ಒಟ್ಟು 11 ಕಡೆಗಳಲ್ಲಿ , 9 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ರಾಘವೇಂದ್ರ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತ ಕಳೆದು | ವೈರಾಗ್ಯ ಕೊಡುತಾಅ.ಪ. ಪ್ರಾಚೀನ ದುಷ್ಕರ್ಮ | ಮೋಚಕೇಚ್ಛೆಯ ಮಾಡಿಕೀಚಕಾರಿಯ ಮತದಿ | ದೀಕ್ಷೆಯನೆ ಕೊಟ್ಟುನೀಚೋಚ್ಛ ತರತಮವೆ | ವಾಚಿಸುತ ಇವಳಲ್ಲಿವಾಚಾಮಗೋಚರನ | ಭಕ್ತಿಯನೆ ಕೊಡುತಾ 1 ಸಾಧುಸಂಗವ ಕೊಟ್ಟು | ಸಾಧನೆಯ ಗೈಸುವುದುಯಾದವೇಶನ ಪ್ರೀತಿ | ಸಾಧನೆಯ ಗುರಿಯಾಮಾಧವನೆ ಪರನೆಂಬೋ ಬೋದ ಸಂತತಕೊಟ್ಟುಕಾದುಕೋ ಶ್ರೀಹರಿಯೆ | ಬಾದರಾಯಣನೆ 2 ಸರುವ ಕರ್ಮಗಳೆಲ್ಲ ಹರಿ ಮಾಡಿ ಮಾಡಿಸುವಬರುವ ತತ್ಸುಖ ದುಃಖ | ಸಮತೆಯಲಿ ಎಂಬಾವರಮತಿಯ ಕರುಣಿಸುತ | ಪರಿಹರಿಸು ಭವಬಂಧಕರುಣಾಳು ಗುರುರೂಪಿ | ಪೊರೆಯ ಬೇಕಿವಳಾ 3 ಮನಸೀನ ಚಾಂಚಲ್ಯ | ವನೆ ನೀನು ಕಳೆಯುತ್ತಕ್ಷಣಕನಂತಪರಾಧ | ಎಣಿಸದಲೆ ಹರಿಯೆದೀನನಾಥನಾದ ಹರಿ | ಜ್ಞಾನ ದಂಕುರವಿತ್ತುಘನ ದಯಾವಾರಿಧೇ | ಪೊರೆಯ ಬೇಕಿವಳಾ 4 ವ್ರಜ ಕುಂದ ವರದ ಹರಿಯೇನೊಂದವಳಿಗಾನಂದ | ಸಂಧಿಸಲು ಪ್ರಾರ್ಥಿಸುವೆಇಂದಿರಾರಾಧ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗೌರಿ ಗಜಮುಖನ ಮಾತೆ | ಗುಣಗಣ ಭರಿತೆ ಶೌರಿ ಸಖನಂಗಸಂಗೀ ಸಂಪೂರ್ತೆ ಪ ಶುಭ ತನು ವಾರಿಜನೇತ್ರಳೆ ವೀರಸತಿಯೆ ದಯವಾರಿಧಿ ಪಾಲಿಸು ಅ.ಪ. ತುಂಗ ಮಂಗಳೇ ದೇವಿ | ಕಲಿಗೆ ಭೈರವೀ ರಂಗಾನ ನವವಿಧಿ ಭಕ್ತಿ ಸಂಗ ನೀಡುವಿ ಹಿಂಗದೆ ಪೊರಿಯೆ ತಾಯೇ | ಭಕ್ತ ಸಂಜೀವೆ ತಿಂಗಳ ಮುಖಿವರಗರಿವೆ | ನಮ್ಮ ಶಂಭುವೆ ಭಂಗಬಟ್ಟೇನು ನುಂಗುವ ಭವದೊಳು ಮಂಗಳ ಕರುಣಾಪಾಂಗದಿ ನೋಡೆನ್ನ ಭವ ಭಯ ಗಂಗೆಯ ಧರನಂಘ್ರಿ- ಭೃಂಗಳೆ ಬೋದಯಾಕಂಗಳೆ ಕರುಣಿಸು 1 ಇಂದ್ರಾದಿ ಸುರಗುರುವೆ | ದೇವ ತರುವೆ ಪರಿ ನಿನ್ನ ಬೇಡುವೆ ಕುಂದನೆಣಿಸದಲೆ ಶಿವ ಶಂಕರಿ ಕಾವೆ ಸಂದೇಹ ಕಳಿ ವಿಭುವೆ | ವೀರಜತನುವೆ ನೊಂದವನಾ ಮ್ಯಾಲ್ಹೊಂದಿಸು ಕರುಣವ ಮಂದಸ್ಮಿತೆ ಮುಕುಂದನ ಮನದಲಿ ವಂದಿಸು ಅನಿಮಿತ್ತ ಬಂಧುವೆ ರಕ್ಷಿಸು 2 ಕಸ್ತೂರಿ ಕುಂಕುಮ ಫಾಲೆ | ರನ್ನಾದ ಓಲೆ ವಸ್ತುಗಳಿಟ್ಟ ಹಿಮವಂತನ ಬಾಲೆ ಶಿಸ್ತಿನ ಶುಭ್ರಾಂಬರಧಾರೆ ವನಮಾಲೆ ಮಸ್ತಕದ ಕಿರೀಟ ವದನೆ ತಾಂಬೂಲೆ ಸಿರಿ ಹಸ್ತಗಳಿಟ್ಟೆನ್ನ ದುಸ್ತರದ ಹಾದಿಗಳಸ್ತಮಮಾಳ್ಪುದು ವಿಸ್ತರ ಮಹಿಮ ಜಯೇಶವಿಠಲ ವಸ್ತುವ ನೀಡಮ್ಮ ಹಸ್ತಿಯ ಗಮನೆ 3
--------------
ಜಯೇಶವಿಠಲ
ಜಾಂಬುವತಿ ಪ್ರಿಯ ವಿಠಲ | ಅಂಬುಜದಳಾಕ್ಷ ಪ ನಂಬಿ ಬಂದಿಹನ ಮನ | ದಂಬಲವ ಸಲಿಸೋ ಅ.ಪ. ಲೌಕಿಕಾನೇಕದಲಿ | ಸಿಲ್ಕಿ ನೊಂದವನಾಗಿಏಕಾಮೇವಾದ್ವಿತೀಯ | ನೀನೇವೆಯಂಬಾವಾಕು ನುಡಿವಾ ಇವಗೆ | ಪ್ರಾಕ್ಕು ಕರ್ಮವ ಕಳೆದುತೋಕನ್ನ ಸಲಹೆಂದು | ಪ್ರಾರ್ಥಿಸುವೆ ಹರಿಯೇ 1 ನೀಚೋಚ್ಛ ಸುಜ್ಞಾನ | ದಾಸ್ಯಕಿದುವೇ ಮೂಲವಾಚಿಸೋ ಇವನಲ್ಲಿ | ಕೀಚಕಾರಿಪ್ರಿಯಾವಾಚಾಮಗೋಚರನೆ | ಖೇಚರೋತ್ತಮಸವ್ಯಸಾಚಿ ಸಖನೇ ಇವನ | ಕಾಪಾಡೊ ಹರಿಯೇ 2 ಸಂಗೀತ ಲೋಲ ಹರಿ | ಮಂಗಳಾಂಗನೆ ಸಾಧುಸಂಗವನು ಇವಗಿತ್ತು | ಕಾಪಾಡೊ ಹರಿಯೇಇಂಗಿತಜ್ಞನೆ ವಿಷಯ | ನಿಸ್ಸಂಗನೆಂದೆನಿಸಿಸಂಗೀತದಲಿ ತವ ಪ್ರ | ಸಂಗವಿತ್ತು ಕಾಯೋ 3 ಮೂರೆರಡು ಭೇದಗಳ | ತಾರತಮ್ಯ ಜ್ಞಾನವಾರವಾರಕೆ ತಿಳಿಸಿ | ಕಾಪಾಡೊ ಇವನಾಸೂರಿಜನ ಸಂಪ್ರೀಯ | ಸೂರಿಸಂಗವನಿತ್ತುಪಾರುಗೈ ಭವದ ಕೂ | ಪಾರ ಹರಿಯೇ 4 ಗರುಡವಾಹನ ಕೃಷ್ಣ | ಗರುವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಹರಿಯೇ |ನಿರವಧಿಕ ಗುಣ ಪೂರ್ಣ | ಸರ್ವೇಷ್ಟ ಪ್ರದನಾಗಿಪೊರೆಯ ಬೇಕಿವನ | ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು
ಮುಕುತಿಯ ಮಾರ್ಗವ ಹಿಡಿಯಲಿಬೇಕು ಭಕುತಿಯು ಮನದಲಿ ಮಾಡಲಿಬೇಕು ಪ ಭಕುತರು ತುಳಿವ ಕಲ್ಲಾಗಿರಬೇಕು ಲಕುಮಿಯ ರಮಣನ ದಯೆ ಬರಬೇಕು ಅ.ಪ ನೊಂದವರನು ಸಂತೈಸಲಿಬೇಕು ತಂದೆ ತಾಯಿಯರ ವಂದಿಸಬೇಕು ಬಂದುದ ಮೋದದಿ ಪಡೆಯಲಿಬೇಕು ಇಂದಿರೆಯರಸನೇ ಗತಿಯೆನಬೇಕು 1 ಸಂಗವು ಶರಣರದಾಗಿರಬೇಕು ರಂಗನೊಳೇ ಮನ ತಂಗಿರಬೇಕು ಭಂಗಿಸಿ ಕಾಮವ ವರ್ಜಿಸಬೇಕು ಮಾಂಗಿರಿನಾಥನ ದಯೆ ಬರಬೇಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ - ಜಗ ಪ ದೇಕ ವಿಖ್ಯಾತ ಪಶ್ಚಿಮ ರಂಗಧಾಮ ಅ ತಮನೊಡನೆ ಹೋರಿ ಬೆಟ್ಟವನು ಬೆನ್ನಲಿ ಪೊತ್ತುರಮಣಿ ಭೂಮಿಯನು ತಂದಾಯಾಸವೂಅಮರವೈರಿಯ ಕರುಳ ಕಿತ್ತ ಕಡು ಧಾವತಿಯೊಕ್ಷಮೆಯನಳೆದೀ ಪಾದಕಮಲ ನೊಂದವೊ 1 ಪೊಡವಿಪಾಲಕರ ವಂಶವನು ವಪನ ಮಾಡಿಕೊಡಲಿಯನು ಬಿಸುಟು ಮಲಗಿದ ಭಾವವೊಮಡದಿಯನು ಕದ್ದೊಯ್ದವನ ಶಿರವನೆ ತರಿದುಒಡಲಿನಾಯಾಸದಲಿ ಪವಡಿಸಿದ ಪರಿಯೋ 2 ವಾಲಿ ಮೊದಲಾದ ಎದುರಾಂತ ವೀರರ ಕೊಂದುಕಾಳಿಯ ಹೆಡೆಯ ತುಳಿತುಳಿದು ಮೈಯಲಸಿತೊಲೀಲೆಗೋಸುಗ ಬಂದು ನಿರ್ವಾಣದಲಿ ನಿಂದುಆ ಲಜ್ಜೆಗಾಗಿ ತಲೆ ಬಾಗಿ ಮಲಗಿದೆಯೊ 3 ನಾಲ್ಕು ಯುಗದಾಧಾರಿ ಕಡೆಗೆ ತುರಗವನೇರಿಸಾಕಾಗಿ ದಣಿದು ನೀನಿಲ್ಲಿ ಮಲಗಿದೆಯೊಸಾಕಾರಿಯಾಗಿ ಗೌತಮ ಮುನೀಶ್ವರನಿಗೆಬೇಕೆಂದು ನೀ ಕೊಟ್ಟ ವರಕೆ ಮಲಗಿದೆಯೊ 4 ಕಾಲ ನೀನಿಲ್ಲಿ ಮಲಗಿದ್ದರೂನಿನ್ನನೆಬ್ಬಿಸುವವರನೊಬ್ಬರನು ಕಾಣೆಉನ್ನಂತ ಕಾಗಿನೆಲೆಯಾದಿಕೇಶವರಾಯಚೆನ್ನ ಶ್ರೀರಂಗಪಟ್ಟಣದ ರಂಗಧಾಮ 5
--------------
ಕನಕದಾಸ
ವರಗಡದಿನ್ನೀಶೇಷ ವಿಠಲ ಪೊರೆ ಇವನ ಪ ನಿರುತ ತವ ಚರಿತೆಗಳ | ಸ್ಮರಿಸುತ್ತ ಭಕ್ತಿಯಲಿಮರುತಾಂತರಾತ್ಮ ತವ | ಚರಣಕರ್ಪಿಪನ ಅ.ಪ. ಭವ | ಬಂಧದೊಳು ಸಿಲ್ಕಿ ಬಹುನೊಂದವಗೆ ಕರುಣದಲಿ | ಕುಂದನೆಣೆಸದಲೇಮಂದ ಹಾಸವ ಬೀರಿ | ಸಂಧಿಸೋ ಸಂತೋಷಇಂದಿರಾರಾಧ್ಯ ಪದ | ಮಂದರೋದ್ಧಾರೀ 1 ಉತ್ತಮ ಸುಸಂಸ್ಕøತಿಯ | ಪೊತ್ತು ಜನಿಸಿಹನಿವನುಮತ್ತೆ ದಾಸರ ಕರುಣ | ಪಾತ್ರನಿರುವಾಅರ್ಥಿಯಲಿ ದಾಸತ್ವ | ಪ್ರಾರ್ಥಿಸುತ್ತಿಹಗೆ ನಾ-ನಿತ್ತಿಹೆನೊ ಅಂಕಿತವ | ಸುಪ್ತೀಶನಾಜ್ಞಾ2 ಮೋದ ತೀರ್ಥರ ತತ್ವ | ವಾದಾನುವರ್ತಿ ಇವಭೋಧಿಸೀ ಪರತಮವ | ಭೇದ ಪಂಚಕನಆದರದಿ ಕೈ ಪಿಡಿದು | ಉದ್ಧರಿಸ ಬೇಕೆಂದುವೇದ ವೇದ್ಯನೆ ನಿನ್ನ | ಪ್ರಾರ್ಥಿಸುವೆ ಹರಿಯೇ 3 ಶ್ರವಣ ಮನಕಾನಂದ | ಭುವನ ಪಾವನವೆನಿಪತವಮಹಿಮೆ ಪೊಗಳಲ್ಕೆ | ಕವನ ಶಕ್ತಿಯನೂನೀವೊಲಿದು ಅಭಿವೃದ್ಧಿ | ಗೈವುದಿವನಲಿಯೆಂದುಪವನಾಂತರಾತ್ಮ ಬಿ | ನ್ನವಿಪೆನೋ ದೇವಾ4 ಭಾವಕ್ರಿಯೆ ದ್ರವ್ಯದೊಳು | ಅದ್ವಿತಿಯ ನೀನೆಂಬಭಾವದನುಭವವಿತ್ತು | ನೀ ವೊಲಿಯೊ ಇವಗೇಕಾವರನ್ಯರ ಕಾಣೆ | ಗೋವರ್ಧನೋದ್ಧರನೆಕೋವಿದರ ಒಡೆಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸ್ವೀಕರಿಸೈ ವೀಳ್ಯಮಿದನು ಶ್ರೀಕರಾಬ್ಜಪಾಣಿಯಿಂ ಪ. ಲೋಕನಾಥ ಪಾಲಿಸೆನ್ನ ಶ್ರೀಕಟಾಕ್ಷದಿಂದಲೆ ಅ.ಪ. ಪಚ್ಚಕರ್ಪೂರಯಾಲದಿಂದ ಹೆಚ್ಚು ವಾಸನೆಯನುತಳೆದ ಅಚ್ಯುತನೆ ವೀಳ್ಯಮಿದನು ಮೆಚ್ಚಿ ನೀಡುತಿರುವೆನು 1 ತಟ್ಟೆಯನ್ನು ಪಿಡಿದು ಎನ್ನ ರಟ್ಟೆಗಳಿದು ನೊಂದವೈ ಸಿಟ್ಟುಮಾಡದೀಗ ದಯದಿ ದಿಟ್ಟಿಸೈ ಮದೀಶನೇ 2 ಲಲಿತಗಾತ್ರ ಎನ್ನೊಳಿಂತು ಚಲಮಿದೊಳ್ಳಿತೇನೆಲೈ ಜಲಜನೇತ್ರ ಶೇಷಶೈಲನಿಲಯ ನಿನ್ನ ನಮಿಪೆನೈ 3
--------------
ನಂಜನಗೂಡು ತಿರುಮಲಾಂಬಾ
ಒಲ್ಲೆನೆ ವೈದಿಕ ಗಂಡನ - ನಾ -ನೆಲ್ಲಾದರೂ ನೀರ ಧುಮುಕುವೆನಮ್ಮ ಪ.ಉಟ್ಟೆನೆಂದರೆ ಇಲ್ಲ ತೊಟ್ಟೆನೆಂದರೆ ಇಲ್ಲ |ಕೆಟ್ಟ ಸೀರೆಯ ನಾನುಡಲಾರೆನೆ ||ಹಿಟ್ಟ ತೊಳಸಿ ಎನ್ನ ರಟ್ಟೆಯಲ್ಲ ನೊಂದವು |ಎಷ್ಟೆಂದು ಹೇಳಲಿ ಕಷ್ಟದ ಒಗತನ 1ಕೃಷ್ಣಾಜಿನವನು ರಟ್ಟೆಯಲಿ ಹಾಕಿಕೊಂಡು ||ಬೆಟ್ಟಲಿ ಗಿಂಡಿಯ ಹಿಡಿದಿಹನೆ ||ದಿಟ್ಟತನದಿ ನಾನೆದುರಿಗೆ ಹೋದರೆ |ದೃಷ್ಟಿಯಿಂದಲಿ ಎನ್ನ ನೋಡನಮ್ಮ 2ನಿನ್ನಾಣೆ ಹುಸಿಯಲ್ಲ ಬಿನ್ನಣ ಮಾತಲ್ಲ |ಕಣ್ಣಸನ್ನೆಯಂತು ಮೊದಲೆ ಇಲ್ಲ ||ಮುನ್ನಿನ ಜನ್ಮದಲಿ ಪುರಂದರವಿಠಲನ |ಚೆನ್ನಾಗಿ ಪೂಜೆಯ ಮಾಡಲಿಲ್ಲಮ್ಮ 3
--------------
ಪುರಂದರದಾಸರು
ಪ್ರಹ್ಲಾದ ವರದ ಭಯಗಜಕೆ ಸಿಂಹಪರಮಆಹ್ಲಾದಪದವಿತ್ತು ಪೊರೆಯೊ ನರಸಿಂಹÀ ಪ.ಹಿಂದೆ ಹಿರಣ್ಯಕನುದರದಲಿ ಜನಿಸಿ ಪ್ರಹ್ಲಾದನೊಂದವನ ಬಾಧೆಯಲಿ ಮರಳಿ ಮರಳಿಇಂದಿರೇಶ ಸಲಹೆನಲು ಗಡಾ ಸ್ತಂಭದಲೊದಗಿಬಂದವನುರವ ಬಗಿದು ರುಧಿರವನು ಸವಿದೆ 1ಅಸುರ ಕೆಡೆದದ ಕಂಡು ಅತಿ ಹರುಷದಿಂದ ತ್ರಿದಶರಂಬರದಿ ಪೂಮಳೆಗರೆಯಲುಶಿಶುವೇಕ ಮಾನಸದಿ ಮರೆಹೊಕ್ಕು ಪೊಗಳುತಿರೆಬಿಸಜಾಕ್ಷ ಕರುಣದಿಂದವನ ಸಲಹಿದೆಯಾಗಿ 2ಹಲವು ಯೋನಿಗಳಲ್ಲಿ ತಿರುಗಿ ಬಳಲಿದೆನಯ್ಯನಳಿನಾಕ್ಷ ನಿಮ್ಮ ಗುರುತವ ಕಾಣದೆಇಳೆಯಲ್ಲಿ ದ್ವಿಜನಾಗಿ ಪುಟ್ಟಿ ತವ ಪದವಿಡಿದೆಗೆಲಿಸು ಭವದುರಿತವ ಪ್ರಸನ್ವೆಂಕಟ ನೃಸಿಂಹ 3
--------------
ಪ್ರಸನ್ನವೆಂಕಟದಾಸರು
ಮೀಸಲ ಗುಣದೆಯರನೆಲ್ಲ ಮೋಸಗೈಸಿ ಕೊಳಲನೂದಿರಾಸಕ್ರೀಡೆ ಮಾಡಿದಾಭಾಸಬಹಳಯ್ಯಾ ಪ.ನೀನೆ ಎಂದವರೆದೊಡ್ಡ ಕಾನನದಿ ಬಿಟ್ಟು ಒಬ್ಬಮಾನಿನಿಯಜರಿದುನಡೆದಿ ಇನ್ನೇನು ಉಚಿತವಯ್ಯ ಕೃಷ್ಣ1ಎಳೆಯಬಳ್ಳಿ ಗಿಳಿಪಕ್ಷಿನಳಿನನಾಭನ ಕಂಡಿರೇನನಳಿನಮುಖಿಯರೆಲ್ಲ ತಿರುಗಿ ಬಳಲಿ ನಿಂತಾರೊ ಕೃಷ್ಣ2ಸೂಸು ಮಲ್ಲಿಗೆ ಸಂಪಿಗೆ ಜಾಜಿ ಹಾಸಿಕೆಯ ಮಾಡಿ ಅವಳಸೋಸುಪೂರೈಸುವ ಬಗಿಯು ಶ್ರೀಶ ರಮಸಿದಿಯೋ ಕೃಷ್ಣ3ಚಂದ್ರವದನೆಗೆ ಅಂಗದಲ್ಲಿ ಗಂಧ ಕಸ್ತೂರಿ ಕುಂಕುಮವಿಟ್ಟುಮಂದಾರಮಲ್ಲಿಗೆಯ ಮುಡಿಸಿ ಆನಂದ ಬಡಿಸಿದಿಯೊ ಕೃಷ್ಣ4ಇಂದಿರೇಶನ ಕಾಣದಲೆ ನೊಂದವರ ಮ್ಯಾಲೆ ಪರಿಮಳತಂದು ಹಾಕಿದ ವಾಯು ಪಾಪಿ ಎಂದು ಬಯ್ಯುತ ಕೃಷ್ಣ 5ತಂದು ಕನ್ನಡಿ ನಿಲ್ಲಿಸಿ ಒಳಗೆ ಚಂದ್ರನ್ಹೊಗಿಸಿಮ್ಯಾಲೆಕಲ್ಲುತಂದು ಹಾಕಿ ಅವನ ನಾವು ಕೊಂದರೆ ಪಾಪಿಲ್ಲ ಎನುತ6ಬೆಂದವರ ಮ್ಯಾಲೆ ಪರಿಮಳ ಚಂದ್ರನುಡಿಸಿದ ಕಂದನಿವನುಹಿಂದಿನ ವೈರವೇ ಸವತಿ ಇಂದಿನವನೆಂದು ಭವಿತ 7ಮಲ್ಲಿಗೆ ಸಂಪಿಗೆ ಜಾಜಿ ಚಲ್ವ ತುಳಸಿ ಯಮುನಾದೇವಿಫುಲ್ಲನಾಭನ ಕಂಡಿರೇನ ನಲ್ಲೆಯರು ಹಲಬುತ ಕೃಷ್ಣ 8ನೋಡುನೋಡುಕೆಳದಿ ಇಲ್ಲೆ ಜೋಡು ಹೆಜ್ಜಿ ತೋರುತಾವಮಾಡಿ ಕಪಟದಿ ರಂಗನ ಒಬ್ಬಳು ಓಡಿಸಿ ಒಯ್ದಾಳೆ ಎನುv 9ನಗಧರಒಬ್ಬ ಬಾಲೆಯಳ ಜಿಗಿದು ಎತ್ತಿದ ಹೆಜ್ಜೆ ನೋಡಿಸಿಗಲಿ ಅವಳು ರಂಗನ ಬೆರೆದ ಬಗಿಯ ತೋರೆನುತ ಕೃಷ್ಣ 10ಹಿಂಡುನಾರಿಯರೆಲ್ಲ ಕೂಡಿಕೊಂಡು ಅವಳ ಮಂಡೆಕುಕ್ಕಿಪುಂಡರಿಕಾಕ್ಷನ ತೋರೆದಿಂಡೆಮನುಜಳೆ ಎನುತ11ಇಷ್ಟು ನಾರಿಯರೊಳು ರಾಧೆ ಶ್ರೇಷ್ಠಳೆಂದು ಗರುವಿಸ್ಯಾಳುಅಷ್ಟರೊಳಗೆ ಅವಳ ನೀನು ಬಿಟ್ಟು ಪೋಗಿದ್ಯೊ ಕೃಷ್ಣ 12ಗಲ್ಲಕುಕ್ಕಿ ಅಂಜಿ ಅವಳು ಎಲ್ಲ ನಾರಿಯರಿಗೆ ಎರಗಿಫುಲ್ಲನಾಭಮಾಡಿದಪಾಟನಎಲ್ಲಿ ಉಸಿರಲೆ ಎನುತ13ವಿಧಿಗೆ ದಯವಿಲ್ಲ ನಮ್ಮ ಚದುರ ರಂಗನ ಅಗಲಿಸಿತುಮದನಬಾಣ ನೆಟ್ಟಿತೆಂದು ಸುದತೆಯರು ಹಲಬುತ ಕೃಷ್ಣ14ಶ್ರೀಶ ರಾಮೇಶನ ಯಾವ ದೇಶದಲ್ಲಿ ಹುಡುಕಲೆಂದುಕ್ಲೇಶಬಡಲು ಕೆಲದೆಯರೆಲ್ಲ ಸರ್ವೇಶ ಬಂದೆಂದ ಪಾರ್ಥ15
--------------
ಗಲಗಲಿಅವ್ವನವರು