೀಯರನು ಬೇಗ ತಂದು ದ್ವಾರಕಿಯಲ್ಲಿ ಸತಿಸಹ ಆನಂದದಿಂದಲಿ ನಿಂದಕೃಷ್ಣಗೆ 7 ಹೇಮದಾಭರಣವಿಟ್ಟು ರುಕ್ಮಿಣಿ ನೇಮದಿಂದಲೆ ಬೀಸುತಿರಲು ಪ್ರೇಮಕಲಹದಿ ಬೀಳಲಾಕ್ಷಣ ವಿರಾಮವಿಲ್ಲದೆ ಎತ್ತಿದವಗೆ8 ಎತ್ತಿ ಅಂಕದೊಳಿಟ್ಟು ಪ್ರೇಮದಿ ಅರ್ಥಿಯಿಂದಲೆ ಕುರುಳನೇವರಿಸಿ ತತ್ವವಾಕ್ಯವನ್ನು ಹೇಳಿದ ಮುಕ್ತಿದಾಯಕ ಮುದ್ದು ಕೃಷ್ಣಗೆ 9 ಜಾಣತನದಲಿ ಕಾಶಿಯನುಸುಟ್ಟು ಪೌಂಡ್ರಕನಪ್ರಣಾಪಹರಿಸಿದವಗೆ 10 ಮಿಥುಳವಾಸಿಗೆ ಮುಕ್ತಿಯನಿತ್ತು ಸುತನ ತಂದು ವಿಪ್ರನಿಗಿತ್ತು ಹತವಮಾಡಿ ವೃಕಾಸುರನ ಶ್ರುತಿಗಗೋಚರನಾದ ಸ್ವಾಮಿಗೆ 11 ಅರಗಿನಮನೆಯಿಂದ ರಕ್ಷಿಸಿ ದ್ರೌಪದಿ ಸುಭದ್ರೆಯ ಸಾಧಿಸಿತ್ತಗೆ 12 ನೆತ್ತವಾಡಿ ಕೌರವರೊಡನೆ ಅರ್ಥವನು ಸೋಲಲು ಪಾಂಡವರು ಭಕ್ತವತ್ಸಲನೆನ್ನೆ ದ್ರೌಪದಿಗೆ ವಸ್ತ್ರವಿತ್ತು ಕಾಯ್ದ ಕೃಷ್ಣಗೆ 13 ವನವಾಸದಲ್ಲಿ ಪಾಂಡವರು ಉಲ್ಲಾಸದಿಂದಲೆ ಇರುತಿರಲು ಪಾಶುಪತ ವನು ಪಾರ್ಥನಿಗೆ ಈಶನಲಿ ಕೊಡಿಸಿದ ಸರ್ವೇಶಗೆ 14 ವೇಷವನ್ನು ಮರೆಸಿಕೊಂಡು ವಿರಾಟನಗರದಿ ವಾಸ ಮಾಡಲು ಮೋಸದಿಂದಲೇ ಕೀಚಕಾದಿಗಳ ನಾಶಮಾಡಿಸಿದ ವಾಸುದೇವಗೆ 15 ಆನಂದರೂಪವ ತೋರಿದವಗೆ 16 ತೋರಿದವಗೆ 17 ಜಾಹ್ನವೀಸುತನ ಯುದ್ಧವನ್ನು ತಾಳಲಾರದೆ ಜನರ್ಧನಗೆ ಪೇಳೆ ಜಾಣತನದಲಿ ಶಿಖಂಡಿಯನುತೋರಿ ಬಾಣಮಂಚದಿ ಮಲಗಿಸಿದವಗೆ 18 ಸುಭದ್ರೆ ಪುತ್ರನ ಯುದ್ಧದಲ್ಲಿ ಪದ್ಮವ್ಯೂಹವ ಪೋಗಿಸಲಾಗ ಮುದ್ದುಬಾಲಕನ ಕೊಲಿಸಿದವಗೆ 19 ಸಿಂಧುರಾಜನ ಕೊಲ್ಲುವೆನೆಂದು ನರನು ಪ್ರತಿಜ್ಞೆಮಾಡಲು ತಂದಚಕ್ರವ ರವಿಗೆತೋರಿಸಿ ಸೈಂಧವನ ಕೊಲ್ಲಿಸಿದಸ್ವಾಮಿಗೆ 20 ದೃಪತಿಯತೋರಿದವಗೆ 21 ಕರ್ಣನು ಘಟ್ಟಿಯಾಗಿ ರಥವನೊತ್ತಿ ದಿಟ್ಟತನದಲಿ ಶಿರವ ಕಾಯ್ದಗೆ 22 ಮದ್ರರಾಜನ ಕೊಲ್ಲುವೆನೆಂದು ಸಮುದ್ರಶಯನನ ಸಹಾಯದಿಂದ ಭದ್ರಗಜವನು ಏರೆ ಧರ್ಮಜ ಕಾಲರುದ್ರನಂದದಿ ಕೊಲಿಸಿದವಗೆ 23 ಭೀಮ ದುರ್ಯೋಧನರು ಯುದ್ಧದಿ ಹೇಮದ ಗದೆಯನ್ನು ಪಿಡಿದು ಪ್ರೇಮದಿಂದಲೆ ಕಾದುತಿರಲು ನಿರ್ನಾಮವನು ಮಾಡಿಸಿದ ಸ್ವಾಮಿಗೆ 24 ಗೃಧ್ರ ಉಲೂಕದ ವೃತ್ತಿಯ ನೋಡಿ ಭದ್ರೆದ್ರೌಪದಿ ಪುತ್ರನನ್ನು ನಿದ್ರೆಕಾಲದಿ ಕೊರಳಕೊಯ್ಯಲು ಶಿರದಲಿದ್ದ ಮಣಿಯ ತೆಗೆಸಿದವಗೆ 25 ದ್ರೋಣಪುತ್ರನ ಬಾಣದಿಂದಲೆ ತ್ರಾಣಗೆಟ್ಟ ಶಿಶುವ ನೋಡಿ ಜಾಣತನದಲಿ ಚಕ್ರವಪಿಡಿದು ಪ್ರಾಣವನು ರಕ್ಷಿಸಿದ ಸ್ವಾಮಿಗೆ 26 ಏಳುಹನ್ನೊಂದು ಸೇನೆಗಳನೆಲ್ಲ ಹಾಳುಮಾಡಿ ಹದಿನೆಂಟುದಿವಸದಿ ಖೂಳಕೌರವರನೆಲ್ಲ ಕೊಂದು ಧರ್ಮನಲಿ ರಾಜ್ಯವಾಳಿಸಿದಗೆ 27 ಸೌಪ್ತಿಕದಲಿ ಪುತ್ರನ ಕೊಲ್ಲಿಸಿ ಸ್ತ್ರೀಪರ್ವದಿ ಭೂಮಿ ಭಾರವಡಗಿಸಿ ಶಾಂತಿಪರ್ವದಿ ಧರ್ಮರಾಯಗೆ ಪಟ್ಟಾಭಿಷೇಕವ ಮಾಡಿಸಿದಗೆ 28 ಮುಸಲದಲಿ ಯಾದವರನಡುಗಿಸಿ ಅನುಶಾಸನದಿ ಧರ್ಮಪೇಳಿಸಿ ಅಶ್ವಮೇಧ ಮಹಾಪ್ರಸ್ಥ ಸ್ವರ್ಗಾರೋಹಣವ ಮಾಡಿಸಿದಗೆ 29 ಅಂದುಪಾರ್ಥಗೆ ಸಾರಥ್ಯವಮಾಡಿ ಬಂಧುಗಳ ಸ್ವರ್ಗವಾಸಮಾಡಿಸಿ ಬಂದು ಬೃಂದಾರಣ್ಯದಲ್ಲಿ ಇಂದಿರೇ ಸಹನಿಂದ ಸ್ವಾಮಿಗೆ 30 ಅನಿರುದ್ಧ ಸಾತ್ಯಕಿ ರುಕ್ಮಿಣಿ ಸಹಿತಲೆ ಬಂದು ನಿಂದವಗೆ 31 [ವರ] ಕಲಿಯುಗದೊಳಗುಳ್ಳ ದುಷ್ಟಕರ್ಮಿಗಳನೆಲ್ಲ ಸಲಹುವೆನೆಂದು ಕೈರವಿಣಿತೀರದಲಿನಿಂದ ಕರುಣಿ ವೆಂಕಟಕೃಷ್ಣನಂಘ್ರಿಗೆ ಮಂಗಳಂ 32
--------------
ಯದುಗಿರಿಯಮ್ಮ
ಶ್ರೀಹರಿ ಸ್ತುತಿ ಆವಕಡೆಯಿಂದ ಬಂದೆ ವಾಜಿವದನನೆಭಾವಿಸುವ ವಾದಿರಾಜಮುನಿಯ ಕಾಣುತ ಪ. ನೇವರಿಸಿ ಮೈಯ ತಡವಿ ನೇಹದಿಂದಲಿ ಮೇಲುನೈವೇದ್ಯವನ್ನು ಇತ್ತು ಭಜಿಸುವೆ ಅ.ಪ. ಭಕುತಿಕಡಲೆ ಜ್ಞಾನವೈರಾಗ್ಯಬೆಲ್ಲದಮುಕುತಿ ಆನಂದಸುಖದ ಕ್ಷೀರಲಡ್ಡಿಗೆಯುಕುತಿ ಧ್ಯಾನಕೊಟ್ಟು ನೀನು ಎಲ್ಲಮಾತಲಿಶಕುತಿ ಸಂತೋಷ ಮಹಿಮೆ ತೋರಬಂದೆಯ 1 ಹೆತ್ತತುಪ್ಪ ಸಕ್ಕರೆಯ ಮಡ್ಡಿಮುದ್ದೆಯತುತ್ತುಮಾಡಿ ಕೊಡಲು ಅದನು ಮೆಲುತ ಮೆಚ್ಚುತಅತ್ಯಂತ ಸಂತೋಷ ನೀನು ಆಟತೋರುತಭೃತ್ಯ ವಾದಿರಾಜಮುನಿಯ ಸಲಹಬಂದೆಯ 2 ಫಲವ ಕೊಟ್ಟು ರಕ್ಷಿಸಿದಿ ವಾಜಿವದನನೆನಿಲುವೋ ಜ್ಞಾನಭಕ್ತಿಯನ್ನು ನೀಡಬಂದೆಯಸುಲಭ ಸುಮುಖ ಸುಪ್ರಸನ್ನ ಹಯವದನನೆಚೆಲುವ ಚಿನ್ಮಯಮೂರ್ತಿ ನಮ್ಮ ಸಲಹ ಬಂದೆಯ 3
--------------
ವಾದಿರಾಜ
ಸಾಲದೆ ನಿನ್ನದೊಂದು ದಿವ್ಯನಾಮ - ಅ-ಕಾಲ ಮೃತ್ಯುವಿನ ಗಂಟಲಗಾಣ ಹರಿಯೆ ಪ ರಣದೊಳಗೆ ಅಂಗಾಂಗ ಖಂಡತುಂಡಾಗಿ ಪ್ರತಿರಣವನುತ್ತರಿಸಿ ಮರಣವ ತಾಳಿರೆಪ್ರಣವ ಗೋಚರ ನೀನು ಗೋಚರಿಸಿ ಬಂದೆನ್ನಹೆಣಕೆ ಪ್ರಾಣವ ಪ್ರಯೋಗಿಸಿದಂತರಾತ್ಮ1 ಕುಂತದಿಂ ತೂಂತುಗೊಂಡೆನ್ನ ಬೆನ್ನಿಂದಿಳಿವಸಂತತ ನೆತ್ತರನೊರಸಿ ಬಿಸುಟೆತಿಂತ್ರಿಣಿಯ ಮರದಡಿಯೆ ಹಾವು ಕಡಿದೊರಗಿರಲುಮಂತ್ರಿಸಿ ಮನೆಗೆ ಕಳುಹಿದೆ ಗರುಡಗಮನ 2 ಗರಳ ತೈಲವ ಸೇವಿಸೆವೇಣುನಾದದಲಿ ಹಣೆಯನೇವರಿಸಿ ಪಂಚಪ್ರಾಣ ಪ್ರತಿಷ್ಠೆಯ ಮಾಡಿದೆ ಮಹಾತ್ಮ 3 ತಮ್ಮ ಹವಣನರಿಯದೆ ಕೊಬ್ಬಿದ ಪಿಶಾಚಿಗಳುಎಮ್ಮ ಮನೆಗೊಂದೆ ಸಮ ಕಲ್ಲಲಿಟ್ಟುಹೆಮ್ಮಕ್ಕಳ ಬಾಧಿಸುವುದನು ಕಂಡುಬೊಮ್ಮಜಟ್ಟಿಗರ ಶಿರವರಿದೆ ನರಹರಿಯೆ 4 ಓದಿ ಹೇಳಿದರೊಂದು ಕಥೆಯಾಗುತಿದೆ ಮಹಾಂಬೋಧಿಶಯನನೆ ವೇದಶಾಸ್ತ್ರ ಮುಖದಿಬಾಧಿಸುವ ದುರಿತಾಗ್ನಿಗಂಬು ಶ್ರೀ ಕಾಗಿನೆಲೆಯಾದಿಕೇಶವನ ನಾಮ ಸಂಕೀರ್ತನ 5
--------------
ಕನಕದಾಸ
ಇಂತು ವೇದಾಂತಗಳಲ್ಲಿಸುರರುನಿನ್ನಎಣಿಸುವರಹುದಹುದೈ-ನಿ-ನ್ನಂತವ ತಿಳಿಯಲು ಬ್ರಹ್ಮಾದಿಗಳಿಗೆಅಳವಲ್ಲಹುದಹುದೈ | ಪರಂಡೆಯ ಮಕ್ಕಳು ಕುಂಡಗೋಳಕರು ರಾಯರು ನಿನ್ನಿಂದೈ |ಪಂಡಿತರಾದಾ ದ್ವಿಜರಿಗೆ ಭಿಕ್ಷಾಪಾತ್ರವು ನಿನ್ನಿಂದೈ ||ಮಂಡೆನೇವರಿಸಿ ಮೊಲೆಯನಿತ್ತವಳಿಗೆ ಮರಣವು ನಿನ್ನಿಂದೈ |ಭಂಡಾಟದಿ ಮೈಗೊಟ್ಟ ಗೋಪಿಯರು ಪಾವನ ನಿನ್ನಿಂದೈ 1ತೋತ್ತಿನ ಮಗನಿಗೆ ಒಲಿದು ನಿನ್ನಭ ಗಿಣ ತೋರಿದ ಅಹುದಹುದೈ |ಉತ್ತಮರನು ನೀನಡುವಿ ಸೇರಿಸಿದೆ ಉತ್ತಮನಹುದಹುದೈ ||ತಂದೆಯ ಕೊಂದು ಕಂದನ ಸಲಹಿದ ಚಂದವು ನಿನ್ನಿಂದೈ |ಕಂದನ ಕೊಂದು ತಂದೆಯ ಸಲಹಿದೆ ಏತರ ನ್ಯಾಯವಿದ್ಯೆ ||ವಂದಿಸಿ ದಾನವ ಕೊಟ್ಟ ಬಲೀಂದ್ರನ ಬಂಧಿಸಿದಹುದಹುದೈ |ಮಂದರಧರಶ್ರೀ ಪುರಂದರವಿಠಲ ಮಾಡಿದ್ದೇ ಮರಿಯಾದೈ 3
--------------
ಪುರಂದರದಾಸರು
ನಾನೆಲ್ಲ್ಲು ಪೋಗಲಿಲ್ಲ ನಾರಿಯರೆನ್ನದೂರುವರಿದ ನೋಡಮ್ಮ ಪವಾರಿಗೆಯ ಗೆಳತಿಯರು ಸೇರುತಕೂಡಿ ಮಾತುಗಳಾಡಿ ನಗುವರುಚಾಡಿ ಮಾತುಗಳ್ಹೇಳ ಬರುವರುಕೇಳಿಮನದಲಿ ಕೋಪಿಸದಿರುಅ.ಪಬ್ರಹ್ಮನ ಪಿತನೆಂಬೊರೊ ಎನ್ನನು ಪುಟ್ಟಸಣ್ಣ ಕೂಸೆಂದರಿಯರೆಬ್ರಹ್ಮಾಂಡೋದರನೆಂಬೋರೇ ಕೇಳಮ್ಮಯ್ಯಸಣ್ಣುದುರನೆಂದರಿಯರೆಬೆಣ್ಣೆ ಕಳ್ಳನು ಸಣ್ಣವನು ಎಂದುಕಣ್ಣು ಸನ್ನೆಗೆ ಚಂದ ನಗುವರುಚಿನ್ನನೆಂದು ಮುದ್ದಿಸುವರೆನ್ನುತಕನ್ಯೆಯರು ಅಪಹಾಸ್ಯ ಮಾಳ್ಪರು 1ನೀರ ಪೊಕ್ಕವನೆಂಬೋರೆ ವೇದ ತಂದಿತ್ತನಾರುವ ಮಯ್ಯವನೆಂಬೋರೇಭಾರಪೊತ್ತವನೆಂಬೋರೇ ಮೋರೆ ತಗ್ಗಿಸಿದಘೋರರೂಪನು ಎಂಬೋರೇಕೋರೆ ದಾಡಿಯ ನೆಗಹಿ ಧರಣಿಯಶೂರ ಹಿರಣ್ಯಾಕ್ಷಕನ ಸೀಳಿದಕ್ರೂರ ರೂಪವ ಧರಿಸಿ ಕರುಳಿನಮಾಲೆ ಹಾಕಿದ ಧೀರನೆಂಬೋರು 2ಮೂರು ಪಾದದ ಭೂಮಿಯ ಬೇಡಲು ಬ್ರಹ್ಮ-ಚಾರಿಯಾದನು ಎಂಬೋರೇಮೂರು ಏಳೆನಿಸಿಕೊಂಡು ಧರಣಿಯ ಸುತ್ತಿದಧೀರ ರಾಮನು ಎಂಬೋರೇನಾರು ವಸ್ತ್ರವ ಧರಿಸಿವನವನಸೇರಿವಾನರರೊಡನೆ ಚರಿಸಿದನಾರಿಯರ ವಸ್ತ್ರಗಳ ಕದ್ದ ನವ-ನೀತ ಚೋರನೆಂದೆನಿಸುತ ನಗುವರು 3ಬತ್ತಲಿರುವನೆಂಬೋರೇ ತ್ರಿಪುರಗೆದ್ದಉತ್ತಮಹರಿಎಂಬೋರೇಉತ್ತುಮಾಶ್ವವನೇರುತ ಧರೆಯಲಿ ಮೆರೆದಮತ್ತೆ ರಾವುತನೆಂಬೋರೇಹತ್ತು ವಿಧದಲಿ ಅವತರಿಸಿ ನಿಜಭಕ್ತರನು ರಕ್ಷಿಸಿದೆನೆಂಬೋರುಮುಕ್ತಿದಾಯಕ ಹರಿಗೆ ಸಮರುಅಧಿಕರ್ಯಾರಿಲ್ಲೆನುತ ನಗುವರು 4ಮುದ್ದು ಮಾತಗಳಕೇಳಿಸಂಭ್ರಮದಿಂದಎದ್ದು ಮಗನನಪ್ಪುತಶ್ರದ್ಧೆಯಿಂದಲಿ ನೋಡುವ ತೊಡೆಯಲಿಟ್ಟುಮುದ್ದಿಸಿ ನಸುನಗುತಾಪದ್ಮನಾಭಶ್ರೀ ಕಮಲನಾಭನ ವಿ-ಠ್ಠಲನ ಮುಡಿನೇವರಿಸಿ ಹರುಷದಿತಿದ್ದುತಲಿ ಮುಂಗುರಳು ನಗುಮುಖಮುದ್ದಿಸುತ ಮುದದಿಂದ ನಲಿವಳು 5ಲಾಲಿಸಿದಳು ಮಗನ ಗೋಪೀದೇವಿಲಾಲಿಸಿದಳು ಮಗನ
--------------
ನಿಡಗುರುಕಿ ಜೀವೂಬಾಯಿ